Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 16ರ ದಿನಭವಿಷ್ಯ

ಕೆಂಪು ಬಣ್ಣದ ಕಮಲದ ಹೂವನ್ನು ಲಕ್ಷ್ಮೀ ದೇವಿಯ ವಿಗ್ರಹ ಅಥವಾ ಚಿತ್ರಪಟ ಅಥವಾ ದೇವಸ್ಥಾನದಲ್ಲಿನ ವಿಗ್ರಹಕ್ಕೆ ಅರ್ಪಣೆ ಮಾಡಿ. ಇದರಿಂದಾಗಿ ಕಾರ್ಯ ವಿಳಂಬ ದೂರವಾಗಲಿದೆ. ಅದೇ ವೇಳೆ ನಿಮಗೆ ಬರಬೇಕಾದ ಆದಾಯಕ್ಕೆ ತಡೆ ಆಗುತ್ತಿದ್ದಲ್ಲಿ ಅದರ ನಿವಾರಣೆ ಆಗಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನೀವು ಮಾಡುತ್ತಿರುವ ಪ್ರಯತ್ನ ಹಾಗೂ ಹಾಕುತ್ತಿರುವ ಶ್ರಮಕ್ಕೆ ಪ್ರತಿಫಲವು ಮೇಲ್ನೋಟಕ್ಕೆ ಕಂಡು ಬರುವುದಿಲ್ಲ. ಆದರೆ ದೀರ್ಘಾವಧಿಗೆ ಇದು ನಿಮ್ಮ ಕೈ ಹಿಡಿಯಲಿದೆ. ನಿಮ್ಮ ಸಾಧನೆಯನ್ನು ಬಾಯಿ ಬಿಟ್ಟು ಹೇಳುವ ಅಗತ್ಯ ಇಲ್ಲದಂತೆ ಸಂಬಂಧಪಟ್ಟವರ ಗಮನಕ್ಕೆ ಬರಲಿದೆ. ಒಂದು ಕೆಲಸಕ್ಕೆ ಇತರರ ಮೇಲೆ ಅವಲಂಬಿತರಾಗುವ ಮೊದಲಿಗೆ ನಿಮ್ಮ ಮನಸ್ಸು ಹೇಳುವ ಮಾತನ್ನು ಸಹ ಕೇಳಿಸಿಕೊಳ್ಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಹಣ ಬರುವುದೊಂದೇ ಕೆಲಸದಲ್ಲಿ ಸಿಗುವ ತೃಪ್ತಿ ಅಲ್ಲ ಎಂಬುದು ಈ ದಿನ ಹಲವು ಸಲ ನಿಮಗೆ ಅನಿಸುತ್ತದೆ. ಅದೇ ವೇಳೆ, ಅದರಾಚೆಗೆ ಬೇರೆ ಏನೋ ಇದೆ ಎಂಬ ಹುಡುಕಾಟ ಹೊಸ ಎತ್ತರಕ್ಕೆ ಏರುವುದಕ್ಕೆ ಸ್ಫೂರ್ತಿ ಆಗಲಿದೆ. ಅನುಭವದಿಂದ ನೀವು ಕಲಿತ ಪಾಠವನ್ನು ಅನ್ವಯಿಸಿಕೊಳ್ಳಲು ಪ್ರಯತ್ನಿಸಿ. ಅತ್ಯುತ್ಸಾಹದಲ್ಲಿ ಈ ಹಿಂದೆ ಯಾವಾಗಲೋ ನೀಡಿದ್ದ ಮಾತನ್ನು ಈಡೇರಿಸವುದಕ್ಕೆ ಬಹಳ ಶ್ರಮ ಹಾಕುವಂತೆ ಆಗಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮಗೆ ಆತ್ಮವಿಶ್ವಾಸ ಇರುವಂಥ ಕೆಲಸ- ಕಾರ್ಯ ಮಾಡುವುದಕ್ಕೂ ಒಂದು ಬಗೆಯ ಹಿಂಜರಿಕೆ ಕಾಡಲಿದೆ. ಯಾವುದಕ್ಕೂ ಇರಲಿ ಸ್ನೇಹಿತರ ಸಲಹೆಯನ್ನು ಕೇಳೋಣ ಎಂಬ ಪರಿಸ್ಥಿತಿ ಉದ್ಭವಿಸುತ್ತದೆ. ‘ನನ್ನಿಂದ ಆದ ಸಹಾಯವನ್ನು ನಿಮಗೆ ಮಾಡಲಾ?’ ಎಂಬ ಪ್ರಶ್ನೆಯನ್ನು ಯಾರಿಗೇ ಕೇಳಬೇಕಾದರೂ ಸಾವಿರ ಬಾರಿ ಆಲೋಚಿಸುವುದು ಒಳ್ಳೆಯದು. ಏಕೆಂದರೆ ಇದೊಂದು ಮಾತು ನಿಮ್ಮ ಇಡೀ ದಿನದ ಸಮಯವನ್ನು ತೆಗೆದುಕೊಂಡು ಬಿಡಬಹುದು.

ಲೇಖನ- ಸ್ವಾತಿ ಎನ್.ಕೆ.

Source link

Horoscope Today 16 February: ಇಂದು ಈ ರಾಶಿಯವರು ಯಾರನ್ನೋ ನಂಬಿ ಕುಳಿತುಕೊಳ್ಳಬಾರದು – Kannada News | Horoscope for Today, 16 February: People of This Zodiac Sign Should Be Cautious and Not Trust Anyone

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಸಿದ್ಧಿ, ಕರಣ : ವಣಿಜ, ಸೂರ್ಯೋದಯ – 06 – 48 am, ಸೂರ್ಯಾಸ್ತ – 06 – 28 pm, ಇಂದಿನ ಶುಭಾಶುಭ ಕಾಲ : ರಾಹು 08:16 – 09:44, ಯಮಗಂಡ ಕಾಲ 11:11 – 12:39, ಗುಳಿಕ ಕಾಲ 14:06 – 15:33

ಮೇಷ ರಾಶಿ: ನಿಮ್ಮ ತಾಳ್ಮೆ ಮತ್ತು ಶ್ರಮದಿಂದ ನಿರೀಕ್ಷಿತ ಫಲಿತಾಂಶವೇ ಇರಲಿದೆ. ಆರ್ಥಿಕ ಪ್ರಗತಿಯ ಪರಿಗಣನೆ ಮಾಡುವ ಸಮಯ. ಕುಟುಂಬದಲ್ಲಿ ಹೊಸ ಶುಭ ಸಂದರ್ಭಗಳಿಗೆ ಮುನ್ಸೂಚನೆ. ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಯೋಗ್ಯ ಸಮಯ. ಅಪರಿಚಿತರು ಆಪ್ತರಾಗುವ ಸಾಧ್ಯತೆ ಇದೆ.‌ ನಿಮ್ಮ‌ ವೇಷಭೂಷಣದ ಬಗ್ಗೆ ಟೀಕಿಸುವರು.ಹೂಡಿಕೆಯ ಬಗ್ಗೆ ಸಂಗಾತಿಯ ನಿಲುವಿಗೆ ಬದ್ಧರಾಗಬೇಲಾದೀತು. ಯಾವುದನ್ನೂ ನೀವು ಮನಸ್ಸಿಗೆ ತೆಗೆದುಕೊಳ್ಳದೇ ನಿಶ್ಚಿಂತೆಯಿಂದ ಇರುವಿರಿ.

