Headlines

ಅಮರಾವತಿ ಲೈಂಗಿಕ ಹಗರಣದ ಆರೋಪಿಯನ್ನು ಎಳೆದುಕೊಂಡು ನಗರದ ರಸ್ತೆಗಳಲ್ಲಿ ಮೆರವಣಿಗೆ – Kannada News | Amravati scandal case main accused Ayan Ahmed Tanveer paraded across the city

ಅಮರಾವತಿ, ಏಪ್ರಿಲ್ 22: ಮಹಾರಾಷ್ಟ್ರದ ಅಮರಾವತಿ ಲೈಂಗಿಕ ಹಗರಣ ಪ್ರಕರಣದಲ್ಲಿ ಪೊಲೀಸರು ಇಂದು ಈ ಪ್ರಕರಣದ ಪ್ರಮುಖ ಆರೋಪಿ ಅಯಾನ್ ಅಹ್ಮದ್ ತನ್ವೀರ್‌ನನ್ನು ನಗರದಾದ್ಯಂತ ರಸ್ತೆಗಳಲ್ಲಿ ಎಳೆದುಕೊಂಡು ಹೋಗಿ ಮೆರವಣಿಗೆ ಮಾಡಿದ್ದಾರೆ. ಜನರಿಗೆ ಆ ಆರೋಪಿ ಯಾರೆಂದು ಗೊತ್ತಾಗಬೇಕೆಂದು ಆತನನ್ನು ಸಾರ್ವಜನಿಕರ ಮುಂದೆ ಪರೇಡ್ ಮಾಡಲಾಗಿದೆ. ಮಹಾರಾಷ್ಟ್ರದ ಪರತ್ವಾಡದಲ್ಲಿ ನಡೆದ ಲೈಂಗಿಕ ಶೋಷಣೆ ಪ್ರಕರಣವು ಬಹಳ ತಿರುವು ಪಡೆದುಕೊಂಡಿದ್ದು, ಪ್ರಮುಖ ಆರೋಪಿ ಅಯಾನ್ ಅಹ್ಮದ್‌ನ ಐಷಾರಾಮಿ ಕಾರುಗಳು, ದೊಡ್ಡ ಪ್ರಮಾಣದ ನಗದು ಮತ್ತು ಉನ್ನತ ದರ್ಜೆಯ ಗ್ಯಾಜೆಟ್‌ಗಳನ್ನು…

Read More

Video: ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಬೈಕ್ ಸ್ಟಾರ್ಟ್ ಆಗದೆ ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಖದೀಮ!

ವೆಣ್ಣಪ್ಪುವಾ (ಶ್ರೀಲಂಕಾ): ವೆಣ್ಣಪ್ಪುವಾದ ತಂಬರವಿಲ ಪ್ರದೇಶದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಯುವತಿಯನ್ನು ತಡೆದು, ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ ಘಟನೆಯೊಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಯುವತಿಯ ಹಿಂದಿನಿಂದಲೇ ಮತ್ತೊಂದು ಬೈಕ್‌ನಲ್ಲಿ ಬಂದ ದುಷ್ಕರ್ಮಿ ಆಕೆಯ ಸರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಯುವತಿಯ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಬಿದ್ದ ಅವಕಾಶವನ್ನು ಬಳಸಿಕೊಂಡ ಆರೋಪಿಯು ಯುವತಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬಲವಂತವಾಗಿ…

Read More

ತಂದೆ ಜೊತೆ ಹಾಲಿವುಡ್ ಸಿನಿಮಾ ಮಾಡಬೇಕು; ಆಸೆ ಬಿಚ್ಚಿಟ್ಟ ವಿಜಯ್ ಮಗ ಜೇಸನ್ – Kannada News | Jason Sanjay Wants to Cast Father Vijay Opposite Jason Statham in Hollywood Movie

