Headlines

ಕಾರು ಗುದ್ದಿ ಪರಾರಿ: ಹಿರಿಯ ನಟನ ಬಂಧನ – Kannada News | Malayalam Actor Maniyanpilla Raju arrested in Hit and Run case

ಹಿರಿಯ ಮಲಯಾಳಂ ನಟ ಮತ್ತು ನಿರ್ಮಾಪಕರೂ (Producer) ಆಗಿ ಗುರುತಿಸಿಕೊಂಡಿರುವ ಮಣಿಯನ್‌ಪಿಳ್ಳ ರಾಜು ಅವರ ವಿರುದ್ಧ ಹಿಟ್ ಆಂಡ್ ರನ್ ಪ್ರಕರಣ ದಾಖಲಾಗಿದೆ. ಮಣಿಯನ್‌ಪಿಳ್ಳ ರಾಜು ಓಡಿಸುತ್ತಿದ್ದ ಕಾರು ತಿರುವನಂತಪುರದಲ್ಲಿ ಬೈಕೊಂದಕ್ಕೆ ಢಿಕ್ಕಿ ಆಗಿದ್ದು, ಬೈಕಿನ ಮೇಲೆ ಸವಾರರಾಗಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯು ಫೆಬ್ರವರಿ 5ರಂದು ಗುರುವಾರ ರಾತ್ರಿ ತಿರುವನಂತಪುರದಲ್ಲಿ ನಡೆದಿದೆ. ಫೆಬ್ರವರಿ 5ರಂದು ತಿರುವನಂತಪುರದ ವಝುತಕಾಡ್‌ನಲ್ಲಿರುವ ‘ತ್ರಿವೇಂಡ್ರಮ್ ಕ್ಲಬ್’ ಬಳಿ ರಾತ್ರಿ ಸುಮಾರು 9:30ಕ್ಕೆ ಈ ಅಪಘಾತ ಸಂಭವಿಸಿದೆ. ಮಣಿಯನ್‌ಪಿಳ್ಳ ರಾಜು ಅವರು…

Read More

Rakkasapuradhol First Half Review: ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಫಸ್ಟ್ ಹಾಫ್ ಹೇಗಿದೆ? – Kannada News | Rakkasapuradhol Kannada movie first half review ft Raj B Shetty

ರಾಜ್ ಬಿ. ಶೆಟ್ಟಿ (Raj B Shetty) ಅವರ ಸಿನಿಮಾ ಎಂದರೆ ಖಂಡಿತವಾಗಿಯೂ ಏನಾದರೂ ವಿಶೇಷತೆ ಇರುತ್ತದೆ ಎಂಬ ಭರವಸೆ ಅಭಿಮಾನಿಗಳಿಗೆ ಇದೆ. ಅವರು ನಟಿಸಿದ ‘ರಕ್ಕಸಪುರದೋಳ್’ ಸಿನಿಮಾ ಇಂದು (ಫೆಬ್ರವರಿ 6) ಬಿಡುಗಡೆ ಆಗಿದೆ. ರವಿ ಸಾರಂಗ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರವಿ ವರ್ಮಾ ಅವರು ನಿರ್ಮಾಣ ಮಾಡಿದ್ದಾರೆ. ಟ್ರೇಲರ್ ಮೂಲಕ ‘ರಕ್ಕಸಪುರದೋಳ್’ (Rakkasapuradhol) ಸಿನಿಮಾ ಬಹಳ ನಿರೀಕ್ಷೆ ಮೂಡಿಸಿತ್ತು. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ರಾಜ್ ಬಿ. ಶೆಟ್ಟಿ ಅವರು ಕಾಣಿಸಿಕೊಂಡಿದ್ದಾರೆ. ಒಂದು…

Read More

Pariksha Pe Charcha 2026: ಕನಸು ಕಾಣದಿರುವುದು ಒಂದು ಕ್ರೈಂ, ಕನಸ್ಸಿನ ಬಗ್ಗೆ ಮಾತನಾಡುವುದಲ್ಲ, ಸಫಲತೆಯ ಹಾದಿಯಲ್ಲಿ ಸಾಗಬೇಕು: ಮೋದಿ – Kannada News | PM Modi’s Pariksha Pe Charcha 2026: Dream Big, Achieve Success and Manage Time

