ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ: ಔಷಧೀಯ ಗುಣ, ಪೌಷ್ಟಿಕಾಂಶಗಳ ಕಣಜವೇ ಇದರಲ್ಲಿದೆಯಂತೆ! – Kannada News | Endangered Native Rice Varieties Mugada Siri and Mugada Sugandha Face Extinction in Karnataka

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ

ಧಾರವಾಡ, ಜನವರಿ 12: ಇಡೀ ಕಿತ್ತೂರು ಸೀಮೆಯನ್ನೇ ಘಮದಲ್ಲಿ ಮುಳುಗಿಸುತ್ತಿದ್ದ ಧಾರವಾಡ (Dharawad) ಸಮೀಪದ ಮುಗದ ಗ್ರಾಮದ ಮುಗದ ಸಿರಿ ಮತ್ತು ಮುಗದ ಸುಗಂಧ ಎಂಬ ಎರಡು ದೇಶಿ ಭತ್ತದ ತಳಿಗಳು ಇದೀಗ ಕಾಲನ ಗರ್ಭ ಸೇರುತ್ತಿವೆ. ಈ ತಳಿಗಳೀಗ ಕೇವಲ ಕೃಷಿ ಸಂಶೋಧನಾ ಕೇಂದ್ರದ ಪ್ಯಾಕೇಟಿನಲ್ಲಿ ನೋಡಲು ಉಳಿದಿವೆ. ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಗೋವಾ ಸೇರಿದಂತೆ ಕೊಂಕಣ ಭಾಗದ ಜನರ ಪ್ರಧಾನ ಆಹಾರವೇ ಆಗಿದ್ದ ದೇಶಿ ಭತ್ತದ ತಳಿಗಳ ಪೈಕಿ ಇವು ಮುಂಚೂಣಿಯಲ್ಲಿದ್ದವು. ಮುಗದ ಸಿರಿ ಮತ್ತು ಸುಗಂಧ ಭತ್ತ ಕಳೆದ ಹತ್ತು ವರ್ಷದಲ್ಲಿ ಶೇ 70 ಬಿತ್ತನೆ ಪ್ರದೇಶವನ್ನೇ ಕಳೆದುಕೊಂಡಾಗಿದೆ. ಉಚಿತ ಅಕ್ಕಿ ಹಂಚಿಕೆಯ ಪ್ರಭಾವದಿಂದಾಗಿ ದೇಶಿ ಅಕ್ಕಿಯ ಬೆಲೆಯೇ ಪ್ರಪಾತಕ್ಕೆ ಹೋಗಿದೆ. ಅದರಲ್ಲೂ, ಈ ಭಾಗದ ವಿಶೇಷ ತಳಿಯಾಗಿದ್ದ ಮುಗದ ಸಿರಿ ಮತ್ತು ಮುಗದ ಸುಗಂಧ ಅನ್ನೋ ತಳಿಗಳು ಇದೀಗ ತಮ್ಮ ಅಸ್ತಿತ್ವವನ್ನೇ ಕಳೆದುಕೊಂಡಿವೆ. ಮುಂದಿನ ದಿನಗಳಲ್ಲಿ ಈ ತಳಿಗಳು ಸಂಪೂರ್ಣವಾಗಿ ನಶಿಸಿ ಹೋಗೋ ಸ್ಥಿತಿಗೆ ಬಂದಿವೆ.

ಪೌಷ್ಟಿಕಾಂಶಗಳ ಕಣಜವೇ ಆಗಿದ್ದ ಮುಗದ ಸಿರಿ, ಸುಗಂಧ

ಪೌಷ್ಟಿಕಾಂಶಗಳ ಕಣಜವೇ ಆಗಿರುವ ಮುಗದ ಸಿರಿ, ಸುಗಂಧ ಭತ್ತದ ಅಕ್ಕಿ ಉಣ್ಣುವ ಮನುಷ್ಯರಷ್ಟೇ ಅಲ್ಲ, ಜಾನುವಾರುಗಳು, ಪಶುಪಕ್ಷಿಗಳು ಕೂಡ ಸದೃಢವಾಗಿ ಬಿಡುತ್ತಿದ್ದವು. ಅಷ್ಟೊಂದು ಫೈಬರ್ ‌ಸೇರಿ ಇತರ ಖನಿಜಾಂಶಗಳಿರುವ ಈ ಅಕ್ಕಿ ಒಂದು ಕಾಲದಲ್ಲಿ ಬಿರಿಯಾನಿಗೆ ಬಳಕೆಯಾಗುತ್ತಿತ್ತು. ಎಷ್ಟೋ ಸಲ ಮುಂಬೈ, ಗೋವಾ ಮತ್ತು ಹೈದರಾಬಾದ್​ನಿಂದ ಬರುವ ವ್ಯಾಪಾರಿಗಳು ಈ ಭತ್ತ ಖರೀದಿಸುತ್ತಿದ್ದರು. ಆದರೆ ಇದೀಗ ರೈತರು ಬೇರೆ ಬೇರೆ ಬೆಳೆಗಳ ಬೆನ್ನು ಹತ್ತಿ ಈ ತಳಿಗಳನ್ನು ನಿರ್ಲಕ್ಷಿಸಿದ್ದಾರೆ.

ಭತ್ತದ ತಳಿ ನಶಿಸಲು ಸಕ್ಕರೆ ಕಾರ್ಖಾನೆಗಳೇ ಕಾರಣ!

ಈ ಪ್ರದೇಶದಲ್ಲಿ ತಲೆ ಎತ್ತಿರುವ ಸಕ್ಕರೆ ಕಾರ್ಖಾನೆಗಳೇ ಈ ತಳಿ ನಶಿಸಿ ಹೋಗಲು ಕಾರಣವಾಗಿವೆ. ದೇಶಿ ಭತ್ತದ ತಳಿಗಳನ್ನು ಬೆಳೆಯುತ್ತಿದ್ದ ಭೂಮಿಯಲ್ಲಿ ಇದೀಗ ಕಬ್ಬಿನ ಬೆಳೆ ಹೆಚ್ಚಾಗಿದೆ. ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಮತ್ತು ಕಳೆನಾಶಕಗಳ ಬಳಕೆ ಹೆಚ್ಚುತ್ತಿದ್ದು ಪರಿಸರ ಸ್ನೇಹಿ ಭತ್ತದ ನಾಡೆಲ್ಲವೂ ವಿಪರೀತ ಭೂ ಮತ್ತು ಜಲಮಾಲಿನ್ಯದ ಬೀಡಾಗುತ್ತಿದೆ. ಒಂದು ದಶಕದಲ್ಲಿ 50 ಸಾವಿರ ಹೆಕ್ಟೇ‌ರ್​ನಷ್ಟು ಪ್ರದೇಶದಲ್ಲಿ ಭತ್ತದ ಬದಲು ಕಬ್ಬು ಬೆಳೆ ಆವರಿಸಿಕೊಂಡಿದೆ.

