Headlines

ಸಿಕ್ಕ 78 ಕೋಟಿ ರೂ. ಲಾಟರಿ ಹಣವನ್ನು ಸ್ನೇಹಿತರ ಜತೆ ಹಂಚಿಕೊಂಡ ಸೆಕ್ಯೂರಿಟಿ ಗಾರ್ಡ್​ – Kannada News

ದುಬೈ, ಜೂನ್ 10: ದುಬೈನ ಅಬುಧಾಬಿಯ ಯಾವುದೋ ಒಂದು ಅಪಾರ್ಟ್‌ಮೆಂಟ್‌ನ ಗೇಟಿನ ಬಳಿ ನಿಂತು ಬರುವ-ಹೋಗುವ ದಾರಿಹೋಕರನ್ನು ನಗುಮೊಗದಿಂದ ಸ್ವಾಗತಿಸುತ್ತಿದ್ದ 26 ವರ್ಷದ ನೇಪಾಳಿ ಯುವಕ   ತಯಾಬ್ ಖಾನ್‌ನ ಬದುಕು ಇಂದು ಜಗತ್ತೇ ತಿರುಗಿ ನೋಡುವಂತೆ ಬದಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಕೇವಲ ಭದ್ರತಾ ಸಿಬ್ಬಂದಿಯಾಗಿ (ಸೆಕ್ಯೂರಿಟಿ ಗಾರ್ಡ್) ದುಡಿಯುತ್ತಿದ್ದ ತಯಾಬ್,  ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಕೋಟಿ ಕೋಟಿ ಲಾಟರಿ(Lottery) ಹಣ ಕೈಗೆ ಬಂದಾಗ ಆ ಯುವಕ ಮೊದಲು ಮಾಡಿದ್ದೇನು ಗೊತ್ತಾ? ಇಲ್ಲಿದೆ ಮಾಹಿತಿ. ಆ ಒಂದು ಇ-ಮೇಲ್…

Read More

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಕಾನೂನುಬಾಹಿರ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ಹೇಳಿದ್ದೇನು? – Kannada News

ನವದೆಹಲಿ, ಜೂನ್ 10: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಗೆ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರ ರದ್ದತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಂದು ಕಾಂಗ್ರೆಸ್‌ನ ಉನ್ನತ ಮಟ್ಟದ ನಿಯೋಗವು ಕೇಂದ್ರ ಚುನಾವಣಾ ಆಯೋಗವನ್ನು ಭೇಟಿಯಾಗಿದೆ. “ಚುನಾವಣಾಧಿಕಾರಿಯ ಕ್ರಮ ಕಾನೂನುಬಾಹಿರವಾಗಿದ್ದು, ಮೀನಾಕ್ಷಿ ವಿರುದ್ಧ ಯಾವುದೇ ಕೇಸ್ ಇಲ್ಲ” ಎಂದು ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಈ ಪ್ರಕರಣದಲ್ಲಿ ಕೋರ್ಟ್ ಮೆಟ್ಟಿಲೇರಲು ಕೂಡ ಕಾಂಗ್ರೆಸ್ ನಿರ್ಧಾರ ಮಾಡಿದೆ. ಚುನಾವಣಾ ಆಯೋಗವನ್ನು ಭೇಟಿಯಾದ ನಿಯೋಗದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಅಭಿಷೇಕ್ ಮನು ಸಿಂಘ್ವಿ,…

Read More

IND vs AFG: ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್..!

ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇದೇ ಜೂನ್ 13 ರಿಂದ ಆರಂಭವಾಗಲಿದೆ. ಮೊದಲ ಏಕದಿನ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಕೂಡ ತಯಾರಿಯಲ್ಲಿ ತೊಡಗಿವೆ. ಆದರೆ ಸರಣಿ ಆರಂಭಕ್ಕೂ ಮುನ್ನವೇ ಕೊಹ್ಲಿಯ ಅನುಪಸ್ಥಿತಿ ತಂಡಕ್ಕೆ ಆಘಾತ ನೀಡಿತ್ತು. ಇದೀಗ ಕೊಹ್ಲಿ ಜೊತೆಗೆ ಹಾರ್ದಿಕ್ ಪಾಂಡ್ಯ ಕೂಡ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ (PC-PTI). ವಾಸ್ತವವಾಗಿ 2026 ರ ಐಪಿಎಲ್ ಸಮಯದಲ್ಲೇ ಪಾಂಡ್ಯ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು…