ನವದೆಹಲಿ, ಫೆಬ್ರವರಿ 06: ಕನಸು ಕಾಣದಿರುವುದು ಅಪರಾಧ, ಕನಸ್ಸನ್ನು ಪ್ರತಿಯೊಬ್ಬರೂ ಕಾಣಲೇಬೇಕು, ಕೇವಲ ಕನಸ್ಸಿನ ಬಗ್ಗೆ ಮಾತನಾಡುತ್ತಾ ಇರುವುದಲ್ಲ, ಸಫಲತೆಯ ಹಾದಿ ಹಿಡಿದು ಸಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ಪರೀಕ್ಷಾ ಪೆ ಚರ್ಚಾ(Pariksha Pe Charcha) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ನೀವು ಸಮರ್ಥರಾಗಿ ಯಶಸ್ಸು ನಿಮ್ಮನ್ನು ಹಿಂಬಾಲಿಸುತ್ತದೆ ಎಂದರು. ಒಬ್ಬ ವಿದ್ಯಾರ್ಥಿ ಗಗನಯಾತ್ರಿಯಾಗಲು ಬಯಸಿದರೆ, ಸಂಪೂರ್ಣವಾಗಿ ಅಧ್ಯಯನ ಮಾಡಬೇಕು, ಜ್ಞಾನವನ್ನು ವಿಸ್ತರಿಸುವುದನ್ನು ಮುಂದುವರಿಸಬೇಕು. ಕೇವಲ ನನ್ನ ಕನಸು…

Read More

ಮಾದಪ್ಪನ ಭಕ್ತರು ಮೂತ್ರ ವಿಸರ್ಜನೆ, ಬಹಿರ್ದೆಸೆಗೆ ಕಾಡಿನ ಒಳ ಹೋಗುವಂತಿಲ್ಲ! ಅರಣ್ಯ ಸಿಬ್ಬಂದಿ ಕಟ್ಟಪ್ಪಣೆ, ಕಾರಣ ಇಲ್ಲಿದೆ – Kannada News | No Entry to Forest for Devotees at Male Mahadeshwara Betta: Safety Alert After Leopard Attack Ahead of Shivaratri Jatra

ಮಲೆ ಮಹದೇಶ್ವರಬೆಟ್ಟ (ಸಂಗ್ರಹ ಚಿತ್ರ)Image Credit source: tv9 ಚಾಮರಾಜನಗರ, ಫೆಬ್ರವರಿ 6: ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟಕ್ಕೆ (Male Mahadeshwara Hills) ಪಾದಯಾತ್ರೆ ತೆರಳುತ್ತಿದ್ದ ಭಕ್ತನೊಬ್ಬ ಇತ್ತೀಚೆಗೆ ಚಿರತೆ ದಾಳಿಗೆ ಬಲಿಯಾದ ಘಟನೆ ಬಳಿಕ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಹೈಅಲರ್ಟ್ ಘೋಷಿಸಿದೆ. ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ಪಾದಯಾತ್ರಿಗಳ ಸುರಕ್ಷತೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವೀಣ್ ಎಂಬ ಭಕ್ತ ಇತ್ತೀಚೆಗೆ ಸಾವನ್ನಪ್ಪಿದ ಘಟನೆ…

Read More

Gold Rate Today: ಚಿನ್ನ, ಬೆಳ್ಳಿ ಇನ್ನಷ್ಟು ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 6th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 6: ಚಿನ್ನದ ಬೆಲೆ (Gold Rates) ಮತ್ತೂ ಕುಸಿದಿದೆ. ನಿನ್ನೆ 460 ರೂ ತಗ್ಗಿದ್ದ ಆಭರಣ ಚಿನ್ನದ ಬೆಲೆ ಇವತ್ತು 190 ರೂ ಕಡಿಮೆಗೊಂಡಿದೆ. ಇದರ ಬೆಲೆ ಮತ್ತೊಮ್ಮೆ 14,000 ರೂ ಒಳಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇದರ ಬೆಲೆ ಕಡಿಮೆಗೊಂಡಿದೆ. ಇನ್ನು, ಬೆಳ್ಳಿ ಬೆಲೆಯೂ ಭರ್ಜರಿ ಕುಸಿತ ಮುಂದುವರಿಸಿದೆ. ಇವತ್ತು ಶುಕ್ರವಾರ ಇದರ ಬೆಲೆ 20-25 ರೂನಷ್ಟು ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,650…

