ಪದೇ ಪದೇ ಆತ್ಮಹತ್ಯೆ ಯತ್ನಿಸಿದ 8ನೇ ತರಗತಿ ವಿದ್ಯಾರ್ಥಿನಿ: ಅಸಲಿ ಕಾರಣ ಇಲ್ಲಿದೆ – Kannada News | Child Protection Lapses: Karwar Children’s Home Fails Girl, Exposing Systemic Failures

ಕಾರವಾರ, ಫೆ.7: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆಯೊಂದು ನಡೆದಿದೆ. ಘೋರ ದೌರ್ಜನ್ಯಕ್ಕೆ ಒಳಗಾಗಿ ಈಗಾಗಲೇ ನೊಂದಿದ್ದ ಬಾಲಕಿಗೆ ರಕ್ಷಣೆ ಸಿಗಬೇಕಾದ ಜಾಗದಲ್ಲಿಯೇ ಇಂತಹ ನಿರ್ಧಾರ ಮಾಡಿರುವುದು ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಈ ಬಾಲಕಿ ಮೂಲತಃ ಹಳಿಯಾಳ ತಾಲೂಕಿನವಳು. ಕಳೆದ ಆಗಸ್ಟ್‌ನಲ್ಲಿ ಪೋಕ್ಸೋ ಪ್ರಕರಣವೊಂದರ ಅಡಿಯಲ್ಲಿ ಈಕೆಯನ್ನು ರಕ್ಷಿಸಿ ಕಾರವಾರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಬಾಲಮಂದಿರಕ್ಕೆ ದಾಖಲಿಸಲಾಗಿತ್ತು.

ಈಕೆ ಕಾರವಾರದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಆದರೆ, ಮಾನಸಿಕ ಒತ್ತಡದ ಕಾರಣ ಕಳೆದ ಎರಡು ವಾರಗಳಿಂದ ಶಾಲೆಗೆ ಹೋಗದೆ ಬಾಲಮಂದಿರದಲ್ಲಿಯೇ ಉಳಿದುಕೊಂಡಿದ್ದಳು. ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ, ಯಾರೂ ಇಲ್ಲದ ಸಮಯ ನೋಡಿ ಮೇಲಿನ ಕೋಣೆಗೆ ತೆರಳಿ ನೇಣು ಹಾಕಿಕೊಳ್ಳಲು ಯತ್ನಿಸಿದ್ದಾಳೆ. ತಕ್ಷಣ ಗಮನಿಸಿದ ಸಿಬ್ಬಂದಿ ಆಕೆಯನ್ನು ರಕ್ಷಿಸಿ ಕಾರವಾರದ ಕ್ರಿಮ್ಸ್ (KRIMS) ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಆಕೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಬಾಲಕಿ ಮಾನಸಿಕವಾಗಿ ಕುಗ್ಗಿದ್ದಾಳೆ ಎಂದು ತಿಳಿದಿದ್ದರೂ ಮತ್ತು ಆಕೆಯನ್ನು ಈ ಹಿಂದೆಯೇ ನಿಮಾನ್ಸ್ (NIMHANS) ಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರೂ, ಆಕೆಗೆ ನಿರಂತರವಾಗಿ ನೀಡಬೇಕಾದ ‘ಕೌನ್ಸೆಲಿಂಗ್’ ಹಾಗೂ ಆಕೆ ನೀಡಬೇಕಿದ್ದ ರಕ್ಷಣೆಯಲ್ಲಿ ಲೋಪವಾಗಿರುವುದು ಕಂಡುಬರುತ್ತಿದೆ. ಬಾಲಮಂದಿರದಲ್ಲಿ 20 ಬಾಲಕಿಯರಿಗೆ 10 ಮಂದಿ ಸಿಬ್ಬಂದಿ ಇದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ಸಿಬ್ಬಂದಿ ಇದ್ದರೂ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪದೇ ಪದೇ ಬೆದರಿಕೆ ಹಾಕುತ್ತಿದ್ದ ಬಾಲಕಿ ಒಬ್ಬಂಟಿಯಾಗಿ ಬಿಟ್ಟಿರುವುದೇ ತಪ್ಪು. ವಿವಿಧ ಪ್ರಕರಣಗಳಲ್ಲಿ ಸಂತ್ರಸ್ತರಾಗಿ ಬರುವ ಮಕ್ಕಳಿಗೆ ಕೇವಲ ಆಶ್ರಯ ನೀಡಿದರೆ ಸಾಲದು, ಅವರಿಗೆ ಮಾನಸಿಕ ಧೈರ್ಯ ತುಂಬುವ ತಜ್ಞರ ಅವಶ್ಯಕತೆ ಇಂತಹ ಕೇಂದ್ರಗಳಲ್ಲಿ ಹೆಚ್ಚಾಗಿರುತ್ತದೆ.

ಇದನ್ನೂ ಓದಿ: 6 ವರ್ಷದಿಂದ ಒಂದೇ ರೂಮಿನಲ್ಲಿದ್ದು ಈಗ ನಾನು ಬೇಡ ಅಂತಿದ್ದಾಳೆ: ನ್ಯಾಯಕ್ಕಾಗಿ ಪಟ್ಟು ಹಿಡಿದ ಪ್ರಿಯಕರ

ಇದೀಗ ಬಾಲಕಿಯ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಆದರೆ, ಈ ಘಟನೆಯ ನಂತರ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಬಾಲಮಂದಿರದ ಭದ್ರತೆ ಮತ್ತು ಮಕ್ಕಳ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಹೆಚ್ಚಿನ ಕ್ರಮ ಕೈಗೊಳ್ಳಬೇಕಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯ ಮೂಲಗಳ ಪ್ರಕಾರ, ಘಟನೆಯ ಬಗ್ಗೆ ಸಮಗ್ರ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಖ್ಯವಾಗಿ, 10 ಮಂದಿ ಸಿಬ್ಬಂದಿ ಇರುವಾಗ ಈ ಲೋಪ ಹೇಗೆ ಸಂಭವಿಸಿತು ಎಂಬ ಬಗ್ಗೆ ಆಂತರಿಕ ತನಿಖೆ ನಡೆಯುತ್ತಿದೆ. ಘಟನೆಯ ಸಮಯದಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯನ್ನು CWC ವಿಚಾರಣೆ ನಡೆಸುತ್ತಿದೆ. ಬಾಲಕಿ ಈ ಹಿಂದೆಯೇ ಆತ್ಮಹತ್ಯೆಯ ಬೆದರಿಕೆ ಹಾಕಿದ್ದರೂ ಆಕೆಯ ಮೇಲೆ ವಿಶೇಷ ನಿಗಾ ವಹಿಸದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

T20 World Cup: ಮೊದಲ ದಿನವೇ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ – Kannada News | T20 World Cup 2026: Romario Shepherd’s Historic Hat Trick Powers West Indies Win

2026 ರ ಟಿ20 ವಿಶ್ವಕಪ್​ ಮೊದಲ ದಿನವೇ ಕೆಲವು ಅಚ್ಚರಿಯ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನದ ಮೊದಲ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ನೆದರ್ಲ್ಯಾಂಡ್ಸ್ ಸೋಲಿನ ಭಯ ಹುಟ್ಟಿಸಿತು. ಆದರೆ ಕೊನೆಯಲ್ಲಿ ಪಾಕಿಸ್ತಾನಕ್ಕೆ ಗೆಲುವು ಸಿಕ್ಕಿತು. ಆ ನಂತರ ನಡೆದ ಎರಡನೇ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ಅಮೋಘ ಪ್ರದರ್ಶನ ನೀಡಿತು. ಇದೇ ಪಂದ್ಯದಲ್ಲಿ ಆಲ್‌ರೌಂಡರ್ ರೊಮಾರಿಯೊ ಶೆಫರ್ಡ್​ ಹ್ಯಾಟ್ರಿಕ್ ವಿಕೆಟ್ ಪಡೆಯುವುದರ ಜೊತೆಗೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದರು. ಇದರ ಫಲವಾಗಿ ವಿಂಡೀಸ್ ತಂಡ 35 ರನ್​ಗಳ ಸುಲಭ ಜಯ ದಾಖಲಿಸಿತು.