ಭತ್ತದ ತಳಿ ನಾಶಕ್ಕೆ ಕಾರಣವೇನು?

ದೇಶಿ ಭತ್ತಕ್ಕೆ ಮಾರುಕಟ್ಟೆ ಕುಸಿತ, ಉಚಿತವಾಗಿ ಅಕ್ಕಿ ವಿತರಣೆ ಪರಿಣಾಮ, ಕಬ್ಬಿಗೆ ಮಾರು ಹೋದ ರೈತರು, ಕೂಲಿಯಾಳುಗಳ ಕೊರತೆ, ಆಧುನಿಕ ಜೀವನ ಶೈಲಿಯ ಫಾಸ್ಟ್ ಫುಡ್ ಸಂಸ್ಕೃತಿಗೆ ಮಾರುಹೋದ ಪರಿಣಾಮವೇ ಈ ತಳಿಗಳು ನಶಿಸಿ ಹೋಗಲು ಕಾರಣವಾಗಿದೆ ಎಂದು ಅಭುಪ್ರಾಯಪಟ್ಟಿದ್ದಾರೆ ಕೃಷಿ ತಜ್ಞ ಡಾ. ಪ್ರಕಾಶ ಭಟ್.

ಇದನ್ನೂ ಓದಿ: ಬೀದರ್​​ ರೈತನ ಕೈಹಿಡಿದ ಹಳದಿ ಸುಂದರಿ: ವರ್ಷಕ್ಕೆ ಲಕ್ಷಾಂತರ ರೂ ಆದಾಯ, ಆಧುನಿಕ ಯುಗದಲ್ಲಿ ಕೃಷಿ ಕ್ರಾಂತಿ

ಈ ತಳಿಗಳೊಂದಿಗೆ ಕಿತ್ತೂರು ಸೀಮೆಯಲ್ಲಿ 200ಕ್ಕೂ ಅಧಿಕ ತಳಿಯ ದೇಶಿ ಭತ್ತಗಳನ್ನು ಜನ ಸಾಂಪ್ರದಾಯಿಕ ಕೃಷಿ ವಿಧಾನದ ಮೂಲಕ ಬೆಳೆಯುತ್ತಿದ್ದರು. ಈ ಎಲ್ಲ ತಳಿಗಳು ಮಳೆಯಾಶ್ರಿತ ಮತ್ತು ಬಿತ್ತನೆ ಪದ್ಧತಿಯಲ್ಲಿ ಬೆಳೆಯುವಂತಹದ್ದಾಗಿವೆ. ಕಾಗಸಾಳಿ, ಅಂತರಸಾಳಿ, ಕುಂಕುಮಸಾಳಿ, ಕೊಂಕಣಸಾಳಿ, ದೊಡಗ್ಯಾ, ಬಂಗಾರಕಡ್ಡಿ, ಗಂಧಸಾಳಿ, ಮುಗದಸಿರಿ, ಮನಸೂರ ಸಾಳಿ ಹೀಗೆ ದೇಶಿ ತಳಿಯ ಮೂಲ ಭತ್ತದ ತಳಿಗಳೇ ಇದೀಗ ಕಣ್ಮರೆಯಾಗುತ್ತಿವೆ. ಒಟ್ಟಿನಲ್ಲಿ ಅದ್ಭುತವಾಗಿರುವ ತಳಿಗಳು ಆಧುಕಿನ ಕೃಷಿ ಪದ್ಧತಿಯ ಹೊಡೆತಕ್ಕೆ ನಲುಗಿ, ಇದೀಗ ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿರುವುದು ವಿಪರ್ಯಾಸವೇ ಸರಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್ ಬಾಸ್ ಸೂರಜ್​​ಗೆ ಸೀರಿಯಲ್ ಆಫರ್; ‘ಪವಿತ್ರ ಬಂಧನ’ದ ಕಥೆ ಏನು? – Kannada News | Bigg Boss Suraj Lands Lead Role in ‘Pavitra Bandhana’ Serial

ಬಿಗ್ ಬಾಸ್​ ಅಲ್ಲಿ ಚಾಕೋಲೇಟ್ ಹೀರೋ ಆಗಿ ಮಿಂಚಿದವರು ಸೂರಜ್. ಅವರು ವೃತ್ತಿಯಲ್ಲಿ ಈ ಮೊದಲು ಬಾಣಸಿಗ ಆಗಿದ್ದರು. ಆ ಬಳಿಕ ಅವರು ಮಾಡೆಲಿಂಗ್ ಆರಂಭಿಸಿದರು. ನಂತರ ಬಿಗ್ ಬಾಸ್ ಆಫರ್ ಕೂಡ ಪಡೆದರು. ಇಷ್ಟೆಲ್ಲ ಸಾಧನೆ ಮಾಡಿದ ಸೂರಜ್ ಅವರಿಗೆ ಈಗ ಸೀರಿಯಲ್ ಆಫರ್ ಬಂದಿದೆ. ‘ಪವಿತ್ರ ಬಂಧನ’ ಅನ್ನೋದು ಧಾರಾವಾಹಿಯ ಹೆಸರು. ಶೀಘ್ರವೇ ಧಾರಾವಾಹಿ ಪ್ರಸಾರ ಕಾಣಲಿದೆ.

ಸೂರಜ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ಹೈಲೈಟ್ ಆದರು. ಅವರು ಹೀರೋ ಎಂದೇ ಕೆಲವರು ಭಾವಿಸಿದ್ದು ಇದೆ. ಆದರೆ, ಅವರ ಕ್ಷೇತ್ರವೇ ಬೇರೆ. ಬಿಗ್ ಬಾಸ್​ಗೆ ಸೇರುವಾಗ ಅವರ ಹಿಂಬಾಲಕರ ಸಂಖ್ಯೆ ಕೇವಲ 18 ಸಾವಿರ ಇತ್ತು. ಈಗ ಮೂರುವರೆ ಲಕ್ಷಕ್ಕೆ ಏರಿಕೆ ಆಗಿದೆ. ಈ ಜನಪ್ರಿಯತೆಯಿಂದಲೇ ಅವರಿಗೆ ಸೀರಿಯಲ್ ಆಫರ್ ಸಿಕ್ಕಿದೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್ ಸಿಂಗ್

‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ಸೂರಜ್ ಅವರು ದೇವದತ್ ದೇಶ್​ಮುಖ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ತಿಲಕ್ ಗೌಡ ಪಾತ್ರದಲ್ಲಿ ಯಶಸ್ ಗೌಡ ಕಾಣಿಸಿಕೊಂಡಿದ್ದಾರೆ. ಅಮೂಲ್ಯ ಕಥೆಯ ನಾಯಕಿ. ದೇವದತ್ ಹಾಗೂ ತಿಲಕ್ ಅಣ್ಣ-ತಮ್ಮ. ಇಬ್ಬರೂ ತುಂಬಾನೇ ಕ್ಲೋಸ್. ತಿಲಕ್ ಹಾಗೂ ಕಥಾ ನಾಯಕಿ ಪವಿತ್ರಾ ಪ್ರೀತಿಸುತ್ತಿರುತ್ತಾರೆ. ಆದರೆ, ಆಕೆ ದೇವದತ್​​ನ ಮದುವೆ ಆಗೋ ಪರಿಸ್ಥಿತಿ ಬರುತ್ತದೆ. ಇಬ್ಬರಿಗೂ ಒಬ್ಬರನ್ನೊಬ್ಬರನ್ನು ಕಂಡರೇ ಆಗೋದಿಲ್ಲ. ಆದಾರೂ ಮದುವೆ ಆಗುತ್ತಾರೆ. ಇದು ಧಾರಾವಾಹಿಯ ಕಥೆ.

