Headlines

ಕ್ರಿಸ್ ಗೇಲ್​ ವಿಶ್ವ ದಾಖಲೆ ಮುರಿದ ವಿರಾಟ್ ಕೊಹ್ಲಿ

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ಕೊಹ್ಲಿ ಮುರಿದಿರುವುದು ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು. ಅದು ಸಹ ಶತಕದ ಜೊತೆಯಾಟವಾಡುವ ಮೂಲಕ. ಹೌದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಜೊತೆಗೂಡಿ 120 ರನ್​ಗಳ ಜೊತೆಯಾಟವಾಡಿದ್ದರು. ಈ ಜೊತೆಯಾಟದೊಂದಿಗೆ…

Read More

ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಾವಿನ ನಡುವಿನ ವಿಚಿತ್ರ ಕಾಕತಾಳೀಯ

ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ (Asha Bhosle) ಏಪ್ರಿಲ್ 12ರಂದು ಮುಂಬೈನಲ್ಲಿ ನಿಧನರಾದರು. ಅವರು ತಮ್ಮ 92 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರ ಪುತ್ರ ಆನಂದ್ ಭೋಸ್ಲೆ, ಮಹಾರಾಷ್ಟ್ರ ಸಂಸ್ಕೃತಿ ಸಚಿವ ಆಶಿಶ್ ಶೇಲಾರ್ ಮತ್ತು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ. ಪ್ರತಿ ಸಮದಾನಿ ಅವರ ಸಾವಿನ ಬಗ್ಗೆ ಮಾಹಿತಿ ನೀಡಿದರು. ಈ ಸುದ್ದಿ ಚಲನಚಿತ್ರೋದ್ಯಮ ಹಾಗೂ ಅವರ ಅಭಿಮಾನಿಗಳಲ್ಲಿ ದುಃಖವನ್ನುಂಟು ಮಾಡಿದೆ. ಆಶಾ ಭೋಸ್ಲೆ ಮತ್ತು ಅವರ ಸಹೋದರಿ ಮತ್ತು ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್…

Read More

‘ನಾವು ಇರೋದು ಬೆಂಗಳೂರಲ್ಲೋ, ಕಸದೂರಲ್ಲೋ’: ಜಿಬಿಎ ನಿರ್ಲಕ್ಷ್ಯಕ್ಕೆ ಬೇಸತ್ತು ತಾವೇ ಕಸ ಎತ್ತಿಸಿದ ಗುರಪ್ಪನಪಾಳ್ಯ ಜನ!

ಬೆಂಗಳೂರು, ಏಪ್ರಿಲ್ 13: ನಗರದಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಜಿಬಿಎ (GBA) ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಬೇಸತ್ತಿರುವ ಘಟನೆ ಗುರಪ್ಪನಪಾಳ್ಯ ವಾರ್ಡ್‌ನಲ್ಲಿ ಬೆಳಕಿಗೆ ಬಂದಿದೆ. ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಾರ್ಡ್ ನಂ.171ರಲ್ಲಿ ವಾರಗಳಷ್ಟೇ ಅಲ್ಲ, ತಿಂಗಳುಗಳಾದರೂ ಕಸ ತೆರವುಗೊಳಿಸಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ರಸ್ತೆಗಳ ಬದಿಯಲ್ಲಿ ಕಸದ ರಾಶಿ ತುಂಬಿಕೊಂಡು ದುರ್ವಾಸನೆ ಬೀರುತ್ತಿದ್ದು, ಸ್ಥಳೀಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಸಮಾಜಸೇವಕ ಮಾಸ್ತಿ ಜಾಕಿರ್ ಅಲಿಯಿಂದ ಸಹಾಯ ಈ ಹಿನ್ನೆಲೆ ಸ್ಥಳೀಯ ನಿವಾಸಿಗಳು ಸ್ವತಃ…