ಇನ್ನು ಈ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಶೆಫರ್ಡ್​, 2026 ರ ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹಾಗೆಯೇ ಟಿ20 ವಿಶ್ವಕಪ್‌ನಲ್ಲಿ ಈ ಸಾಧನೆ ಮಾಡಿದ ವೆಸ್ಟ್ ಇಂಡೀಸ್‌ನ ಮೊದಲ ಬೌಲರ್ ಎಂಬ ದಾಖಲೆಯನ್ನು ಬರೆದರು. ಇದು ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಶೆಫರ್ಡ್ ಅವರ ಎರಡನೇ ಹ್ಯಾಟ್ರಿಕ್ ಆಗಿದ್ದು, ಇದಕ್ಕೂ ಮೊದಲು, ರೊಮಾರಿಯೊ ಶೆಫರ್ಡ್ ಬಾಂಗ್ಲಾದೇಶ ವಿರುದ್ಧ ಹ್ಯಾಟ್ರಿಕ್ ಪಡೆದಿದ್ದರು.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಶೆಫರ್ಡ್​ ಹ್ಯಾಟ್ರಿಕ್ ಜೊತೆಗೆ ಒಟ್ಟು 5 ವಿಕೆಟ್‌ಗಳನ್ನು ಕಬಳಿಸಿ ಸ್ಕಾಟ್ಲೆಂಡ್ ತಂಡವನ್ನು ಮಣಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. 17 ನೇ ಓವರ್‌ನಲ್ಲಿ ಸತತ 3 ಎಸೆತಗಳಲ್ಲಿ ಮ್ಯಾಥ್ಯೂ ಕ್ರಾಸ್, ಮೈಕೆಲ್ ಲೀಸ್ಕ್ ಮತ್ತು ಆಲಿವರ್ ಡೇವಿಡ್ಸನ್ ಅವರನ್ನು ಔಟ್ ಮಾಡುವ ಮೂಲಕ ರೊಮಾರಿಯೊ ಶೆಫರ್ಡ್ 2026 ರ ಟಿ20 ವಿಶ್ವಕಪ್‌ನ ಮೊದಲ ಹ್ಯಾಟ್ರಿಕ್ ಪೂರ್ಣಗೊಳಿಸಿದರು. ಅದೇ ಓವರ್‌ನ ಕೊನೆಯ ಎಸೆತದಲ್ಲಿ ಅವರು ವಿಕೆಟ್ ಪಡೆದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 182 ರನ್ ಗಳಿಸಿತು. ತಂಡದ ಪರ ಶಿಮ್ರಾನ್ ಹೆಟ್ಮೆಯರ್ 36 ಎಸೆತಗಳಲ್ಲಿ 2 ಬೌಂಡರಿ ಮತ್ತು 6 ಸಿಕ್ಸರ್‌ಗಳ ಸಹಾಯದಿಂದ 64 ರನ್ ಗಳಿಸಿದರೆ, ಪೊವೆಲ್ ಮತ್ತು ರುದರ್ಫೋರ್ಡ್ ಕೂಡ ಕ್ರಮವಾಗಿ 24 ಮತ್ತು 26 ರನ್ ಗಳಿಸಿದರು. 183 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಸ್ಕಾಟ್ಲೆಂಡ್ ಒಂದು ಹಂತದಲ್ಲಿ 3 ವಿಕೆಟ್‌ಗಳಿಗೆ 115 ರನ್‌ಗಳಿಸಿತ್ತು. ಅದಾದ ನಂತರ, ಸ್ಕಾಟ್ಲೆಂಡ್ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಳ್ಳಲು ಪ್ರಾರಂಭಿಸಿತು. ಹೀಗಾಗಿ ತಂಡ 19ನೇ ಓವರ್​ನಲ್ಲಿ 147 ರನ್​ಗಳಿಗೆ ಆಲೌಟ್ ಆಯಿತು.

Source link

ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ; ವಿಡಿಯೋ ವೈರಲ್ – Kannada News | PM Modi Welcomed with Indian Traditional dance in Malaysia Watch Aamzing Video

ಕೌಲಾಲಂಪುರ, ಫೆಬ್ರವರಿ 7: ಪ್ರಧಾನಿ ಮೋದಿ ಇಂದು ತಮ್ಮ 2 ದಿನಗಳ ಭೇಟಿಗಾಗಿ ಮಲೇಷ್ಯಾಕ್ಕೆ ಆಗಮಿಸಿದರು. ಈ ವೇಳೆ 800ಕ್ಕೂ ಹೆಚ್ಚು ನೃತ್ಯಗಾರರಿಂದ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ನೃತ್ಯಗಳನ್ನು ಪ್ರದರ್ಶಿಸುವ ಮೂಲಕ ಪ್ರಧಾನಿ ಮೋದಿಯವರಿಗೆ (PM Modi in Malaysia) ವಿನೂತನವಾಗಿ ಸ್ವಾಗತ ಕೋರಲಾಯಿತು. ವಿದೇಶಿ ನೆಲದಲ್ಲಿ ನೂರಾರು ಜನರು ಪ್ರದರ್ಶಿಸಿದ ಭರತನಾಟ್ಯ ಕಂಡು ಪ್ರಧಾನಿ ಮೋದಿ ಅಚ್ಚರಿಗೊಂಡರು. ಈ ವೇಳೆ ‘ಭಾರತ್ ಮಾತಾ ಕಿ ಜೈ’, ‘ಮೋದಿ, ಮೋದಿ’ ಘೋಷಣೆಗಳು ಮಾರ್ದನಿಸಿದವು.

ಪ್ರಧಾನಿ ಮೋದಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ಸಮುದಾಯ ಕಾರ್ಯಕ್ರಮದ ಭಾಗವಾದ ಈ ಪ್ರದರ್ಶನವನ್ನು ಮಲೇಷ್ಯಾ ಬುಕ್ ಆಫ್ ರೆಕಾರ್ಡ್ಸ್ ಪ್ರಮಾಣೀಕರಿಸಿದೆ. ಭಾರತೀಯ ಸಮುದಾಯ ಮಲೇಷ್ಯಾದ ಸಾಂಸ್ಕೃತಿಕ ಸಮಿತಿಯ ಬ್ಯಾನರ್ ಅಡಿಯಲ್ಲಿ ಸುಮಾರು 800 ನರ್ತಕರು ಒಂದೇ ಬಾರಿಗೆ ನಿರಂತರ 5 ನಿಮಿಷಗಳ ಕಾಲ ನೃತ್ಯ ಪ್ರದರ್ಶಿಸಿದರು. ಇದು ವಿವಿಧ ರೀತಿಯ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ನೃತ್ಯ ಪ್ರಕಾರಗಳನ್ನು ಪ್ರದರ್ಶಿಸಲಾಯಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