ಸೂರಜ್ ಅವರಿಗೆ ಧಾರಾವಾಹಿ ಆಫರ್ ಸಿಕ್ಕಿರೋದಕ್ಕೆ ಅವರು ಖುಷಿಪಟ್ಟಿದ್ದಾರೆ. ಬಿಗ್ ಬಾಸ್ ಬಳಿಕ ಇಷ್ಟು ದೊಡ್ಡ ಆಫರ್ ಕೈ ಸೇರಿದೆ. ಧಾರಾವಾಹಿಯಲ್ಲಿ ಅವರು ಯಾವ ರೀತಿಯಲ್ಲಿ ನಟಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಬಿಗ್ ಬಾಸ್ ಅನೇಕರ ಬದುಕನ್ನು ಬದಲಾಯಿಸುತ್ತದೆ. ಸೂರಜ್ ಬದುಕನ್ನು ಕೂಡ ಈ ರಿಯಾಲಿಟಿ ಶೋ ಬದಲಿಸಿದೆ. ವೈಲ್ಡ್ ಕಾರ್ಡ್ ಮೂಲಕ ಅವರು ಎಂಟ್ರಿ ಕೊಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:35 am, Mon, 12 January 26

Source link

Video: ಜಮ್ಮು-ಕಾಶ್ಮೀರದ ಗಡಿಯಲ್ಲಿ ಐದು ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಶ್ರೀನಗರ, ಜನವರಿ 12: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಹಾಗೂ ನಿಯಂತ್ರಣ ರೇಖೆಯ ಬಳಿ ಡ್ರೋನ್ ಚಟುವಟಿಕೆ ಹೆಚ್ಚುತ್ತಿದೆ. ಗಣರಾಜ್ಯೋತ್ಸವಕ್ಕೂ ಮುನ್ನ ಪಾಕಿಸ್ತಾನ ಭಾರತದ ಗಡಿಗಳ ಬಳಿ ಡ್ರೋನ್ ಚಟುವಟಿಕೆಯನ್ನು ಹೆಚ್ಚಿಸಿದ್ದು, ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರವಹಿಸಿವೆ. ಭದ್ರತಾ ಸಂಸ್ಥೆಗಳ ಪ್ರಕಾರ, ಅಂತಾರಾಷ್ಟ್ರೀಯ ಗಡಿ ಮತ್ತು ಎಲ್‌ಒಸಿಯ ವಿವಿಧ ಪ್ರದೇಶಗಳಲ್ಲಿ ಒಟ್ಟು ಐದು ಡ್ರೋನ್‌ಗಳು ಪತ್ತೆಯಾಗಿವೆ. ಪೂಂಚ್, ನೌಶೇರಾ, ಧರ್ಮಶಾಲಾ, ರಾಮಗಢ ಮತ್ತು ಪರಾಖ್ ಪ್ರದೇಶಗಳಲ್ಲಿ ಡ್ರೋನ್ ಕಾಣಿಸಿಕೊಂಡ ವರದಿಯಾಗಿದೆ.

ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನಿ ಡ್ರೋನ್ ಪತ್ತೆಯಾಗಿದೆ. ಭಾರತೀಯ ಸೇನೆಯು ತಕ್ಷಣ ಪ್ರತಿಕ್ರಿಯಿಸಿ ಅದರ ಮೇಲೆ ಗುಂಡು ಹಾರಿಸಿತು. ಎಲ್ಲಾ ಡ್ರೋನ್‌ಗಳು ಪಾಕಿಸ್ತಾನದಿಂದ ಬಂದು ಕೆಲವು ನಿಮಿಷಗಳ ಕಾಲ ಭಾರತದ ಭೂಪ್ರದೇಶದ ಮೇಲೆ ಸುಳಿದಾಡಿದ ನಂತರ ಹಿಂತಿರುಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ, ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯ ಬಳಿಯ ಘಗ್ವಾಲ್‌ನ ಪಲೋರಾ ಗ್ರಾಮದಲ್ಲಿ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬೀಳಿಸಲಾದ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಬೆಂಗಳೂರು, ಜನವರಿ 12: ಪ್ರತಿದಿನವೂ ತನ್ನದೇ ಆದ ವಿಶೇಷತೆಯನ್ನು ಹೊಂದಿರುತ್ತದೆ. ಶುಕ್ರವಾರವನ್ನು ವಿಶೇಷವಾಗಿ ಮಹಾಲಕ್ಷ್ಮಿಗೆ ಮೀಸಲಾದ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಮಹಾಲಕ್ಷ್ಮಿಯ ಅನುಗ್ರಹ ಪಡೆಯಲು ಹಲವು ಧಾರ್ಮಿಕ ಆಚರಣೆಗಳನ್ನು ಪಾಲಿಸಲಾಗುತ್ತದೆ. ಶುಕ್ರವಾರದಂದು ಹುಳಿ ಪದಾರ್ಥಗಳನ್ನು ಸೇವಿಸುವುದರಿಂದ ದೂರವಿರುವುದು ಹಿಂದೂ ಸಂಪ್ರದಾಯದಲ್ಲಿ ಮಹತ್ವ ಪಡೆದಿದೆ.

