Headlines

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾಗಿ ಡಿಕೆ ಶಿವಕುಮಾರ್ ಇಟ್ಟ 9 ಬೇಡಿಕೆಗಳು ಹೀಗಿವೆ

ನವದೆಹಲಿ, (ಜೂನ್ 12): ಡಿಕೆ ಶಿವಕುಮಾರ್ (DK Shivakumar)  ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ದೆಹಲಿಯಲ್ಲಿ (New Delhi) ನಡೆದ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದು, ತಮ್ಮ ಮೊದಲ ಸಭೆಯಲ್ಲಿ ಕೆಲ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಭೇಟಿ ಮಾಡಿ ಕರ್ನಾಟಕದ (Karnataka) ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವಿ ಮಾಡಿದ್ದಾರೆ. ಇನ್ನು ಇಂದು (ಜೂನ್ 12) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನೂ ಸಹ ಭೇಟಿ ಮಾಡಿದ್ದು, ಪೊಲೀಸ್…

Read More

ಕೋಲ್ಕತಾದಲ್ಲಿ ಅಮುಲ್​ನಿಂದ ವಿಶ್ವದ ಅತಿದೊಡ್ಡ ಮೊಸರು ಘಟಕ; ಕರ್ನಾಟಕದಲ್ಲಿ ನಂದಿನಿ ಎದುರು ಸಿಗದ ಗೆಲುವು ಅಮುಲ್​ಗೆ ಬಂಗಾಳದಲ್ಲಿ ಸಿಗುತ್ತಾ?

ಕೋಲ್ಕತಾ, ಜೂನ್ 1: ಗುಜರಾತ್ ಸಹಕಾರಿ ಹಾಲು ಮಾರಾಟ ಮಹಾಮಂಡಳ (GCMMF) ಒಡೆತನದ ಅಮುಲ್ ಸಂಸ್ಥೆಯು ಪಶ್ಚಿಮ ಬಂಗಾಳದ ಕೋಲ್ಕತ್ತಾ ಸಮೀಪದ ಹೌರಾದಲ್ಲಿರುವ ಸಂಕ್ರೇಲ್ ಫುಡ್ ಪಾರ್ಕ್‌ನಲ್ಲಿ ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ಬೃಹತ್ ಸಮಗ್ರ ಡೈರಿ ಘಟಕವನ್ನು ಸ್ಥಾಪಿಸುತ್ತಿದೆ. ಇದು ವಿಶ್ವದಲ್ಲೇ ಅತ್ಯಂತ ದೊಡ್ಡ ಮೊಸರು ಉತ್ಪಾದನಾ ಘಟಕ (Curd plant) ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಈ ಘಟಕವು ಪ್ರತಿದಿನ 10 ಲಕ್ಷ ಕಿಲೋಗ್ರಾಂ (1,000 ಮೆಟ್ರಿಕ್ ಟನ್) ಮೊಸರು ಉತ್ಪಾದಿಸುವ ಹಾಗೂ ದಿನಕ್ಕೆ…

Read More

ಅಪ್ಪಾ ನನಗೆ ಸಾಯಲು ಇಷ್ಟವಿಲ್ಲ, ಬದುಕಬೇಕು, ನೀರಿನ ಹೊಂಡಕ್ಕೆ ಬಿದ್ದು ಕರೆ ಮಾಡಿದ್ದ ಟೆಕ್ಕಿ, ಕೊನೆಗೂ ಪ್ರಾಣ ಉಳೀಲಿಲ್ಲ – Kannada News | Noida Techie Dies in Pit: Delivery Agent’s Heroic Bid, Family Blames Negligence