ವೃಷಭ ರಾಶಿ: ಯಶಸ್ಸನ್ನು ಗಳಿಸದಂತೆ ಹಿತಶತ್ರುಗಳು ಅಡ್ಡಗಾಲು ಹಾಕುವಿರಿ. ಆಭರಣದ ವಿಚಾರದಲ್ಲಿ ಜಾಗರೂಕತೆ ಇರಲಿ. ಸಹೋದ್ಯೋಗಿಗಳ ಜೊತೆ ಪ್ರೇಮಾಂಕುರ, ಮನೆಯವರ ಅಭಿಪ್ರಾಯದ ಬಗ್ಗೆ ಆತಂಕ. ನಿಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇರಲಿ. ಮನಸ್ಸಿನ ಚಾಂಚಲ್ಯವನ್ನು ನಿಲ್ಲಿಸಲಾಗದು. ವೃತ್ತಿಯಲ್ಲಿ ಬದಲಾವಣೆ ಬೇಕು ಎನಿಸುವುದು. ಅಜ್ಞಾತವಾಸದಂತೆ ಇರುವ ನಿಮ್ಮ ಜೀವನಕ್ಕೆ ಹೊಸ ತಿರುವು ಸಿಕ್ಕೀತು. ಅಪರಿಚಿತರು ನಿಮಗೆ ಕೆಲವು ತೊಂದರೆಯನ್ನು ಕೊಡಬಹುದು.

ಮಿಥುನ ರಾಶಿ: ಸೋಲಾದ ಸ್ಥಳದಲ್ಲಿಯೇ ಮೇಲೆ ಬರುವ ಛಲ ನಿಮಗೆ. ಧರ್ಮಾಚರಣೆಯ ಕಡೆ ಒಲವಿದ್ದರೂ ಸಮಯವು ಸರಿಯಾಗಿ ಸಿಗದೇ ಇದ್ದೀತು. ಸಂಗಾತಿಯ ಮೇಲೆ ಎಲ್ಲಿಲ್ಲದ ಅನುಮಾನ. ಉದ್ಯೋಗದಲ್ಲಿ ಮೇಲಧಿಕಾರಿಗಳು ನಿಮಗೆ ಪೂರಕವಾಗಿ ಸಹಕಾರ ನೀಡುವರು. ಮೂರನೇ ವ್ಯಕ್ತಿಯ ಮಾತುಗೆ ಪ್ರಾಮುಖ್ಯ ಬೇಡ. ದಾಂಪತ್ಯ ಕಲಹವು ಸುಖಾಂತವಾಗಲಿದೆ. ಸ್ಥಳದ ವ್ಯತ್ಯಾಸದಿಂದ ಆರೋಗ್ಯದ ಮೇಲೆ‌ ದುಷ್ಪರಿಣಾಮವಾಗಲಿದೆ. ಉದ್ಯೋಗದ ಕಾರಣ ಪ್ರಯಾಣ ಮಾಡುವ ಸನ್ನಿವೇಶವು ಬರಲಿದೆ.

ಕರ್ಕಾಟಕ ರಾಶಿ: ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗೆ ಅವಕಾಶ. ಸೋಲನ್ನೂ ಆನಂದಿಸುವ ಮನೋಭಾವವಿರಲಿದೆ. ಹೊಸ ಜವಾಬ್ದಾರಿ ಬರಬಹುದು. ಇಂದಿನ ನಿಮ್ಮ ಕಾರ್ಯಕ್ಕೆ ಸಮಯದ ಮಿತಿಯನ್ನು ಅವಶ್ಯಕ. ನಿಮ್ಮ ಮಾತಿನಿಂದ ಇತರರಿಗೆ ನೋವಾಗುವುದು. ಪ್ರೇಮವು ಅಪಾಯಕ್ಕೆ ಸಿಕ್ಕಿಕೊಳ್ಳಬಹುದು. ಸಹೋದ್ಯೋಗಿಗಳ ಜೊತೆ ವಾದವನ್ನು ಮಾಡುವಿರಿ. ವ್ಯವಹಾರದಲ್ಲಿ ಮಾತನಾಡುವಾಗ ನಿಮ್ಮನ್ನು ಅಳೆಯಬಹುದು. ಶತ್ರುಗಳನ್ನು ತಿಳಿದುಕೊಳ್ಳುವ ಅಸಕ್ತಿಯು ಇರಲಿದೆ.

ಸಿಂಹ ರಾಶಿ: ಸಂತಾನಕ್ಕೆ ಸಂಬಂಧಿಸಿದಂತೆ ದಂಪತಿಗಳ ನಡುವೆ ಟೀಕೆಗಳು ನಡೆಯುವುದು. ನಿಮ್ಮ ನಿರ್ಧಾರ ಶಕ್ತಿಯು ಮುಂದಿನ ಯಶಸ್ಸಿನ ಕೀಲಿಕೈ. ವಿದೇಶಿ ವ್ಯವಹಾರಗಳಿಗೆ ಅನುಕೂಲಕರ ಸಮಯ. ವಿದ್ಯಾರ್ಥಿಗಳಿಗೆ ಭವಿಷ್ಯಕ್ಕೆ ಮಾರ್ಗದರ್ಶನವಾಗಲಿದೆ. ನಿಮ್ಮ ಇಷ್ಟದವರನ್ನು ಭೇಟಿಯಾಗಿ ಕೆಲವು ಸಮಯ ಸಂತೋಷದಿಂದ ಕಳೆಯುವಿರಿ. ಆಶಿಸ್ತಿನ ಕೆಲಸಕ್ಕೆ ಹಿರಿಯರು ನಿಂದಿಸಬಹುದು. ಅಪರಿಚಿತ ವ್ಯಕ್ತಿಗಳಿಂದ ಸಾಲಕ್ಕಾಗಿ ದೂರವಾಣಿಯ ಮೂಲಕ ಪೀಡೆ.

ಕನ್ಯಾ ರಾಶಿ: ಆರ್ಥಿಕ ನಿರ್ಧಾರಗಳಲ್ಲಿ ತಾಳ್ಮೆ ಮತ್ತು ಪರಿಶೀಲನೆ ಅಗತ್ಯ. ಸಂಬಂಧಗಳಲ್ಲಿ ಗೊಂದಲಗಳು ತಲೆದೋರಬಹುದು, ಸೂಕ್ಷ್ಮವಾಗಿ ನಡೆದುಕೊಳ್ಳಿ. ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ. ಕುಟುಂಬದವರ ಮಾತುಗಳು ಕಿರಿಕಿರಿ ಎನಿಸಬಹುದು. ಬಂಧುಗಳಿಂದ ನೀವು ನಿರ್ಲಕ್ಷ್ಯಕ್ಕೆ ಒಳಗಾಗುವಿರಿ. ನಿಮಗೆ ಸಿಕ್ಕ ಅಶುಭ ಸೂಚನೆಯಿಂದ ಭಯವಾಗಬಹುದು.‌ ದಾಂಪತ್ಯದಲ್ಲಿ ನೀವು ಸುಖವನ್ನು ಕಾಣುವಿರಿ. ಇಷ್ಟು ದಿನ ನಿರ್ವಹಿಸುತ್ತಿದ್ದ ಜವಾಬ್ದಾರಿಗಳನ್ನು ಇಂದು ನಿರ್ವಹಿಸಲು ಕಷ್ಟವಾದೀತು.

ತುಲಾ ರಾಶಿ: ಹಣಕ್ಕಾಗಿ ಇನ್ನೊಬ್ಬರಿಗೆ ಮಾನಸಿಕ ಒತ್ತಡವನ್ನೂ ಹಿಂಸೆಯನ್ನೂ ಕೊಡುವಿರಿ. ಆದಾಯದಲ್ಲಿ ಸ್ಥಿರತೆ ಕಾಣಬಹುದು. ವ್ಯವಸ್ಥಿತ ಯೋಜನೆ ರೂಪಿಸಿದರೆ ಭವಿಷ್ಯದಲ್ಲಿ ಲಾಭ. ಮಾತುಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸುವ ಸಮಯ. ಕೌಟುಂಬಿಕ ಜೀವನದಲ್ಲಿ ಅಹಂಕಾರಕ್ಕೆ ಅವಕಾಶ ನೀಡಬೇಡಿ. ಹೂಡಿಕೆಯ ಕಡೆ ಅಧಿಕ ಆಲೋಚನೆ ಮಾಡುವಿರಿ. ಮನೆಯಲ್ಲಿ ಇದ್ದು ಕೆಲಸ ಮಾಡುವವರಿಗೆ ಬಂಧನದಂತೆ ಅನ್ನಿಸಬಹುದು. ದಾನದಿಂದ ನಿಮಗೆ ಪ್ರಶಂಸೆಯು ಸಿಗುವುದು.