ಮಹಾಲಕ್ಷ್ಮಿ ಸಂಪತ್ತು ಮತ್ತು ಸಮೃದ್ಧಿಯ ಅಧಿದೇವತೆ. ಶುಕ್ರವಾರದಂದು ಈ ದೇವಿಗೆ ಸಿಹಿ ಪದಾರ್ಥಗಳನ್ನು ನೈವೇದ್ಯವಾಗಿ ಅರ್ಪಿಸುವುದು ಅತ್ಯಂತ ಶುಭಕರ. ಹುಣಸೆಹಣ್ಣು, ನಿಂಬೆಹಣ್ಣು, ಉಪ್ಪಿನಕಾಯಿ, ವಿನೆಗರ್, ಕಿತ್ತಳೆ ಹಣ್ಣಿನಂತಹ ಹುಳಿ ಪದಾರ್ಥಗಳನ್ನು ಸೇವಿಸದೆ ಪೂಜೆ ಮಾಡಿದಾಗ ಮಹಾಲಕ್ಷ್ಮಿ ಶೀಘ್ರವಾಗಿ ಒಲಿಯುತ್ತಾಳೆ ಎಂದು ನಂಬಲಾಗಿದೆ. ಇದು ಧನಾತ್ಮಕ ಶಕ್ತಿಗಳನ್ನು ಆಕರ್ಷಿಸಲು ಮತ್ತು ದೈವಿಕ ಕೃಪೆಗೆ ಪಾತ್ರರಾಗಲು ಸಹಕಾರಿ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಹುಳಿ ಪದಾರ್ಥಗಳಿಂದ ದೂರವಿರುವುದು ಉತ್ತಮ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

Video: ಪತಿಯ ಅಂತ್ಯಕ್ರಿಯೆಗೆ ಇನ್ನೂ ಕಣ್ಣು ಬಿಡದ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ – Kannada News | Life and Loss in One Day: wife Attends Soldier’s Funeral on a Stretcher in Satara

ಸತಾರ, ಜನವರಿ 12: ಇಂಥಾ ಸ್ಥಿತಿ ಯಾರಿಗೂ ಬೇಡ, ಇಬ್ಬರೂ ತಮ್ಮ ಮುದ್ದು ಮಗುವಿನ ಬರುವಿಕೆಗಾಗಿ ಕಾತುರದಿಂದ ಕಾದಿದ್ದರು. ಇನ್ನೇನು ಹೆರಿಗೆ ದಿನವೂ ಬಂದೇ ಬಟ್ಟಿತ್ತು, ಅಲ್ಲಿ ಪತ್ನಿ ಹೆರಿಗೆ ನೋವಿನಿಂದ ಬಳಲುತ್ತಿದ್ದರೆ ಇತ್ತ ಪತಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಅದಾದ ಬಳಿಕ ಸುಸೂತ್ರವಾಗಿ ಹೆರಿಗೆ ಏನೋ ಆಯಿತು ಆದರೆ ಮಗುವನ್ನು ನೋಡಲು ತಂದೆಯೇ ಇರಲಿಲ್ಲ. ಇದು ಸೈನಿಕನ ಕುಟುಂಬದ ಮನಕಲಕುವ ಕತೆ.

ಪಿತೃತ್ವ ರಜೆ ಪಡೆದು ಊರಿಗೆ ಬಂದಿದ್ದ ಸೈನಿಕ ಪ್ರಮೋದ್ ಪರಶುರಾಮ್, ಬೈಕಿನಲ್ಲಿ ತೆರಳುತ್ತಿರುವಾಗ ಪಿಕಪ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸತಾರದಲ್ಲಿ ನಡೆದಿದೆ. ಜಾಧವ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ಮರಣದ ಕೆಲವು ಗಂಟೆಗಳ ನಂತರ, ಅವರ ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಭಾನುವಾರ ಯೋಧನ ಮೃತದೇಹವನ್ನು ಮನೆಗೆ ತರಲಾಗುತ್ತಿದ್ದಂತೆ, ಅವರ ಪತ್ನಿಯನ್ನು ಆಸ್ಪತ್ರೆಯಿಂದ ಸ್ಟ್ರೆಚರ್‌ನಲ್ಲಿ ಪತಿಯ ಅಂತ್ಯಕ್ರಿಯೆಗಾಗಿ ಕರೆತರಲಾಯಿತು.

ಹೆರಿಗೆ ನೋವೇ ಇನ್ನೂ ಕಡಿಮೆಯಾಗದಿರುವಾಗ ಪತಿಯ ಅಗಲುವಿಕೆಯು ಮತ್ತಷ್ಟು ನೋವುಂಟು ಮಾಡಿತ್ತು. ಪತ್ನಿ ತನ್ನ ಪತಿಯ ಮೃತದೇಹದ ಪಕ್ಕದಲ್ಲಿ ಅಳುತ್ತಿರುವು ಎಲ್ಲರ ಕಣ್ಣಲ್ಲಿ ಕಣ್ಣೀರು ಜಿನುಗುವಂತೆ ಮಾಡಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕಲೆಕ್ಷನ್ ವಿಷಯದಲ್ಲಿ ಎಡವಿದ ‘ರಾಜಾಸಾಬ್’; ಪ್ರಭಾಸ್ ಫ್ಯಾನ್ಸ್​ಗೆ ಶಾಕ್ – Kannada News | The Raja Saab Box Office Collection: Prabhas Film Collection Drops Sharply After Strong Opening

ಭಾನುವಾರದ ಕಲೆಕ್ಷನ್ ವಿಷಯದಲ್ಲಿ ‘ರಾಜಾಸಾಬ್’ ಸಿನಿಮಾ (Raja Saab) ಎಡವಿದೆ. ಮೊದಲ ದಿನ ಅದ್ದೂರಿ ಕಲೆಕ್ಷನ್ ಮಾಡಿದ್ದ ಈ ಚಿತ್ರ ನಂತರದ ದಿನಗಳಲ್ಲಿ ಕುಸಿತದ ಹಾಡಿ ಹಿಡಿಯಿತು. ಮೊದಲ ದಿನದ ದುಬಾರಿ ಟಿಕೆಟ್ ದರ ಚಿತ್ರಕ್ಕೆ ಸಹಕಾರಿ ಆಗಿದೆ. ಆದರೆ, ಸಿನಿಮಾ ನೋಡಿದ ಪ್ರೇಕ್ಷಕ ಖುಷಿಯಾಗಿಲ್ಲ. ಈ ಕಾರಣದಿಂದಲೇ ಸಿನಿಮಾದ ಗಳಿಕೆ ಕುಸಿತದ ಹಾದಿ ಹಿಡಿದಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟು ಎಂಬ ಬಗ್ಗೆ ಇಲ್ಲಿದೆ ವಿವರ.

‘ರಾಜಾಸಾಬ್’ ಸಿನಿಮಾ ಜನವರಿ 9ರಂದು ರಿಲೀಸ್ ಆಯಿತು. ಈ ಸಿನಿಮಾ ಹಾರರ್ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿತ್ತು. ಇದೇ ಮೊದಲ ಬಾರಿಗೆ ಅವರು ಈ ಶೈಲಿಯನ್ನು ಪ್ರಯತ್ನಿಸಿದ್ದರು. ಈ ಸಿನಿಮಾ ಜನರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಈಗ ಸಿನಿಮಾ ಭಾನುವಾರ ಕೇವಲ 20 ಕೋಟಿ ರೂಪಾಯಿ ಗಳಿಕೆ ಮಾಡಿದೆ.

