Headlines

ವಾಯು, ಜಲ ಮತ್ತು ನೆಲ, ಮೂರೂ ಸ್ತರಗಳಲ್ಲೂ ಅಮೋಘವೆನಿಸಿದೆ ಭಾರತದ ಸ್ವಂತ ಬಲದ ರಕ್ಷಣಾ ಸಾಮರ್ಥ್ಯ – Kannada News | From Tejas to INS Vikrant, India’s indigenous defence capabilities developed in last 12 years

ನವದೆಹಲಿ, ಜೂನ್ 18: ಕಳೆದ 12 ವರ್ಷಗಳ ಮೋದಿ ಆಡಳಿತದಲ್ಲಿ ಭಾರತದ ಮಿಲಿಟರಿ ಸಾಮರ್ಥ್ಯ ಗಣನೀಯವಾಗಿ ಹೆಚ್ಚಿದೆ. ಸ್ವಂತ ಬಲದಲ್ಲಿ ಭಾರತ ಸಾಮರ್ಥ್ಯ ಹೆಚ್ಚಿಸಿಕೊಂಡಿರುವುದು ಗಮನಾರ್ಹ. ತಂತ್ರಜ್ಞಾನ, ಸಾಮರ್ಥ್ಯದಲ್ಲಿ ಬಹಳ ಮುಂಚಿತವಾಗಿ ಹೂಡಿಕೆ ಮಾಡುವ ದೇಶಗಳಿಗೆ ಭವಿಷ್ಯ ಉಜ್ವಲವಾಗಿರುತ್ತದೆ. ಅಂತೆಯೇ, ಭಾರತದ ರಕ್ಷಣಾ ಕ್ಷೇತ್ರದ (India defence) ಕಳೆದ 12 ವರ್ಷಗಳ ಪ್ರಯಾಣ ಇದಕ್ಕೆ ಸಾಕ್ಷಿ. ಭಾರತ ಈಗ ಮಿಲಿಟರಿ ಶಕ್ತಿಯಲ್ಲಿ ವಿಶ್ವದ ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿದೆ. ವಾಯು, ಜಲ ಮತ್ತು ನೆಲ ಈ ಮೂರೂ ವಿಭಾಗಗಳಲ್ಲಿ…

Read More

Video: ಅಮೆರಿಕದ ಪನಾಮ ಕಾಲುವೆ ಮೇಲಿರುವ ಸೇತುವೆಯಲ್ಲಿ ಮೂರು ಇಂಧನ ಟ್ಯಾಂಕರ್​ಗಳ ಸ್ಫೋಟ, ಭಯಾನಕ ವಿಡಿಯೋ ಇಲ್ಲಿದೆ

ಪನಾಮ, ಏಪ್ರಿಲ್ 07: ಪನಾಮ ಕಾಲುವೆಯ ಪೆಸಿಫಿಕ್ ಪ್ರವೇಶದ್ವಾರದಲ್ಲಿರುವ ಬ್ರಿಡ್ಜ್ ಆಫ್ ದಿ ಅಮೆರಿಕಾಸ್ ಬಳಿ ಇಂಧನ ಟ್ಯಾಂಕರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪನಾಮ ನಗರದ ಪಶ್ಚಿಮ ಭಾಗದಲ್ಲಿರುವ ಬಾಲ್ಬೋವಾದ ಲಾ ಬೊಕಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮೂರು ಇಂಧನ ಟ್ಯಾಂಕರ್​ಗಳಿಗೆ ಬೆಂಕಿ ತಗುಲಿ ಸ್ಫೋಟಗೊಂಡಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.ಸೇತುವೆ ಪಕ್ಕದಲ್ಲಿದ್ದ ಬೇರೆ ವಾಹನಗಳಿಗೂ ಹಾನಿಯುಂಟಾಗಿದೆ.1,654 ಮೀಟರ್ ಉದ್ದದ ಪ್ರಮುಖ ರಸ್ತೆಯಾದ ಬ್ರಿಡ್ಜ್ ಆಫ್ ದಿ…

Read More

‘ನಿಮ್ಮ ಕೆಟ್ಟತನ ನಿಮ್ಮ ಅವನತಿಗೆ ಕಾರಣ’; ಕೆಟ್ಟ ಕಮೆಂಟ್ ಹಾಕುವವರಿಗೆ ಜಗ್ಗೇಶ್ ತಿರುಗೇಟು – Kannada News | Jaggesh Slams Abusive Online Comments: A Strong Message to Trolls and Youth

