Headlines

ಯಶ್, ರಣ್​​ಬೀರ್ ನಟನೆ ಕೊಂಡಾಡಿದ ಬಾಲಿವುಡ್ ನಟ – Kannada News | Ramayana actor Kunal Kapoor praises Yash and Ranbir Kapoor

‘ರಾಮಾಯಣ’ (Ramayana) ಸಿನಿಮಾದ ಟ್ರೈಲರ್ ಇಂದು (ಜುಲೈ 30) ಬಿಡುಗಡೆ ಆಗಿದೆ. ಟ್ರೈಲರ್ ಬಿಡುಗಡೆ ಆದ ಕೆಲವೇ ಗಂಟೆಗಳಲ್ಲಿ ಮಿಲಿಯನ್ ಗಟ್ಟಲೆ ವೀವ್ಸ್ ಅನ್ನು ಸಹ ಗಳಿಸಿಕೊಂಡಿದೆ. ಟ್ರೈಲರ್​​ನಲ್ಲಿ ಯಶ್ ಅವರ ಎಂಟ್ರಿ, ಅವರ ನಟನೆ, ಅವರ ಸ್ವಾಗ್, ಅವರ ಅಬ್ಬರವನ್ನು ನೆಟ್ಟಿಗರು ಕೊಂಡಾಡುತ್ತಿದ್ದಾರೆ. ಟ್ರೈಲರ್ ನೋಡಿದವರೆಲ್ಲ ಯಶ್ ಅವರನ್ನು ಭರಪೂರವಾಗಿ ಹೊಗಳುತ್ತಿದ್ದಾರೆ. ಇದೀಗ ಯಶ್ ಅವರೊಟ್ಟಿಗೆ ‘ರಾಮಾಯಣ’ ಸಿನಿಮಾನಲ್ಲಿ ನಟಿಸಿರುವ ಸಹನಟನೋರ್ವ ಯಶ್ ಅವರ ಗುಣಗಾನ ಮಾಡಿದ್ದಾರೆ. ಇಂದು ಬಿಡುಗಡೆ ಆದ ಟ್ರೈಲರ್​​ನಲ್ಲಿ ಯಶ್ ಅವರು…

Read More

IPL 2026: ಕೆಕೆಆರ್ ತಂಡದಲ್ಲಿ ರಿಂಕು ಸಿಂಗ್​ಗೆ ಮಹತ್ವದ ಜವಾಬ್ದಾರಿ

2026 ರ ಐಪಿಎಲ್ ಆರಂಭಕ್ಕೂ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ರಿಂಕು ಸಿಂಗ್ ಅವರನ್ನು ತಂಡದ ಉಪನಾಯಕನನ್ನಾಗಿ ನೇಮಿಸಿದೆ. ಇದು ಕೆಕೆಆರ್ ಜೊತೆಗಿನ ರಿಂಕು ಸಿಂಗ್ ಅವರ ಎಂಟನೇ ಸೀಸನ್ ಆಗಿದ್ದು, ಈಗ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ. 2018 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ರಿಂಕು ಸಿಂಗ್ ಆ ಆವೃತ್ತಿಯಲ್ಲಿ ಕೇವಲ 29 ರನ್ ಗಳಿಸಿದರು. ಮುಂದಿನ ಆವೃತ್ತಿಯಲ್ಲಿ ರಿಂಕು ಕಲೆಹಾಕಿದ್ದು, ಕೇವಲ 37 ರನ್ ಗಳಿಸಿದರು. ಅದರ ನಂತರದ…

Read More

ಒಂದೆಡೆ ಬಿಸಿಲ ಬೇಗೆ ಜೋರಾದ್ರೆ ಮತ್ತೊಂದೆಡೆ ನೀರಿಗಾಗಿ ಹಾಹಾಕಾರ: ಬೆಂಗಳೂರಿನ ವಿವಿಧೆಡೆ ಕುಡಿಯುವ ನೀರಿದ ದರ ಏರಿಕೆ – Kannada News | Karnatakas Double Whammy: Heatwave and Drinking Water Crisis Intensifies