‘ರಾಜಾಸಾಬ್’ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು 53 ಕೋಟಿ ರೂಪಾಯಿ. ಇದಕ್ಕೆ ಕಾರಣ ದುಬಾರಿ ಟಿಕೆಟ್ ದರ. ತೆಲುಗಿನಿಂದ 47 ಕೋಟಿ ರೂಪಾಯಿ ಆದರೆ, ಹಿಂದಿಯಿಂದ 6 ಕೋಟಿ ರೂಪಾಯಿ ಹರಿದು ಬಂದಿತ್ತು. ಇದಕ್ಕೆ ಕಾರಣವೂ ಇದೆ. ಹಿಂದಿಯಲ್ಲಿ ಪ್ರಭಾಸ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಸಿನಿಮಾನ ನೋಡಿದ್ದಾರೆ.

ಭಾನುವಾರ ಮಾತ್ರ ಥಿಯೇಟರ್​​ಗೆ ಹೋಗುವ ಪ್ರೇಕ್ಷಕರ ಸಂಖ್ಯೆ ಕಡಿಮೆ ಆಗಿದೆ. ಮೊದಲ ದಿನದ ಸಿನಿಮಾ ಟಿಕೆಟ್ ದರಕ್ಕೆ ಹೋಲಿಕೆ ಮಾಡಿದರೆ ಟಿಕೆಟ್ ದರ ಕೂಡ ಕಡಿಮೆ ಆಗಿದೆ.ಹೀಗಾಗಿ ಗಳಿಕೆಯಲ್ಲಿ ಇಳಿಕೆ ಕಂಡಿದೆ. ಭಾನುವಾರದ ಚಿತ್ರದ ಕಲೆಕ್ಷನ್ ಕೇವಲ 20 ಕೋಟಿ ರೂಪಾಯಿ ಮಾತ್ರ. ಚಿತ್ರದ ಒಟ್ಟಾರೆ ಗಳಿಕೆ 108 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ರಾಜಾಸಾಬ್’ ಚಿತ್ರದ ನಾಲ್ಕು ದಿನದ ಶೂಟ್​ಗೆ ಖರ್ಚಾಯ್ತು ನಾಲ್ಕು ಕೋಟಿ ರೂಪಾಯಿ

‘ಕಲ್ಕಿ 2898 ಎಡಿ’ ಸೂಪರ್ ಹಿಟ್ ಆದ ಬಳಿಕ ಪ್ರಭಾಸ್ ಒಪ್ಪಿಕೊಂಡ ಸಿನಿಮಾ ‘ರಾಜಾಸಾಬ್. ಈ ಚಿತ್ರವನ್ನು ಮಾರುತಿ ನಿರ್ದೇಶನ ಮಾಡಿದ್ದಾರೆ. ಸಿನಿಮಾ ರಿಲೀಸ್​​ಗೂ ಮೊದಲು ಅವರು ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸಿನಿಮಾ ಅಂದುಕೊಂಡ ಮಟ್ಟಿಗೆ ಯಶಸ್ಸು ಕಾಣಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:05 am, Mon, 12 January 26

Source link

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ – Kannada News | Karnataka News: Bangladeshi Illegal Immigrants Busted in Bengaluru

ಬೆಂಗಳೂರು, ಜನವರಿ 12: ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು ಇಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಿದ್ದಾರೆ. 35 ವರ್ಷದ ಜಹಿದುಲ್ ಇಸ್ಲಾಂ ಮತ್ತು 32 ವರ್ಷದ ಫಿರ್ದೋಸ್ ಬಂಧಿತರು. ಈ ಇಬ್ಬರು ಸುಮಾರು ಎರಡು ವರ್ಷಗಳ ಹಿಂದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದರು ಎಂದು ತಿಳಿದುಬಂದಿದೆ. ಹುಲಿಮಂಗಲದ ಪೋಡು ಬಳಿಯ ಗುಜರಿ ಶೆಡ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರನ್ನು ಪ್ರಶ್ನಿಸಿದಾಗ, ತಾವು ಪಶ್ಚಿಮ ಬಂಗಾಳದ ಕೋಲ್ಕತ್ತಾದಿಂದ ಬಂದವರು ಎಂದು ಸುಳ್ಳು ಹೇಳಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಹೆಬ್ಬಗೋಡಿ ಪೊಲೀಸರು, ಇವರ ಬಳಿಯಿದ್ದ ನಕಲಿ ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಸೇರಿದಂತೆ ಹಲವು ನಕಲಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯ ಹೆಣ್ಣಿಗೆ ಇಂದು ತವರಿನಿಂದ ಅನಿರೀಕ್ಷಿತವಾಗಿ ಕರೆ ಬರಲಿದೆ – Kannada News | January 12 Numerology: Daily Horoscope for Birth Numbers 4, 5, 6

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನೀವು ಅಂದುಕೊಂಡ ಕೆಲವು ಪ್ರವಾಸದ ವೇಳಾಪಟ್ಟಿಗಳು ಕೊನೆಯ ಕ್ಷಣದಲ್ಲಿ ಬದಲಾಗಲಿದೆ. ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಕಡಿಮೆ ಆಗಲಿದೆ. ಸ್ವಂತ ವ್ಯವಹಾರದಲ್ಲಿ ದೊಡ್ಡ ಬದಲಾವಣೆ ಮಾಡಿಕೊಳ್ಳುವಿರಿ. ವಸ್ತು ಪೂರೈಕೆ ವಿಚಾರಕ್ಕೆ ಆತುರದ ನಿರ್ಧಾರಗಳಿಂದ ಯಾರಿಗೂ ಮಾತಿನ ಭರವಸೆ ನೀಡಬೇಡಿ. ಸಾಮಾಜಿಕ ಜಾಲತಾಣಗಳಲ್ಲಿ ಸಮಜಾಯಿಷಿ ನೀಡುತ್ತಾ ನಿಮ್ಮ ಕೆಲಸದ ವೇಗ ಕುಂಠಿತವಾಗಲಿದೆ. ವಾಹನ ಅಥವಾ ಮನೆ ರಿಪೇರಿಯಂತಹ ಅನಿರೀಕ್ಷಿತ ಖರ್ಚುಗಳು ಎದುರಾಗಬಹುದು. ಶತ್ರುಗಳ ಬಗ್ಗೆ ಜಾಗರೂಕರಾಗಿರಿ

