ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್ – Kannada News | Karnataka Bandh Over Cauvery Water Dispute? Kannada Organisations to Finalise Date Tomorrow

ಬೆಂಗಳೂರು, ಜುಲೈ 30: ಕಾವೇರಿ ನೀರು ಹಂಚಿಕೆ ವಿವಾದ ಕರ್ನಾಟಕದಲ್ಲಿ ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ಹೊರಡಿಸಿರುವ ಆದೇಶದ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ರೈತರು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆಗಿಳಿದಿವೆ. ಏತನ್ಮಧ್ಯೆ ಇಂದು ಮಧ್ಯಾಹ್ನ 2:30ಕ್ಕೆ ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ ನಡೆಯಲಿದೆ. ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಪಾಂಡಿಚೇರಿ ಸದಸ್ಯರು ಭಾಗಿಯಾಗಲಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ. ತಮಿಳುನಾಡಿಗೆ ನೀರು ಹರಿಸುವ ಆದೇಶದ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ. ಕರ್ನಾಟಕ ಸರ್ಕಾರವು ಸಿಡಬ್ಲ್ಯೂಎಂಎಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದು, ಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಬಲ ವಾದ ಮಂಡನೆಗೆ ಸೂಚಿಸಿದ್ದಾರೆ.

ಏತನ್ಮಧ್ಯೆ, ತಮಿಳುನಾಡಿಗೆ ಕಾವೇರಿ ನೀರು ಹರಿಸುವುದಕ್ಕೆ ಕನ್ನಡ ಸಂಘಟನೆಗಳಿಂದ ತೀವ್ರ ಖಂಡನೆ ವ್ಯಕ್ತವಾಗಿದೆ. ಕಾವೇರಿ ನೀರಿಗಾಗಿ ರಾಜ್ಯವ್ಯಾಪಿ ಕರ್ನಾಟಕ ಬಂದ್ ಕರೆಯುವ ಸಾಧ್ಯತೆಗಳಿದ್ದು, ಶುಕ್ರವಾರ ಬೆಂಗಳೂರಿನ ವುಡ್‌ಲ್ಯಾಂಡ್ ಹೋಟೆಲ್‌ನಲ್ಲಿ ಸಂಘಟನೆಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬಂದ್ ದಿನಾಂಕ ಮತ್ತು ಹೋರಾಟದ ರೂಪುರೇಷೆಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕನ್ನಡ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Vastu Tips: ಮನೆಯಲ್ಲಿ ಕತ್ತರಿ ಇಡುವಾಗ ಈ ತಪ್ಪು ಮಾಡಬೇಡಿ; ಆರ್ಥಿಕ ಸಮಸ್ಯೆ, ಭಿನ್ನಾಭಿಪ್ರಾಯಕ್ಕೆ ಇದೇ ಕಾರಣ! – Kannada News | Vastu Tips for Scissors: Proper Placement to Enhance Home’s Positive Energy

ಮನೆಯಲ್ಲಿ ಕತ್ತರಿ ಇಡುವಾಗ ಈ ತಪ್ಪು ಮಾಡಬೇಡಿImage Credit source: Getty Images

ಕತ್ತರಿ ಪ್ರತಿಯೊಂದು ಮನೆಯಲ್ಲೂ ಸಾಮಾನ್ಯವಾಗಿ ಬಳಸುವ ವಸ್ತುವಾಗಿದೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಕತ್ತರಿಯನ್ನು ಎಲ್ಲಿ ಮತ್ತು ಹೇಗೆ ಇಡಲಾಗುತ್ತದೆ ಎಂಬುದು ಮನೆಯ ಸಕಾರಾತ್ಮಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಕತ್ತರಿಯನ್ನು ಎಲ್ಲೆಂದರಲ್ಲಿ ಇಡುವುದು ಅಥವಾ ಅಜಾಗರೂಕತೆಯಿಂದ ಬಳಸುವುದು ಶುಭವಲ್ಲ ಎಂದು ವಾಸ್ತು ತಜ್ಞರು ಹೇಳುತ್ತಾರೆ.

