ಒಂದು ವರ್ಷದಲ್ಲಿ 13 ಸಿನಿಮಾ: ಹಳೆಯ ದಿನಗಳ ನೆನೆದ ಶ್ರುತಿ

ನಟಿ ಶ್ರುತಿ (Shruthi) ಕನ್ನಡ ಚಿತ್ರರಂಗದ ಹಿರಿಯ ನಟಿ. ಹಾಸ್ಯ, ಗಂಭೀರ, ಎಮೋಷನಲ್, ಗ್ರಾಮೀಣ, ಪೌರಾಣಿಕ, ಜನಪದ, ಕಲಾತ್ಮಕ ಸಿನಿಮಾ ಹೀಗೆ ಹಲವು ರೀತಿಯ ಸಿನಿಮಾಗಳು, ಪಾತ್ರಗಳಲ್ಲಿ ನಟಿಸಿ ಎಲ್ಲದರಲ್ಲೂ ಸೈ ಎನಿಸಿಕೊಂಡಿದ್ದಾರೆ. ಇದೀಗ ಶ್ರುತಿ ಅವರ 175ನೇ ಸಿನಿಮಾ ‘ಮದರ್’ ಸೆಟ್ಟೇರಿದೆ. ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನೆರವೇರಿದ್ದು, ನಟಿ ಶ್ರುತಿ ಅವರು ಮುಹೂರ್ತದ ಸಂದರ್ಭದಲ್ಲಿ ಮಾಧ್ಯಮದವರೊಟ್ಟಿಗೆ ಮಾತನಾಡುತ್ತಾ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

Viral: ಆಟೋ ಹಿಂಬದಿ ಬರೆದ ಸಾಲಿನಲ್ಲಿ ತಂದೆ ತಾಯಿ ಮಹತ್ವ ಸಾರಿದ ಆಟೋ ಡ್ರೈವರ್ – Kannada News

ಆಟೋ ಹಿಂಬದಿ ಬರೆದ ಸಾಲುImage Credit source: Instagram

ಆಟೋ (auto) ಹಾಗೂ ಬೈಕ್ ಹಿಂಬದಿ ಮನಮುಟ್ಟುವ ಸಂದೇಶಗಳು, ಕೈ ಕೊಟ್ಟ ಪ್ರೇಯಸಿಯನ್ನು ಹಾಗೂ ತಂದೆ ತಾಯಿಯನ್ನು ನೆನಪಿಸುವಂತಹ ಸಾಲುಗಳು ಕಣ್ಣಿಗೆ ಕಾಣಿಸುತ್ತದೆ. ಇನ್ನು ಕೆಲ ಸಾಲುಗಳನ್ನು ಕಂಡಾಗ ತುಟಿಯಂಚಿನಲ್ಲಿ ನಗುವಿಗೂ ಕಾರಣವಾಗುತ್ತದೆ. ಇದೀಗ ಇಂತಹದ್ದೇ ಸಾಲೊಂದು ವೈರಲ್ ಆಗಿದ್ದು, ಇದು ಪ್ರಪಂಚದಲ್ಲಿ ತಂದೆ-ತಾಯಿಯ ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ ಎಂಬುದನ್ನು ನೆನಪಿಸುವಂತಿದೆ. ಹೌದು, ತನ್ನ ಜೀವನದ ಹೀರೋ ತಂದೆ ಹಾಗೂ ತಾಯಿಯೇ ದೇವರು ಎನ್ನುವ ಅರ್ಥ ನೀಡುವ ಸಾಲು ನೆಟ್ಟಿಗರ ಗಮನ ಸೆಳೆಯುತ್ತಿದೆ.

ಜೀವನ್ ಶೆಟ್ಟಿಗಾರ್ (Jeevan Shettigar) ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಆಟೋ ಹಿಂಬದಿ ಬರೆಯಲಾದ ಸಾಲುಗಳನ್ನು ಹಂಚಿಕೊಂಡಿದ್ದಾರೆ. ಆಟೋದಲ್ಲಿ, ಎಷ್ಟೇ ಸಿನಿಮಾ ನೋಡಿದರು ತಂದೆ ತರ ಹೀರೋ ಸಿಗಲ್ಲ ಎಷ್ಟೇ ದೇವಸ್ಥಾನ ಸುತ್ತಿದರು ತಾಯಿ ತರ ದೇವರು ಸಿಗಲ್ಲ ಎಂದು ಬರೆದಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಆಟೋ ಬಾಡಿಗೆ 150ರೂ., ಖಾತೆಗೆ ಬಂದಿದ್ದು 15 ಸಾವಿರ; ಪ್ರಯಾಣಿಕನ ಹಣವನ್ನು ಮರಳಿಸಿ ಮಾದರಿಯಾದ ಚಾಲಕ

ಈ ವಿಡಿಯೋ ಹದಿನೇಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಿಜವಾದ ಸಾಲುಗಳು ಎಂದಿದ್ದಾರೆ. ಮತ್ತೊಬ್ಬರು, ಹೃದಯಕ್ಕೆ ಹತ್ತಿರವಾಗುವ ಸಾಲುಗಳು ಎಂದು ಹೇಳಿದ್ದಾರೆ. ಇನ್ನೊಬ್ಬರು, ಎಲ್ಲರ ಅಪ್ಪ ಹೀರೋ ಆಗಿರಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಜ್ಜಿನಿಯಲ್ಲಿ ನೈಜ ದೃಶ್ಯಗಳನ್ನು ಸೆರೆ ಹಿಡಿದ ‘ಊರಬ್ಬ’ ಸಿನಿಮಾ; ಟ್ರೇಲರ್ ನೋಡಿ – Kannada News

ಸಸ್ಪೆನ್ಸ್ ಥ್ರಿಲ್ಲರ್ ಕಥೆ ಇರುವ ‘ಊರಬ್ಬ’ (Urabba) ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಮಾಗಡಿ ತಾಲೂಕಿನ ಸುಪ್ರಸಿದ್ದ ಉಜ್ಜಿನಿ ಚೌಡೇಶ್ವರಿ ಜಾತ್ರೆ ಮತ್ತು ಅದರ ಹಿನ್ನೆಲೆಯಲ್ಲಿ ನಡೆಯುವ ಕಥೆ ಇಟ್ಟುಕೊಂಡು ನಿರ್ದೇಶಕ ಲಕ್ಕಿ ಶಂಕರ್ ಅವರು ಈ ಸಿನಿಮಾ ಮಾಡಿದ್ದಾರೆ. ಒನ್ಸ್ ಮೋರ್ ಕೌರವ ಖ್ಯಾತಿಯ ನರೇಶ್ ಗೌಡ, ತನಿಷಾ ಕುಪ್ಪಂಡ (Tanisha Kuppanda), ಸಿದ್ದು ಮೂಲಿಮನಿ, ಪಾಯಲ್ ಚಂಗಪ್ಪ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕುಣಿಗಲ್ ಶಾಸಕ ರಂಗನಾಥ್ ಅವರು ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದರು.

ವಿಶೇಷ ಏನೆಂದರೆ ಉಜ್ಜನಿ ಜಾತ್ರೆಯ ನೈಜ ದೃಶ್ಯಗಳನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತದೆ. ಎಂ.ಡಿ. ಶ್ರೀಧರ್, ಹೆಚ್. ವಾಸು, ಎ.ವಿ. ಕೃಷ್ಣಕುಮಾರ್, ಬಾಹುಬಲಿ, ಈಶ್ವರ್ ಹೀಗೆ ಐವರು ಸೇರಿ ಎಂಟು ಕ್ಯಾಮೆರಾ ಬಳಸಿ ಜಾತ್ರೆ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ನಿರ್ದೇಶಕ ಲಕ್ಕಿ ಶಂಕರ್ ಅವರು ಮಾಹಿತಿ ನೀಡಿದರು.

‘ಊರಬ್ಬ’ ಸಿನಿಮಾದ ಟ್ರೇಲರ್:

‘ಇದು ನಾನು ಮಾಡಿದ್ದಲ್ಲ, ಆ ಚೌಡೇಶ್ವರಿಯೇ ಮಾಡಿಸಿದ್ದು. ಆಕೆಯ ಶಕ್ತಿಯನ್ನು ನಂಬಿ ಈ ಸಿನಿಮಾ ಮಾಡಿದ್ದೇನೆ. ಹಿಂದಿನಿಂದ ಕಂಟೆಂಟ್ ಬೇಸ್ ಸಿನಿಮಾಗಳನ್ನೇ ಮಾಡಿಕೊಂಡು ಬಂದಿದ್ದೇನೆ. ಏನಾದರೂ ಭಿನ್ನವಾಗಿ ಮಾಡೋಣ ಎಂದಾಗ ಈ ಕಾನ್ಸೆಪ್ಟ್ ಹೊಳೆಯಿತು. ಶೂಟಿಂಗ್ ಮಾಡುವಾಗ ಊರ ಜನರ ಸಹಕಾರ ತುಂಬಾ ಇತ್ತು. ಈ ಥರದ ಪ್ರಾಜೆಕ್ಟ್ ಮಾಡಲು ನಿರ್ಮಾಪಕ ನರೇಶ್ ಗೌಡ ಅವರು ಸಾಥ್ ನೀಡಿದರು’ ಎಂದು ಲಕ್ಕಿ ಶಂಕರ್ ಹೇಳಿದರು.

Urabba Kannada Movie Team

‘ಉಗಾದಿ ಹಬ್ಬದ 15 ದಿನಗಳ ನಂತರ ಈ ಜಾತ್ರೆ ಆರಂಭ ಆಗುತ್ತೆ. ಡೈಲಾಗ್ ಬರೆದ ವಾಸು, ಶ್ರೀಧರ್ ಅವರೇ ನಿಜವಾದ ಡೈರೆಕ್ಟರ್. ಅವರ ಸಲಹೆ ತಗೊಂಡು ಇಡೀ ಜಾತ್ರೆಯನ್ನು ಲೈವ್ ಆಗಿ ಶೂಟ್ ಮಾಡಿದ್ದೇವೆ. ಈ ಪ್ರಯತ್ನ ಭಾರತದಲ್ಲೇ ಮೊದಲು. ಸಾವಿರಾರು ವರ್ಷಗಳ ಹಿಂದೆ ನಡೆದ ಇತಿಹಾಸವನ್ನು ತಿಳಿದುಕೊಂಡು ಸಿನಿಮಾ ಮಾಡಿದ್ದೇನೆ. ಸೆನ್ಸಾರ್​ನಲ್ಲಿ ಸ್ವಲ್ಪ ತೊಂದರೆ ಆದರೂ, ಸರಿ ಮಾಡಿಕೊಂಡೆವು ’ ಎಂದಿದ್ದಾರೆ ಲಕ್ಕಿ ಶಂಕರ್.

ಇದನ್ನೂ ಓದಿ: ತನಿಷಾ ಕುಪ್ಪಂಡ ಜೊತೆ ಅಸಭ್ಯವಾಗಿ ವರ್ತಿಸಿದ ಫೋಟೋಗ್ರಾಫರ್; ನಟಿಯ ನೇರ ಕ್ಲಾಸ್

ನಿರ್ಮಾಪಕ ನರೇಶ್ ಗೌಡ ಕೂಡ ಈ ವೇಳೆ ಮಾತನಾಡಿದರು. ‘ಈ ಸಿನಿಮಾ ಆಗಲು ಮುಖ್ಯ ಕಾರಣ ಲಕ್ಕಿ ಶಂಕರ್. ನಾನು ಸಿನಿಮಾನೇ ಮಾಡಬಾರದು ಎಂದುಕೊಂಡಿದ್ದೆ, ಈಗ ಮಾಡಿದ್ದೇನೆ. ಮಂಗಳವಾರ ಚೌಡೇಶ್ವರಿ ದೇವಿಯ ವಾರ. ಚಿತ್ರದ ಎಲ್ಲ ಕೆಲಸಗಳು ಇದೇ ದಿನ ಆಗುತ್ತಿವೆ. ಈ ಸಿನಿಮಾದಲ್ಲಿ 30ರಿಂದ 40 ಜನ‌ ಕಲಾವಿದರು ನಟನೆ ಮಾಡಿದ್ದಾರೆ. ನಾನೂ ಒಂದು ಪಾತ್ರ ಮಾಡಿದ್ದೇನೆ. ಬಹಳ ಜನ ತಂತ್ರಜ್ಞರು ಕೈಜೋಡಿಸಿದ್ದಾರೆ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Chanakya Niti: ಚಾಣಕ್ಯರ ಈ ಮಾತುಗಳನ್ನು ಅನುಸರಿಸಿದವರು ಜೀವನದಲ್ಲಿ ಖಂಡಿತವಾಗಿಯೂ ಯಶಸ್ಸು ಕಾಣುತ್ತಾರಂತೆ – Kannada News

ಜೀವನದಲ್ಲಿ ಯಶಸ್ಸನ್ನು (success) ಸಾಧಿಸುವ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸಾಧಿಸುವುದೆಂದರೆ ಅಷ್ಟೇನೂ ಸುಲಭದ ಕೆಲಸವಲ್ಲ. ಯಶಸ್ಸಿನ ಪ್ರತಿಯೊಂದು ಮೆಟ್ಟಿಲು ಕಷ್ಟಕರವೆನಿಸುತ್ತದೆ. ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮ, ಆತ್ಮವಿಶ್ವಾಸ, ದೃಢ ನಿರ್ಧಾರ ಎಲ್ಲವೂ ಬೇಕಾಗುತ್ತದೆ.  ಇದರ ಜೊತೆಗೆ ಆಚಾರ್ಯ ಚಾಣಕ್ಯರ ಈ ಕೆಲವೊಂದು ಮಾತುಗಳನ್ನು ಪಾಲಿಸುವ ಮೂಲಕ ಯಶಸ್ಸಿನ ಹಾದಿಯಲ್ಲಿ ಸಾಗಬಹುದು. ಚಾಣಕ್ಯರು ಜೀವನದಲ್ಲಿ ಯಶಸ್ಸನ್ನು ಗಳಿಸಲು ಬೇಕಾಗಿರುವಂತಹ ಸಾಕಷ್ಟು ಸಲಹೆಗಳನ್ನು ನೀಡಿದ್ದಾರೆ. ಆ ಸಲಹೆಗಳನ್ನು ತಪ್ಪದೇ ಅನುಸರಿದರೆ ನೀವು ಸಹ ಜೀವನದಲ್ಲಿ ಸಕ್ಸಕ್‌ ಕಾಣ್ತೀರಿ.

ಚಾಣಕ್ಯರು ತಿಳಿಸಿರುವ ಯಶಸ್ಸಿನ ಮೂಲ ರಹಸ್ಯಗಳಿವು:

ಬಲವಾದ ಉದ್ದೇಶ ಅತ್ಯಗತ್ಯ: ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ, ಯಾವುದೇ ಕೆಲಸವನ್ನು ಸಾಧಿಸಲು ವ್ಯಕ್ತಿಯು ಬಲವಾದ ದೃಢಸಂಕಲ್ಪವನ್ನು ಹೊಂದಿರಬೇಕು ಎಂದು ಹೇಳುತ್ತಾರೆ. ಬಲವಾದ ಉದ್ದೇಶವನ್ನು ಹೊಂದಿರುವ ವ್ಯಕ್ತಿ ಬೇರೆ ವಿಚಾರಗಳ ಬಗ್ಗೆ ಯೋಚಿಸುವುದಿಲ್ಲ ಬದಲಾಗಿ ಆತನ ಗಮನವು ಗುರಿಯ ಕಡೆಗೆ ಇರುತ್ತದೆ. ಇದು ಆತನನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ.

ವೈಫಲ್ಯಕ್ಕೆ ಹೆದರಬೇಡಿ: ಅನೇಕ ಜನರು ವೈಫಲ್ಯಕ್ಕೆ ಹೆದರಿ ಬಿಟ್ಟುಬಿಡುತ್ತಾರೆ. ಆಚಾರ್ಯ ಚಾಣಕ್ಯರು  ವೈಫಲ್ಯಗಳಿಗೆ ಹೆದರಬಾರದು, ಮರಳಿ ಪ್ರಯತ್ನವನ್ನು ಮಾಡುತ್ತಲೇ ಇರಬೇಕು. ಈ ರೀತಿ ಮರಳಿ ಮರಳಿ ಪ್ರಯತ್ನವನ್ನು ಮಾಡಿದರೆ ಖಂಡಿತವಾಗಿ ಯಶಸ್ಸನ್ನು ಸಾಧಿಸಬಹುದು ಎನ್ನುತ್ತಾರೆ.

