Headlines

ಅವಮಾನ ಆದಲ್ಲೆ ಕರ್ನಾಟಕದ ಬಾವುಟ ಹಾರಿಸಿದ ಕಿಚ್ಚ: ಸಾಧನೆ ಬಗ್ಗೆ ಹೇಳಿದ್ದೇನು? – Kannada News | Sudeep talks about waving Kannada flag in Tamil Nadu

ಸುದೀಪ್ (Sudeep) ಹಾಗೂ ಅವರ ನೇತೃತ್ವದ ಕರ್ನಾಟಕ ಬುಲ್ಡೊಜರ್ಸ್ ತಂಡ 2026ರ ಸಿಸಿಎಲ್ ಕ್ರಿಕೆಟ್ ಟೂರ್ನಿಯ ಚಾಂಪಿಯನ್ಸ್ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬೆಂಗಾಲ್ ತಂಡವನ್ನು ಎದುರಿಸಿದ ಕರ್ನಾಟಕ ತಂಡ ಅದ್ಧೂರಿ ವಿಜಯ ಸಾಧಿಸಿತು. ಆ ಮೂಲಕ ಮೂರನೇ ಬಾರಿ ಚಾಂಪಿಯನ್ ಎನಿಸಿಕೊಂಡಿತು. ಈ ಅದ್ಭುತ ಸಾಧನೆಯ ಬಳಿಕ ಮೊದಲ ಬಾರಿಗೆ ಕರ್ನಾಟಕ ಬುಲ್ಡೊಜರ್ಸ್ ತಂಡ ಮಾಧ್ಯಮಗಳ ಎದುರು ಬಂದು ತಮ್ಮ ಸಂಭ್ರಮ ಹಂಚಿಕೊಂಡಿತು. ಈ ವೇಳೆ ಟಿವಿ9 ಪ್ರತಿನಿಧಿ ಕೇಳಿದ ಪ್ರಶ್ನೆಗೆ…

Read More

ಭಾರತದ ನಕ್ಷೆಯಲ್ಲಿ ಪಿಒಕೆ ಸೇರಿಸಿದ ಅಮೆರಿಕ; ಪಾಕಿಸ್ತಾನಕ್ಕೆ ಬಿಸಿ ತುಪ್ಪವಾದ ಟ್ರಂಪ್ – Kannada News | Jammu Kashmir POK Map in India US Trade Deal Trump Quiet Message to Pakistan

ನವದೆಹಲಿ, ಫೆಬ್ರವರಿ 7: ರಷ್ಯಾದಿಂದ ಇಂಧನ ಆಮದು ಮಾಡಿಕೊಳ್ಳುತ್ತಿದ್ದೇವೆ ಎಂಬ ಕಾರಣಕ್ಕೆ ಭಾರತದ ಮೇಲೆ ಮುನಿಸಿಕೊಂಡಿದ್ದ ಡೊನಾಲ್ಡ್ ಟ್ರಂಪ್ (Donald Trump) ಇದ್ದಕ್ಕಿದ್ದಂತೆ ಶೇ. 25ರಷ್ಟು ಹೆಚ್ಚುವರಿ ತೆರಿಗೆ ವಿಧಿಸುವ ಮೂಲಕ ಭಾರತದ ಮೇಲಿನ ಒಟ್ಟು ಸುಂಕವನ್ನು ಶೇ. 50ಕ್ಕೆ ಏರಿಸಿದ್ದರು. ಇದಕ್ಕೆ ಯಾವ ಪ್ರತಿಕ್ರಿಯೆಯನ್ನೂ ನೀಡದ ಪ್ರಧಾನಿ ನರೇಂದ್ರ ಮೋದಿ ಬೇರೆ ದೇಶಗಳ ಜೊತೆ ವ್ಯಾಪಾರ ಒಪ್ಪಂದವನ್ನು ಮಾಡಿಕೊಳ್ಳುತ್ತಾ ತಮ್ಮದೇ ಆದ ಕಾರ್ಯತಂತ್ರ ರೂಪಿಸಿದ್ದರು. ಇದರಿಂದ ಸಹಜವಾಗಿಯೇ ಟ್ರಂಪ್​ಗೆ ತಲೆಬಿಸಿ ಹೆಚ್ಚಾಗಿತ್ತು. ಕೊನೆಗೆ ಮತ್ತೆ ಇದ್ದಕ್ಕಿದ್ದಂತೆ…

Read More

T20 World Cup: ಭಾರತದ ವಿರುದ್ಧ ಸೋತರೂ ದಿಟ್ಟ ಹೋರಾಟ ನೀಡಿದ ಯುಎಸ್​ಎ – Kannada News | India Dominates USA in T20 World Cup 2026 Opener: Comprehensive Win at Wankhede