ನೋಯ್ಡಾ, ಜನವರಿ 18: ಕಾರು ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಲು ತನ್ನ ಜೀವದ ಹಂಗನ್ನೂ ತೊರೆದು ಡೆಲಿವರಿ ಏಜೆಂಟ್(Delivery Agent) ಹೋರಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಎರಡು ಗಂಟೆಗಳ ಕಾಲ ಕಾರು ನೀರಿನ ಮೇಲೆ ತೇಲುತ್ತಿತ್ತು. ಆದರೆ ಯಾರ ಕಣ್ಣಿಗೂ ಬೀಳಲಿಲ್ಲ, ಅಲ್ಲೇ ಹೋಗುತ್ತಿದ್ದ ಡೆಲಿವರಿ ಏಜೆಂಟ್ ಅದನ್ನು ಗಮನಿಸಿ ಕೂಡಲೇ ಕೆಳಗೆ ದುಮುಕಿದ್ದಾರೆ. ಟೆಕ್ಕಿ ಯುವರಾಜ್ ಮೆಹ್ತಾ ಎಂಬುವವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆಯತಪ್ಪಿ ನಿರ್ಮಾಣ ಹಂದಲ್ಲಿರುವ ಮಾಲ್​ನ ನೀರು…

Read More

ಅಮೆರಿಕದಲ್ಲಿ ಭಾರತೀಯ ಯುವತಿಯ ನಿಗೂಢ ಸಾವು; ಕೊಲೆ ಮಾಡಿ ಭಾರತಕ್ಕೆ ಓಡಿಬಂದನಾ ಬಾಯ್​ಫ್ರೆಂಡ್​? – Kannada News | Indian Woman Nikitha Godishala Found Dead In US apartment Ex Boyfriend Fled To India

ನ್ಯೂಯಾರ್ಕ್, ಜನವರಿ 5: ಅಮೆರಿಕದಲ್ಲಿ ವಾಸಿಸುತ್ತಿದ್ದ 27 ವರ್ಷದ ಭಾರತೀಯ ಯುವತಿಯಾದ ನಿಕಿತಾ ರಾವ್ ಗೋಡಿಶಾಲ ಎಂಬಾಕೆಯನ್ನು ಮೇರಿಲ್ಯಾಂಡ್‌ನಲ್ಲಿರುವ ತನ್ನ ಮಾಜಿ ಪ್ರಿಯಕರನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಆಕೆಯ ಮಾಜಿ ಪ್ರೇಮಿಯನ್ನೇ ಪ್ರಮುಖ ಶಂಕಿತ ಎಂದು ಹೆಸರಿಸಿದ್ದಾರೆ. ಆತ ಅಮೆರಿಕ (United States) ಬಿಟ್ಟು ಭಾರತಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ನಿಕಿತಾ ಗೋಡಿಶಾಲ ಜನವರಿ 2ರಂದು ನಾಪತ್ತೆಯಾಗಿದ್ದಳು. ಮರುದಿನ ಆಕೆಯ ಶವ ಪತ್ತೆಯಾಗಿತ್ತು. ಆಕೆಯ ಸಾವಿನ ನಂತರ ಆಕೆಯ ಮಾಜಿ ಪ್ರಿಯಕರನಾದ 27 ವರ್ಷದ ಅರ್ಜುನ್ ಶರ್ಮಾ…

Read More

ಆಯುಷ್ಮಾನ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದು: ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ – Kannada News

ಮಂಗಳೂರು, ಜೂ.8: ಯುಟಿ ಖಾದರ್​​ ಅವರು ಅಧಿಕಾರ ಸ್ವೀಕಾರ ಮಾಡಿದ ನಂತರ ತಮ್ಮ ಆಡಳಿತಕ್ಕೆ ಚುರುಕು ನೀಡಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಆಗಿರುವ ತಪ್ಪುಗಳನ್ನು ಹಾಗೂ ಕೆಲವೊಂದು ಬದಲಾವಣೆಗಳನ್ನು ಮಾಡಲು ಮುಂದಾಗಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಉನ್ನತ ಅಧಿಕಾರಿಗಳು ಹಾಗೂ ವೈದ್ಯಕೀಯ ತಂಡದ ಪ್ರಮುಖ ಸಭೆಯನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ನಡೆಸಿದ್ದಾರೆ. ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಜಿಲ್ಲೆಯ ಸರ್ಕಾರಿ…