ವೃಶ್ಚಿಕ ರಾಶಿ: ಆರ್ಥಿಕವಾಗಿ ಲಾಭದಾಯಕ ದಿನ, ಹಳೆಯ ಸಾಲ ತೀರಿಸುವ ಅವಕಾಶ. ಕುಟುಂಬದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಲಿದೆ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಅಂದುಕೊಂಡ ಕಾರ್ಯವು ಮುಗಿಯುತ್ತ ಇರುವಾಗಲೇ ಯಾರಾದರೂ ಅಡ್ಡಿ ಮಾಡುವರು. ಆಪ್ತರ ಜೊತೆಗಿನ ಬಿಚ್ಚು ಮನಸ್ಸಿನ ಮಾತುಕತೆಯಿಂದ ನಿಮ್ಮ ಭಾರವಾದ ಮನಸ್ಸು ಹಗುರಾಗುವುದು. ನೀವು ಇಂದು ಸಿಟ್ಟು ಮಾಡಿಕೊಳ್ಳಬಹುದಾದ ಸನ್ನಿವೇಶಗಳು ಬಾರದು.

ಧನು ರಾಶಿ: ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ದೊರೆಯಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ, ದಿನಚರಿಯಲ್ಲಿ ತಾಳ್ಮೆ ವಹಿಸಿ. ಮನೆಯವರ ಸಹಕಾರದಿಂದ ನಿಮ್ಮ ಸಮಸ್ಯೆ ಪರಿಹಾರ. ನಿಮ್ಮ ಧೈರ್ಯ ಮತ್ತು ದೃಢ ನಿಲುವು ಯಶಸ್ಸಿನ ಮೂಲಮಂತ್ರ. ನೂತನ ವಸ್ತುಗಳನ್ನು ಪಡೆದು ಸಂತೋಷಪಡುವಿರಿ. ಗೌರವಾದಿಗಳು ಸಿಕ್ಕಿ ಸಂತೋಪಡುವಿರಿ. ರಾಜಕೀಯದಲ್ಲಿ ಅನಿರೀಕ್ಷಿತ ಬದಲಾವಣೆ ಆಗುವುದು. ಸಾಹಿತ್ಯಸಲ್ಲಿ ಆಸಕ್ತಿ ಇರುವವರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ತೊಡಗಿಕೊಳ್ಳಿ.

ಮಕರ ರಾಶಿ: ಅಪರಿಚಿತರೇ ನಿಮಗೆ ಆಗಿಬರಬಹುದು. ಅನ್ಯೋನ್ಯತೆ ಹುಟ್ಟುವುದು. ಉದ್ವೇಗಕ್ಕೆ ವಶವಾಗದೇ ಬುದ್ದಿವಂತಿಕೆಯಿಂದ ನಿಮ್ಮ ಕಾರ್ಯವನ್ನು ಮುನ್ನಡೆಸಿ. ಆರ್ಥಿಕ ಪರಿಸ್ಥಿತಿ ಸ್ಥಿರವಾಗಿರುತ್ತದೆ, ಹೊಸ ಆದಾಯದ ಅವಕಾಶ ಇರುತ್ತದೆ. ವೃತ್ತಿಯ ಅಭಿವೃದ್ಧಿಗೆ ನೂತನ ಅವಕಾಶಗಳು ಲಭ್ಯ. ಎಲ್ಲವನ್ನೂ ನೀವೇ ಮಾಡಬೇಕು ಎನ್ನುವ ಮಾನಸಿಕತೆ ಬೇಡ. ಒಂಟಿತನವು ಇಷ್ಟವಾಗುವುದು. ಕುರುಡು ನಂಬಿಕೆಯಿಂದ ನಿಮಗೆ ಇಷ್ಟವಾಗುವುದು. ಕುಟುಂಬದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಗೌಪ್ಯವಾಗಿ ಇರುವುದು.

ಕುಂಭ ರಾಶಿ: ಪ್ರಯತ್ನಿಸಿದರೆ ಹೊಸ ಅವಕಾಶಗಳು ಎದುರಾಗಬಹುದು. ನಿಮ್ಮ ಪರಿಶ್ರಮಕ್ಕೆ ಇಂದು ಫಲಿತಾಂಶ ದೊರೆಯಬಹುದು. ಆರ್ಥಿಕ ಅಭಿವೃದ್ಧಿಗೆ ಹೊಸ ಆಯ್ಕೆಗಳನ್ನು ಅನ್ವೇಷಿಸುವಿರಿ. ಕುಟುಂಬ ಜೊತೆ ಸಂತಸದ ಕ್ಷಣಗಳನ್ನು ಕಳೆಯುವಿರಿ. ಹೊಸ ಸಾಲಕ್ಕೂ ಮೊದಲು ಹಳೆಯದನ್ನು ದೂರಮಾಡಿಕೊಳ್ಳುವುದು ಉತ್ತಮ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಏಕಾಗ್ರತೆಯು ಇಲ್ಲವಾಗಬಹುದು. ಮಾತಿನಲ್ಲಿ ಪೇಲವ ಬೇಡ. ದೃಢತೆಯಿಂದ ಮಾತನಾಡಿ.

ಮೀನ ರಾಶಿ: ಉನ್ನತ ವಿದ್ಯಾಭ್ಯಾಸದ ಕಾರಣ ದೂರ ಪ್ರಯಾಣವನ್ನು ಮಾಡಬೇಕಾಗಬಹುದು. ಇಂದು ಸಂಯಮವನ್ನು ಹೊಂದಿರುವುದು ಅವಶ್ಯಕ. ಹೊಸ ಉತ್ಸಾಹದಿಂದ ಕಾರ್ಯಗಳು ಕೈಗೂಡುವುದು. ಆರ್ಥಿಕವಾಗಿ ನಿರೀಕ್ಷಿತ ಲಾಭ ದೊರಕುವ ಸಾಧ್ಯತೆ ಇದೆ. ಕೌಟುಂಬಿಕ ವಿಚಾರದಲ್ಲಿ ಸಾಮರಸ್ಯ ಹೆಚ್ಚಾಗಬಹುದು. ಹೊಸ ವ್ಯವಹಾರ ಶುರು ಮಾಡಲು ಚಿಂತನೆ. ಅತಿಥಿ ಸತ್ಕಾರದಿಂದ ಖುಷಿಯಾಗುವುದು. ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಆಸೆ ಇರುವುದು.

ಲೋಹಿತ ಹೆಬ್ಬಾರ್ – 8762924271 (what’s app only)

Source link

ಶಿವರಾತ್ರಿಗೆ ಬಿಡುಗಡೆ ಆಯ್ತು ‘ನಾಗಬಂಧಂ’ ಸಿನಿಮಾ ಟೀಸರ್ – Kannada News | Nagabandam Telugu pan India movie teaser released by Mahesh Babu

ಚಿತ್ರರಂಗದಲ್ಲಿ ಇತ್ತೀಚೆಗೆ ಪೌರಾಣಿಕ ಕತೆಗಳನ್ನು ಆಧರಿಸಿದ ಸಿನಿಮಾಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ಬಿಡುಗಡೆ ಆಗಿರುವ ಪೌರಾಣಿಕ ಕತೆಯುಳ್ಳ ಸಿನಿಮಾಗಳು, ಫ್ಯಾಂಟೆಸಿ ಬೆರೆತ ಪೌರಾಣಿಕ ಕತೆಯ ಸಿನಿಮಾಗಳು ಹಿಟ್-ಸೂಪರ್ ಹಿಟ್ ಆಗಿದ್ದೇ ಇದಕ್ಕೆ ಮೂಲ ಕಾರಣ. ಇದೇ ಸಿನಿಮಾ ಸರಣಿಗೆ ಸೇರಿದ ಹೊಸ ಸಿನಿಮಾ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ ‘ನಾಗಬಂಧಂ’. ಶಿವರಾತ್ರಿ ಪ್ರಯುಕ್ತ ‘ನಾಗಬಂಧಂ’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಟಾಲಿವುಡ್ ಸೂಪರ್​​ಸ್ಟಾರ್ ಮಹೇಶ್ ಬಾಬು ಅವರು ಟೀಸರ್ ಬಿಡುಗಡೆ ಮಾಡಿದ್ದಾರೆ.

