Headlines

ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ಮದುವೆ ಬಗ್ಗೆ ಭಾರೀ ಚರ್ಚೆ; ಭಾವೀ ಸೊಸೆ ಕುರಿತು ತಾಯಿ ಹೇಳಿದ್ದೇನು? – Kannada News | Abhijeet Dipke Mother’s statement on his Wedding Dipke clarification on CJP Foriegn Fund

ನವದೆಹಲಿ, ಜುಲೈ 30: ಕಾಕ್ರೋಚ್ ಜನತಾ ಪಕ್ಷವು (ಸಿಜೆಪಿ) ಬಹಳ ಕಡಿಮೆ ಅವಧಿಯಲ್ಲಿ ಸಾಕಷ್ಟು ಸದ್ದು ಮಾಡಿದೆ. ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ (Abhijeet Dipke) ದೆಹಲಿಯಲ್ಲಿ ನೀಟ್ ಪತ್ರಿಕೆ ಸೋರಿಕೆ ವಿಷಯದ ಕುರಿತು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಗೆ ಆರಂಭದಲ್ಲಿ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಆದರೆ, ನಂತರ ವಿದ್ಯಾರ್ಥಿಗಳಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಯಿತು. ಈ ಪ್ರತಿಭಟನೆ ಕೂಡ ಯಶಸ್ವಿಯಾಯಿತು. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೂಡ ನೀಡಿದರು. ಇದೀಗ…

Read More

KFCC Meeting On Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ – Kannada News | KFCC Holds Meetings on Farmer Protests and Industry Shutdown Decision over Cauvery Water Dispute on SC Directives

ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನದಿ ನೀರು (Cauvery Water) ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಹೆಚ್ಚಾಗುತ್ತಿದೆ. ತಮಿಳುನಾಡಿಗೆ ನೀರು ಬಿಡಬಾರದು ಎಂದು ಕನ್ನಡಪರ ಸಂಘಟನೆಗಳು ಹೋರಾಟ ಮಾಡುತ್ತಿವೆ. ಇದೇ ವೇಳೆ ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರು ನಟಿಸಿರುವ ‘ಜನ ನಾಯಗನ್’ ಸಿನಿಮಾ ಕರ್ನಾಟಕದ ಹಲವು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಕೆಲವು ಕಡೆಗಳಲ್ಲಿ ಈ ಸಿನಿಮಾದ ಪ್ರದರ್ಶನವನ್ನು ನಿಲ್ಲಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಇದರಿಂದಾಗಿ ಮಂಡ್ಯದಲ್ಲಿ ‘ಜನ ನಾಯಗನ್’ ಪ್ರದರ್ಶನ ರದ್ದಾಗಿದೆ. ಎಲ್ಲ ಸಂಘಟನೆಗಳು ಜೊತೆಯಾಗಿ…

Read More

ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ – Kannada News | Raichur: Mantralaya’s Rayara Matha Finds a Permanent Solution to the Water Problem

ರಾಯಚೂರು, ಜುಲೈ 30: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಹೀಗಾಗಿ ನೀರಿನ ಅಭಾವಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಶ್ರೀಮಠವು ಹೊಸ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದೆ. ತುಂಗಭದ್ರಾ ನದಿಯಿಂದ ಮಳೆಗಾಲದಲ್ಲಿ ಹರಿದುಬರುವ ಹೆಚ್ಚುವರಿ ನೀರನ್ನು ಸಂಗ್ರಹಿಸಿ ಬಳಸಿಕೊಳ್ಳುವ ಉದ್ದೇಶದಿಂದ ಶ್ರೀಮಠದ 40 ಎಕರೆ ಪ್ರದೇಶದಲ್ಲಿ ಬೃಹತ್ ‘ಇಂಪೌಂಡಿಂಗ್ ರಿಸರ್ವೈಯರ್’ ನಿರ್ಮಿಸಲಾಗುತ್ತಿದ್ದು, ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಕಾಮಗಾರಿಯ ಗುದ್ದಲಿ…

Read More

ಕಾವೇರಿ ಹೋರಾಟ: ಮಂಡ್ಯದಲ್ಲಿ ರದ್ದಾಯ್ತು ‘ಜನ ನಾಯಗನ್’ ಶೋ – Kannada News | Jana Nayagan movie shows canceled in Mandya

ಕಾವೇರಿ (Cauvery) ಹೋರಾಟ ಕರ್ನಾಟಕದಲ್ಲಿ ಕಾವೇರುತ್ತಿದೆ. ಕಾವೇರಿ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸಬೇಕೆಂದು ರಾಜ್ಯಕ್ಕೆ ಸೂಚನೆ ನೀಡಿದೆ. ಆದರೆ ರಾಜ್ಯದ ರೈತರು, ಕನ್ನಡಪರ ಸಂಘಟನೆಗಳು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಒತ್ತಾಯಿಸಿದ್ದಾರೆ. ಪ್ರತಿಭಟನೆಗಳು ಸಹ ಆರಂಭವಾಗಿವೆ. ಇದರ ಬೆನ್ನಲ್ಲೆ ಇಂದು (ಜುಲೈ 30) ತಮಿಳುನಾಡಿನ ಸಿಎಂ, ನಟ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ವಿರುದ್ಧ ಸಹ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಕಳೆದ ವಾರ…

Read More

ಪಶ್ಚಿಮ ಘಟ್ಟದಲ್ಲಿ ಮಳೆಯ ಅಬ್ಬರ: ಹಾಲ್ನೊರೆಯಂತೆ ಧುಮ್ಮಿಕ್ಕಿದ ಗೋಕಾಕ್ ಜಲಪಾತ – Kannada News | Gokak Falls Roars Amidst Western Ghats Torrential Rains: Ghataprabha River Overflows, Bridge Submerged

ಬೆಳಗಾವಿ, ಜುಲೈ 30: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಮತ್ತು ಜಲಪಾತಗಳು ತುಂಬಿ ಹರಿಯುತ್ತಿವೆ. ಮಳೆಯ ಅಬ್ಬರಕ್ಕೆ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿರುವ ಪ್ರಸಿದ್ಧ ಗೋಕಾಕ್ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕಿ ಭೋರ್ಗರೆಯುತ್ತಿದೆ. ಹೆಚ್ಚಿದ ನೀರಿನ ಮಟ್ಟದಿಂದಾಗಿ ಸ್ಥಳೀಯ ಜನಜೀವನಕ್ಕೆ ತೊಂದರೆಯಾಗಿದ್ದು, ಗೋಕಾಕ್ ನಗರ ಮತ್ತು ಶಿಂಗಳಾಪುರ ಗ್ರಾಮದ ನಡುವೆ ಇರುವ ಪ್ರಮುಖ ಬ್ರಿಡ್ಜ್‌ ಕಮ್ ಬ್ಯಾರೇಜ್ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇದರಿಂದಾಗಿ ಈ…

Read More

ಟೀಂ ಇಂಡಿಯಾ ಬಾಂಗ್ಲಾಕ್ಕೆ ಬರಲಿದೆ ಎಂಬ ಭರವಸೆ ಇದೆ; ಬಿಸಿಬಿ ಮುಖ್ಯಸ್ಥ ತಮೀಮ್ ಇಕ್ಬಾಲ್ – Kannada News | Team India’s Bangladesh ODI T20 Series: BCB Confident, Official Announcement Soon?

ಪ್ರಸ್ತುತ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ (Team India) ಮುಂದಿನ ತಿಂಗಳು ಆಗಸ್ಟ್ 15 ರಿಂದ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸ ಮಾಡಲಿದೆ. ಇದಾದ ಬಳಿಕ ಸೀಮಿತ ಓವರ್‌ಗಳ ಸರಣಿಗಾಗಿ ಟೀಂ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ (India vs Bangladesh) ಪ್ರವಾಸ ಕೈಗೊಳ್ಳಲಿದೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಆದರೆ ಎರಡೂ ಮಂಡಳಿಗಳು ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆಯನ್ನು ಮಾಡಿಲ್ಲ.ಸದ್ಯಕ್ಕೆ ಕೇಳಿಬಂದಿರುವ ಮಾಹಿತಿ…

Read More

Vastu Tips: ಮನೆಯಲ್ಲಿ ನಿಂತುಹೋದ ಗಡಿಯಾರ ಇಟ್ಟಿದ್ದೀರಾ? ತಕ್ಷಣ ಈ ವಾಸ್ತು ದೋಷದ ಬಗ್ಗೆ ತಿಳಿದುಕೊಳ್ಳಿ! – Kannada News | Vastu Tips for Wall Clocks: Why You Should Never Keep a Stopped Clock at Home

ನಿಂತುಹೋದ ಗಡಿಯಾರ ವಾಸ್ತು ದೋಷImage Credit source: Getty Images ಮನೆಯಲ್ಲಿ ಪ್ರತಿಯೊಂದು ವಸ್ತುವನ್ನು ಇಡುವ ದಿಕ್ಕು ಮತ್ತು ಸ್ಥಿತಿಯ ಬಗ್ಗೆ ವಾಸ್ತು ಶಾಸ್ತ್ರದಲ್ಲಿ (Vastu Shastra) ವಿಶೇಷ ಮಹತ್ವ ನೀಡಲಾಗಿದೆ. ಇದರ ಭಾಗವಾಗಿ, ಗಡಿಯಾರವು ಕೇವಲ ಸಮಯವನ್ನು ತೋರಿಸುವ ಸಾಧನವಲ್ಲ; ಬದಲಾಗಿ ಅದು ಸಮಯದ ಹರಿವು, ಜೀವನದ ನಿರಂತರ ಪ್ರಗತಿ ಮತ್ತು ಮನೆಯ ಸಕಾರಾತ್ಮಕ ಶಕ್ತಿಯ ಸಂಕೇತವಾಗಿದೆ. ಅದಕ್ಕಾಗಿಯೇ ವಾಸ್ತು ತಜ್ಞರು ಮನೆಯಲ್ಲಿ ನಿಂತುಹೋದ, ಮುರಿದ ಅಥವಾ ದೀರ್ಘಕಾಲದಿಂದ ಕೆಲಸ ಮಾಡದ ಗಡಿಯಾರಗಳನ್ನು ಇಡದಂತೆ ಸಲಹೆ…

Read More

ಕಟ್ಟಡ ಡೆಮಾಲಿಷನ್ ಮಾಡುವ ಮುನ್ನ ಎಚ್ಚರ! ಇನ್ಮುಂದೆ ಬರಲಿದೆ ಹೊಸ ನಿಯಮ – Kannada News | Caution Before Demolishing a Building: New Demolition Rules Coming Soon

ಪ್ರಾತಿನಿಧಿಕ ಚಿತ್ರ Image Credit source: Getty images ಬೆಂಗಳೂರು, ಜುಲೈ 30: ಕಟ್ಟಡ ತ್ಯಾಜ್ಯ ವಿಲೇವಾರಿ ಸೇರಿದಂತೆ ಕಸ ಸುರಿಯುವವರ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕ್ರಮಕ್ಕೆ ಮುಂದಾಗಿದೆ. ಆ ಮೂಲಕ ನಗರದ ಅಂದ ಹಾಳಾಗದಂತೆ ವಹಿಸಲಾಗುತ್ತಿದೆ. ಇನ್ನು ಕಟ್ಟಡ ಅವಶೇಷಗಳನ್ನು ಎಲ್ಲೆಂದರಲ್ಲಿ ಸುರಿಯುವುದಕ್ಕೆ ಬ್ರೇಕ್ ಹಾಕಲು ಪಾಲಿಕೆ ಹೊಸ ನಿಯಮ ಜಾರಿಗೆ ಮುಂದಾಗಿದೆ. ಇನ್ಮುಂದೆ ಕಟ್ಟಡ ಅವಶೇಷ ವಿಲೇವಾರಿಗೂ (Demolition)  ನಿಯಮಗಳು ಬರಲಿವೆ. ಎಲ್ಲೆಂದರಲ್ಲಿ ಕಟ್ಟಡದ ಅವಶೇಷ ವಿಲೇವಾರಿ ಮಾಡಿದರೆ ಬೀಳುತ್ತೆ ದಂಡ …

Read More

HIV ತವರಾಗುತ್ತಿದೆಯಾ ಬೆಂಗಳೂರು?: ಯುವ ಜನತೆಯಲ್ಲೇ ಸೋಂಕು ಪತ್ತೆಯಿಂದ ಹೆಚ್ಚಿದ ಆತಂಕ – Kannada News | Is Bengaluru Becoming an HIV Hotspot? Rising Infections Among Youth Trigger Concern

ಬೆಂಗಳೂರು, ಜುಲೈ 30:  ಸಲಿಂಗ ಕಾಮದ ಪರಿಣಾಮವಾಗಿ ಬೆಂಗಳೂರಿನಲ್ಲಿ ಹೆಚ್​​ಐವಿ ಸೋಂಕಿತ ಪುರುಷರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಡೇಟಿಂಗ್​​ ಆ್ಯಪ್​​ಗಳ ಹೆಚ್ಚಳವೂ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಆತಂಕಕಾರಿ ವಿಚಾರವೆಂದರೆ ಕಾಲೇಜು ಮತ್ತು ವಿಶ್ವ ವಿದ್ಯಾಲಯಗಳ ಹಾಸ್ಟೆಲ್​​ ವಿದ್ಯಾರ್ಥಿಗಳು ಮತ್ತು ಪಿಜಿಗಳಲ್ಲಿ ನೆಲೆಸಿರುವವರೇ ಹೆಚ್ಚಿನ ಪೈಕಿ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಶಾಲಾ ಕಾಲೇಜುಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಐದೇ ತಿಂಗಳಲ್ಲಿ 4,795 HIV ಪಾಸಿಟಿವ್ ಕೇಸ್ ಪತ್ತೆ ಕಳೆದ 5 ತಿಂಗಳ ಅವಧಿಯಲ್ಲಿ…

Read More

Gangeshwar Mahadev Temple: ಸಮುದ್ರದ ಅಲೆಗಳೇ ಶಿವನಿಗೆ ಅಭಿಷೇಕ ಮಾಡುವ ಅದ್ಭುತ ಕ್ಷೇತ್ರ; ಪಾಂಡವರು ಪ್ರತಿಷ್ಠಾಪಿಸಿದ ಪಂಚ ಶಿವಲಿಂಗಗಳ ವಿಶೇಷತೆ ಇಲ್ಲಿದೆ – Kannada News | Gangeshwar Mahadev Temple: The Unique Diu Temple Where Sea Waves Perform Abhishekam

ಗಂಗೇಶ್ವರ ಮಹಾದೇವ ದೇವಸ್ಥಾನImage Credit source: youtube ಭಾರತದ ಅನೇಕ ಪ್ರಾಚೀನ ಶಿವ ದೇವಾಲಯಗಳು ತಮ್ಮ ಪೌರಾಣಿಕ ಹಿನ್ನೆಲೆ ಮತ್ತು ಅದ್ಭುತ ವೈಶಿಷ್ಟ್ಯಗಳಿಂದ ಭಕ್ತರನ್ನು ಆಕರ್ಷಿಸುತ್ತವೆ. ಅಂತಹ ಅಪರೂಪದ ಕ್ಷೇತ್ರಗಳಲ್ಲಿ ಗುಜರಾತ್‌ನ ದಿಯು (Diu) ಸಮೀಪದ ಫುದಮ್ (Fudam) ಗ್ರಾಮದಲ್ಲಿರುವ ಗಂಗೇಶ್ವರ ಮಹಾದೇವ ದೇವಸ್ಥಾನ ಕೂಡ ಒಂದು. ಅರಬ್ಬೀ ಸಮುದ್ರದ ತೀರದಲ್ಲಿರುವ ಈ ದೇವಾಲಯವು ಮಹಾಭಾರತದ ಪಾಂಡವರೊಂದಿಗೆ ಸಂಬಂಧ ಹೊಂದಿದೆ ಎಂಬ ನಂಬಿಕೆ ಇರುವುದರಿಂದ ಭಕ್ತರ ಪಾಲಿಗೆ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ. ಇಲ್ಲಿ ಪ್ರಕೃತಿ ಮತ್ತು ಭಕ್ತಿಯ…

Read More