Read More

ಬೆಂಗಳೂರಿನ ಅಪಾರ್ಟ್‌ಮೆಂಟ್‌ಗೆ 50,000 ರೂ. ಬಾಡಿಗೆ, ಆದರೆ ಅಲ್ಲಿನ ಸೌಲಭ್ಯಗಳನ್ನು ಬಳಸಲು ಸಮಯವಿಲ್ಲ – Kannada News | High Rent, No Time: Bangalore IT Pro’s Viral Work Life Balance Dilemma

ಬೆಂಗಳೂರು, ಫೆ.6: ಬೆಂಗಳೂರಿನಲ್ಲಿ ಮನೆಗಳು ದುಬಾರಿ. ಐಟಿ, ಬಿಟಿ ಕಂಪನಿಗಳಲ್ಲಿ ವರ್ಕ್​ ಮಾಡುವವರಿಗೆ ಇಲ್ಲಿ ಈ ದುಬಾರಿ ಮನೆಗಳು ವಾಸಿಸಲು ಸೂಕ್ತ. ಅದಕ್ಕಾಗಿ ಇವರು ಲಕ್ಷ ಲಕ್ಷ ಹಣವನ್ನು ಇದಕ್ಕಾಗಿ ವ್ಯಯ ಮಾಡುತ್ತಾರೆ. ಆದರೆ ಈ ದುಬಾರಿ ಮನೆಗಳಲ್ಲಿರುವ ಎಲ್ಲ ಸೌಕರ್ಯಗಳನ್ನು (Bangalore techie rent) ಸರಿಯಾಗಿ ಉಪಯೋಗ ಮಾಡುವುದಿಲ್ಲ. ಇದೀಗ ಇಂತಹದೇ ವಿಚಾರದ ಬಗ್ಗೆ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 50,000 ರೂಪಾಯಿ ಬಾಡಿಗೆ ಪಾವತಿಸುತ್ತಿರುವ ವ್ಯಕ್ತಿಯೊಬ್ಬರು, ತಮಗೆ ಅಪಾರ್ಟ್‌ಮೆಂಟ್‌ನಲ್ಲಿರುವ ಯಾವುದೇ ಸೌಲಭ್ಯಗಳನ್ನು ಬಳಸಲು…

Read More

ರಿಪೋ ಬಡ್ಡಿದರ ಶೇ. 5.25ರಲ್ಲಿ ಮುಂದುವರಿಸಿದ ಆರ್​ಬಿಐ – Kannada News | RBI repo rate remain unchanged on 5.25pc, while GDP and inflation forecast revised

ನವದೆಹಲಿ, ಫೆಬ್ರುವರಿ 6: ಆರ್​ಬಿಐನ ರಿಪೋ ದರದಲ್ಲಿ ಈ ಬಾರಿ ಬದಲಾವಣೆ ಮಾಡಲಾಗಿಲ್ಲ. ರಿಪೋ ದರವನ್ನು ಶೇ 5.25ರಲ್ಲೇ ಮುಂದುವರಿಸಲು ಭಾರತೀಯ ರಿಸರ್ವ್ ಬ್ಯಾಂಕ್​ನ (RBI) ಹಣಕಾಸು ನೀತಿ ಸಮಿತಿಯ ಎಲ್ಲಾ 6 ಸದಸ್ಯರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಶುಕ್ರವಾರ ಪ್ರಕಟಿಸಿದ್ದಾರೆ. ಆರ್​ಬಿಐ ಪಾಲಿಸಿ ದರಗಳು ರಿಪೋ ದರ: ಶೇ. 5.25 ರಿವರ್ಸ್ ರಿಪೋ ದರ: ಶೇ. 3.35 ಸ್ಟ್ಯಾಂಡಿಂಗ್ ಡೆಪಾಸಿಟ್ ಫೆಸಿಲಿಟಿ ದರ…

