Headlines

SRH vs LSG: ಲಕ್ನೋಗೆ ಮೊದಲ ಗೆಲುವು; ಭಾವುಕರಾದ ಮಾಲೀಕ ಸಂಜೀವ್ ಗೋಯೆಂಕಾ

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮಣಸಿದ ಲಕ್ನೋ ಸೂಪರ್​ಜೈಂಟ್ಸ್ ಈ ಆವೃತ್ತಿಯಲ್ಲಿ ತನ್ನ ಮೊದಲ ಗೆಲುವು ದಾಖಲಿಸಿತು. ಸನ್‌ರೈಸರ್ಸ್ ನೀಡಿದ 157 ರನ್​ಗಳ ಗುರಿಯನ್ನು ಬೆನ್ನಟ್ಟಲು ಸಾಕಷ್ಟು ಕಷ್ಟಪಟ್ಟ ಲಕ್ನೋ, ನಾಯಕ ರಿಷಭ್ ಪಂತ್ ಅವರ ತಾಳ್ಮೆಯ ಆಟದಿಂದಾಗಿ ಕೊನೆಯ ಓವರ್​ನಲ್ಲಿ ಗೆಲುವು ದಾಖಲಿಸಿತು. ಕೊನೆಯ ಓವರ್​ವರೆಗೂ ರೋಚಕತೆಯಿಂದ ಕೂಡಿದ ಈ ಪಂದ್ಯವನ್ನು ಲಕ್ನೋ ತಂಡ ಗೆಲ್ಲುತ್ತಿದ್ದಂತೆ ತಂಡದ ಮಾಲೀಕ…

Read More

ದುಬೈನಿಂದ ಬೆಂಗಳೂರಿಗೆ ಬಂದಿಳಿದ 5ನೇ ವಿಮಾನ: 3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್ – Kannada News | 5th Flight from Dubai Lands in Bengaluru; 1,500 Indians Return Safely in 3 Days Amid Iran Israel War

3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್Image Credit source: tv9 ಬೆಂಗಳೂರು, ಮಾರ್ಚ್ 5: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ದಾಳಿಯಿಂದ ದುಬೈ, ಅಬುಧಾಬಿ, ಜೆದ್ದಾ, ದೋಹಾ ಸೇರಿ ಹಲವೆಡೆ ವಿಮಾನ ನಿಲ್ದಾಣಗಳು ಬಂದ್ ಆಗಿವೆ. ಅಲ್ಲಿನ ಏರ್‌ಪೋರ್ಟ್‌ಗಳಲ್ಲೇ ಸಿಕ್ಕಿಹಾಕಿರುವ ಆಗಿರುವ ಸಾವಿರಾರು ಜನ ಪ್ರಯಾಣಿಕರನ್ನು ಕಳೆದ ಸೋಮವಾರ ರಾತ್ರಿಯಿಂದ ಎಮಿರೇಟ್ಸ್, ಎತಿಹಾದ್ ಮತ್ತು ಇಂಡಿಗೋ ಏರ್ಲೈನ್ಸ್‌ಗಳ ಮೂಲಕ ಬೆಂಗಳೂರಿಗೆ (Bangalore) ಕರೆತರಲಾಗುತ್ತಿದೆ. ದಿನಕ್ಕೆ ಒಂದು ಅಥವಾ ಎರಡು ವಿಮಾನಗಳು ದುಬೈ ಮತ್ತ…

Read More

2 ಲಕ್ಷಕ್ಕಾಗಿ 14 ವರ್ಷದ ಮಗಳನ್ನು ಕೋಲಾರದ 54 ವರ್ಷದ ವ್ಯಕ್ತಿಗೆ ಮಾರಿದ ತಾಯಿ! – Kannada News | Mother Sold 14 year old Daughter for Rs 2 Lakhs to 54 year Old Kolar Man in Andhra Pradesh