Read More

ಭಾರತದ ಇನ್ಯಾವ ಸಂಗೀತ ನಿರ್ದೇಶಕನಿಗೂ ಸಿಗದಷ್ಟು ಸಂಭಾವನೆ ಪಡೆದ ಎಆರ್ ರೆಹಮಾನ್

ಭಾರತೀಯ ಸಿನಿಮಾಗಳಲ್ಲಿ (Indian Cinema) ಸ್ಟಾರ್ ನಟರಿಗೆ ಸಿಕ್ಕಷ್ಟು ಸಂಭಾವನೆ, ಮಾನ್ಯತೆ ಸಿನಿಮಾದ ಇನ್ಯಾವುದೇ ವಿಭಾಗದ ಇನ್ಯಾವುದೇ ತಂತ್ರಜ್ಞರಿಗೆ ದೊರೆಯುವುದಿಲ್ಲ. ಸಂಗೀತ ನಿರ್ದೇಶಕರನ್ನಂತೂ ಕೇಳುವವರೇ ಇಲ್ಲ. ಎಷ್ಟೋ ಬಾರಿ ಕೇವಲ ಸಂಗೀತದಿಂದಲೇ ಸಿನಿಮಾಗಳು ಗೆದ್ದಿರುವುದುಂಟು. ಆದರೂ ಸಹ ಸಂಗೀತ ನಿರ್ದೇಶಕರಿಗೆ ಅವರ ಪ್ರತಿಭೆಗೆ ತಕ್ಕಷ್ಟು ಸೂಕ್ತ ಸಂಭಾವನೆ ದೊರೆಯುವುದಿಲ್ಲ. ಇದೀಗ ಎಆರ್ ರೆಹಮಾನ್ ಅವರಿಗೆ ಭಾರಿ ಮೊತ್ತದ ಸಂಭಾವನೆ ದೊರೆತಿದ್ದು, ಭಾರತದ ಇನ್ಯಾವ ಸಂಗೀತ ನಿರ್ದೇಶಕನಿಗೂ ಇಷ್ಟು ದೊಡ್ಡ ಸಂಭಾವನೆ ದೊರೆತಿಲ್ಲ ಎನ್ನಲಾಗುತ್ತಿದೆ. ವರದಿಗಳ ಪ್ರಕಾರ, ‘ರಾಮಾಯಣ’…

Read More

ಕಾಂಗ್ರೆಸ್​​ನಲ್ಲಿ ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು

ಬೆಂಗಳೂರು, ಜುಲೈ 14: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರು ಕಾಂಗ್ರೆಸ್ ಶಾಸಕರೊಂದಿಗೆ ವಿಶೇಷ ಸಭೆ ನಡೆಸಿದ್ದು, ಈ ಸಭೆಯಲ್ಲಿ ಬಹುತೇಕ ಶಾಸಕರು ಭಾಗವಹಿಸಿದ್ದರೂ ಇಬ್ಬರು ಪ್ರಮುಖ ನಾಯಕರು ಗೈರಾಗಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಮೀಟಿಂಗ್​​ನಿಂದ ದೂರವೇ ಉಳಿದಿದ್ದು, ಅವರ ಈ ನಿರ್ಧಾರದ ಬಗ್ಗೆ ನಾನಾ ವ್ಯಾಖ್ಯಾನಗಳು ಕೇಳಿಬಂದಿವೆ. ಭೈರತಿ ಸುರೇಶ್​​ ಕೂಡ ಸಭೆಗೆ ಗೈರು ಹಾಜರಾಗಿದ್ದಾರೆಯಾದರೂ ಅವರು ಪೂರ್ವನಿಯೋಜಿತ ಕಾರ್ಯಕ್ರಮದ ನಿಮಿತ್ತ ರಾಜ್ಯದಲ್ಲಿಲ್ಲ ಎನ್ನಲಾಗಿದೆ. ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ…

Read More

Rajat Patidar: ಅವರನ್ನು ಹೊಗಳಲು ನನ್ನ ಬಳಿ ಪದಗಳೇ ಇಲ್ಲ..! – Kannada News | Rajat patidar post match interview after rcb vs kkr match

