ಮಠಗಳಿಗೆ ಜಾಗ, ಉದ್ಯೋಗಾಕಾಂಕ್ಷಿಗಳಿಗೂ ಸುಯೋಗ: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ – Kannada News | Karnataka Cabinet Approves 5 Year Age Relaxation for Civil Services and Housing for Nomads
ಬೆಂಗಳೂರು, ಜನವರಿ 22: ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಮತ್ತು ಅಲೆಮಾರಿ ಸಮುದಾಯಕ್ಕೆ ಸಿಹಿ ಸುದ್ದಿ ನೀಡಲಾಗಿದೆ. ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಗೆ ಕ್ಯಾಬಿನೆಟ್ ಒಪ್ಪಿದ್ದರೆ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಜನರಿಗೆ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಜೊತೆಗೆ ಹಲವು ಮಹತ್ವದ ನಿರ್ದಾರಗಳು ಕ್ಯಾಬಿನೆಟ್ ಸಭೆಯಲ್ಲಿ ಆಗಿವೆ ವಯೋಮಿತಿ ಸಡಿಲಿಕೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ…