Headlines

Bengaluru Traffic advisory: ವಾಹನ ಸವಾರರ ಗಮನಕ್ಕೆ, ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರ ಬದಲಾವಣೆ – Kannada News

ಬೆಂಗಳೂರು, ಜೂನ್ 11: ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲಿ ಇಂದು (ಜೂನ್ 11, ಗುರುವಾರ) ಕರ್ನಾಟಕ ದಲಿತ ಸಂಘಟನೆಗಳ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದ್ದು, ಸುಗಮ ವಾಹನ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕ ಸಂಚಾರ ನಿರ್ಬಂಧ ಹಾಗೂ ಸಂಚಾರಕ್ಕೆ ಪರ್ಯಾಯ ಮಾರ್ಗಗಳಳನ್ನು ಪ್ರಕಟಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ….

Read More

ದೆಹಲಿ ಬೆಂಕಿ ದುರಂತ; ಹೋಟೆಲ್ ಮಾಲೀಕ ಬಂಧನ, ನ್ಯಾಯಾಂಗ ತನಿಖೆಗೆ ಆದೇಶ – Kannada News

ನವದೆಹಲಿ, ಜೂನ್ 3: ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ (Fire Accident) 21 ಜನರು ಸಾವನ್ನಪ್ಪಿದ ನಂತರ ಲೆಫ್ಟಿನೆಂಟ್ ಗವರ್ನರ್ ಇಂದು ತುರ್ತು ಸಭೆ ಕರೆದಿದ್ದರು. ಈ ವೇಳೆ ಅವರು ದೆಹಲಿಯಲ್ಲಿ ಒಂದು ತಿಂಗಳ ವಿಶೇಷ ಅಗ್ನಿ ಸುರಕ್ಷತಾ ಅಭಿಯಾನವನ್ನು ನಡೆಸಲು ಆದೇಶಿಸಿದ್ದಾರೆ. ಇದರಲ್ಲಿ ಎಲ್ಲಾ ಹೋಟೆಲ್‌ಗಳು, ಅತಿಥಿ ಗೃಹಗಳು ಮತ್ತು ಸೂಕ್ಷ್ಮ ಕಟ್ಟಡಗಳ ತಪಾಸಣೆ ಸೇರಿದೆ. ಈ ಬೆಂಕಿ ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೂ ಆದೇಶಿಸಲಾಗಿದೆ. ಪರಾರಿಯಾಗಿದ್ದ ಹೋಟೆಲ್ ಮಾಲೀಕರನ್ನು ಕೂಡ ಬಂಧಿಸಲಾಗಿದೆ….

Read More

RCB vs GT Final: ಫೈನಲ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್; ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ

2026 ರ ಐಪಿಎಲ್ ಫೈನಲ್ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಗುಜರಾತ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡು 155 ರನ್ ಕಲೆಹಾಕಿತು. ಈ ಮೂಲಕ ಆರ್​ಸಿಬಿ ಗೆಲುವಿಗೆ 156 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿಗೆ ಸ್ಫೋಟಕ ಆರಂಭ ಸಿಕ್ಕಿತು. ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಮೊದಲ ವಿಕೆಟ್​ಗೆ 62 ರನ್​ಗಳ ಜೊತೆಯಾಟ ನೀಡಿದರು. ಇದಕ್ಕಾಗಿ ಇವರಿಬ್ಬರು ತೆಗೆದುಕೊಂಡಿದ್ದು…

Read More

VIDEO: ಅದ್ಭುತ… ಅತ್ಯದ್ಭುತ: ರಿಷಭ್ ಪಂತ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು – Kannada News | Rishabh Pant’s ‘Spider Man’ Catch Stuns Yashasvi Jaiswal

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ರಿಷಭ್ ಪಂತ್ (Rishabh Pant) ಹಿಡಿದ ಅದ್ಭುತ ಕ್ಯಾಚ್ ವಿಡಿಯೋ ಇದೀಗ ವೈರಲ್ ಆಗಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ಒದಗಿಸಿದ್ದರು. ಆದರೆ ಮೊಹಮ್ಮದ್ ಶಮಿ ಎಸೆದ ಮೂರನೇ ಓವರ್​ನ 5ನೇ ಎಸೆತವನ್ನು ಸರಿಯಾಗಿ…

Read More

ರವಿ ಕಿಶನ್ ಡೈರೆಕ್ಷನ್: “ಮಹಾರಾಜ್ ಜಿ, ಸ್ವಲ್ಪ ಈ ಕಡೆ ನೋಡಿ ಸಿಂಹದ ಮುಖ ಮತ್ತು ನೀವು ಮಾತ್ರ ಫ್ರೇಮ್‌ನಲ್ಲಿ ಇರಲಿ” – Kannada News | CM Yogi Adityanath’s Hilarious Photo Moment: Ravi Kishan’s Film Direction Goes Viral

ಲಕ್ನೋ, ಏ.24 : ರಾಜಕೀಯದ ಗಂಭೀರ ಚರ್ಚೆಗಳ ನಡುವೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಗೋರಖ್‌ಪುರ ಸಂಸದ ಹಾಗೂ ನಟ ರವಿ ಕಿಶನ್ ಅವರ ಅಪರೂಪದ ಮೋಜಿನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ, ಹಳೆಯ ಟೈರ್‌ಗಳಿಂದ ನಿರ್ಮಿಸಲಾದ ಬೃಹತ್ ಸಿಂಹದ ಪ್ರತಿಮೆಯ ಮುಂದೆ ಸಿಎಂ ಯೋಗಿ ಆದಿತ್ಯನಾಥ್ ಅವರು ಫೋಟೋಗೆ ಪೋಸ್ ನೀಡುತ್ತಿದ್ದರು. ಈ ವೇಳೆ ಪಕ್ಕದಲ್ಲೇ ಇದ್ದ ಖ್ಯಾತ ನಟ ರವಿ ಕಿಶನ್ ಅವರಲ್ಲಿದ್ದ ‘ಸಿನಿಮಾ…

Read More

ಐಎಎಸ್ ಅಧಿಕಾರಿಗೆ ಹೈಕೋರ್ಟ್ ಶಾಕ್; ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ – Kannada News | Rohini Sindhuri Defamation Case: High Court Rejects Plea, D. Roopa’s Complaint to Proceed

ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ ಬೆಂಗಳೂರು, ಫೆಬ್ರವರಿ 21: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಮಾನನಷ್ಟ ಪ್ರಕರಣದಲ್ಲಿ ಹಿನ್ನಡೆ ಉಂಟಾಗಿದೆ. ರೋಹಿಣಿ ಮಾಧ್ಯಮಗಳ ಮುಂದೆ ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡಿದ್ದಾರೆ ಎಂದು ರೂಪಾ ಮೌದ್ಗಿಲ್ ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ದಾಖಲಿಸಿದ್ದ ಖಾಸಗಿ ದೂರು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಐಎಎಸ್ ಅಧಿಕಾರಿಯ ಅರ್ಜಿಯನ್ನು ನ್ಯಾಯಮೂರ್ತಿ…

Read More

Gold Rates: ಹತ್ತು ಗ್ರಾಮ್ ಚಿನ್ನದ ಬೆಲೆ ಎರಡು ದಿನದಲ್ಲಿ 3,000 ರೂ ಏರಿಕೆ – Kannada News | Gold Price Today on 7th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 7: ಚಿನ್ನದ ಬೆಲೆ (Gold Rates) ಇವತ್ತೂ ಏರಿಕೆಯಾಗಿದೆ. ನಿನ್ನೆ 195 ರೂನಷ್ಟು ಹೆಚ್ಚಿದ್ದ ಬಂಗಾರದ ದರ ಇವತ್ತು ಗುರುವಾರ 105 ರೂ ಜಿಗಿದಿದೆ. ಎರಡು ದಿನದಲ್ಲಿ ಇದರ ಬೆಲೆಯಲ್ಲಿ ಗ್ರಾಮ್​ಗೆ 300 ರೂನಷ್ಟು ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಸ್ವರ್ಣ ಬೆಲೆ ಹೆಚ್ಚಿದೆ. ಬೆಳ್ಳಿ ಬೆಲೆಯೂ ಸತತ ಎರಡನೇ ಬಾರಿ ಹೆಚ್ಚಳ ಕಂಡಿದೆ. ನಿನ್ನೆ ಗ್ರಾಮ್​ಗೆ 10 ರೂ ಹೆಚ್ಚಿದ್ದ ಅದು ಇವತ್ತು 5 ರೂ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ…

Read More

ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ

ಚೈತ್ರಾ ಅವರು ಬಿಗ್ ಬಾಸ್​ನಿಂದ ಹೊರ ಬಂದಿದ್ದಾರೆ. ಈ ವೇಳೆ ಅವರು ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದರು. ಈ ವೇಳೆ ಬಿಗ್ ಬಾಸ್ ಯಾರು ಗೆಲ್ಲುತ್ತಾರೆ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾರು ಗೆಲ್ಲುತ್ತಾರೆ, ಯಾರು ಗೆಲ್ಲಬೇಕು ಎಂದು ನಾನು ಹೇಳೋದು ಸರಿ ಆಗೋದಿಲ್ಲ. ಎಲ್ಲರೂ ಚೆನ್ನಾಗಿ ಆಡುತ್ತಿದ್ದಾರೆ. ಫ್ಯಾಮಿಲಿ ವೀಕ್ ಆದ ಬಳಿಕ ಸ್ಪರ್ಧಿಗಳಲ್ಲಿ ಒಂದಷ್ಟು ಬದಲಾವಣೆ ಆಗಬಹುದು’ ಎಂದು ಚೈತ್ರಾ ಹೇಳಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

2027ಕ್ಕೆ ಭಾರತದ ಮೊದಲ ಪೂರ್ಣ ಡಿಜಿಟಲ್ ಸೆನ್ಸಸ್; 2026ರ ಏಪ್ರಿಲ್ 1ರಂದು ಮೊದಲ ಹಂತದ ಸೆನ್ಸಸ್ ಆರಂಭ

ನವದೆಹಲಿ, ಮಾರ್ಚ್ 30: ಹದಿನಾರು ವರ್ಷಗಳ ನಂತರ ಭಾರತದಲ್ಲಿ ಮೊದಲ ಬಾರಿಗೆ ಸೆನ್ಸಸ್ ನಡೆಯಲಿದೆ. 2027ರ ಸೆನ್ಸಸ್​ಗೆ ಏಪ್ರಿಲ್ 1ರಂದು ಚಾಲನೆ ಸಿಗಲಿದೆ. ಇದು ಭಾರತದ ಮೊದಲ ಪೂರ್ಣ ಡಿಜಿಟಲ್ ಸೆನ್ಸಸ್ (Census 2027) ಆಗಿರಲಿದೆ. ರಿಜಿಸ್ಟ್ರಾರ್ ಜನರಲ್ ಮತ್ತು ಸೆನ್ಸಸ್ ಕಮಿಷನರ್ ಮೃತ್ಯುಂಜಯ್ ಕುಮಾರ್ ನಾರಾಯಣ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಅವರ ಪ್ರಕಾರ ಇದು ವಿಶ್ವದಲ್ಲೇ ಅತಿದೊಡ್ಡ ಗಣತಿ ಕಾರ್ಯವಾಗಲಿದೆ. ಭಾರತದಲ್ಲಿ ಇಲ್ಲಿಯವರೆಗೆ 15 ಸೆನ್ಸಸ್​ಗಳು ನಡೆದಿವೆ. ಸ್ವಾತಂತ್ರ್ಯದ ನಂತರ 7 ಸೆನ್ಸಸ್…

Read More

ತುಮಕೂರು ವಿವಿ ಘಟಿಕೋತ್ಸವದಲ್ಲಿ ದೊಡ್ಡ ಎಡವಟ್ಟು: ರ್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕದ ಬದಲು ನಗದು ಚೆಕ್; ಧರಣಿ ಕುಳಿತ ವಿದ್ಯಾರ್ಥಿಗಳು – Kannada News

ತುಮಕೂರು ವಿವಿ ಘಟಿಕೋತ್ಸವದಲ್ಲಿ ದೊಡ್ಡ ಎಡವಟ್ಟುImage Credit source: Tv9 kannada ತುಮಕೂರು, ಜೂ.4: ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾರಿ ಎಡವಟ್ಟು ನಡೆದಿದೆ. ವರ್ಷಗಟ್ಟಲೆ ಕಷ್ಟಪಟ್ಟು ಓದಿ ಪ್ರಥಮ ಸ್ಥಾನ ಗಳಿಸಿ, ಚಿನ್ನದ ಪದಕ (Gold Medal) ಪಡೆಯುವ ಕನಸು ಹೊತ್ತು ಬಂದಿದ್ದ ನೂರಾರು ರ್ಯಾಂಕ್ ವಿದ್ಯಾರ್ಥಿಗಳ ಆಸೆಗೆ ವಿಶ್ವವಿದ್ಯಾಲಯವು ತಣ್ಣೀರೆರಚಿದೆ. ಚಿನ್ನದ ಪದಕ ನೀಡುವ ಬದಲು ಕೇವಲ ಪ್ರಮಾಣ ಪತ್ರ ಮತ್ತು ನಗದು ಹಣದ ಚೆಕ್ ನೀಡಿ ಕೈತೊಳೆದುಕೊಳ್ಳಲು ಮುಂದಾದ ವಿವಿಯ ನಡೆಗೆ…

Read More