Headlines

ಚನ್ನಗಿರಿ: ಬಿಯರ್ ಬಾಕ್ಸ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!

ದಾವಣಗೆರೆ, ಏಪ್ರಿಲ್ 13: ಹಾಸನದಿಂದ ಚಿಕ್ಕೋಡಿಗೆ ‘ಪವರ್ ಕೂಲ್’ ಬಿಯರ್ ಟಿನ್ ಬಾಕ್ಸ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಬಳಿ ನಡೆದಿದೆ. ರಾಜ್ಯ ಹೆದ್ದಾರಿಯ ಪಕ್ಕದಲ್ಲಿದ್ದ ಸೇತುವೆಗೆ ಡಿಕ್ಕಿ ಹೊಡೆದ ಲಾರಿ, ಪಕ್ಕದ ಅಡಿಕೆ ತೋಟಕ್ಕೆ ಉರುಳಿ ಬಿದ್ದಿದೆ. ಅಪಘಾತದ ಭೀಕರತೆಗೆ ಲಾರಿಯಲ್ಲಿದ್ದ ಸಾವಿರಾರು ಬಿಯರ್ ಟಿನ್‌ಗಳು ತೋಟದಾದ್ಯಂತ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಸುರಕ್ಷಿತವಾಗಿದ್ದ…

Read More

ಬಾಯ್​ಫ್ರೆಂಡ್ನ ಮದುವೆಯಾಗಲು ಹೆತ್ತವರಿಗೆ ವಿಷ ಉಣಿಸಿದ ಅಪ್ರಾಪ್ತ ಮಗಳು

ಮರೆನಾ, ಏಪ್ರಿಲ್ 13: ಅಪ್ರಾಪ್ತ ಬಾಲಕಿಯೊಬ್ಬಳು ಬಾಯ್​ಫ್ರೆಂಡ್​ನನ್ನು ಮದುವೆಯಾಗಲು ತನ್ನ ಹೆತ್ತವರಿಗೆ ವಿಷ(Poison) ಉಣಿಸಿರುವ ಘಟನೆ ಮಧ್ಯಪ್ರದೇಶದ ಮರೆನಾದಲ್ಲಿ ನಡೆದಿದೆ. ಮನುಷ್ಯತ್ವಕ್ಕೇ ಕಪ್ಪುಚುಕ್ಕಿ ಇಡುವಂತಹ ಘಟನೆಯೊಂದು ನಡೆದಿದೆ. ಪ್ರೀತಿಯ ಅಮಲಿನಲ್ಲಿ ಕುರುಡಾದ ಮಗಳೊಬ್ಬಳು, ಹೆತ್ತವರನ್ನೇ ಮುಗಿಸಲು ಸಂಚು ರೂಪಿಸಿದ ಕರಾಳ ಕಥೆ ಇಲ್ಲಿದೆ. ಹೆತ್ತವರು ಮಗಳ ಮೇಲೆ ಇಟ್ಟಿದ್ದ ನಂಬಿಕೆ ಹುಸಿಯಾಗಿದೆ, ಚಪಾತಿಯಲ್ಲಿ ಇಲಿ ಪಾಷಾಣ ಬೆರೆಸಿ ಪೋಷಕರಿಗೆ ನೀಡಿರುವ ಘಟನೆ ಬೆಳಕಿಗೆ . ಮೊರೆನಾ ಜಿಲ್ಲೆಯ ಪೋರ್ಸಾ ಎಂಬಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಗೆಳೆಯನ ಜೊತೆ…

Read More

‘ಅಕ್ಷಯ್ ಕುಮಾರ್ ನನ್ನ ಹಾಗೂ ಪ್ರಿಯಾಂಕಾನ ಅಣ್ಣನಂತೆ ರಕ್ಷಿಸಿದ್ರು ’

