Headlines

ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ: ಇಲ್ಲಿದೆ ನೋಡಿ ಅಪರೂಪದ ದೃಶ್ಯ – Kannada News

ಹಾಸನ, ಜೂ.10: ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಆದರೆ, ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಬಳಿ ಸಾರ್ವಜನಿಕರನ್ನು ಒಂದೆಡೆ ಆತಂಕಕ್ಕೆ, ಮತ್ತೊಂದೆಡೆ ತಮಾಷೆಯ ಕುತೂಹಲಕ್ಕೆ ಈಡುಮಾಡುವ ಅಪರೂಪದ ಘಟನೆಯೊಂದು ನಡೆದಿದೆ. ಗುಂಪಿನಿಂದ ಬೇರ್ಪಟ್ಟಿರುವ ಕಾಡಾನೆ ಮರಿಯೊಂದು ರಸ್ತೆಯಲ್ಲಿದ್ದ ಹಸುವಿನ ಕರುಗಳನ್ನು ಅಟ್ಟಾಡಿಸಿಕೊಂಡು ಹೋಗಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕಲ್ಲಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ದಟ್ಟವಾದ ಕಾಫಿ ತೋಟಗಳಿವೆ. ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಸಾಮಾನ್ಯವಾಗಿದೆ. ಆನೆಗಳ ಗುಂಪಿನಿಂದ ಬೇರ್ಪಟ್ಟಿದ್ದ…

Read More

Video: ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ? – Kannada News

ಕೇರಳದಲ್ಲಿ ಶಿಗೆಲ್ಲ ಮಾರಿ ಸೋಂಕಿನಿಂದ ನಾಲ್ಕು ವರ್ಷದ ಮಗುವೊಂದು ಮೃತಪಟ್ಟಿದ್ದು, ಹಲವು ಜಿಲ್ಲೆಗಳಲ್ಲಿ ಮಕ್ಕಳ ಮೇಲೆ ಈ ಸೋಂಕು ಪರಿಣಾಮ ಬೀರಿದೆ. ಶಿಗೆಲ್ಲ ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುವ ಶಿ ಎಲ್ಲೋಸಿಸ್ ತೀವ್ರ ಕರುಳುಬೇನೆ ಅಥವಾ ಭೇದಿಗೆ ಕಾರಣವಾಗುತ್ತದೆ. ಕಲುಷಿತ ಆಹಾರ ಮತ್ತು ನೀರಿನ ಸೇವನೆಯಿಂದ ಈ ಸೋಂಕು ಹರಡುತ್ತದೆ. ಈ ಬ್ಯಾಕ್ಟೀರಿಯಾ ಜೀರ್ಣಾಂಗ ವ್ಯವಸ್ಥೆಯ ಮೇಲೆ ದಾಳಿ ಮಾಡಿ, ಹೊಟ್ಟೆಯಲ್ಲಿ ವಿಷ ಉತ್ಪಾದಿಸುತ್ತದೆ. ಮುನ್ನೆಚ್ಚರಿಕಾ ಕ್ರಮಗಳೆಂದರೆ ಕುದಿಸಿ ಆರಿಸಿದ ನೀರನ್ನು ಕುಡಿಯುವುದು, ಆಹಾರ ಸೇವಿಸುವ ಮೊದಲು ಮತ್ತು…

Read More

ಕಸದ ಟೆಂಡರ್​​ನಲ್ಲಿ ಅಕ್ರಮ ಆರೋಪ: ರಾಜ್ಯಪಾಲ ಗೆಹ್ಲೋಟ್​ಗೆ ಬಿಜೆಪಿ ನಿಯೋಗದಿಂದ ದೂರು – Kannada News

ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರುImage Credit source: Tv9 Kannada ಬೆಂಗಳೂರು, ಜೂನ್​​ 10: ಕಸದ ಟೆಂಡರ್​​ನಲ್ಲಿ ಅಕ್ರಮ ನಡೆದ ಆರೋಪ ಸಂಬಂಧ ರಾಜ್ಯಪಾಲ ಗೆಹ್ಲೋಟ್​ಗೆ ಬಿಜೆಪಿ (BJP) ನಿಯೋಗ ದೂರು ಸಲ್ಲಿಕೆ ಮಾಡಿದೆ. ಬೆಂಗಳೂರಿನ ಕಸದ ಟೆಂಡರ್​​ನಲ್ಲಿ ದೊಡ್ಡ ಅಕ್ರಮ ನಡೆದಿದ್ದು, ಸಿಬಿಐ ತನಿಖೆಗೆ ಕೊಡಿ ಎಂದು ರಾಜ್ಯಪಾಲರಿಗೆ ನೀಡಿರುವ ದೂರಲ್ಲಿ ಬಿಜೆಪಿ ಆಗ್ರಹಿಸಿದೆ. ಈ ಬಗ್ಗೆ ಟಿವಿ9ಗೆ ವಿರೋಧ ಪಕ್ಷದ ನಾಯಕ ಆರ್​.ಅಶೋಕ್ ಮಾಹಿತಿ ನೀಡಿದ್ದು, ಬೆಂಗಳೂರಿನ ನಿವಾಸಿಗಳು ಬೆಚ್ಚಿ ಬೀಳುವಂತಹ ಹಗರಣ ಇದಾಗಿದ್ದು,…