BCCI Contracts: ಬಿಸಿಸಿಐ ಕೇಂದ್ರ ಒಪ್ಪಂದದಲ್ಲಿ 21 ಆಟಗಾರ್ತಿಯರು; ಕನ್ನಡತಿಗೆ ಶಾಕ್ – Kannada News | *BCCI Women’s Central Contracts 2026: Grades, Salaries and New Players Revealed

ಬಿಸಿಸಿಐ ಶೀಘ್ರದಲ್ಲೇ ಭಾರತದ ಪುರುಷರ ಹಾಗೂ ಮಹಿಳೆಯರ ಕ್ರಿಕೆಟ್ ತಂಡದ ಹೊಸ ಕೇಂದ್ರ ಒಪ್ಪಂದವನ್ನು ಪ್ರಕಟಿಸಲು ತಯಾರಿ ನಡೆಸಿದೆ. ಅದರಂತೆ ಈ ಬಾರಿ ಎಷ್ಟು ಆಟಗಾರರಿಗೆ ಕೇಂದ್ರ ಒಪ್ಪಂದಗಳನ್ನು ನೀಡಬೇಕು ಎಂಬುದನ್ನು ಬಿಸಿಸಿಐ ಈಗಾಗಲೇ ನಿರ್ಧರಿಸಿದೆ. ಪುರುಷರ ಕೇಂದ್ರ ಒಪ್ಪಂದದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾ್ ಕೊಹ್ಲಿ ಎ+ ಗ್ರೇಡ್​ನಿಂದ ಬಿ ಗ್ರೇಡ್​ಗೆ ಕುಸಿದಿದ್ದಾರೆ ಎಂದು ವರದಿಯಾಗಿದೆ. ಇತ್ತ ಮಹಿಳಾ ತಂಡದ ಕೇಂದ್ರ ಒಪ್ಪಂದದ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು, ಕಳೆದ ಬಾರಿಯ ಕೇಂದ್ರ ಒಪ್ಪಂದದಲ್ಲಿ ಕೇವಲ 16 ಆಟಗಾರ್ತಿಯರಿದ್ದರೆ, ಈ ಬಾರಿಯ ಕೇಂದ್ರ ಒಪ್ಪಂದದಲ್ಲಿ ಒಟ್ಟು 21 ಮಹಿಳಾ ಆಟಗಾರ್ತಿಯರಿಗೆ ಸ್ಥಾನ ಸಿಗಲಿದೆ ಎಂದು ಹೇಳಲಾಗುತ್ತಿದೆ.

ಜೆಮಿಮಾ ರೊಡ್ರಿಗಸ್​ಗೆ ಬಡ್ತಿ

ಕಳೆದ ಬಾರಿಯಂತೆ, ನಾಯಕಿ ಹರ್ಮನ್‌ಪ್ರೀತ್ ಕೌರ್, ಉಪನಾಯಕಿ ಸ್ಮೃತಿ ಮಂಧಾನ ಮತ್ತು ಆಲ್‌ರೌಂಡರ್ ದೀಪ್ತಿ ಶರ್ಮಾ ಅವರನ್ನು ಮತ್ತೊಮ್ಮೆ ಎ ಗ್ರೇಡ್‌ಗೆ ಸೇರಿಸಲಾಗಿದೆ. ಜೆಮಿಮಾ ರೋಡ್ರಿಗಸ್ ಕೂಡ ಎ ಗ್ರೇಡ್‌ಗೆ ಬಡ್ತಿ ಪಡೆದಿದ್ದಾರೆ, ಅವರು ಈ ಹಿಂದೆ ಬಿ ಗ್ರೇಡ್‌ನಲ್ಲಿದ್ದರು. ಈ ಆಟಗಾರ್ತಿಯರು ವಾರ್ಷಿಕವಾಗಿ 50 ಲಕ್ಷ ರೂಪಾಯಿಗಳನ್ನು ವೇತನವಾಗಿ ಪಡೆಯುತ್ತಾರೆ. ಏತನ್ಮಧ್ಯೆ, ರೇಣುಕಾ ಠಾಕೂರ್, ಶೆಫಾಲಿ ವರ್ಮಾ, ರಿಚಾ ಘೋಷ್ ಮತ್ತು ಸ್ನೇಹ ರಾಣಾ ಬಿ ಗ್ರೇಡ್​ನಲ್ಲಿ ಸ್ಥಾನ ಪಡೆದಿದ್ದು, 3 ಲಕ್ಷ ರೂಪಾಯಿ ವೇತನ ಪಡೆಯುತ್ತಾರೆ.

ಈ ಆಟಗಾರ್ತಿಯರಿಗೆ ಸಿ ಗ್ರೇಡ್‌

ಗ್ರೇಡ್ ಸಿ ಯಲ್ಲಿ ರಾಧಾ ಯಾದವ್, ಅಮಂಜೋತ್ ಕೌರ್, ಪ್ರತೀಕಾ ರಾವಲ್, ಕ್ರಾಂತಿ ಗೌಡ್, ಉಮಾ ಛೆಟ್ರಿ, ಅರುಂಧತಿ ರೆಡ್ಡಿ, ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ, ಹರ್ಲೀನ್ ಡಿಯೋಲ್, ಕಾಶ್ವಿ ಗೌತಮ್, ಜಿ. ಕಮಲಿನಿ, ವೈಷ್ಣವಿ ಶರ್ಮಾ ಮತ್ತು ತೇಜಲ್ ಸೇರಿದ್ದಾರೆ. ಈ ಆಟಗಾರ್ತಿಯರಿಗೆ ವಾರ್ಷಿಕವಾಗಿ10 ಲಕ್ಷ ರೂ. ವೇತನ ಪಡೆಯಲಿದ್ದಾರೆ. ಪ್ರತೀಕಾ ರಾವಲ್, ಕ್ರಾಂತಿ ಗೌಡ್, ಶ್ರೀ ಚರಣಿ, ಕಶ್ವಿ ಗೌತಮ್, ಜಿ. ಕಮಲಿನಿ, ವೈಷ್ಣವಿ ಶರ್ಮಾ ಮತ್ತು ತೇಜಲ್ ಅವರು ಮೊದಲ ಬಾರಿಗೆ ಕೇಂದ್ರ ಒಪ್ಪಂದದ ಭಾಗವಾಗಲಿದ್ದಾರೆ. ಆದರೆ, ಪೂಜಾ ವಸ್ತ್ರಾಕರ್, ಶ್ರೇಯಾಂಕಾ ಪಾಟೀಲ್ ಮತ್ತು ಟಿಟಾಸ್ ಸಾಧು ಕೇಂದ್ರ ಒಪ್ಪಂದಿಂದ ಹೊರಬಿದ್ದಿದ್ದಾರೆ. ಕೇಂದ್ರ ಒಪ್ಪಂದ ಪಡೆದಿರುವ ಆಟಗಾರ್ತಿಯರು ಒಪ್ಪಂದದಲ್ಲಿ ನಿಗದಿಯಾಗಿರುವ ವೇತನದ ಜೊತೆಗೆ ಪಂದ್ಯದ ಶುಲ್ಕವನ್ನು ಸಹ ವೇತನವಾಗಿ ಪಡೆಯುತ್ತಾರೆ. ಆ ಪ್ರಕಾರ ಟೆಸ್ಟ್ ಪಂದ್ಯವನ್ನಾಡುವ ಆಟಗಾರ್ತಿಗೆ 15 ಲಕ್ಷ, ಏಕದಿನ ಪಂದ್ಯಕ್ಕೆ 6 ಲಕ್ಷ ಮತ್ತು ಟಿ20 ಪಂದ್ಯಕ್ಕೆ 3 ಲಕ್ಷ ರೂ. ವೇತನ ಪಡೆಯುತ್ತಾರೆ.