ತಮಿಳುನಾಡು ಸಿಎಂ, ನಟ ದಳಪತಿ ವಿಜಯ್ ಅವರ ಮಗ ಜೇಸನ್ ಸಂಜಯ್ ಈಗ ಚಿತ್ರರಂಗಕ್ಕೆ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ. ಅವರು ನಿರ್ದೇಶಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸುತ್ತಿದ್ದಾರೆ. ಸುದೀಪ್ ಕಿಶನ್ ನಾಯಕನಾಗಿ ನಟಿಸುತ್ತಿರುವ ‘ಸಿಗ್ಮಾ’ ಚಿತ್ರದ ಮೂಲಕ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಜೇಸನ್ ಸಂಜಯ್ ತಮ್ಮ ಮೊದಲ ಸಂದರ್ಶನ ನೀಡಿದ್ದಾರೆ. ಈ ವೇಳೆ ಅವರು ತಮ್ಮ ತಂದೆಯ ಬಗ್ಗೆ ಒಂದು ದೊಡ್ಡ ಆಸೆಯನ್ನು ಹಂಚಿಕೊಂಡಿದ್ದಾರೆ. ಹಾಲಿವುಡ್ ನಟ ಜೇಸನ್ ಸ್ಟೇಥಮ್ ಮತ್ತು…

Read More

ಊಟ ಮಾಡುವಾಗ ಬೆವರು ಬರುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಲಕ್ಷಣ? – Kannada News | Eating & Sweating: Is It a Disease?

ಊಟ ಮಾಡುವಾಗ ಕೆಲವರಿಗೆ ಬೆವರು (Sweating) ಬರುವುದನ್ನು ನೀವು ಗಮನಿಸಿರಬಹುದು. ಕೆಲವರಿಗೆ ಇದು ಸ್ವಲ್ಪ ಪ್ರಮಾಣದಲ್ಲಿ ಕಾಣಿಸಿದರೆ ಇನ್ನು ಕೆಲವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಅದರಲ್ಲಿಯೂ ಹಣೆಯ ಮೇಲೆ ಬೆವರುವ ಪ್ರಮಾಣ ಅಧಿಕವಾಗಿರುತ್ತದೆ. ಬಿಸಿ ಆಹಾರ ಸೇವನೆ ಮಾಡುವುದರಿಂದ ಈ ರೀತಿಯ ಸಮಸ್ಯೆಯಾಗುತ್ತದೆ. ಆದರೆ ಪ್ರತಿ ಬಾರಿ ಒಟ್ಟ ಮಾಡುವಾಗ ಅಥವಾ ತಣಿದ ಆಹಾರ ಸೇವನೆ ಮಾಡುವಾಗಲೂ ಈ ರೀತಿ ಆಗುತ್ತಿದ್ದರೆ ಅಥವಾ ಚಳಿಯ ವಾತಾವರಣದಲ್ಲಿಯೂ ಈ ರೀತಿ ಬೆವರುತ್ತಿದ್ದರೆ ಅದು ಸಾಮಾನ್ಯವಲ್ಲ. ಹಾಗಾದರೆ ಈ ರೀತಿ ಆಗುವುದಕ್ಕೆ…

Read More

Video: ಬೇಸಿಗೆ ರಜೆ ಮುಗಿಸಿ ಅಜ್ಜಿ ಮನೆಯಿಂದ ಹೊರಟ ಮೊಮ್ಮಗನನ್ನು ಕಂಡು ಭಾವುಕರಾದ ಅಜ್ಜಿ 

ಅಜ್ಜಿ ಮನೆ ಎಂದರೆ ಎಲ್ಲಾ ಮೊಮ್ಮಕ್ಕಳಿಗೂ (grandchildren) ಸ್ವರ್ಗ. ಬಾಲ್ಯದ ಸುಂದರ ಬೇಸಿಗೆ ನೆನಪುಗಳು ಬೆಸೆದುಕೊಂಡಿರುವುದು ಅದೇ ಮನೆಯಲ್ಲಿ. ಬೇಸಿಗೆ ರಜೆ (summer vacation) ಶುರುವಾಗುತ್ತಿದ್ದಂತೆ ಯಾವಾಗ ಅಜ್ಜಿ ಮನೆಗೆ ಹೋಗುತ್ತೇನೆ ಎಂದು ಅದೆಷ್ಟೋ ಮಕ್ಕಳು ಕಾಯುತ್ತಾರೆ. ಅಜ್ಜಿಯ ಮಡಿಲಲ್ಲಿ ಮಲಗಿ ಕಥೆಗಳನ್ನು ಕೇಳುವುದು, ಅಜ್ಜನ ಜತೆಗೆ ಊರು ಸುತ್ತುವುದು ಇಂತಹ ನೆನಪುಗಳು ಒಂದೆರಡಲ್ಲ. ಹಳ್ಳಿಗಳಲ್ಲಿನ ಅಜ್ಜಿ ಮನೆಯ ಅನುಭವವು ಇಂದಿಗೂ ಅಷ್ಟೇ ಅಮೂಲ್ಯ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಬೇಸಿಗೆ ರಜೆ ಮುಗಿಸಿ ತನ್ನ ಮನೆಗೆ…