Read More

ನೇಪಾಳದಲ್ಲಿ ಕುಳಿತು ಭಾರತದಲ್ಲಿ ನೂರಾರು ಕೋಟಿ ರೂ. ವಂಚನೆ ಮಾಡುತ್ತಿದ್ದವರನ್ನು ಹೆಡೆಮುರಿಕಟ್ಟಿದ ಮಂಗಳೂರು ಪೊಲೀಸರು! – Kannada News | Massive Cybercrime Ring Led by Chinese Handlers in Nepal Busted by Mangaluru Police

ನೇಪಾಳದಲ್ಲಿ ಕುಳಿತು ಭಾರತದಲ್ಲಿ ನೂರಾರು ಕೋಟಿ ವಂಚನೆ ಮಾಡುತ್ತಿದ್ದವರನ್ನು ಹೆಡೆಮುರಿಕಟ್ಟಿದ ಮಂಗಳೂರು ಪೊಲೀಸರು! ಮಂಗಳೂರು, ಫೆಬ್ರುವರಿ 06: ನೇಪಾಳದಲ್ಲಿ ಕುಳಿತು ಭಾರತವನ್ನೇ ಗುರಿಯಾಗಿಸಿಕೊಂಡು ನೂರಾರು ಕೋಟಿ ರೂಪಾಯಿ ವಂಚನೆ ಮಾಡುತ್ತಿದ್ದ ಅತಿದೊಡ್ಡ ಸೈಬರ್ ಫ್ರಾಡ್ ನೆಟ್ವರ್ಕ್ ಅನ್ನು (Cyber Fraud Network) ಮಂಗಳೂರು ಪೊಲೀಸರು ಭೇದಿಸಿದ್ದಾರೆ. ನೇಪಾಳ ಪೊಲೀಸರ ಸಹಕಾರದೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ, ಅಲ್ಲಿಯೇ ತಂಗಿ ವಂಚನೆ ನಡೆಸುತ್ತಿದ್ದ 11 ಮಂದಿ ಭಾರತೀಯ ಮೂಲದ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ವಂಚನೆಯ ಜಾಲವನ್ನು ನಿಯಂತ್ರಿಸುತ್ತಿದ್ದ ಚೀನಾದ ಹ್ಯಾಂಡ್ಲರ್​ಗಳು…

Read More

ತಿಹಾರ್ ಜೈಲ್​​ಗೆ ಸರೆಂಡರ್ ಆದ ಬಾಲಿವುಡ್ ಖ್ಯಾತ ಹಾಸ್ಯ ನಟ – Kannada News | Rajpal Yadav Surrenders to Tihar Jail After Delhi HC Denies Relief in Check Bounce Case

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಾಸ್ಯ ನಟ ರಾಜ್​ಪಾಲ್ ಯಾದವ್ (ರಾಜ್​ಪಾಲ್ ಯಾದವ್) ಅವರಿಗೆ ರಿಲೀಫ್ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಈ ಕಾರಣದಿಂದ ಅವರು ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಗುರುವಾರ (ಜನವರಿ 5) ನಾಲ್ಕು ಗಂಟೆಗೆ ಅವರು ಜೈಲಿಗೆ ಆಗಮಿಸಿದರು. ಅಧಿಕಾರಿಗಳು ಆ ಬಳಿಕ ತಮ್ಮ ಪ್ರಕ್ರಿಯೆ ನಡೆಸಿದ್ದಾರೆ. ಅವರನ್ನು ಈಗ ಜೈಲಿನಲ್ಲಿ ಇಡಲಾಗಿದೆ. ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ರಾಜ್​​ಪಾಲ್ ವಿರುದ್ಧ ಕೇಸ್ ದಾಖಲಿಸಿತ್ತು. ನಟ ಹಾಗೂ ಅವನ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯವಿಡೀ ಒಣ ಹವೆಯ ವಾತಾವರಣ, ಬೆಂಗಳೂರಿನಲ್ಲಿ ಚಳಿ – Kannada News | Bengaluru temperature: Dry weather all over Karnataka, cold and clear sky in Bengaluru

ರಾಜ್ಯವಿಡೀ ಒಣ ಹವೆಯ ವಾತಾವರಣ, ಬೆಂಗಳೂರಿನಲ್ಲಿ ಚಳಿ ಬೆಂಗಳೂರು, ಫೆಬ್ರುವರಿ 06: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣವೇ (Weather Forecast) ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ ಎಲ್ಲೆಲ್ಲಿ…

Read More