ನಿಧಿ ಮದುವೆ ಆಗಲು ‘ಕರ್ಣ’ ಧಾರವಾಹಿಗೆ ಎಂಟ್ರಿ ಕೊಟ್ಟ ಗಗನ್ ಚಿನ್ನಪ್ಪ

ನಿಧಿ ಮದುವೆ ಆಗಲು ‘ಕರ್ಣ’ ಧಾರವಾಹಿಗೆ ಎಂಟ್ರಿ ಕೊಟ್ಟ ಗಗನ್ ಚಿನ್ನಪ್ಪ

‘ಕರ್ಣ’ ಧಾರಾವಾಹಿಯಲ್ಲಿ (Karna Serial) ಸಾಕಷ್ಟು ತಿರುವುಗಳು ಎದುರಾಗಿವೆ. ಈ ಧಾರಾವಾಹಿಗೆ ಹೊಸ ಪಾತ್ರಧಾರಿಗಳು ಬಂದಿದ್ದು ಕಡಿಮೆ. ಈಗ ಧಾರಾವಾಹಿಗೆ ಹೊಸ ಪಾತ್ರಧಾರಿಯ ಎಂಟ್ರಿ ಆಗಿದೆ. ಅದುವೇ ಗಗನ್ ಚಿನ್ನಪ್ಪ. ಹೌದು. ಗಗನ್ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸಿದ್ದರು. ಈಗ ಈ ಧಾರಾವಾಹಿಯಲ್ಲಿ ನಿಧಿಯನ್ನು ಮದುವೆಯಾಗಲು ಗಗನ್ ಆಗಮನ ಆಗಿದೆ. ಅವರು ಪರ್ಮನೆಂಟ್ ಆಗಿ ಧಾರಾವಾಹಿಯಲ್ಲಿ ಇರೋದಿಲ್ಲ. ಅವರದ್ದು ಅತಿಥಿ ಪಾತ್ರ ಎನ್ನಲಾಗಿದೆ.

ಕರ್ಣ ತನ್ನ ತಂದೆ ರಮೇಶ್ ಮಾಡಿದ ಕುತಂತ್ರಕ್ಕೆ ಬಲಿಯಾಗಿದ್ದಾನೆ. ಕರ್ಣ ತನಗೆ ಇಷ್ಟ ಇಲ್ಲದಿದ್ದರೂ ನಿತ್ಯಾಳ ಮದುವೆ ಆಗುವ ಪರಿಸ್ಥಿತಿ ಬಂತು. ನಂತರ ಆತ ಮದುವೆ ಆದ ಕೂಡ. ಆ ಬಳಿಕವೂ ರಮೇಶ್ ತೊಂದರೆ ಕೊಡೋದನ್ನು ಮುಂದುವರಿಸಿದ್ದಾರೆ. ಕರ್ಣನು ಲವ್ ಮಾಡಿದ್ದು ನಿಧಿಯನ್ನು. ಆಕೆಯನ್ನು ಮದುವೆ ಆಗೇ ಆಗುತ್ತೇನೆ ಎಂದು ಹೇಳಿದ್ದಾನೆ.

ಇದಕ್ಕೆ ಅವಕಾಶ ಕೊಡಬಾರದು ಎಂಬುದು ರಮೇಶನ ಆಲೋಚನೆ. ಈ ಕಾರಣಕ್ಕೆ ನಿಧಿಗೆ ಒಂದು ಹುಡಗನ ಕರೆತರಬೇಕು ಎಂದು ಆಲೋಚನೆ ಮಾಡಿದ್ದಾನೆ. ಅದಕ್ಕೆ ಸರಿಯಾಗಿ ಗಗನ್ ಚಿನ್ನಪ್ಪ ಅವರನ್ನು ಕರೆತಂದಿದ್ದಾನೆ. ನಿಧಿಯನ್ನು ಮದುವೆ ಆಗುವ ಹುಡಗನಾಗಿ ಗಗನ್ ಕಾಣಿಸಿಕೊಳ್ಳಲಿದ್ದಾರೆ.

ಗಗನ್ ಚಿನ್ನಪ್ಪ ಅವರ ಪಾತ್ರ ಈ ವಾರ ಪೂರ್ತಿ ಇರುವ ಸಾಧ್ಯತೆ ಇದೆ. ಅವರು ಬರೋದು ಹುಡುಗಿಯನ್ನು ನೋಡೋದು ಇದೆಲ್ಲವನ್ನೂ ಮಾಡಲು ಒಂದು ವಾರಗಳ ಎಪಿಸೋಡ್ಗಳು ಬೇಕಾಗಬಹುದು ಎನ್ನಲಾಗಿದೆ. ಅಲ್ಲಿಯವರೆಗೆ ಗಗನ್ ಚಿನ್ನಪ್ಪ ಅವರು ವೀಕ್ಷಕರಿಗೆ ಮನರಂಜನೆ ನೀಡಲಿದ್ದಾರೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ‘ಕರ್ಣ’ ಧಾರಾವಾಹಿಯಲ್ಲಿ ಮಹಾ ತಿರುವು; ಕರ್ಣನ ತಂದೆ ರಿವೀಲ್

ಈಗಾಗಲೇ ರಮೇಶ್ ವಿರುದ್ಧ ಕರ್ಣ ತಿರುಗಿ ಬಿದ್ದಿದ್ದಾನೆ. ಆತ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದಾನೆ. ಇನ್ನು, ನಿಧಿ ಕೂಡ ರಮೇಶ್ ಕೆಟ್ಟ ಬುದ್ದಿಯನ್ನು ಅರಿತುಕೊಂಡಿದ್ದಾಳೆ. ಆಕೆ ಕೂಡ ಅವನ ವಿರುದ್ಧ ತಿರುಗಿ ಬೀಳುವ ಕೆಲಸವನ್ನು ಮಾಡಿದ್ದಾಳೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Horoscope Today:ಇಂದು ಈ ರಾಶಿಯವರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 13, ವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ದಶಮಿ ತಿಥಿಯಾಗಿದೆ. ಬೆಳಗ್ಗೆ 7:41 ರಿಂದ 9:14ರವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ, 9:14 ರಿಂದ 10:47ರವರೆಗೆ ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲ ಇರುತ್ತದೆ. ಇಂದು ವರೂಧಿನಿ ಏಕಾದಶಿಯ ವಿಶೇಷ ದಿನವಾಗಿದ್ದು, ಭಗವಂತನ ಉಪವಾಸವು ಆರೋಗ್ಯ ಮತ್ತು ಆಧ್ಯಾತ್ಮಿಕ ದೃಷ್ಟಿಯಿಂದ ಶುಭಕರವಾಗಿದೆ. ರವಿ ಮೀನ ರಾಶಿಯಲ್ಲಿದ್ದು, ಚಂದ್ರ ಕುಂಭ ರಾಶಿಯ ಧನಿಷ್ಠ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

ಅರಬ್ಬಿ ಸಮುದ್ರದಲ್ಲಿ ಪಾಕ್ ಕರಾವಳಿ ರಕ್ಷಣಾ ಪಡೆ ಮೇಲೆ ಬಲೂಚ್ ಬಂಡುಕೋರರ ದಾಳಿ, ಮೂರು ಮಂದಿ ಸಾವು

ಇಸ್ಲಾಮಾಬಾದ್, ಏಪ್ರಿಲ್ 13: ಬಲೂಚಿಸ್ತಾನ(Balochistan)ದ ನೆಲದ ಮೇಲೆ ಸರಣಿ ದಾಳಿಗಳನ್ನು ನಡೆಸುತ್ತಿದ್ದ ಬಲೂಚ್ ಪ್ರತ್ಯೇಕತಾವಾದಿಗಳು ಈಗ ತಮ್ಮ ಕಾರ್ಯತಂತ್ರವನ್ನು ಬದಲಿಸಿದ್ದಾರೆ. ಭಾನುವಾರ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆಯ (Pakistan Coast Guard) ಗಸ್ತು ದೋಣಿಯ ಮೇಲೆ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಮೂವರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ರಾಯಿಟರ್ಸ್ ವರದಿಯ ಪ್ರಕಾರ, ಕಡಲ ಪ್ರಾಧಿಕಾರದ ಹಡಗಿನ ಮೇಲೆ ನಡೆದ ಇತಿಹಾಸದ ಮೊದಲ ದಾಳಿ ಇದಾಗಿದೆ.

ನಡೆದಿದ್ದೇನು?
ಪಾಕಿಸ್ತಾನ-ಇರಾನ್ ಗಡಿಯ ಸಮೀಪವಿರುವ ಕರಾವಳಿ ಪ್ರದೇಶದಲ್ಲಿ ಕೋಸ್ಟ್ ಗಾರ್ಡ್ ದೋಣಿಯು ಎಂದಿನಂತೆ ಗಸ್ತು ತಿರುಗುತ್ತಿತ್ತು. ಈ ವೇಳೆ ದೋಣಿಯನ್ನು ಸುತ್ತುವರೆದ ದಂಗೆಕೋರರು ಮನಬಂದಂತೆ ಗುಂಡಿನ ಮಳೆ ಕರೆದಿದ್ದಾರೆ. ಅನಿರೀಕ್ಷಿತ ದಾಳಿಯಿಂದ ಕಂಗೆಟ್ಟ ಭದ್ರತಾ ಸಿಬ್ಬಂದಿಗಳಿಗೆ ಚೇತರಿಸಿಕೊಳ್ಳಲು ಸಮಯವೇ ಸಿಗಲಿಲ್ಲ. ಪರಿಣಾಮವಾಗಿ ಮೂವರು ಸೈನಿಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

‘ಬಿಎಲ್‌ಎ’  ಹೊಣೆ ಮತ್ತು ಹೊಸ ಕಾರ್ಯತಂತ್ರ
ನಿಷೇಧಿತ ಸಂಘಟನೆ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಕೇವಲ ಹೊಣೆ ಹೊರುವುದು ಮಾತ್ರವಲ್ಲದೆ, ಪಾಕಿಸ್ತಾನಕ್ಕೆ ಅಪಾಯಕಾರಿ ಎಚ್ಚರಿಕೆಯನ್ನು ನೀಡಿದೆ

ಸಮುದ್ರವೇ ಮುಂದಿನ ರಣರಂಗ

ನಾವು ಇನ್ನು ಮುಂದೆ ಭೂಮಿಗೆ ಮಾತ್ರ ಸೀಮಿತವಾಗಿಲ್ಲ. ಸಮುದ್ರ ಗಡಿಗಳಲ್ಲೂ ದಾಳಿ ನಡೆಸುವುದು ನಮ್ಮ ಹೊಸ ಮಿಲಿಟರಿ ಕಾರ್ಯತಂತ್ರದ ಭಾಗವಾಗಿದೆ ಎಂದು ಬಿಎಲ್‌ಎ ಘೋಷಿಸಿದೆ. ಸಮುದ್ರದ ಮಧ್ಯದಲ್ಲಿ ದಾಳಿ ನಡೆಸುವ ಮೂಲಕ ತಾವು ಜಲಮಾರ್ಗದಲ್ಲೂ ಭದ್ರತಾ ಪಡೆಗಳಿಗೆ ಬೆದರಿಕೆ ಒಡ್ಡಬಲ್ಲೆವು ಎಂಬುದನ್ನು ಬಂಡುಕೋರರು ಸಾಬೀತುಪಡಿಸಿದ್ದಾರೆ.

ಮತ್ತಷ್ಟು ಓದಿ: ಸುಮ್ನೆ ಇರೋಕಾಗ್ದೆ ಭಾರತ-ಇರಾನ್ ನಡುವೆ ಬೆಂಕಿ ಹಚ್ಚಲು ಕುತಂತ್ರ ನಡೆಸಿದ ಪಾಕ್

ಗ್ವಾದರ್ ಬಂದರಿಗೆ ಎದುರಾದ ಭೀತಿ?
ಈ ದಾಳಿಯು ನಡೆದ ಪ್ರದೇಶವು ಕಾರ್ಯತಂತ್ರದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ. ವಿಶೇಷವಾಗಿ ಚೀನಾದ ‘ಬೆಲ್ಟ್ ಆಂಡ್ ರೋಡ್ ಇನಿಶಿಯೇಟಿವ್’ನ ಪ್ರಮುಖ ಭಾಗವಾಗಿರುವ ಗ್ವಾದರ್ ಆಳ ಸಮುದ್ರ ಬಂದರು ಇದೇ ಕರಾವಳಿ ಪಟ್ಟಿಯಲ್ಲಿದೆ. ಕೋಸ್ಟ್ ಗಾರ್ಡ್ ಮೇಲಿನ ದಾಳಿಯು ಈ ಬಂದರು ಮತ್ತು ಇಲ್ಲಿ ನಡೆಯುತ್ತಿರುವ ಚೀನಾ ಮೂಲಸೌಕರ್ಯ ಯೋಜನೆಗಳ ಭದ್ರತೆಯ ಬಗ್ಗೆ ದೊಡ್ಡ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕಾಬೂಲ್ ಕಡೆಗೆ ಇಸ್ಲಾಮಾಬಾದ್ ಬೆರಳು
ಪಾಕಿಸ್ತಾನ ಸರ್ಕಾರವು ಈ ದಾಳಿಯ ಹಿಂದೆ ಅಫ್ಘಾನಿಸ್ತಾನದ ಕೈವಾಡವಿದೆ ಎಂದು ಆರೋಪಿಸಿದೆ. ಬಲೂಚ್ ಉಗ್ರರಿಗೆ ಅಫ್ಘಾನಿಸ್ತಾನ ಆಶ್ರಯ ನೀಡುತ್ತಿದೆ ಮತ್ತು ಈ ದಾಳಿಗಳನ್ನು ಕಾಬೂಲ್‌ನಿಂದಲೇ ಯೋಜಿಸಲಾಗಿದೆ ಎಂದು ಇಸ್ಲಾಮಾಬಾದ್ ನಂಬುತ್ತದೆ. ಆದರೆ, ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ಈ ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿದೆ.

ಭೂಮಿಯ ಮೇಲಿನ ಯುದ್ಧ ಈಗ ಸಮುದ್ರಕ್ಕೂ ವ್ಯಾಪಿಸಿದೆ. ಬಿಎಲ್‌ಎ ನ ಈ ಹೊಸ ರೂಪ ಪಾಕಿಸ್ತಾನಕ್ಕೆ ಮಾತ್ರವಲ್ಲದೆ, ಈ ಪ್ರದೇಶದಲ್ಲಿ ಹೂಡಿಕೆ ಮಾಡಿರುವ ಚೀನಾಕ್ಕೂ ನಡುಕ ಹುಟ್ಟಿಸಿದೆ. ಅರಬ್ಬಿ ಸಮುದ್ರದ ಭದ್ರತೆ ಈಗ ಜಾಗತಿಕ ಮಟ್ಟದ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Bengaluru Air Quality: ಬೆಳಗಾವಿ, ಹುಬ್ಬಳ್ಳಿಯ ವಾಯು ಗುಣಮಟ್ಟ ಉತ್ತಮ

ಬೆಂಗಳೂರು, ಏಪ್ರಿಲ್ 13: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಹೈದರಾಬಾದ್, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಉಳಿದ ಮೆಟ್ರೋ ಸಿಟಿಗಳಲ್ಲಿ AQI 150ಕ್ಕಿಂತಲೂ ಹೆಚ್ಚಿದೆ. ಆದರೆ ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 119ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 119
  • ಮಂಗಳೂರು-130
  • ಮೈಸೂರು –109
  • ಬೆಳಗಾವಿ – 90
  • ಕಲಬುರ್ಗಿ-119
  • ಶಿವಮೊಗ್ಗ –110
  • ಬಳ್ಳಾರಿ – 117
  • ಹುಬ್ಬಳ್ಳಿ- 88
  • ಉಡುಪಿ –132
  • ವಿಜಯಪುರ –101