ಹೈದರಾಬಾದ್, ಫೆಬ್ರವರಿ 10: ಆಂಧ್ರಪ್ರದೇಶದ (Andhra Pradesh) ಅಣ್ಣಮಯ್ಯ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ತಾಯಿಯೊಬ್ಬಳು ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನು ಮಾರಾಟಕ್ಕೆ ಇಟ್ಟಿದ್ದಾರೆ. 2 ಲಕ್ಷ ರೂ.ಗೆ ತಾಯಿ ತನ್ನನ್ನೇ ನಂಬಿಕೊಂಡಿದ್ದ ಮಗಳ ಜೀವನವನ್ನೇ ಹಾಳು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪುಂಗನೂರಿನ ಬೀಡಿ ಕಾಲೋನಿಯ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ರಾಜಶೇಖರ್ ರೆಡ್ಡಿ ಎಂಬ 54 ವರ್ಷದ ವ್ಯಕ್ತಿಗೆ ಮಾರಾಟ ಮಾಡಲಾಗಿದೆ. ಬೀಡಿ ಕಾಲೋನಿಯಲ್ಲಿ ವಾಸಿಸುವ ರಾಮರಾಜು ಹಾಗೂ ಶೋಭಾ…

Read More

‘ಯುವಕರಿಗಾಗುತ್ತಿರುವ ಅನ್ಯಾಯ ನೋಡುತ್ತ ನಾವು ಸುಮ್ಮನಿರಲ್ಲ’: ಉದ್ಯೋಗಾಕಾಂಕ್ಷಿಗಳ ಸಮಸ್ಯೆ ಕುರಿತು ಪ್ರಧಾನಿಗೆ ಅರವಿಂದ ಬೆಲ್ಲದ್ ಪತ್ರ – Kannada News | MLA Bellad writes to PM modi on Dharwad Job Protest

‘ಯುವಕರಿಗಾಗುತ್ತಿರುವ ಅನ್ಯಾಯ ನೋಡುತ್ತ ನಾವು ಸುಮ್ಮನಿರಲ್ಲ’: ಉದ್ಯೋಗಾಕಾಂಕ್ಷಿಗಳ ಸಮಸ್ಯೆ ಕುರಿತು ಪ್ರಧಾನಿಗೆ ಅರವಿಂದ ಬೆಲ್ಲದ್ ಪತ್ರ ಧಾರವಾಡ, ಫೆಬ್ರವರಿ 27: ಕರ್ನಾಟಕದ ಅಸಂಖ್ಯಾತ ಯುವಕರು ನೌಕರಿಯ ಕೊರತೆ ಮತ್ತು ಆಡಳಿತಾತ್ಮಕ ಅಸಮರ್ಥತೆಯನ್ನು ಎದುರಿಸುತ್ತಿದ್ದಾರೆ. ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ನೇಮಕಾತಿಗಾಗಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ, ಉಪನಾಯಕ ಅರವಿಂದ ಬೆಲ್ಲದ್, ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಮತ್ತು ರಾಜ್ಯಪಾಲರಿಗೆ ಪತ್ರದ ಮೂಲಕ ಉದ್ಯೋಗಾಕಾಂಕ್ಷಿಗಳ ಸಮಸ್ಯೆಗಳನ್ನು ಬಿಚ್ಚಿಟ್ಟಿದ್ದಾರೆ. 2.86 ಲಕ್ಷ ಹುದ್ದೆಗಳ…

Read More

ಒಮಾನ್ ನಮ್ಮ ಆಯ್ಕೆಯಾಗಿರಲಿಲ್ಲ, ಐಆರ್​ಜಿಸಿ ಸೇನೆಯ ಅಂಗವಲ್ಲ, ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತೆ: ಇರಾನ್ ವಿದೇಶಾಂಗ ಸಚಿವ – Kannada News | Iran: IRGC Acted Independently in Oman Drone Attack, Foreign Minister Denies Govt Role

ಇರಾನ್ ವಿದೇಶಾಂಗ ಸಚಿವImage Credit source: China Daily ಒಮಾನ್, ಮಾರ್ಚ್​ 02: ಒಮಾನ್ ಮೇಲೆ ಇರಾನ್​​(Iran)ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಡ್ರೋನ್ ದಾಳಿ ನಡೆಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವ ಒಮಾನ್ ನಮ್ಮ ಆಯ್ಕೆಯಾಗಿರಲಿಲ್ಲ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಒತ್ತಿ ಹೇಳಿದ್ದಾರೆ. ಇರಾನಿನ ಕ್ರಾಂತಿಯ ನಂತರ ಮೇ 1979 ರಲ್ಲಿ ರುಹೊಲ್ಲಾ ಖೊಮೇನಿ ಸ್ಥಾಪಿಸಿದ ಐಆರ್​​ಜಿಸಿ, ಸಾಂಪ್ರದಾಯಿಕ ಇರಾನಿನ ಸೈನ್ಯದಿಂದ ಪ್ರತ್ಯೇಕವಾಗಿದೆ. ಅಮೆರಿಕ-ಇಸ್ರೇಲ್ ದಾಳಿಯ ಸಮಯದಲ್ಲಿ…