ಕತ್ತರಿ ಯಾವ ಗ್ರಹಕ್ಕೆ ಸಂಬಂಧಿಸಿದೆ?

ವಾಸ್ತು ಮತ್ತು ಜ್ಯೋತಿಷ್ಯದ ಪ್ರಕಾರ, ಕತ್ತರಿ ರಾಹು ಗ್ರಹಕ್ಕೆ ಸಂಬಂಧಿಸಿದೆ ಎಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ಕತ್ತರಿಯನ್ನು ತಪ್ಪಾದ ಸ್ಥಳದಲ್ಲಿ ಅಥವಾ ಅಸ್ತವ್ಯಸ್ತವಾಗಿ ಬಿಸಾಡುವುದರಿಂದ ರಾಹುವಿನ ಅಶುಭ ಪ್ರಭಾವ ಹೆಚ್ಚಾಗಬಹುದು ಎಂಬ ನಂಬಿಕೆ ಇದೆ. ಇದರಿಂದ ಕುಟುಂಬ ಸದಸ್ಯರ ನಡುವೆ ಭಿನ್ನಾಭಿಪ್ರಾಯ, ಮಾನಸಿಕ ಅಶಾಂತಿ ಮತ್ತು ಅನಗತ್ಯ ಜಗಳಗಳು ಉಂಟಾಗಬಹುದು ಎಂದು ಹೇಳಲಾಗುತ್ತದೆ.

ಕತ್ತರಿಯನ್ನು ಇತರರಿಗೆ ಕೊಡುವಾಗ ಎಚ್ಚರಿಕೆ:

ವಾಸ್ತು ನಂಬಿಕೆಯ ಪ್ರಕಾರ, ಕತ್ತರಿಯನ್ನು ಯಾರಿಗೂ ಶಾಶ್ವತವಾಗಿ ನೀಡಬಾರದು. ಅನಿವಾರ್ಯವಾಗಿ ನೀಡಬೇಕಾದರೆ ಕೆಲಸ ಮುಗಿದ ಕೂಡಲೇ ಅದನ್ನು ಮರಳಿ ಪಡೆದುಕೊಳ್ಳುವುದು ಉತ್ತಮ ಎಂದು ಹೇಳಲಾಗುತ್ತದೆ. ಇಲ್ಲದಿದ್ದರೆ ಸಂಬಂಧಗಳಲ್ಲಿ ತಪ್ಪು ತಿಳುವಳಿಕೆ ಅಥವಾ ದೂರವಾಗುವ ಸಾಧ್ಯತೆ ಹೆಚ್ಚಾಗುತ್ತದೆ ಎಂಬ ನಂಬಿಕೆ ಇದೆ.

ಅಡುಗೆಮನೆಯಲ್ಲಿ ಕತ್ತರಿ ಇಡಬಾರದು ಏಕೆ?

ಅಡುಗೆಮನೆ ಮಂಗಳ ಗ್ರಹಕ್ಕೆ ಸಂಬಂಧಿಸಿದ ಸ್ಥಳವೆಂದು ವಾಸ್ತು ಶಾಸ್ತ್ರ ಹೇಳುತ್ತದೆ. ಇಂತಹ ಸ್ಥಳದಲ್ಲಿ ರಾಹುವಿಗೆ ಸಂಬಂಧಿಸಿದ ಕತ್ತರಿ ಇಡುವುದರಿಂದ ವಾಸ್ತು ದೋಷ ಉಂಟಾಗಬಹುದು ಎಂಬ ನಂಬಿಕೆ ಇದೆ. ಇದು ಮನೆಯ ಆರೋಗ್ಯ ಮತ್ತು ಆಹಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೆಚ್ಚಿಸಬಹುದು ಎಂದು ಹೇಳಲಾಗುತ್ತದೆ.