ರಹಸ್ಯಗಳನ್ನು ಸುರಕ್ಷಿತವಾಗಿಡಬೇಕು: ಚಾಣಕ್ಯ ನೀತಿಯ ಪ್ರಕಾರ, ಜೀವನದಲ್ಲಿ ಯಶಸ್ವಿಯಾಗಲು ಬಯಸುವವರು ತಮ್ಮ ಯೋಜನೆಗಳು ಮತ್ತು ವೈಯಕ್ತಿಕ ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ರಹಸ್ಯಗಳನ್ನು ಬಹಿರಂಗಪಡಿಸುವವರು ಹೆಚ್ಚಾಗಿ ತೊಂದರೆಗೆ ಸಿಲುಕುತ್ತಾರೆ. ಹಾಗಾಗಿ ನಿಮ್ಮ ಯಾವುದೇ ರಹಸ್ಯಗಳನ್ನು ಯಾರೊಂದಿಗೂ ಬಹಿರಂಗಪಡಿಸಬೇಡಿ.

ಸಮಯಕ್ಕೆ ಮಹತ್ವ ನೀಡಬೇಕು: ಸಮಯ ಅತ್ಯಂತ ಅಮೂಲ್ಯವಾದದದ್ದು ಎನ್ನುತ್ತಾರೆ ಆಚಾರ್ಯ ಚಾಣಕ್ಯ. ಸಮಯವನ್ನು ಗೌರವಿಸುವವರು, ಸಮಯವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳುವವರು ಮಾತ್ರ ಜೀವನದಲ್ಲಿ ಯಶಸ್ಸನ್ನು ಸಾಧಿಸುತ್ತಾರೆ. ನೀವು ಜೀವನದಲ್ಲಿ ಮುನ್ನಡೆಯಲು ಬಯಸಿದರೆ  ಸಮಯವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಿ, ಸಮಯವನ್ನು ಎಂದಿಗೂ ವ್ಯರ್ಥ ಮಾಡಬೇಡಿ.

ಇದನ್ನೂ ಓದಿ: ಬುದ್ಧಿವಂತ ಮಹಿಳೆ ಮಾತ್ರ ವಿಶೇಷ ಗುಣಗಳನ್ನು ಹೊಂದಿರುವುದಂತೆ

ಕೆಟ್ಟ ಸಹವಾಸದಿಂದ ದೂರವಿರಬೇಕು: ಒಬ್ಬ ವ್ಯಕ್ತಿಯ ಭವಿಷ್ಯವನ್ನು ನಿರ್ಧರಿಸುವಲ್ಲಿ ಅವನ ಸ್ನೇಹಿತರು ಮತ್ತು ಸುತ್ತಮುತ್ತಲಿನವರು ಪ್ರಮುಖ ಪಾತ್ರ ವಹಿಸುತ್ತಾರೆ. ಕೆಟ್ಟ ಸಹವಾಸವು ಅವನನ್ನು ತಪ್ಪು ದಾರಿಗೆ ಕೊಂಡೊಯ್ಯಬಹುದು ಅದೇ ಒಳ್ಳೆಯವರ  ಸಹವಾಸವು ವ್ಯಕ್ತಿಯ ಆಲೋಚನೆಗಳು ಮತ್ತು ಕಾರ್ಯಗಳನ್ನು ಸುಧಾರಿಸುತ್ತದೆ ಎಂದು ಚಾಣಕ್ಯ ಹೇಳುತ್ತಾರೆ.  ಆದ್ದರಿಂದ, ಸ್ನೇಹಿತರನ್ನು ಎಚ್ಚರಿಕೆಯಿಂದ ಆರಿಸಿಕೊಳ್ಳಬೇಕು, ಒಳ್ಳೆಯವರ ಸಹವಾಸವನ್ನೇ ಮಾಡಬೇಕು. ಇದು ನಿಮ್ಮ ಯಶಸ್ಸಿಗೆ ಅಡ್ಡಿಯಾಗುವುದಿಲ್ಲ.

ಆತ್ಮವಿಶ್ವಾಸ ಅತ್ಯಗತ್ಯ: ಆತ್ಮವಿಶ್ವಾಸವೇ ಯಶಸ್ಸಿಗೆ ಆಧಾರ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ನಿಮ್ಮಲ್ಲಿ ಆತ್ಮವಿಶ್ವಾಸವಿದ್ದರೆ, ಯಾವುದೇ ಅಡೆತಡೆಗಳು ನಿಮ್ಮನ್ನು ತಡೆಯಲು ಸಾಧ್ಯವಿಲ್ಲ. ನೀವು ನಿಮ್ಮ ನಿರ್ಧಾರಗಳಲ್ಲಿ ದೃಢವಾಗಿರಬೇಕು. ನೀವು ಇತರರ ಅಭಿಪ್ರಾಯಗಳಿಗೆ ಹೆದರಬಾರದು. ಇದು ನಿಮ್ಮನ್ನು ಒಳಗೆ ಬಲಶಾಲಿಯಾಗಿಸುತ್ತದೆ, ನಿಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ.

ಅವಕಾಶವನ್ನು ಕಳೆದುಕೊಳ್ಳಬೇಡಿ: ಚಾಣಕ್ಯ ನೀತಿಯ ಪ್ರಕಾರ, ಅವಕಾಶ ಸಿಕ್ಕಾಗಲೆಲ್ಲಾ ಪ್ರತಿಭೆಯನ್ನು ಪ್ರದರ್ಶಿಸುವ ಅವಕಾಶವನ್ನು ಯಾರೂ ಕಳೆದುಕೊಳ್ಳಬಾರದು. ಅವಕಾಶಗಳು ಸಿಕ್ಕಾಗ ಅದನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳದಿದ್ದರೆ ಮುಂದೊಂದು ದಿನ ವಿಷಾದ ಪಡಬೇಕಾಗುತ್ತದೆ. ಅದೇ ಸಿಕ್ಕಂತಹ ಪ್ರತಿಯೊಂದು ಅವಕಾಶಗಳನ್ನು ಬಳಸಿಕೊಳ್ಳುವವರು ಜೀವನದಲ್ಲಿ ಯಶಸ್ಸನ್ನು ಸಾಧಿಸುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಿಚಾ ಹೋರಾಟ ವ್ಯರ್ಥ; 3 ಎಸೆತಗಳಲ್ಲಿ 6 ರನ್ ಬಾರಿಸಿದೆ ಸೋತ ಟೀಂ ಇಂಡಿಯಾ – Kannada News

2026 ರ ಮಹಿಳಾ ಟಿ20 ವಿಶ್ವಕಪ್ ( Women’s T20 World Cup 2026) ಇನ್ನೇರಡು ದಿನಗಳಲ್ಲಿ ಆರಂಭವಾಗಲಿದೆ. ಅದರ ತಯಾರಿಯಾಗಿ ಎಲ್ಲಾ ತಂಡಗಳು ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ. ಅದರಂತೆ ಟೀಂ ಇಂಡಿಯಾ ಕೂಡ ತನ್ನ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ವಿರುದ್ಧ (England vs India Women Warm-up) ಗೆಲುವಿನಂಚಲ್ಲಿ ಎಡವಿ 5 ರನ್​ಗಳಿಂದ ಸೋಲನ್ನಪ್ಪಿತು. ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್ ಮಹಿಳಾ ತಂಡ 171 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೂಡ ಗೆಲುವಿಗಾಗಿ ಹೋರಾಟ ನೀಡಿತು. ಆದರೆ ಕೊನೆಯ ಓವರ್​ನಲ್ಲಿ 3 ಎಸೆತಗಳಲ್ಲಿ 6 ರನ್ ಬಾರಿಸಲು ವಿಫಲವಾಗಿ ಸೋಲಿಗೆ ಕೊರಳೊಡ್ಡಬೇಕಾಯಿತು.