ನಟ ಜಗ್ಗೇಶ್ (Jaggesh) ಅವರು ಅಭಿಮಾನಿಗಳನ್ನು ತುಂಬಾನೇ ಪ್ರೀತಿಸುತ್ತಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತಾರೆ. ಅದೇ ರೀತಿ ಕೆಟ್ಟದನ್ನು ಬಯಸುವವರನ್ನು ಅವರು ದೂರ ಇಡಲು ಪ್ರಯತ್ನಿಸುತ್ತಾರೆ. ಈಗ ಅಶ್ಲೀಲ ಕಮೆಂಟ್ ಹಾಕುವ ವ್ಯಕ್ತಿಗಳಿಗೆ ಜಗ್ಗೇಶ್ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಅವರು ಈಗ ಫೇಸ್​​ಬುಕ್ ಅಲ್ಲಿ ಉದ್ದನೆಯ ಪೋಸ್ಟ್ ಹಂಚಿಕೊಂಡು, ಕೆಟ್ಟ ಕಮೆಂಟ್ ಹಾಕುವವರನ್ನು ಹಲವು ಹಂತಗಳಲ್ಲಿ ತಿದ್ದುವ ಕೆಲಸ ಮಾಡಿದ್ದಾರೆ. ಅವರು ಬರೆದ ಪೋಸ್ಟ್​​ನ ಯಥಾವತ್ತು ವಿವರ ಕೆಳಗಿದೆ. ‘ನನ್ನ ಬದುಕಿನ ಕಷ್ಟ ಕಾಲದಲ್ಲಿ ನನ್ನ ಜೊತೆ ನಿಂತವರು…

Read More

ಗದಗದಲ್ಲಿ ನಕಲಿ ಲಾಟರಿ ಜಾಲ ಸಕ್ರಿಯ: ಕೇರಳ ಸರ್ಕಾರದ ಚಿಹ್ನೆ ದುರ್ಬಳಕೆ ಮಾಡಿ ವಂಚನೆ ಆರೋಪ

ಗದಗ, ಮಾರ್ಚ್​​ 12: ನಕಲಿ ಲಾಟರಿ ಯೋಜನೆಯ ಮೂಲಕ ಜನರನ್ನು ಮೋಸಗೊಳಿಸುತ್ತಿರುವ ವಂಚಕ ಜಾಲ ಗದಗ ಜಿಲ್ಲೆಯಲ್ಲಿ ಸಕ್ರಿಯವಾಗಿದೆ ಎಂಬ ಆರೋಪ ಕೇಳಿಬಂದಿದೆ. ಖದೀಮರು ಕೇರಳ ಸರ್ಕಾರದ ಹೆಸರು ಮತ್ತು ಚಿಹ್ನೆಯನ್ನು ದುರುಪಯೋಗಪಡಿಸಿಕೊಂಡು ಲಾಟರಿ ಯೋಜನೆಯ ಹೆಸರಲ್ಲಿ ರ‍್ಯಾಂಡಮ್‌ ಮೊಬೈಲ್​​ ಸಂಖ್ಯೆಗಳಿಗೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ನೀವು 15 ಲಕ್ಷ ರೂ. ಲಾಟರಿ ಬಹುಮಾನ ಗೆದ್ದಿದ್ದೀರಿ ಎಂಬ ಮಾಹಿತಿ ಮೆಸೇಜ್​​ನಲ್ಲಿ ಇರಲಿದ್ದು, ಜೊತೆಗೆ ಕೇರಳ ಸರ್ಕಾರದ ಚಿಹ್ನೆ ಹೊಂದಿರುವ PDF ಪ್ರಮಾಣಪತ್ರವನ್ನೂ ಕಳುಹಿಸಲಾಗುತ್ತಿದೆ. ಇದರಿಂದ ಲಾಟರಿ ನಿಜವಾದದ್ದು ಎಂಬ…

Read More

ತೆಲಂಗಾಣದ ದೇವಸ್ಥಾನದ ಜಾತ್ರೆಯಲ್ಲಿ ಜಾತಿ ಸಂಘರ್ಷ; ಕೂದಲೆಳೆದು ಮಹಿಳೆಯರಿಗೆ ಥಳಿತ, ಮಗು ಸಾವು – Kannada News | Women Attacked in Caste Clash at Telangana Temple Fair 2 month old baby died