Read More

ಕಸ್ಟಮ್ಸ್​​ ಅಧಿಕಾರಿಗಳ ಭರ್ಜರಿ ಬೇಟೆ: ಬೆಂಗಳೂರು ಏರ್​ಪೋರ್ಟ್​​ನಲ್ಲಿ 1.37 ಕೋಟಿ ಮೌಲ್ಯದ ಬಂಗಾರ ವಶಕ್ಕೆ – Kannada News

ಏರ್​ಪೋರ್ಟ್​​ನಲ್ಲಿ ವಶಪಡಿಸಿಕೊಳ್ಳಲಾದ ಬಂಗಾರImage Credit source: Bengaluru Customs X Account ದೇವನಹಳ್ಳಿ, ಜೂನ್​​ 10: ಕಳೆದ ಕೆಲ ದಿನಗಳಿಂದ ಮಾದಕ ವಸ್ತು ಸಾಗಾಟ ಪ್ರಕರಣಗಳನ್ನು ಮೇಲಿಂದ ಮೇಲೆ ಭೇದಿಸುತ್ತಿದ್ದ ಬೆಂಗಳೂರಿನ (Bengaluru) ಕಸ್ಟಮ್ಸ್​​ ಅಧಿಕಾರಿಗಳು ಇದೀಗ ದೊಡ್ಡ ಮೊತ್ತದಲ್ಲಿ ಅಕ್ರಮ ಸಾಗಾಟ ನಡೆಸುತ್ತಿದ್ದ ಚಿನ್ನವನ್ನು ಜಪ್ತಿ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿದ್ದ ಪ್ರಯಾಣಿಕನ ಬಳಿಯಿದ್ದ 1.37 ಕೋಟಿ ಮೌಲ್ಯದ 24 ಕ್ಯಾರೆಟ್​​ನ 899.50 ಗ್ರಾಂ ಬಂಗಾರವನ್ನು…

Read More

ಏನಿದು ಕಸದಿಂದ ಕಾಸು? ಬಹುದೊಡ್ಡ ಹಗರಣವನ್ನ ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್ – Kannada News

ಬೆಂಗಳೂರು, (ಜೂನ್ 10): ಬೆಂಗಳೂರಿನಲ್ಲಿ ಕಸದ (bengaluru garbage) ಟೆಂಡರ್​​ನಲ್ಲಿ ಬಾರೀ ಅಕ್ರಮ ನಡೆದಿದೆ ಎಂದು ವಿಪಕ್ಷ ಬಿಜೆಪಿ (BJP) ಗಂಭೀರ ಆರೋಪ ಮಾಡಿದ್ದು, ಸಂಬಂಧ ಸೂಕ್ತ ತನಿಖೆ ನಡೆಸಬೇಕೆಂದು ರಾಜ್ಯಪಾಲರಿಗೆ ದೂರು ನೀಡಿದೆ. ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗ ಇಂದು (ಜೂನ್ 10) ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದು, ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಮನವಿ ಮಾಡಿದ್ದಾರೆ. 36 ಸಾವಿರ ಕೋಟಿ…

Read More

ಬೆಂಗಳೂರಿನಲ್ಲಿ ಅರ್ಧಕ್ಕರ್ಧ ಇಳಿದ ತ್ರಿಬಲ್ ರೈಡಿಂಗ್ ಕೇಸ್: ಆದ್ರೆ ಮಿಡ್‌ನೈಟ್ ಹೀರೋಗಿರಿಗೆ ಬೀದ್ದಿಲ್ಲ ಬ್ರೇಕ್

ಬೆಂಗಳೂರು, ಜೂನ್ 10: ಬೆಂಗಳೂರು ಸಂಚಾರಿ ಪೊಲೀಸರ (BTP) ವಾರ್ಷಿಕ ಅಂಕಿ-ಅಂಶಗಳ ಪ್ರಕಾರ, ನಗರದಲ್ಲಿ ತ್ರಿಬಲ್ ರೈಡಿಂಗ್ (Triple Riding) ಪ್ರಕರಣಗಳ ಸಂಖ್ಯೆ 2024 ರಲ್ಲಿ ಗರಿಷ್ಠ ಮಟ್ಟವನ್ನು ತಲುಪಿದ ನಂತರ ಈಗ ಗಣನೀಯವಾಗಿ ಕುಸಿದಿದೆ. ಆದಾಗ್ಯೂ, ವಾರಾಂತ್ಯದ ದಿನಗಳಲ್ಲಿ ಮತ್ತು ಪ್ರಮುಖ ಸಂಭ್ರಮಾಚರಣೆಗಳ ಸಂದರ್ಭದಲ್ಲಿ ತಡರಾತ್ರಿ ಸಂಚಾರ ಮಾಡುವವರು ವ್ಯವಸ್ಥೆಗೆ ಇನ್ನೂ ದೊಡ್ಡ ಸವಾಲಾಗಿ ಉಳಿದಿದ್ದಾರೆ. ಮುಖ್ಯಾಂಶಗಳು AI ಕ್ಯಾಮೆರಾಗಳ ಅಳವಡಿಕೆಯಿಂದ ಬೆಂಗಳೂರಲ್ಲಿ ತ್ರಿಬಲ್ ರೈಡಿಂಗ್ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿವೆ. ಬಿಟಿಎಂ, ಕೋರಮಂಗಲದಂತಹ ಹಾಟ್‌ಸ್ಪಾಟ್‌ಗಳಲ್ಲಿ ತಡರಾತ್ರಿ…

Read More

ವಿರಾಟ್ ಕೊಹ್ಲಿ ದಾಖಲೆ ಉಡೀಸ್: ರುತುರಾಜ್ ಗಾಯಕ್ವಾಡ್ ಹೊಸ ವಿಶ್ವ ದಾಖಲೆ

ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸವನ್ನು ನಿರ್ಮಿಸಿರುವುದು ಭಾರತೀಯ ಬ್ಯಾಟರ್ ರುತುರಾಜ್ ಗಾಯಕ್ವಾಡ್ (Ruturaj gaikwad). ಅದು ಕೂಡ ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: BCCI) ಜೂನ್ 9, 2026 ರಂದು ಶ್ರೀಲಂಕಾ ಎ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ 101 ರನ್​ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಈ ಶತಕದೊಂದಿಗೆ ರುತುರಾಜ್ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಅತ್ಯಧಿಕ ಸರಾಸರಿ ಹೊಂದಿರುವ ಬ್ಯಾಟರ್…

Read More

ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ: ಇಲ್ಲಿದೆ ನೋಡಿ ಅಪರೂಪದ ದೃಶ್ಯ – Kannada News

ಹಾಸನ, ಜೂ.10: ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಆದರೆ, ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಬಳಿ ಸಾರ್ವಜನಿಕರನ್ನು ಒಂದೆಡೆ ಆತಂಕಕ್ಕೆ, ಮತ್ತೊಂದೆಡೆ ತಮಾಷೆಯ ಕುತೂಹಲಕ್ಕೆ ಈಡುಮಾಡುವ ಅಪರೂಪದ ಘಟನೆಯೊಂದು ನಡೆದಿದೆ. ಗುಂಪಿನಿಂದ ಬೇರ್ಪಟ್ಟಿರುವ ಕಾಡಾನೆ ಮರಿಯೊಂದು ರಸ್ತೆಯಲ್ಲಿದ್ದ ಹಸುವಿನ ಕರುಗಳನ್ನು ಅಟ್ಟಾಡಿಸಿಕೊಂಡು ಹೋಗಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕಲ್ಲಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ದಟ್ಟವಾದ ಕಾಫಿ ತೋಟಗಳಿವೆ. ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಸಾಮಾನ್ಯವಾಗಿದೆ. ಆನೆಗಳ ಗುಂಪಿನಿಂದ ಬೇರ್ಪಟ್ಟಿದ್ದ…