ಸಿನಿಮಾದ ಟೀಸರ್ ಕುತೂಹಲ ಕೆರಳಿಸುವಂತಿದೆ. ಹಿಮಾಲಯದ ಹಿಮಚ್ಛಾದಿತ ಪರ್ವತಗಳು, ಹಳೆಯದಾದ ಮತ್ತು ಗುಪ್ತವಾಗಿರುವ ರಹಸ್ಯವೊಂದರ ಕಾವಲುಗಾರನ ಕಥೆ. ಅಫ್ಘಾನರ ಆಕ್ರಮಣ, ಇತಿಹಾಸ, ಆಧ್ಯಾತ್ಮಿಕ, ಪೌರಾಣಿಕಗಳ ಜೊತೆಗೆ ಫ್ಯಾಂಟಸಿ, ಮೈನವಿರೇಳಿಸುವ ಯುದ್ಧ, ಅದ್ಭುತ ವಿಎಫ್​​ಎಕ್ಸ್​​ಗಳನ್ನು ಟೀಸರ್ ಒಳಗೊಂಡಿದೆ. ಸಿನಿಮಾದ ಕತೆಯ ಕೇಂದ್ರಬಿಂದು ‘ನಾಗಬಂಧಂ ದೇವಾಲಯ’. ದೈವಿಕ ಶಕ್ತಿಗಳಿಂದ ರಕ್ಷಿಸಲ್ಪಟ್ಟಿರುವ ಈ ಗುಪ್ತ ದೇವಾಲಯವು ಬ್ರಹ್ಮಾಂಡದ ಪ್ರಚಂಡ ಶಕ್ತಿಯನ್ನು ತನ್ನ ಒಡಲಲ್ಲಿಟ್ಟುಕೊಂಡಿದೆ. ಈ ಶಕ್ತಿಯು ತಪ್ಪು ಕೈ ಸೇರಿದರೆ ಸಂಭವಿಸಬಹುದಾದ ವಿನಾಶವನ್ನು ತಡೆಯಲು ವಿಧಿಯು ಒಬ್ಬ ಯೋಧನನ್ನು ಹೇಗೆ ಆಯ್ಕೆ ಮಾಡುತ್ತದೆ ಎಂಬುದು ಈ ಸಿನಿಮಾದ ಒನ್​​ಲೈನರ್. ಅಭಿಷೇಕ್ ನಾಮಾ ಸಿನಿಮಾವನ್ನು ನಿರ್ದೇಶಿಸಿದ್ದಾರೆ.ಕಿಶೋರ್ ಅನ್ನಪುರೆಡ್ಡಿ ಮತ್ತು ನಿಶಿತಾ ನಾಗಿರೆಡ್ಡಿ ಅವರುಗಳು ದೊಡ್ಡ ಮಟ್ಟದಲ್ಲಿ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರದ ನಾಯಕನಾಗಿ ವಿರಾಟ್ ಕರ್ಣ ನಟಿಸಿದ್ದು, ಸಿನಿಮಾದ ಪಾತ್ರಕ್ಕಾಗಿ ತಮ್ಮ ದೇಹವನ್ನು ಹುರಿಗಟ್ಟಿಸಿಕೊಂಡಿದ್ದಾರೆ ಅವರು. ಸಿನಿಮಾನಲ್ಲಿ ಹಲವು ಸಾಹಸಗಳ ಜೊತೆಗೆ ಮೊಸಳೆಯ ಜೊತೆಗಿನ ಹೋರಾಟ ಮತ್ತು ಭಗವಾನ್ ಶಿವನ ಅವತಾರದಲ್ಲಿ ಅವರ ಲುಕ್ ಟೀಸರ್‌ನ ಹೈಲೈಟ್ಗಳಲ್ಲಿ ಒಂದಾಗಿದೆ. ಸಿನಿಮಾಕ್ಕೆ ಸೌಂದರ್ ರಾಜನ್ ಎಸ್ ಅವರ ಸಿನಿಮಾಟೋಗ್ರಫಿ ಇದೆ. ಜುನೈದ್ ಕುಮಾರ್ ಅವರ ಹಿನ್ನೆಲೆ ಸಂಗೀತ ನೀಡಿದ್ದಾರೆ. ಅಶೋಕ್ ಕುಮಾರ್ ಅವರ ಕಲಾ ನಿರ್ದೇಶನ ಮತ್ತು ಅತ್ಯುನ್ನತ ಮಟ್ಟದ ವಿಎಫ್‌ಎಕ್ಸ್ ಚಿತ್ರದ ಗಾಂಭೀರ್ಯವನ್ನು ಹೆಚ್ಚಿಸಿವೆ. ಕಥೆ, ಚಿತ್ರಕಥೆ ಮತ್ತು ನಿರ್ದೇಶನದ ಜವಾಬ್ದಾರಿ ಅಭಿಷೇಕ್ ನಾಮಾ ಅವರದ್ದು. ಅಬೆ ಮತ್ತು ಜುನೈದ್ ಕುಮಾರ್ ಅವರ ಸಂಗೀತ, ಆರ್‌ಸಿ ಪ್ರಣವ್ ಅವರ ಸಂಕಲನ ಚಿತ್ರಕ್ಕಿದೆ.

ಸಿನಿಮಾನಲ್ಲಿ ನಾಯಕಿಯಾಗಿ ನಭಾ ನಟೇಶ್ ಮತ್ತು ಐಶ್ವರ್ಯ ಮೆನನ್ ಮಿಂಚಿದ್ದಾರೆ. ಪೋಷಕ ಪಾತ್ರಗಳಲ್ಲಿ ಮಹೇಶ್ ಮಂಜ್ರೇಕರ್, ಜಗಪತಿ ಬಾಬು, ರಿಷಬ್ ಸಾಹ್ನಿ, ‘ಕೆಜಿಎಫ್’ ಖ್ಯಾತಿಯ ಗರುಡ ರಾಮ್, ಮುರಳಿ ಶರ್ಮ ಮತ್ತು ಅನಸೂಯ ಭಾರದ್ವಾಜ್ ಅವರಂತಹ ಅನುಭವಿ ಕಲಾವಿದರು ಈ ಚಿತ್ರಕ್ಕೆ ಬಲ ತುಂಬಿದ್ದಾರೆ. ಈ ಬೇಸಿಗೆಯಲ್ಲಿ ‘ನಾಗಬಂಧಂ’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲು ಸಜ್ಜಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು: ಹುಟ್ಟಿಸಿದ ತಂದೆ-ತಾಯಿಯನ್ನೇ ಕೊಂದವನ ಕೈಯಲ್ಲೇ ಅಂತ್ಯಸಂಸ್ಕಾರ! – Kannada News | Court Gives permissions Killer Son to performed Mother And Father last rights at bengaluru

ಬೆಂಗಳೂರು, (ಫೆಬ್ರವರಿ 15): ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು (Father And Mother) ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿತ್ತು. ನೌಕಾಪಡೆಯ ನಿವೃತ್ತ ಕ್ಯಾಪ್ಟನ್‌ ನವೀನ್ ಚಂದ್ರ ಭಟ್ ಹಾಗೂ ಪತ್ನಿ ದಂತ ವೈದ್ಯೆಯಾಗಿದ್ದ ಡಾ.ಶ್ಯಾಮಲಾ ಭಟ್​​​ ನನ್ನು ಪುತ್ರ ರೋಹನ್ ಭಟ್ ಬರ್ಬರವಾಗಿ ಹತ್ಯೆ ಮಾಡಿದ್ದ. ಈ ಜೋಡಿ ಕೊಲೆಗೆ ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿತ್ತು. ಆದ್ರೆ, ಇದೀಗ ಅದೇ ಪುತ್ರ ರೋಹನ್, ತಂದೆ ತಾಯಿ ಅಂತ್ಯಕ್ರಿಯೆ ನೆರವೇರಿಸಿದ್ದಾನೆ.