ಹೈದರಾಬಾದ್, ಫೆಬ್ರವರಿ 23: ತೆಲಂಗಾಣದ ನಾಗರ್ಕರ್ನೂಲ್‌ನಲ್ಲಿ ನಡೆದ ಕುಮ್ಮೇರ ಜಾತ್ರೆಯ ಸಂದರ್ಭದಲ್ಲಿ ಜಾತಿ ಘರ್ಷಣೆಯಲ್ಲಿ ಒಂದು ಕುಟುಂಬದ ಮೇಲೆ ಪುರುಷರ ಗುಂಪೊಂದು ದಾಳಿ ನಡೆಸಿದೆ. ಈ ಗಲಾಟೆಯಲ್ಲಿ 2 ತಿಂಗಳ ಮಗುವೂ ಸಾವನ್ನಪ್ಪಿದೆ. ಕೆಳ ಜಾತಿಯ ಮಹಿಳೆಯರ ಕೂದಲನ್ನು ಎಳೆದು ರಾಡ್‌ಗಳಿಂದ ಹೊಡೆಯಲಾಗಿದೆ. ಜಾತ್ರೆಗೆ ದೇವಾಲಯದೊಳಕ್ಕೆ ಪ್ರವೇಶಿಸಲು ಕೆಳ ಜಾತಿಯ ಕುಟುಂಬಸ್ಥರು 100 ರೂ. ನೀಡಲು ನಿರಾಕರಿಸಿದಾಗ ವಾಗ್ವಾದ ಪ್ರಾರಂಭವಾಯಿತು. ಇದೇ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿತು. ಇದಾದ ನಂತರ ಆ ಕುಟುಂಬದ ಸದಸ್ಯರು ಪೊಲೀಸ್ ದೂರು ದಾಖಲಿಸಿದರು….

Read More

Bangaluru rain: ಬೆಂಗಳೂರಲ್ಲಿ ಧಾರಾಕಾರ ಮಳೆ; ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ! – Kannada News | Bengaluru Heavy Rain: Roads Turn Into Lakes, Motorists Struggle Amid Severe Waterlogging

ಬೆಂಗಳೂರು, ಜೂನ್​​ 14: ನಗರದಲ್ಲಿ (bengaluru) ಕಳೆದೆರಡು ದಿನಗಳಿಂದ ಮಳೆ (Rain) ಚುರುಕುಗೊಂಡಿದೆ. ನಿನ್ನೆ ಸಂಜೆಯೂ ಮಳೆ ದರ್ಶನವಾಗಿದ್ದು, ಇಂದು ಮತ್ತೆ ಮಳೆ ಎಂಟ್ರಿಕೊಟ್ಟಿದೆ. ಎಲ್ಲೆಡೆ ಮೋಡ ಕವಿದ ವಾತಾವರಣವಿದ್ದು, ಸಂಜೆ ಆಗುತ್ತಿದ್ದಂತೆ ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ ಆರಂಭವಾಗಿದೆ. ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡಿದ್ದಾರೆ. ಮುಖ್ಯಾಂಶಗಳು ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆ ಮಳೆಯಿಂದ ಟ್ರಾಫಿಕ್ ಜಾಮ್​, ವಾಹನ ಸವಾರರ ಪರದಾಟ ಧಾರಾಕಾರ ಮಳೆಯಿಂದ…

Read More

ಕೋಗಿಲು ಲೇಔಟ್ ರೀತಿ ನಾಗಮಂಗಲದಲ್ಲೂ ಭಾರಿ ಅಕ್ರಮ: ಆಂಧ್ರ, ಕೇರಳ ಮೂಲದವರಿಗೆ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಹಂಚಿಕೆ ಆರೋಪ – Kannada News | Kogilu Layout Style Land Scam Alleged in Mandya Nagamangala: Fake Documents Used to Allot Land to Migrants

ಮಂಡ್ಯ, ಜನವರಿ 27: ಬೆಂಗಳೂರಿನ (Bangalore) ಕೋಗಿಲು ಲೇಔಟ್ (Kogilu Layout) ರೀತಿಯಲ್ಲೇ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಭಾರೀ ಭೂಮಿ ಅಕ್ರ ನಡೆದಿರುವ ಶಂಕೆ ವ್ಯಕ್ತವಾಗಿದೆ. ವಲಸಿಗರಿಗೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸಾಮಾಜಿಕ ಕಾರ್ಯಕರ್ತ ರವೀಂದ್ರ ಅವರು ಈ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದು, ಬಗರ್ ಹುಕುಂ ಯೋಜನೆಯಡಿ ಗರಿಷ್ಠ 4 ಎಕರೆ 38 ಗುಂಟೆ ಮಾತ್ರ ಸಕ್ರಮಗೊಳಿಸಲು ಅವಕಾಶವಿದೆ. ಆದಾಗ್ಯೂ…

Read More

‘ಧುರಂಧರ್ 2’ ಬಾಕ್ಸ್ ಆಫೀಸ್ ಅಬ್ಬರಕ್ಕೆ ಬ್ರೇಕ್ ಹಾಕಿದ ಅಕ್ಷಯ್ ಕುಮಾರ್ ಸಿನಿಮಾ ‘ಭೂತ್ ಬಂಗ್ಲ’ – Kannada News | Ranveer Singh Dhurandhar 2 Box Office Collection slows down after Bhooth Bangla release

ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧರ್ ಕಾಂಬಿನೇಷನ್‌ನ ಸ್ಪೈ ಥ್ರಿಲ್ಲರ್ ‘ಧುರಂಧರ್ 2’ ಬಾಕ್ಸ್ ಆಫೀಸ್‌ನಲ್ಲಿ ಈಗಾಗಲೇ ಇತಿಹಾಸ ಬರೆದಿದೆ. ಆದರೆ ಬಿಡುಗಡೆಯಾದ ಮೊದಲ ನಾಲ್ಕು ವಾರಗಳ ಕಾಲ ಅಡೆತಡೆಯಿಲ್ಲದೆ ಸಾಗಿದ್ದ ಈ ಚಿತ್ರದ ಓಟಕ್ಕೆ ಈಗ ಅಕ್ಷಯ್ ಕುಮಾರ್ ಅವರ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಅಡ್ಡಿಯಾದಂತೆ ತೋರುತ್ತಿದೆ. ಹೌದು, ‘ಭೂತ್ ಬಂಗ್ಲ’ ಬಿಡುಗಡೆ ಆದ ಬಳಿಕ ‘ಧುರಂಧರ್ 2’ (Dhurandhar 2) ಸಿನಿಮಾದ ಕಲೆಕ್ಷನ್ ಗಣನೀಯವಾಗಿ ಕುಸಿದಿದೆ….

Read More

‘ಮೃತ್ಯುದೇವತೆ’ ಸಿನಿಮಾದ ಹೊಸ ಹಾಡು ರಿಲೀಸ್; ಇದು ಮಹಿಳಾ ಪ್ರಧಾನ ಸಿನಿಮಾ – Kannada News | Mruthyudevathe Kannada movie ft Sarika Rao Vinaya Prasad Himashree New Song Released

ನವೀನ್ ಮಹದೇವ್ ಅವರು ನಿರ್ದೇಶನ ಮಾಡಿರುವ ‘ಮೃತ್ಯುದೇವತೆ’ (Mruthyudevathe) ಸಿನಿಮಾದ ಹೊಸ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈಗಿನ ಸಮಾಜದಲ್ಲಿ ಮಹಿಳೆ ಯಾವ ರೀತಿ ಟ್ರ್ಯಾಪ್ ಆಗಿ ವಂಚಕರ ಜಾಲದಲ್ಲಿ ಸಿಲುಕಿಕೊಳ್ಳುತ್ತಾಳೆ, ನಂತರ ಅದರಿಂದ ಹೊರಬರಲು ಹೇಗೆ ಪ್ರಯತ್ನಿಸುತ್ತಾಳೆ, ವಂಚಕರನ್ನು ಶಿಕ್ಷಿಸಲು ಯಾವ ಅವತಾರ ಎತ್ತುತ್ತಾಳೆ ಎಂಬುದನ್ನು ಈ ಸಿನಿಮಾ ಮೂಲಕ ಹೇಳಲು ಪ್ರಯತ್ನಿಸಿರುವುದಾಗಿ ಚಿತ್ರತಂಡ ತಿಳಿಸಿದೆ. ಮಹಿಳಾ ಪ್ರಧಾನ ಕಥಾಹಂದರ ಇರುವ ಈ ಸಿನಿಮಾಗೆ ನವೀನ್ ಮಹಾದೇವ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ….

Read More

ಹುಬ್ಬಳ್ಳಿಯ ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ – Kannada News | More Than 5 Lakh Devotees Participate in Hubballi Siddarudha Rathotsava

ಹುಬ್ಬಳ್ಳಿ, ಫೆಬ್ರವರಿ 16: ಸುಪ್ರಸಿದ್ಧ ಸಿದ್ಧಾರೂಢರ ಮಹಾರಥೋತ್ಸವಕ್ಕೆ ಲಕ್ಷಾಂತರ ಭಕ್ತಾದಿಗಳು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದಾರೆ. ಎತ್ತ ನೋಡಿದರೂ ಜನ ಸಾಗರವೇ ಕಾಣುತ್ತಿದ್ದು, ಸುಮಾರು ಐದು ಲಕ್ಷ ಭಕ್ತರು ರಥೋತ್ಸವ ಕಣ್ತುಂಬಿಕೊಂಡಿದ್ದಾರೆ. ರಥೋತ್ಸವದ ವೇಳೆ ಉತ್ತುತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಣೆ ಮಾಡಲಾಗಿದ್ದು, ಸಿದ್ದಾರೂಢ ಮಹರಾಜ ಕಿ ಜೈ ಎಂಬ ಘೋಷಣೆಗಳು ಭಕ್ತರಿಂದ ಮೊಳಗಿವೆ. ಮಹಾರಥೋತ್ಸವ ಹಿನ್ನೆಲೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿಶೇಷ ಸೇವೆ ನಡೆದಿದ್ದು, ಭಕ್ತರಿಗೆ ನಿನ್ನೆ ಮತ್ತು ಇಂದು ಮುಂಜಾನೆ ಸೇರಿ ಒಂದು ಲಕ್ಷ…

Read More