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ಧೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಅದ್ದೂರಿ ಫಿನಾಲೆ ನಡೆದಿದೆ. ಈ ಶೋನ ಫಿನಾಲೆಯಲ್ಲಿ ಪೂಜಾ ಮತ್ತು ಅನೂಪ್, ಸಿದ್ಧೇಗೌಡ  (ಧನಂಜಯ್) ಮತ್ತು ದೀಶಲ್, ಮೋಹಿತ್ ಮತ್ತು ಅನನ್ಯ, ಹರ್ಷ ಮತ್ತು ನಂದು, ಶಿಕ್ಷಿತ್ ತಾಪಾ ಮತ್ತು ಸಂಜನಾ ಇದ್ದರು. ಈ ರೇಸ್​​ನಲ್ಲಿ ಧನಂಜಯ ಹಾಗೂ ದೀಶಲ್ ಅವರು ಗೆದ್ದು ಬೀಗಿದ್ದಾರೆ. ಹರ್ಷ ಹಾಗೂ ನಂದು ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. ಇವರಿಗೆ 8 ಲಕ್ಷ ರೂಪಾಯಿ ಸಿಕ್ಕರೆ, ವಿನ್ನರ್ ಜೋಡಿಗೆ 15 ಲಕ್ಷ ರೂಪಾಯಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸೇನೆಯ ಒಂದು ಸಣ್ಣ ತಪ್ಪು, ನೂರಾರು ಜೀವಗಳು ಬಲಿ: ಉಗ್ರರ ಬದಲು ಸಾಮಾನ್ಯ ನಾಗರಿಕರ ಮೇಲೆ ನೈಜೀರಿಯಾ ವೈಮಾನಿಕ ದಾಳಿ

ಅಬುಜಾ, ಏಪ್ರಿಲ್ 13: ನೈಜೀರಿಯಾದಲ್ಲಿ ಉಗ್ರ(Terrorist) ರನ್ನು ಸದೆಬಡಿಯಲು ನಡೆಸಿದ ಮಿಲಿಟರಿ ವೈಮಾನಿಕ ದಾಳಿಯು ದಾರಿ ತಪ್ಪಿ ನಾಗರಿಕರ ಮೇಲೆ ಅಪ್ಪಳಿಸಿದ್ದು, ಕನಿಷ್ಠ 100ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನೈಜೀರಿಯನ್ ವಾಯುಪಡೆಯು ಆ ಭಾಗದಲ್ಲಿ ಸಕ್ರಿಯವಾಗಿರುವ ಜಿಹಾದಿ ಹೋರಾಟಗಾರರನ್ನು ಸದೆಬಡಿಯಲು ಕಾರ್ಯಾಚರಣೆ ನಡೆಸುತ್ತಿತ್ತು. ಬೊರ್ನೊ ಮತ್ತು ಯೋಬೆ ರಾಜ್ಯಗಳ ಗಡಿ ಭಾಗದಲ್ಲಿರುವ ಗ್ರಾಮವೊಂದರ ಮಾರುಕಟ್ಟೆಯಲ್ಲಿ ಜನಜಂಗುಳಿ ಇದ್ದ ಸಮಯದಲ್ಲಿ ಈ ವೈಮಾನಿಕ ದಾಳಿ ನಡೆದಿದೆ.

ಅಧಿಕಾರಿಗಳು ಈ ಘಟನೆಯನ್ನು ‘ಮಿಸ್‌ಫೈರ್’ ಎಂದು ಒಪ್ಪಿಕೊಂಡಿದ್ದಾರೆ. ಉಗ್ರರ ಅಡಗುತಾಣ ಎಂದು ಭಾವಿಸಿ ನಡೆಸಿದ ಬಾಂಬ್ ದಾಳಿಯು ನೇರವಾಗಿ ಮಾರುಕಟ್ಟೆಯ ಮೇಲೆ ಬಿದ್ದಿದೆ. ಬದುಕುಳಿದವರ ಹೇಳಿಕೆಗಳನ್ನು ಉಲ್ಲೇಖಿಸಿರುವ ಅಮ್ನೆಸ್ಟಿ ಇಂಟರ್ನ್ಯಾಷನಲ್, ಕನಿಷ್ಠ 100 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ ಎಂದು ದೃಢಪಡಿಸಿದೆ. ದಶಕಗಳಿಂದ ದಂಗೆಕೋರರ ಹಾವಳಿಯಿಂದ ತತ್ತರಿಸಿರುವ ಈ ಪ್ರದೇಶದಲ್ಲಿ ಈಗ ಸ್ವತಃ ದೇಶದ ಸೇನೆಯೇ ನಡೆಸಿದ ಈ ದಾಳಿ ಜನರಲ್ಲಿ ಆತಂಕ ಮೂಡಿಸಿದೆ.

ನೈಜೀರಿಯಾದ ಈಶಾನ್ಯ ಭಾಗವು 2000ರ ದಶಕದ ಆರಂಭದಿಂದಲೂ ಬೊಕೊ ಹರಮ್ ಎಂಬ ಜಿಹಾದಿ ಉಗ್ರಗಾಮಿ ಗುಂಪಿನ ದೌರ್ಜನ್ಯಕ್ಕೆ ಸಾಕ್ಷಿಯಾಗಿದೆ. ಮೊಹಮ್ಮದ್ ಯೂಸುಫ್ ಸ್ಥಾಪಿಸಿದ ಈ ಗುಂಪು ಪಾಶ್ಚಿಮಾತ್ಯ ಶಿಕ್ಷಣವನ್ನು ವಿರೋಧಿಸುತ್ತದೆ. 2014ರಲ್ಲಿ 200ಕ್ಕೂ ಹೆಚ್ಚು ಶಾಲಾ ಬಾಲಕಿಯರನ್ನು ಅಪಹರಿಸಿದ ಪ್ರಕರಣ ಜಗತ್ತನ್ನೇ ಬೆಚ್ಚಿಬೀಳಿಸಿತ್ತು. ಲಕ್ಷಾಂತರ ಜನರ ಸ್ಥಳಾಂತರ ಮತ್ತು ಸಾವಿರಾರು ಜನರ ಹತ್ಯೆಗೆ ಈ ಗುಂಪು ಕಾರಣವಾಗಿದೆ.