171 ರನ್ ಟಾರ್ಗೆಟ್ ನೀಡಿದ ಇಂಗ್ಲೆಂಡ್

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 171 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ತಂಡದ ಪರ ಆರಂಭಿಕ ಆಟಗಾರ್ತಿ ಆಮಿ ಜೋನ್ಸ್ ಅದ್ಭುತ 64 ರನ್​ಗಳ ಇನ್ನಿಂಗ್ಸ್ ಆಡಿದರೆ, ನಾಯಕಿ ನ್ಯಾಟ್ ಸಿವರ್-ಬ್ರಂಟ್ 57 ರನ್​ಗಳ ಕಾಣಿಕೆ ನೀಡಿದರು. ಉಳಿದಂತೆ ಡ್ಯಾನಿ ಗಿಬ್ಸನ್ 30 ರನ್ ಗಳಿಸಿ ಅಜೇಯರಾಗಿ ಉಳಿದರು. ಭಾರತ ಪರ ಶ್ರೇಯಾಂಕ ಪಾಟೀಲ್ ಎರಡು ವಿಕೆಟ್ ಪಡೆದರೆ, ಶಫಾಲಿ ವರ್ಮಾ, ರೇಣುಕಾ ಸಿಂಗ್, ರಾಧಾ ಯಾದವ್ ಮತ್ತು ಶ್ರೀ ಚರಣಿ ತಲಾ ಒಂದು ವಿಕೆಟ್ ಪಡೆದರು.

ರಿಚಾ ಘೋಷ್ ಹೋರಾಟ ವ್ಯರ್ಥ

ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕಳಪೆ ಆರಂಭ ನೀಡಿತು. ಉಪನಾಯಕಿ ಸ್ಮೃತಿ ಮಂಧಾನ ಕೇವಲ 1 ರನ್‌ಗೆ ಔಟಾದರು. ಶಫಾಲಿ ವರ್ಮಾ ಕೂಡ 13 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಯಸ್ತಿಕಾ ಭಾಟಿಯಾ (15), ಹರ್ಮನ್‌ಪ್ರೀತ್ ಕೌರ್ (17), ಮತ್ತು ಭಾರತಿ ಫುಲ್ಮಾಲಿ (18) ಕೂಡ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಿಲ್ಲ. ಆದರೆ ಒಂದು ತುದಿಯಲ್ಲಿ ಹೋರಾಟದ ಇನ್ನಿಂಗ್ಸ್ ಕಟ್ಟಿದ ರಿಚಾ ಘೋಷ್ 36 ಎಸೆತಗಳಲ್ಲಿ 68 ರನ್‌ ಬಾರಿಸಿದರು. ಈ ಇನ್ನಿಂಗ್ಸ್‌ನಲ್ಲಿ 9 ಬೌಂಡರಿಗಳು ಮತ್ತು 2 ಸಿಕ್ಸರ್‌ಗಳು ಸೇರಿದ್ದವು.

Womens T20 World Cup 2026: ಮಹಿಳಾ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ

3 ಎಸೆತಗಳಲ್ಲಿ 6 ರನ್ ಬೇಕಿತ್ತು

ರಿಚಾ ಘೋಷ್ ತಂಡವನ್ನು ಗೆಲುವಿನ ಹತ್ತಿರಕ್ಕೆ ತಂದರಾದರೂ ಕೊನೆಯ ಓವರ್​ನ 4ನೇ ಎಸೆತದಲ್ಲಿ ಅವರ ವಿಕೆಟ್ ಪತನದೊಂದಿಗೆ ತಂಡಕ್ಕೆ ಸೋಲು ಖಚಿತವಾಯಿತು. ವಾಸ್ತವವಾಗಿ 20ನೇ ಓವರ್​ನ ಕೊನೆಯ 3 ಎಸೆತಗಳಲ್ಲಿ ತಂಡದ ಗೆಲುವಿಗೆ 6 ರನ್‌ಗಳು ಬೇಕಾಗಿದ್ದವು. ಆದರೆ 4ನೇ ಎಸೆತದಲ್ಲಿ ರಿಚಾ ಔಟಾದರೆ, ಆ ನಂತರದ ಎಸೆತದಲ್ಲಿ ರೇಣುಕಾ ಸಿಂಗ್ ಔಟಾಗುವ ಮೂಲಕ ತಂಡ ಆಲೌಟ್ ಆಯಿತು. ಹೀಗಾಗಿ ಹರ್ಮನ್ ಪಡೆ 5 ರನ್‌ಗಳಿಂದ ಪಂದ್ಯವನ್ನು ಸೋತಿತು. ಅಂತಿಮವಾಗಿ ಟೀಂ ಇಂಡಿಯಾ 19.5 ಓವರ್‌ಗಳಲ್ಲಿ 166 ರನ್‌ಗಳಿಗೆ ಆಲೌಟ್ ಆಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉತ್ತಮ ನಿದ್ರೆ ಪಡೆಯಲು ಬಯಸಿದರೆ ಬೆಡ್‌ರೂಮ್‌ನಲ್ಲಿ ಈ ಗಿಡಗಳನ್ನಿಡಿ – Kannada News

ಇಂದಿನ ವೇಗದ ಜೀವನಶೈಲಿಯಲ್ಲಿ ಒತ್ತಡ, ಕೆಲಸದ ಹೊರೆ ಮತ್ತು ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳ ಅತಿಯಾದ ಬಳಕೆಯಿಂದಾಗಿ  ಹೆಚ್ಚಿನವರು ನಿದ್ರಾಹಿನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳಪೆ ಗುಣಮಟ್ಟದ ನಿದ್ರೆಯು (sleep) ಹಲವು ಆರೋಗ್ಯ ಸಮಸ್ಯೆಗಲು ಕಾರಣವಾಗುತ್ತದೆ. ಹೀಗಿರುವಾಗ ನೀವು ಕೂಡ ನಿದ್ರಾಹೀನತೆ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ನೈಸರ್ಗಿಕವಾಗಿ ನಿದ್ರೆಯ ಗುಣಮಟ್ಟವನ್ನು ಸುಧಾರಿಸಲು ಈ ಒಂದಷ್ಟು ಗಿಡಗಳನ್ನು ಬೆಡ್‌ರೂಮ್‌ನಲ್ಲಿ ಇಡಿ. ಈ ಸಸ್ಯಗಳ ಸುವಾಸನೆ ಮತ್ತು ಅವು ಸುತ್ತಮುತ್ತಲಿನ ಪ್ರದೇಶಗಳಿಗೆ ನೀಡುವ ತಾಜಾತನವು ಮನಸ್ಸನ್ನು ಶಾಂತಗೊಳಿಸಲು ಮತ್ತು ದೇಹವನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸಲು ಸಹಕಾರಿಯಾದ ಆ ಗಿಡಗಳು ಯಾವುದೆಂದು ನೋಡೋಣ ಬನ್ನಿ.

ಉತ್ತಮ ನಿದ್ರೆಗಾಗಿ ಬೆಡ್‌ರೂಮ್‌ನಲ್ಲಿ ಈ ಗಿಡಗಳನ್ನಿಡಿ:

ಮಲ್ಲಿಗೆ ಗಿಡ: ಉತ್ತಮ ನಿದ್ರೆಯನ್ನು ಪಡೆಯಲು ಬಯಸಿದರೆ ನಿವು ಮಲ್ಲಿಗೆ ಗಿಡವನ್ನು ಬೆಡ್‌ರೂಮ್‌ನಲ್ಲಿ ಇಡಬಹುದು. ಮಲ್ಲಿಗೆಯ ಸುವಾಸನೆಯು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮಾತ್ರವಲ್ಲದೆ ಉತ್ತಮ ನಿದ್ರೆಯನ್ನು ಉತ್ತೇಜಿಸುತ್ತದೆ. ವಿಶೇಷವಾಗಿ ರಾತ್ರಿಯಲ್ಲಿ, ಮಲ್ಲಿಗೆಯ ಸುವಾಸನೆಯು ಕೋಣೆಯಾದ್ಯಂತ ಹರಡುತ್ತದೆ ಮತ್ತು ನೀವು ಬೇಗನೆ ನಿದ್ರಿಸಲು ಸಹಾಯ ಮಾಡುತ್ತದೆ. ಈ ಗಿಡವನ್ನು ಮಲಗುವ ಕೋಣೆಯ ಕಿಟಕಿಯ ಬಳಿ ಇಡುವುದು ಉತ್ತಮ.