ಬಿಸಿಸಿಐ ಕೇಂದ್ರ ಒಪ್ಪಂದ ಪಟ್ಟಿ

ಗ್ರೇಡ್ ಎ: ಹರ್ಮನ್‌ಪ್ರೀತ್ ಕೌರ್, ಸ್ಮೃತಿ ಮಂಧಾನ, ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ.

ಗ್ರೇಡ್ ಬಿ: ರೇಣುಕಾ ಠಾಕೂರ್, ಶೆಫಾಲಿ ವರ್ಮಾ, ರಿಚಾ ಘೋಷ್, ಸ್ನೇಹ ರಾಣಾ.

ಗ್ರೇಡ್ ಸಿ: ರಾಧಾ ಯಾದವ್, ಅಮಂಜೋತ್ ಕೌರ್, ಪ್ರತೀಕಾ ರಾವಲ್, ಕ್ರಾಂತಿ ಗೌಡ್, ಉಮಾ ಛೆಟ್ರಿ, ಅರುಂಧತಿ ರೆಡ್ಡಿ, ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ, ಹರ್ಲೀನ್ ಡಿಯೋಲ್, ಕಶ್ವಿ ಗೌತಮ್, ಜಿ ಕಮಲಿನಿ, ವೈಷ್ಣವಿ ಶರ್ಮಾ, ತೇಜಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Propose Day 2026: ಪ್ರಪೋಸ್‌ ಡೇಯಂದು ಈ ರೀತಿ ನಿಮ್ಮ ಮನಸ್ಸಿಗೆ ಇಷ್ಟವಾದ ಹುಡ್ಗಿಗೆ ಪ್ರೇಮ ಪ್ರಸ್ತಾಪ ಮಾಡಿ – Kannada News | Propose Day 2026: How to propose to your loved one on Propose Day? Here’s the information

ವ್ಯಾಲೆಂಟೈನ್‌ ವೀಕ್‌ನ ಎರಡನೇ ದಿನ ಅಂದ್ರೆ ಫೆಬ್ರವರಿ 8 ರಂದು ಪ್ರಪೋಸ್‌ ಡೇ (Propose Day) ಆಚರಿಸಲಾಗುತ್ತದೆ. ಪ್ರೇಮಿಗಳ ಪಾಲಿಗಂತೂ ಈ ದಿನ ತುಂಬಾನೇ ಸ್ಪೆಷಲ್.‌ ಈ ದಿನವನ್ನು ಪ್ರೀತಿಯನ್ನು ವ್ಯಕ್ತಪಡಿಸಲು ಅತ್ಯಂತ ಸುಂದರವಾದ ಸಮಯವೆಂದು ಪರಿಗಣಿಸಲಾಗಿದೆ. ನೀವು ಸಹ ಬಹಳ ದಿನಗಳಿಂದ ಒಂದು ಹುಡುಗ/ಹುಡುಗಿಯನ್ನು ಮೆಚ್ಚಿಕೊಂಡಿದ್ದರೆ ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಪರಿಪೂರ್ಣ ಅವಕಾಶವನ್ನು ಹುಡುಕುತ್ತಿದ್ದರೆ, ಪ್ರಪೋಸ್‌ ಡೇ ನಿಮಗೆ ಸೂಕ್ತವಾಗಿದೆ. ನೀವು ಈ ರೀತಿ ಪ್ರಪೋಸ್‌ ಮಾಡಿದ್ರೆ ಪಕ್ಕಾ ನೀವು ಇಷ್ಟಪಟ್ಟ ಹುಡುಗಿ ನಿಮ್ಮ ಪ್ರೀತಿಯನ್ನು ಒಪ್ಪಿಕೊಳ್ಳುತ್ತಾರೆ.

ಪ್ರಪೋಸ್‌ ಡೇಯಂದು ಈ ರೀತಿ ಪ್ರೇಮ ನಿವೇದನೆ ಮಾಡಿಕೊಳ್ಳಿ:

ಒಂದು ಪ್ರಣಯ ಪತ್ರ ಅಥವಾ ಸಂದೇಶ ಬರೆಯಿರಿ: ನಿಮ್ಮ ಭಾವನೆಗಳನ್ನು ಮುಖಾಮುಖಿಯಾಗಿ ವ್ಯಕ್ತಪಡಿಸಲು ನೀವು ಹಿಂಜರಿಯುತ್ತಿದ್ದರೆ, ಒಂದು ಪ್ರೇಮ ಪತ್ರ ಬರೆಯಿರಿ. ಇಲ್ಲವೆ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿ.   ಈ ಪತ್ರ ಅಥವಾ ಸಂದೇಶದಲ್ಲಿ ನಿಮ್ಮ ಭಾವನೆಗಳನ್ನು ಸ್ಪಷ್ಟವಾಗಿ ಮತ್ತು ಪ್ರಾಮಾಣಿಕವಾಗಿ ಬರೆಯಿರಿ. ಕೈಬರಹದ ಪತ್ರವು ಹೆಚ್ಚು ವೈಯಕ್ತಿಕ ಮತ್ತು ವಿಶೇಷವೆನಿಸುತ್ತದೆ ಮತ್ತು ನಿಮ್ಮ ಪ್ರೀತಿಯು ಅದನ್ನು ಶಾಶ್ವತವಾಗಿ ಸುರಕ್ಷಿತವಾಗಿರಿಸುತ್ತದೆ.

ಸರ್ಪ್ರೈಸ್‌ ಪ್ಲಾನ್ ಮಾಡಿ: ನೀವು ನಿಮ್ಮ ಭಾವನೆಗಳನ್ನು ಚಾಕೊಲೇಟ್‌ಗಳು, ಗುಲಾಬಿಗಳು, ಸಣ್ಣ ಉಡುಗೊರೆ ಅಥವಾ ಕೈಯಿಂದ ಮಾಡಿದ ಕಾರ್ಡ್‌ನೊಂದಿಗೆ ವ್ಯಕ್ತಪಡಿಸಬಹುದು. ಸರ್ಪ್ರೈಸ್ ದೊಡ್ಡದಾಗಿರಬೇಕಾಗಿಲ್ಲ, ಸಣ್ಣದಾಗಿದ್ದರೂ ಅದು ಪ್ರತಿಬಿಂಬಿಸಬೇಕು.

ಕಾಫಿ ಅಥವಾ ವಾಕ್ ಡೇಟ್‌ಗೆ ಪ್ರಪೋಸ್ ಮಾಡಿ: ಶಾಂತ ಮತ್ತು ಆರಾಮದಾಯಕ ವಾತಾವರಣದಲ್ಲಿ ಪ್ರಪೋಸ್ ಮಾಡುವುದು ಹೆಚ್ಚು ಪರಿಣಾಮಕಾರಿ. ಕೆಫೆಯಲ್ಲಿ ಕಾಫಿ ಕುಡಿಯುತ್ತಾ ಅಥವಾ ಸಂಜೆ ನಡಿಗೆಯ ಸಮಯದಲ್ಲಿ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಿ. ಅಂತಹ ಸ್ಥಳದಲ್ಲಿ, ಸಂಭಾಷಣೆ ಸಹಜವಾಗಿರಲಿ.

ಇದನ್ನೂ ಓದಿ: ನಿಮ್ಮ ಸಂಗಾತಿಗೆ ಉಡುಗೊರೆಗಳನ್ನು ನೀಡುವ ಮೂಲಕ ಪ್ರಪೋಸ್‌ ಡೇಯನ್ನು ಸ್ಪೆಷಲ್‌ ಆಗಿ ಆಚರಿಸಿ

ಸರಳ ಆದರೆ ನಿಜವಾದ ಪ್ರಸ್ತಾಪ: ಕೆಲವೊಮ್ಮೆ, ಯಾವುದೇ ಯೋಜನೆ ಅಥವಾ ನಾಟಕವಿಲ್ಲದೆ, “ನಾನು ನಿನ್ನನ್ನು ಇಷ್ಟಪಡುತ್ತೇನೆ” ಎಂದು ಹೃದಯದಿಂದ ನೇರವಾಗಿ ಹೇಳುವುದು ಹೆಚ್ಚು ಪರಿಣಾಮ ಬೀರುತ್ತದೆ. ನಿಜವಾದ ಭಾವನೆಗಿಂತ ಮಿಗಿಲಾದದ್ದು ಯಾವುದೂ ಇಲ್ಲ. ನಿಮ್ಮ ನೈಜ ಭಾವನೆಗಳನ್ನು ವ್ಯಕ್ತಪಡಿಸಿ, ಖಂಡಿತವಾಗಿಯೂ ಅವರು ನಿಮ್ಮ ಪ್ರೀತಿಯನ್ನು ಒಪ್ಪಿಕೊಳ್ಳುತ್ತಾರೆ.

ನಿಜ ಹೇಳಬೇಕೆಂದರೆ, ಯಾವುದೇ ಪ್ರಪೋಸಲ್ ಪರಿಪೂರ್ಣವಾಗಿರುವುದಿಲ್ಲ. ಮಾತುಗಳು ಎಡವುತ್ತವೆ, ಎದೆ ಢವ ಢವ ಎನ್ನುತ್ತದೆ, ಕೈಗಳು ನಡುಗುತ್ತವೆ. ಆದರೆ ಈ ಸಣ್ಣ ವಿಷಯಗಳೇ ಆ ಕ್ಷಣವನ್ನು ನಿಮ್ಮದಾಗಿಸಿಕೊಳ್ಳುತ್ತವೆ, ನೀವು ಪ್ರೀತಿಸಿದ ಜೀವವನ್ನು ಶಾಶ್ವತವಾಗಿ ನಿಮಗೆ ಒದಗಿಸಿಕೊಡುತ್ತದೆ. ಇನ್ನೊಂದೇನೆಂದರೆ ಗ್ರ್ಯಾಂಡ್‌ ಆಗಿ ಸರ್ಪ್ರೈಸ್‌ ಅರೇಂಜ್‌ ಮಾಡಬೇಕಾಗಿಯೂ ಇಲ್ಲ, ನೀವು ಸರಳವಾಗಿಯೂ ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಬಹುದು, ಸರಳ, ಸಹಜವಾದ ಪ್ರೇಮ ನಿವೇದನೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೀವೇ ಭಾರತ- ಮಲೇಷ್ಯಾ ನಡುವಿನ ಜೀವಂತ ಸೇತುವೆ; ಭಾರತೀಯ ವಲಸಿಗರ ಜೊತೆ ಪ್ರಧಾನಿ ಮೋದಿ ಸಂವಾದ – Kannada News | Indian origin community is a living bridge between India and Malaysia PM Modi says in Kuala Lumpur

ಕೌಲಾಲಂಪುರ, ಫೆಬ್ರವರಿ 7: ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿರುವ ಭಾರತೀಯ ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಮೋದಿ (PM Modi), “ನಂಬಿಕೆ ಭಾರತದ ಪ್ರಬಲ ಕರೆನ್ಸಿಯಾಗಿದೆ. ಭಾರತೀಯ ವಲಸಿಗರು ಭಾರತ ಮತ್ತು ಮಲೇಷ್ಯಾ ನಡುವೆ ಜೀವಂತ ಸೇತುವೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಮಲೇಷ್ಯಾ ವಿಶ್ವದ ಎರಡನೇ ಅತಿದೊಡ್ಡ ಭಾರತೀಯ ಮೂಲದ ಸಮುದಾಯವನ್ನು ಹೊಂದಿದೆ. ಭಾರತೀಯ ಮತ್ತು ಮಲೇಷಿಯಾದ ಹೃದಯಗಳನ್ನು ಸಂಪರ್ಕಿಸುವ ಬಹಳಷ್ಟು ವಿಷಯಗಳಿವೆ. ನೀವು ನಮ್ಮನ್ನು ಸಂಪರ್ಕಿಸುವ ಜೀವಂತ ಸೇತುವೆ” ಎಂದು ಹೇಳಿದ್ದಾರೆ.

ಭಾರತೀಯ ಮೂಲದ ಸುಮಾರು ಮೂರು ಮಿಲಿಯನ್ ಜನರು ಮಲೇಷ್ಯಾದಲ್ಲಿ ವಾಸಿಸುತ್ತಿದ್ದಾರೆ. ಇದು ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರವಾಗಿದೆ. ಅವರಲ್ಲಿ ಬಹುಪಾಲು ತಮಿಳು ಮೂಲದವರು. ಹೀಗಾಗಿ, ತಮಿಳು ಭಾಷೆಯ ಕುರಿತು ತಮ್ಮ ಭಾಷಣದಲ್ಲಿ ಮಾತನಾಡಿದ ಮೋದಿ, “ತಮಿಳು ಜಗತ್ತಿಗೆ ಭಾರತ ನೀಡಿದ ಕೊಡುಗೆ. ತಮಿಳು ಸಾಹಿತ್ಯ ಶಾಶ್ವತ ಮತ್ತು ಜಾಗತಿಕವಾಗಿದೆ. ಭಾರತದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್, ಕೇಂದ್ರ ಸಚಿವರಾದ ಎಸ್ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರಂತಹ ತಮಿಳು ಸಮುದಾಯದ ನಾಯಕರು ತಮ್ಮ ಪ್ರತಿಭೆಯಿಂದ ಮಾನವೀಯತೆಗೆ ಸೇವೆ ಸಲ್ಲಿಸಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ

ತಮಿಳು ವಲಸಿಗರ ಸಾಮರ್ಥ್ಯಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ತಮಿಳು ಇತಿಹಾಸದಿಂದ ಪ್ರೇರಿತರಾಗಿ ಮಲಯ ವಿಶ್ವವಿದ್ಯಾಲಯದಲ್ಲಿ ತಿರುವಳ್ಳುವರ್ ಪೀಠವನ್ನು ಸ್ಥಾಪಿಸಲಾಗಿದೆ. ನಮ್ಮ ತಮಿಳು ಪರಂಪರೆಯನ್ನು ಮತ್ತಷ್ಟು ಬಲಪಡಿಸಲು ನಾವು ತಿರುವಳ್ಳುವರ್ ಕೇಂದ್ರವನ್ನು ಸ್ಥಾಪಿಸಿದ್ದೇವೆ” ಎಂದು ಪ್ರಧಾನಿ ಹೇಳಿದ್ದಾರೆ.

