Headlines

ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ? ಅಯ್ಯೋ ದೇವ

ಮುಂಬೈ, ಏ.24: ಐಪಿಎಲ್ 2026ರ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಬ್ಯಾಟಿಂಗ್‌ಗೆ ಇಳಿಯುವ ಮುನ್ನ ಮೈದಾನದ ಹೊರಗೆ ಭರ್ಜರಿ ವಾರ್ಮ್-ಅಪ್ ನಡೆಸಿ ಅಬ್ಬರಿಸಿದ ಹಾರ್ದಿಕ್, ಕ್ರೀಸ್‌ನಲ್ಲಿ ಕೇವಲ 1 ರನ್ ಗಳಿಸಿ ಪೆವಿಲಿಯನ್ ಸೇರುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಪಂದ್ಯದ ಸಂಕಷ್ಟದ ಸಮಯದಲ್ಲಿ ಮುಂಬೈ ತಂಡಕ್ಕೆ ಹಾರ್ದಿಕ್ ಆಸರೆಯಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಡಗೌಟ್ ಬಳಿಕ ಹಾರ್ದಿಕ್ ಪಾಂಡ್ಯ ನೆಟ್ಸ್‌ನಲ್ಲಿ ಹಾಗೂ ಮೈದಾನದ ಬದಿಯಲ್ಲಿ ವಾರ್ಮ್-ಅಪ್ ಮಾಡುತ್ತಿದ್ದ ದೃಶ್ಯಗಳು…

Read More

ರಣಮಳೆಗೆ ಬೆಂಗಳೂರಿನ ಜನ ಹೈರಾಣು: ಒಂದೇ ದಿನ ಮೆಟ್ರೋ ಮೊರೆ ಹೋದ 12 ಲಕ್ಷ ಜನ! – Kannada News | Namma Metro Record: Over 12.85 Lakh Passengers Travel in a Single Day Due to Bengaluru Rains

ಒಂದೇ ದಿನ ಮೆಟ್ರೋ ಮೊರೆ ಹೋದ 12 ಲಕ್ಷ ಜನ! Image Credit source: google Gemini ಬೆಂಗಳೂರು, ಮೇ 01: ಸಿಲಿಕಾನ್ ಸಿಟಿಯಲ್ಲಿ ಕಳೆದ ಬುಧವಾರ ಸುರಿದ ಭಾರೀ ಮಳೆ ಮತ್ತು ರಸ್ತೆಗಳಲ್ಲಾದ ಟ್ರಾಫಿಕ್ ಜಾಮ್‌ನಿಂದಾಗಿ ಹೈರಾಣಾದ ಜನರು ಅಕ್ಷರಶಃ ಮೆಟ್ರೋ (Namma Metro) ಮೊರೆ ಹೋಗಿದ್ದಾರೆ. ರಸ್ತೆಗಳೆಲ್ಲಾ ತುಂಬಿ ಮೊಣಕಾಲು ತನಕ ನೀರು ಬಂದಿತ್ತು. ಏಕಾಏಕಿ ಸುರಿದ ಮಳೆಗೆ ಅದೆಷ್ಟೋ ವಾಹನಗಳು ಕೈ ಕೊಟ್ಟ ಕಾರಣಕ್ಕೆ ಜನ ಓಲಾ, ಊಬರ್ ಕಡೆ ಮುಖ ಮಾಡಿದರೆ,…

Read More

ಗಂಡನ ಅನುಮಾನದ ಭೂತಕ್ಕೆ ಬಲಿಯಾದ ಹೆಂಡ್ತಿ: ಪೊಲೀಸ್​​ ಮುಂದೆ ಪತ್ನಿಯ ಲವ್ವಿಡವ್ವಿ ಬಿಚ್ಚಿಟ್ಟ ಪತಿ – Kannada News | Chitradurga: Husband kills wife over Illicit Affair Suspected