IPL 2026: ಐಪಿಎಲ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಕಳೆದ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿದ್ದ ಆರ್​ಸಿಬಿ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆದ್ದು ಬೀಗಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್​ಗಳಲ್ಲಿ 192 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ 19.1 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ಬಳಿಕ ಮಾತನಾಡಿದ ರಾಯಲ್…

Read More

ಏನು ಮಾಡ್ತಿದ್ದೀರಾ? ರೋಹಿತ್ ಶರ್ಮಾ ಮುಖದಲ್ಲಿ ಹತಾಶೆ, ನೋವು, ನಿರಾಸೆ! – Kannada News | Rohit Sharma in the dugout unhappy MI vs CSK Match

ಐಪಿಎಲ್ 2026ರ ಅತ್ಯಂತ ನಿರೀಕ್ಷಿತ ಪಂದ್ಯಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ (MI) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹಣಾಹಣಿಯು ಅಭಿಮಾನಿಗಳಿಗೆ ಕೇವಲ ಆಟದ ರೋಮಾಂಚನವನ್ನಷ್ಟೇ ನೀಡಲಿಲ್ಲ, ಬದಲಿಗೆ ಒಂದು ಭಾವನಾತ್ಮಕ ಕ್ಷಣಕ್ಕೂ ಸಾಕ್ಷಿಯಾಯಿತು. ಮೇ 2ರಂದು ನಡೆದ ಈ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರು ಡಗೌಟ್‌ನಲ್ಲಿ ಅತ್ಯಂತ ನಿರಾಶೆ ಮತ್ತು ಅಸಮಾಧಾನದಿಂದ ಕುಳಿತಿದ್ದ ದೃಶ್ಯಗಳು ಈಗ ಕ್ರೀಡಾ ಲೋಕದಲ್ಲಿ ಚರ್ಚೆಗೆ ಕಾರಣವಾಗಿವೆ. ಈ ಪಂದ್ಯದ ವೇಳೆ ನಾಯಕ ಹಾರ್ದಿಕ್…

Read More

Video: ಎರಡೂವರೆ ತಾಸಿಂದ ನೋಡ್ತಿದ್ದೀನಿ ಗುರಾಯ್ಸೋದ್ಯಾಕೆ ಎಂದು ಕೇಳಿದ್ದಕ್ಕೆ ಯುವತಿಗೆ ಕಪಾಳಮೋಕ್ಷ ಮಾಡಿದ ಯುವಕ – Kannada News | Train Altercation Video Sparks Outrage After Woman Assaulted

ರೈಲು ಪ್ರಯಾಣವೆಂದರೆ ನೂರಾರು ಅಪರಿಚಿತರ ನಡುವೆ ಸಾಗುವ ಪಯಣ, ಎಲ್ಲಾ ರೀತಿಯ ಜನರೂ ಇರ್ತಾರೆ. ಸುಮಾರು ಎರಡೂವರೆ ಗಂಟೆಯಿಂದ ಯುವತಿಯನ್ನು ದಿಟ್ಟಿಸಿ ನೋಡುತ್ತಿದ್ದ ಯುವಕನ ಬಳಿ ಪ್ರಶ್ನೆ ಮಾಡಿದಾಗ ಆತ ಕೂಡಲೇ ಆಕೆಗೆ ಕಪಾಳಮೋಕ್ಷ ಮಾಡಿದ್ದಾನೆ. ರೈಲಿನಲ್ಲಿ ನೂರಾರು ಪ್ರಯಾಣಿಕರು ಇದ್ದರೂ, ಈ ಹಲ್ಲೆಯನ್ನು ತಡೆಯಲು ಯಾರೂ ಮುಂದೆ ಬಂದಿಲ್ಲದಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ರೈಲುಗಳಲ್ಲಿ ಮಹಿಳೆಯರ ಸುರಕ್ಷತೆ ಎಷ್ಟರ ಮಟ್ಟಿಗಿದೆ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ.ಪ್ರಸ್ತುತ ರೈಲ್ವೆ ಅಧಿಕಾರಿಗಳು ಈ ವಿಡಿಯೋ ಯಾವ ಮಾರ್ಗದ ರೈಲಿನಲ್ಲಿ…

Read More