ಲ್ಯಾವೆಂಡರ್ ಗಿಡ: ಲ್ಯಾವೆಂಡರ್‌ನ ಪರಿಮಳವು ದೇಹವನ್ನು ವಿಶ್ರಾಂತಿ ಮಾಡಲು ಮತ್ತು ಮನಸ್ಸನ್ನು ಶಾಂತಗೊಳಿಸಲು ಸಹಾಯ ಮಾಡುತ್ತದೆ. ಅಲ್ಲದೆ ಲ್ಯಾವೆಂಡರ್ ಅನ್ನು ನಿದ್ರೆಯ ಸಮಸ್ಯೆಗಳಿಗೆ ನೈಸರ್ಗಿಕ ಪರಿಹಾರವಾಗಿ ಶಿಫಾರಸು ಮಾಡಲಾಗುತ್ತದೆ. ನಿಮ್ಮ ಹಾಸಿಗೆಯ ಬಳಿ ಮೇಜಿನ ಮೇಲೆ ಸಣ್ಣ ಲ್ಯಾವೆಂಡರ್ ಸಸ್ಯವನ್ನು ಇರಿಸಿದರೆ, ಅದರ ಸುವಾಸನೆಯು ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ನೀವು ಚೆನ್ನಾಗಿ ನಿದ್ರೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:  ಸೊಳ್ಳೆಯ ಕಾಟದಿಂದ ಪಾರಾಗಲು ಮನೆಯಲ್ಲಿ ಗಿಡಗಳನ್ನು ನೆಡುವುದು ಉತ್ತಮ

ರೋಸ್ಮರಿ ಗಿಡ: ರೋಸ್ಮರಿ ವಿಶಿಷ್ಟ ಪರಿಮಳದಿಂದ ಒತ್ತಡವನ್ನು ಕಡಿಮೆ ಮಾಡಲು ಮತ್ತು ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುವ ಸಸ್ಯವಾಗಿದೆ. ಇದು ಮಲಗುವ ಕೋಣೆಯಲ್ಲಿ ಇಡಲು ಸೂಕ್ತವಾದ ಸಸ್ಯವಾಗಿದೆ.  ಇದಕ್ಕೆ ಹೆಚ್ಚಿನ ನಿರ್ವಹಣೆ ಅಗತ್ಯವಿಲ್ಲ. ರಾತ್ರಿಯಲ್ಲಿ ರೋಸ್ಮರಿಯ ಪರಿಮಳವು ನಿಮಗೆ ಶಾಂತಿಯುತವಾಗಿ ಮಲಗಲು ಸಹಾಯ ಮಾಡುತ್ತದೆ ಮಾತ್ರವಲ್ಲದೆ ಬೆಳಿಗ್ಗೆ ಉಲ್ಲಾಸದಿಂದ ಎಚ್ಚರಗೊಳ್ಳಲು ಸಹಾಯ ಮಾಡುತ್ತದೆ.

ಅಲೋ ವೆರಾ: ಅಲೋವೆರಾ ಗಿಡಗಳು ಚಿಕ್ಕದಾಗಿರುತ್ತವೆ ಮತ್ತು ನಿಮ್ಮ ಕೋಣೆಯ ಯಾವುದೇ ಮೂಲೆಯಲ್ಲಿ ಸುಲಭವಾಗಿ ಇಡಬಹುದು. ಅಲೋವೆರಾ ರಾತ್ರಿಯಲ್ಲಿ ಆಮ್ಲಜನಕವನ್ನು ಬಿಡುಗಡೆ ಮಾಡುವುದರಿಂದ ಅವುಗಳನ್ನು ಬೆಡ್‌ರೂಮ್‌ನಲ್ಲಿ ಇಡುವುದರಿಂದ ನೀವು ಚೆನ್ನಾಗಿ ನಿದ್ರೆ ಮಾಡಬಹುದು, ಇದು ನಿಮ್ಮ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:17 pm, Wed, 10 June 26

Source link

ನ್ಯೂಸ್ ಪೇಪರ್​​ಗಳಲ್ಲಿ ಕಟ್ಟಿಕೊಟ್ಟ ತಿಂಡಿ ತಿನ್ನುತ್ತೀರಾ? ನಿಮ್ಮ ಇಷ್ಟದ ಆಹಾರ ವಿಷವಾದೀತು ಎಚ್ಚರ! – Kannada News

ನವದೆಹಲಿ, ಜೂನ್ 10: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ಆಹಾರ ಪದಾರ್ಥಗಳನ್ನು ಅದರಲ್ಲೂ ವಿಶೇಷವಾಗಿ ಕರಿದ ತಿಂಡಿಗಳನ್ನು ದಿನಪತ್ರಿಕೆಗಳಲ್ಲಿ ಸುತ್ತಿ ಕೊಡುವುದರ ವಿರುದ್ಧ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿದೆ. ನಮ್ಮ ನೆಚ್ಚಿನ ಸ್ಟ್ರೀಟ್ ಫುಡ್‌ಗಳಾದ ಬೋಂಡಾ, ಬಜ್ಜಿ, ವಡೆ, ಪಕೋಡ, ಸಮೋಸಾಗಳನ್ನು ಪೇಪರ್​​ಗಳಲ್ಲಿ ಹಾಕಿಕೊಂಡು ತಿನ್ನುವುದರಿಂದ ಅದು ನಮ್ಮ ಆರೋಗ್ಯಕ್ಕೆ ಹೇಗೆ ಮಾರಕವಾಗಬಹುದು ಎಂಬ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಆ ಬಗ್ಗೆ ಪೂರ್ತಿ ಮಾಹಿತಿ ಇಲ್ಲಿದೆ.

ನಮ್ಮ ದೇಶದಲ್ಲಿ ಹೋಟೆಲ್‌ಗಳು, ಬೇಕರಿಗಳು ಮತ್ತು ಬೀದಿಬದಿಯ ವ್ಯಾಪಾರಿಗಳು ಕರಿದ ತಿಂಡಿಗಳಿಂದ ಎಣ್ಣೆಯನ್ನು ಹೀರಿಕೊಳ್ಳಲು ಅಥವಾ ಗ್ರಾಹಕರಿಗೆ ಪ್ಯಾಕ್ ಮಾಡಿಕೊಡಲು ದಿನಪತ್ರಿಕೆಗಳನ್ನು ಬಳಸುವುದು ಸಾಮಾನ್ಯ ಅಭ್ಯಾಸವಾಗಿದೆ. ಆದರೆ ಇದು ನೇರವಾಗಿ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತದೆ ಎಂದು FSSAI ಆತಂಕ ವ್ಯಕ್ತಪಡಿಸಿದೆ.

ಮುಂಬೈನ ಜನಪ್ರಿಯ ವಡಾ ಪಾವ್ ವ್ಯಾಪಾರಿಯೊಬ್ಬರ ವಿರುದ್ಧ ಇತ್ತೀಚೆಗೆ ಹೊರಡಿಸಲಾದ ಎಚ್ಚರಿಕೆಯ ಬೆನ್ನಲ್ಲೇ ಈ ಆದೇಶ ಬಂದಿದೆ. ದಿನಪತ್ರಿಕೆಯಲ್ಲಿ ಆಹಾರ ಪ್ಯಾಕ್ ಮಾಡುವ ಈ ಮೇಲ್ನೋಟಕ್ಕೆ ಹಾನಿಕಾರಕವಲ್ಲದ ಅಭ್ಯಾಸವು ಅನೇಕ ಜನರ ಆರೋಗ್ಯವನ್ನು ಹೇಗೆ ಅಪಾಯಕ್ಕೆ ದೂಡಬಹುದು ಎಂಬುದಕ್ಕೆ ಇದು ನೆನಪಿಸುವಂತಿದೆ. ತಜ್ಞರ ಪ್ರಕಾರ, ಆಹಾರವು ದಿನಪತ್ರಿಕೆಯ ಕಾಗದದೊಂದಿಗೆ ನೇರ ಸಂಪರ್ಕಕ್ಕೆ ಬಂದಾಗ, ಅದರಲ್ಲಿರುವ ಹಾನಿಕಾರಕ ರಾಸಾಯನಿಕಗಳು ಮತ್ತು ರೋಗಕಾರಕ ಸೂಕ್ಷ್ಮಜೀವಾಣುಗಳು ನೇರವಾಗಿ ಆ ಕಾಗದದಲ್ಲಿ ಸುತ್ತಲಾದ ಆಹಾರಕ್ಕೆ ವರ್ಗಾವಣೆಗೊಳ್ಳಬಹುದು.