ಚಿತ್ರದುರ್ಗ, ಜನವರಿ 27: ಆ ಕುಟುಂಬಕ್ಕೆ ಪತ್ನಿಯೇ ಆಧಾರ ಸ್ತಂಭವಾಗಿದ್ದರು. ಕ್ಯಾನ್ಸರ್ ಪೀಡಿತ ಪತಿಯ ಆರೈಕೆ ಜತೆಗೆ ಮನೆಯ ಜವಾಬ್ದಾರಿ ಕೂಡ ಹೊತ್ತಿದ್ದರು. ಆದರೆ ಪತಿಯ ತಲೆಗೆ ಹೊಕ್ಕ ಅನುಮಾನದ ಶಂಕೆಯೊಂದು ಪತ್ನಿಯ ಕೊಲೆ (murder) ಮಾಡಿಸಿದೆ. ಕೋಲಿನಿಂದ ತಲೆಗೆ ಹೊಡೆದು ಪತಿ (Husband)  ರವಿಕುಮಾರ್​​ ಪತ್ನಿ ಮಮತಾ(45)ರನ್ನು ಹತ್ಯೆಗೈದಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಡೆದದ್ದೇನು?  ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹಿರೇ ಎಮ್ಮಿಗನೂರು ಗ್ರಾಮ ಇಂದು ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದಿತ್ತು. ಬೆಳಗ್ಗೆ…

Read More

ರಾಜ್ಯದಲ್ಲಿ ಮೂರು ಪ್ರತ್ಯೇಕ ರಸ್ತೆ ಅಪಘಾತಗಳು; ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಬೆಂಗಳೂರು, ಮಾರ್ಚ್​ 08: ಬೆಂಗಳೂರು, ನೆಲಮಂಗಲ ಮತ್ತು ತುಮಕೂರಿನಲ್ಲಿ ಭಾನುವಾರ ಮೂರು ಪ್ರತ್ಯೇಕ ರಸ್ತೆ ಅಪಘಾತಗಳು (Road Accidents) ಸಂಭವಿಸಿದ್ದು, ಒಬ್ಬರು ಮೃತಪಟ್ಟರೆ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂರೂ ಪ್ರಕರಣಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣಗಳು ಸಂಬಂಧಿತ ಠಾಣೆಗಳಲ್ಲಿ ದಾಖಲಾಗಿವೆ. ಕಾರು-ಬೈಕ್ ಮುಖಾಮುಖಿ ಬೆಂಗಳೂರಿನ ಜಯಮಹಲ್ ಮೊದಲನೇ ಕ್ರಾಸ್‌ನಲ್ಲಿ ಇನ್ನೋವಾ ಕಾರು ಚಾಲಕನಿಂದ ಹಿಟ್ ಅಂಡ್ ರನ್ ಘಟನೆ ನಡೆದಿದೆ. ಬೈಕ್‌ಗೆ ಡಿಕ್ಕಿ ಹೊಡೆದ ಕಾರು ಬೈಕ್ ಅನ್ನು ಕೆಲ ದೂರ ಎಳೆದೊಯ್ದಿದೆ. ಪರಿಣಾಮ ಬೈಕ್‌ನಲ್ಲಿದ್ದ ಮಹಿಳೆಗೆ…

Read More

MI vs LSG: ಅಪರೂಪಕ್ಕೆ ಸಿಕ್ಕಿತ್ತು ವಿಕೆಟ್; ಬುಮ್ರಾ ಮಾಡಿದ್ರ ಎಡವಟ್ಟು..! ವಿಡಿಯೋ ನೋಡಿ – Kannada News | IPL 2026: Jasprit Bumrah’s Poor Form & No Balls Cost Mumbai Indians Dearly