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಕುಟುಂಬದಲ್ಲಿ ಸಣ್ಣಪುಟ್ಟ ಗೊಂದಲಗಳು ಉಂಟಾಗಬಹುದು, ವಿಶೇಷವಾಗಿ ಒಡಹುಟ್ಟಿದವರ ಜೊತೆ ಆಸ್ತಿ ಅಥವಾ ಹಣದ ವಿಚಾರಕ್ಕೆ ಮನಸ್ತಾಪವಾಗದಂತೆ ಎಚ್ಚರವಹಿಸಿ. ಹೆಣ್ಣುಮಕ್ಕಳಿಗೆ ಈ ದಿನ ತವರಿನಿಂದ ಅನಿರೀಕ್ಷಿತವಾಗಿ ಕರೆ ಬರಲಿದೆ. ಅದೇ ವೇಳೆ ದೂರದ ಊರಿನಿಂದ ಆಮಂತ್ರಣ ಅಥವಾ ಶುಭ ವಾರ್ತೆ ಬರಲಿದೆ. ಪ್ರೀತಿಪಾತ್ರರ ಜೊತೆಗಿನ ಸಂಬಂಧದಲ್ಲಿ ಇಂದು ‘ಪಾರದರ್ಶಕತೆ’ ಬಹಳ ಮುಖ್ಯ. ಯಾವುದನ್ನೂ ಮುಚ್ಚಿಡಬೇಡಿ, ಸತ್ಯವು ಎಷ್ಟೇ ಕಹಿಯಾಗಿದ್ದರೂ ಅದು ನಿಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಸೌಂದರ್ಯವರ್ಧಕ ಮಾರಾಟಗಾರರು ಅಥವಾ ಫ್ಯಾಷನ್ ರಂಗದಲ್ಲಿರುವವರಿಗೆ ದೊಡ್ಡ ಮಟ್ಟದ ವ್ಯವಹಾರ ನಡೆಯಲಿದೆ. ಆರ್ಥಿಕವಾಗಿ ಸ್ಥಿತಿ ಗಟ್ಟಿಯಾಗಿದ್ದರೂ, ಅತಿಯಾದ ಐಷಾರಾಮಿ ಖರ್ಚುಗಳ ಮೇಲೆ ನಿಯಂತ್ರಣವಿರಲಿ. ಮನೆಯ ಹಿರಿಯ ಮಹಿಳೆಯರ ಸಲಹೆಯು ನಿಮಗೆ ಆಪತ್ಕಾಲದಲ್ಲಿ ನೆರವಾಗಲಿದೆ. ನೀವು ಇತರರ ಸೌಂದರ್ಯಕ್ಕಿಂತ ಗುಣಕ್ಕೆ ಆದ್ಯತೆ ನೀಡಿ ವ್ಯವಹರಿಸುವುದು ಒಳಿತು. ಚರ್ಮದ ಅಲರ್ಜಿ ಅಥವಾ ಕಣ್ಣಿನ ಉರಿ ಕಾಣಿಸಿಕೊಳ್ಳಬಹುದು. ವಿವಾಹ ಆಕಾಂಕ್ಷಿಗಳಿಗೆ ಇಂದು ಮನಸ್ಸಿಗೆ ಒಪ್ಪುವಂತಹ ಸಂಬಂಧಗಳು ಬರುವ ಸಾಧ್ಯತೆ ಇದೆ.

ಲೇಖನ- ಎನ್‌.ಕೆ.ಸ್ವಾತಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಹಳೆಯ ಹಣವು ಅನಿರೀಕ್ಷಿತವಾಗಿ ಕೈಸೇರಲಿದೆ – Kannada News | January 12 Numerology: Birth Numbers 7, 8, 9 Daily Prediction and Forecast

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನೀವು ಹೊಸಬರ ಜೊತೆ ಒಪ್ಪಂದ ಮಾಡಿಕೊಳ್ಳುವಾಗ ಅವರ ಆರ್ಥಿಕ ಹಿನ್ನೆಲೆಗಿಂತ ಅವರ ವಿಶ್ವಾಸಾರ್ಹತೆಗೆ ಹೆಚ್ಚು ಒತ್ತು ನೀಡಿ. ಮಾರ್ಕೆಟಿಂಗ್ ಮತ್ತು ದಲ್ಲಾಳಿ ವೃತ್ತಿಯಲ್ಲಿ ಇರುವವರಿಗೆ ನಿರೀಕ್ಷೆಗೂ ಮೀರಿದ ಲಾಭದ ಜೊತೆಗೆ ಹೊಸ ಜವಾಬ್ದಾರಿಯೊಂದು ಹೆಗಲೇರಲಿದೆ. ನೀವು ಹೂಡಿಕೆ ಮಾಡಿರುವ ಷೇರುಗಳು ಅಥವಾ ಮ್ಯೂಚುವಲ್ ಫಂಡ್‌ಗಳ ಮೌಲ್ಯ ಏರಿಕೆಯಾಗುವ ಲಕ್ಷಣಗಳಿವೆ, ಆದರೆ ತಕ್ಷಣದ ಲಾಭಕ್ಕಾಗಿ ಅವಸರದ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಕಂಫರ್ಟ್ ಝೋನ್ ನಿಂದ ಆಚೆ ಬರಬೇಕಾದ ದಿನ ಇದಾಗಿರುತ್ತದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಮನೆಯಲ್ಲಿ ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ನಿಗಾ ಇರಲಿ. ಆಸ್ತಿ ವಿವಾದಗಳು ಸುದೀರ್ಘ ಕಾಲದಿಂದ ನಡೆಯುತ್ತಿದ್ದರೆ, ಸಂಧಾನ ಅಥವಾ ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಿದೆ. ಹಳೆಯ ಸಾಲದ ಹೊರೆ ನಿಮ್ಮನ್ನು ಮಾನಸಿಕವಾಗಿ ಸ್ವಲ್ಪ ಕಾಡಬಹುದು, ಆದರೆ ಅದನ್ನು ತೀರಿಸುವ ಹೊಸ ಮಾರ್ಗವೊಂದು ಗೋಚರಿಸಲಿದೆ. ಸಂಗಾತಿಯ ಜೊತೆಗೆ ಮಾತುಕತೆ ಆಡುವಾಗ ಗಾಂಭೀರ್ಯವಿರಲಿ; ಸಣ್ಣ ಪುಟ್ಟ ತಪ್ಪುಗಳನ್ನು ದೊಡ್ಡದು ಮಾಡಬೇಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಕಚೇರಿಯಲ್ಲಿ ಅಥವಾ ನಿಮ್ಮ ಕೆಲಸದ ಕ್ಷೇತ್ರದಲ್ಲಿ ವಿನಾಕಾರಣ ನಿಮ್ಮ ಮೇಲೆ ಆರೋಪಗಳು ಬರಬಹುದು ಅಥವಾ ನಿಮ್ಮ ಶ್ರಮಕ್ಕೆ ಸಲ್ಲಬೇಕಾದ ಗೌರವ ಬೇರೆಯವರ ಪಾಲಾಗಬಹುದು. ಇಂತಹ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಮೌನವಾಗಿರುವುದೇ ಶ್ರೇಯಸ್ಕರ. ದೊಡ್ಡ ಮಟ್ಟದ ವ್ಯವಹಾರ ಕುದುರಲಿದೆ. ಹಳೆಯ ಬಾಕಿ ಉಳಿದಿದ್ದ ಹಣವು ಅನಿರೀಕ್ಷಿತವಾಗಿ ಕೈಸೇರಬಹುದು. ಆದರೆ ಹೊಸ ಪಾಲುದಾರಿಕೆ ಒಪ್ಪಂದಗಳಿಗೆ ಸಹಿ ಹಾಕುವ ಮುನ್ನ ಕಾನೂನು ತಜ್ಞರ ಸಲಹೆ ಪಡೆಯುವುದು ಒಳ್ಳೆಯದು.