ಹೌದು.. ನೌಜಾಪಡೆ ನಿವೃತ್ತ ಅಧಿಕಾರಿ ನವೀನ್‌ಚಂದ್ರ ಭಟ್‌ ಮತ್ತು ಅವರ ಪತ್ನಿ ಡ. ಶ್ಯಾಮಲಾ ಭಟ್‌ ಅವರನ್ನು ಕೊಲೆಗೈದಿದ್ದ ಪುತ್ರ ರೋಹನ್‌ ಭಟ್‌, ಕೋರ್ಟ್ ಅವಕಾಶ ನೀಡಿದ ಹಿನ್ನೆಲೆಯಲ್ಲಿ ವಿಲ್ಸನ್‌ಗಾರ್ಡನ್‌ ಚಿತಾಗಾರದಲ್ಲಿ ಪೊಲೀಸರ ಸಮ್ಮುಖದಲ್ಲಿ ಇಂದು (ಫೆಬ್ರವರಿ 14) ಪೋಷಕರ ಅಂತ್ಯಕ್ರಿಯೆ ನೆರವೇರಿಸಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಹೆತ್ತ ತಂದೆ-ತಾಯಿಯನ್ನೇ ಕೊಂದ ಮಗ

ರೋಹನ್‌ ಭಟ್‌ ಮಾನಸಿಕ ಅಸ್ವಸ್ಥನಾಗಿದ್ದ ಕಾರಣ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಪಿಯ ಸಹೋದರಿ ಅಮೆರಿಕದಿಂದ ಅಂತ್ಯಕ್ರಿಯೆಗೆ ಬಂದಿದ್ದರು. ಆಗ ಆಕೆ, ತನ್ನ ತಂದೆ-ತಾಯಿಯ ಅಂತಿಮ ವಿಧಿವಿಧಾನಗಳನ್ನು ಸಹೋದರ ರೋಹನ್‌ ನೆರವೇರಿಸಬೇಕು. ಇದು ನಮ್ಮ ಪೋಷಕರ ಇಚ್ಛೆಯಾಗಿತ್ತು ಎಂದು ಪೊಲೀಸರಿಗೆ ತಿಳಿಸಿದ್ದರು. ಜೊತೆಗೆ, ನ್ಯಾಯಾಲಯಕ್ಕೂ ಮನವಿ ಮಾಡಿದ್ದರು. ಈ ಮನವಿಗೆ ಕೋರ್ಟ್ ಸಹ ಸ್ಪಂದಿಸಿದ್ದು, ಹಂತಕ ರೋಹನ್​​​ ಗೆ ಅಂತ್ಯಕ್ರಿಯೆ ನಡೆಸಲು ಅನುಮತಿ ನೀಡಿದೆ.

ನ್ಯಾಯಾಲಯದ ಅನುಮತಿ ಮೇರೆಗೆ ಎಚ್‌ಎಎಲ್‌ ಪೊಲೀಸರು ಅಂತ್ಯಕ್ರಿಯೆಗೆ ರೋಹನ್‌ ಭಟ್‌ನನ್ನು ಕರೆಸಿದ್ದರು. ಆರೋಪಿ ರೋಹನ್‌ ಭಟ್‌, ವಿಲ್ಸನ್‌ಗಾರ್ಡನ್‌ ಚಿತಾಗಾರದಲ್ಲಿ ಅಂತಿಮ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಿದ. ಬಳಿಕ ಪೊಲೀಸರು ಆರೋಪಿಯನ್ನು ಕರೆದೊಯ್ದರು.

ಸದ್ಯ ಆರೋಪಿ ರೋಹನ್ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಎನ್ನುವುದು ಗೊತ್ತಾಗಿದೆ. ಕಳೆದ ಕೆಲಸ ವರ್ಷಗಳಿಂದ ಸ್ಕಿಜೋಫ್ರೇನಿಯಾದ ಎಂಬ ಮನೋ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಸಹ ಪಡೆಯುತ್ತಿದ್ದಾನಂತೆ. ಇದೇ ಕಾರಣದ ಹಿನ್ನಲೆ ವಿದೇಶದಿಂದ ಕೆಲಸ ತ್ಯಜಿಸಿ ವಾಪಾಸ್ ಬಂದು ಬೆಂಗಳೂರಿನಲ್ಲಿ ಅಪ್ಪ-ಅಮ್ಮನ ಜೊತೆ ನೆಲೆಸಿದ್ದನಂತೆ.

ಅದೇನೆ ಇರಲಿ ತಂದೆ-ತಾಯಿ ಕಳೆದಕೊಂಡ ಸಹೋದರಿ, ಒಂದೆಡೆ ಅಪ್ಪ-ಅಮ್ಮನ ಕಳೆದುಕೊಂಡಿದ್ರೆ, ಇತ್ತ ಸೋದರ ಜೈಲು ಸೇರುವಂತಾಗಿರುವುದು ಕಂಗಲಾಗುವಂತೆ ಮಾಡಿದೆ.

ಘಟನೆ ಹಿನ್ನೆಲೆ

ಕಳೆದ ಬುಧವಾರ (ಫೆ.11)ರಂದು ಬೆಂಗಳೂರಿನ ಎಚ್‌ಎಎಲ್‌ ಬಳಿಯ ವಿಜ್ಞಾನ ನಗರದಲ್ಲಿ, ಮಗನಿಂದಲೇ ಆತನ ತಂದೆ-ತಾಯಿಯ ಹತ್ಯೆ ನಡೆದಿತ್ತು. ನಾಲ್ಕು ಲಕ್ಷ ರೂ. ಹಣಕಾಸಿನ ವಿಚಾರಕ್ಕೆ ರೋಹನ್‌ ಭಟ್‌ (33) ಎಂಬಾತ ತನ್ನ ಪೋಷಕರಾದ ನೌಕಾಪಡೆ ನಿವೃತ್ತ ಅಧಿಕಾರಿ ನವೀನ್‌ಚಂದ್ರ ಭಟ್‌ ಮತ್ತು ತಾಯಿ ಡಾ. ಶ್ಯಾಮಲಾ ಭಟ್‌ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದ ನವೀನ್‌ಚಂದ್ರ ಭಟ್‌ (60) ಭಾರತೀಯ ನೌಕಾಪಡೆಯಿಂದ ಕ್ಯಾಪ್ಟನ್‌ ಆಗಿ ಕೇವಲ ಆರು ವರ್ಷಗಳ ಹಿಂದಷ್ಟೇ ನಿವೃತ್ತಿ ಹೊಂದಿದ್ದರು. ಅವರ ಪತ್ನಿ ಡಾ. ಶ್ಯಾಮಲಾ ಭಟ್‌ ದಂತ ವೈದ್ಯೆಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs PAK: ಕೊಲಂಬೊದಲ್ಲಿ ಕಕ್ಕಾಬಿಕ್ಕಿಯಾದ ಪಾಕಿಸ್ತಾನ; ಭಾರತಕ್ಕೆ 61 ರನ್ ಜಯ – Kannada News | T20 World Cup 2026: India Crushes Pakistan in Colombo; Ishan Kishan Shines with 175 Runs

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026) ಭಾರತ ಹಾಗೂ ಪಾಕಿಸ್ತಾನ (India vs Pakistan) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಇಶಾನ್ ಕಿಶನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 175 ರನ್ ಕಲೆಹಾಕಿ, ಪಾಕಿಸ್ತಾನಕ್ಕೆ 176 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ, ಭಾರತದ ಕರಾರುವಕ್ಕಾದ ದಾಳಿಗೆ ಕಕ್ಕಾಬಿಕ್ಕಿಯಾಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ 114 ರನ್​ಗಳಿಗೆ ಆಲೌಟ್ ಆಯಿತು.