Read More

Money Plant Vastu: ಮನಿ ಪ್ಲಾಂಟ್‌ನ ಬುಡದಲ್ಲಿ ಒಂದು ನಾಣ್ಯ ಹೂತಿಡಿ; ಪ್ರಯೋಜನ ಸಾಕಷ್ಟಿವೆ – Kannada News | Money Plant Vastu: Place a Coin for Wealth and Prosperity Tips

ವಾಸ್ತು ಶಾಸ್ತ್ರದ ಪ್ರಕಾರ ಮನಿ ಪ್ಲಾಂಟ್ ಅನ್ನು ಅತ್ಯಂತ ಶುಭ ಸಸ್ಯವೆಂದು ಪರಿಗಣಿಸಲಾಗುತ್ತದೆ. ಇದನ್ನು ಸಂಪತ್ತನ್ನು ಆಕರ್ಷಿಸುವ ಸಸ್ಯ ಎಂದೂ ಹೇಳಲಾಗುತ್ತದೆ. ಮನಿ ಪ್ಲಾಂಟ್ ಗಿಡದ ಬುಡದಲ್ಲಿ ಒಂದು ರೂಪಾಯಿ ಅಥವಾ ಯಾವುದೇ ನಾಣ್ಯವನ್ನು ಇಡುವುದರಿಂದ ಅದರ ಸಕಾರಾತ್ಮಕ ಪರಿಣಾಮಗಳು ಹಲವು ಪಟ್ಟು ಹೆಚ್ಚಾಗುತ್ತವೆ ಎಂದು ಜ್ಯೋತಿಷ್ಯ ಶಾಸ್ತ್ರವು ತಿಳಿಸುತ್ತದೆ. ಮನಿ ಪ್ಲಾಂಟ್‌ನ ಬುಡದಲ್ಲಿ ನಾಣ್ಯವನ್ನು ಹೂತಿಟ್ಟರೆ, ಅದು ಹಣದ ಆಕರ್ಷಣೆಯನ್ನು ವೇಗಗೊಳಿಸುತ್ತದೆ ಎಂಬ ನಂಬಿಕೆಯಿದೆ. ನಾಣ್ಯವು ಸ್ವತಃ ಸಂಪತ್ತಿನ ಸಂಕೇತವಾಗಿದ್ದು, ಮನಿ ಪ್ಲಾಂಟ್ ಜೊತೆಗೆ ಅದರ…

Read More

ಇರಾನ್​ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಎಷ್ಟು ದಿನಗಳವರೆಗೆ ಮುಂದುವರೆಯಬಹುದು, ಟ್ರಂಪ್ ಹೇಳಿದ್ದೇನು? – Kannada News | Trump on US Iran War: Duration, Israel’s Role and Epic Fury Operations

ವಾಷಿಂಗ್ಟನ್, ಮಾರ್ಚ್​ 02: ಇರಾನ್(Iran) ಜೊತೆ ನಡೆಯುತ್ತಿರುವ ಸಂಘರ್ಷದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮುಖ ಹೇಳಿಕೆ ನೀಡಿದ್ದಾರೆ. ಸಂಘರ್ಷ ಮುಂದಿನ ನಾಲ್ಕು ವಾರಗಳವರೆಗೆ ಮುಂದುವರೆಯಬಹುದು ಎಂದು ಅವರು ಹೇಳಿದ್ದಾರೆ. ಇದು ನಾಲ್ಕು ವಾರಗಳು ಅಥವಾ ಅದಕ್ಕಿಂತ ಮುಂಚೆಯೂ ಅಂತ್ಯಗೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಯುದ್ಧದಲ್ಲಿ ಪ್ರಾಣ ಕಳೆದುಕೊಂಡ ಅಮೇರಿಕದ ಸೈನಿಕರಿಗೆ ಅವರು ಗೌರವ ಸಲ್ಲಿಸಿದರು. ಭಾನುವಾರ ಪ್ರತಿಷ್ಠಿತ ಡೈಲಿ ಮೇಲ್‌ಗೆ ನೀಡಿದ ಸಂದರ್ಶನದಲ್ಲಿ, ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧದ ಯುಎಸ್ ಮಿಲಿಟರಿ ಕಾರ್ಯಾಚರಣೆ ಇನ್ನೂ…