ಮತ್ತಷ್ಟು ಓದಿ: 16 ವರ್ಷಗಳಿಂದ ಭಾರತದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಪಾಕಿಸ್ತಾನದ ಎಲ್​ಇಟಿ ಉಗ್ರ ಸೆರೆ

ಪ್ರಾದೇಶಿಕ ಮಿಲಿಟರಿ ಕಾರ್ಯಾಚರಣೆಗಳಿಂದಾಗಿ ಬೊಕೊ ಹರಮ್ ದುರ್ಬಲಗೊಂಡಿದ್ದರೂ, ಈಗಲೂ ಸಣ್ಣ ಗುಂಪುಗಳಾಗಿ ವಿಭಜನೆಗೊಂಡು ದಾಳಿಗಳನ್ನು ಮುಂದುವರಿಸುತ್ತಿವೆ. ಉಗ್ರರನ್ನು ಕೊಲ್ಲಲು ಹೊರಟು ನಾಗರಿಕರನ್ನೇ ಬಲಿ ಪಡೆದ ಈ ಘಟನೆ ನೈಜೀರಿಯಾ ಸರ್ಕಾರಕ್ಕೆ ಭಾರಿ ಮುಜುಗರ ತಂದಿದೆ. ಸೇನೆಯ ಕಾರ್ಯವೈಖರಿಯ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗಳು ಕೇಳಿಬರುತ್ತಿವೆ. ಬಡತನ ಮತ್ತು ಭಯೋತ್ಪಾದನೆಯ ನಡುವೆ ಬದುಕುತ್ತಿದ್ದ ಜನರಿಗೆ ಈಗ ಮಾರುಕಟ್ಟೆಗೆ ಹೋಗಲೂ ಭಯ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಸೈನಿಕರ ವಿವೇಚನಾರಹಿತ ದಾಳಿಗಳು ಹೇಗೆ ಅಮಾಯಕರ ಬದುಕನ್ನು ಕಸಿದುಕೊಳ್ಳುತ್ತವೆ ಎಂಬುದಕ್ಕೆ ಈ ಘಟನೆ ಒಂದು ಕರಾಳ ಸಾಕ್ಷಿ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!

ಐಪಿಎಲ್​ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಡೆತ್ ಓವರ್​ಗಳ ವೇಳೆ ಅಂಪೈರ್ ಚೆಂಡು ಬದಲಿಸಿದ್ದರು. ಇತ್ತ ಅಂಪೈರ್​ ಚೆಂಡು ಬದಲಿಸುತ್ತಿದ್ದಂತೆ ಆರ್​ಸಿಬಿ ದಾಂಡಿಗ ಬಾಲ್​ ಅನ್ನು ಪರೀಕ್ಷಿಸಿದರು. ಇದಕ್ಕೆ ಅಂಪೈರ್ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ.

ಈ ಪಂದ್ಯದ 18ನೇ ಓವರ್‌ನಲ್ಲಿ ಹಾರ್ದಿಕ್ ಪಾಂಡ್ಯ ಎಸೆದ ಎಸೆತವನ್ನು ಟಿಮ್ ಡೇವಿಡ್ ಭರ್ಜರಿ ಸಿಕ್ಸರ್‌ಗೆ ಅಟ್ಟಿದ್ದರು. ಔಟ್‌ಫೀಲ್ಡ್‌ನಲ್ಲಿ ತೇವಾಂಶ ಇದ್ದ ಕಾರಣ ಚೆಂಡು ಒದ್ದೆಯಾಗಿತ್ತು. ನಿಯಮದಂತೆ ಅಂಪೈರ್‌ಗಳು ಹಳೆಯ ಚೆಂಡುಗಳ ಬಾಕ್ಸ್ ತರಿಸಿ ಹೊಸ ಚೆಂಡನ್ನು ಆಯ್ಕೆ ಮಾಡಿದರು.

ಆದರೆ, ಅಂಪೈರ್ ಆಯ್ಕೆ ಮಾಡಿದ ಚೆಂಡನ್ನು ಕೈಗೆತ್ತಿಕೊಂಡ ಟಿಮ್ ಡೇವಿಡ್, ಅದರ ಆಕಾರ ಮತ್ತು ತೂಕವನ್ನು ಪರೀಕ್ಷಿಸಲು ಶುರು ಮಾಡಿದರು. ಅಂಪೈರ್ ಸ್ವರೂಪಾನಂದ್ ಕಣ್ಣೂರ್ ಅವರು “ಚೆಂಡನ್ನು ಕೊಡಿ” ಎಂದು ಪದೇ ಪದೇ ಕೇಳಿದರೂ, ಡೇವಿಡ್ ಚೆಂಡಿನ ಆಕಾರದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಾ ಪರೀಕ್ಷಿಸುತ್ತಿದ್ದರು.

ಇದರಿಂದ ಕೋಪಗೊಂಡ ಅಂಪೈರ್‌ಗಳಾದ ಸ್ವರೂಪಾನಂದ್ ಮತ್ತು ವೀರೇಂದರ್ ಶರ್ಮಾ ಅವರು ಟಿಮ್ ಡೇವಿಡ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಅಲ್ಲದೆ ಡೇವಿಡ್‌ಗೆ ಮೈದಾನದ ಶಿಸ್ತಿನ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಈ ವೇಳೆ ಆರ್​ಸಿಬಿ ಆಟಗಾರ ಚೆಂಡನ್ನು ಹಿಂತಿರುಗಿಸಿದರು.

ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಟಿಮ್ ಡೇವಿಡ್​ಗೆ ಚೆಂಡಿನ ಬಗ್ಗೆ ಅನುಮಾನಗಳು ಇದ್ದ ಕಾರಣ ಪರೀಕ್ಷಿಸಿದ್ದಾರೆ. ಇದಾಗ್ಯೂ ಅಂಪೈರ್ ಅವರೊಂದಿಗೆ ಜಗಳಕ್ಕಿಳಿದಿರುವುದು ಏಕೆ? ಎಂದು ಆರ್​ಸಿಬಿ ಅಭಿಮಾನಿಗಳು ಪ್ರಶ್ನಿಸಿದ್ದಾರೆ.

ಕುತೂಹಲಕಾರಿ ವಿಷಯ ಎಂದರೆ, ಚೆಂಡು ಬದಲಾವಣೆಯ ಬಳಿಕ, ಅಂದರೆ ಕೊನೆಯ 2 ಓವರ್​ಗಳಲ್ಲಿ ಆರ್​ಸಿಬಿ ಕಲೆಹಾಕಿರುವುದು ಕೇವಲ 23 ರನ್​ಗಳು ಮಾತ್ರ. ಈ ಮೂಲಕ ಆರ್​ಸಿಬಿ 20 ತಂಡವು 20 ಓವರ್​ಗಳಲ್ಲಿ 240 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 222 ರನ್​ಗಳಿಸಿ 18 ರನ್​ಗಳಿಂದ ಸೋಲೊಪ್ಪಿಕೊಂಡರು.

 

Source link

ನೆಲಮಂಗಲ: ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಜಿಮ್ ಟ್ರೈನರ್ ಬಲಿ? ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣಬಿಟ್ಟ ಬಾಡಿ ಬಿಲ್ಡರ್!

ನೆಲಮಂಗಲ, ಏಪ್ರಿಲ್ 13: ಜಿಮ್‌ಗೆ ಬರುತ್ತಿದ್ದ ವಿವಾಹಿತ ಮಹಿಳೆಯೊಬ್ಬರ ಬ್ಲಾಕ್‌ಮೇಲ್ ಹಾಗೂ ಕಿರುಕುಳ ತಾಳಲಾರದೆ ಯುವ ಬಾಡಿ ಬಿಲ್ಡರ್ ದಿಲೀಪ್ (28) ಎಂಬುವವರು ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲದಲ್ಲಿ (Nelamangala) ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಹಿಳೆಗೆ ವಿಡಿಯೋ ಕಾಲ್ ಮಾಡಿ ಸಾವಿನ ನಿರ್ಧಾರವನ್ನು ತಿಳಿಸಿರುವುದು ಪ್ರಕರಣದ ಬಗ್ಗೆ ಹಲವು ಅನುಮಾನ ಮೂಡಿಸಿದೆ. ಇದರೊಂದಿಗೆ, ಇಬ್ಬರು ಮಕ್ಕಳ ತಾಯಿ ಜತೆ ಸಹವಾಸ ಮಾಡಿದ ತಪ್ಪಿಗೆ ಜಿಮ್ ಟ್ರೈನರ್ ಬಲಿಯಾದಂತಾಗಿದೆ.

ಜಿಮ್‌ನಲ್ಲಿ ಪರಿಚಯ, ಸಂಬಂಧ!

ನೆಲಮಂಗಲ ತಾಲೂಕಿನ ವಾಜರಹಳ್ಳಿಯ ನಿವಾಸಿಯಾಗಿದ್ದ ದಿಲೀಪ್ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದರು. ಇವರು ಕೆಲಸ ಮಾಡುತ್ತಿದ್ದ ಜಿಮ್‌ಗೆ ಫಿಟ್ನೆಸ್‌ಗಾಗಿ ಬರುತ್ತಿದ್ದ ಯೋಗಿತಾ ಎಂಬ ಮಹಿಳೆಯ ಪರಿಚಯವಾಗಿತ್ತು. ಈ ಪರಿಚಯ ಸಲುಗೆಗೆ ತಿರುಗಿ ಇಬ್ಬರ ನಡುವೆ ಸಂಬಂಧ ಏರ್ಪಟ್ಟಿತ್ತು ಎನ್ನಲಾಗಿದೆ. ಒಂದು ವರ್ಷದ ಹಿಂದೆಯೇ ಈ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಕರಣ ಸುಖಾಂತ್ಯಗೊಂಡಿತ್ತು. ಆದರೂ ಕೂಡ ಯೋಗಿತಾ, ದಿಲೀಪ್ ಬೆನ್ನು ಬಿಡದೆ ಬ್ಲಾಕ್‌ಮೇಲ್ ಮಾಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ.

ಮನೆ ಬರೆದುಕೊಡುವಂತೆ ಟಾರ್ಚರ್?

ಮೃತ ದಿಲೀಪ್ ತಂದೆ ರಮೇಶ್ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ‘ಯೋಗಿತಾ ನನ್ನ ಮಗನಿಗೆ ವಿಪರೀತ ಚಿತ್ರಹಿಂಸೆ ನೀಡುತ್ತಿದ್ದಳು. ದಿಲೀಪ್ ಹೆಸರಿನಲ್ಲಿದ್ದ ಮನೆಯನ್ನು ತನ್ನ ಮಗನ ಹೆಸರಿಗೆ ಬರೆದುಕೊಡುವಂತೆ ಟಾರ್ಚರ್ ನೀಡುತ್ತಿದ್ದಳು. ಇದರಿಂದ ಮನನೊಂದ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಅವರು ದೂರಿದ್ದಾರೆ.

ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ

ದಿಲೀಪ್ ನೇಣಿಗೆ ಶರಣಾಗುವ ಮುನ್ನ ಯೋಗಿತಾಳಿಗೆ ವಿಡಿಯೋ ಕಾಲ್ ಮಾಡಿದ್ದ ಎನ್ನಲಾಗಿದೆ. ಇದರಿಂದ ಗಾಬರಿಗೊಂಡ ಯೋಗಿತಾ, ದಿಲೀಪ್ ಸಹೋದರಿಗೆ ಇನ್‌ಸ್ಟಾಗ್ರಾಮ್ ಮೂಲಕ ವಿಷಯ ತಿಳಿಸಿದ್ದಾಳೆ. ತಕ್ಷಣ ಕುಟುಂಬಸ್ಥರು ರೂಮಿನ ಬಾಗಿಲು ಮುರಿದು ನೋಡಿದಾಗ ದಿಲೀಪ್ ನೇಣಿನ ಕುಣಿಕೆಯಲ್ಲಿ ಒದ್ದಾಡುತ್ತಿದ್ದರು. ತಕ್ಷಣ ಅವರನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಖಾಸಗಿ ಕಂಪನಿಯ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಿಲೀಪ್ ಮೊಬೈಲ್ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ವರದಿ: ಮಂಜುನಾಥ್, ಟಿವಿ9 ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುಂಬೈ vs ಆರ್​​ಸಿಬಿ ಮ್ಯಾಚ್ ನೋಡಲು ಬಂದು ಟ್ರೋಲ್ ಆದ ಕರೀನಾ ಕಪೂರ್

ಬಾಲಿವುಡ್ ನಟಿ ಕರೀನಾ ಕಪೂರ್ (Kareena Kapoor) ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರು ಏಪ್ರಿಲ್ 12ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ vs ಆರ್​​ಸಿಬಿ ಮ್ಯಾಚ್ ನೋಡಲು ಬಂದಿದ್ದರು. ಈ ವೇಳೆ ಅವರ ಮಕ್ಕಳು ಕೂಡ ಇದ್ದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವೇಳೆ ಕರೀನಾ ಕಪೂರ್ ಅವರನ್ನು ಸಾಕಷ್ಟು ಟ್ರೋಲ್ ಮಾಡಲಾಗಿದೆ.

ಮುಂಬೈನಲ್ಲಿ ಬಹುತೇಕ ಬಾಲಿವುಡ್ ಸೆಲೆಬ್ರಿಟಿಗಳು ವಾಸವಾಗಿದ್ದಾರೆ. ಅಲ್ಲಿ ಪಂದ್ಯ ನಡೆದರೆ ಸಾಕಷ್ಟು ಸೆಲೆಬ್ರಿಟಿಗಳು ಭಾಗಿ ಆಗುತ್ತಾರೆ. ಭಾನುವಾರದ ಪಂದ್ಯದಲ್ಲೂ ಚಿತ್ರರಂಗದ ಅನೇಕ ಗಣ್ಯರು ಇದ್ದರು. ನಟಿ ಪೂಜಾ ಹೆಗ್ಡೆ, ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಮ್ಯಾಚ್ ವೀಕ್ಷಣೆಗೆ ಬಂದಿದ್ದರು. ಅದೇ ರೀತಿ ಕರೀನಾ ಕೂಡ ತಮ್ಮ ಮಕ್ಕಳ ಜೊತೆ ಆಗಮಿಸಿದ್ದರು.

ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಕರೀನಾ ಅವರು ಮೊಬೈಲ್ ಬಳಕೆ ಮಾಡುತ್ತಿದ್ದರು. ಅತ್ತ ಮಕ್ಕಳು ಜ್ಯೂಸ್ ಬಾಟಲಿಗಳನ್ನು ತಂದುಕೊಂಡು ಕುಡಿಯುತ್ತಿದ್ದರು. ಈ ಬಗ್ಗೆ ಕರೀನಾ ಕಪೂರ್​​ಗೆ ಗಮನವೇ ಇರಲಿಲ್ಲ. ಅವರ ಗಮನ ಸಂಪೂರ್ಣವಾಗಿ ಮೊಬೈಲ್ ಮೇಲೆ ಇತ್ತು. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ಧುರಂಧರ್ ರಣವೀರ್ ಸಿಂಗ್ ಸಿನಿಮಾ ಎಂದು ಹೇಳಲು ಸಾಧ್ಯವಿಲ್ಲ; ಕರೀನಾ ಕಪೂರ್

ಮೈದಾನದಲ್ಲಿ ಪಂದ್ಯ ನೋಡಬೇಕು ಎಂಬುದು ಅನೇಕರ ಆಸೆ ಆಗಿರುತ್ತದೆ. ಕರೀನಾಗೆ ಅಂತಹ ಅವಕಾಶ ಸಿಕ್ಕಿದೆ. ಆದರೂ ಅವರು ಮುಂಬೈ ಇಂಡಿಯನ್ಸ್ ತಂಡಕ್ಕೆ ಚಿಯರ್ಸ್ ಮಾಡೋದು ಬಿಟ್ಟು ಮೊಬೈಲ್ ನೋಡುತ್ತಾ ಕುಳಿತಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ. ಇನ್ನು ಮೈದಾನದಲ್ಲಿ ಇರುವಾಗ ಕರೀನಾ ಮುಂಬೈ ಇಂಡಿಯನ್ಸ್ ಜರ್ಸಿ ಧರಿಸಿದ್ದರು. ಹೊರ ಹೋಗುವಾಗ ಅವರು ಶರ್ಟ್ ಬದಲಿಸಿದ್ದರು. ಇದು ಚರ್ಚೆಗೆ ಕಾರಣ ಆಗಿದೆ.ಅವಮಾನ ತಪ್ಪಿಸಿಕೊಳ್ಳಲು ಹೀಗೆ ಮಾಡಿರಬಹುದು ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಹಾಪುರದಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ, ಆರು ಮಂದಿ ಸಾವು, ಹಲವರ ಸ್ಥಿತಿ ಗಂಭೀರ

