ಚಿನ್ನದಾಸೆಗೆ ವೃದ್ಧೆಯನ್ನೇ ಹತ್ಯೆಗೈದು ಕಥೆ ಕಟ್ಟಿದ್ದ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಅರೆಸ್ಟ್
ತುಮಕೂರು, ಮಾರ್ಚ್ 14: ಆ ಕೊಲೆ ಇಡಿ ಊರನ್ನೇ ಬೆಚ್ಚಿಬೀಳಿಸಿತ್ತು. ಒಂಟಿಯಾಗಿ ವಾಸವಿದ್ದ ವೃದ್ಧೆಯ ಸಾವು (kill) ಹತ್ತಾರು ಅನುಮಾನ ಹುಟ್ಟುಹಾಕಿತ್ತು. ಮನೆ ಬಾಗಿಲು ತೆಗೆದ ಪೊಲೀಸರಿಗೆ ಶವದ ಸುತ್ತ ಚೆಲ್ಲಿದ ಖಾರದ ಪುಡಿ, ಮದ್ಯದ ಬಾಟಲ್ಗಳು ದರೋಡೆಕೋರರ ಕಥೆ ಹೇಳುತ್ತಿದ್ದರೆ, ಹಂತಕ ಬಿಟ್ಟು ಹೋಗಿದ್ದ ಅದೊಂದು ಕ್ಲ್ಯೂ ಪರಿಚಯಸ್ಥನಿಂದಲೇ ನಡೆದ ಕೃತ್ಯ ಎನ್ನುವುದು ಬಯಲು ಮಾಡಿತ್ತು. ನಡೆದದ್ದೇನು? ಮಾರ್ಚ್ 10ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದ ಉಜ್ಜಿನಿ ಗ್ರಾಮದಲ್ಲಿ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿತ್ತು….