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಮೆರಿಕ ನಡುವಿನ 2026 ರ ಟಿ20 ವಿಶ್ವಕಪ್ ಮೂರನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಸುಲಭ ಜಯ ದಾಖಲಿಸಿತು. ಇದರೊಂದಿಗೆ ಹಾಲಿ ಚಾಂಪಿಯನ್ ಆಗಿ ಪಂದ್ಯಾವಳಿಗಿಳಿದಿರುವ ಭಾರತ ಗೆಲುವಿನ ಶುಭಾರಂಭ ಮಾಡಿದೆ. ಇತ್ತ ಭಾರತದ ವಿರುದ್ಧ ಸೋತರೂ ಅನಾನುಭವಿ ಅಮೆರಿಕ ತಂಡ ದಿಟ್ಟ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಟೀಂ ಇಂಡಿಯಾವನ್ನು ಕೇವಲ 161 ರನ್​ಗಳಿಗೆ ಕಟ್ಟಿಹಾಕುವಲ್ಲಿ ಅಮೆರಿಕ ಬೌಲರ್​ಗಳು ಯಶಸ್ವಿಯಾದರು….

Read More

ಸಂಸಾರದ ಜಂಜಾಟಕ್ಕಿಂತ ಸನ್ಯಾಸತ್ವ ಉತ್ತಮ: ದಾವಣಗೆರೆ ಸಿವಿಲ್ ಇಂಜಿನಿಯರಿಂಗ್ ಟಾಪರ್ ಈಗ ಜೈನ ಸನ್ಯಾಸಿ – Kannada News | Davangere’s BIET Civil Topper Anchal Kumari Becomes Jain Nun, Inspiring Renunciation

ದಾವಣಗೆರೆ, ಫೆ.7: ದಾವಣಗೆರೆಯ ಬಿಐಇಟಿ (BIET) ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ಟಾಪರ್ ಆಂಚಲ್ ಕುಮಾರಿ ಅವರು ಐಷಾರಾಮಿ ಜೀವನವನ್ನು ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಚರ್ಚೆಗೂ ಕಾರಣವಾಗಿದೆ. 26ನೇ ವಯಸ್ಸಿನಲ್ಲಿ ಅವರು ಕೈಗೊಂಡಿರುವ ಈ ನಿರ್ಧಾರ ಆಧುನಿಕ ಜಗತ್ತಿನಲ್ಲಿ ಅಧ್ಯಾತ್ಮದ ಸೆಳೆತ ಎಷ್ಟು ಪ್ರಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಆಂಚಲ್ ಕುಮಾರಿ ದಾವಣಗೆರೆಯ ಚೌಕಿಪೇಟೆಯ ನಿವಾಸಿಗಳಾದ ಮುಖೇಶ್ ಕುಮಾರ್ ಹಾಗೂ ಸುನೀತಾ ದಂಪತಿಯ ಪುತ್ರಿ. ಪ್ರತಿಷ್ಠಿತ ಬಿಐಇಟಿ ಕಾಲೇಜಿನಲ್ಲಿ…

Read More

ಹೊಟ್ಟೆ ನೋವನ್ನು ನಿರ್ಲಕ್ಷಿಸಬೇಡಿ; ಇದರ ಹಿಂದೆ ಬರಬಹುದು ನೀವು ಊಹಿಸಲೂ ಸಾಧ್ಯವಿಲ್ಲದ ಕಾಯಿಲೆಗಳು! – Kannada News | What Your Stomach Pain Is Trying to Tell You

ಕೆಲವರಿಗೆ ಪದೇ ಪದೇ ಹೊಟ್ಟೆ ನೋವು (Stomach Pain) ಕಾಣಿಸಿಕೊಳ್ಳುತ್ತದೆ. ಆದರೆ ಇದನ್ನು ಸಾಮಾನ್ಯ ಆರೋಗ್ಯ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ, ಇದು ಅನಿಲ, ಆಯಾಸ ಅಥವಾ ಆಹಾರ ಪದ್ಧತಿಯಲ್ಲಿ ಆದಂತಹ ಬದಲಾವಣೆಯಿಂದ ಉಂಟಾಗುತ್ತದೆ ಎಂದು ಅಂದುಕೊಳ್ಳುತ್ತಾರೆ. ಆದರೆ ಹೊಟ್ಟೆ ನೋವು ಆಗಾಗ ಕಂಡುಬಂದರೆ, ಅದು ದೇಹದಲ್ಲಿನ ಆಂತರಿಕ ಸಮಸ್ಯೆಯ ಸಂಕೇತವೂ ಆಗಿರಬಹುದು ಎಂಬುದನ್ನು ಮರೆಯಬಾರದು. ಅಂತಹ ನೋವಿನ ಜೊತೆಗೆ, ಹೊಟ್ಟೆಯಲ್ಲಿ ಉರಿ, ಭಾರ, ವಾಕರಿಕೆ, ಹಸಿವಿನ ಕೊರತೆ, ಆಗಾಗ ಅತಿಸಾರ ಅಥವಾ ಮಲಬದ್ಧತೆ, ಉಬ್ಬುವುದು ಅಥವಾ ಆಯಾಸದಂತಹ…