ಈ ದಿಕ್ಕಿನಲ್ಲಿ ಕತ್ತರಿ ಇಡಬೇಡಿ:

ವಾಸ್ತು ಪ್ರಕಾರ, ಉತ್ತರ ದಿಕ್ಕಿನಲ್ಲಿ ಕತ್ತರಿ ಇಡುವುದನ್ನು ತಪ್ಪಿಸಬೇಕು. ಉತ್ತರ ದಿಕ್ಕು ಬುಧ ಗ್ರಹದ ಪ್ರಭಾವದಲ್ಲಿದೆ ಎಂದು ನಂಬಲಾಗುತ್ತದೆ. ಈ ದಿಕ್ಕಿನಲ್ಲಿ ಕತ್ತರಿ ಇಟ್ಟರೆ ಆರ್ಥಿಕ ಪ್ರಗತಿಗೆ ಅಡ್ಡಿಯಾಗಬಹುದು, ಕುಟುಂಬ ಸದಸ್ಯರ ನಡುವೆ ಸಂವಹನದ ಸಮಸ್ಯೆಗಳು ಉಂಟಾಗಬಹುದು ಹಾಗೂ ಮಾತಿನಲ್ಲಿ ಕಹಿತನ ಹೆಚ್ಚಾಗಬಹುದು ಎಂದು ವಾಸ್ತು ಹೇಳುತ್ತದೆ.

ಇದನ್ನೂ ಓದಿ: ಚಿಕ್ಕ ಮಕ್ಕಳಿಗೆ ಕನ್ನಡಿ ತೋರಿಸಬಾರದು ಏಕೆ? ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ

ಕತ್ತರಿ ಬಳಸುವಾಗ ಪಾಲಿಸಬೇಕಾದ ನಿಯಮಗಳು:

ಕತ್ತರಿಯನ್ನು ಎಂದಿಗೂ ತೆರೆದ ಸ್ಥಿತಿಯಲ್ಲಿ ಬಿಡಬಾರದು ಅಥವಾ ತಲೆಕೆಳಗಾಗಿ ಇಡಬಾರದು. ಮುರಿದ ಅಥವಾ ಹಾಳಾದ ಕತ್ತರಿಯನ್ನು ಬಳಸುವುದನ್ನೂ ತಪ್ಪಿಸಬೇಕು. ಕತ್ತರಿಯನ್ನು ಪೂಜಾ ಕೊಠಡಿ, ಮಲಗುವ ಕೋಣೆ ಅಥವಾ ಮನೆಯ ಮುಖ್ಯ ಬಾಗಿಲಿನ ಬಳಿ ಇಡುವುದು ಶುಭವಲ್ಲ ಎಂದು ವಾಸ್ತು ಹೇಳುತ್ತದೆ.

ಕತ್ತರಿ ಇಡಲು ಸೂಕ್ತ ಸ್ಥಳ ಯಾವುದು?

ವಾಸ್ತು ನಂಬಿಕೆಯ ಪ್ರಕಾರ, ಕತ್ತರಿಯನ್ನು ಬಳಸಿದ ನಂತರ ಅದನ್ನು ಮುಚ್ಚಿ ಸುರಕ್ಷಿತವಾಗಿ, ಯಾರ ಕಣ್ಣಿಗೂ ನೇರವಾಗಿ ಕಾಣದ ಸ್ಥಳದಲ್ಲಿ ಇಡುವುದು ಉತ್ತಮ. ಇದರಿಂದ ಮನೆಯಲ್ಲಿನ ಸಕಾರಾತ್ಮಕ ವಾತಾವರಣ ಕಾಪಾಡಿಕೊಳ್ಳಬಹುದು ಎಂದು ನಂಬಲಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 7:21 am, Thu, 30 July 26