ಲೇಖನ- ಎನ್‌.ಕೆ.ಸ್ವಾತಿ

Source link

Horoscope Today 12 January : ಇಂದು ಈ ರಾಶಿಯವರು ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವರು – Kannada News | Horoscope Today: January 12, 2026 Daily Zodiac Predictions and Lucky Signs

ಮೇಷ ರಾಶಿ:

ಯಾವುದೇ ನಿರ್ಬಂಧಗಳು ಇಲ್ಲದೇ ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣದ ಕೊರತೆ ಇರುವುದು. ನಿಮ್ಮ ದ್ವೇಷವು ಬಲವುಳ್ಳವರಲ್ಲಿ ಬೇಡ. ಸುಮ್ಮನೇ ಆಪ್ತರ ಮೇಲೆ‌ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ. ಹೂಡಿಕೆಯನ್ನು ಹಿಂಪಡೆಯುವ ಸಲಹೆಯು ನಿಮಗೆ ಬರಬಹುದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ.‌ ಸತ್ಕರ್ಮದಿಂದ ಬರುವ ಪುಣ್ಯದ ಫಲವು ಇಂದು ಸಿಗುವುದು. ಸಹೋದ್ಯೋಗಿಗಳ ವರ್ತನೆಯು ನಿಮಗೆ ಆಚ್ಚರಿಗೊಳಿಸೀತು. ಸಿಟ್ಟು ಮಾಡಿಕೊಂಡು ಆಗಬೇಕಾದ ಕೆಲಸವನ್ನು ಮಾಡಿ ಮುಗಿಸುವಿರಿ.

ವೃಷಭ ರಾಶಿ:

ಆಸ್ತಿಯ ವಿಚಾರ ಬಂದಾಗ ಮೌನ ತಾಳುವಿರಿ. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಎಲ್ಲರ ಜೊತೆ ಸೇರಿ ಉತ್ಸಾಹದಿಂದ ಪಾಲ್ಗೊಳ್ಳುವಿರಿ. ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ದೇಹದ ಬಗ್ಗೆ ಅತಿಯಾದ ಮೋಹವಿರುವುದು. ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದ್ದರೆ. ಅಧಿಕ ಖರ್ಚನ್ನು ಇಂದು ಮಾಡಬೇಕಾಗುವುದು. ಸಾಲಬಾಧೆಯು ನಿಮ್ಮನ್ನು ತೀವ್ರವಾಗಿ ಕಾಡುವುದು.‌ ನಿಮ್ಮ ದುರಭ್ಯಾಸವನ್ನು ಇನ್ನೊಬ್ಬರಿಗೂ ಹಿಡಿಸುವ ಸಾಧ್ಯತೆ ಇದೆ. ಸುಮ್ಮನೇ ಇರುವುದು ನಿಮಗೆ ಇಂದು ಪ್ರಿಯವಾದೀತು. ಹೂಡಿಕೆಯಿಂದ ಹಣವನ್ನು ಪಡೆಯುವಿರಿ.

ಮಿಥುನ ರಾಶಿ:

ಮಕ್ಕಳಿಗೆ ನಿರಾಸೆಯಾಗದಂತೆ ನಡೆದುಕೊಳ್ಳಿ. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾಗುವುದು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಅಪರಿಚಿತರು ಬೇರೆ ಊರಿನಲ್ಲಿ ಸ್ನೇಹಿತರಾಗಬಹುದು. ಅಸಂಬದ್ಧ ಮಾತುಗಳ ನಿಮ್ಮನ್ನು ವ್ಯಕ್ತಿತ್ವವನ್ನು ತಿಳಿಸುವುದು. ಪ್ರಭಾವೀ ವ್ಯಕ್ತಿಗಳ ಭೇಟಿಯು ನಿಮ್ಮ ಜೀವನೋತ್ಸಾಹವನ್ನು ಹೆಚ್ಚಿಸುವುದು.

ಕರ್ಕಾಟಕ ರಾಶಿ:

ಹಣಕಾಸಿನಲ್ಲಿ ವಂಚನೆಯಾಗಿರುವುದು ಬಹಳ ದಿನಗಳ ಅನಂತರ ಗೊತ್ತಾಗಿ ಬೇಸರವಾಗುವುದು. ಯಾರ ವಿಚಾರವನ್ನೂ ಒಪ್ಪಿಕೊಳ್ಳಲಾರಿರಿ. ಮಾತನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ.‌ ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ನಿಮ್ಮ ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ‌. ಸ್ತ್ರೀಯರಿಂದ‌ ಕೆಲವು ಸಮಸ್ಯೆಯು ಬರಲಿದೆ. ಅಪರಿಚಿತರಿಗೆ ಇಂದು ಅಲ್ಪ ಧನಸಹಾಯವನ್ನು ಮಾಡಬೇಕಾಗುವುದು. ಕೋಪದ ನಿಯಂತ್ರಣವು ಕಷ್ಟವಾದೀತು. ತಪ್ಪಿನ ಕಾರಣಕ್ಕೆ ನಿಮ್ಮ ಬಳಿ ಕ್ಷಮೆಯನ್ನು ಕೇಳಬಹುದು.

ಸಿಂಹ ರಾಶಿ:

ಬಂದ ಹಣವನ್ನು ಖರ್ಚಾಗದಂತೆ ಸಂಗ್ರಹಿಸಲು ಪ್ರಯತ್ನಿಸಿ. ಆರ್ಥಿಕ ವಿಚಾರದಲ್ಲಿ ನಿಮಗೆ ಯಾವಾಗಲೂ ಅಸಮಾಧನ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಸಾಹೋದರ್ಯದಲ್ಲಿ ಅನಗತ್ಯ ಮಾತುಗಳು ಬರಬಹುದು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಸಂಸ್ಥೆಯ ಮುಖಗಯಸ್ಥರಾಗಲು ಆಹ್ವಾನವು ಬರಬಹುದು. ಭೂಮಿಯಿಂದ ಸಂಪತ್ತನ್ನು ಕಳೆದುಕೊಳ್ಳುವಿರಿ. ಅನಪೇಕ್ಷಿಯ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ. ತಾಯಿಯ ವಿಚಾರದಲ್ಲಿ ನೀವು ಇಂದು ಕೋಪಗೊಳ್ಳುವ ಸಾಧ್ಯತೆ ಇದೆ.