Read More

ದೀರ್ಘಾವಧಿ ಪ್ರಧಾನಿ ದಾಖಲೆ: ಕೈಯಲ್ಲಿ ‘ಮೋದಿ’ ಮೆಹಂದಿ ಹಾಕಿಕೊಂಡು ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ಬರ್ತ್‌ಡೇ ಆಚರಣೆ – Kannada News

ಕೈಯಲ್ಲಿ ‘ಮೋದಿ’ ಮೆಹಂದಿ ಹಾಕಿಕೊಂಡು ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ಬರ್ತ್‌ಡೇ ಆಚರಣೆ ಬಳ್ಳಾರಿ, ಜೂನ್ 10: ಸ್ವತಂತ್ರ ಭಾರತದ ಇತಿಹಾಸದಲ್ಲಿ ಸತತವಾಗಿ ಅತಿ ದೀರ್ಘಾವಧಿಗೆ ಚುನಾಯಿತರಾದ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನರೇಂದ್ರ ಮೋದಿ (Narendra Modi) ಅವರ ಐತಿಹಾಸಿಕ ಸಾಧನೆಯನ್ನು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಕುಟುಂಬ ವಿಶಿಷ್ಟವಾಗಿ ಸಂಭ್ರಮಿಸಿದೆ. ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ತಮ್ಮ ಹುಟ್ಟುಹಬ್ಬದ ಸಂಭ್ರಮದ ಮಧ್ಯೆಯೇ, ಪ್ರಧಾನಿ ಮೋದಿಯವರ…

Read More

ಸ್ಟ್ಯಾಂಡ್-ಅಪ್ ಕಾಮಿಡಿ ಶೋ: 370ರೂ. ಬಿರಿಯಾನಿ ಬದಲಾಗಿ ಆಕೆಯಿಂದ ಇನ್ನೇನೋ ಬಯಸಿದ್ದೆ ಎಂದು ಹೇಳಿ ಕೆಲಸ ಕಳೆದುಕೊಂಡ ಯುವಕ – Kannada News

ಕೆಲಸದಿಂದ ವಜಾಗೊಂಡ ವ್ಯಕ್ತಿImage Credit source: NDTV ಗುರುಗ್ರಾಮ, ಜೂನ್ 10: ಕೆಲವು ಸೆಕೆಂಡುಗಳಲ್ಲಿ ತಾವು ವೈರಲ್ ಆಗಬೇಕು ಪ್ರಸಿದ್ಧಿ ಪಡೆಯಬೇಕು ಎಂದು ಸಾರ್ವಜನಿಕವಾಗಿ ಆಡುವ ಕೆಲವು ಮಾತುಗಳು ಹೇಗೆ ಇಡೀ ವೃತ್ತಿ ಜೀವನವನ್ನೇ ಬಲಿ ಪಡೆಯಬಹುದು ಎಂಬುದಕ್ಕೆ ಈ ಘಟನೆ ಉತ್ತಮ ಉದಾಹರಣೆಯಾಗಿದೆ. ಪ್ರಸಿದ್ಧ ಸ್ಟ್ಯಾಂಡ್​-ಅಪ್ ಕಾಮಿಡಿಯನ್ ಪ್ರಣೀತ್ ಮೋರ್ ಅವರ ಲೈವ್ ಸ್ಟ್ಯಾಂಡ್​ ಅಪ್ ಕಾಮಿಡಿ ಶೋ ವೇಳೆ ಮಹಿಳೆಯರ ಘನತೆಗೆ ಕುಂದುಂಟಾಗುವಂತೆ ಅಸಭ್ಯ ಕಮೆಂಟ್ ಮಾಡಿದ್ದ ಯುವಕನನ್ನು ಆತ ಕೆಲಸ ಮಾಡುತ್ತಿದ್ದ ಕಂಪನಿ…