ಲಕ್ನೋ, ಏಪ್ರಿಲ್ 13: ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಲ್ಲಿ ಸಂಭವಿಸಿದ ಎರಡು ಭೀಕರ ರಸ್ತೆ ಅಪಘಾತ(Accident)ಗಳು ಹಲವು ಕುಟುಂಬಗಳಲ್ಲಿ ಕತ್ತಲನ್ನು ತುಂಬಿವೆ. ಮದುವೆಯ ಸಂಭ್ರಮ ಮುಗಿಸಿ ಬರುತ್ತಿದ್ದವರು ಸಾವಿನ ಮನೆ ಸೇರಿದ್ದರೆ, ಇನ್ನೊಂದೆಡೆ ಸರಣಿ ಅಪಘಾತಕ್ಕೆ ಅಮಾಯಕ ಜೀವಗಳು ಬಲಿಯಾಗಿವೆ. ಉತ್ತರ ಪ್ರದೇಶದ ಹಾಪುರದಲ್ಲಿ ಮದುವೆ ಬಸ್ ಅಪಘಾತಕ್ಕೀಡಾದರೆ, ಬಿಹಾರದ ಕಟಿಹಾರ್‌ನಲ್ಲಿ ವಾಹನಗಳ ನಡುವಿನ ಸರಣಿ ಡಿಕ್ಕಿ ಹಲವರ ಪ್ರಾಣಪಕ್ಷಿ ಹಾರಿಸಿದೆ.

ಹಾಪುರ: ಮದುವೆ ಮೆರವಣಿಗೆ ಮುಗಿಸಿ ಬರುವಾಗ ಮೃತ್ಯುವಿನ ಅಟ್ಟಹಾಸ
ಉತ್ತರ ಪ್ರದೇಶದ ಹಾಪುರದ ಧೌಲಾನಾ-ಗುಲಾವತಿ ರಸ್ತೆಯಲ್ಲಿ ಮದುವೆ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. 12 ಮಂದಿ ಪ್ರಯಾಣಿಕರಿದ್ದ ಬಸ್ ವೇಗವಾಗಿ ಬಂದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಘಟನೆಯಲ್ಲಿ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ಹಾಪುರ್ ಎಸ್ಪಿ ಜ್ಞಾನಂಜಯ್ ಸಿಂಗ್ ಮತ್ತು ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿತು. ಗಾಯಗೊಂಡ 7 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬಸ್ಥರು ಸ್ಥಳಕ್ಕೆ ಆಗಮಿಸಿದ್ದು, ಕಾನೂನು ಕ್ರಮ ಜಾರಿಯಲ್ಲಿದೆ. ಮೃತರ ಪೈಕಿ ಒಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ, ಅವರು ಬಸ್ ಚಾಲಕನಿರಬಹುದು ಎಂದು ಎಸ್ಪಿ ತಿಳಿಸಿದ್ದಾರೆ.

ಬಿಹಾರ ಅಪಘಾತ
ಬಿಹಾರದ ಕಟಿಹಾರ್ ಜಿಲ್ಲೆಯ ಕೋಧಾ ಬ್ಲಾಕ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 31ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಮತ್ತೊಂದು ಘಟನೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಬಸ್, ಟ್ರಕ್ ಮತ್ತು ಪಿಕಪ್ ವ್ಯಾನ್ ನಡುವೆ ಸಂಭವಿಸಿದ ಸರಣಿ ಡಿಕ್ಕಿಯಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಆರಂಭದಲ್ಲಿ ಸಾವಿನ ಸಂಖ್ಯೆ ಕಡಿಮೆಯಿದ್ದರೂ, ಆಸ್ಪತ್ರೆಗೆ ದಾಖಲಾದ ನಂತರ ಆರು ಜನರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಎಸ್ಪಿ ಶಿಖರ್ ಚೌಧರಿ ದೃಢಪಡಿಸಿದ್ದಾರೆ.

ಮತ್ತಷ್ಟು ಓದಿ: ಅಪ್ಪ-ಮಗಳಿಗೆ ಯಮನಾಗಿ ಬಂದ ಸಿಮೆಂಟ್ ಮಿಕ್ಸರ್ ಟ್ಯಾಂಕರ್: ಕಲಬುರಗಿ ರಿಂಗ್ ರಸ್ತೆಯಲ್ಲಿ ಭೀಕರ ಅಪಘಾತ

ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದೇ ಈ ಭೀಕರ ದುರಂತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಪಿಕಪ್ ವ್ಯಾನ್‌ನಲ್ಲಿದ್ದ ಪ್ರಯಾಣಿಕರು ಅತಿ ಹೆಚ್ಚು ಹಾನಿಗೊಳಗಾಗಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಆರ್ಥಿಕ ನೆರವು ಘೋಷಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version