ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಾರಿ ಕಳ್ಳತನ ಶಂಕೆImage Credit source: Tv9 Kannada
ಮಂಡ್ಯ, ಜೂನ್ 10:ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಾರಿ ಕಳ್ಳತನ ನಡೆದಿರುವ ಆರೋಪ ಕೇಳಿಬಂದಿದೆ. ದೇಗುಲದ ಹುಂಡಿಯಲ್ಲಿದ್ದ ಚಿನ್ನ, ಬೆಳ್ಳಿ ಸೇರಿದಂತೆ ನಗದು ಕಳುವಾಗಿರುವ ಸಂಬಂಧ ದೇವಸ್ಥಾನದ ಇಒ ಶೀಲಾ ಮೇಲುಕೋಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಅದರನ್ವಯ ದೇವಸ್ಥಾನದ ಪಾರುಪತ್ತೆಗಾರ ಶ್ರೀಧರ್, ಅರ್ಚಕ ನಾರಾಯಣ ಭಟ್ಟ, ಪರಿಚಾರಕ ತಿರುವೆಂಗಡಚಾರ್ , ಕಾವಲುಗಾರರಾದ ಗಂಗಾಧರ್ ಮತ್ತು ಬಸವಾರಾಜ್ ವಿರುದ್ದ ಪ್ರಕರಣ ದಾಖಲಾಗಿದೆ.
ರಹಸ್ಯ ಕ್ಯಾಮರಾವನ್ನೂ ಕೆಡಿಸಿ ಕಳ್ಳಾಟ!
ವಜ್ರಾಂಗಿ ಆಭರಣ ಕಳ್ಳತನದ ಬಳಿಕ ದೊಡ್ಡ ಪ್ರಮಾಣದ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪದೇ ಪದೇ ಸಿಸಿ ಕ್ಯಾಮರಾ ಡಿವಿಆರ್ನ ಕಿಡಿಗೇಡಿಗಳು ಕೆಡಿಸುತ್ತಿದ್ದರು. ದೇವಾಲಯದಲ್ಲಿ ಹಿಂದಿನಿಂದಲೂ ಹುಂಡಿಯಲ್ಲಿನ ಹಣ, ಚಿನ್ನ, ಬೆಳ್ಳಿಯ ವಸ್ತುಗಳು ಕಳ್ಳತನವಾಗುತ್ತಿದ್ದ ಆರೋಪದ ಹಿನ್ನೆಲೆ ರಹಸ್ಯ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿತ್ತು. ಆದರೆ ಅದನ್ನೂ ಕೆಡಿಸಿರೋದು ಗೊತ್ತಾಗಿದೆ. ಈ ರಹಸ್ಯ ಸಿಸಿ ಕ್ಯಾಮರಾ ಅಳವಡಿಸಿರುವ ವಿಚಾರ ದೇವಾಲಯ ಆಡಳಿತ ಸಿಬ್ಬಂದಿಗೆ ಮಾತ್ರ ಗೊತ್ತಿತ್ತು. ಹೀಗಾಗಿ ಕಳ್ಳತನ ಉದ್ದೇಶದಿಂದ ಸಿಬ್ಬಂದಿ ಹಾಗೂ ಅರ್ಚಕರೇ ಕೃತ್ಯ ಎಸಗಿರಬಹುದು. ಅಥವಾ ಇವರ ಸಹಕಾರದಿಂದ ಬೇರೆಯವರು ಕಳ್ಳತನ ಮಾಡಿರಬಹುದೆಂಬ ಶಂಕೆಯನ್ನು ದೂರಲ್ಲಿ ವ್ಯಕ್ತಪಡಿಸಲಾಗಿದೆ.
ಹುಂಡಿ ಹಣದ ಎಣಿಕೆಗೂ ಮುನ್ನ ಈ ಕೃತ್ಯ ಎಸಗಿರುವ ಕಾರಣ ಇಂತಿಷ್ಟೇ ಹಣ ಅಥವಾ ಬೆಳ್ಳಿ, ಬಂಗಾರದ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಈ ಸಂಬಂಧ ಕಾವಲುಗಾರರಿಗೆ ಅಂಚೆ ಮೂಲಕ ಕಾರಣ ಕೇಳಿ ನೋಟಿಸ್ ಜಾರಿಮಾಡಲಾಗಿತ್ತು. ಆದರೆ ಅವರಿಂದ ಈವರೆಗೂ ಉತ್ತರ ಬಾರದ ಕಾರಣ ತಡವಾಗಿ ಘಟನೆ ಬಗ್ಗೆ ದೂರು ನೀಡುತ್ತಿರೋದಾಗಿ ಇಒ ಶೀಲಾ ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಅವರು ಆಗ್ರಹಿಸಿದ್ದಾರೆ.
ದೆಹಲಿ, ಜೂ.10: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ‘10 ಜನಪಥ್’ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಈ ದೆಹಲಿ ಭೇಟಿಯ ವೇಳೆ ಕೇವಲ ಸೋನಿಯಾ ಗಾಂಧಿ ಮಾತ್ರವಲ್ಲದೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೂ ಉಪಸ್ಥಿತರಿದ್ದರು. ಸಿಎಂ ಆದ ಬಳಿಕ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ ಶಿವಕುಮಾರ್ ಅವರಿಗೆ ಗಾಂಧಿ ಕುಟುಂಬದ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡು ಶುಭ ಹಾರೈಸಿದ್ದಾರೆ.
ಇಪಿಎಫ್ (EPF) ಎಂಬುದು ಉದ್ಯೋಗಿಗಳ ನಿವೃತ್ತಿ ಅಥವಾ ಭವಿಷ್ಯದ ಕಾಲದ ಸುರಕ್ಷತೆಗೆಂದು ರೂಪಿಸಲಾಗಿದೆ. ಇದರಲ್ಲಿ ಸಾಮಾನ್ಯ ಎಫ್ಡಿಗಳಿಗಿಂತಲೂ ಹೆಚ್ಚಿನ ಬಡ್ಡಿಯನ್ನು ಸರ್ಕಾರ ಒದಗಿಸುತ್ತದೆ. ಆದರೆ, ಇಪಿಎಫ್ನಲ್ಲಿ ವಾರ್ಷಿಕವಾಗಿ ಶೇ. 8.25 ಮಾತ್ರವೇ ಬಡ್ಡಿ ಸಿಗುತ್ತದೆ. ಮ್ಯೂಚುವಲ್ ಫಂಡ್ಗಳಲ್ಲಿ ಹೆಚ್ಚಿನ ರಿಟರ್ನ್ ಸಿಗುತ್ತದೆ. ಹೀಗಾಗಿ, ಇಪಿಎಫ್ನಿಂದ ಹಣ ತೆಗೆದು ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ ಮಾಡಿ ಎಂದು ಕೆಲ ಹಣಕಾಸು ಪರಿಣಿತರು ಸಲಹೆ ನೀಡುವುದುಂಟು. ಆದರೆ, ಇಪಿಎಫ್ನ ಉದ್ದೇಶ ಬೇರೆ, ಮ್ಯೂಚುವಲ್ ಫಂಡ್ನ ಉದ್ದೇಶ ಬೇರೆ. ಎರಡೂ ಬೇರೆ ಬೇರೆ ಪ್ರಾಡಕ್ಟ್ಸ್. ಆದರೂ ರಿಟರ್ನ್ ಲೆಕ್ಕಾಚಾರಕ್ಕೆ ಬಂದರೆ ಇಪಿಎಫ್ನಲ್ಲಿ ಬಡ್ಡಿ ಜೊತೆಗೆ ಇರುವ ಇನ್ನೊಂದು ಅಂಶವು ಅನುಕೂಲ ಮಾಡಿಕೊಡುತ್ತದೆ.
ಬಹಳಷ್ಟು ಜನರು ಇಪಿಎಫ್ನ ಶೇ. 8.25 ಬಡ್ಡಿಯನ್ನು ಮ್ಯೂಚುವಲ್ ಫಂಡ್ಗಳ ಶೇ. 12-15 ಗಳಿಕೆಗೆ ಹೋಲಿಸಿ, ಇದು ಕಡಿಮೆ ಎಂದು ಭಾವಿಸುತ್ತಾರೆ. ಆದರೆ, ಇಪಿಎಫ್ಗೆ ಇರುವ E-E-E (Exempt-Exempt-Exempt) ಸ್ಥಾನಮಾನವೇ ಅದರ ನಿಜವಾದ ಶಕ್ತಿಯಾಗಿದೆ. ಅದರಲ್ಲೂ ಶೇ. 30ರ ಟ್ಯಾಕ್ಸ್ ಬ್ರಾಕೆಟ್ನಲ್ಲಿರುವ ತೆರಿಗೆ ಪಾವತಿದಾರರಿಗೆ ಇಪಿಎಫ್ ಮ್ಯಾಜಿಕ್ ಮಾಡುತ್ತದೆ.
ವಾರ್ಷಿಕವಾಗಿ ₹2.5 ಲಕ್ಷದವರೆಗಿನ ಇಪಿಎಫ್ ಕೊಡುಗೆಗೆ ಸಿಗುವ ಬಡ್ಡಿಯು ಸಂಪೂರ್ಣವಾಗಿ ತೆರಿಗೆ ಮುಕ್ತವಾಗಿರುತ್ತದೆ (Tax-Free). ಅದೇ ಫಿಕ್ಸೆಡ್ ಡೆಪಾಸಿಟ್, ಮ್ಯೂಚುವಲ್ ಫಂಡ್ಗಳಲ್ಲಿ ಬೇರೆಯೇ ವಸೂಲಿ ಇರುತ್ತದೆ. ಎಫ್ಡಿ ವಿಚಾರಕ್ಕೆ ಬಂದರೆ, ನೀವು ಶೇ. 30 ರಷ್ಟು ತೆರಿಗೆ ವ್ಯಾಪ್ತಿಯಲ್ಲಿದ್ದರೆ (Tax Slab), ಬ್ಯಾಂಕ್ ನೀಡುವ ಶೇ. 7.5 ರಷ್ಟು ಬಡ್ಡಿಯು ತೆರಿಗೆ ಕಡಿತದ ನಂತರ ಕೇವಲ ಶೇ. 5.25ಕ್ಕೆ ಕುಸಿಯುತ್ತದೆ! ಆದರೆ ಇಪಿಎಫ್ನಲ್ಲಿ ಶೇ. 8.25 ಎಂದರೆ ಅದು ನಿವ್ವಳ ಶೇ. 8.25 ರಷ್ಟೇ ಆಗಿರುತ್ತದೆ.
ಇಪಿಎಫ್ನಲ್ಲಿ ಪ್ರತಿ ತಿಂಗಳು ನಿಮ್ಮ ಸಂಬಳದಿಂದ ಹಣ ಕಡಿತವಾಗಿ ಜಮೆಯಾಗುತ್ತದೆ. ಇದರ ಬಡ್ಡಿಯು ಪ್ರತಿ ವರ್ಷದ ಕೊನೆಯಲ್ಲಿ ಅಸಲಿಗೆ ಸೇರುತ್ತಾ ಹೋಗುತ್ತದೆ. ಇದರ ಜೊತೆಗೆ ಟ್ಯಾಕ್ಸ್ ಉಳಿತಾಯವನ್ನೂ ಸೇರಿಸಿದರೆ ನಿಮ್ಮ ಇಪಿಎಫ್ ನಿಧಿ ದೀರ್ಘಾವಧಿಯಲ್ಲಿ ವಾರ್ಷಿಕ ಶೇ. 11ರಿಂದ 12ರಷ್ಟು ರಿಟರ್ನ್ ಕೊಡಬಲ್ಲುದು.
ಮ್ಯೂಚುವಲ್ ಫಂಡ್ಗಳ ಮೇಲಿನ ತೆರಿಗೆ ಗಮನಿಸಿ..!
ಮ್ಯೂಚುವಲ್ ಫಂಡ್ಗಳು ಹೆಚ್ಚಿನ ಆದಾಯ ನೀಡಿದರೂ, ಹಣ ಹಿಂಪಡೆಯುವಾಗ ದೀರ್ಘಾವಧಿ ಬಂಡವಾಳ ಗಳಿಕೆ ತೆರಿಗೆ (LTCG – Long Term Capital Gains Tax) ಪಾವತಿಸಬೇಕಾಗುತ್ತದೆ. ಆದರೆ ಇಪಿಎಫ್ನಲ್ಲಿ ಐದು ವರ್ಷಗಳ ನಿರಂತರ ಸೇವೆಯ ನಂತರ ಹಿಂಪಡೆಯುವ ಸಂಪೂರ್ಣ ಮೊತ್ತಕ್ಕೆ ಯಾವುದೇ ತೆರಿಗೆ ಇರುವುದಿಲ್ಲ.
ಹಳೆಯ ಟ್ಯಾಕ್ಸ್ ರಿಜೈಮ್ನಲ್ಲಿ ಪಿಪಿಎಫ್ ರೀತಿಯಲ್ಲಿ ಇಪಿಎಫ್ನಿಂದಲೂ ಟ್ಯಾಕ್ಸ್ ಡಿಡಕ್ಷನ್ ಅವಕಾಶ ಇರುತ್ತದೆ. ವರ್ಷಕ್ಕೆ ಒಂದೂವರೆ ಲಕ್ಷ ರೂವರೆಗಿನ ಇಪಿಎಫ್ ಕೊಡುಗೆಗೆ ಟ್ಯಾಕ್ಸ್ ಇರುವುದಿಲ್ಲ. ಅಂದರೆ, ಒಂದೂವರೆ ಲಕ್ಷ ರೂಗೆ ಟ್ಯಾಕ್ಸ್ ಉಳಿತಾಯ ಆಗುತ್ತದೆ. ಶೇ. 30ರ ಟ್ಯಾಕ್ಸ್ ಸ್ಲಾಬ್ನಲ್ಲಿರುವ ವ್ಯಕ್ತಿಗಳು ಇದರಿಂದ ವರ್ಷಕ್ಕೆ 45,000 ರೂ ಟ್ಯಾಕ್ಸ್ ಉಳಿಸಬಹುದು.
ಮ್ಯೂಚುವಲ್ ಫಂಡ್ಗಳು (Equity Mutual Funds) ಶೇ. 12 ಕ್ಕಿಂತ ಹೆಚ್ಚಿನ ಆದಾಯ ನೀಡಬಹುದಾದರೂ, ಅವುಗಳಲ್ಲಿ ಮಾರುಕಟ್ಟೆಯ ಅಪಾಯವಿರುತ್ತದೆ (Market Risk). ಷೇರು ಮಾರುಕಟ್ಟೆ ಕುಸಿದಾಗ ನಿಮ್ಮ ಹಣದ ಮೌಲ್ಯವೂ ಕುಸಿಯುತ್ತದೆ.
ಆದರೆ, ಇಪಿಎಫ್ ಭಾರತ ಸರ್ಕಾರದಿಂದ ಖಾತರಿಪಡಿಸಲ್ಪಟ್ಟ ಸಂಪೂರ್ಣ ಸುರಕ್ಷಿತ ಹೂಡಿಕೆಯಾಗಿದೆ. ಸ್ಥಿರವಾದ ಆರ್ಥಿಕ ಭವಿಷ್ಯ ಮತ್ತು ನಿವೃತ್ತಿ ಜೀವನಕ್ಕಾಗಿ (Retirement Planning) ಯಾವುದೇ ಅಪಾಯವಿಲ್ಲದೆ ಶೇ. 8.25 ರಷ್ಟು ಗ್ಯಾರಂಟಿ ರಿಟರ್ನ್ಸ್ ನೀಡುವ ಮತ್ತೊಂದು ಹೂಡಿಕೆ ಸದ್ಯಕ್ಕೆ ಮಾರುಕಟ್ಟೆಯಲ್ಲಿಲ್ಲ.
ಇಸ್ಲಮಾಬಾದ್, ಜೂನ್ 10: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಪಾಕಿಸ್ತಾನ ಸೇನೆಗೆ ಸೇರಿದ ಯುದ್ಧ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಪತನಗೊಂಡಿದೆ. ಈ ದುರಂತದಲ್ಲಿ ಅದರಲ್ಲಿದ್ದ ಎಲ್ಲಾ ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಆಯಕಟ್ಟಿನ ಪ್ರದೇಶವೊಂದರಲ್ಲಿ ಪಾಕಿಸ್ತಾನ ಸೇನೆಗೆ ಸೇರಿದ ಹೆಲಿಕಾಪ್ಟರ್ ಭೀಕರವಾಗಿ ಪತನಗೊಂಡಿದೆ. ಹೆಲಿಕಾಪ್ಟರ್ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಅಪ್ಪಳಿಸಿದ್ದು, ಬೆಂಕಿ ಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ ಉನ್ನತ ಮಿಲಿಟರಿ ಅಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗವಾದ ಐಎಸ್ಪಿಆರ್ (ISPR) ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಹೆಲಿಕಾಪ್ಟರ್ ಪಿಒಕೆಯ ಮುಜಾಫರಾಬಾದ್ ಸಮೀಪದ ಸೇನಾ ನೆಲೆಯಿಂದ ತುರ್ತು ಕಾರ್ಯಾಚರಣೆಗಾಗಿ ಟೇಕ್-ಆಫ್ ಆಗುತ್ತಿತ್ತು. ನೆಲದಿಂದ ಕೆಲವೇ ಅಡಿಗಳಷ್ಟು ಎತ್ತರಕ್ಕೆ ಹಾರುತ್ತಿದ್ದಂತೆ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
21 Pakistani Army soldiers killed
The Afghan Army shot down a Pakistan Army Aviation Mi-17 helicopter, resulting in heavy losses for the Pakistan Army. pic.twitter.com/hgBdRtwUPI
ನಿಯಂತ್ರಣ ತಪ್ಪಿದ ಹೆಲಿಕಾಪ್ಟರ್ ರನ್ವೇ ಪಕ್ಕದ ಮೈದಾನಕ್ಕೆ ಅಪ್ಪಳಿಸಿತು. ಈ ವೇಳೆ ಇಂಧನ ಟ್ಯಾಂಕ್ ಸ್ಫೋಟಗೊಂಡಿದ್ದರಿಂದ ಇಡೀ ಹೆಲಿಕಾಪ್ಟರ್ ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಭಸ್ಮವಾಗಿದೆ. ಅಪಘಾತದ ತೀವ್ರತೆಗೆ ಹೆಲಿಕಾಪ್ಟರ್ನಲ್ಲಿದ್ದ ಇಬ್ಬರು ಪೈಲಟ್ಗಳು (ಮೇಜರ್ ಶ್ರೇಣಿಯ ಅಧಿಕಾರಿಗಳು) ಮತ್ತು ಇಬ್ಬರು ತಾಂತ್ರಿಕ ಸಿಬ್ಬಂದಿ ಸೇರಿದಂತೆ ಒಟ್ಟು 4ರಿಂದ 5 ಸೈನಿಕರು ಸಜೀವ ದಹನವಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಮೃತದೇಹಗಳನ್ನು ಗುರುತಿಸಲಾಗದಷ್ಟು ಸುಟ್ಟುಹೋಗಿದ್ದು, ಅವುಗಳನ್ನು ಮುಜಾಫರಾಬಾದ್ನ ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕೆಲವು ದಿನಗಳಿಂದ ಪಿಒಕೆಯ ರಾವಲಕೋಟ್ ಮತ್ತು ಮೀರ್ಪುರ ಭಾಗಗಳಲ್ಲಿ ಜಾಯಿಂಟ್ ಅವಮಿ ಆಕ್ಷನ್ ಕಮಿಟಿ (JAAC) ನೇತೃತ್ವದಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ಭಾರಿ ನಾಗರಿಕ ಪ್ರತಿಭಟನೆಗಳು ಮತ್ತು ಹಿಂಸಾಚಾರಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಸೇನೆಯು ಪ್ರತಿಭಟನಾಕಾರರನ್ನು ಹತ್ತಿಕ್ಕಲು ಮತ್ತು ಕಣ್ಗಾವಲು ಇಡಲು ಹೆಲಿಕಾಪ್ಟರ್ಗಳನ್ನು ಬಳಸುತ್ತಿತ್ತು. ಇಂತಹ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಸೇನಾ ಹೆಲಿಕಾಪ್ಟರ್ ಪತನಗೊಂಡಿರುವುದು ಪಾಕಿಸ್ತಾನ ರಕ್ಷಣಾ ಪಡೆಗಳಿಗೆ ದೊಡ್ಡ ಹಿನ್ನಡೆಯಾಗಿದೆ.
PoK. 21 Pakistan Security Forces Killed In Helicopter Crash In PoK. Soldiers Of Pakistan Security Forces Were Onboard In The Neelum Valley Sector Of #POK. The Helicopter was Transporting Additional Troops To The Valley. According To Initial Reports Helicopter Try To Make… pic.twitter.com/wLHZVz6b5o
— Maj Rakesh, Shaurya Chakra,(Kargil War Veteran) (@gorockgo_100) June 10, 2026
ದಾಳಿ ಅಥವಾ ವಿಧ್ವಂಸಕ ಕೃತ್ಯದ ಸಾಧ್ಯತೆಯನ್ನು ಸದ್ಯಕ್ಕೆ ಪಾಕಿಸ್ತಾನ ಸೇನೆ ತಳ್ಳಿಹಾಕಿದ್ದು, ಕೇವಲ ಯಾಂತ್ರಿಕ ವೈಫಲ್ಯದಿಂದಲೇ ಈ ದುರಂತ ಸಂಭವಿಸಿದೆ ಎಂದು ಹೇಳಿದೆ. ಈ ಘಟನೆಯ ಕುರಿತು ಉನ್ನತ ಮಟ್ಟದ ಮಿಲಿಟರಿ ತನಿಖೆಗೆ ಆದೇಶಿಸಲಾಗಿದೆ.
ಪಾಕಿಸ್ತಾನದ ಚೀಫ್ ಆಫ್ ಆರ್ಮಿ ಸ್ಟಾಫ್ ಹಾಗೂ ಚೀಫ್ ಆಫ್ ಡಿಫೆನ್ಸ್ ಫೋರ್ಸಸ್ ಫೀಲ್ಡ್ ಮಾರ್ಷಲ್ ಅಸೀಮ್ ಮುನೀರ್ ಅವರು, ಪಾಕಿಸ್ತಾನ ಸೇನೆಯ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಹೆಲಿಕಾಪ್ಟರ್ ದುರಂತದಲ್ಲಿ ಜೀವಹಾನಿಯಾಗಿರುವುದಕ್ಕೆ ತೀವ್ರ ಕಳವಳ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ಮಿಲಿಟರಿ ನಾಯಕತ್ವವು ಮೃತರ ಕುಟುಂಬಗಳಿಗೆ ತಮಗಿರುವ ತೀವ್ರ ಸಂತಾಪವನ್ನು ಸೂಚಿಸಿದ್ದು, ಕರ್ತವ್ಯದ ಅವಧಿಯಲ್ಲಿ ಪ್ರಾಣ ಕಳೆದುಕೊಂಡ ಸೈನಿಕರಿಗೆ ಗೌರವ ನಮನ ಸಲ್ಲಿಸಿದೆ.
ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರೂ ಸಹ ಮುಜಾಫರಾಬಾದ್ ಸಮೀಪ ನಡೆದ ಹೆಲಿಕಾಪ್ಟರ್ ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತಪಟ್ಟ ಸೇನಾ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅವರು, “ಪಾಕಿಸ್ತಾನದ ಮಣ್ಣಿನ ವೀರ ಪುತ್ರರ ತ್ಯಾಗಕ್ಕೆ ಇಡೀ ದೇಶವೇ ತಲೆಬಾಗುತ್ತದೆ” ಎಂದು ಹೇಳಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಫ್ಘಾನಿಸ್ತಾನ ವಿರುದ್ಧದ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿಯೇ ತಮ್ಮ ಮಾಂತ್ರಿಕ ಬೌಲಿಂಗ್ ಮೂಲಕ ಸಂಚಲನ ಮೂಡಿಸಿದ ಭಾರತದ ಯುವ ಸ್ಪಿನ್ನರ್ ಮಾನವ್ ಸುತಾರ್ ಈಗ ಇಂಗ್ಲಿಷ್ ಪಿಚ್ಗಳಲ್ಲಿ ತಮ್ಮ ಮ್ಯಾಜಿಕ್ ಪ್ರದರ್ಶಿಸಲು ಸಿದ್ಧರಾಗಿದ್ದಾರೆ. ಈ 23 ವರ್ಷದ ಎಡಗೈ ಸ್ಪಿನ್ನರ್ ಇಂಗ್ಲೆಂಡ್ನ ಪ್ರಸಿದ್ಧ ಕೌಂಟಿ ಕ್ಲಬ್ 'ವಾರ್ವಿಕ್ಷೈರ್' ಪರ ಕೌಂಟಿ ಚಾಂಪಿಯನ್ಶಿಪ್ನ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದಾರೆ (PC-BCCI).
ಇದೇ ಮೊದಲ ಬಾರಿಗೆ ಕೌಂಟಿ ಕ್ರಿಕೆಟ್ ಆಡುತ್ತಿರುವ ಮಾನವ್ ಸುತಾರ್ ಇತ್ತೀಚೆಗೆ, ನ್ಯೂ ಚಂಡೀಗಢದಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ತಮ್ಮ ಅಂತಾರಾಷ್ಟ್ರೀಯ ಚೊಚ್ಚಲ ಪಂದ್ಯವನ್ನು ಆಡಿದರು. ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 33 ರನ್ ನೀಡಿ 6 ವಿಕೆಟ್ ಪಡೆದಿದ್ದ ಮಾನವ್, ಎರಡನೇ ಇನ್ನಿಂಗ್ಸ್ನಲ್ಲಿ 1 ವಿಕೆಟ್ ಉರುಳಿಸಿದ್ದರು (PC-BCCI).
ಈ ಪಂದ್ಯದಲ್ಲಿ ಒಟ್ಟು 72 ರನ್ ನೀಡಿ 7 ವಿಕೆಟ್ಗಳನ್ನು ಪಡೆದಿದ್ದ ಮಾನವ್ ಅವರ ಅದ್ಭುತ ಪ್ರದರ್ಶನದಿಂದಾಗಿ ಟೀಂ ಇಂಡಿಯಾ, ಅಫ್ಘಾನಿಸ್ತಾನದ ವಿರುದ್ಧ ಇನ್ನಿಂಗ್ಸ್ ಮತ್ತು 300 ರನ್ಗಳ ಜಯ ದಾಖಲಿಸಿತು. ಈ ಪ್ರದರ್ಶನಕ್ಕಾಗಿ ಮಾನವ್ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು. ಇದೀಗ ಮಾನವ್ಗೆ ಕೌಂಟಿ ಕ್ರಿಕೆಟ್ ತಂಡದಿಂದ ಆಹ್ವಾನವೂ ಬಂದಿದೆ (PC-BCCI).
ದೇಶೀಯ ಕ್ರಿಕೆಟ್ನಲ್ಲೂ ಮಿಂಚಿರುವ ಮಾನವ್ ಸುತಾರ್ ಇದುವರೆಗೆ ಆಡಿರುವ 29 ಪ್ರಥಮ ದರ್ಜೆ ಪಂದ್ಯಗಳಲ್ಲಿ 129 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಐಪಿಎಲ್ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಭಾಗವೂ ಆಗಿರುವ ಮಾನವ್ ಸುತಾರ್, ‘ಮುಂದಿನ ಎರಡು ಕೌಂಟಿ ಚಾಂಪಿಯನ್ಶಿಪ್ ಪಂದ್ಯಗಳಿಗೆ ವಾರ್ವಿಕ್ಷೈರ್ ತಂಡವನ್ನು ಸೇರಲು ನಾನು ತುಂಬಾ ಉತ್ಸುಕನಾಗಿದ್ದೇನೆ. ತಂಡಕ್ಕೆ ನಾನು ಗಮನಾರ್ಹ ಕೊಡುಗೆ ನೀಡಬಹುದೆಂದು ಭಾವಿಸುತ್ತೇನೆ’ ಎಂದಿದ್ದಾರೆ (PC-BCCI).
ವಾರ್ವಿಕ್ಷೈರ್ ಪ್ರಸ್ತುತ ಕೌಂಟಿ ಚಾಂಪಿಯನ್ಶಿಪ್ ಪ್ರಶಸ್ತಿ ರೇಸ್ನಲ್ಲಿ ಮುಂಚೂಣೆಯಲ್ಲಿದೆ. ಇದೀಗ ಈ ತಂಡವನ್ನು ಸೇರಿಕೊಂಡಿರುವ ಸುತಾರ್, ಯಾರ್ಕ್ಷೈರ್ ಮತ್ತು ಸೋಮರ್ಸೆಟ್ ವಿರುದ್ಧದ ಎರಡು ಪಂದ್ಯಗಳಲ್ಲಿ ಆಡುವ ನಿರೀಕ್ಷೆಯಿದೆ. ಯಾರ್ಕ್ಷೈರ್ ವಿರುದ್ಧದ ಪಂದ್ಯವು ಜೂನ್ 12 ರಿಂದ 15 ರವರೆಗೆ ಸ್ಕಾರ್ಬರೋದಲ್ಲಿ ನಡೆಯಲಿದ್ದು, ಸೋಮರ್ಸೆಟ್ ವಿರುದ್ಧದ ಪಂದ್ಯವು ಟೌಂಟನ್ನಲ್ಲಿ ನಡೆಯಲಿದೆ (PC-BCCI).
ಅಫ್ಘಾನಿಸ್ತಾನ ವಿರುದ್ಧದ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿಯೇ ತಮ್ಮ ಮಾಂತ್ರಿಕ ಬೌಲಿಂಗ್ ಮೂಲಕ ಸಂಚಲನ ಮೂಡಿಸಿದ ಭಾರತದ ಯುವ ಸ್ಪಿನ್ನರ್ ಮಾನವ್ ಸುತಾರ್ ಈಗ ಇಂಗ್ಲಿಷ್ ಪಿಚ್ಗಳಲ್ಲಿ ತಮ್ಮ ಮ್ಯಾಜಿಕ್ ಪ್ರದರ್ಶಿಸಲು ಸಿದ್ಧರಾಗಿದ್ದಾರೆ. ಈ 23 ವರ್ಷದ ಎಡಗೈ ಸ್ಪಿನ್ನರ್ ಇಂಗ್ಲೆಂಡ್ನ ಪ್ರಸಿದ್ಧ ಕೌಂಟಿ ಕ್ಲಬ್ 'ವಾರ್ವಿಕ್ಷೈರ್' ಪರ ಕೌಂಟಿ ಚಾಂಪಿಯನ್ಶಿಪ್ನ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದಾರೆ (PC-BCCI).
ಇದೇ ಮೊದಲ ಬಾರಿಗೆ ಕೌಂಟಿ ಕ್ರಿಕೆಟ್ ಆಡುತ್ತಿರುವ ಮಾನವ್ ಸುತಾರ್ ಇತ್ತೀಚೆಗೆ, ನ್ಯೂ ಚಂಡೀಗಢದಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ತಮ್ಮ ಅಂತಾರಾಷ್ಟ್ರೀಯ ಚೊಚ್ಚಲ ಪಂದ್ಯವನ್ನು ಆಡಿದರು. ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 33 ರನ್ ನೀಡಿ 6 ವಿಕೆಟ್ ಪಡೆದಿದ್ದ ಮಾನವ್, ಎರಡನೇ ಇನ್ನಿಂಗ್ಸ್ನಲ್ಲಿ 1 ವಿಕೆಟ್ ಉರುಳಿಸಿದ್ದರು (PC-BCCI).
ಈ ಪಂದ್ಯದಲ್ಲಿ ಒಟ್ಟು 72 ರನ್ ನೀಡಿ 7 ವಿಕೆಟ್ಗಳನ್ನು ಪಡೆದಿದ್ದ ಮಾನವ್ ಅವರ ಅದ್ಭುತ ಪ್ರದರ್ಶನದಿಂದಾಗಿ ಟೀಂ ಇಂಡಿಯಾ, ಅಫ್ಘಾನಿಸ್ತಾನದ ವಿರುದ್ಧ ಇನ್ನಿಂಗ್ಸ್ ಮತ್ತು 300 ರನ್ಗಳ ಜಯ ದಾಖಲಿಸಿತು. ಈ ಪ್ರದರ್ಶನಕ್ಕಾಗಿ ಮಾನವ್ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು. ಇದೀಗ ಮಾನವ್ಗೆ ಕೌಂಟಿ ಕ್ರಿಕೆಟ್ ತಂಡದಿಂದ ಆಹ್ವಾನವೂ ಬಂದಿದೆ (PC-BCCI).
ದೇಶೀಯ ಕ್ರಿಕೆಟ್ನಲ್ಲೂ ಮಿಂಚಿರುವ ಮಾನವ್ ಸುತಾರ್ ಇದುವರೆಗೆ ಆಡಿರುವ 29 ಪ್ರಥಮ ದರ್ಜೆ ಪಂದ್ಯಗಳಲ್ಲಿ 129 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಐಪಿಎಲ್ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಭಾಗವೂ ಆಗಿರುವ ಮಾನವ್ ಸುತಾರ್, ‘ಮುಂದಿನ ಎರಡು ಕೌಂಟಿ ಚಾಂಪಿಯನ್ಶಿಪ್ ಪಂದ್ಯಗಳಿಗೆ ವಾರ್ವಿಕ್ಷೈರ್ ತಂಡವನ್ನು ಸೇರಲು ನಾನು ತುಂಬಾ ಉತ್ಸುಕನಾಗಿದ್ದೇನೆ. ತಂಡಕ್ಕೆ ನಾನು ಗಮನಾರ್ಹ ಕೊಡುಗೆ ನೀಡಬಹುದೆಂದು ಭಾವಿಸುತ್ತೇನೆ’ ಎಂದಿದ್ದಾರೆ (PC-BCCI).
ವಾರ್ವಿಕ್ಷೈರ್ ಪ್ರಸ್ತುತ ಕೌಂಟಿ ಚಾಂಪಿಯನ್ಶಿಪ್ ಪ್ರಶಸ್ತಿ ರೇಸ್ನಲ್ಲಿ ಮುಂಚೂಣೆಯಲ್ಲಿದೆ. ಇದೀಗ ಈ ತಂಡವನ್ನು ಸೇರಿಕೊಂಡಿರುವ ಸುತಾರ್, ಯಾರ್ಕ್ಷೈರ್ ಮತ್ತು ಸೋಮರ್ಸೆಟ್ ವಿರುದ್ಧದ ಎರಡು ಪಂದ್ಯಗಳಲ್ಲಿ ಆಡುವ ನಿರೀಕ್ಷೆಯಿದೆ. ಯಾರ್ಕ್ಷೈರ್ ವಿರುದ್ಧದ ಪಂದ್ಯವು ಜೂನ್ 12 ರಿಂದ 15 ರವರೆಗೆ ಸ್ಕಾರ್ಬರೋದಲ್ಲಿ ನಡೆಯಲಿದ್ದು, ಸೋಮರ್ಸೆಟ್ ವಿರುದ್ಧದ ಪಂದ್ಯವು ಟೌಂಟನ್ನಲ್ಲಿ ನಡೆಯಲಿದೆ (PC-BCCI).
ಬೆಂಗಳೂರು, (ಜೂನ್ 10): ಬೆಂಗಳೂರಿನ ಕಸದ ಟೆಂಡರ್ನಲ್ಲಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಆರೋಪ ಮಾಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿದ್ದು, ಸಿಬಿಐ ತನಿಗೆ ಮನವಿ ಮಾಡಿದೆ. ಇದರ ಬೆನ್ನಲ್ಲೇ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಲೋಕಾಯುಕ್ತಕ್ಕೂ ದೂರು ನೀಡಿದೆ. 36 ಸಾವಿರ ಕೋಟಿ ರೂಪಾಯಿಯ ಬೆಂಗಳೂರು ಕಸದ ಟೆಂಡರ್ ನಲ್ಲಿ ಬರೋಬ್ಬರಿ 10 ಸಾವಿರ ಕೋಟಿ ರೂ. ಕಿಕ್ಬ್ಯಾಕ್ ಪಡೆಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಧೀರಜ್ ಮುನಿರಾಜು ದೂರು ನೀಡಿದ್ದು,ಅಕ್ರಮದ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
ಪವನ್ ಕಲ್ಯಾಣ್ (Pawan Kalyan), ಸ್ಟಾರ್ ನಟರಾಗಿರುವ ಜೊತೆಗೆ ಆಂಧ್ರ ಪ್ರದೇಶ ಸರ್ಕಾರದ ಉಪ ಮುಖ್ಯಮಂತ್ರಿ ಸಹ ಹೌದು. ಹಲವು ಪ್ರಮುಖ ಖಾತೆಗಳನ್ನು ಅವರು ನಿಭಾಯಿಸುತ್ತಿದ್ದಾರೆ. ಇತ್ತೀಚೆಗೆ ನೆರೆ ತೆಲುಗು ರಾಜ್ಯವಾದ ತೆಲಂಗಾಣ ಸರ್ಕಾರ ಹಾಗೂ ಪವನ್ ಕಲ್ಯಾಣ್ ನಡುವೆ ರಾಜಕೀಯ ಭಿನ್ನಾಭಿಪ್ರಾಯಗಳು ಏರ್ಪಟ್ಟಿವೆ. ಇದೀಗ ಡಿಸಿಎಂ ಆದ ಬಳಿಕ ಪವನ್ ಕಲ್ಯಾಣ್ ಅವರು ಮೊದಲ ಬಾರಿಗೆ ಪಾಡ್ಕಾಸ್ಟ್ ಒಂದರಲ್ಲಿ ಭಾಗಿ ಆಗಿದ್ದಾರೆ. ಎಎನ್ಐ ನಡೆಸಿದ ಪಾಡ್ಕಾಸ್ಟ್ನಲ್ಲಿ ಭಾಗವಹಿಸಿದ್ದ ಪವನ್ ಕಲ್ಯಾಣ್, ತಮ್ಮಿಷ್ಟದ ಎರಡು ಹಿಂದಿ ಸಿನಿಮಾಗಳನ್ನು ಹೆಸರಿಸಿದ್ದಾರೆ.
ಪವನ್ ಕಲ್ಯಾಣ್ ಅವರು ಎಎನ್ಐ ಪಾಡ್ಕಾಸ್ಟ್ನಲ್ಲಿ ರಾಜಕೀಯ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದು, ಪಾಡ್ಕಾಸ್ಟ್ನ ಪ್ರೋಮೊ ಮಾತ್ರವೇ ಇದೀಗ ಬಿಡುಗಡೆ ಆಗಿದೆ. ಪಾಡ್ಕಾಸ್ಟ್ನ ಪ್ರೋಮೊನಲ್ಲಿ ತೋರಿಸಿರುವಂತೆ ಸಂದರ್ಶಕಿ, ಪವನ್ ಕಲ್ಯಾಣ್ ಅವರಿಗೆ ಇಷ್ಟದ ಸಿನಿಮಾಗಳ ಬಗ್ಗೆ ಪ್ರಶ್ನಿಸಿದ್ದಾರೆ. ವಿಶೇಷವಾಗಿ ಇತ್ತೀಚೆಗೆ ಇಷ್ಟವಾದ ಹಿಂದಿ ಸಿನಿಮಾಗಳು ಯಾವುವು ಎಂದು ಪ್ರಶ್ನೆ ಕೇಳಿದ್ದಾರೆ.
ಅದಕ್ಕೆ ಪವನ್ ಕಲ್ಯಾಣ್, ‘ನನಗೆ ‘ಧುರಂಧರ್’ ಸಿನಿಮಾ ಬಹಳ ಇಷ್ಟವಾಯ್ತು ಎಂದಿದ್ದಾರೆ. ಜೊತೆಗೆ ‘ಬಾರಾಮುಲ್ಲ’ ಹೆಸರಿನ ಹಿಂದಿ ಸಿನಿಮಾ ಸಹ ಬಹಳ ಇಷ್ಟವಾಯ್ತು ಎಂದಿದ್ದಾರೆ. ‘ಧುರಂಧರ್’ ಸಹಜವಾಗಿಯೇ ಬಹುತೇಕರಿಗೆ ಇಷ್ಟವಾದ ಸಿನಿಮಾ, ಖುದ್ದು ಪ್ರಧಾನಿ ಮೋದಿ ಅವರು ಸಹ ‘ಧುರಂಧರ್’ ಸಿನಿಮಾದ ಬಗ್ಗೆ ಪ್ರಶಂಸಿಸಿ ಮಾತನಾಡಿದ್ದರು. ಪವನ್ ಕಲ್ಯಾಣ್ ಅವರಿಗೂ ಆ ಸಿನಿಮಾ ಇಷ್ಟವಾಗಿದೆ.
‘ಬಾರಾಮುಲ್ಲ’ ಸಿನಿಮಾ ದೊಡ್ಡ ಹಿಟ್ ಸಿನಿಮಾ ಅಲ್ಲದಿದ್ದರೂ ಭಿನ್ನವಾದ ಹಾರರ್ ಸಿನಿಮಾ. ಹೆಸರೇ ಸೂಚಿಸುತ್ತಿರುವಂತೆ ಕಾಶ್ಮೀರದಲ್ಲಿ ನಡೆಯುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ಹಾರರ್ ಕತೆ ಹೊಂದಿರುವ ಜೊತೆಗೆ ಕಾಶ್ಮೀರದ ರಾಜಕೀಯ, ವಸ್ತುಸ್ಥಿತಿಯ ಮೇಲೆಯೂ ಬೆಳಕು ಚೆಲ್ಲುತ್ತದೆ. ವಿಶೇಷವೆಂದರೆ ಈ ಸಿನಿಮಾಕ್ಕೆ ಚಿತ್ರಕತೆ ಬರೆದಿರುವವರು ‘ಧುರಂಧರ್’ ನಿರ್ದೇಶಕ ಆದಿತ್ಯ ಧರ್. ಸಿನಿಮಾ ನಿರ್ದೇಶಿಸಿರುವುದು ಆದಿತ್ಯ ಸುಹಾಸ್.
ಇದೇ ಪಾಡ್ಕಾಸ್ಟ್ನಲ್ಲಿ ಪವನ್ ಕಲ್ಯಾಣ್ ಅವರು ತಾವು ಕಾಶ್ಮೀರದಲ್ಲಿ ಸಿನಿಮಾಗಳನ್ನು ಚಿತ್ರೀಕರಿಸುವಾಗ ಎದುರಿಸುತ್ತಿದ್ದ ಸಮಸ್ಯೆ, ಸ್ಥಳೀಯರಿಂದ ಎದುರಾಗುತ್ತಿದ್ದ ದೌರ್ಜನ್ಯಗಳನ್ನು ನೆನಪು ಮಾಡಿಕೊಂಡಿದ್ದಾರೆ. ಪಾಡ್ಕಾಸ್ಟ್ನಲ್ಲಿ ಅವರು ತಾವು ನಕ್ಸಲೈಟ್ ಆಗಬೇಕೆಂದು ಹೊರಟಿದ್ದಾಗಿಯೂ ಹೇಳಿಕೊಂಡಿದ್ದಾರೆ.
ಉಡುಪಿ, ಜೂನ್ 10: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಜೂನ್ 12 (ಶುಕ್ರವಾರ) ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಶುಕ್ರವಾರ ಮಧ್ಯಾಹ್ನ ಉಡುಪಿಗೆ ಆಗಮಿಸಲಿರುವ ವಿಜಯ್ ಅವರು, ಮಧ್ಯಾಹ್ನ 3 ಗಂಟೆಗೆ ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಲುಪಲಿದ್ದಾರೆ. ದೇವಿಯ ದರ್ಶನ ಮತ್ತು ಪೂಜಾ ಕೈಂಕರ್ಯಗಳನ್ನು ಪೂರೈಸಿದ ನಂತರ, ಅಂದೇ ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೆನ್ನೈಗೆ ವಾಪಸಾಗಲಿದ್ದಾರೆ.
ನವದೆಹಲಿ, ಜೂನ್ 10: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕರ ನಡುವಿನ ಬಂಡಾಯದಿಂದ ಮಮತಾ ಬ್ಯಾನರ್ಜಿ (Mamata Banerjee) ಪಕ್ಷವನ್ನು ಉಳಿಸಿಕೊಳ್ಳುವುದು ಹೇಗೆಂಬ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಧಿಕಾರದಿಂದ ದೂರ ಸರಿದಾಯಿತು, ಇದೀಗ ಪಕ್ಷವೂ ಕೈ ತಪ್ಪಿಹೋಗುತ್ತದೆಯೇ? ಎಂಬ ಆತಂಕದಲ್ಲಿ ದೀದಿ ಇದ್ದಾರೆ. ಇದರ ನಡುವೆ ದೆಹಲಿಯಲ್ಲಿ ‘ಕೈ’ ನಾಯಕರ ಜೊತೆ ಟಿಎಂಸಿ ನಾಯಕರ ಚರ್ಚೆ ನಡೆದಿದ್ದು, ನಿನ್ನೆ ಸೋನಿಯಾ ಗಾಂಧಿಯನ್ನು ಮಮತಾ ಬ್ಯಾನರ್ಜಿ ಭೇಟಿಯಾಗಿದ್ದರು. ಇಂದು ರಾಹುಲ್ ಗಾಂಧಿಯನ್ನು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಭೇಟಿಯಾಗಿದ್ದಾರೆ. ಈ ವೇಳೆ ಮಮತಾ ಬ್ಯಾನರ್ಜಿಗೆ ಎಐಸಿಸಿ ಉಪಾಧ್ಯಕ್ಷರ ಸ್ಥಾನದ ಆಫರ್ ನೀಡಲಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಇದಕ್ಕೆ ದೀದಿ ಒಪ್ಪಿದರೆ ಕಾಂಗ್ರೆಸ್ ಜೊತೆ ಟಿಎಂಸಿ ವಿಲೀನವಾಗಲಿದೆ.
ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ತೀವ್ರ ಆಂತರಿಕ ಬಂಡಾಯ ಮತ್ತು ಸರಣಿ ರಾಜೀನಾಮೆಗಳ ಬೆನ್ನಲ್ಲೇ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಬಲ್ಲ ಅತ್ಯಂತ ಮಹತ್ವದ ಬೆಳವಣಿಗೆಯೊಂದು ವರದಿಯಾಗಿದೆ. ಕಾಂಗ್ರೆಸ್ನ ಉನ್ನತ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ನಡೆದ ರಹಸ್ಯ ಮಾತುಕತೆಯ ನಂತರ, ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಅತ್ಯುನ್ನತ ಹುದ್ದೆಗಳನ್ನು ಆಫರ್ ಮಾಡಲಾಗಿದೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಶಾಸಕರು ಮತ್ತು ಸಂಸದರ ಸರಣಿ ಬಂಡಾಯದಿಂದಾಗಿ ಮಮತಾ ಬ್ಯಾನರ್ಜಿ ಅವರ ಹಿಡಿತ ಸಡಿಲಗೊಳ್ಳುತ್ತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅನ್ನು ಮತ್ತೆ ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನಗೊಳಿಸುವ ಅಥವಾ ಮೈತ್ರಿಯನ್ನು ಸಂಪೂರ್ಣವಾಗಿ ಪುನರ್ರಚಿಸುವ ನಿಟ್ಟಿನಲ್ಲಿ ತೆರೆಮರೆಯ ರಾಜಕೀಯ ಕಸರತ್ತುಗಳು ಆರಂಭವಾಗಿವೆ. ಕಾಂಗ್ರೆಸ್ ಉನ್ನತ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಸಳ ಹಾಗೂ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಟಿಎಂಸಿಯಲ್ಲಿ ಉಂಟಾಗಿರುವ ಬಿರುಕನ್ನು ಬಳಸಿಕೊಂಡು ಬಂಗಾಳದಲ್ಲಿ ಬಿಜೆಪಿಯ ಪ್ರಭಾವವನ್ನು ತಡೆಯಲು ಕಾಂಗ್ರೆಸ್ ಹೈಕಮಾಂಡ್ ಈ ಮಾಸ್ಟರ್ ಪ್ಲಾನ್ ರೂಪಿಸಿದೆ. ಮಾತುಕತೆಯ ವೇಳೆ ಕಾಂಗ್ರೆಸ್ ನಾಯಕರು ಕೆಲವು ಪ್ರಮುಖ ಪ್ರಸ್ತಾಪಗಳನ್ನು ಮಮತಾ ಬ್ಯಾನರ್ಜಿಯ ಮುಂದೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಮತಾ ಬ್ಯಾನರ್ಜಿ ಅವರನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಅಥವಾ ಎಐಸಿಸಿ (AICC) ಉನ್ನತ ನೀತಿ ನಿರೂಪಣಾ ಸಮಿತಿಯ ಮುಖ್ಯಸ್ಥರನ್ನಾಗಿ ಮಾಡಲು ಆಫರ್ ನೀಡಲಾಗಿದೆ.
ಅಭಿಷೇಕ್ ಬ್ಯಾನರ್ಜಿ ಅವರಿಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯಲ್ಲಿ (AICC) ಅತ್ಯಂತ ಪ್ರಭಾವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಅಥವಾ ಲೋಕಸಭೆಯಲ್ಲಿ ಪಕ್ಷದ ಪ್ರಮುಖ ಜವಾಬ್ದಾರಿಯನ್ನು ನೀಡುವ ಭರವಸೆ ನೀಡಲಾಗಿದೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ 58 ಶಾಸಕರು ಬಂಡಾಯ ಎದ್ದು ರಿತಬ್ರತ ಬ್ಯಾನರ್ಜಿ ಅವರನ್ನು ಬೆಂಬಲಿಸಿದ್ದು, ಸಂಸತ್ತಿನಲ್ಲಿ ಸುಖೇಂದು ಶೇಖರ್ ರಾಯ್ ಮತ್ತು ಸುಶ್ಮಿತಾ ದೇವ್ ಅವರಂತಹ ಹಿರಿಯ ನಾಯಕರು ರಾಜ್ಯಸಭೆಗೆ ರಾಜೀನಾಮೆ ನೀಡಿರುವುದು ಮಮತಾ ಬ್ಯಾನರ್ಜಿ ಅವರಿಗೆ ಶಾಕ್ ನೀಡಿದೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರದ ವಿರುದ್ಧ ಜನಾಭಿಪ್ರಾಯ ರೂಪಿಸಿ ಬಿಜೆಪಿ ಭಾರಿ ಯಶಸ್ಸು ಗಳಿಸುತ್ತಿರುವುದರಿಂದ, ಒಂಟಿಯಾಗಿ ಹೋರಾಡುವ ಬದಲು ಕಾಂಗ್ರೆಸ್ ಜೊತೆ ಶಕ್ತಿ ಮರುಸಂಗ್ರಹಿಸುವುದು ಮಮತಾ ಬ್ಯಾನರ್ಜಿಗೂ ಅನಿವಾರ್ಯ ಎನಿಸಿದೆ ಎನ್ನಲಾಗಿದೆ. ಮಮತಾ ಬ್ಯಾನರ್ಜಿ 1998ರಲ್ಲಿ ಕಾಂಗ್ರೆಸ್ ತೊರೆದು ಟಿಎಂಸಿ ಸ್ಥಾಪಿಸಿದ್ದರು. ಇದೀಗ ಸುಮಾರು 3 ದಶಕಗಳ ನಂತರ ಪರಿಸ್ಥಿತಿಯ ಒತ್ತಡಕ್ಕೆ ಮಣಿದು ಕಾಂಗ್ರೆಸ್ ಜೊತೆ ಕೈಜೋಡಿಸುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಈ ಬಂಪರ್ ಆಫರ್ ಕುರಿತು ಮಮತಾ ಬ್ಯಾನರ್ಜಿ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ತಮ್ಮ ಪಾಳಯದಲ್ಲಿ ಉಳಿದುಕೊಂಡಿರುವ ನಿಷ್ಠಾವಂತ ನಾಯಕರು ಹಾಗೂ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿ, ಶೀಘ್ರದಲ್ಲೇ ಅವರು ತಮ್ಮ ಮುಂದಿನ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಟಿಎಂಸಿ ಆಪ್ತ ಮೂಲಗಳು ಸೂಚಿಸಿವೆ. ಒಂದು ವೇಳೆ ಈ ವಿಲೀನ ಅಥವಾ ಮೈತ್ರಿ ಯಶಸ್ವಿಯಾದರೆ, ಅದು ದೇಶದ ರಾಜಕಾರಣದ ದಿಕ್ಕನ್ನೇ ಬದಲಿಸಬಲ್ಲ ದಿಕ್ಸೂಚಿಯಾಗಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