ಇಂಕ್:

ದಿನಪತ್ರಿಕೆಗಳನ್ನು ಮುದ್ರಿಸಲು ಬಳಸುವ ಇಂಕ್ ಅಥವಾ ಶಾಯಿಯಲ್ಲಿ ಪ್ರಮುಖವಾಗಿ ಸೀಸ ಮತ್ತು ಕ್ಯಾಡ್ಮಿಯಮ್ ನಂತಹ ಭಾರಲೋಹಗಳು ಇರುತ್ತವೆ. ಬಿಸಿಬಿಸಿಯಾದ ಮತ್ತು ಎಣ್ಣೆಯುಕ್ತ ಆಹಾರವನ್ನು ಪತ್ರಿಕೆಯ ಮೇಲಿಟ್ಟಾಗ, ಆ ಬಿಸಿಗೆ ಪತ್ರಿಕೆಯ ಇಂಕ್ ಕರಗಿ ಆಹಾರ ಪದಾರ್ಥಕ್ಕೆ ಅಂಟಿಕೊಳ್ಳುತ್ತದೆ. ಇದು ನಮ್ಮ ಆರೋಗ್ಯಕ್ಕೆ ಅಪಾಯಕಾರಿ.

ಇದನ್ನೂ ಓದಿ: ಮೊಟ್ಟೆ ಸೇವನೆಯಿಂದ ಕ್ಯಾನ್ಸರ್​ ಬರಲ್ಲ: FSSAI ಸ್ಪಷ್ಟನೆ

ಬಯೋ-ಆಕ್ಟಿವ್ ಸಂಯುಕ್ತಗಳು:

ಶಾಯಿಯಲ್ಲಿ ಫಾರಂಹೈಡ್ ಹಾಗೂ ಫ್ತಾಲೇಟ್‌ಗಳಂತಹ ವಿಷಕಾರಿ ರಾಸಾಯನಿಕಗಳಿರುತ್ತವೆ. ಇವು ಆಹಾರದ ಮೂಲಕ ನಮ್ಮ ಹೊಟ್ಟೆ ಸೇರಿದಾಗ ದೇಹದ ಹಾರ್ಮೋನ್‌ಗಳ ಸಮತೋಲನವನ್ನು ಏರುಪೇರು ಮಾಡುತ್ತವೆ.

ವಿಷಕಾರಿ ಮರುಬಳಕೆಯ ಕಾಗದ:

ದಿನಪತ್ರಿಕೆಗಳನ್ನು ತಯಾರಿಸಲು ಬಳಸುವ ಕಾಗದ ಮತ್ತು ಬಣ್ಣಗಳು ಮರುಬಳಕೆಯ ಪ್ರಕ್ರಿಯೆಗೆ ಒಳಪಟ್ಟಿರುತ್ತವೆ. ಇದರಲ್ಲಿ ಡಯಾಕ್ಸಿನ್ ಮತ್ತು ಇತರ ಹಾನಿಕಾರಕ ರಾಸಾಯನಿಕಗಳು ಇರುತ್ತವೆ. ಇದು ಆರೋಗ್ಯವನ್ನು ಹದಗೆಡಿಸಬಹುದು.

ದಿನಪತ್ರಿಕೆಯಲ್ಲಿ ಸುತ್ತಿದ ಆಹಾರವನ್ನು ನಿಯಮಿತವಾಗಿ ಸೇವಿಸುವುದರಿಂದ ದೀರ್ಘಾವಧಿಯಲ್ಲಿ ಈ ಕೆಳಗಿನ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.

ಕ್ಯಾನ್ಸರ್ ಅಪಾಯ:

ಮುದ್ರಣ ಶಾಯಿಯಲ್ಲಿರುವ ರಾಸಾಯನಿಕಗಳು ಕಾರ್ಸಿನೋಜೆನಿಕ್ (ಕ್ಯಾನ್ಸರ್ ಕಾರಕ) ಗುಣಗಳನ್ನು ಹೊಂದಿದ್ದು, ಜೀರ್ಣಾಂಗವ್ಯೂಹ ಮತ್ತು ಶ್ವಾಸಕೋಶದ ಕ್ಯಾನ್ಸರ್‌ಗೆ ಕಾರಣವಾಗಬಹುದು.

ಅಂಗಾಂಗ ವೈಫಲ್ಯ:

ಶಾಯಿಯಲ್ಲಿರುವ ‘ಸೀಸ’ ನಮ್ಮ ರಕ್ತವನ್ನು ಸೇರಿದರೆ ಅದು ಮೂತ್ರಪಿಂಡಗಳು, ಲಿವರ್ ಮತ್ತು ಮೆದುಳಿನ ಕಾರ್ಯನಿರ್ವಹಣೆಗೆ ತೀವ್ರ ಹಾನಿ ಉಂಟುಮಾಡುತ್ತದೆ. ಮಕ್ಕಳಲ್ಲಿ ಇದು ಬುದ್ಧಿಮತ್ತೆಯ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ.

ಜೀರ್ಣಕ್ರಿಯೆಯ ಸಮಸ್ಯೆ:

ಈ ರಾಸಾಯನಿಕಗಳು ರೋಗನಿರೋಧಕ ಶಕ್ತಿಯನ್ನು ಕುಂಠಿತಗೊಳಿಸುವುದಲ್ಲದೆ, ಹೊಟ್ಟೆಯ ಅಲ್ಸರ್ ಹಾಗೂ ತೀವ್ರ ಗ್ಯಾಸ್ಟ್ರಿಕ್ ಸಮಸ್ಯೆಗೆ ಕಾರಣವಾಗುತ್ತವೆ.

ಸಾರ್ವಜನಿಕರು ಮತ್ತು ವ್ಯಾಪಾರಿಗಳಿಗೆ FSSAI ಸೂಚನೆಗಳೇನು?:

ಪರ್ಯಾಯ ವ್ಯವಸ್ಥೆ ಬಳಸಿ:

ಆಹಾರ ಪದಾರ್ಥಗಳನ್ನು ಪ್ಯಾಕ್ ಮಾಡಲು ಅಥವಾ ಎಣ್ಣೆ ಒಣಗಿಸಲು ದಿನಪತ್ರಿಕೆಗಳ ಬದಲಿಗೆ ಫುಡ್ ಗ್ರೇಡ್ ಪೇಪರ್, ಅಲ್ಯೂಮಿನಿಯಂ ಫಾಯಿಲ್ ಅಥವಾ ಬಾಳೆ ಎಲೆಗಳನ್ನು ಬಳಸಬೇಕು.

ಬಟ್ಟೆ ಅಥವಾ ಟಿಶ್ಯೂ ಬಳಸಿ:

ಮನೆಯಲ್ಲಿ ಕರಿದ ತಿಂಡಿಗಳ ಎಣ್ಣೆ ತೆಗೆಯಲು ಕಿಚನ್ ಟಿಶ್ಯೂ ಪೇಪರ್‌ಗಳನ್ನು ಬಳಸಿ, ಯಾವುದೇ ಕಾರಣಕ್ಕೂ ಹಳೆಯ ಪತ್ರಿಕೆಗಳನ್ನು ಬಳಸಬೇಡಿ.

ಜಾಗ್ರತೆ ವಹಿಸಿ:

ಗ್ರಾಹಕರು ಹೋಟೆಲ್ ಅಥವಾ ಬೀದಿಬದಿಯಲ್ಲಿ ದಿನಪತ್ರಿಕೆಯಲ್ಲಿ ಆಹಾರ ನೀಡುವುದನ್ನು ಕಂಡರೆ ಅದನ್ನು ನಿರಾಕರಿಸಬೇಕು. “ಆಹಾರವು ಎಷ್ಟು ಪೌಷ್ಟಿಕವಾಗಿದೆ ಮತ್ತು ರುಚಿಯಾಗಿದೆ ಎಂಬುದು ಎಷ್ಟು ಮುಖ್ಯವೋ, ಅದನ್ನು ಯಾವ ವಸ್ತುವಿನಲ್ಲಿಟ್ಟು ಗ್ರಾಹಕರಿಗೆ ನೀಡಲಾಗುತ್ತಿದೆ ಎಂಬುದೂ ಅಷ್ಟೇ ಮುಖ್ಯ. ದಿನಪತ್ರಿಕೆಯು ಓದಲು ಮಾತ್ರ, ಆಹಾರ ಪ್ಯಾಕ್ ಮಾಡಲು ಅಲ್ಲ ಎಂದು FSSAI ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಗರಗಳಲ್ಲಿ ದಿನದಿಂದ ದಿನಕ್ಕೆ ಸೆಕೆ ಹೆಚ್ಚಾಗಿ ಆರೋಗ್ಯ ಹದಗೆಡುತ್ತಿರುವುದಕ್ಕೆ ಕಾರಣವೇನು? – Kannada News