ಬೆಂಗಳೂರು, ಏಪ್ರಿಲ್ 17: ಕರ್ನಾಟಕ ಈಗ ತೀವ್ರ ಬಿಸಿಲ ಬೇಗೆಯೊಂದಿಗೆ ಕುಡಿಯುವ ನೀರಿನ ಭೀಕರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ಡಬಲ್ ಶಾಕ್ ಎದುರಾಗಿದ್ದು, ನೀರಿಗಾಗಿ ತೀವ್ರ ಹಾಹಾಕಾರ ಶುರುವಾಗಿದೆ. ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು, ಜನರು ದೂರದ ಪ್ರದೇಶಗಳಿಂದ ನೀರು ತರಲು ಪರದಾಡುತ್ತಿದ್ದಾರೆ. ಪ್ರತಿ ಮೂರು ದಿನಗಳಿಗೊಮ್ಮೆ ಕೇವಲ ಒಂದು ಅಥವಾ ಎರಡು ಗಂಟೆಗಳ ಕಾಲ ನೀರು ಪೂರೈಕೆಯಾಗುತ್ತಿದೆ. ನೆಲಮಂಗಲದಲ್ಲಿ ನೀರಿನ ಅಸಮರ್ಪಕ ವಿತರಣೆ ಮತ್ತು ರಾಜಕೀಯದ ವಿರುದ್ಧ…

Read More

Weekly Love Horoscope: ಪ್ರೇಮ – ಪ್ರೀತಿ ಭವಿಷ್ಯ; ಈ ವಾರ ಈ ರಾಶಿಯ ಅವಿವಾಹಿತರಿಗೆ ಹೊಸ ಸಂಬಂಧದ ಪ್ರಸ್ತಾಪ ಬರಲಿದೆ

ಏಪ್ರಿಲ್ 12ರಿಂದ ಏಪ್ರಿಲ್ 18ರವರೆಗಿನ ಎರಡನೇ ವಾರವಾಗಿದ್ದು ಈ ವಾರದಲ್ಲಿ ಪರಿಚಿತವು ಪ್ರೇಮವಾಗಬಹುದು, ವರ್ತನೆ ನೇರವಾಗಿರಲಿ, ಅನುಮಾನಕ್ಕೆ ಆಸ್ಪದ ಬೇಡ. ಪ್ರೀತಿಯ ಕೊರತೆ ಕೆಲವರಿಗೆ ಆಗಲಿದ್ದು, ಮನಸ್ಸಿನೊಳಗೇ ದುಃಖಿಸಬೇಕಾಗುವುದು. ​ಮೇಷ: ​ಜೀವನ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಪ್ರೀತಿ ಗಟ್ಟಿಯಾಗಿರುತ್ತದೆ. ಅವಿವಾಹಿತರಿಗೆ ಹೊಸ ಸಂಬಂಧದ ಪ್ರಸ್ತಾಪ ಬರಬಹುದು. ಮಾತಿನಲ್ಲಿ ಸಂಯಮವಿರಲಿ, ಆಪ್ತತೆಯು ಹೆಚ್ಚಾಗಲಿದೆ. ​ವೃಷಭ: ​ಪ್ರೇಮ ಜೀವನದಲ್ಲಿ ಮಧುರವಾದ ಕ್ಷಣಗಳನ್ನು ಕಳೆಯುವಿರಿ. ಹಳೆಯ ಸ್ನೇಹಿತರ ಭೇಟಿ ಮನಸ್ಸಿಗೆ ಸಂತೋಷ ನೀಡುತ್ತದೆ. ದಾಂಪತ್ಯದಲ್ಲಿ ಪರಸ್ಪರ ಗೌರವ ಮತ್ತು ನಂಬಿಕೆ ವೃದ್ಧಿಯಾಗುವ…

Read More

IND vs IRE: ಐರ್ಲೆಂಡ್ ಪ್ರವಾಸದಿಂದ ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ ಔಟ್..!