Read More

T20 World Cup: ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿ ಗಂಭೀರ್ ದಾಖಲೆ ಸರಿಗಟ್ಟಿದ ಅಭಿಷೇಕ್ – Kannada News | Abhishek Sharma’s T20 World Cup Debut Disaster: Golden Duck Equates Gambhir’s Record

ಅಭಿಷೇಕ್ ಶರ್ಮಾ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಔಟಾದ ನಂತರ ಅಮೆರಿಕ ವಿರುದ್ಧದ ಪಂದ್ಯದ ಚಿತ್ರಣವೇ ಬದಲಾಯಿತು. ಭಾರತದ ಅಗ್ರ ಕ್ರಮಾಂಕವು ಕ್ಷಣಾರ್ಧದಲ್ಲಿ ಕುಸಿಯಿತು. ಭಾರತವು ಕೇವಲ 46 ರನ್‌ಗಳಿಗೆ ತನ್ನ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಅಭಿಷೇಕ್, ತಿಲಕ್, ಇಶಾನ್, ದುಬೆ, ಹಾರ್ದಿಕ್ ಪಾಂಡ್ಯ ಮತ್ತು ರಿಂಕು ಸಿಂಗ್ ಕೂಡ ಬೇಗನೆ ವಿಕೆಟ್ ಒಪ್ಪಿಸಿದರು. Source link

Read More

ಶಾಕಿಂಗ್ ಮಾಹಿತಿ ರಿವೀಲ್ ಮಾಡಿದ ಆರೋಗ್ಯ ಇಲಾಖೆ: ಸಿಟಿ ಜನರಲ್ಲಿ ಹೆಚ್ಚುತ್ತಿದೆ ಮಾನಸಿಕ ಖಿನ್ನತೆ ಸಮಸ್ಯೆ – Kannada News | Bangalore Mental Health Crisis: Tele Manas Offers Lifeline Amidst Rising Depression

ಬೆಂಗಳೂರು, ಫೆಬ್ರವರಿ 07: ಸಿಲಿಕಾನ್ ಸಿಟಿ ಬೆಂಗಳೂರು (bangaluru) ಒಂಥರಾ ಬ್ಯುಸಿ ಸಿಟಿ. ಇಲ್ಲಿ ಇರುವ ಜನರು ಕೂಡ ಅಷ್ಟೇ ಬ್ಯುಸಿ ಹಾಗೂ ಒತ್ತಡದ ಜೀವನ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಇದೀಗ ಸಿಟಿ ಮಂದಿ ಹೆಚ್ಚು ಮಾನಸಿಕ ಅನಾರೋಗ್ಯಕ್ಕೆ (Mental Health) ತುತ್ತಾಗುತ್ತಿದ್ದಾರೆ. ಹೀಗಾಗಿ ಟೆಲಿ ಮಾನಸ್​​ಗೆ ಮನೋ ರೋಗಿಗಳಿಂದ ಲಕ್ಷಾಂತರ ಕರೆಗಳು ಬರುತ್ತಿವೆ. ಸಿ. ಜೆ ರಾಯ್​ ಹಾಗೂ ಮಕ್ಕಳ ಸೂಸೈಡ್ ಬಳಿಕ ಆರೋಗ್ಯ ಇಲಾಖೆ ಶಾಕಿಂಗ್ ಮಾಹಿತಿಯೊಂದನ್ನು ಬಯಲು ಮಾಡಿದೆ. ಹೌದು.. ಇತ್ತೀಚೆಗೆ ಜನರ…