ಬೆಂಗಳೂರು ಒಂದು ಕಾಲದಲ್ಲಿ ತನ್ನ ತಂಪಾದ ವಾತಾವರಣದಿಂದಲೇ ಎಲ್ಲರನ್ನು ಸೆಳೆಯುತ್ತಿತ್ತು, ಆದರೆ ಕಳೆದ ಕೆಲ ವರ್ಷಗಳಿಂದ ಇಲ್ಲಿರುವವರು ಉಷ್ಣತೆಯ ವಾತಾವರಣದಿಂದ ಬಳಲುತ್ತಿದ್ದಾರೆ ಜೊತೆಗೆ ಸೆಕೆಯ ರಾತ್ರಿಗಳನ್ನು ಕಳೆಯುತ್ತಿದ್ದಾರೆ. ಅದರಲ್ಲಿಯೂ ಬೆಂಗಳೂರಿನಲ್ಲಿ ಈಗ ನಿರ್ಜಲೀಕರಣ, ಶಾಖದಿಂದ ಬಳಲಿಕೆ ಮತ್ತು ಹೀಟ್ ಸ್ಟ್ರೋಕ್ (Heat stroke) ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು ವೃದ್ಧರು, ಮಕ್ಕಳು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರಲ್ಲಿ ಇದು ಹೆಚ್ಚಾಗಿದೆ. ಹಾಗಾದರೆ ಬೆಂಗಳೂರು ಅಥವಾ ನಗರದ ಜೀವನಶೈಲಿಯಲ್ಲಿ ಈ ರೀತಿ ಬದಲಾವಣೆ ಕಂಡುಬಂದಿರುವುದಕ್ಕೆ ಕಾರಣವೇನು, ಈ ರೀತಿಯ ಸಮಸ್ಯೆ ತಡೆಗಟ್ಟಲು ಏನು ಮಾಡಬಹುದು ಎಂಬುದರ ಕುರಿತು ಬೆಂಗಳೂರು ಅಪೋಲೋ ಆಸ್ಪತ್ರೆಯ ಚರ್ಮರೋಗ ತಜ್ಞರಾಗಿರುವ ಡಾ. ಸುರೇಂದ್ರ ವಿಎಚ್‌ಹೆಚ್ (Dr. Surendra V H H) ಮಾಹಿತಿ ಹಂಚಿಕೊಂಡಿದ್ದಾರೆ.

ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು?

ಡಾ. ಸುರೇಂದ್ರ ಅವರು ಹೇಳುವ ಪ್ರಕಾರ ಈ ಬದಲಾವಣೆಯ ಹಿಂದಿರುವ ಪ್ರಮುಖ ಕಾರಣಗಳಲ್ಲಿ ಒಂದೆಂದರೆ ನಗರದ ಜೀವನಶೈಲಿಗಳು ವಿಕಾಸಗೊಂಡಿರುವ ರೀತಿ. ಹೊರಗಡೆ ದೀರ್ಘ ಅವಧಿಯ ಕೆಲಸ, ಹೆಚ್ಚಿನ ಟ್ರಾಫಿಕ್ ಒತ್ತಡ, ಡಿಹೈಡ್ರೇಷನ್, ಹೆಚ್ಚಿನ ಒತ್ತಡ ಮತ್ತು ಉಷ್ಣತೆ ಹೀರಿಕೊಳ್ಳುವ ಕಾಂಕ್ರೀಟ್ ಪರಿಸರಗಳಲ್ಲಿ ಹೆಚ್ಚಾಗಿ ವಾಸಮಾಡುವುದರಿಂದ ನಗರದ ನಿವಾಸಿಗಳಿಗೆ ಹೆಚ್ಚು ಸಂಕಷ್ಟ ಎದುರಾಗಿದೆ. ಅದರಲ್ಲಿಯೂ ಬಹಳಷ್ಟು ಜನ ಈ ರೀತಿ ಉಂಟಾಗುವ ಉಷ್ಣತೆಯ ಪರಿಣಾಮದ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಆಯಾಸ, ತಲೆ ಸುತ್ತುವುದು, ತಲೆನೋವು, ಅತಿಯಾಗಿ ಬೆವರುವುದು, ಸ್ನಾಯು ಸೆಳೆತ, ವಾಕರಿಕೆ ಮತ್ತು ಕಿರಿಕಿರಿಯನ್ನು ನಿರ್ಲಕ್ಷಿಸುತ್ತಾರೆ. ಆದರೆ ಈ ರೀತಿ ಆದಾಗ ಅದನ್ನು ಮುಂಚೆಯೇ ಗಮನಿಸಿ ಸೂಕ್ತ ಎಚ್ಚರಿಕೆ ವಹಿಸಿದಲ್ಲಿ ದೊಡ್ಡ ದೊಡ್ಡ ಅಪಾಯಗಳು ತಪ್ಪುತ್ತದೆ.

ಇನ್ನು, ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ರೋಗ, ಬೊಜ್ಜು ಅಥವಾ ಕಿಡ್ನಿ ಸಮಸ್ಯೆಗಳಿಂದ ಬಳಲುತ್ತಿರುವವರು ಹೆಚ್ಚು ಕಷ್ಟಪಡಬೇಕಾಗಬಹುದು. ಹೊರಗಡೆ ಹೆಚ್ಚು ಸಮಯ ಕೆಲಸ ಮಾಡುವವರು, ಡೆಲಿವರಿ ಮಾಡುವವರು, ಟ್ರಾಫಿಕ್ ಪೊಲೀಸ್, ಕ್ರೀಡಾಪಟುಗಳು ಮತ್ತು ದೀರ್ಘಕಾಲ ಟ್ರಾಫಿಕ್ ನಲ್ಲಿ ಕಳೆಯುವ ಸಂಚಾರಿಗಳಿಗೂ ಕೂಡ ಸಂಕಷ್ಟ ತಪ್ಪಿದ್ದಲ್ಲ.

ಇದನ್ನೂ ಓದಿ: ಹೈ ಕೊಲೆಸ್ಟ್ರಾಲ್ ಅಪಾಯ ಇಲ್ಲದಿದ್ದರೂ ಹೃದಯಾಘಾತವಾಗುವುದಕ್ಕೆ ಕಾರಣವೇನು? ತಡೆಗಟ್ಟಲು ಇಲ್ಲಿದೆ ಸಲಹೆ

ಸಮಸ್ಯೆ ತಡೆಗಟ್ಟಲು ಸುಲಭ ಮಾರ್ಗಗಳು?

ಈ ರೀತಿ ಸಮಸ್ಯೆಯನ್ನು ಆದಷ್ಟು ತಡೆಗಟ್ಟಲು ಸರಿಯಾಗಿ ನೀರು ಕುಡಿಯುವುದು, ಬಿರು ಬಿಸಿಲಿನಲ್ಲಿ ನೇರ ಸೂರ್ಯನ ತಾಪಕ್ಕೆ ಒಡ್ಡಿಕೊಳ್ಳದೇ ಇರುವುದು, ಸಡಿಲ ಮತ್ತು ಗಾಳಿಯಾಡುವ ಬಟ್ಟೆ ಧರಿಸುವುದು ಮತ್ತು ಹೊರಾಂಗಣ ಚಟುವಟಿಕೆಗಳನ್ನು ಆದಷ್ಟು ಕಡಿಮೆ ಮಾಡುವುದು ಹೆಚ್ಚಿನ ಪ್ರಮಾಣದಲ್ಲಿ ರಿಸ್ಕ್ ತಪ್ಪಿಸುತ್ತದೆ. ಬಿಸಿ ವಾತಾವರಣದಲ್ಲಿ ಹೆಚ್ಚಿನ ಕೆಫೀನ್ ಮತ್ತು ಮದ್ಯಸೇವನೆಯನ್ನು ಮಾಡುವುದು ಕೂಡ ನಿರ್ಜಲೀಕರಣಕ್ಕೆ ಕಾರಣವಾಗುವುದರಿಂದ ಅಂತಹ ಅಭ್ಯಾಸಗಳನ್ನು ತಪ್ಪಿಸುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೆಐಎಡಿಬಿಯಲ್ಲಿ ಇನ್ಮುಂದೆ ಬ್ರೋಕರ್ಸ್‌ಗೆ ನೋ ಎಂಟ್ರಿ: 100 ದಿನಗಳಲ್ಲಿ ಇಡೀ ಸಿಸ್ಟಮ್ ಡಿಜಿಟಲ್ ಮಾಡಲು ಸಚಿವ ಎಂ.ಬಿ.ಪಾಟೀಲ್ ಆದೇಶ – Kannada News