Source link

ನಮಾಜ್ ವೇಳೆ ಶಾಂತಿ ಇರಬೇಕಾದ ಮಸೀದಿಯೊಳಗೇ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ – Kannada News | Assault On Boy In Mosque at Mysuru, captured on CCTV

ಮೈಸೂರು, (ಫೆಬ್ರವರಿ 15): ನಮಾಜ್ ಸಮಯದಲ್ಲಿ ಮಸೀದಿಯಲ್ಲಿ (Mosque) ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಮೈಸೂರಿನ (Mysuru) ಎನ್ ಆರ್ ಮೊಹಲ್ಲಾದ ಮಸೀದಿಯಲ್ಲಿ ನಡೆದಿದೆ. ಫೆಬ್ರವರಿ 13 ಶುಕ್ರವಾರ ನಮಾಜ್ ವೇಳೆ ಮೊದಲು ಮಾತಿನ ಜಗಳ ನಡೆದಿದ್ದು, ಬಳಿಕ ಬಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಇದಕ್ಕಿಂತಲೂ ಕ್ರೂರವಾಗಿ ಕಾಲಿನಿಂದ ಒದ್ದು ಕ್ರೌರ್ಯ ಮೆರೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋದಲ್ಲಿ ಬಾಲಕನನ್ನು ಅಟ್ಟಾಡಿಸಿ ಹಲ್ಲೆ ಮಾಡುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ಕಾಣುತ್ತಿವೆ.

ಘಟನೆ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಹಲ್ಲೆ ಮಾಡಿದವರು ಅವೇಜ್, ಪರವೇಜ್, ಜಹೀದ್ ಹಾಗೂ ಉಮ್ಮರ್ ಅನ್ನೋ ಆರೋಪ ಕೇಳಿ ಬಂದಿದೆ. ಈ ತಂಡದಲ್ಲಿ ರೌಡಿಶೀಟರ್ ಒಬ್ಬ ಇದ್ದಾನೆ ಅನ್ನೋದು ಬಾಲಕನ ತಂದೆಯ ಗಂಭೀರ ಆರೋಪ. ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದವರು ಎಸ್ಕೇಪ್ ಆಗಿದ್ದಾರೆ. ನಶೆಯಲ್ಲಿ ಹಲ್ಲೆ ಮಾಡಿದ್ದಾರೆ ಅನ್ನೋ ಆರೋಪದ ಮೇಲೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಂಗೋಲಿ ಹಾಕ್ತಿದ್ದ ಮಹಿಳೆಯರ ಸರ ಎಗರಿಸಿದ ಖದೀಮರು: ಕದ್ದ ಬೈಕ್​​ನಲ್ಲೇ ಬಂದು ಕೃತ್ಯ

ಪವಿತ್ರ ಸ್ಥಳದಲ್ಲಿ ಇಂಥ ಕೃತ್ಯ ನಡೆದಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ ಅಷ್ಟೇ ಅಲ್ಲ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಬಾಲಕನ ಮೇಲೆ ಹಲ್ಲೆ ಮಾಡಿದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು ಅನ್ನೋದು ಸ್ಥಳೀಯರ ಒತ್ತಾಯವಾಗಿದೆ.

ಮಸೀದಿಯೊಳಗೆ ಬಾಲಕನ ಮೇಲೆ ಹಲ್ಲೆ ನಡೆದಿರುವ ಪ್ರಕರಣ ಮೈಸೂರಿನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಬೇಕಿದೆ. ಆಗ ಮಾತ್ರ ಇಂತಹ ಘಟನೆಗಳಿಗೆ ಕಡಿವಾಣ ಹಾಕಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗಣೇಶ್ ಸಿನಿಮಾ ಜರ್ನಿಗೆ 20 ವರ್ಷ, ಸಿನಿಮಾ ಮೂಲಕ ವಿಶಿಷ್ಟ ಗೌರವ – Kannada News | Golden star Ganesh new movie Sukagamana Bayasuva starts shooting

‘ಗೋಲ್ಡನ್ ಸ್ಟಾರ್’ ಎನಿಸಿಕೊಂಡಿರುವ ಗಣೇಶ್ (Ganesh), ಕನ್ನಡ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರು. ಹೊಡಿ-ಬಡಿ ಹೀರೋಗಳ ನಡುವೆ ಅಪ್ಪಟ ಕೌಟುಂಬಿಕ ನಾಯಕನಾಗಿ ಮಿಂಚುತ್ತಿರುವ ಗಣೇಶ್ ಅವರಿಗೆ ಅವರದ್ದೇ ಆದ ಅಭಿಮಾನಿ ವರ್ಗವಿದೆ. ಅದರಲ್ಲೂ ಗಣೇಶ್​​ಗೆ ಮಹಿಳಾ ಅಭಿಮಾನಿಗಳ ಸಂಖ್ಯೆ ದೊಡ್ಡದಾಗಿದೆ. ಟಿವಿ ಆಂಕರ್ ಆಗಿದ್ದ ಗಣೇಶ್ ಅವರು ಅವರು ಬೆಳ್ಳಿತೆರೆಯಲ್ಲಿ ಮಿಂಚಲು ಆರಂಭಿಸಿ ಈಗ ಯಶಸ್ವಿ 20 ವರ್ಷಗಳು ಸಂದಿವೆ. ಗಣೇಶ್ ಅವರ ಜರ್ನಿ ಅದ್ಭುತವಾದುದು, ಹಲವು ಏರಿಳಿತಗಳಿಂದ ಕೂಡಿದ್ದು ಮತ್ತು ಹಲವಾರು ಮಂದಿಗೆ ಸ್ಪೂರ್ತಿ ಆಗಬಹುದಾದಂಥಹ ಪಯಣ ಅವರದ್ದು. ಗಣೇಶ್ ಅವರ ಈ ಸಿನಿ ಜರ್ನಿಗೆ ಟ್ರಿಬ್ಯೂಟ್ (ವಿಶೇಷ ಗೌರವ) ಅನ್ನು ಸಿನಿಮಾ ಮೂಲಕ ನೀಡಲಾಗುತ್ತಿದೆ. ಆ ಸಿನಿಮಾ ‘ತಮ್ಮ ಸುಖಾಗಮನ ಬಯಸುವ’.

ಗಣೇಶ್ ಅವರು ‘ತಮ್ಮ ಸುಖಾಗಮನ ಬಯಸುವ’ ಹೆಸರಿನ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದು, ಸಿನಿಮಾದ ಮುಹೂರ್ತವನ್ನು ಶಿವರಾತ್ರಿ ಪ್ರಯುಕ್ತ ಇಂದು (ಫೆಬ್ರವರಿ 15) ಮಾಡಲಾಯ್ತು. ಗಣೇಶ್ ಅವರ ಪತ್ನಿ ಶಿಲ್ಪಾ ಅವರು ಕ್ಲಾಪ್ ಮಾಡಿ ಸಿನಿಮಾಕ್ಕೆ ಚಾಲನೆ ನೀಡಿದ್ದು ವಿಶೇಷ. ಈ ಚಿತ್ರವನ್ನು ಪ್ರತಿಭಾವಂತ ನಿರ್ದೇಶಕ ದೀಪಕ್ ಗಂಗಾಧರ್ ನಿರ್ದೇಶಿಸುತ್ತಿದ್ದಾರೆ. ಗಣೇಶ್ ಅವರ ವೃತ್ತಿಜೀವನದ ಮೈಲಿಗಲ್ಲನ್ನು ಸಂಭ್ರಮಿಸುವ ಉದ್ದೇಶದಿಂದಲೇ ಈ ಚಿತ್ರವನ್ನು ಬಹಳ ಕಾಳಜಿಯಿಂದ ರೂಪಿಸಲಾಗಿದೆ ಎಂದಿದ್ದಾರೆ ನಿರ್ದೇಶಕ. ಚಿತ್ರದ ಶೀರ್ಷಿಕೆಯೇ ಬಹಳ ವಿಭಿನ್ನವಾಗಿದ್ದು, ಗಣೇಶ್ ಅವರ ಎಂದಿನ ಲವಲವಿಕೆಯ ಮತ್ತು ಎಮೋಷನಲ್ ಶೈಲಿಯ ಅಭಿನಯವನ್ನು ಈ ಚಿತ್ರದಲ್ಲಿ ನಿರೀಕ್ಷಿಸಬಹುದಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು: ಗಣೇಶ್ ಮರ್ಡರ್​​ ಕೇಸ್​​ನಲ್ಲಿ ಬಜರಂಗದಳ ಕಾರ್ಯಕರ್ತ ಅರೆಸ್ಟ್​​