Read More

ನಿಧಿ ಮದುವೆ ಆಗಲು ‘ಕರ್ಣ’ ಧಾರವಾಹಿಗೆ ಎಂಟ್ರಿ ಕೊಟ್ಟ ಗಗನ್ ಚಿನ್ನಪ್ಪ

‘ಕರ್ಣ’ ಧಾರಾವಾಹಿಯಲ್ಲಿ (Karna Serial) ಸಾಕಷ್ಟು ತಿರುವುಗಳು ಎದುರಾಗಿವೆ. ಈ ಧಾರಾವಾಹಿಗೆ ಹೊಸ ಪಾತ್ರಧಾರಿಗಳು ಬಂದಿದ್ದು ಕಡಿಮೆ. ಈಗ ಧಾರಾವಾಹಿಗೆ ಹೊಸ ಪಾತ್ರಧಾರಿಯ ಎಂಟ್ರಿ ಆಗಿದೆ. ಅದುವೇ ಗಗನ್ ಚಿನ್ನಪ್ಪ. ಹೌದು. ಗಗನ್ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸಿದ್ದರು. ಈಗ ಈ ಧಾರಾವಾಹಿಯಲ್ಲಿ ನಿಧಿಯನ್ನು ಮದುವೆಯಾಗಲು ಗಗನ್ ಆಗಮನ ಆಗಿದೆ. ಅವರು ಪರ್ಮನೆಂಟ್ ಆಗಿ ಧಾರಾವಾಹಿಯಲ್ಲಿ ಇರೋದಿಲ್ಲ. ಅವರದ್ದು ಅತಿಥಿ ಪಾತ್ರ ಎನ್ನಲಾಗಿದೆ. ಕರ್ಣ ತನ್ನ ತಂದೆ ರಮೇಶ್ ಮಾಡಿದ ಕುತಂತ್ರಕ್ಕೆ ಬಲಿಯಾಗಿದ್ದಾನೆ. ಕರ್ಣ ತನಗೆ…

Read More

Horoscope Today:ಇಂದು ಈ ರಾಶಿಯವರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 13, ವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ದಶಮಿ ತಿಥಿಯಾಗಿದೆ. ಬೆಳಗ್ಗೆ 7:41 ರಿಂದ 9:14ರವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ, 9:14 ರಿಂದ 10:47ರವರೆಗೆ ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲ ಇರುತ್ತದೆ. ಇಂದು ವರೂಧಿನಿ ಏಕಾದಶಿಯ ವಿಶೇಷ ದಿನವಾಗಿದ್ದು, ಭಗವಂತನ ಉಪವಾಸವು…

Read More

ಅರಬ್ಬಿ ಸಮುದ್ರದಲ್ಲಿ ಪಾಕ್ ಕರಾವಳಿ ರಕ್ಷಣಾ ಪಡೆ ಮೇಲೆ ಬಲೂಚ್ ಬಂಡುಕೋರರ ದಾಳಿ, ಮೂರು ಮಂದಿ ಸಾವು

ಇಸ್ಲಾಮಾಬಾದ್, ಏಪ್ರಿಲ್ 13: ಬಲೂಚಿಸ್ತಾನ(Balochistan)ದ ನೆಲದ ಮೇಲೆ ಸರಣಿ ದಾಳಿಗಳನ್ನು ನಡೆಸುತ್ತಿದ್ದ ಬಲೂಚ್ ಪ್ರತ್ಯೇಕತಾವಾದಿಗಳು ಈಗ ತಮ್ಮ ಕಾರ್ಯತಂತ್ರವನ್ನು ಬದಲಿಸಿದ್ದಾರೆ. ಭಾನುವಾರ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆಯ (Pakistan Coast Guard) ಗಸ್ತು ದೋಣಿಯ ಮೇಲೆ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಮೂವರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ರಾಯಿಟರ್ಸ್ ವರದಿಯ ಪ್ರಕಾರ, ಕಡಲ ಪ್ರಾಧಿಕಾರದ ಹಡಗಿನ ಮೇಲೆ ನಡೆದ ಇತಿಹಾಸದ ಮೊದಲ ದಾಳಿ ಇದಾಗಿದೆ. ನಡೆದಿದ್ದೇನು? ಪಾಕಿಸ್ತಾನ-ಇರಾನ್ ಗಡಿಯ ಸಮೀಪವಿರುವ ಕರಾವಳಿ ಪ್ರದೇಶದಲ್ಲಿ ಕೋಸ್ಟ್ ಗಾರ್ಡ್…

Read More

Bengaluru Air Quality: ಬೆಳಗಾವಿ, ಹುಬ್ಬಳ್ಳಿಯ ವಾಯು ಗುಣಮಟ್ಟ ಉತ್ತಮ

ಬೆಂಗಳೂರು, ಏಪ್ರಿಲ್ 13: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹೈದರಾಬಾದ್, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಉಳಿದ ಮೆಟ್ರೋ ಸಿಟಿಗಳಲ್ಲಿ AQI…