Source link

‘ರಾಮಾಯಣ’ ಟ್ರೇಲರ್​​: ರಾಮ-ಸೀತೆ-ರಾವಣನ ಪರಿಚಯಿಸಿದ ನಿರ್ದೇಶಕ ನಿತೇಶ್ ತಿವಾರಿ

Source link

ಗಜಪ್ರಸವದಂತಾದ ರಾಜ್ಯ ಸಂಪುಟ ವಿಸ್ತರಣೆ: ಸಮಯ ಕೊಡ್ತಿಲ್ಲ ರಾಹುಲ್ ಗಾಂಧಿ! ದೆಹಲಿಯಲ್ಲೇ ಸಿಎಂ ಡಿಕೆಶಿ, ಸಿದ್ದರಾಮಯ್ಯ ಠಿಕಾಣಿ – Kannada News | Karnataka Cabinet Expansion Delayed as DK Shivakumar, Siddaramaiah Await Rahul Gandhi’s Approval

ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ (ಸಂಗ್ರಹ ಚಿತ್ರ)Image Credit source: tv9

ಬೆಂಗಳೂರು, ಜುಲೈ 30: ಕರ್ನಾಟಕ ಕಾಂಗ್ರೆಸ್ ಸರ್ಕಾರದ, ಸಿಎಂ ಡಿಕೆ ಶಿವಕುಮಾರ್ ನೇತೃತ್ವ ಸಂಪುಟ ವಿಸ್ತರಣೆ (Karnataka Cabinet Expansion) ಮತ್ತೊಮ್ಮೆ ವಿಳಂಬವಾಗಿದೆ. ಸಚಿವಾಕಾಂಕ್ಷಿಗಳ ಕುತೂಹಲ ಮುಂದುವರಿದಿದೆ. ಖಾಲಿ ಇರುವ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದರೂ, ಸಚಿವರ ಪಟ್ಟಿ ಅಂತಿಮವಾಗುತ್ತಿಲ್ಲ. ಸಚಿವರ ಪಟ್ಟಿಗೆ ಅಂತಿಮ ಒಪ್ಪಿಗೆ ನೀಡಬೇಕಿರುವ ರಾಹುಲ್ ಗಾಂಧಿ ಅವರ ಭೇಟಿಗೆ ಇನ್ನೂ ಸಮಯ ಸಿಗದಿರುವುದು ಸಂಪುಟ ವಿಸ್ತರಣೆಯ ವಿಳಂಬಕ್ಕೆ ಕಾರಣವಾಗಿದೆ.

ಸಚಿವ ಸ್ಥಾನಕ್ಕಾಗಿ 35ಕ್ಕೂ ಹೆಚ್ಚು ಮಂದಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ನೀಡುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿ ಒಂದು ಪಟ್ಟಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಳಿ ಮತ್ತೊಂದು ಪಟ್ಟಿ ಹಾಗೂ ಹೈಕಮಾಂಡ್ ಸಿದ್ಧಪಡಿಸಿರುವ ಮತ್ತೊಂದು ಪಟ್ಟಿ ಇದೆ ಎನ್ನಲಾಗಿದೆ. ಈ ಮೂರು ಪಟ್ಟಿಗಳ ಪೈಕಿ ಅಂತಿಮವಾಗಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಸೋಮವಾರದಿಂದಲೇ ದೆಹಲಿಯಲ್ಲಿ ಇರುವ ಸಿಎಂ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಕೂಡ ದೆಹಲಿಯಲ್ಲೇ ಇದ್ದಾರೆ. ಆದರೆ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಬೇಕಿರುವ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಅವರ ಭೇಟಿಗೆ ಈವರೆಗೂ ಸಮಯ ಸಿಕ್ಕಿಲ್ಲ.

ರಾಹುಲ್ ಗಾಂಧಿ ಸಮಯ ಸಿಗದಿರಲು ಕಾರಣವೇನು?