ಕನ್ಯಾ ರಾಶಿ:

ಆತ್ಮಗೌರವವನ್ನು ಕೆಡಿಸಿಕೊಳ್ಳುವ ಸಂದರ್ಭ ಬರಬಹುದು. ಮಕ್ಕಳ‌ ಕಾರ್ಯದಿಂದ ನಿಮಗೆ ಅಪ್ರಶಂಸೆಯು ಬರಬಹುದು. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಬಹುದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ವ್ಯಾಪಾರದ ನಷ್ಟವನ್ನು ನಿಮಗೆ ಅರಗಿಸಿಕೊಳ್ಳಲಾಗದು. ಆಯಾಸ ಹೆಚ್ಚಾದ ಕಾರಣ ಕಾರ್ಯದಲ್ಲಿ ಉತ್ಸಾಹ ಕಡಿಮೆ ಇರಲಿದೆ‌. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ. ಸಂಪತ್ತು ಮತ್ತಾವುದೋ ರೂಪದಲ್ಲಿ ಬಂದು ಸೇರುತ್ತದೆ ಎಂಬ ನಂಬಿಕೆ ಇರಲಿದೆ.

ತುಲಾ ರಾಶಿ:

ಶತ್ರುಗಳ ಕಾರಣದಿಂದ ಖರ್ಚುನ್ನು ಮಾಡಬೇಕಾದ ಸ್ಥಿತಿಯು ಬರಲಿದೆ. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ಆರೋಗ್ಯದಲ್ಲಿ ಅಸ್ತವ್ಯಸ್ತ. ವಚನ ಭ್ರಷ್ಟರಾಗುವ ಸಾಧ್ಯತೆ ಇದೆ. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ. ಗೃಹನಿರ್ಮಾಣವು ಧನಾಭಾವದಿಂದ ಮುಂದೆ ಹೋಗುವುದು. ಹಳೆಯ ಘಟನೆಗಳು ನಿಮ್ಮನ್ನು ಕಾಡಬಹುದು. ಆತಂಕದಿಂದ ನಿಮಗೆ ಮುಕ್ತಿ ಸಿಗಲಿದೆ. ಸಂಗಾತಿಯ ಮಾತಿಗೆ ಸಕಾರಾತ್ಮಕವಾಗಿರಿ.

ವೃಶ್ಚಿಕ ರಾಶಿ:

ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾದ ಸ್ಥಿತಿ‌ಯು ಬರಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ‌ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುವುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಸರ್ಕಾರದಿಂದ ನಿಮಗೆ ಸಹಾಯ ಸಿಗದೇ ಹೋಗಬಹುದು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದು ಮಾತ್ರವೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ಇಂದು ಯಾರಿಗೂ ನಿಮ್ಮ ಅವಶ್ಯಕತೆ ಇಲ್ಲದೇ ಹೋಗಬಹುದು. ಸ್ನೇಹಿತರಿಗೆ ಸಾಲವಾಗಿ ಹಣವನ್ನು ಪುನಃ ಬರುವ ನಿರೀಕ್ಷೆ ಇಲ್ಲದೇ ಕೊಡುವಿರಿ. ಸಾಮಾಜಿಕ ತಾಣದಿಂದ ಪ್ರೇಮವು ಉಂಟಾಗಬಹುದು.

ಧನು ರಾಶಿ:

ಉದ್ಯಮದಿಂದ ಉತ್ತಮ ಆದಾಯ ಸಿಗಬಹುದು.‌ ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರಲಿದೆ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಮಾತ್ರ ಇರದು. ದ್ವೇಷವನ್ನು ತೀರಿಸಿಕೊಳ್ಳಲು ಸಮಯವನ್ನು ಕಾಯುವಿರಿ. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು.

ಮಕರ ರಾಶಿ:

ಒಳ್ಳೆಯ ವ್ಯವಸ್ಥೆಯನ್ನು ಇಟ್ಟುಕೊಂಡು ಸರಿಯಾದ ಸೇವೆ ಕೊಡಲು ಕಷ್ಟವಾಗಬಹುದು. ಬಂಧುಗಳ ವಿಚಾರದಲ್ಲಿ‌ ತೃಪ್ತಿ‌ ಇರದು. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ನೀವು ಮಾಡುವ ಸಣ್ಣ ಕೆಲಸಕ್ಕೂ ಪ್ರಶಂಸೆಯನ್ನು ಅಪೇಕ್ಷಿಸುವಿರಿ. ಅನ್ಯ ಕರೆಗಳಿಂದ ಮೋಸದ ಜಾಲಕ್ಕೆ ಸಿಕ್ಕಬಹುದಾದ ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ.

ಕುಂಭ ರಾಶಿ:

ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟವಾದೀತು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಆಡಿದ ಮಾತಿಗೆ ಕ್ಷಮೆ ಕೇಳುವಿರಿ. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಸಂಗಾತಿಯ ಬಗ್ಗೆ ಧನಾತ್ಮಕ‌ ಅಂಶಗಳು ಕೇಳಿಬರಬಹುದು. ಬೇರೆ ವಿದೇಶದ ಸಂಪರ್ಕದಿಂದ ನಿಮಗೆ ಅನನುಕೂಲವಾಗಲಿದೆ. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ಅತಿಥಿಗಳ ಆಗಮನವಾಗಲಿದೆ. ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಕಛೇರಿಯ ವಾಸ್ತವವನ್ನು ಅರ್ಥಮಾಡಿಕೊಂಡು ವ್ಯವಹರಿಸಿ.

ಮೀನ ರಾಶಿ:

ಸಂದರ್ಭೋಚಿತ ಮಾತುಗಳಿಂದ ಗೆಲುವುದು ಸಿಗಬಹುದು. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರುವಿರಿ. ವ್ಯವಹಾರದ ವಿಷಯದಲ್ಲಿ ನಿಮಗೆ ಯಾವುದೇ ಔದಾರ್ಯ ಬೇಡ. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳು ಕೇಳಿಬರಬಹುದು. ಅನ್ಯರಿಗೆ ಅಸಾಧ್ಯವಾದ ಕೆಲಸವು ನಿಮ್ಮಿಂದ ಸಾಧ್ಯವಾಗಬಹುದು. ಜನಮನ್ನಣೆಯ ಆಸೆಯು ಒಂದಿಲ್ಲೊಂದು ಕೆಲಸವನ್ನು ಮಾಡಿಸುವುದು.

ಜನವರಿ 12,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಸ್ವಾತಿ ಯೋಗ : ಧೃತಿ, ಕರಣ : ಗರಜ, ಸೂರ್ಯೋದಯ – 06 – 52 am, ಸೂರ್ಯಾಸ್ತ – 06 – 11 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 08-18 – 09:43, ಯಮಗಂಡ ಕಾಲ 11:08 – 12:33, ಗುಳಿಕ ಕಾಲ 13:58 – 15:23

-ಲೋಹಿತ ಹೆಬ್ಬಾರ್ – 8762924271 (what’s app only)

Source link

Exit mobile version