ಬೆಂಗಳೂರು, ಜೂ.10: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (KIADB) ಇನ್ನು ಮುಂದೆ ಜಮೀನು ಭೂಸ್ವಾಧೀನ ಮತ್ತು ನಿವೇಶನ ಮಂಜೂರಾತಿಯ ಪ್ರತಿಯೊಂದು ಪ್ರಕ್ರಿಯೆಯೂ ಸಂಪೂರ್ಣವಾಗಿ ಹೈಟೆಕ್ ಆಗಲಿದೆ. ಕೆಐಎಡಿಬಿ ವ್ಯಾಪ್ತಿಯ ಎಲ್ಲಾ ಸೇವೆಗಳನ್ನು ಮುಂದಿನ 100 ದಿನಗಳ ಒಳಗಾಗಿ ಸಂಪೂರ್ಣವಾಗಿ ಡಿಜಿಟಲೀಕರಣ (Digitization) ಗೊಳಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಗಡುವು ನೀಡಿದ್ದಾರೆ. ಖನಿಜ ಭವನದಲ್ಲಿ ಇಂದು (ಜೂ.10) ನಡೆದ ಕೈಗಾರಿಕಾ ಇಲಾಖೆಯ ಎರಡನೇ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಇ-ಗವರ್ನೆನ್ಸ್ (ಇ-ಆಡಳಿತ) ಇಲಾಖೆಯು ಹೊಂದಿರುವ ‘ಏಕೀಕೃತ ಭೂ ನಿರ್ವಹಣಾ ವ್ಯವಸ್ಥೆ’ಯ ಅಡಿಯಲ್ಲೇ ಈಗ ರಾಜ್ಯದ ಹಳೆಯ ಮತ್ತು ಹೊಸ ಕೈಗಾರಿಕಾ ಪ್ರದೇಶಗಳಲ್ಲಿನ ನಿವೇಶನಗಳ ಪ್ರತಿಯೊಂದು ವಿವರವನ್ನೂ ಡಿಜಿಟಲೀಕರಣ ಮಾಡಲಾಗುವುದು. ಈ ಹೊಸ ತಂತ್ರಜ್ಞಾನ ವ್ಯವಸ್ಥೆಯಲ್ಲಿ ಪ್ರತಿ ನಿವೇಶನಕ್ಕೆ ಸಂಬಂಧಿಸಿದಂತೆ ಒಟ್ಟು 77 ಕಾಲಂಗಳಲ್ಲಿ ಇಂಚಿಂಚೂ ಮಾಹಿತಿಯನ್ನು ಸಂಗ್ರಹಿಸಿಡಲಾಗುತ್ತದೆ.

ಈ ಮಹತ್ವದ ಸುಧಾರಣೆಯಿಂದಾಗಿ ಕೈಗಾರಿಕಾ ನಿವೇಶನದ ಮಂಜೂರಾತಿ, ಅದರ ಸದ್ಯದ ಸ್ಥಿತಿಗತಿ, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆ, ಮಾಡಲಾಗಿರುವ ಒಟ್ಟು ಹೂಡಿಕೆ, ಸೃಷ್ಟಿಯಾಗಿರುವ ಉದ್ಯೋಗಾವಕಾಶಗಳು, ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಗೆ ಕೊಟ್ಟಿರುವ ಪರಿಹಾರದ ಮೊತ್ತ, ಕೋರ್ಟ್ ಕೇಸುಗಳ ಇತಿಹಾಸ ಹಾಗೂ ಹೂಡಿಕೆದಾರರಿಗೆ ನೀಡಿರುವ ಕಾಲಾವಕಾಶದಂತಹ ಎಲ್ಲಾ ಪ್ರಮುಖ ವಿವರಗಳು ಇನ್ನು ಮುಂದೆ ಒಂದೇ ಕ್ಲಿಕ್‌ನಲ್ಲಿ ಕ್ಷಣಾರ್ಧದಲ್ಲಿ ಲಭ್ಯವಾಗಲಿವೆ. ಈ ಹಿಂದೆ ಕೆಐಎಡಿಬಿಯಲ್ಲಿ ಸರಿಯಾದ ಡಿಜಿಟಲ್ ದಾಖಲೆಗಳು ಇಲ್ಲದ ಕಾರಣ, ಒಂದೇ ಜಮೀನಿಗೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎರಡೆರಡು ಬಾರಿ ಪರಿಹಾರದ ಹಣ ನೀಡಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟು ಮಾಡಿದ ಹಲವು ಪ್ರಕರಣಗಳು ಕಂಡುಬಂದಿದೆ. ಆದರೆ, ಹೊಸ ವ್ಯವಸ್ಥೆಯಿಂದ ಸಂಪೂರ್ಣ ಪಾರದರ್ಶಕತೆ ಬರಲಿದ್ದು, ಇಂತಹ ಅವ್ಯವಹಾರಗಳಿಗೆ ಶಾಶ್ವತ ಬ್ರೇಕ್ ಬೀಳಲಿದೆ. ಜೊತೆಗೆ, ಹೂಡಿಕೆದಾರರು ತಾವು ಇದ್ದ ಜಾಗದಿಂದಲೇ ತಮಗೆ ಬೇಕಾದ ಅಧಿಕೃತ ಮಾಹಿತಿ ಪಡೆಯಬಹುದಾಗಿದ್ದು, ಕೆಐಎಡಿಬಿ ಕಚೇರಿಗಳಲ್ಲಿ ಮಧ್ಯವರ್ತಿಗಳ (ಬ್ರೋಕರ್ಸ್) ಹಾವಳಿ ಸಂಪೂರ್ಣವಾಗಿ ನಿಲ್ಲಲಿದೆ.

ಇದನ್ನೂ ಓದಿ: ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: 1,280 ವೈದ್ಯರು, ನರ್ಸ್‌ಗಳ ಭರ್ತಿಗೆ ಯು.ಟಿ. ಖಾದರ್ ಆದೇಶ

ರಾಜ್ಯಾದ್ಯಂತ ಸದ್ಯ 224 ಕೈಗಾರಿಕಾ ಪ್ರದೇಶಗಳಿದ್ದು, ಇಲ್ಲಿರುವ ಸಾವಿರಾರು ನಿವೇಶನಗಳ ಹಂಚಿಕೆ ಮಾಹಿತಿಯನ್ನು ಕೇವಲ ಒಂದು ತಿಂಗಳೊಳಗೆ ಸ್ಕ್ಯಾನ್ ಮಾಡಿ ಮುಗಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ. ಈ ದತ್ತಾಂಶವನ್ನು ಬಳಸಿಕೊಂಡು ಕೆಐಎಡಿಬಿಗೆ ಒಪ್ಪುವ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಿ, ಬಳಿಕ ಅದನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ‘ಇ-ಸ್ವತ್ತು’ ತಂತ್ರಾಂಶದ ಜತೆ ಜೋಡಣೆ ಮಾಡಲಾಗುತ್ತದೆ. ಇದರಿಂದ ಕೈಗಾರಿಕೆಗಳಿಗೆ ಆನ್‌ಲೈನ್ ಮೂಲಕವೇ ಸುಲಭವಾಗಿ ‘ಇ-ಖಾತಾ’ ನೀಡಲು ಅನುಕೂಲವಾಗುತ್ತದೆ. ಈ ಉನ್ನತ ಮಟ್ಟದ ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಖುಷ್ಬೂ ಗೋಯಲ್, ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ ಹಾಗೂ ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, (ಜೂನ್ 10): ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗುತ್ತಿದ್ದಂತೆಯೇ ಕೆಲ ದಿಟ್ಟ ಕ್ರಮಕ್ಕೆ ಮುಂದಾಗಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿರುವ ಪ್ರಿಯಾಂಕ್ ಖರ್ಗೆ, ಡ್ರಗ್ಸ್ ಹಾಗೂ ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಎಫ್​​ಐಆರ್ ಹಾಗೂ ಚಾರ್ಚ್ ಶೀಟ್ ಸಲ್ಲಿಸಲು ವಿಳಂಬದ ಬಗ್ಗೆ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಲಾಖೆಗೆ ಅಗೌರವ ತರುವಂತ ಕೆಲಸ ಯಾವ ಸಿಬ್ಬಂದಿಯಿಂದ ಆಗಬಾರದು‌. ನಾನು ಹೇಳಿದ ಸಲಹೆ ಸೂಚನೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಹೇಳಿದ್ದಾರೆ.

Source link

Exit mobile version