ಮಲೇಷ್ಯಾಕ್ಕೆ ಈ ಭೇಟಿ 2026ರಲ್ಲಿ ಪ್ರಧಾನಿಯವರ ಮೊದಲ ವಿದೇಶಿ ಭೇಟಿಯನ್ನು ಸೂಚಿಸುತ್ತದೆ. ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅಧಿಕಾರಕ್ಕೇರುವ ಮೊದಲೇ ಪ್ರಧಾನಿ ಮೋದಿ ಅವರು ಮಲೇಷ್ಯಾ ಪ್ರಧಾನಿಯವರೊಂದಿಗೆ ಸ್ನೇಹ ಹೊಂದಿದ್ದರು. ಈ ಬಗ್ಗೆಯೂ ಮೋದಿ ಪ್ರಸ್ತಾಪಿಸಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಮೆಟ್ರೋ ಟಿಕೆಟ್ ದರ ಸಮರ: ಯುದ್ಧ ಪೂರ್ತಿ ಗೆದ್ದಿಲ್ಲ ಎಂದ ಸಂಸದ; ಕೇಂದ್ರಕ್ಕೆ ಪತ್ರ ಬರೆಯುವಂತೆ ಒತ್ತಾಯ – Kannada News | Metro ticket price war: This is only temporary, the war has not been completely won, says Tejasvi Surya

ಸಂಸದ ತೇಜಸ್ವಿ ಸೂರ್ಯImage Credit source: deccanherald

ಬೆಂಗಳೂರು, ಫೆಬ್ರವರಿ 07: ಸೋಮವಾರದಿಂದ ನಮ್ಮ ಮೆಟ್ರೋ ಟಿಕೆಟ್ (Namma Metro) ಪ್ರಯಾಣ ದರ ಶೇಕಡಾ 5ರಷ್ಟು ಏರಿಕೆ ಮಾಡಲು ನಿರ್ಧರಿಸಲಾಗಿತ್ತು. ಇದೇ ದರ ಏರಿಕೆ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮಧ್ಯೆ ದಂಗಲ್ ಕೂಡ ಏರ್ಪಟ್ಟಿದೆ. ಈ ಮೆಟ್ರೋ ಪ್ರಯಾಣ ದರ ಏರಿಕೆ ಜಟಾಪಟಿಯ ನಡುವೆ ಸೋಮವಾರದಿಂದ ಮೆಟ್ರೋ ಪ್ರಯಾಣ ದರ ಏರಿಕೆಯಾಗಲ್ಲ ಅಂತಾ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಘೋಷಿಸಿದ್ದು, ಇದು ತಾತ್ಕಾಲಿಕ ಅಷ್ಟೇ ನಾವು ಪೂರ್ತಿಯಾಗಿ ಯದ್ಧ ಗೆದ್ದಿಲ್ಲ ಎಂದು ಹೇಳಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಹೇಳಿದ್ದಿಷ್ಟು 

ನಗದರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಸೋಮವಾರದಿಂದ ರಾಜ್ಯ ಸರ್ಕಾರ ಮತ್ತು ಬಿಎಂ‌ಆರ್‌ಸಿಎಲ್ ದರ ಹೆಚ್ಚಳದ ಪ್ರಸ್ತಾಪ ಇಟ್ಟಿತ್ತು. ನಾವು, ಸಾರ್ವಜನಿಕರು ಇದರ ವಿರುದ್ಧ ಧ್ವನಿ ಎತ್ತಿದ್ದೆವು. ಈಗಾಗಲೇ ದೇಶದ ದುಬಾರಿ ಮೆಟ್ರೋ ಎನ್ನುವ ಕುಖ್ಯಾತಿ ಇದೆ. ಕೇಂದ್ರ ಸಚಿವ ಮನೋಹರ ಲಾಲ್​ ಖಟ್ಟರ್ ಜೊತೆ ನಾನು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್ ಅವರು ಮಾತಾಡಿದ್ದೆವು. ನಗರಾಭಿವೃದ್ಧಿ ಇಲಾಖೆಯ ಸೆಕ್ರೆಟರಿ ಅವರಿಗೆ ತಾತ್ಕಾಲಿಕವಾಗಿ ದರ ಏರಿಕೆಯನ್ನು ನಿಲ್ಲಿಸಲು ಸೂಚಿಸಿದ್ದಾಗಿ ಹೇಳಿದ್ದಾರೆ. ಆದರೆ ಇದು ತಾತ್ಕಾಲಿಕ ಅಷ್ಟೇ, ನಾವು ಯದ್ದ‌ ಪೂರ್ತಿಯಾಗಿ ಗೆದ್ದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್ ಕೊಟ್ಟ ತೇಜಸ್ವಿ ಸೂರ್ಯ: ಸೋಮವಾರದಿಂದ ದರ ಏರಿಕೆ ಆಗುವುದಿಲ್ಲ

ದೆಹಲಿಯಲ್ಲಿ 69 ರೂ ಮತ್ತು ಚೆನೈನಲ್ಲಿ 50 ರೂ ಗೆ ಮೆಟ್ರೋದಲ್ಲಿ ಸಂಚಾರ ಮಾಡಬೇಕಾದರೆ, ಬೆಂಗಳೂರಲ್ಲಿ ಏಕೆ 90 ರೂ. ಕೊಡಬೇಕು ಎನ್ನುವುದು ನಮ್ಮ‌ ಪ್ರಶ್ನೆ. ಈಗ ಮತ್ತೊಂದು ದರ ನಿಗದಿ ಕಮಿಟಿ ಮಾಡಬೇಕು. ರಾಜ್ಯ ಸರ್ಕಾರ ದರ ನಿಗದಿ ಕಮಿಟಿ ರಚಿಸಲು ನಾಲ್ಕಾರು ಬಾರಿ ಹಿಂದೆ ಪತ್ರ ಬರೆದಿದ್ದರು. ದರ ನಿಗದಿ ಕಮಿಟಿಯಲ್ಲಿ ಪ್ರತಿ ವರ್ಷ ದರ ಹೆಚ್ಚಳ ಮಾಡುವಂತೆ ರಾಜ್ಯ ಸರ್ಕಾರದ ಅಧಿಕಾರಿಗಳು ಮನವಿ ಮಾಡಿದ್ದರು. ನಾನು ಹೈಕೋರ್ಟ್‌ನಲ್ಲಿ ಕೇಸ್ ಹಾಕಿದ್ದೆ. ಫೇರ್ ಫಿಕ್ಸೇಷನ್ ಕಮಿಟಿ ಏಕೆ ಮುಚ್ಚಿಟ್ಟಿದ್ದರು,
ಇವರ ವಾದ ಮುಚ್ಚಿಡಲು ಹೀಗೆ ಮಾಡಿದ್ದರು ಎಂದು ವಾಗ್ದಾಳಿ ಮಾಡಿದ್ದಾರೆ.

ಹೊಸ ಕಮಿಟಿ ರಚನೆಗೆ ಪತ್ರ ಬರೆಯುವಂತೆ ಒತ್ತಾಯ

ರಾಜ್ಯ ಸರ್ಕಾರ ಹೊಸ ಫೇರ್ ಫಿಕ್ಸೇಷನ್ ಕಮಿಟಿ ರಚಿಸಿಲು ಪತ್ರ ಬರೆದರೆ, ನಾವು ಅದನ್ನ ಪರಿಗಣಿಸುತ್ತೇವೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಈಗ ಬಾಲ್ ಸಿಎಂ ಮತ್ತು ಡಿಸಿಎಂ ಅಂಗಳದಲ್ಲಿ ಇದೆ. ಈಗ ಒಂದು ಪತ್ರ ಬರೆಯಿರಿ ಎಂದು ಹೇಳಿದ್ದಾರೆ. ಮರುಪರಿಷ್ಕರಣೆ ಮಾಡಿ ಎಂದು ಪತ್ರ ಬರೆದರೆ ಹೊಸ ಕಮಿಟಿ ರಚನೆ ಮಾಡುತ್ತಾರೆ. ಪತ್ರ ಬರೆದರೂ ಕಮಿಟಿ ಮಾಡಿಲ್ಲ ಎಂದರೆ ಕೇಂದ್ರದ ತಪ್ಪು. ಇವರು ಪತ್ರ ಬರೆದಿಲ್ಲ ಎಂದರೆ ಇವರ ತಪ್ಪು, ಏನು ಮಾಡುತ್ತಾರೆ ನೋಡೋಣ. ಟೆಕ್ನಿಕಲ್​ ಆಗಿ ಈಗಲೂ ಸಹ ತಡೆ ನೀಡಲು ಸಾಧ್ಯವಾಗುತ್ತಿರಲಿಲ್ಲ, ಆದರೆ ನಾವೆಲ್ಲಾ ಒತ್ತಡ ಹೇರಿದ್ದರಿಂದ ತಾತ್ಕಾಲಿಕವಾಗಿ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಕಮಿಟಿ ರಚಿಸಲು ಹೇಳಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ವರದಿ: ನಟರಾಜ್​​ ಟಿವಿ9