Read More

Gold Rates: ಚಿನ್ನದ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 29: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಭರ್ಜರಿಯಾಗಿ ಏರಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಇದರ ಬೆಲೆ (Gold Rates) ಸತತವಾಗಿ ಹೆಚ್ಚುತ್ತಿದೆ. ವಾರಾಂತ್ಯದಲ್ಲಿ ಗ್ರಾಂಗೆ ಬರೋಬ್ಬರಿ 310 ರೂನಷ್ಟು ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲೂ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,35,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,48,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ….

Read More

Video: ಓಲಾ ಸ್ಕೂಟರ್​ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ, ಸ್ವಲ್ಪದರಲ್ಲೇ ಪಾರಾದ ತಂದೆ-ಮಗ

ಸೋಲಾಪುರ, ಜನವರಿ 22: ಓಲಾ ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸೋಲಾಪುರದಲ್ಲಿ ನಡೆದಿದೆ. ತಂದೆ ಮಗನನ್ನು ಶಾಲೆಗೆ ಬಿಡಲು ಬೈಕ್ ಮೇಲೆ ಕುಳಿತು ಕಾಯುತ್ತಿರುತ್ತಾರೆ. ಮಗ ಬಂದು ಕುಳಿತ ತಕ್ಷಣ, ಅಲ್ಲೇ ಹೋಗುತ್ತಿದ್ದ ಮಹಿಳೆಯೊಬ್ಬರು ಬೈಕ್​ನಲ್ಲಿ ಹೊಗೆ ಬರುತ್ತಿರುವುದನ್ನು ನೋಡಿ ಎಚ್ಚರಿಕೆ ಕೊಡುತ್ತಾರೆ, ಆಗ ಇಬ್ಬರೂ ಬೈಕ್​ನಿಂದ ಇಳಿದು ದೂರ ಓಡುತ್ತಾರೆ. ಬೈಕ್​ನಿಂದ ಬರುತ್ತಿದ್ದ ಹೊಗೆ ಮತ್ತಷ್ಟು ಹೆಚ್ಚಾಗುತ್ತದೆ. ಆಗ ಅಲ್ಲಿದ್ದವರು ಬೈಕ್ ಮೇಲೆ ನೀರು…

Read More

‘ಕರಾವಳಿ’ ಸಿನಿಮಾನಲ್ಲಿ ಸಿದ್ ಶ್ರೀರಾಮ್ ದನಿ: ಮುದ್ದು ಗುಮ್ಮ ಹಾಡು ರಿಲೀಸ್ – Kannada News | Prajwal Devaraj starrer Karavali Kannada movie new song released

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಸೇರಿದಂತೆ ಹಲವಾರು ಪ್ರತಿಭಾವಂತ ನಟ, ನಟಿಯರು ಒಟ್ಟಿಗೆ ನಟಿಸುತ್ತಿರುವ ‘ಕರಾವಳಿ’ ಸಿನಿಮಾ ತನ್ನ ಟೀಸರ್, ಪೋಸ್ಟರ್​​​ಗಳ ಮೂಲಕವೇ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ವರೆಗೆ ಬಿಡುಗಡೆ ಆಗಿರುವ ಸಿನಿಮಾದ ಪ್ರತಿಯೊಂದು ಪೋಸ್ಟರ್ ಸಹ ಭಿನ್ನವಾಗಿದ್ದು ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚು ಮಾಡಿವೆ. ಇದೀಗ ‘ಕರಾವಳಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಈ ಮೆಲೋಡಿ ಹಾಡು ಸಹ ಸಿನಿಮಾ ಪ್ರಿಯರ ಗಮನ ಸೆಳೆಯುವಂತಿದೆ. ‘ಮುದ್ದು ಗುಮ್ಮ’ ಎಂಬ ‘ಕರಾವಳಿ’…

Read More