Read More

Video: ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ? – Kannada News

ಕೇರಳದಲ್ಲಿ ಶಿಗೆಲ್ಲ ಮಾರಿ ಸೋಂಕಿನಿಂದ ನಾಲ್ಕು ವರ್ಷದ ಮಗುವೊಂದು ಮೃತಪಟ್ಟಿದ್ದು, ಹಲವು ಜಿಲ್ಲೆಗಳಲ್ಲಿ ಮಕ್ಕಳ ಮೇಲೆ ಈ ಸೋಂಕು ಪರಿಣಾಮ ಬೀರಿದೆ. ಶಿಗೆಲ್ಲ ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುವ ಶಿ ಎಲ್ಲೋಸಿಸ್ ತೀವ್ರ ಕರುಳುಬೇನೆ ಅಥವಾ ಭೇದಿಗೆ ಕಾರಣವಾಗುತ್ತದೆ. ಕಲುಷಿತ ಆಹಾರ ಮತ್ತು ನೀರಿನ ಸೇವನೆಯಿಂದ ಈ ಸೋಂಕು ಹರಡುತ್ತದೆ. ಈ ಬ್ಯಾಕ್ಟೀರಿಯಾ ಜೀರ್ಣಾಂಗ ವ್ಯವಸ್ಥೆಯ ಮೇಲೆ ದಾಳಿ ಮಾಡಿ, ಹೊಟ್ಟೆಯಲ್ಲಿ ವಿಷ ಉತ್ಪಾದಿಸುತ್ತದೆ. ಮುನ್ನೆಚ್ಚರಿಕಾ ಕ್ರಮಗಳೆಂದರೆ ಕುದಿಸಿ ಆರಿಸಿದ ನೀರನ್ನು ಕುಡಿಯುವುದು, ಆಹಾರ ಸೇವಿಸುವ ಮೊದಲು ಮತ್ತು…

Read More

ಕಸದ ಟೆಂಡರ್​​ನಲ್ಲಿ ಅಕ್ರಮ ಆರೋಪ: ರಾಜ್ಯಪಾಲ ಗೆಹ್ಲೋಟ್​ಗೆ ಬಿಜೆಪಿ ನಿಯೋಗದಿಂದ ದೂರು – Kannada News

ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರುImage Credit source: Tv9 Kannada ಬೆಂಗಳೂರು, ಜೂನ್​​ 10: ಕಸದ ಟೆಂಡರ್​​ನಲ್ಲಿ ಅಕ್ರಮ ನಡೆದ ಆರೋಪ ಸಂಬಂಧ ರಾಜ್ಯಪಾಲ ಗೆಹ್ಲೋಟ್​ಗೆ ಬಿಜೆಪಿ (BJP) ನಿಯೋಗ ದೂರು ಸಲ್ಲಿಕೆ ಮಾಡಿದೆ. ಬೆಂಗಳೂರಿನ ಕಸದ ಟೆಂಡರ್​​ನಲ್ಲಿ ದೊಡ್ಡ ಅಕ್ರಮ ನಡೆದಿದ್ದು, ಸಿಬಿಐ ತನಿಖೆಗೆ ಕೊಡಿ ಎಂದು ರಾಜ್ಯಪಾಲರಿಗೆ ನೀಡಿರುವ ದೂರಲ್ಲಿ ಬಿಜೆಪಿ ಆಗ್ರಹಿಸಿದೆ. ಈ ಬಗ್ಗೆ ಟಿವಿ9ಗೆ ವಿರೋಧ ಪಕ್ಷದ ನಾಯಕ ಆರ್​.ಅಶೋಕ್ ಮಾಹಿತಿ ನೀಡಿದ್ದು, ಬೆಂಗಳೂರಿನ ನಿವಾಸಿಗಳು ಬೆಚ್ಚಿ ಬೀಳುವಂತಹ ಹಗರಣ ಇದಾಗಿದ್ದು,…

Read More