ಈ ತಿಂಗಳ ಕೊನೆಯಲ್ಲಿ ಎರಡು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ, ಐರ್ಲೆಂಡ್ ಪ್ರವಾಸ ಮಾಡಲಿದೆ. ಜೂನ್ 26 ಮತ್ತು 28 ರಂದು ನಡೆಯಲಿರುವ ಈ ಎರಡು ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಸಹ ಪ್ರಕಟಿಸಲಾಗಿದೆ. ಆದರೆ ಈ ಪ್ರವಾಸಕ್ಕೆ ತಂಡ ಪ್ರಯಾಣ ಬೆಳೆಸುವ ಮುನ್ನವೇ ತಂಡದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಈ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ (PC-PTI). 2026 ರ ಐಪಿಎಲ್ ಸಮಯದಲ್ಲಿ ವರುಣ್ ಚಕ್ರವರ್ತಿ ಎಡಗಾಲಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಅಂದಿನಿಂದ ವರುಣ್ ಬಿಸಿಸಿಐನ…

Read More

ಆಯುಷ್ಮಾನ್ ಭಾರತ್ ಯೋಜನೆ: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ಪರಿಷ್ಕರಣೆಗೆ ಮುಂದಾದ ಸರ್ಕಾರ – Kannada News | Ayushman Bharat Karnataka Scheme: Govt Plans Treatment Rate Revision, More Private Hospitals to Be Added

ಬೆಂಗಳೂರು, ಜುಲೈ 23: ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಗುಣಮಟ್ಟದ ಉಚಿತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಜಾರಿಯಲ್ಲಿರುವ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (Ayushman Bharat-Arogya Karnataka)’ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ. ಹಲವು ವರ್ಷಗಳಿಂದ ಚಿಕಿತ್ಸಾ ಪ್ಯಾಕೇಜ್ ದರ ಪರಿಷ್ಕರಣೆ ಆಗದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು (Private Hospitals) ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದವು. ಇದರಿಂದ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ…

Read More

ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ

ಬಾಗಲಕೋಟೆ, (ಜುಲೈ 26): ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಮಹೀಂದ್ರಾ XUV300 ಕಾರು ಸ್ಫೋಟಗೊಂಡಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಕಮ್ ಮ್ಯಾನೇಜರ್ ಹನುಮಂತ ಅಥಣಿ ಅವರ ಕಾರು ನಿನ್ನೆ (ಜುಲೈ 25) ಸಂಜೆ 4:30ಕ್ಕೆ ವೈನ್ ಸ್ಟೋರ್ ಎದುರು ನಿಲ್ಲಿಸಲಾಗಿದ್ದು, ರಾತ್ರಿ 10:45ರ ಸುಮಾರಿಗೆ ಏಕಾಏಕಿ ಕಾರು ಸ್ಫೋಟಗೊಂಡಿದೆ. ಘಟನೆಯ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ, ಎಸ್‌ಒಸಿಒ (Scene of Crime) ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ…

Read More

ಆಟವಾಡುತ್ತಾ ಆಟಿಕೆ ನುಂಗಿದ ಮಗು; ಎಂಡೋಸ್ಕೋಪಿ ಮೂಲಕ ಹೊರತೆಗೆದ ವೈದ್ಯರು – Kannada News | Baby boy swallows Hulk toy doctors remove it via endoscopy

ಅಹಮದಾಬಾದ್, ಫೆಬ್ರವರಿ 4: ಮಕ್ಕಳು ಸಾಮಾನ್ಯವಾಗಿ ಆಗಾಗ ತಮ್ಮ ಬಾಯಿಯಲ್ಲಿ ವಸ್ತುಗಳನ್ನು ಹಾಕುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಈ ಬಗ್ಗೆ ಪೋಷಕರು ನಿರ್ಲಕ್ಷ್ಯ ಮಾಡಬಾರದು. ಇತ್ತೀಚಿನ ಒಂದು ಪ್ರಕರಣದಲ್ಲಿ ಗುಜರಾತ್‌ನ (Gujarat)  ಅಹಮದಾಬಾದ್‌ನ ಒಂದೂವರೆ ವರ್ಷದ ಬಾಲಕ ಆಕಸ್ಮಿಕವಾಗಿ ತನ್ನ ಪ್ಲಾಸ್ಟಿಕ್ ಆಟಿಕೆಯನ್ನು ನುಂಗಿದ್ದ. ವೈದ್ಯಕೀಯ ಚಿಕಿತ್ಸೆಗಾಗಿ ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಟಿಕೆ ಮಗುವಿನ ಹೊಟ್ಟೆಯಲ್ಲಿ ಸಿಲುಕಿಕೊಂಡಿದ್ದು, ಅವನ ಒಳ ಅಂಗಗಳಿಗೆ ಹಾನಿಯನ್ನುಂಟುಮಾಡುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದರು. ವೈದ್ಯರು ಮೊದಲು ಎಕ್ಸ್-ರೇ ನಡೆಸಿದರು. ಇದಾದ ನಂತರ…