ನಟ ಗಣೇಶ್ ಮಾತನಾಡಿ, ‘ನನಗೆ ಗೊತ್ತಿರಲಿಲ್ಲ 20ವರ್ಷ ಆಯಿತು ಇಂಡಸ್ಟ್ರಿ ಗೆ ಬಂದು ಅಂತ, ನಾನು ಬೆಂಗಳೂರಿಗೆ ಬಂದಾಗ 19 ವರ್ಷ ವಯಸ್ಸು ಅಷ್ಟೆ, ನಟ ಆಗಬೇಕು ಅಂತ ಬಂದಿದ್ದೆ, 2006ರಲ್ಲಿ ‘ಮುಂಗಾರು ಮಳೆ’ ಸಿನಿಮಾ ಆಗಿದ್ದು, ಗೆಲುವನ್ನ ತಲೆ ಮೇಲೆ ಹೊತ್ತುಕೊಂಡು ಹೋಗಲ್ಲ, ಹಿಟ್, ಫ್ಲಾಪ್ ಎಲ್ಲಾ ಬ್ಯಾಲೆನ್ಸ್ ಮಾಡ್ತೀನಿ. ಈ ವರೆಗೆ ನಾನು 45 ಸಿನಿಮಾಗಳಲ್ಲಿ ನಟಿಸಿದ್ದೀನಿ, ಎಲ್ಲ ಸಿನಿಮಾಗಳನ್ನೂ ಸಹ ಇಷ್ಟಪಟ್ಟೇ ನಟಿಸಿದ್ದೀನಿ’ ಎಂದಿದ್ದಾರೆ. ಮುಂದುವರೆದು ಮಾತನಾಡಿ, ‘ರಾಮೇನಹಳ್ಳಿ ಜಗನ್ನಾಥ್ ಸಿನಿಮಾ ಟೈಟಲ್ ಗಳನ್ನ ಚೆನ್ನಾಗಿ ಇಡುತ್ತಾರೆ. ಹ್ಯೂಮನ್ ಎಮೋಷನ್ಸ್​​ಗಳನ್ನು ಹೊಂದಿರುವ ಸಿನಿಮಾ ಇದಾಗಿದೆ. ಈ ಸಿನಿಮಾಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶಕರಾಗಿದ್ದು, ನನ್ನ ಅರ್ಜುನ್ ಜನ್ಯ ಕಾಂಬಿನೇಶನ್ ನಲ್ಲಿ ಒಳ್ಳೆಯ ಹಾಡುಗಳು ಬಂದಿವೆ, ಈ ಸಿನಿಮಾನಲ್ಲೂ ಅದೇ ರಿಪೀಟ್ ಆಗುವ ವಿಶ್ವಾಸ ಇದೆ’ ಎಂದಿದ್ದಾರೆ ಗಣೇಶ್.

“ಗಣೇಶ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಅಪಾರ. ‘ಮುಂಗಾರು ಮಳೆ’ಯಿಂದ ಆರಂಭವಾದ ಅವರ ಮೋಡಿ ಇಂದಿಗೂ ಮುಂದುವರಿದಿದೆ. ಅವರ 20 ವರ್ಷಗಳ ಈ ಸುದೀರ್ಘ ಜರ್ನಿಯನ್ನು ಸಂಭ್ರಮಿಸಲು ‘ತಮ್ಮ ಸುಖಾಗಮನ ಬಯಸುವ’ ಚಿತ್ರವು ಸೂಕ್ತ ವೇದಿಕೆಯಾಗಲಿದೆ. ಈ ಸಿನಿಮಾ ಗಣೇಶ್ ಅವರ ಅಭಿಮಾನಿಗಳಿಗೆ ಹಬ್ಬದಂತಿರಲಿದೆ, ಸಿನಿಮಾದ ಹೆಸರು ಆಹ್ವಾನ ನೀಡುವಂತಿರಬೇಕು ಎಂದು ಈ ಹೆಸರಿಟ್ಟಿದ್ದೇವೆ’ ಎಂದು ನಿರ್ದೇಶಕ ದೀಪಕ್ ಗಂಗಾಧರ್ ಹೇಳಿದ್ದಾರೆ. ಈ ಚಿತ್ರವನ್ನು ಖ್ಯಾತ ವಿತರಕ ಮತ್ತು ನಿರ್ಮಾಪಕ ಕಾರ್ತಿಕ್ ಗೌಡ ಅವರ ‘ಕೆಆರ್‌ಜಿ ಸ್ಟುಡಿಯೋಸ್’ (KRG Studios) ಪ್ರಸ್ತುತಪಡಿಸುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಗ್ಯಾಸ್ ಸೋರಿಕೆ: ಬೆಂಕಿಯ ಫೋರ್ಸ್‌ಗೆ ಇಡೀ ಮನೆಯೇ ಛಿದ್ರ ಛಿದ್ರ

ಬೆಂಗಳೂರು, (ಫೆಬ್ರವರಿ 15): ಗ್ಯಾಸ್​ ಸಿಲಿಂಡರ್​ ಸೋರಿಕೆಯಾಗಿ ಸ್ಫೋಟವಾಗಿರುವ ಘಟನೆ ಬೆಂಗಳೂರಿನ ಯಲಹಂಕದ ಚೌಡೇಶ್ವರಿ ಲೇಔಟ್​​ನ ಮನೆಯೊಂದರಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆ ಗೋಡೆ ಛಿದ್ರವಾಗಿದ್ದು, ಘಟನೆಯಲ್ಲಿ ಬಾಗೇಪಲ್ಲಿ ಮೂಲದ ದಂಪತಿ ರಾಜು, ಕೃಷ್ಣಮ್ಮಗೆ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಈ ವಿಚಾರ ತಿಳಿದು ಸ್ಥಳಕ್ಕೆ ಯಲಹಂಕ ಠಾಣೆಯ ಪೊಲೀಸರ ಭೇಟಿ ನೀಡಿದ ಪರಿಶೀಲಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರಾಯಚೂರು: ಅಕ್ರಮ ಮರಳುಗಾರಿಕೆ ಮಟ್ಟಹಾಕಲು ಜಿಲ್ಲಾಡಳಿತ ಸನ್ನದ್ಧ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ – Kannada News | Raichur Fights Illegal Sand Mining: District Administration Alerts After MLA Complaint

ರಾಯಚೂರು, ಫೆಬ್ರವರಿ 15: ಗಡಿ ಜಿಲ್ಲೆ ರಾಯಚೂರಿನಲ್ಲಿ ಅಕ್ರಮ ಮರಳು ದಂಧೆಗೆ (Illegal Sand Mining) ಜನ ರೋಸಿ ಹೋಗಿದ್ದು, ಸರಣಿ ಅಕ್ರಮಗಳು ಬಿಚ್ಚಿಕೊಳ್ಳುತ್ತಿವೆ. ಈ ಬಗ್ಗೆ ಇತ್ತೀಚೆಗೆ ಖುದ್ದು ಶಾಸಕಿ ಕರೆಮ್ಮಾ ಜಿ ನಾಯಕ್ ಜಿಲ್ಲಾಧಿಕಾರಿ ಮತ್ತು ಎಸ್​​ಪಿಗೆ ದೂರು ನೀಡಿದ್ದರು. ಇದೇ ಕಾರಣಕ್ಕೆ ಇದೀಗ ಅಕ್ರಮ ಮರಳುಗಾರಿಕೆ ಮಟ್ಟಹಾಕಲು ಜಿಲ್ಲಾಡಳಿತ ಅಲರ್ಟ್ ಆಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೇ ಶಿಸ್ತುಕ್ರಮಕ್ಕೆ ಸಜ್ಜಾಗಿದೆ.