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್: ವಿಡಿಯೋ – Kannada News | AP Arjun talks about Rift between him and Kanakpura Srinivas

ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakpura Srinivas) ಕೆಲ ದಿನಗಳ ಹಿಂದೆ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಕೆಲ ನಿರ್ದೇಶಕರುಗಳು, ನಟರನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಅದರಲ್ಲೂ ನಿರ್ದೇಶಕ ಎಪಿ ಅರ್ಜುನ್, ಪ್ರೇಮ್ ಇನ್ನೂ ಕೆಲವರ ಬಗ್ಗೆ ಬಹಳ ನೀಚವಾಗಿ ಮಾತನಾಡಿದ್ದರು. ಈಗಾಗಲೇ ನಿರ್ದೇಶಕ ಪ್ರೇಮ್, ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ. ಇದೀಗ ನಿರ್ದೇಶಕ ಎಪಿ ಅರ್ಜುನ್ ಸಹ ತಮಗೂ ಶ್ರೀನಿವಾಸ್​​ಗೂ ಮನಸ್ತಾಪಕ್ಕೆ ಕಾರಣವೇನು? ಇಬ್ಬರ ನಡುವೆ ನಡೆದಿದ್ದ ಹಣದ ವ್ಯವಹಾರ, ಐರಾವತ ಸಿನಿಮಾದ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಗೃಹಲಕ್ಷ್ಮಿ’ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ: ಮೃತಪಟ್ಟ ಫಲಾನುಭವಿಗಳ ಖಾತೆಗೆ ಹೋಗುತ್ತಿದೆ ಕೋಟ್ಯಂತರ ರೂ. – Kannada News | New Gruha Lakshmi Rule: Life Certificate Compulsory to Stop Payments to Deceased

ಬೆಂಗಳೂರು, ಫೆ.7: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ (Gruha Lakshmi Scheme) ಹಣ ದುರುಪಯೋಗವಾಗುವುದನ್ನು ತಡೆಯಲು ಈಗ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗೂ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ‘ಜೀವಿತ ಪ್ರಮಾಣಪತ್ರ’ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಆಲೋಚಿಸುತ್ತಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಎಂಎಲ್‌ಸಿ ಆಗಿರುವ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಈ ಬಗ್ಗೆ ಲಿಖಿತ ಮನವಿ ಸಲ್ಲಿಸಿದ್ದರು.

ದಿನೇಶ್ ಗೂಳಿಗೌಡ ಅವರ ಮನವಿಯನ್ನು ಪುರಸ್ಕರಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಈ ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ (Chief Secretary) ಅವರಿಗೆ ಸೂಚನೆ ನೀಡಿದ್ದಾರೆ. ನಿವೃತ್ತ ಸರ್ಕಾರಿ ನೌಕರರು ಪಿಂಚಣಿ ಪಡೆಯಲು ಪ್ರತಿ ವರ್ಷ ಬ್ಯಾಂಕ್‌ಗಳಿಗೆ ‘ಜೀವಿತ ಪ್ರಮಾಣಪತ್ರ’ ಸಲ್ಲಿಸುವುದು ಹೇಗೆ ಕಡ್ಡಾಯವೋ, ಅದೇ ಮಾದರಿಯನ್ನು ಗೃಹಲಕ್ಷ್ಮಿ ಯೋಜನೆಗೂ ತರಲು ಉದ್ದೇಶಿಸಲಾಗಿದೆ.

ಯೋಜನೆಯಡಿ ಸುಮಾರು 1.24 ಕೋಟಿ ಫಲಾನುಭವಿಗಳಿದ್ದು, ಇದಕ್ಕಾಗಿ ಸರ್ಕಾರ ₹57,300 ಕೋಟಿಗೂ ಅಧಿಕ ಹಣ ವ್ಯಯಿಸಿದೆ. ಮರಣ ಹೊಂದಿದವರ ಹೆಸರಿನಲ್ಲಿ ಹಣ ಪಾವತಿಯಾಗುತ್ತಿರುವುದನ್ನು ತಡೆದು, ಸರ್ಕಾರದ ಹಣ ಸೋರಿಕೆಯನ್ನು ನಿಲ್ಲಿಸುವುದು ಇದರ ಮೂಲ ಉದ್ದೇಶವಾಗಿದೆ.

ದಿನೇಶ್ ಗೂಳಿಗೌಡ ಮನವಿಯಲ್ಲಿ ಏನಿತ್ತು?

ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಯೋಜನೆಯ ಫಲಾನುಭವಿ ಮಹಿಳೆಯಾಗಿರುತ್ತಾರೆ. ಗೃಹಲಕ್ಷ್ಮಿ ಯೋಜನೆಯಡಿ 1,24,12,543 ಅರ್ಹ ಫಲಾನುಭವಿಗಳಿಗೆ ಈವರೆಗೂ ಸುಮಾರು 57,300 ಕೋಟಿ ರೂ.ಗಳ ಆರ್ಥಿಕ ಸಹಾಯವನ್ನು ಪಾವತಿ ಮಾಡಲಾಗಿದೆ. ಈ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಮರಣ ಹೊಂದಿರುವವರ ಮಾಹಿತಿಗಳು ಕಾಲಕಾಲಕ್ಕೆ ಪರಿಶೀಲನೆ ನಡೆಸಬೇಕು. ಮರಣ ಹೊಂದಿರುವ ಫಲಾನುಭವಿಗಳಗೆ ಧನಸಹಾಯ ಪಾವತಿಯಾಗುವದನ್ನು ತಪ್ಪಿಸಬೇಕಿದೆ. ನಿವೃತ್ತ ಸರ್ಕಾರಿ ನೌಕರರು ಪಿಂಚಣಿ ಪಡೆಯಲು ಪ್ರತಿ ವರ್ಷ ಬ್ಯಾಂಕ್‌‌ಗಳಿಗೆ ತಮ್ಮ ಜೀವಿತ ಪ್ರಮಾಣ ಸಲ್ಲಿಸುವುದು ಹೇಗೆ ಕಡ್ಡಾಯ ಮಾಡಿದ್ದಾರೆ. ಅದೇ ಮಾದರಿಯಲ್ಲಿ, ಗೃಹಲಕ್ಷ್ಮಿ ಯೋಜನೆಯಡಿಯ ಅರ್ಹ ಫಲಾನುಭವಿಗಳಿಗೆ ಜೀವಿತ ಪ್ರಮಾಣ ಸಲ್ಲಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ: ಬಸ್ ಫ್ರೀ ನೀಡಿ ದೊಡ್ಡ ಸಮಸ್ಯೆಯಾಗಿದೆ: ಬಿಜೆಪಿ ನಾಯಕರ ಮುಂದೆಯೇ ಗ್ಯಾರಂಟಿ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್​​​​ ಶಾಸಕ ದೇಶಪಾಂಡೆ