ನಟ ಅಕ್ಷಯ್ ಕುಮಾರ್ ಅವರು ಇಂದು ಸ್ಟಾರ್ ಹೀರೋ. ಅವರಿಗೆ ಭಾರತದಲ್ಲಿ ಮಾತ್ರವಲ್ಲದೆ ಭಾರತದ ಹೊರಗೆಯೂ ತುಂಬಾ ದೊಡ್ಡ ಅಭಿಮಾನಿ ಬಳಗ ಇದೆ. 2003ರ ವರ್ಷ ನಟನಿಗೆ ಮಾತ್ರವಲ್ಲದೆ ಚಿತ್ರರಂಗಕ್ಕೂ ಬಹಳ ವಿಶೇಷವಾಗಿತ್ತು. ಏಕೆಂದರೆ ಈ ವರ್ಷ, ನಟಿಯರಾದ ಲಾರಾ ದತ್ ಮತ್ತು ಪ್ರಿಯಾಂಕಾ ಚೋಪ್ರಾ ‘ಅಂದಾಜ್’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಇತ್ತೀಚಿನ ಸಂದರ್ಶನವೊಂದರಲ್ಲಿ, ಲಾರಾ ಅವರು ಅಕ್ಷಯ್ ಕುಮಾರ್ ಬಗ್ಗೆ ಮಾತನಾಡಿದ್ದಾರೆ. ‘ಪ್ರಿಯಾಂಕಾ ಮತ್ತು ನಾನು ಒಟ್ಟಿಗೆ ಚಿತ್ರರಂಗಕ್ಕೆ ಬಂದೆವು. ಆಗ ನಾವಿಬ್ಬರೂ…

Read More

ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ

IPL 2026: ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಎಲ್ಲರ ಗಮನ ಸೆಳೆದಿದ್ದು ಪಾಂಡ್ಯ ಸಹೋದರರ ಜಿದ್ದಾಜಿದ್ದು. ತಮ್ಮ ಹಾರ್ದಿಕ್ ಪಾಂಡ್ಯ ವಿಕೆಟ್ ಪತನಗೊಂಡಾಗ ಅಣ್ಣ ಕೃನಾಲ್ ಪಾಂಡ್ಯ ಸಂಭ್ರಮಿಸಿದ ರೀತಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 240 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ…

Read More

ತಾನಿಯಾಗೆ ಮೆಸೇಜ್ ಮಾಡಿದ ಚಹಾಲ್!: ಛೀ ಕಳ್ಳ.. ಫುಲ್ ವೈರಲ್​ ಮಾಡಿದ ನಟಿ

ಮುಂಬೈ, ಏ.12: ಭಾರತದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರು ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಈಗ ಅವರು ಮಾಡಿರುವ ಒಂದು ಮೆಸೇಜ್ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಖ್ಯಾತ ಉಲ್ಲು (Ullu) ಸರಣಿಗಳ ನಟಿ ತಾನಿಯಾ ಅವರಿಗೆ ಚಹಾಲ್ “ಕ್ಯೂಟ್” (Cute) ಎಂದು ಮೆಸೇಜ್ ಮಾಡಿದ್ದಾರೆ ಎಂಬ ವಿಷಯ ಈಗ ವೈರಲ್ ಆಗಿದೆ. ನಟಿ ತಾನಿಯಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅಥವಾ ತಮ್ಮ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಈ ವಿಷಯವನ್ನು…