ರಾಹುಲ್ ಗಾಂಧಿ ನೀಟ್ ಪ್ರತಿಭಟನೆ ಹಿನ್ನೆಲೆಯಲ್ಲಿ ವ್ಯಸ್ತರಾಗಿರುವುದರಿಂದ ಸಭೆ ವಿಳಂಬವಾಗಿದೆ ಎನ್ನಲಾಗಿದೆ. ನಿನ್ನೆ ಸಚಿವರ ಪಟ್ಟಿ ಅಂತಿಮವಾಗಬಹುದು, ಇಂದೇ ಪ್ರಮಾಣವಚನ ನಡೆಯಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಮತ್ತೆ ವಿಳಂಬವಾಗಿದೆ. ಇದೀಗ ರಾಹುಲ್ ಗಾಂಧಿ ಅವರ ಸಂದೇಶಕ್ಕಾಗಿ ಡಿ.ಕೆ.ಶಿವಕುಮಾರ್ ಕಾಯುತ್ತಿದ್ದಾರೆ. ಸಮಯ ಸಿಕ್ಕರೆ ಸಭೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಿ ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆ ಇದೆ.

ನಾಳೆ ಪ್ರಮಾಣವಚನಕ್ಕೆ ಸಿದ್ಧತೆ?

ಸಚಿವರ ಪಟ್ಟಿ ಇನ್ನೂ ಅಂತಿಮವಾಗದಿದ್ದರೂ ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ಧತೆ ಮುಂದುವರಿದಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಈ ಹಿಂದೆ ಎರಡು ಬಾರಿ ಪ್ರಮಾಣವಚನದ ಕುರಿತು ಲೋಕಭವನಕ್ಕೆ ಮಾಹಿತಿ ನೀಡಲಾಗಿತ್ತು. ಆದರೆ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು. ಇದೀಗ ಮೂರನೇ ಬಾರಿಗೆ ಮಾಹಿತಿ ರವಾನಿಸಲಾಗಿದ್ದು, ಶುಕ್ರವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಸಲು ಸಮಯ ನಿಗದಿಪಡಿಸಲಾಗಿದೆ.

ಲೋಕಭವನದಲ್ಲಿ ಶಾಮಿಯಾನ ಹಾಗೂ ಟೆಂಟ್ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಬುಧವಾರ ಪೊಲೀಸ್ ಅಧಿಕಾರಿಗಳೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆಸಿ, ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಬಗ್ಗೆ ಪರಿಶೀಲಿಸಿದ್ದಾರೆ.

ಜಮೀರ್ ಮುಖದಲ್ಲಿ ಮಂದಹಾಸ: ಸಿಗುತ್ತಾ ಗುಡ್‌ನ್ಯೂಸ್?

ಹೈಕಮಾಂಡ್‌ನ ತುರ್ತು ಬುಲಾವ್ ಮೇರೆಗೆ ಬುಧವಾರ ದೆಹಲಿಗೆ ತೆರಳಿದ್ದ ಜಮೀರ್ ಅಹ್ಮದ್ ಸಂಜೆ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ತರಾತುರಿಯಲ್ಲಿ ಕಾರು ಹತ್ತಿ ತೆರಳಿದ ಜಮೀರ್ ಅವರ ಮುಖದಲ್ಲಿದ್ದ ಮಂದಹಾಸವೂ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಹೈಕಮಾಂಡ್‌ನಿಂದ ಸಚಿವ ಸ್ಥಾನದ ಕುರಿತು ಗುಡ್‌ನ್ಯೂಸ್ ಸಿಕ್ಕಿದೆಯೇ ಎಂಬ ಮಾತುಗಳು ಕೇಳಿಬರುತ್ತಿವೆ.