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಮರಣದ ನಂತರವೂ ಹಣ ಹೋಗುತ್ತಿದೆ: ಹೆಚ್.ಎಂ. ರೇವಣ್ಣ

ರಾಯಚೂರು ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಗ್ಯಾರಂಟಿ ಮೇಳದಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಹೇಳಿದ್ದಾರೆ. ಸರ್ಕಾರದ ಬೊಕ್ಕಸದಿಂದ ಕೋಟ್ಯಂತರ ರೂಪಾಯಿ ಮೃತಪಟ್ಟ ಫಲಾನುಭವಿಗಳ ಖಾತೆಗೆ ಸಂದಾಯವಾಗುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಒಟ್ಟು 1,44,056 ಮಹಿಳಾ ಫಲಾನುಭವಿಗಳು ಈಗಾಗಲೇ ನಿಧನರಾಗಿದ್ದಾರೆ. ಮೃತಪಟ್ಟವರ ಪೈಕಿ 68,776 ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಅವರು ಮರಣ ಹೊಂದಿದ ನಂತರವೂ ಹಣ ಜಮೆಯಾಗಿದೆ.ಮೃತಪಟ್ಟವರ ಖಾತೆಗೆ ಒಟ್ಟು ₹79,75,66,000 (ಸುಮಾರು 80 ಕೋಟಿ ರೂ.) ಜಮೆಯಾಗಿದೆ. ವರ ಹೆಸರಿನಲ್ಲಿ ಒಟ್ಟು 3,98,783 ಬಾರಿ ಕಂತಿನ ಹಣ (ತಲಾ ₹2,000) ಬಿಡುಗಡೆಯಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಸ್ ಫ್ರೀ ನೀಡಿ ದೊಡ್ಡ ಸಮಸ್ಯೆಯಾಗಿದೆ: ಬಿಜೆಪಿ ನಾಯಕರ ಮುಂದೆಯೇ ಗ್ಯಾರಂಟಿ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್​​​​ ಶಾಸಕ ದೇಶಪಾಂಡೆ – Kannada News | Dandeli Speech: RV Deshpande Hails BJP Minister, Critiques Congress ‘Shakti’ Guarantee

ಆರ್.ವಿ. ದೇಶಪಾಂಡೆ

ಕಾರವಾರ, ಫೆ.7: ಉತ್ತರ ಕನ್ನಡದ ದಾಂಡೇಲಿಯಲ್ಲಿ ನಡೆದ ರೈಲ್ವೆ ಇಲಾಖೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಬಿಜೆಪಿ ನಾಯಕರನ್ನ ಹೊಗಳಿ ಗ್ಯಾರಂಟಿಗಳ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಇದೀಗ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಸ್ವಪಕ್ಷದ ‘ಶಕ್ತಿ’ ಯೋಜನೆ ಬಗ್ಗೆ ಅವರು ಮಾಡಿರುವ ವ್ಯಂಗ್ಯ ಮತ್ತು ಬಿಜೆಪಿ ಸಚಿವರ ಬಗ್ಗೆ ತೋರಿದ ಪ್ರೀತಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಕಾರ್ಯವೈಖರಿಯನ್ನು ದೇಶಪಾಂಡೆ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. “ಸೋಮಣ್ಣ ಅವರು ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಶ್ರಮದಿಂದಲೇ ಇಂದು ದಾಂಡೇಲಿ-ಅಳ್ನಾವರ ರೈಲು ಸಂಚಾರ ಮತ್ತೆ ಶುರುವಾಗಿದೆ,” ಎಂದಿದ್ದಾರೆ.

ಪಕ್ಷ ಬೇರೆಯಾಗಿದ್ದರೂ ಸತ್ಯ ಹೇಳಲು ನಾನು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ತಮ್ಮ ಪಕ್ಷ ತಂದಿರುವ ಗ್ಯಾರಂಟಿಗಳನ್ನು ಟೀಕಿಸಿದ್ದಾರೆ. ಸಿದ್ದರಾಮಯ್ಯ ಮಹಿಳೆಯರಿಗೆ ಬಸ್ ಫ್ರೀ ಮಾಡಿದ್ದಾರೆ, ಈಗ ಯಾವುದೇ ಬಸ್ ನೋಡಿದರೂ ಫುಲ್ ಇರುತ್ತವೆ. ಗಂಡಸರು ಮತ್ತು ಮಕ್ಕಳಿಗೆ ಬಸ್ ಹತ್ತಲು ಜಾಗವೇ ಇಲ್ಲದಂತಾಗಿದೆ. ಎಂದು ಹೇಳಿದ್ದಾರೆ. ಬಸ್‌ನಲ್ಲಿ ಅಪ್ಪಿತಪ್ಪಿ ಮಹಿಳೆಯರಿಗೆ ಕೈ ತಗುಲಿದರೆ ಸಾಕು, ಅಲ್ಲಿಗೆ ಹೆಣವೇ ಬಿದ್ದಂತೆ! ಗಂಡಸರು ಆ ಕಡೆ ಈ ಕಡೆ ನೋಡಿಕೊಂಡು ಬಹಳ ಎಚ್ಚರಿಕೆಯಿಂದ ಓಡಾಡಬೇಕಾದ ಪರಿಸ್ಥಿತಿ ಇದೆ ಎಂದು ತಮಾಷೆಯಾಗಿ ಹೇಳಿದರು.

ಇದನ್ನೂ ಓದಿ: ಅಬಕಾರಿ ಹಗರಣದ ಆರೋಪದ ನಡುವೆಯು ಆರ್.ಬಿ. ತಿಮ್ಮಾಪುರಗೆ ಸಿಎಂ ಭಾಗ್ಯ?: ‘ಕೊರವಂಜಿ’ ಭವಿಷ್ಯಕ್ಕೆ ಸಚಿವ ಫುಲ್​​​ ಖುಷ್

ಬಸ್ಸುಗಳ ಮೇಲಿನ ಒತ್ತಡ ಕಡಿಮೆ ಮಾಡಲು ಅಳ್ನಾವರದಿಂದ ಬೆಳಗಾವಿ ಮತ್ತು ಹುಬ್ಬಳ್ಳಿಗೆ ರೈಲು ಸಂಪರ್ಕ ಕಲ್ಪಿಸಬೇಕು. ರೈಲು ಕನೆಕ್ಟಿವಿಟಿ ಹೆಚ್ಚಾದರೆ ಬಸ್ಸುಗಳಲ್ಲಿನ ಈ ‘ರಶ್’ ಕಡಿಮೆಯಾಗುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ. ಆರ್.ವಿ. ದೇಶಪಾಂಡೆ ಅವರು ಕಾಂಗ್ರೆಸ್‌ನ ಅತ್ಯಂತ ಹಿರಿಯ ನಾಯಕರಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ಸರ್ಕಾರದ ಕೆಲವು ನಿರ್ಧಾರಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತಿದೆ. ವಿಶೇಷವಾಗಿ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗುತ್ತಿದೆ ಎಂಬ ಆತಂಕವನ್ನು ಅವರು ಈ ಹಿಂದೆಯೂ ಪರೋಕ್ಷವಾಗಿ ವ್ಯಕ್ತಪಡಿಸಿದ್ದರು. ಈಗ ನೇರವಾಗಿ ಹಾಸ್ಯದ ರೂಪದಲ್ಲಿ ಶಕ್ತಿ ಯೋಜನೆಯ ಅಡ್ಡಪರಿಣಾಮಗಳ ಬಗ್ಗೆ ಮಾತನಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version