Read More

ಕಳೆದ 12 ವರ್ಷದಲ್ಲಿ ಆಡಳಿತ ಮತ್ತು ಹಣಕಾಸು ವ್ಯವಸ್ಥೆಯಲ್ಲಿ ಸಂಚಲನ ಸೃಷ್ಟಿಸಿದ ಡಿಜಿಟಲ್ ಸೇವೆಗಳು – Kannada News

ನವದೆಹಲಿ, ಜೂನ್ 10: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ 12 ವರ್ಷಗಳ ಆಡಳಿತಾವಧಿಯಲ್ಲಿ ಭಾರತೀಯರ ದೈನಂದಿನ ಜೀವನವನ್ನು ಬದಲಾಯಿಸಿದ ಪ್ರಮುಖ ಡಿಜಿಟಲ್ ಸೇವೆಗಳು ಹಲವಿವೆ. ಹನ್ನೆರಡು ವರ್ಷದ ಹಿಂದೆ ಹಣಕಾಸು ಮೂಲಸೌಕರ್ಯ ವ್ಯವಸ್ಥೆ ಹೇಗಿತ್ತು ಎಂದು ಯಾರು ಬೇಕಾದರೂ ನೆನಪಿಸಿಕೊಳ್ಳಬಹುದು. ಕೈಯಲ್ಲಿ, ಜೀಬಲ್ಲಿ, ಪಾಕೆಟಲ್ಲಿ ಕ್ಯಾಷ್ ಇಟ್ಟುಕೊಳ್ಳಬೇಕಿತ್ತು. ವ್ಯಾಪಾರಿಗೂ ಚಿಲ್ಲರೆ ಸಮಸ್ಯೆ. ಬ್ಯಾಂಕಿಗೆ ಹೋದರೆ ಬೇಕಾದ್ದು ಪಡೆಯಲು ದಿನಹರಣ, ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೆ ಕಾಯುವ ಪಾಡು. ಸರ್ಕಾರಿ ಸೇವೆಗಳನ್ನು ಪಡೆಯಬೇಕೆಂದರೆ ಸಾಕಪ್ಪಾ ಸಾಕು ಎನ್ನುವಂತೆ…

Read More

ಪೆಟ್ರೋಲ್ ಬಂಕ್ ನೌಕರ ಭಾರತಿರಾಜ್, ತಮಿಳು ಚಿತ್ರರಂಗದಲ್ಲಿ ಕ್ರಾಂತಿ ಮಾಡಿದ್ದು ಹೇಗೆ? – Kannada News

ತಮಿಳು ಚಿತ್ರರಂಗದ (Kollywood) ಹಿರಿಯ ನಿರ್ದೇಶಕ ಭಾರತಿ ರಾಜ ಇಂದು (ಜೂನ್ 10) ನಿಧನ ಹೊಂದಿದ್ದಾರೆ. ತಮಿಳುನಾಡು ಸಿಎಂ ವಿಜಯ್ ಸೇರಿದಂತೆ ಹಲವಾರು ಸಿನಿಮಾ ಮತ್ತು ರಾಜಕೀಯ ಗಣ್ಯರು ಭಾರತಿ ರಾಜ ಅವರಿಗೆ ಅಂತಿಮ ನಮನಗಳನ್ನು ಸಲ್ಲಸಿದ್ದಾರೆ. ಭಾರತಿರಾಜ, ತಮಿಳು ಸಿನಿಮಾಗಳ ವ್ಯಾಕರಣ ಬದಲಿಸಿದ ನಿರ್ದೇಶಕ. ಅವರ ಮೊದಲ ಸಿನಿಮಾ ‘16 ವಯತಿನಿಲೆ’ ಸಿನಿಮಾ, ಸೂಪರ್ ಹಿಟ್ ಆಗಿದ್ದು, ಮಾತ್ರವಲ್ಲ ಸಿನಿಮಾ ನಿರ್ದೇಶಕರುಗಳಿಗೆ ಹೊಸ ಹಾದಿಯನ್ನೇ ಹಾಕಿಕೊಟ್ಟಿತು. ಅಂದಹಾಗೆ ಭಾರತಿರಾಜ, ಬಹಳ ಕಷ್ಟಪಟ್ಟು ಮೇಲೆ ಬಂದ ವ್ಯಕ್ತಿ….