ಸಂಪುಟ ವಿಸ್ತರಣೆ ವಿಳಂಬಕ್ಕೆ ವಿಪಕ್ಷಗಳ ಟೀಕೆ

ಇತ್ತ ಸಂಪುಟ ವಿಸ್ತರಣೆಗಾಗಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟಿರುವ ವಿಚಾರವನ್ನೇ ಮುಂದಿಟ್ಟುಕೊಂಡು ವಿಪಕ್ಷ ನಾಯಕರು ಸರ್ಕಾರದ ವಿರುದ್ಧ ಟೀಕಾ ಪ್ರಹಾರ ಮಾಡಿದ್ದಾರೆ. ರಾಜ್ಯದಲ್ಲಿ ಬರಗಾಲ ಹಾಗೂ ರೈತರ ಸಮಸ್ಯೆಗಳಿರುವಾಗ ಮುಖ್ಯಮಂತ್ರಿ ದೆಹಲಿಯಲ್ಲಿ ಸಂಪುಟ ವಿಸ್ತರಣೆಯ ಕಸರತ್ತಿನಲ್ಲಿ ತೊಡಗಿದ್ದಾರೆ ಎಂದು ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ

ಒಟ್ಟಿನಲ್ಲಿ, ಆಗಸ್ಟ್ 8ರಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಖಾಲಿ ಇರುವ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯ ಕಾಂಗ್ರೆಸ್ ನಾಯಕತ್ವದ ಮೇಲೆ ಒತ್ತಡ ಹೆಚ್ಚಾಗಿದೆ. ಇಂದಾದರೂ ರಾಹುಲ್ ಗಾಂಧಿ ಅವರಿಂದ ಗ್ರೀನ್ ಸಿಗ್ನಲ್ ಸಿಗುತ್ತಾ? ಸಚಿವರ ಪಟ್ಟಿ ಅಂತಿಮವಾಗುತ್ತಾ? ನಾಳೆ ಪ್ರಮಾಣವಚನ ನಡೆಯುತ್ತಾ? ಎಂಬುದಕ್ಕೆ ಮುಂದಿನ ಬೆಳವಣಿಗೆಗಳೇ ಉತ್ತರ ನೀಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಂದಿನ ರಾಶಿ ಫಲ: ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ? – Kannada News | Dr. Basavaraj Gurujis Horoscope: Zodiac Sign Effects on 30.07.2026

ಬೆಂಗಳೂರು, ಜು.30: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 30, ಗುರುವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ದಕ್ಷಿಣಾಯನ ಆಷಾಢ ಮಾಸದಲ್ಲಿ ಶ್ರವಣಾ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಬಾಲವಕರಣ ಇರಲಿದೆ. ಇಂದು ಮಧ್ಯಾಹ್ನ 2 ಗಂಟೆಯಿಂದ 3 ಗಂಟೆ 35 ನಿಮಿಷದವರೆಗೆ ರಾಹುಕಾಲ ಇರಲಿದ್ದು, ಮಧ್ಯಾಹ್ನ 12 ಗಂಟೆ 25 ನಿಮಿಷದಿಂದ 1 ಗಂಟೆ 59 ನಿಮಿಷದವರೆಗೆ ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಇರಲಿದೆ. ಗುರು ಪೂರ್ಣಿಮಾ ಆಚರಣೆಯ ನಂತರದ ಈ ದಿನವು ಗುರುವಿನ ಲಹರಿಗಳನ್ನು ಒಳಗೊಂಡಿರುತ್ತದೆ. ಅಲ್ಲದೆ, ಇದು ಅಂತರರಾಷ್ಟ್ರೀಯ ಸ್ನೇಹ ದಿನ ಕೂಡ ಆಗಿದ್ದು, ಬಾಲಗಂಗಾಧರ ತಿಲಕರ ಪುಣ್ಯದಿನವೂ ಆಗಿದೆ. ರವಿಯು ಕರ್ಕಾಟಕ ರಾಶಿಯಲ್ಲೂ, ಚಂದ್ರನು ಮಕರ ರಾಶಿಯ ಶ್ರವಣಾ ನಕ್ಷತ್ರದಲ್ಲೂ ಸಂಚರಿಸಲಿದ್ದಾನೆ. ಪ್ರತಿಯೊಂದು ರಾಶಿಗೆ ಡಾ. ಬಸವರಾಜ ಗುರೂಜಿ ಅವರು ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ, ಸಂಬಂಧಗಳು, ಪ್ರಯಾಣ, ಅದೃಷ್ಟ ಸಂಖ್ಯೆ, ಅದೃಷ್ಟ ಬಣ್ಣ ಮತ್ತು ದೈನಂದಿನ ಮಂತ್ರ ಜಪದ ಕುರಿತು ವಿಶೇಷ ಫಲಗಳನ್ನು ನೀಡಿದ್ದಾರೆ. ಈ ದಿನದಂದು ಪ್ರಯತ್ನದಿಂದ ಫಲ ದೊರೆಯುವುದನ್ನು ಒತ್ತಿಹೇಳಲಾಗಿದೆ. ಎಲ್ಲಾ ರಾಶಿಗಳಿಗೆ ಶುಭವಾಗಲಿ ಎಂದು ಗುರೂಜಿ ಹಾರೈಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಇಂದಿನ ವಾಯು ಗುಣಮಟ್ಟ: ಮಳೆಯಿಂದ ಶುದ್ಧವಾಯ್ತು ಕರ್ನಾಟಕದ ಗಾಳಿ; ನಿಮ್ಮ ಊರಿನಲ್ಲಿ ಗಾಳಿ ಎಷ್ಟರಮಟ್ಟಿಗೆ ಶುದ್ಧವಾಗಿದೆ ಗೊತ್ತಾ? – Kannada News | Bengaluru Air Quality Good: Monsoon Effect Brings Clean Air, Health Benefits State wide