Read More

‘ಯಾವ ಸಮಯ್?’; ಟೀಕಿಸಿದ ಸಮಯ್ ರೈನಾಗೆ ರಣವೀರ್ ಅಲಹಾಬಾದಿಯಾ ಖಡಕ್ ಉತ್ತರ

ರಣವೀರ್ ಅಲಹಾಬಾದಿಯಾ ಅವರು ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋಗೆ ಬಂದು ವಿವಾದ ಮಾಡಿಕೊಂಡರು. ಆ ಬಳಿಕ ಸಮಯ್ ಹಾಗೂ ರಣವೀರ್ ಮುಖಾಮುಖಿ ಆಗಿಲ್ಲ. ಇತ್ತೀಚೆಗೆ ಸಮಯ್ ರೈನಾ ಅವರ ‘ಸ್ಟಿಲ್ ಅಲೈವ್’ ಶೋನಲ್ಲಿ ಅವರು ರಣವೀರ್ ಬಗ್ಗೆ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಇದಾದ ಬಳಿಕ ಸಮಯ್ ಯಾರು ಎಂಬ ಪ್ರಶ್ನೆಯನ್ನು ರಣವೀರ್ ಅಲಹಾಬಾದಿಯಾ ಕೇಳಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ. ರಣವೀರ್ ಅವರು ಪಾಡ್​​ಕಾಸ್ಟ್ ಮೂಲಕ ಗಮನ ಸೆಳೆದವರು. ಅವರು ಅಧ್ಯಾತ್ಮದ ಬಗ್ಗೆ…

Read More

ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಬೆಂಗಳೂರು, ಏಪ್ರಿಲ್ 13: ನಗರದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ (Stray Dogs)  ಹಾವಳಿ ಹೆಚ್ಚಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ನಾಯಿ ದಾಳಿಗೆ ಹೆದರಿ ಓಡಾಡುವ ಪರಿಸ್ಥಿತಿ ಎದುರಾಗಿದೆ. ನಾಯಿ ಎಂದ ಮೇಲೆ ಬೊಗಳುವುದು ಸಹಜ. ಅದರಲ್ಲೂ ಸಾಕು ನಾಯಿಯನ್ನು ರಕ್ಷಣೆಗಾಗಿಯೇ ಇಟ್ಟುಕೊಳ್ಳುವುದರಿಂದ, ಮನೆಯ ಜನರನ್ನು ಬಿಟ್ಟು ಉಳಿದವರು ಯಾರೇ ತಮ್ಮ ಮನೆ ಬಳಿ ಬಂದರೂ ಸಾಕು ನಾಯಿಗಳು ಬೊಗಳುತ್ತವೆ. ಆದರೆ ಇಲ್ಲೊಬ್ಬ ವ್ಯಕ್ತಿ ಪಕ್ಕದ ಮನೆಯವರ ಸಾಕು ನಾಯಿ ತನ್ನ ಹೆಂಡತಿಗೆ ಬೊಗಳಿತು ಎಂಬ ಕ್ಷುಲ್ಲಕ ಕಾರಣಕ್ಕೆ…

Read More

MI vs RCB: ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಆಡಲು ಇದುವೇ ಅಸಲಿ ಕಾರಣ!

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಮುಂಬೈ ಇಂಡಿಯನ್ಸ್ (MI) ವಿರುದ್ಧದ ಪಂದ್ಯದಲ್ಲಿ ತಮ್ಮ ಎಂದಿನ ಲಯದಲ್ಲಿ ಕಾಣಿಸಿಕೊಳ್ಳಲಿಲ್ಲ. ಮೈದಾನದಲ್ಲಿ ರನ್ ಗಳಿಸಲು ಅವರು ಸಾಕಷ್ಟು ಕಷ್ಟಪಟ್ಟಿದ್ದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಇದರ ಹಿಂದಿನ ಅಸಲಿ ಕಾರಣಗಳು ಇದೀಗ ಹೊರಬಿದ್ದಿವೆ… ಜ್ವರ ಮತ್ತು ಅಸ್ವಸ್ಥತೆ: ಪಂದ್ಯದ ನೇರ ಪ್ರಸಾರದ ವೇಳೆ ಕಾಮೆಂಟೇಟರ್ ರವಿಶಾಸ್ತ್ರಿ ಅವರು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದರು. ಅದೇನೆಂದರೆ, ವಿರಾಟ್ ಕೊಹ್ಲಿ ಅವರು ಕಳೆದ ಕೆಲವು…

Read More

ಪರ್ಫ್ಯೂಮ್, ಸ್ಮಶಾನ ಮೌನ, ಅಸ್ಥಿಪಂಜರ, ಮಗಳ ಶವದೊಂದಿಗೆ ತಂದೆಯ ವಾಸ, ಸಾವು ಮರೆಮಾಚಿದ್ದು ಹೇಗೆ?

ಮೀರತ್, ಏಪ್ರಿಲ್ 13: ಮೀರತ್‌ನ ಬೀದಿಗಳಲ್ಲಿ ಒಂದು ಸುದ್ದಿ ಕಾಳ್ಗಿಚ್ಚಿನಂತೆ ಹರಡಿತು. ತಿಂಗಳುಗಳಿಂದ ಬಾಗಿಲು ಹಾಕಿದ್ದ ಮನೆಯೊಳಗೆ ಮಗಳ ಹೆಣದೊಂದಿಗೆ ತಂದೆ(Father)ಯೊಬ್ಬರು ವಾಸವಿದ್ದರು ಎಂಬ ಸತ್ಯ ಬಯಲಾದಾಗ ಪೊಲೀಸರೇ ಬೆಚ್ಚಿಬಿದ್ದರು. 34 ವರ್ಷದ ಪ್ರಿಯಾಂಕಾ ಎಂಬಾಕೆಯ ದೇಹವು ಈಗ ಬಹುತೇಕ ಅಸ್ಥಿಪಂಜರವಾಗಿ ಮಾರ್ಪಟ್ಟಿದೆ. ನಾಲ್ಕು ತಿಂಗಳ ಮೌನ ಮತ್ತು ಸುಳ್ಳಿನ ಕತೆ ಪ್ರಿಯಾಂಕಾ ಮತ್ತು ಆಕೆಯ ತಂದೆ ಉದಯ್ ಭಾನ್ ಬಿಸ್ವಾಸ್ ಕಳೆದ ನಾಲ್ಕು ತಿಂಗಳಿನಿಂದ ಅಕ್ಕಪಕ್ಕದ ಮನೆಯವರಿಗೆ ಕಾಣಿಸಿಕೊಂಡಿರಲಿಲ್ಲ. ಮನೆಗೆ ಬೀಗ ಹಾಕಲಾಗಿತ್ತು. ಆತಂಕಗೊಂಡ ಸಂಬಂಧಿಕರು…

Read More

ಅನಿಲ್‌ನನ್ನು ‘ಅಕ್ಷತಾ’ ಮಾಡಿದ್ದ ಮಂಗಳಮುಖಿಯರು: ಮಂಗಳೂರು-ಕೇರಳದಲ್ಲಿ ಸೆಕ್ಸ್ ವರ್ಕ್​​ಗೆ ಬಳಕೆ, ಲಿಂಗ ಬದಲಾವಣೆಗೂ ಸ್ಕೆಚ್

ಮೈಸೂರು, ಏ.12: ಜಿಲ್ಲೆಯಲ್ಲಿ (Mysuru Crime) ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಇದೀಗ ಈ ಸುದ್ದಿ ಎಲ್ಲ ಕಡೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಬಸ್ಸಿಗಾಗಿ ಕಾಯುತ್ತಿದ್ದ ಯುವಕನೋರ್ವನನ್ನು ಅಪಹರಿಸಿ, ಆತನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ ಹಾಗೂ ಸೆಕ್ಸ್ ವರ್ಕ್​​ಗೆ ಬಳಸಿಕೊಂಡಿರುವ ಆಘಾತಕಾರಿ ಆರೋಪವೊಂದು ಕೇಳಿ ಬಂದಿದೆ. ನಂಜನಗೂಡಿನ ತ್ಯಾಗರಾಜ ಕಾಲೋನಿಯ ಅನಿಲ್ ಕುಮಾರ್ ಈ ಕರಾಳ ದಂಧೆಯ ಬಲಿಪಶುವಾಗಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಪ್ರಕರಣ ಲಷ್ಕರ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ನಾಲ್ಕು ತಿಂಗಳ…

Read More