ಶಿಕ್ಷಕರೇ ಮೇಸ್ತ್ರಿ, ವಿದ್ಯಾರ್ಥಿಗಳೇ ಕಾರ್ಮಿಕರು: ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು – Kannada News | Teachers Using Students to Swarna School building construction work In Hassan Video Goes Viral
ಹಾಸನ, (ಡಿಸೆಂಬರ್ 19): ಮಕ್ಕಳು ಓದಲು ಶಾಲೆಗೆ ಹೋಗುತ್ತಾರೆ. ಇನ್ನು ಪೋಷಕರು ಸಹ ಲಕ್ಷಾಂತರ ರೂಪಾಯಿ ಫೀ ಕಟ್ಟಿ ತಮ್ಮ ಮಕ್ಕಳು ನಾಲ್ಕು ಅಕ್ಷರ ಕಲಿತು ವಿದ್ಯಾವಂತರಾಗಲಿ ಎಂದು ಶಾಲೆಗೆ ಕಳುಹಿಸುತ್ತಾರೆ. ಆದ್ರೆ, ಶಿಕ್ಷಕರೇ ಮಕ್ಕಳನ್ನ ಕಟ್ಟಡ ಕಾರ್ಮಿಕರಂತೆ ದುಡಿಸಿಕೊಂಡಿರುವ ಪ್ರಕರಣವೊಂದು ಹಾಸನ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಹೌದು…ಶಿಕ್ಷಕರು ಮೇಸ್ತ್ರಿಯಂತೆ ಮುಂದೆ ನಿಂತುಕೊಂಡು ಮಕ್ಕಳಿಂದ ಶಾಲೆ ಕಟ್ಟಡ ನಿರ್ಮಾಣ ಕೆಲಸಕ್ಕೆ ಬಳಸಿಕೊಂಡಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಸ್ವರ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ…