ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ – Kannada News | Viral Video: Auto rickshaw Flips Avoiding Scooter Collision in Odisha

ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ಆಟೋರಿಕ್ಷಾವೊಂದು ಪಲ್ಟಿಯಾಗಿರುವ ಘಟನೆ ಒಡಿಶಾದ ರಾಷ್ಟ್ರೀಯ ಹೆದ್ದಾರಿ -55 ರಲ್ಲಿ ನಡೆದಿದೆ. ಆಟೋರಿಕ್ಷಾದಲ್ಲಿದ್ದ 5 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಆಟೋರಿಕ್ಷಾ ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಸಡನ್​​ ಬ್ರೇಕ್ ಹಾಕಿದ್ದರಿಂದ ವಾಹನ ಪಲ್ಟಿಯಾಗಿರುವುದನ್ನು ಕಾಣಬಹುದು.

ಇದನ್ನೂ ಓದಿ: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

 

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ – Kannada News | Mouna Guddemane Became Heroine For Krishna Rukku Serial

ಮೌನ ಗುಡ್ಡೇಮನೆ ಅವರು ಇಷ್ಟು ದಿನ ‘ರಾಮಾಚಾರಿ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆಯುತ್ತಿದ್ದರು. ಈಗ ಮೌನ ಅವರು ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಯಲ್ಲಿ ರುಕ್ಕು ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಿದೆ. ಎಂತಹುದೇ ಕಷ್ಟ ಬಂದರೂ ಅದರಲ್ಲಿ ನಗು ಕಾಣೋದು ರುಕ್ಕು ಸ್ವಭಾವ. ಕೃಷ್ಣನ ಪಾತ್ರದಲ್ಲಿ ಅಕ್ಷಯ್ ನಾಯಕ್ ನಟಿಸಿದ್ದಾರೆ.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Weekly Job Horoscope: ಈ ರಾಶಿಯವರಿಗೂ ವೃತ್ತಿಜೀವನದಲ್ಲಿ ಎದುರಾಗಬಹುದಾದ ಸವಾಲುಗಳನ್ನು ತಾಳ್ಮೆಯಿಂದ ನಿಭಾಯಿಸಿ – Kannada News | Weekly job horoscope career forecast feb 8 14 2026

8-02-2026ರಿಂದ 14-02-2026 ರವರೆಗೆ ಉದ್ಯೋಗದಾತರು ಬಗ್ಗೆ ಅತಿಯಾದ ನಿಗಾ ಇಡುವ ಅವಶ್ಯಕತೆ ಇಲ್ಲದೇ ಇದ್ದರೂ ಚಿಂತೆ ಮಾತ್ರ ಒಂದಾದಮೇಲೆ ಒಂದರಂತೆ ಬರಲಿದೆ. ನಿಮ್ಮ ಸಮಯವನ್ನು ಸೃಜನಾತ್ಮಕವಾಗಿ ಬಳಸಿಕೊಂಡರೆ ಯಶಸ್ಸು ಸಾಧ್ಯ.

ಮೇಷ

​ಕುಜನ ಪ್ರಭಾವದಿಂದ ಉದ್ಯೋಗದಲ್ಲಿ ಧೈರ್ಯದ ನಿರ್ಧಾರ ತೆಗೆದುಕೊಳ್ಳುವಿರಿ. ಹೊಸ ಜವಾಬ್ದಾರಿಗಳು ಹುಡುಕಿಕೊಂಡು ಬರಲಿವೆ. ಸಹೋದ್ಯೋಗಿಗಳೊಂದಿಗೆ ವಾಗ್ವಾದ ಬೇಡ. ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದ್ದು, ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಶುಭ ವಾರ್ತೆ ಸಿಗಲಿದೆ.

ವೃಷಭ

​ಶುಕ್ರನ ಸಂಚಾರವು ವೃತ್ತಿಜೀವನದಲ್ಲಿ ಸ್ಥಿರತೆ ನೀಡಲಿದೆ. ಕಲಾತ್ಮಕ ಕ್ಷೇತ್ರಗಳಲ್ಲಿರುವವರಿಗೆ ಉತ್ತಮ ಅವಕಾಶಗಳು ಲಭಿಸಲಿವೆ. ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಲಾಭದಾಯಕ ವಾರವಿದು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಿಂದ ನಿಮ್ಮ ಗುರಿ ತಲುಪುವಿರಿ.

ಮಿಥುನ

​ಬುಧನ ಚಲನೆಯಿಂದಾಗಿ ಸಂವಹನ ಕ್ಷೇತ್ರದಲ್ಲಿದ್ದವರಿಗೆ ಯಶಸ್ಸು ಸಿಗಲಿದೆ. ಕೆಲಸ ಬದಲಿಸುವ ಆಲೋಚನೆ ಇದ್ದರೆ ಇದು ಸಕಾಲ. ಸಂದರ್ಶನಗಳಲ್ಲಿ ಆತ್ಮವಿಶ್ವಾಸದಿಂದ ಪಾಲ್ಗೊಳ್ಳಿ. ಹೊಸ ಕೌಶಲ್ಯಗಳನ್ನು ಕಲಿಯಲು ಸಮಯ ಮೀಸಲಿಡಿ, ಇದು ಭವಿಷ್ಯದ ಪ್ರಗತಿಗೆ ಪೂರಕವಾಗಲಿದೆ.

ಕರ್ಕಾಟಕ

​ಚಂದ್ರನ ಬದಲಾವಣೆಯಿಂದ ಕೆಲಸದಲ್ಲಿ ಏರಿಳಿತವಿರಬಹುದು. ತಾಳ್ಮೆಯಿಂದ ಕೆಲಸ ಮಾಡುವುದು ಅಗತ್ಯ. ಕಚೇರಿಯ ರಾಜಕೀಯದಿಂದ ದೂರವಿರಿ. ವಾರದ ಮಧ್ಯಭಾಗದಲ್ಲಿ ಪ್ರಗತಿಯ ಹಾದಿ ಸುಗಮವಾಗಲಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಖಂಡಿತ ದೊರೆಯಲಿದೆ.

​ಸಿಂಹ

​ಸೂರ್ಯನ ಪ್ರಭಾವದಿಂದ ನಾಯಕತ್ವದ ಗುಣಗಳು ಮೆಚ್ಚುಗೆ ಪಡೆಯಲಿವೆ. ಆಡಳಿತಾತ್ಮಕ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಸ್ವಂತ ಉದ್ಯಮ ಮಾಡುವವರಿಗೆ ಹೊಸ ಒಪ್ಪಂದಗಳು ಸಿಗಲಿವೆ. ನಿಮ್ಮ ಶಕ್ತಿಯ ಮೇಲೆ ನಂಬಿಕೆಯಿರಲಿ, ಈ ವಾರ ದೊಡ್ಡ ಸಾಧನೆ ಮಾಡುವಿರಿ.

ಕನ್ಯಾ

​ಕೆಲಸದ ಸ್ಥಳದಲ್ಲಿ ಸಣ್ಣಪುಟ್ಟ ಸವಾಲುಗಳು ಎದುರಾಗಬಹುದು. ಯೋಜನೆಗಳ ಅನುಷ್ಠಾನದಲ್ಲಿ ನಿಖರತೆ ಇರಲಿ. ತಾಂತ್ರಿಕ ವಲಯದವರಿಗೆ ಈ ವಾರ ಅತ್ಯಂತ ಲಾಭದಾಯಕವಾಗಿದೆ. ಕಠಿಣ ಪರಿಶ್ರಮದಿಂದ ಅಸಾಧ್ಯವಾದದ್ದನ್ನು ಸಾಧಿಸುವಿರಿ. ಮೇಲಧಿಕಾರಿಗಳ ಪ್ರೋತ್ಸಾಹ ನಿಮ್ಮ ಉತ್ಸಾಹ ಹೆಚ್ಚಿಸಲಿದೆ.

ತುಲಾ

​ವೃತ್ತಿಜೀವನದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ಪಾಲುದಾರಿಕೆ ವ್ಯವಹಾರಗಳಲ್ಲಿ ಲಾಭದಾಯಕ ಬದಲಾವಣೆ ಕಂಡುಬರಲಿದೆ. ಹೊಸ ಉದ್ಯೋಗದ ಆಫರ್ ಬರುವ ಸಾಧ್ಯತೆಯಿದೆ. ಟೀಮ್ ವರ್ಕ್ ಮೂಲಕ ಕಷ್ಟದ ಕೆಲಸಗಳನ್ನು ಸುಲಭವಾಗಿ ಮುಗಿಸುವಿರಿ. ಆರ್ಥಿಕವಾಗಿ ವಾರವು ಶುಭವಾಗಿದೆ.

ವೃಶ್ಚಿಕ

​ಗುಪ್ತ ಶತ್ರುಗಳ ಬಗ್ಗೆ ಎಚ್ಚರಿಕೆ ಇರಲಿ. ನಿಮ್ಮ ಕೆಲಸದ ಮೇಲೆ ಹೆಚ್ಚಿನ ಗಮನ ಹರಿಸಿ. ಸಂಶೋಧನೆ ಮತ್ತು ತನಿಖಾ ಕ್ಷೇತ್ರದಲ್ಲಿರುವವರಿಗೆ ಪ್ರಗತಿ ಸಿಗಲಿದೆ. ವಾರದ ಅಂತ್ಯಕ್ಕೆ ವೃತ್ತಿಯಲ್ಲಿ ದೊಡ್ಡ ತಿರುವು ಸಿಗುವ ಸಾಧ್ಯತೆಯಿದೆ. ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ.

ಧನು

​ಗುರು ಗ್ರಹದ ಕೃಪೆಯಿಂದ ಉದ್ಯೋಗದಲ್ಲಿ ಬಡ್ತಿ ಅಥವಾ ವರ್ಗಾವಣೆಯ ಯೋಗವಿದೆ. ಶೈಕ್ಷಣಿಕ ಕ್ಷೇತ್ರದಲ್ಲಿರುವವರಿಗೆ ಉತ್ತಮ ಗೌರವ ಸಿಗಲಿದೆ. ದೂರದ ಪ್ರಯಾಣದಿಂದ ಕೆಲಸದಲ್ಲಿ ಅನುಕೂಲವಾಗಲಿದೆ. ನಿಮ್ಮ ಸಲಹೆಗಳಿಗೆ ಕಚೇರಿಯಲ್ಲಿ ಹೆಚ್ಚಿನ ಬೆಲೆ ಸಿಗುವ ವಾರವಿದು.

ಮಕರ

​ಶನಿಯ ಪ್ರಭಾವದಿಂದ ಕೆಲಸದ ಹೊರೆ ಹೆಚ್ಚಿರಲಿದೆ. ಶಿಸ್ತು ಮತ್ತು ಸಮಯಪ್ರಜ್ಞೆ ನಿಮಗೆ ಯಶಸ್ಸು ತಂದುಕೊಡಲಿದೆ. ಹಳೆಯ ಬಾಕಿ ಕೆಲಸಗಳು ಪೂರ್ಣಗೊಳ್ಳಲಿವೆ. ತಾಳ್ಮೆಯಿಂದ ಕಾರ್ಯನಿರ್ವಹಿಸಿದರೆ ಉದ್ಯೋಗದಲ್ಲಿ ಉನ್ನತ ಸ್ಥಾನಕ್ಕೇರುವಿರಿ. ಹೂಡಿಕೆಗಳ ಬಗ್ಗೆ ಜಾಗರೂಕರಾಗಿರಿ.

​ಕುಂಭ

​ನವೀನ ಆಲೋಚನೆಗಳು ನಿಮ್ಮ ವೃತ್ತಿಜೀವನಕ್ಕೆ ಹೊಸ ವೇಗ ನೀಡಲಿವೆ. ಐಟಿ ಮತ್ತು ಮಾಧ್ಯಮ ಕ್ಷೇತ್ರದಲ್ಲಿರುವವರಿಗೆ ಶುಭ ಕಾಲ. ಸಹೋದ್ಯೋಗಿಗಳ ಬೆಂಬಲದಿಂದ ದೊಡ್ಡ ಪ್ರಾಜೆಕ್ಟ್ ಪೂರ್ಣಗೊಳಿಸುವಿರಿ. ಸಮಾಜಮುಖಿ ಕೆಲಸಗಳಲ್ಲಿ ನಿಮ್ಮ ಪಾತ್ರ ಹಿರಿದಾಗಿರಲಿದೆ.

ಮೀನ

​ಸೃಜನಶೀಲ ಕೆಲಸಗಳಲ್ಲಿ ಲಾಭ ದೊರೆಯಲಿದೆ. ನಿಮ್ಮ ಕೆಲಸಕ್ಕೆ ಸಮಾಜದಲ್ಲಿ ಮನ್ನಣೆ ಸಿಗಲಿದೆ. ಉದ್ಯೋಗದ ನಿಮಿತ್ತ ವಿದೇಶ ಪ್ರಯಾಣದ ಸಂಭವವಿದೆ. ಆರ್ಥಿಕವಾಗಿ ಸದೃಢರಾಗುವಿರಿ. ಮನಸ್ಸಿನ ಗೊಂದಲ ಬಿಟ್ಟು ಏಕಾಗ್ರತೆಯಿಂದ ಕೆಲಸ ಮಾಡಿ, ಅದೃಷ್ಟ ನಿಮ್ಮ ಬೆನ್ನಿಗಿದೆ.

​- ಲೋಹಿತ ಹೆಬ್ಬಾರ್ – 8762924271 (what’s app only)

Source link

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ! ಮೂವರು ಆರೋಪಿಗಳು ವಶಕ್ಕೆ – Kannada News | Bengaluru Airport Customs Seize Rs 2.97 Cr Hydro Ganja; 3 Arrested for Smuggling

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ!

ಬೆಂಗಳೂರು, ಫೆಬ್ರವರಿ 07: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (International Airport) ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಎಂಟೂ ವರೆ ಕೆಜಿ ಹೈಡ್ರೋ ಗಾಂಜಾ ಪತ್ತೆ

ಥಾಯ್ಲೆಂಡ್‌ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್ ವಿಭಾಗದಲ್ಲಿ ಪರಿಶೀಲಿಸಿದ ವೇಳೆ, ಪ್ಯಾಕೆಟ್‌ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಮೌಲ್ಯವನ್ನು ಸುಮಾರು 2.97 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!

ಮೂವರನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು!

ಗಾಂಜಾ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದ ಹಿಂದೆ ಇರುವ ಜಾಲ ಹಾಗೂ ವಿದೇಶಿ ಸಂಪರ್ಕಗಳ ಕುರಿತು ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 2:38 pm, Sat, 7 February 26

Source link

Love Horoscope: ಪ್ರೇಮಿಗಳಿಗೆ ಫೆ.14ರವರೆಗೆ ಎಚ್ಚರಿಕೆ, ನಿಮ್ಮ ಸಂಬಂಧದಲ್ಲಿ ಮಹತ್ವದ ತಿರುವು – Kannada News | Weekly Love Predictions Feb 8 14: Astrological Guide for Your Valentine’s Day Romance

ಫೆಬ್ರವರಿ 08ರಿಂದ ಫೆಬ್ರವರಿ 14ರ ವರೆಗೆ ಈ ತಿಂಗಳ ಎರಡನೇ ವಾರವಾಗಿದ್ದು. ಪ್ರೇಮಕ್ಕೆ ಸಂಬಂಧಿಸಿದಂತೆ ಉತ್ಸಾಹ ನಿಮ್ಮಲ್ಲಿ ಕಾಣಿಸುವುದು. ಪ್ರೇಮಿಗಳ ದಿನದ ಸಿದ್ಧತೆಯಲ್ಲಿ ಇರುವ ನಿಮಗೆ ಎಲ್ಲವೂ ಕೂಡಿಬರಬೇಕೆಂದಿಲ್ಲ. ಕೆಲವರಿಗೆ ಅಸೆ ಭಂಗವಾಗಲಿದೆ. ಭವಿಷ್ಯದ ಬಗ್ಗೆ ನಿರ್ದಿಷ್ಟತೆ ನಿಮ್ಮದಾಗಿಲಿ.

​ಮೇಷ:

ಸಂಬಂಧದಲ್ಲಿ ಕೊಂಚ ಬಿಸಿ ಇರಲಿದೆ. ಅತಿಯಾದ ಕೋಪ ಪ್ರೀತಿಯನ್ನು ದೂರ ಮಾಡಬಹುದು. ಸಂಗಾತಿಯ ಮಾತಿಗೆ ದನಿಗೂಡಿಸಿ, ವಾರಾಂತ್ಯದ ವೇಳೆಗೆ ಪರಿಸ್ಥಿತಿ ತಣ್ಣಗಾಗಲಿದೆ.

​ವೃಷಭ:

ಪ್ರೀತಿಯ ಹೂವು ಅರಳುವ ಕಾಲವಿದು. ಸಂಗಾತಿಯೊಂದಿಗೆ ಐಷಾರಾಮಿ ಸಮಯ ಕಳೆಯುವಿರಿ. ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ದುಬಾರಿ ಉಡುಗೊರೆಗಿಂತ ನಿಮ್ಮ ‘ಸಮಯ’ ನೀಡಿದಲ್ಲಿ ಸಂಬಂಧ ಗಟ್ಟಿಯಾಗುವುದು.

​ಮಿಥುನ:

ಈ ವಾರ ಸಂವಹನವೇ ನಿಮ್ಮ ಅಸ್ತ್ರ. ಮನಬಿಚ್ಚಿ ಮಾತನಾಡಿ. ಸಣ್ಣ ತಪ್ಪು ತಿಳುವಳಿಕೆಗಳು ಕಾಡಬಹುದು, ಆದರೆ ನಿಮ್ಮ ಚಾಕಚಕ್ಯತೆಯಿಂದ ಅದನ್ನು ಸರಿಪಡಿಸಿಕೊಳ್ಳುವಿರಿ.

​ಕರ್ಕಾಟಕ:

ಭಾವನಾತ್ಮಕ ಬೆಂಬಲ ಸಿಗುವ ವಾರ. ನಿಮ್ಮ ಸಂಗಾತಿಯೇ ನಿಮಗೆ ಶಕ್ತಿಯಾಗಲಿದ್ದಾರೆ. ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತಾ ಪ್ರೇಮಿಗಳ ದಿನವನ್ನು ಸಂಭ್ರಮಿಸುವಿರಿ.

​ಸಿಂಹ:

ಸಂಬಂಧದಲ್ಲಿ ನಿಮ್ಮದೇ ಮೇಲುಗೈ ಇರಬೇಕೆಂಬ ಹಠ ಬೇಡ. ಸಂಗಾತಿಗೆ ಸ್ವಲ್ಪ ಸ್ವಾತಂತ್ರ್ಯ ನೀಡಿ. ಅವರ ಸಣ್ಣ ಸಾಧನೆಗಳನ್ನು ಹೊಗಳುವ ಮೂಲಕ ಅವರ ಮನಗೆಲ್ಲಬಹುದು.

​ಕನ್ಯಾ:

ಪ್ರೇಮಕ್ಕಿಂತ ಪ್ರಾಯೋಗಿಕತೆಗೆ ಹೆಚ್ಚು ಒತ್ತು ನೀಡುವಿರಿ. ಪ್ರೀತಿಪಾತ್ರರಿಗೆ ನಿಮ್ಮ ಕೆಲಸದ ನಡುವೆಯೂ ಸ್ವಲ್ಪ ಸಮಯ ಮೀಸಲಿಡಿ. ವಾರಾಂತ್ಯದಲ್ಲಿ ಸಣ್ಣ ಪ್ರವಾಸದ ಯೋಗವಿದೆ.

​ತುಲಾ:

ಪ್ರೇಮ ಲೋಕದಲ್ಲಿ ನೀವು ರಾಜ, ರಾಣಿಯರಂತೆ ಮನೋಹರವಾಗಿ ನಿಮ್ಮ ಸಂಬಂಧವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಿದೆ. ನಿಮ್ಮ ಆಕರ್ಷಣೆ ಹೆಚ್ಚಲಿದೆ.

​ವೃಶ್ಚಿಕ:

ಸಂಬಂಧದಲ್ಲಿ ತೀವ್ರತೆ ಇರಲಿದೆ. ಅಸೂಯೆ ಮತ್ತು ಸಂಶಯಕ್ಕೆ ಜಾಗ ನೀಡಬೇಡಿ. ಸಂಗಾತಿಯನ್ನು ಪೂರ್ಣವಾಗಿ ನಂಬಿ, ಪ್ರೀತಿಯಲ್ಲಿ ಹೊಸ ಆಯಾಮವನ್ನು ಕಾಣುವಿರಿ.

​ಧನು:

ಹೊಸ ಸಾಹಸಗಳಿಗೆ ಈ ವಾರ ಮುನ್ನುಡಿ. ಸಂಗಾತಿಯೊಂದಿಗೆ ದೂರಪ್ರಯಾಣ ಹೋಗುವಿರಿ. ಅವಿವಾಹಿತರಿಗೆ ಹಳೆಯ ಗೆಳೆಯ/ಗೆಳತಿಯಿಂದ ಪ್ರೇಮ ನಿವೇದನೆಯಾಗುವ ಸಾಧ್ಯತೆ ಇದೆ.

​ಮಕರ:

ಗಂಭೀರ ಚರ್ಚೆಗಳಿಗೆ ಇದು ಸಮಯವಲ್ಲ. ಸಂಬಂಧದಲ್ಲಿ ಹಾಸ್ಯ ಮತ್ತು ಲವಲವಿಕೆ ಇರಲಿ. ಸಂಗಾತಿಯ ಇಷ್ಟ-ಕಷ್ಟಗಳಿಗೆ ಸ್ಪಂದಿಸಿದರೆ ವಾರ ಪೂರ್ತಿ ನೆಮ್ಮದಿ ಇರಲಿದೆ.

​ಕುಂಭ:

ನೀವು ಈ ವಾರ ಅನಿರೀಕ್ಷಿತ ಪ್ರೇಮ ಪ್ರಸ್ತಾಪವನ್ನು ಎದುರಿಸಬಹುದು. ಸೃಜನಾತ್ಮಕವಾಗಿ ಪ್ರೀತಿಯನ್ನು ವ್ಯಕ್ತಪಡಿಸಿ. ಸಂಗಾತಿಯೊಂದಿಗೆ ಹಂಚಿಕೊಳ್ಳುವ ಪ್ರತಿ ಕ್ಷಣವೂ ನೆನಪಿನಲ್ಲಿ ಉಳಿಯಲಿದೆ.

​ಮೀನ:

ಕನಸುಗಳ ಲೋಕದಲ್ಲಿ ತೇಲುವಿರಿ. ನಿಮ್ಮ ಭಾವನೆಗಳನ್ನು ಕವಿತೆ ಅಥವಾ ಪತ್ರದ ಮೂಲಕ ತಿಳಿಸಿ. ಸಂಗಾತಿಯ ಕಣ್ಣಲ್ಲಿ ಕಣ್ಣಿಟ್ಟು ಮಾತನಾಡುವುದು ಸಂಬಂಧವನ್ನು ಮತ್ತಷ್ಟು ಮಧುರವಾಗಿಸುತ್ತದೆ.

– ಲೋಹಿತ ಹೆಬ್ಬಾರ್

Source link

ದಿನಸಿ ಮಾರ್ಟ್ ಮುಂದೆ ರೌಡಿಸಂ: ಡೆಲಿವರಿ ಬಾಯ್ಸ್​ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು! – Kannada News | Bengaluru Delivery Boy Assault: Miscreants Brutally Attack at Bagaluru Grocery Mart

ಬೆಂಗಳೂರು, ಫೆಬ್ರುವರಿ 07: ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಕಡಿವಾಣ ಇಲ್ಲದಂತಾಗಿದೆ. ಈಶಾನ್ಯ ವಿಭಾಗದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಸಮೀಪದ ದಿನಸಿ ಡೆಲಿವರಿ ಮಾರ್ಟ್ ಬಳಿ ಡೆಲಿವರಿ ಬಾಯ್ಸ್ ಮೇಲೆ ಮನಬಂದಂತೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ದಿನಸಿ ಆರ್ಡರ್ ಪಡೆಯಲು ಬಂದಿದ್ದ ಸಿಬ್ಬಂದಿಯ ಮೇಲೆ ಐದಾರು ಮಂದಿ ಕಿಡಿಗೇಡಿಗಳು ಗುಂಪುಗುಂಪಾಗಿ ದಾಳಿ ನಡೆಸಿ, ಹೆಲ್ಮೆಟ್ ಹಾಗೂ ಕೈಗೆ ಸಿಕ್ಕ ವಸ್ತುಗಳಿಂದ ಥಳಿಸಿದ್ದಾರೆ. ಮಾರ್ಟ್ ಒಳಗಡೆ ನುಗ್ಗಿಯೂ ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಈ ಘಟನೆಯಿಂದ ಬೆಚ್ಚಿಬಿದ್ದ ಡೆಲಿವರಿ ಬಾಯ್ಸ್, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಜಪನೀಸ್​ ಸ್ಟುಡಿಯೋಗಳ ಜೊತೆ ದೊಡ್ಡ ಡೀಲ್​​​ಗೆ ಮುಂದಾದ ರಾಜಮೌಳಿ – Kannada News | Rajamouli’s RRR Anime: Japanese Deal While Filming Varanasi with Mahesh Babu

ನಿರ್ದೇಶಕ ರಾಜಮೌಳಿ (Rajamouli) ಅವರು ‘ವಾರಣಾಸಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ರಾಜಮೌಳಿ ಅವರು ಸದ್ದಿಲ್ಲದೆ, ಸೈಡಲ್ಲಿ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ಈ ವಿಷಯ ಅನೇಕರಿಗೆ ಅಚ್ಚರಿ ಮೂಡಿಸಿದೆ. ಈ ವಿಷಯವನ್ನು ಸ್ವತಃ ಅವರೇ ಖಚಿತಪಡಿಸಿದ್ದಾರೆ.

‘ವಾರಣಾಸಿ’ ಸಿನಿಮಾ 2027ರ ಏಪ್ರಿಲ್ 7ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಈಗಲೇ ಪ್ರಚಾರ ಆರಂಭಿಸಿದ್ದಾರೆ. ಇತ್ತೀಚೆಗೆ ಅವರು ಪ್ರಿಯಾಂಕಾ ಚೋಪ್ರಾ, ಮಹೇಶ್ ಬಾಬು, ಪೃಥ್ವಿರಾಜ್ ಸುಕುಮಾರನ್ ಜೊತೆ ಹಾಲಿವುಡ್ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದ ವೇಳೆ ರಾಜಮೌಳಿ ಅವರು ಈ ವಿಷಯ ಹೇಳಿದ್ದಾರೆ.

‘ಆರ್​ಆರ್​​ಆರ್​’ಸಿನಿಮಾನ ಜಪಾನ್ ಅಲ್ಲೂ ನೋಡಿದ್ದಾರೆ. ಅಲ್ಲಿಯೂ ಈ ಚಿತ್ರ ಇಷ್ಟಪಟ್ಟಿದ್ದಾರೆ. ಈ ಸಿನಿಮಾನ ಅನಿಮೇ ವರ್ಷನ್ ಅಲ್ಲಿ ಮಾಡಲು ಜಪಾನ್ ಸ್ಟುಡಿಯೋಗಳ ಜೊತೆ ಮಾತುಕತೆ ನಡೆದಿದೆ. ಆದರೆ, ಯಾವುದೂ ಫೈನಲ್ ಆಗಿಲ್ಲವಂತೆ. ಒಂದೊಮ್ಮೆ ಈ ಡೀಲ್ ಫೈನಲ್ ಆದರೆ, ಇದರ ಕೆಲಸಗಳಲ್ಲಿ ಅವರು ತೊಡಗಿಕೊಳ್ಳಬಹುದು.

‘ವಾರಣಾಸಿ’ ಸಿನಿಮಾ ಶೂಟಿಂಗ್ ಹಂತದಲ್ಲಿ ಇದೆ. ಈ ಚಿತ್ರ ರಿಲೀಸ್​​ಗೆ ಇನ್ನೂ ಒಂದು ವರ್ಷ ಇದೆ. ಈ ಸಿನಿಮಾ ಟೈಟಲ್ ರಿವೀಲ್​​ಗೆ ದೊಡ್ಡ ಮಟ್ಟದಲ್ಲಿ ಈವೆಂಟ್ ಮಾಡಲಾಗಿತ್ತು. ಕೆಲ ತಾಂತ್ರಿಕ ಸಮಸ್ಯೆ ಬಿಟ್ಟರೆ ಈ ಕಾರ್ಯಕ್ರಮ ಯಶಸ್ಸು ಕಂಡಿತ್ತು.

ಇದನ್ನೂ ಓದಿ: ಧರಣಿ ಮಾಡುತ್ತಾರಂತೆ ರಾಜಮೌಳಿ: ಎಲ್ಲಿ? ಯಾವ ಕಾರಣಕ್ಕೆ?

ರಾಜಮೌಳಿ ‘ಆರ್​​ಆರ್​​ಆರ್​’ ಚಿತ್ರದ ಅನಿಮೇ ಚಿತ್ರದ ಭಾಗ ಆಗುತ್ತಾರಾ ಎಂಬ ಕುತೂಹಲ ಮೂಡಿದೆ. ಕೆಲವು ಬದಲಾವಣೆಗಳನ್ನು ಅವರು ಮಾಡಿಕೊಳ್ಳಲು ರಾಜಮೌಳಿ ಸಹಾಯ ಮಾಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರತಕ್ಕೆ ಒಂದು ರೂಲ್ಸ್, ಪಾಕಿಸ್ತಾನಕ್ಕೆ ಇನ್ನೊಂದು ರೂಲ್ಸ್​! – Kannada News | Babar Azam Relay Catch in T20 World Cup 2026

ಟಿ20 ವಿಶ್ವಕಪ್​ನ ಮೊದಲ ಪಂದ್ಯವೇ ವಿವಾದಕ್ಕೀಡಾಗಿದೆ. ವಿವಾದಕ್ಕೀಡಾಲು ಮುಖ್ಯ ಕಾರಣ ಐಸಿಸಿಯ ನಿಯಮ.ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಇತ್ತೀಚೆಗೆ ರಿಲೇ ಕ್ಯಾಚ್ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿತ್ತು. ಈ ನಿಯಮದ ಬದಲಾವಣೆ ಪಾಕಿಸ್ತಾನ್ ತಂಡಕ್ಕೆ ಅನ್ವಯಿಸುವುದಿಲ್ಲವೇ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ನೆದರ್​ಲೆಂಡ್ಸ್ ವಿರುದ್ಧ ಬಾಬರ್ ಆಝಂ ಹಾಗೂ ಶಾಹೀನ್ ಶಾ ಅಫ್ರಿದಿ ಜೊತೆಗೂಡಿ ರಿಲೇ ಕ್ಯಾಚ್ ಹಿಡಿದಿದ್ದರು. ಬೌಂಡರಿ ಲೈನ್​ನಲ್ಲಿ ಅತ್ಯುತ್ತಮ ಕ್ಯಾಚ್ ಹಿಡಿದ ಬಾಬರ್ ನಿಯಂತ್ರಣ ತಪ್ಪಿ ಬೌಂಡರಿ ಗೆರೆ ದಾಟಿದ್ದರು. ಆದರೆ ಕ್ಷಣಾರ್ಧದಲ್ಲೇ ಬಾಬರ್ ಚೆಂಡನ್ನು ಶಾಹೀನ್ ಅಫ್ರಿದಿಯತ್ತ ಎಸೆದಿದ್ದರು.

ಬಾಬರ್ ಎಸೆದ ಚೆಂಡನ್ನು ಹಿಡಿಯುವಲ್ಲಿ ಶಾಹೀನ್ ಅಫ್ರಿದಿ ಯಶಸ್ವಿಯಾಗಿದ್ದರು. ಆದರೆ ಶಾಹೀನ್ ಚೆಂಡು ಹಿಡಿದಾಗ ಬಾಬರ್ ಆಝಂ ಮೈದಾನದ ಹೊರಗಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

ಐಸಿಸಿ ರಿಲೇ ಕ್ಯಾಚ್ ನಿಯಮ 19.5.2 ಪ್ರಕಾರ, ರಿಲೇ ಕ್ಯಾಚ್​ ಹಿಡಿದಾಗ ಬೌಂಡರಿ ಲೈನ್ ದಾಟಿದ ಫೀಲ್ಡರ್ ತನ್ನ ಸಹ ಆಟಗಾರನಿಗೆ ಚೆಂಡು ನೀಡಿದ ಬೆನ್ನಲ್ಲೇ ಮೈದಾನದ ಒಳಕ್ಕೆ ಬರಬೇಕು. ಅಂದರೆ ಬೌಂಡರಿ ಲೈನ್ ದಾಟುತ್ತಿದ್ದಂತೆ ಚೆಂಡನ್ನು ಮತ್ತೋರ್ವ ಫೀಲ್ಡರ್​ಗೆ ನೀಡಿದ್ದರೆ ಆತನು ಕ್ಯಾಚ್ ಹಿಡಿಯುವಷ್ಟರಲ್ಲಿ ಬೌಂಡರಿ ಲೈನ್ ದಾಟಿದ ಆಟಗಾರ ಮತ್ತೆ ಮೈದಾನದ ಒಳಗಿರಬೇಕು. ಅಂದರೆ ಮಾತ್ರ ಅದನ್ನು ಕ್ಯಾಚ್ ಔಟ್ ಎಂದು ಪರಿಗಣಿಸಲಾಗುತ್ತದೆ.

ಈ ನಿಯಮವು ಜೂನ್ ತಿಂಗಳಿಂದಲೇ ಜಾರಿಯಲ್ಲಿದೆ. ಹೀಗಾಗಿಯೇ ರೈಸಿಂಗ್ ಸ್ಟಾರ್ ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ್ ಎ ವಿರುದ್ಧ ಭಾರತ ಎ ತಂಡದ ಆಟಗಾರ ನೆಹಾಲ್ ವಧೇರಾ ಹಿಡಿದ ಕ್ಯಾಚ್ ಅನ್ನು ಅಮಾನ್ಯ ಎಂದು ಪರಿಗಣಿಸಲಾಗಿತ್ತು.

ಈ ಪಂದ್ಯದಲ್ಲಿ ಸುಯಶ್ ಶರ್ಮಾ ಎಸೆದ 10ನೇ ಓವರ್​ನ ಮೊದಲ ಎಸೆತವನ್ನು ಮಾಝ್ ಸದಾಖತ್ ಲಾಂಗ್ ಆಫ್​​ನತ್ತ ಬಾರಿಸಿದ್ದರು. ಆದರೆ ಬೌಂಡರಿ ಲೈನ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ನೆಹಾಲ್ ವಧೇರಾ ಅದ್ಭುತವಾಗಿ ಚೆಂಡನ್ನು ಹಿಡಿದಿದ್ದರು.

ಕ್ಯಾಚ್ ಹಿಡಿದ ಬಳಿಕ ನಿಯಂತ್ರಣ ಕಳೆದುಕೊಂಡ ವಧೇರಾ ಬೌಂಡರಿ ಲೈನ್ ದಾಟಿದರು. ಅಷ್ಟರಲ್ಲಾಗಲೇ ಸಹ ಆಟಗಾರ ನಮನ್​ ಧೀರ್​ಗೆ ವಧೇರಾ ಚೆಂಡನ್ನು ನೀಡಿದ್ದರು. ಇತ್ತ ಬೌಂಡರಿ ಲೈನ್​ ಕ್ಯಾಚ್​ನೊಂದಿಗೆ ಮಾಝ್ ಸದಾಖತ್ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದರು.

ಆದರೆ ಕ್ಯಾಚ್ ಪರಿಶೀಲಿಸಿದ ಮೂರನೇ ಅಂಪೈರ್ ನಾಟೌಟ್ ಎಂದಿದ್ದಾರೆ. ಇತ್ತ ನೆಹಾಲ್ ವಧೇರಾ ತನ್ನ ಕಾಲು ಬೌಂಡರಿ ಲೈನ್​ಗೆ ತಾಗಿಲ್ಲ ಎಂಬ ವಾದವನ್ನು ಫೀಲ್ಡ್ ಅಂಪೈರ್ ಮುಂದಿಟ್ಟಿದ್ದರು. ಬೌಂಡರಿ ಲೈನ್ ಚೆಕ್ಕಿಂಗ್ ವೇಳೆಯೂ ವಧೇರಾ ಅವರ ಕಾಲು ಲೈನ್​ಗೆ ತಾಗಿಲ್ಲ ಎಂಬುದು ಸ್ಪಷ್ಟವಾಗಿತ್ತು.

ಇದಾಗ್ಯೂ ಮೂರನೇ ಅಂಪೈರ್ ನಾಟೌಟ್ ಎಂದು ತೀರ್ಪು ನೀಡಿದರು. ಹೀಗಾಗಿ ಟೀಮ್ ಇಂಡಿಯಾ ಆಟಗಾರರು ಫೀಲ್ಡ್ ಅಂಪೈರ್ ಜೊತೆ ವಾಗ್ವಾದಕ್ಕಿಳಿದರು. ಈ ವೇಳೆ ಅಂಪೈರ್ ಭಾರತೀಯ ಆಟಗಾರರಿಗೆ ಹೊಸ ನಿಯಮದ ಬಗ್ಗೆ ಪಾಠ ಮಾಡಿದ್ದರು.

ಅಂದರೆ ರಿಲೇ ಕ್ಯಾಚ್​ ಹಿಡಿದಾಗ ಬೌಂಡರಿ ಲೈನ್ ದಾಟಿದ ಫೀಲ್ಡರ್ ತನ್ನ ಸಹ ಆಟಗಾರನಿಗೆ ಚೆಂಡು ನೀಡಿದ ಬೆನ್ನಲ್ಲೇ ಮೈದಾನದ ಒಳಕ್ಕೆ ಬರಬೇಕು. ಆದರೆ ನಮನ್​ಧೀರ್ ಕ್ಯಾಚ್ ಹಿಡಿಯುವಷ್ಟರಲ್ಲಿ ನೇಹಾಲ್ ವಧೇರಾ ಮೈದಾನಕ್ಕೆ ಹಿಂತಿರುಗಿರಲಿಲ್ಲ. ಹೀಗಾಗಿಯೇ ಥರ್ಡ್ ಅಂಪೈರ್ ನಾಟೌಟ್ ಎಂದು ತೀರ್ಪು ನೀಡಿದ್ದರು.

ಇದೀಗ ಇಂತಹದ್ದೇ ಕ್ಯಾಚ್ ಬಾಬರ್ ಆಝಂ ಹಾಗೂ ಶಾಹೀನ್ ಶಾ ಅಫ್ರಿದಿ ಜೊತೆಗೂಡಿ ಹಿಡಿದಿದ್ದಾರೆ. ಇಲ್ಲಿ ಶಾಹೀನ್ ಅಫ್ರಿದಿ ಕ್ಯಾಚ್ ಪೂರ್ಣಗೊಳಿಸುವ ವೇಳೆ ಬಾಬರ್ ಮೈದಾನದಲ್ಲಿ ಇರಲಿಲ್ಲ. ಇದಾಗ್ಯೂ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದಾರೆ.

ಈ ತೀರ್ಪಿನ ಬೆನ್ನಲ್ಲೇ ಭಾರತಕ್ಕೆ ಒಂದು ರೂಲ್ಸ್, ಪಾಕಿಸ್ತಾನಕ್ಕೆ ಇನ್ನೊಂದು ರೂಲ್ಸಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

Published On – 2:09 pm, Sat, 7 February 26

Source link

ಕಡ್ಲೆಪುರಿ ಮಾರುತ್ತಿದ್ದ ಕಮಲಾಕರ ಭಟ್ ಜ್ಯೊತಿಷಿ ಆಗಿದ್ಹೇಗೆ? ಬಗೆದಷ್ಟೂ ಬಯಲಾಗ್ತಿದೆ ಬಂಡವಾಳ – Kannada News | From Peanut Seller to Millionaire Astrologer: Who is Kamalakara Bhat? Secrets Surface After Murder Arrest

ಬಗೆದಷ್ಟೂ ಬಯಲಾಗ್ತಿದೆ ಕಮಲಾಕರ ಭಟ್ ಬಂಡವಾಳImage Credit source: tv9

ಕಾರವಾರ, ಫೆಬ್ರವರಿ 7: ಉತ್ತರ ಕನ್ನಡದ ಸಿದ್ದಾಪುರದಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಜ್ಯೋತಿಷಿ ಕಮಲಾಕರ ಭಟ್ (Kamalakara Bhat) ಮತ್ತು ಸುಚಿತ್ರಾ ಹಿನ್ನೆಲೆ ಬಗ್ಗೆ ಬಗೆದಷ್ಟೂ ರಹಸ್ಯಗಳು ಬಯಲಾಗುತ್ತಿವೆ. ಪ್ರಭಾವಿ ಜ್ಯೋತಿಷಿ ಕಮಲಾಕರ ಭಟ್ ಅವರ ನಿಗೂಢ ಹಿನ್ನೆಲೆ ಮತ್ತು ಸಂಪತ್ತಿನ ಬಗ್ಗೆ ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳು ಕೂಡ ಹುಟ್ಟಿಕೊಂಡಿವೆ. ಸಾಮಾನ್ಯ ವ್ಯಕ್ತಿಯಾಗಿ ವೀಳ್ಯದೆಲೆ ಮತ್ತು ಕಡ್ಲೆಪುರಿ ಮಾರಾಟ ಮಾಡುತ್ತಿದ್ದ ಕಮಲಾಕರ ಭಟ್ ಕೋಟ್ಯಧಿಪತಿ ಜ್ಯೋತಿಷಿಯಾಗಿದ್ದು ಹೇಗೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.

ಕಮಲಾಕರ ಭಟ್ ಅವರ ಮೂಲ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ. 2005ರ ಮೊದಲು, ಅವರು ತಮ್ಮ ಊರು ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಡ್ಲೆಪುರಿ ಮತ್ತು ವೀಳ್ಯದೆಲೆಯನ್ನು ಮಾರಾಟ ಮಾಡುತ್ತಿದ್ದರು. ಆರ್ಥಿಕವಾಗಿ ಹಿಂದುಳಿದಿದ್ದ ಅವರು, ಇದ್ದಕ್ಕಿದ್ದಂತೆ 2005ರಲ್ಲಿ ಊರಿನಿಂದ ನಾಪತ್ತೆಯಾಗುತ್ತಾರೆ. ನಂತರ ಅವರು ಕೇರಳಕ್ಕೆ ತೆರಳಿ ಅಲ್ಲಿ ಜ್ಯೋತಿಷ್ಯ ಹಾಗೂ ವಶೀಕರಣ ಶಾಸ್ತ್ರವನ್ನು ಕಲಿತರೆಂದು ಹೇಳಲಾಗುತ್ತಿದೆ. ಕಲಿಕೆ ನಂತರ ಗ್ರಾಮಕ್ಕೆ ಮರಳಿ ಜ್ಯೋತಿಷ್ಯ ವೃತ್ತಿಯನ್ನು ಆರಂಭಿಸುತ್ತಾರೆ. ಆರಂಭದಲ್ಲಿ ಅಷ್ಟೇನೂ ಹೆಸರು ಮಾಡದಿದ್ದರೂ, ನಂತರ ಅವರು ಬೆಂಗಳೂರಿಗೆ ತೆರಳಿದ ಮೇಲೆ ಅವರ ಜೀವನದ ದಿಕ್ಕೇ ಬದಲಾಯಿತು.

ಟಿವಿ, ಸಾಮಾಜಿಕ ಮಾಧ್ಯಮದಿಂದ ಬದಲಾದ ಬದುಕು

ಬೆಂಗಳೂರಿನಲ್ಲಿ ಕೆಲವು ಟಿವಿ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ತಮ್ಮ ಪ್ರಚಾರವನ್ನು ಮಾಡಿಕೊಂಡ ಕಮಲಾಕರ ಭಟ್, ಅಲ್ಪಾವಧಿಯಲ್ಲೇ ಅಪಾರ ಜನಪ್ರಿಯತೆ ಗಳಿಸಿದರು. ಸುಮಾರು 10 ರಿಂದ 15 ವರ್ಷಗಳ ಅವಧಿಯಲ್ಲಿ ಅವರು ಕೋಟ್ಯಂತರ ರೂಪಾಯಿ ಸಂಪಾದಿಸಿ, ಬರಿಗೈಯಿಂದ ಕೋಟ್ಯಾಧಿಪತಿಯಾಗಿ ಬೆಳೆದರು. ಅವರ ಈ ಅಸಾಮಾನ್ಯ ಮತ್ತು ಅತಿ ವೇಗದ ಸಂಪಾದನೆಯು ಸಾರ್ವಜನಿಕರಲ್ಲಿ ಹಾಗೂ ಅವರ ಭಕ್ತರಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಹಣವನ್ನು ಕೇವಲ ಜ್ಯೋತಿಷ್ಯದ ಮೂಲಕವೇ ಗಳಿಸಲಾಯಿತೇ ಅಥವಾ ಬೇರೆ ಯಾವುದೇ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದರೇ ಎಂಬುದು ಪ್ರಮುಖ ಪ್ರಶ್ನೆಯಾಗಿದೆ.

ತಿಂಗಳಿಗೆ ಮೂರ್ನಾಲ್ಕು ಲಕ್ಷ ರೂ. ಕಚೇರಿ ನಿರ್ವಹಣೆಗೆ ಖರ್ಚು!

ಕಮಲಾಕರ ಭಟ್ ಬೆಂಗಳೂರು, ಶಿವಮೊಗ್ಗ ಮತ್ತು ಹುಬ್ಬಳ್ಳಿಯಲ್ಲಿ ತಮ್ಮ ಕಚೇರಿಗಳನ್ನು ತೆರೆದಿದ್ದರು. ಪ್ರತಿ ಕಚೇರಿಯಲ್ಲಿ 10 ರಿಂದ 15 ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಅವರು ಕಚೇರಿ ನಡೆಸುತ್ತಿದ್ದ ಕಟ್ಟದ ಮಾಲೀಕರೂ ಮಾಹಿತಿ ನೀಡಿದ್ದಾರೆ. ತಿಂಗಳಿಗೆ ಸುಮಾರು ಮೂರರಿಂದ ನಾಲ್ಕು ಲಕ್ಷ ರೂಪಾಯಿಗಳನ್ನು ತಮ್ಮ ಕಚೇರಿ ನಿರ್ವಹಣೆ ಮತ್ತು ಸಿಬ್ಬಂದಿ ವೇತನಕ್ಕಾಗಿ ಖರ್ಚು ಮಾಡುತ್ತಿದ್ದರು ಎಂಬುದೂ ತಿಳಿದುಬಂದಿದೆ. ಇಷ್ಟು ದೊಡ್ಡ ಪ್ರಮಾಣದ ಖರ್ಚುಗಳನ್ನು ನಿಭಾಯಿಸಲು ಅವರಿಗೆ ತಿಂಗಳ ಆದಾಯ ಎಲ್ಲಿಂದ ಬರುತ್ತಿತ್ತು ಎಂಬ ಬಗ್ಗೆ ಈಗ ಚರ್ಚೆಯಾಗುತ್ತಿದೆ.

ಸಿದ್ದಾಪುರ ಮತ್ತು ಶಿವಮೊಗ್ಗ ಭಾಗದಲ್ಲಿ ಕೆಲವು ಬ್ರೋಕರ್‌ಗಳನ್ನು ನೇಮಿಸಿಕೊಂಡು, ವಶೀಕರಣ ಮತ್ತು ಜ್ಯೋತಿಷ್ಯ ಸೇವೆಗಳಿಗಾಗಿ ಗ್ರಾಹಕರನ್ನು ಕರೆತರುತ್ತಿದ್ದರು. ಇದರಿಂದ ಬ್ರೋಕರ್‌ಗಳಿಗೆ ಕಮಿಷನ್ ನೀಡಿ, ತಮ್ಮ ಪ್ರಚಾರವನ್ನು ಹೆಚ್ಚಿಸಿಕೊಂಡಿದ್ದರು.

ಇದನ್ನೂ ಓದಿ: ‘ಅವಳಿಗಾಗಿ ನಾಯಿ ತರ ಅಲೆದಾಡಿದ್ದೆ’: ಕಮಲಾಕರನ ಒಂದೊಂದೇ ರಂಗಿನಾಟ ಬಯಲು!

ಸುಚಿತ್ರಾ ಕೂಡ ಆರಂಭದಲ್ಲಿ ಬ್ರೋಕರ್ ಕೆಲಸ ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ. ಸುಚಿತ್ರಾ ಪತಿ ಆಕೆ ಕಮಲಾಕರ ಭಟ್ ಮಾತ್ರವಲ್ಲದೆ, ಇತರೆ ಯುವಕರೊಂದಿಗೂ ಸುಚಿತ್ರಾ ಸಂಬಂಧ ಹೊಂದಿದ್ದರು ಮತ್ತು ಅವರ ಇನ್​ಸ್ಟಾಗ್ರಾಂ ರೀಲ್‌ಗಳು ತಮಗೆ ಬೇಸರ ತಂದಿದ್ದವು ಎಂದು ಈಗಾಗಲೇ ಆರೋಪಿಸಿದ್ದಾರೆ. ಇದೀಗ ಕಮಲಾಕರ ಭಟ್ ಬಂಧನದೊಂದಿಗೆ ಅವರ ಪ್ರಭಾವ ಮತ್ತು ಸಂಪತ್ತಿನ ಮೂಲದ ಕುರಿತಾದ ರಹಸ್ಯಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊಬೀಳುವ ನಿರೀಕ್ಷೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಕ್ಷಿಣದ ಆ ನಟ ನಟಿಯರನ್ನು ತೆರೆಮೇಲೂ ಕೀಳಾಗಿ ಕಾಣಲು ಇಷ್ಟಪಡಲ್ಲ; ಬಾಲಿವುಡ್ ನಟಿ – Kannada News | Pooja Bedi Reveals Jr NTR’s Unwavering Respect for Women: ‘Shakti’ Incident Goes Viral

ಜನಪ್ರಿಯ ಬಾಲಿವುಡ್ ನಟಿ ಪೂಜಾ ಬೇಡಿ ತೆಲುಗು ಪ್ರೇಕ್ಷಕರಿಗೂ ಪರಿಚಿತರು. ಅವರು ಈ ಹಿಂದೆ ‘ಚಿಟ್ಟೆಮ್ಮ ಮೊಗುಡು’ (1993) ಮತ್ತು ‘ಶಕ್ತಿ’ (2011) ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಬಹಳ ಸಮಯದ ನಂತರ ತೆಲುಗು ಪರದೆಗೆ ಮರಳಿದ್ದಾರೆ. ಚಂದ್ರಹಾಸ್ ನಾಯಕನಾಗಿ ನಟಿಸಿದ ‘ಬರಬಾರ್ ಪ್ರೇಮಿಸ್ತಾ’ ಚಿತ್ರದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಚಿತ್ರದ ಪ್ರಚಾರದ ಭಾಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪೂಜಾ ಬೇಡಿ, ಜೂನಿಯರ್ ಎನ್‌ಟಿಆರ್ ಬಗ್ಗೆ ಕೆಲವು ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡರು.

‘ಶಕ್ತಿ’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ನಡೆದ ಒಂದು ಘಟನೆಯನ್ನು ಪೂಜಾ ಬೇಡಿ ನೆನಪಿಸಿಕೊಂಡರು. ‘ನಾನು ‘ಶಕ್ತಿ’ ಚಿತ್ರದಲ್ಲಿ ಸೋನು ಸೂದ್ ಅವರ ಪತ್ನಿಯಾಗಿ ನಟಿಸಿದ್ದೇನೆ. ಅದರಲ್ಲಿ ನನ್ನ ಪಾತ್ರವು ನಕಾರಾತ್ಮಕ ಛಾಯೆಗಳನ್ನು ಹೊಂದಿತ್ತು. ಕಥೆಯ ಪ್ರಕಾರ, ಒಂದು ದೃಶ್ಯದಲ್ಲಿ, ನಾಯಕ ಎನ್ಟಿಆರ್ ನನ್ನೊಂದಿಗೆ ಜಗಳವಾಡಬೇಕಾಯಿತು. ಆದರೆ ಜೂನಿಯರ್ ಎನ್ಟಿಆರ್ ಆ ದೃಶ್ಯವನ್ನು ಮಾಡಲು ಒಪ್ಪಲಿಲ್ಲ. ಅವರು ನಿರಾಕರಿಸಿದರು, ನಾನು ಮಹಿಳೆಯರೊಂದಿಗೆ ಜಗಳವಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಚಿತ್ರಕ್ಕಾಗಿ ಮಹಿಳೆಯ ವಿರುದ್ಧ ಕೈ ಎತ್ತಲು ಬಯಸುವುದಿಲ್ಲ ಎಂದು ಅವರು ಹೇಳಿದ್ದು ಅವರ ಮೇಲಿನ ನನ್ನ ಗೌರವವನ್ನು ಇನ್ನಷ್ಟು ಹೆಚ್ಚಿಸಿತು’ ಎಂದು ಪೂಜಾ ಬೇಡಿ ವಿವರಿಸಿದರು. ಇಂದಿನ ಚಲನಚಿತ್ರ ಜಗತ್ತಿನಲ್ಲಿ, ಅಂತಹ ಮೌಲ್ಯಗಳನ್ನು ಅನುಸರಿಸುವ ಜನರು ಬಹಳ ಅಪರೂಪ ಎಂದು ಅವರು ಹೊಗಳಿದರು.

ಸಿನಿಮಾಗಳಲ್ಲಿ ನಾಯಕಿಯರು ಅಥವಾ ನಕಾರಾತ್ಮಕ ಪಾತ್ರಗಳನ್ನು ನಿರ್ವಹಿಸುವ ಮಹಿಳೆಯರೊಂದಿಗೆ ನಾಯಕರು ತೆರೆಮೇಲೆ ಜಗಳವಾಡುವುದು ಸಾಮಾನ್ಯ. ಆದರೆ ಎನ್‌ಟಿಆರ್ ಮೊದಲಿನಿಂದಲೂ ಮಹಿಳೆಯರಿಗೆ ನೀಡುವ ಗೌರವದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿಲ್ಲ. ತಮ್ಮ ಚಿತ್ರಗಳು ಮಹಿಳಾ ಪಾತ್ರಗಳನ್ನು ಕೀಳಾಗಿ ಕಾಣುವುದನ್ನು ಅವರು ಬಯಸುವುದಿಲ್ಲ. ಪೂಜಾ ಬೇಡಿ ಹೇಳಿದ ಈ ಮಾತುಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. “ತಾರಕ್ ಕೇವಲ ನಟನಲ್ಲ.. ಅವರು ಉತ್ತಮ ಸಂಸ್ಕೃತಿಯನ್ನು ಹೊಂದಿರುವ ವ್ಯಕ್ತಿ” ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಅಕ್ಕಿನೇನಿ ನಾಗಾರ್ಜುನ ಬಳಿ ಇದೆ ಖಾಸಗಿ ವಿಮಾನ; ಇನ್ನೂ ಯಾರೆಲ್ಲ ಇದರ ಒಡೆಯರು?

ಜೂನಿಯರ್ ಎನ್ಟಿಆರ್ ಅವರ ಸಿನಿಮಾಗಳ ವಿಷಯಕ್ಕೆ ಬಂದರೆ, ಅವರು ಕೊನೆಯ ಬಾರಿಗೆ ‘ವಾರ್ 2’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಭಾರಿ ಬಜೆಟ್ ನಲ್ಲಿ ನಿರ್ಮಿಸಲಾದ ಪ್ಯಾನ್-ಇಂಡಿಯಾ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ನಿರೀಕ್ಷಿತ ಯಶಸ್ಸನ್ನು ಗಳಿಸಲು ಸಾಧ್ಯವಾಗಲಿಲ್ಲ. ಪ್ರಸ್ತುತ, ತಾರಕ್ ಪ್ರಶಾಂತ್ ನೀಲ್ ನಿರ್ದೇಶನದ ಮುಂಬರುವ ಸಿನಿಮಾ ‘ಡ್ರ್ಯಾಗನ್’ ಮೇಲೆ ತಮ್ಮ ಸಂಪೂರ್ಣ ಗಮನ ಹರಿಸಿದ್ದಾರೆ. ಈ ಸಿನಿಮಾದ ಮೇಲೆ ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆಗಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version