ಬೆಂಗಳೂರು, ಜು.30 : ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ (AQI) ಒಟ್ಟಾರೆಯಾಗಿ ‘ಉತ್ತಮ’ (Good) ನಿಂದ ‘ಸಾಧಾರಣ’ (Moderate) ಮಟ್ಟದಲ್ಲಿದ್ದು, ಬಹುತೇಕ ಪ್ರದೇಶಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಮುಂಗಾರು ಮಳೆಯ ಪರಿಣಾಮವಾಗಿ ಗಾಳಿಯಲ್ಲಿನ ಧೂಳಿನ ಕಣಗಳು ಕಡಿಮೆಯಾಗಿದ್ದು, ಸಾರ್ವಜನಿಕರು ನಿರಾಳವಾಗಿ ಉಸಿರಾಡುವ ವಾತಾವರಣ ನಿರ್ಮಾಣವಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಪ್ರಮುಖ ಮಾಲಿನ್ಯಕಾರಕಗಳಾದ PM2.5 ಮತ್ತು PM10 ಕಣಗಳ ಪ್ರಮಾಣ ಅತ್ಯಂತ ಕೆಳಮಟ್ಟದಲ್ಲಿದೆ ಬಿಟಿಎಂ ಲೇಔಟ್, ಜಯನಗರ, ಕೆಂಗೇರಿ ಹಾಗೂ ವೈಟ್‌ಫೀಲ್ಡ್ ಭಾಗಗಳಲ್ಲಿ ವಾಯು ಸಂಚಾರ ಹೆಚ್ಚಿದ್ದರೂ ಗಾಳಿಯ ಗುಣಮಟ್ಟದಲ್ಲಿ ಯಾವುದೇ ಆತಂಕಕಾರಿ ಕುಸಿತ ಕಂಡುಬಂದಿಲ್ಲ. ವಾಯು ಗುಣಮಟ್ಟ ‘ಉತ್ತಮ’ ಮಟ್ಟದಲ್ಲಿರುವುದರಿಂದ ವಾಕಿಂಗ್, ಜಾಗಿಂಗ್ ಹಾಗೂ ಹೊರಾಂಗಣ ಕ್ರೀಡೆಗಳಿಗೆ ಸೂಕ್ತ ಸಮಯವಾಗಿದೆ. ಆಸ್ತಮಾ ಅಥವಾ ಅಲರ್ಜಿ ಸಮಸ್ಯೆ ಇರುವವರು ಕೈಗಾರಿಕಾ ಪ್ರದೇಶಗಳು ಹಾಗೂ ಹೆದ್ದಾರಿಗಳ ಬಳಿ ಚಲಿಸುವಾಗ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಒಳಿತು.