Read More

T20 World Cup: ಏಕಾಂಗಿ ಹೋರಾಟ ನೀಡಿ ತಂಡದ ಮಾನ ಉಳಿಸಿದ ಸೂರ್ಯಕುಮಾರ್

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಮೆರಿಕ ವಿರುದ್ಧದ ಮೊದಲ ಪಂದ್ಯದೊಂದಿಗೆ 2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡವು ನಿರಾಶಾದಾಯಕ ಆರಂಭ ಪಡೆದುಕೊಂಡಿತು. ಪವರ್‌ಪ್ಲೇನಲ್ಲಿಯೇ ತಂಡವು ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಆರಂಭಿಕ ಜೋಡಿ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಬೇಗನೆ ವಿಕೆಟ್ ಒಪ್ಪಿಸಿದರು. ಪರಿಣಾಮವಾಗಿ ಆರನೇ ವಿಕೆಟ್ ಪತನಕ್ಕೆ ತಂಡದ ಸ್ಕೋರ್​ಬೋರ್ಡ್​ನಲ್ಲಿ ಇದಿದ್ದು ಕೇವಲ 77 ರನ್‌. ಈ…

Read More

ಊರಿಗೆಲ್ಲ ಊಟ ಹಾಕಿಸಿ ಮಗನಂತಿರುವ ಕೋಣದ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ರೈತ – Kannada News | Chikkalawala’s Sanjay Satale Throws Grand 1st Birthday for Pet Buffalo Shyam

ಬೆಳಗಾವಿ, ಫೆ.7: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಕ್ಕಲವಾಳ ಗ್ರಾಮದಲ್ಲಿ ಒಂದು ಅಪರೂಪದ ಘಟನೆಯೊಂದು ನಡೆದಿದೆ. ಮನೆಯ ಮುಂದೆ ಹಾಕಿರುವ ಪೆಂಡಾಲ್ , ಸಂಭ್ರಮ ನೋಡಿ ಮದುವೆ ಇರಬೇಕು ಎಂದುಕೊಳ್ಳಬೇಕು. ಅಷ್ಟೊಂದು ಸಡಗರ ಇತ್ತು ಈ ಮನೆಯಲ್ಲಿ. ಇಷ್ಟಕ್ಕೂ ಈ ಸಂಭ್ರಮಕ್ಕೆ ಕಾರಣವೇನು? ಎಂದು ಒಮ್ಮೆ ಯೋಚನೆ ಮಾಡಬಹುದು. ಇದಕ್ಕೆ ಅಸಲಿ ಕಾರಣ ಚಿಕ್ಕಲವಾಳ ಗ್ರಾಮದ ಸಂಜಯ್ ಸತಾಳೆ ಎಂಬುವವರ ಮನೆಯ ಕೋಣ. ಹೌದು ಅವರ ತನ್ನ ಕೋಣ ವರ್ಷ ಪೂರೈಸಿದಕ್ಕೆ ಈ ಸಂಭ್ರಮವನ್ನು ಮಾಡಿದ್ದಾರೆ. ಊರಿಗೆಲ್ಲಾ ಊಟ…

Read More

ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು, 13 ಜನರಿಗೆ ಗಾಯ – Kannada News | Surajkund Fair tragedy Police dead 13 injured after swing collapses in Faridabad

ಫರಿದಾಬಾದ್, ಫೆಬ್ರವರಿ 7: ಹರಿಯಾಣದ ಫರೀದಾಬಾದ್​ನಲ್ಲಿ ನಡೆಯುತ್ತಿದ್ದ ಸೂರಜ್‌ಕುಂಡ್ ಜಾತ್ರೆಯಲ್ಲಿ ದುರಂತ ಸಂಭವಿಸಿದೆ. ಎಲ್ಲ ಜಾತ್ರೆಗಳಲ್ಲೂ ಇರುವಂತೆ ಆ ಜಾತ್ರೆಯಲ್ಲೂ ಜಾಯಿಂಟ್ ವೀಲ್, ಜೋಕಾಲಿ ಮತ್ತಿತರ ಸ್ವಿಂಗ್​ಗಳನ್ನು ಹಾಕಲಾಗಿತ್ತು. ಈ ವೇಳೆ ಸುನಾಮಿ ಸ್ವಿಂಗ್ ತುಂಡಾಗಿ ಬಿದ್ದಿದೆ. ಅದರಲ್ಲಿ ಕುಳಿತಿದ್ದವರು ಕೆಳಗೆ ಬೀಳಲಾರಂಭಿಸಿದರು. ಜಾತ್ರೆಯಲ್ಲಿ ವಿಪರೀತ ಜನ ಸೇರಿದ್ದರಿಂದ ಏನಾಯಿತು ಎಂದು ಅಲ್ಲಿದ್ದವರಿಗೆ ಗೊತ್ತಾಗುವಷ್ಟರಲ್ಲಿ ಮೇಲಿನಿಂದ ಬಿದ್ದು ಪೊಲೀಸ್ ಸಾವನ್ನಪ್ಪಿದ್ದು, 13ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯ ಸಮಯದಲ್ಲಿ ಉಯ್ಯಾಲೆಯಲ್ಲಿ 18 ಜನರಿದ್ದರು. ಈ…

Read More