Read More

ಆರ್‌ಎಸ್‌ಎಸ್​​ ಸಭೆ ಮುಕ್ತಾಯ: ರಾಮಮಂದಿರ ದೇಣಿಗೆ ದುರ್ಬಳಕೆಗೆ ವಿಷಾದ, ಜನಸಂಖ್ಯೆ ಅಸಮತೋಲನದ ಬಗ್ಗೆ ಕಳವಳ – Kannada News | RSS Belagavi Meet Raises Concerns Over Ayodhya Ram Mandir Donation Misuse and Population Imbalance

ಬೆಳಗಾವಿ, ಜುಲೈ 12: ಬೆಳಗಾವಿಯ ಆನಗೋಳದ ಸಂತ ಮೀರಾ ಶಾಲೆಯಲ್ಲಿ ಮೂರು ದಿನಗಳಿಂದ ನಡೆದಿದ್ದ ಆರ್‌ಎಸ್‌ಎಸ್ (RSS) ರಾಷ್ಟ್ರೀಯ ವಾರ್ಷಿಕ ಸಭೆ ಇಂದು ಮುಕ್ತಾಯವಾಗಿದೆ. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್​ ಭಾಗವತ್‌, ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸೇರಿದಂತೆ 226 ಪ್ರಚಾರಕರು ಸಭೆಯಲ್ಲಿ ಭಾಗಿಯಾಗಿದ್ದು, 2026ರ ಶಾಖಾ ವಿಸ್ತರಣೆ, ಪ್ರಶಿಕ್ಷಣ ವರ್ಗಗಳ ವಿಶ್ಲೇಷಣೆ ಬಗ್ಗೆ ಚರ್ಚಿಸಲಾಗಿದೆ. ಜೊತೆಗೆ ಅಯೋಧ್ಯೆ ರಾಮಮಂದಿರ ದೇಣಿಗೆ ದುರ್ಬಳಕೆ ಬಗ್ಗೆ ವಿಷಾದ ವ್ಯಕ್ತಪಡಿಸಲಾಗಿದ್ದು, ಇಂಥ ಘಟನೆ ಮರುಕಳಿಸದಂತೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ…

Read More

ಮುಂಬೈನ ಕುಟುಂಬದ ನಿಗೂಢ ಸಾವಿಗೆ ಕಲ್ಲಂಗಡಿ ಕಾರಣವೇ? ಇಲ್ಲಿದೆ ಅಸಲಿ ಸಂಗತಿ – Kannada News | Mumbai family deaths Mystery Deepens No adulteration in watermelon says FDA crime news in kannada

ಮುಂಬೈ, ಮೇ 2: ಮುಂಬೈನ ಗಂಡ, ಹೆಂಡತಿ, ಇಬ್ಬರು ಮಕ್ಕಳು ರಾತ್ರಿ ಕಲ್ಲಂಗಡಿ (Watermelon) ತಿಂದ ನಂತರ ಸಾವನ್ನಪ್ಪಿದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದಿನನಿತ್ಯ ತಿನ್ನುವ ಹಣ್ಣು ಕೂಡ ನಮ್ಮ ಆರೋಗ್ಯಕ್ಕೆ ಸುರಕ್ಷಿತವಲ್ಲವಾ? ಎಂಬ ಚರ್ಚೆಗಳು ನಡೆದಿದ್ದವು. ಅದಾದ ಕೆಲವು ದಿನಗಳ ನಂತರ, ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತದ (FDA) ಮೃತರ ಮನೆಯಿಂದ ಸಂಗ್ರಹಿಸಿದ ಕಲ್ಲಂಗಡಿ, ಬಿರಿಯಾನಿ, ನೀರು ಮತ್ತು ಮಸಾಲೆಗಳ ಮಾದರಿಗಳ ಮೇಲೆ ನಡೆಸಿದ ಪ್ರಾಥಮಿಕ ಪರೀಕ್ಷೆಗಳಲ್ಲಿ ಕಲಬೆರಕೆಯ ಯಾವುದೇ ಲಕ್ಷಣಗಳು…

Read More