2026 ರ ಐಪಿಎಲ್‌ನಲ್ಲಿ (IPL 2026) ಮುಂಬೈ ತಂಡದ ಕಳಪೆ ಪ್ರದರ್ಶನಕ್ಕೆ ಬ್ಯಾಟಿಂಗ್‌ ವಿಭಾಗದ ಪಾತ್ರ ಎಷ್ಟಿದೆಯೋ, ಬೌಲಿಂಗ್ ವಿಭಾಗದ್ದು ಅಷ್ಟೇ ಕೊಡುಗೆ ಇದೆ. ಅದರಲ್ಲೂ ಮುಂಬೈ ತಂಡದ ಬೌಲಿಂಗ್ ವಿಭಾಗದ ಜೀವಾಳ ಎನಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ (Jasprit Bumrah) ಈ ಆವೃತ್ತಿಯಲ್ಲಿ ವಿಕೆಟ್ ಬರ ಎದುರಿಸುತ್ತಿದ್ದಾರೆ. ಇದು ಮುಂಬೈ ತಂಡದ ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣ ಎನ್ನಬಹುದು. ಇದುವರೆಗೆ ಬುಮ್ರಾ ಈ ಆವೃತ್ತಿಯಲ್ಲಿ 10 ಪಂದ್ಯಗಳನ್ನಾಡಿದ್ದಾರೆ. ಈ 10 ಪಂದ್ಯಗಳಲ್ಲಿ ಕೇವಲ ಮೂರು ವಿಕೆಟ್‌ಗಳನ್ನು ಪಡೆದಿದ್ದಾರೆ….

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ತುಮಕೂರು ಸೇರಿ ಹಲವೆಡೆ ಮಳೆಯ ಸಾಧ್ಯತೆ – Kannada News | Bengaluru temperature: Light rain in south part of Karnataka including Bengaluru

ಬೆಂಗಳೂರು, ತುಮಕೂರು ಸೇರಿ ಹಲವೆಡೆ ಮಳೆಯ ಸಾಧ್ಯತೆ ಬೆಂಗಳೂರು, ಡಿಸೆಂಬರ್ 31: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದ್ದು, ಇಂದು ದಕ್ಷಿಣ ಒಳನಾಡಿನ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನ ತಾಪಮಾನದಲ್ಲಿ ಅಷ್ಟೇನೂ ಸುಧಾರಣೆಯಿಲ್ಲದ ಕಾರಣ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು…

Read More

ಶನಿಯ ಆಧಿಪತ್ಯದ ಈ ರಾಶಿಗೆ ಹಳೆಯ ಸಮಸ್ಯೆಗಳಿಗೆ ಪರಿಹಾರ – Kannada News | March 2026 Capricorn Astrology: Dasha Effects and Financial Forecast

ಮಾರ್ಚ್ 2026ರಲ್ಲಿ ಮಕರ ರಾಶಿಯವರಿಗೆ ಗ್ರಹಗತಿಗಳ ಬದಲಾವಣೆಯು ಜೀವನದ ಮೇಲೆ ನಿರ್ಣಾಯಕ ಪ್ರಭಾವ ಬೀರಲಿದೆ. ಮಕರ ರಾಶಿಯ ಅಧಿಪತಿ ಶನಿಯು ನಿಮ್ಮ ರಾಶಿಯಿಂದ ಎರಡನೇ ಮನೆಯಿಂದ ಮೂರನೇ ಮನೆಗೆ ಇದ್ದಾನೆ. ​ಮಾರ್ಚ್ 2026 ರಲ್ಲಿ ಮಕರ ರಾಶಿಯವರಿಗೆ ಯಾವ ದಶೆಗಳು ಶುಭ, ಅಶುಭ ಮತ್ತು ಮಿಶ್ರ ಫಲಗಳನ್ನು ನೀಡಲಿವೆ ಎನ್ನುವುದು ಇಲ್ಲಿದೆ. ​ ​ಮಕರ ರಾಶಿಯವರಿಗೆ ಈ ತಿಂಗಳು ಆರ್ಥಿಕ ಶಿಸ್ತು ಮತ್ತು ಕೌಟುಂಬಿಕ ಜವಾಬ್ದಾರಿಗಳ ಸುತ್ತ ಸುತ್ತುತ್ತದೆ. ಗ್ರಹಗಳ ಸ್ಥಾನಪಲ್ಲಟವು ನಿಮ್ಮ ಹಳೆಯ ಸಮಸ್ಯೆಗಳಿಗೆ ಪರಿಹಾರ…