Read More

73 ವರ್ಷಗಳ ಬಳಿಕ ತುಂಗಭದ್ರಾ ಡ್ಯಾಂ ಪುನರುಜ್ಜೀವನ: ಇಂದು 33 ಹೊಸ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ, ಮೂರು ರಾಜ್ಯಗಳ ಸಿಎಂಗಳ ಸಮಾಗಮ – Kannada News | Historic Day for Tungabhadra Dam: 33 Rebuilt Crest Gates to Be Inaugurated Jointly by Three Chief Ministers

ತುಂಗಭದ್ರಾ ಜಲಾಶದ ಹೊರಭಾಗದ ನೋಟImage Credit source: tv9 ಕೊಪ್ಪಳ, ಜೂನ್ 25: ತುಂಗಭದ್ರಾ ಜಲಾಶಯವು (Tungabhadra Dam) ಇತಿಹಾಸದಲ್ಲೇ ಇಂದು ಅತ್ಯಂತ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಲಿದೆ. 2024ರ ಆಗಸ್ಟ್ ತಿಂಗಳಲ್ಲಿ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿಹೋಗಿ ಸೃಷ್ಟಿಯಾಗಿದ್ದ ಆತಂಕಕ್ಕೆ ಶಾಶ್ವತ ಪರಿಹಾರ ಸಿಕ್ಕಿದ್ದು, ಬರೋಬ್ಬರಿ 51 ಕೋಟಿ ರೂಪಾಯಿ ವೆಚ್ಚದಲ್ಲಿ ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್‌ಗಳನ್ನು ಸಂಪೂರ್ಣವಾಗಿ ಬದಲಾಯಿಸಲಾಗಿದೆ. ಇಂದು (ಜೂನ್ 25) ಬೆಳಗ್ಗೆ 10 ಗಂಟೆಗೆ ಈ ನೂತನ ಗೇಟ್‌ಗಳ ಭವ್ಯ…

Read More

ವೈಭವ್ ವಯಸ್ಸೆಷ್ಟು? 15 ಅಥವಾ 18… ಬ್ರೆಟ್ ಲೀ ಖಡಕ್ ಉತ್ತರ – Kannada News | Brett Lee’s Blunt Take on Vaibhav Suryavanshi’s Age Row

ಟಿ20 ಕ್ರಿಕೆಟ್​ನ ನ್ಯೂ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅವರ ವಯಸ್ಸಿನ ಸುತ್ತ ಕೇಳಿಬರುತ್ತಿರುವ ವಿವಾದಗಳಿಗೆ ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ಖಡಕ್ ಉತ್ತರ ನೀಡಿದ್ದಾರೆ. “ಅವನಿಗೆ 15 ವರ್ಷ ಇರಲಿ ಅಥವಾ 18 ವರ್ಷ ಇರಲಿ, ಅದರಿಂದ ಯಾರಿಗೂ ಯಾವುದೇ ನಷ್ಟವಿಲ್ಲ. ಆ ಹುಡುಗನಲ್ಲಿ ಅದ್ಭುತ ಕ್ರಿಕೆಟ್ ಕೌಶಲ್ಯವಿದೆ” ಎಂದು ಬ್ರೆಟ್ ಲೀ ಬೆಂಬಲ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್​ವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಬ್ರೆಟ್ ಲೀ, ವೈಭವ್ ಸೂರ್ಯವಂಶಿಯ ಆಟದ ಶೈಲಿ ಮತ್ತು…