ರಾಯಚೂರು ಜಿಲ್ಲೆಯಲ್ಲಿ ತುಂಗಭದ್ರಾ ಹಾಗೂ ಕೃಷ್ಣಾ ನದಿ ಹರಿಯುತ್ತವೆ. ಎರಡು ನದಿಗಳ ಒಡಲನ್ನ ಬಗೆದು ಅಕ್ರಮ ಮರಳುಗಾರಿಕೆ ನಡೆಸೋದು ಜಿಲ್ಲೆಯಲ್ಲಿ ಮಾಮೂಲಾಗಿದೆ. ಅಕ್ರಮ ಮರಳು ದಂಧೆ ಮಿತಿಮೀರಿ ಹೋಗಿರುವ ಹಿನ್ನೆಲೆ ಸಾರ್ವಜನಿಕರು ಕೂಡ ಈ ಅಕ್ರಮದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಇದನ್ನೂ ಓದಿ: ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ

ನದಿ ಒಡಲನ್ನ ಮನಸೋ ಇಚ್ಛೆ ಬಗೆದು ಮರಳುಗಾರಿಕೆ ನಡೆಸೋದರ ವಿರುದ್ಧ ಸರಣಿ ಆರೋಪಗಳು ಕೇಳಿಬರುತ್ತಲೇ ಇವೆ. ಇತ್ತೀಚೆಗೆ ದೇವದುರ್ಗ ಶಾಸಕಿ ಕರೆಮ್ಮಾ ನಾಯಕ್, ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ್ರು. ಅಕ್ರಮ ಮರಳು ದಂಧೆ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೂ ಮನವಿ ಸಲ್ಲಿಸಿದ್ದರು. ಇದಾದ ಬಳಿಕವೂ ಅಕ್ರಮ ಮರಳು ದಂಧೆ ಸೈಲೆಂಟ್​​ ಆಗಿ ಚಾಲ್ತಿಯಲ್ಲಿದೆ. ಹೀಗಾಗಿ ಅಕ್ರಮ ಮರಳುಗಾರಿಕೆ ಮಟ್ಟಹಾಕಲು ಜಿಲ್ಲಾಡಳಿತ ಮುಂದಾಗಿದೆ.

60ಕ್ಕೂ ಹೆಚ್ಚು ಕೇಸ್​ ದಾಖಲು

ಸದ್ಯ ಜಿಲ್ಲೆಯಲ್ಲಿ 2026ರಲ್ಲಿ ಈವರೆಗೆ ಸುಮಾರು 60ಕ್ಕೂ ಹೆಚ್ಚು ಅಕ್ರಮ ಮರಳು ದಂಧೆ ಸಂಬಂಧ ದೇವದುರ್ಗ, ಮಾನ್ವಿ ಸೇರಿ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಇಷ್ಟಿದ್ದರೂ ಭಯ ಇಲ್ಲದೇ ದಂಧೆಕೋರರು ಅಕ್ರಮ ಮರಳು ಸಾಗಿಸುತ್ತಿರೋ ಆರೋಪಗಳು ಕೇಳಿಬರ್ತಿರೋದ್ರಿಂದ ಈಗ ಇಡೀ ಅಕ್ರಮದ ವಿರುದ್ಧ ಹದ್ದಿನ ಕಣ್ಣಿಡಲು ಜಿಲ್ಲಾಡಳಿತ ಮುಂದಾಗಿದೆ.

ಈ ದಂಧೆ ಮಟ್ಟಹಾಕಲು ಕಮಿಟಿ ರಚಿಸಲಾಗಿದ್ದು, ಇದರಲ್ಲಿ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರ್​ಟಿಓ, ಪೊಲೀಸ್ ಇಲಾಖೆ ಸೇರಿ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮರಳುಗಾರಿಕೆಗೆ ಕಾನೂನಿನ್ವಯ ಅನುಮತಿ ಕೊಡೋದೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆ. ಆದರೆ ರಾಯಚೂರಿನಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ದಂಧೆ ನಡಯುತ್ತಿದ್ರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಮಾತ್ರ ತಮಗೂ ಇದಕ್ಕೂ ಸಂಬಂಧವಿಲ್ಲವೆಂಬಂತ್ತಿರುವ ಗಂಭೀರ ಆರೋಪವಿದೆ.

ಅಧಿಕಾರಿಗಳ ವಿರುದ್ಧವೇ ಕ್ರಮ

ಎಲ್ಲಾ ಜವಾಬ್ದಾರಿಯನ್ನ ಪೊಲೀಸ್ ಇಲಾಖೆ ಹೆಗಲಿಗೆ ಹಾಕಿ ಕೈಕಟ್ಟಿ ಫಿಲ್ಡ್ ವರ್ಕ್ ಅಂತ ಸಾರ್ವಜನಿಕರಿಗೆ ಹೇಳುತ್ತಾ ಓಡಾಡ್ತಿದ್ದಾರಂತೆ. ಅಸಲಿಗೆ ಅಕ್ರಮ ಮರಳು ದಂಧೆಯನ್ನ ಗುರುತು ಮಾಡಬೇಕಿರುವ ಗಣಿ ಮತ್ತು ಭೂ ವಿಜ್ಣಾನ ಇಲಾಖೆ. ಆದರೆ ಈ ಕೆಲಸವನ್ನ ಪೊಲೀಸ್ ಇಲಾಖೆ ಮಾಡ್ತಿದೆ. ಈ ಬಗ್ಗೆಯೂ ಪ್ರಸ್ತಾಪಿಸಿರೋ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್, ಸಮನ್ವಯದಿಂದ ಕಾರ್ಯನಿರ್ವಹಿಸದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗತ್ತೆ. ಅಂಥ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ತಾರೆ ಅಂತ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಅಕ್ರಮ ಮರಳು ದಂಧೆ ವಿರುದ್ಧ ಸಮರ ಸಾರಿದ ಜೆಡಿಎಸ್​ ಶಾಸಕಿ ಮನೆಗೆ ನುಗ್ಗಿ ಧಮ್ಕಿ

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಮಟ್ಟಹಾಕಲು ಜಿಲ್ಲಾಡಳಿತ ಸಜ್ಜಾಗಿದ್ದು ಇದಕ್ಕೆ ಅಧಿಕಾರಿಗಳ ಹಂತದಲ್ಲಿ ಹೇಗೆ ಸ್ಪಂದನೆ ಸಿಗತ್ತೆ ಅನ್ನೋದು ಪ್ರಶ್ನೆ. ಏಕೆಂದರೆ ದಂಧೆಕೋರರಿಗೆ ಕೆಳ ಹಂತದ ಕೆಲ ಅಧಿಕಾರಿಗಳೇ ಸಾಥ್​ ಕೊಡ್ತಿರೋ ಆರೋಪಿಗಳು ಇರೋದ್ರಿಂದ ಇದನ್ನ ಜಿಲ್ಲಾಡಳಿತ ಹೇಗೆ ಎದುರಿಸತ್ತೆ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IND vs PAK: W,W,W,W.. ಪವರ್‌ಪ್ಲೇನಲ್ಲಿಯೇ ಪವರ್ ಕಳೆದುಕೊಂಡ ಪಾಕಿಸ್ತಾನ – Kannada News | India vs Pakistan T20 World Cup 2026: Pakistan Loses 4 Wickets in Powerplay

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026 ರ ಟಿ20 ವಿಶ್ವಕಪ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಇಶಾನ್ ಕಿಶನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 175 ರನ್ ಕಲೆಹಾಕಿ, ಪಾಕಿಸ್ತಾನಕ್ಕೆ 176 ರನ್​ಗಳ ಗುರಿ ನೀಡಿದೆ. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ಪವರ್‌ಪ್ಲೇನಲ್ಲಿಯೇ ತನ್ನ ಪವರ್ ಕಳೆದುಕೊಂಡಿದೆ. ಭಾರತದ ಬೌಲರ್​ಗಳ ದಾಳಿಗೆ ನಲುಗಿರುವ ಪಾಕಿಸ್ತಾನ ಮೊದಲ 6 ಓವರ್​ಗಳಲ್ಲಿ ತನ್ನ 4 ಪ್ರಮುಖ ವಿಕೆಟ್​ಗಳನ್ನು ಕಳೆದುಕೊಂಡು ಕೇವಲ 38 ರನ್ ಕಲೆಹಾಕಿದೆ.

Source link

Exit mobile version