Read More

ನಟನಿಂದ ಮೋಸ: ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವಕ

ನಟರಿಗಾಗಿ ಪ್ರಾಣ ಕೊಡಲು ತಯಾರು ಎನ್ನುವ ಅಭಿಮಾನಿಗಳು ಇರುತ್ತಾರೆ. ಇಲ್ಲೊಬ್ಬ ಯುವಕ, ನಟನಿಂದಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಅದೃಷ್ಟವಶಾತ್ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ನಡೆದಿರುವುದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ, ಪೂತಲಪಟ್ಟು ಎಂಬಂಲ್ಲಿ. ಪೂತಲಪಟ್ಟು ಬಳಿಯ ಶೇಷಾಪುರಂನ ಲೋಕೇಶ್ ಎಂಬ ಯುವಕ ಆತ್ಮಹತ್ಯೆಗೆ ಯತ್ನಿದ್ದು ‘ಜೆಟ್ಟಿ’ ಸಿನಿಮಾ ಖ್ಯಾತಿಯ ನಟ ಮಾನ್ಯಂ ಮುರಳಿ ಕೃಷ್ಣ ತನ್ನ ಈ ಸ್ಥಿತಿಗೆ ಕಾರಣ ಎಂದು ಲೋಕೇಶ್ ಬರೆದಿರುವ ಡೆತ್ ನೋಟ್ ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಚಿತ್ತೂರು…

Read More

AFMC Admission 2026: ವೈದ್ಯಕೀಯ ಶಿಕ್ಷಣದ ಜೊತೆಗೆ ದೇಶ ಸೇವೆಗೆ ಇಲ್ಲಿದೆ ಸುವರ್ಣ ಅವಕಾಶ – Kannada News | AFMC Pune: Become a Doctor and Officer in Indian Armed Forces, Secure MBBS Career Path

ನೀವು ವೈದ್ಯರಾಗಿ ಸಮಾಜ ಸೇವೆ ಮಾಡುವ ಜೊತೆಗೆ, ಭಾರತೀಯ ಸಶಸ್ತ್ರ ಪಡೆಗಳಲ್ಲಿ ಅಧಿಕಾರಿಯಾಗಿ ದೇಶ ಸೇವೆ ಮಾಡುವ ಕನಸು ಕಾಣುತ್ತಿದ್ದೀರಾ? ಹಾಗಿದ್ದಲ್ಲಿ, ಪುಣೆಯ ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜು (AFMC) ನಿಮಗೆ ಅತ್ಯುತ್ತಮ ವೇದಿಕೆಯಾಗಿದೆ. ಇಲ್ಲಿನ ಶಿಕ್ಷಣವು ಕೇವಲ ಪದವಿಗೆ ಸೀಮಿತವಾಗಿರದೆ, ಶಿಸ್ತುಬದ್ಧ ಜೀವನ ಮತ್ತು ಉಜ್ವಲ ವೃತ್ತಿಜೀವನಕ್ಕೆ ದಾರಿಯಾಗಿದೆ. AFMC ಎಂದರೇನು? ಇದರ ಐತಿಹಾಸಿಕ ಹಿನ್ನೆಲೆ: ಮೇ 1, 1948 ರಂದು ಸ್ಥಾಪನೆಯಾದ AFMC (Armed Forces Medical College) ದೇಶದ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ…

Read More

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?

ವಾಷಿಂಗ್ಟನ್, ಮಾರ್ಚ್​ 13: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮಹತ್ವದ ಹೇಳಿಕೆ ನೀಡಿದ್ದಾರೆ. ಮೊಜ್ತಾಬಾ ಖಮೇನಿ ಉಸಿರಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಇಡೀ ಮಧ್ಯಪ್ರಾಚ್ಯವನ್ನು ಆವರಿಸಿದೆ. ಅಮೆರಿಕ-ಇಸ್ರೇಲ್ ವಾಯುದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಗಲ್ಫ್ ರಾಷ್ಟ್ರಗಳಾದ ಯುಎಇ, ಬಹ್ರೇನ್, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾಗಳ ಮೇಲೆ ದಾಳಿ ಮಾಡಿದೆ. ಯುದ್ಧದ ಮಧ್ಯೆ, ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ…

Read More