Read More

ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ – Kannada News | Rashika Shetty Express Shock Over Gilli Nata Craze

ರಾಶಿಕಾ ಶೆಟ್ಟಿ ಅವರು ಕಳೆದ ವಾರ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಅವರು ಈಗ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಗಿಲ್ಲಿ ಫ್ಯಾನ್ಸ್ ಇಷ್ಟು ಹಿರಿದಾಗಿದೆ ಎಂಬ ವಿಷಯ ಗೊತ್ತಿರಲಿಲ್ಲ ಎಂದಿದ್ದಾರೆ ಅವರು. ಪ್ರತಿ ವ್ಯಕ್ತಿ ಕೂಡ ಇದನ್ನೇ ಹೇಳುತ್ತಿದ್ದಾರೆ. ಅಭಿಮಾನಿ ಬಳಗ ನೋಡಿ ಸ್ವತಃ ಗಿಲ್ಲಿಗೆ ಅಚ್ಚರಿ ಆಗಬಹುದು ಎನ್ನಲಾಗುತ್ತಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಗಂಡ ಫಾರಿನ್ ಟ್ರಿಪ್ ಕಳಿಸದಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡ ಹೆಂಡ್ತಿ: ಆಗಿದ್ದೇನು? – Kannada News | Woman Commits Suicide By Hanging Herself In Mysuru For Husband denied foreign Trip

ಮೈಸೂರು (ಫೆಬ್ರವರಿ.20): ಪ್ರವಾಸದ ವಿಚಾರಕ್ಕೆ ಗಂಡ ಹೆಂಡ್ತಿ ನಡುವೆ ಗಲಾಟೆಯಾಗಿದ್ದು, ಬಳಿಕ ಪತ್ನಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಸರಸ್ವತಿಪುರಂನಲ್ಲಿ ನಡೆದಿದೆ. ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದು 46 ವರ್ಷದ ಸಂಧ್ಯಾ ಎಂಬುವವರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಆದರೆ, ಈ ಸಾವಿನ ಸುತ್ತ ಇದೀಗ ಕುಟುಂಬದ ಸದಸ್ಯರ ನಡುವೆಯೇ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಹೀಗಾಗಿ ಗೃಹಿಣಿ ಸಂಧ್ಯಾ ಆತ್ಮಹತ್ಯೆ ಪ್ರಕರಣವು ಇದೀಗ ತೀವ್ರ ತಿರುವು ಪಡೆದುಕೊಂಡಿದೆ….

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?

ಜ್ಯೋತಿಷಿ ಕೆ. ವೆಂಕಟೇಶ್ ಶರ್ಮಾ ಅವರು ಯುಗಾದಿ ಭವಿಷ್ಯ 2026 ರ ಕುರಿತು ಕುಂಭ ರಾಶಿಯವರ ಫಲಗಳನ್ನು ವಿವರಿಸಿದ್ದಾರೆ. ಕುಂಭ ರಾಶಿಯವರು ಸಾಡೇ ಸಾತಿಯ ಕೊನೆಯ ಹಂತದಲ್ಲಿದ್ದು, ಇನ್ನೂ ಸುಮಾರು ಎರಡು ವರ್ಷ ನಾಲ್ಕು ತಿಂಗಳುಗಳ ಕಾಲ ಅದರ ಪ್ರಭಾವವಿರುತ್ತದೆ. ಈ ಅವಧಿಯಲ್ಲಿ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅನಿರೀಕ್ಷಿತ ಹಣಕಾಸಿನ ಲಾಭಗಳು ದೊರೆಯುವ ಸಾಧ್ಯತೆ ಇದೆ. ಕುಟುಂಬ ಮತ್ತು ಸ್ನೇಹಿತರಿಂದ ಉತ್ತಮ ಸಹಾಯ ಲಭ್ಯವಾಗಲಿದೆ. ಆರೋಗ್ಯದ ವಿಚಾರದಲ್ಲಿ ರಕ್ತ ಸಂಬಂಧಿ ಕಾಯಿಲೆಗಳು ಮತ್ತು ಅಪಘಾತಗಳ ಬಗ್ಗೆ ಎಚ್ಚರಿಕೆ…

Read More