Read More

ರಾಜ್ಯಸಭಾ ಟಿಕೆಟ್​​ ಕೈತಪ್ಪಿದ ಬಗ್ಗೆ ಮೌನ ಮುರಿದ ದೇವೇಗೌಡರು: ಯಾರ ಹಂಗಿಲ್ಲದೆ ಮಾತಾಡ್ತೇನೆ ಎಂದ ಹೆಚ್​​ಡಿಡಿ – Kannada News

ಹೆಚ್​​.ಡಿ. ದೇವೇಗೌಡ ಮತ್ತು ನರೇಂದ್ರ ಮೋದಿImage Credit source: HD Deve Gowda X Account and PTI ಬೆಂಗಳೂರು, ಜೂನ್​​ 10: ಮಾಜಿ ಪ್ರಧಾನಿ ದೇವೇಗೌಡರಿಗೆ ಎನ್​​ಡಿಎಯಿಂದ ರಾಜ್ಯಸಭಾ ಟಿಕೆಟ್​​ ನೀಡದಿರೋದು ಭಾರಿ ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಈ ನಡುವೆ ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಹೆಚ್​​ಡಿಡಿ, ವಿರೋಧಿಗಳಿಗೆ ಖಡಕ್​​ ಸಂದೇಶ ರವಾನಿಸಿದ್ದಾರೆ. ನಾನು ಸುಮ್ಮನೆ ಕೂರಲ್ಲ, ನನ್ನ ಶಕ್ತಿ ಮೀರಿ‌ ಕೆಲಸ‌ ಮಾಡುತ್ತೇನೆ. ರಾಜ್ಯ ಮತ್ತು ದೇಶದ ವಿಚಾರವನ್ನ…

Read More

ವಿಚ್ಛೇದನ ವದಂತಿ ಬಗ್ಗೆ ಪೋಸ್ಟ್ ಹಾಕಿದ ನಟಿ ಶುಭಾ ಪೂಂಜಾ – Kannada News

ಕನ್ನಡದ ನಟಿ ಶುಭಾ ಪೂಂಜಾ ಅವರು ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸಲಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ಅವರೇ ಅಧಿಕೃತವಾಗಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳಲ್ಲಿ ಅವರ ವಿಚ್ಛೇದನದ ಸುದ್ದಿ ಸಖತ್ ಸದ್ದು ಮಾಡುತ್ತಿತ್ತು. ಈ ಎಲ್ಲಾ ಚರ್ಚೆಗಳ ನಡುವೆ ನಟಿ ಶುಭಾ ಪೂಂಜಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಮಾಧ್ಯಮ ಮಿತ್ರರಲ್ಲಿ ಮತ್ತು ಅಭಿಮಾನಿಗಳಲ್ಲಿ ಒಂದು ಪ್ರಮುಖ ಮನವಿ ಮಾಡಿದ್ದಾರೆ. ಶುಭಾ ಪೂಂಜಾ ಅವರು 2022ರಲ್ಲಿ…

Read More

ಭಾರತಿರಾಜ ಮೊದಲ ಸಿನಿಮಾ ಕನ್ನಡದ್ದಾಗಬೇಕಿತ್ತು, ತಪ್ಪಿದ್ದು ಹೇಗೆ? – Kannada News

ತಮಿಳು ಚಿತ್ರರಂಗದ (Kollywood) ಲೆಜೆಂಡರಿ ಸಿನಿಮಾ ನಿರ್ದೇಶಕ ಭಾರತಿರಾಜ ಇಂದು (ಜೂನ್ 10) ನಿಧನ ಹೊಂದಿದ್ದಾರೆ. ಹಲವಾರು ಸಿನಿಮಾ ಮತ್ತು ರಾಜಕೀಯ ಗಣ್ಯರು ಭಾರತಿರಾಜ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ತಮಿಳು ಚಿತ್ರರಂಗದ ಹಾದಿಯನ್ನು ಬದಲಿಸಿದ ನಿರ್ದೇಶಕ ಎಂದು ಭಾರತಿರಾಜ ಅವರನ್ನು ಕರೆಯಲಾಗುತ್ತದೆ. ಭಾರತಿರಾಜ ಅವರ ಮೊದಲ ಸಿನಿಮಾ ‘16 ವಯದಿನಿಲೆ’ 1977 ರಲ್ಲಿ ಬಿಡುಗಡೆ ಆಗಿತ್ತು. ಆದರೆ ಭಾರತಿರಾಜ ಅವರ ಮೊದಲ ಸಿನಿಮಾ ಕನ್ನಡದ್ದಾಗಬೇಕಿತ್ತು, ಆದರೆ ಅದು ಕೈತಪ್ಪಿದ್ದು ಎಸ್​​ಪಿ ಬಾಲಸುಬ್ರಹ್ಮಣ್ಯಂ ಅವರಿಂದ! ಎಸ್​​ಪಿ ಬಾಲಸುಬ್ರಹ್ಮಣ್ಯಂ ಹಾಗೂ…

Read More