Read More

ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ಧೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಅದ್ದೂರಿ ಫಿನಾಲೆ ನಡೆದಿದೆ. ಈ ಶೋನ ಫಿನಾಲೆಯಲ್ಲಿ ಪೂಜಾ ಮತ್ತು ಅನೂಪ್, ಸಿದ್ಧೇಗೌಡ  (ಧನಂಜಯ್) ಮತ್ತು ದೀಶಲ್, ಮೋಹಿತ್ ಮತ್ತು ಅನನ್ಯ, ಹರ್ಷ ಮತ್ತು ನಂದು, ಶಿಕ್ಷಿತ್ ತಾಪಾ ಮತ್ತು ಸಂಜನಾ ಇದ್ದರು. ಈ ರೇಸ್​​ನಲ್ಲಿ ಧನಂಜಯ ಹಾಗೂ ದೀಶಲ್ ಅವರು ಗೆದ್ದು ಬೀಗಿದ್ದಾರೆ. ಹರ್ಷ ಹಾಗೂ ನಂದು ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. ಇವರಿಗೆ 8 ಲಕ್ಷ ರೂಪಾಯಿ ಸಿಕ್ಕರೆ, ವಿನ್ನರ್ ಜೋಡಿಗೆ 15 ಲಕ್ಷ ರೂಪಾಯಿ ಸಿಕ್ಕಿದೆ. ಇನ್ನಷ್ಟು…

Read More

ಸೇನೆಯ ಒಂದು ಸಣ್ಣ ತಪ್ಪು, ನೂರಾರು ಜೀವಗಳು ಬಲಿ: ಉಗ್ರರ ಬದಲು ಸಾಮಾನ್ಯ ನಾಗರಿಕರ ಮೇಲೆ ನೈಜೀರಿಯಾ ವೈಮಾನಿಕ ದಾಳಿ

ಅಬುಜಾ, ಏಪ್ರಿಲ್ 13: ನೈಜೀರಿಯಾದಲ್ಲಿ ಉಗ್ರ(Terrorist) ರನ್ನು ಸದೆಬಡಿಯಲು ನಡೆಸಿದ ಮಿಲಿಟರಿ ವೈಮಾನಿಕ ದಾಳಿಯು ದಾರಿ ತಪ್ಪಿ ನಾಗರಿಕರ ಮೇಲೆ ಅಪ್ಪಳಿಸಿದ್ದು, ಕನಿಷ್ಠ 100ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನೈಜೀರಿಯನ್ ವಾಯುಪಡೆಯು ಆ ಭಾಗದಲ್ಲಿ ಸಕ್ರಿಯವಾಗಿರುವ ಜಿಹಾದಿ ಹೋರಾಟಗಾರರನ್ನು ಸದೆಬಡಿಯಲು ಕಾರ್ಯಾಚರಣೆ ನಡೆಸುತ್ತಿತ್ತು. ಬೊರ್ನೊ ಮತ್ತು ಯೋಬೆ ರಾಜ್ಯಗಳ ಗಡಿ ಭಾಗದಲ್ಲಿರುವ ಗ್ರಾಮವೊಂದರ ಮಾರುಕಟ್ಟೆಯಲ್ಲಿ ಜನಜಂಗುಳಿ ಇದ್ದ ಸಮಯದಲ್ಲಿ ಈ ವೈಮಾನಿಕ ದಾಳಿ ನಡೆದಿದೆ. ಅಧಿಕಾರಿಗಳು ಈ ಘಟನೆಯನ್ನು ‘ಮಿಸ್‌ಫೈರ್’ ಎಂದು ಒಪ್ಪಿಕೊಂಡಿದ್ದಾರೆ. ಉಗ್ರರ ಅಡಗುತಾಣ…

Read More

VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!

ಐಪಿಎಲ್​ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಡೆತ್ ಓವರ್​ಗಳ ವೇಳೆ ಅಂಪೈರ್ ಚೆಂಡು ಬದಲಿಸಿದ್ದರು. ಇತ್ತ ಅಂಪೈರ್​ ಚೆಂಡು ಬದಲಿಸುತ್ತಿದ್ದಂತೆ ಆರ್​ಸಿಬಿ ದಾಂಡಿಗ ಬಾಲ್​ ಅನ್ನು ಪರೀಕ್ಷಿಸಿದರು. ಇದಕ್ಕೆ ಅಂಪೈರ್ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಈ ಪಂದ್ಯದ 18ನೇ ಓವರ್‌ನಲ್ಲಿ ಹಾರ್ದಿಕ್ ಪಾಂಡ್ಯ ಎಸೆದ ಎಸೆತವನ್ನು ಟಿಮ್ ಡೇವಿಡ್ ಭರ್ಜರಿ ಸಿಕ್ಸರ್‌ಗೆ ಅಟ್ಟಿದ್ದರು. ಔಟ್‌ಫೀಲ್ಡ್‌ನಲ್ಲಿ ತೇವಾಂಶ ಇದ್ದ ಕಾರಣ ಚೆಂಡು ಒದ್ದೆಯಾಗಿತ್ತು….

Read More