ಮಲೆನಾಡು ಮತ್ತು ಕರಾವಳಿ ಭಾಗ (ಶಿವಮೊಗ್ಗ, ಚಿಕ್ಕಮಗಳೂರು, ಕಾರವಾರ, ಉಡುಪಿ)ದಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆ ಹಾಗೂ ದಟ್ಟ ಅರಣ್ಯ ಪ್ರದೇಶಗಳಿಂದಾಗಿ ಗಾಳಿ ಅತ್ಯಂತ ಶುದ್ಧ ಹಾಗೂ ಸಾಗರ ಗಾಳಿಯ ಸಾಂದ್ರತೆಯಿಂದ ಉತ್ತಮವಾಗಿದೆ. ಉತ್ತರ ಕರ್ನಾಟಕ ಭಾಗ (ಹುಬ್ಬಳ್ಳಿ, ಬೆಳಗಾವಿ, ಬಳ್ಳಾರಿ, ಕಲಬುರಗಿ)ದಲ್ಲಿ ಕೈಗಾರಿಕಾ ವಲಯಗಳು ಮತ್ತು ಗಣಿ ಪ್ರದೇಶಗಳಿದ್ದಾಗ್ಯೂ, ಪ್ರಸ್ತುತ ಗಾಳಿಯ ವೇಗ ಮತ್ತು ಮಳೆಯ ಕಾರಣ ಧೂಳಿನ ಪ್ರಮಾಣ (PM10) ಗಣನೀಯವಾಗಿ ಕಡಿಮೆಯಾಗಿದೆ.

ಇದನ್ನೂ ಓದಿ: ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು

ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ನಗರಗಳು ರಾಜ್ಯದಲ್ಲೇ ಅತ್ಯಂತ ಉತ್ತಮ ಗುಣಮಟ್ಟದ ಗಾಳಿಯನ್ನು ಹೊಂದಿರುವ ನಗರಗಳ ಸಾಲಿನಲ್ಲಿವೆ. ದಕ್ಷಿಣ ಒಳನಾಡು (ಮೈಸೂರು, ಹಾಸನ, ದಾವಣಗೆರೆ, ಮಂಡ್ಯ)ನಲ್ಲಿ ಕೃಷಿ ಪ್ರಧಾನ ಹಾಗೂ ಹಸಿರು ವಲಯ ಹೆಚ್ಚಿರುವ ಈ ಭಾಗಗಳಲ್ಲಿ AQI 50ಕ್ಕಿಂತ ಕಡಿಮೆ ದಾಖಲಾಗಿದ್ದು, ಸಾರ್ವಜನಿಕ ಆರೋಗ್ಯಕ್ಕೆ ಯಾವುದೇ ಅಪಾಯವಿಲ್ಲ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:15 am, Thu, 30 July 26

Source link

Karnataka Weather Forecast: ಕರಾವಳಿಯಲ್ಲಿ ಮತ್ತೆ ಭಾರೀ ಗಾಳಿ ಮಳೆ, ಒಳನಾಡಿನಲ್ಲೂ ವರ್ಷಧಾರೆಯ ಮುನ್ಸೂಚನೆ – Kannada News | Karnataka Weather Forecast: Heavy Rain Alert for Coastal and Interior Districts on July 30 31

ಬಾಗಲಕೋಟೆಯ ಇಳಕಲ್​ನಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆImage Credit source: tv9

ಬೆಂಗಳೂರು, ಜುಲೈ 30: ಕರ್ನಾಟಕದಲ್ಲಿ ಮುಂಗಾರು (Monsoon Rain) ಚುರುಕಾಗಿದ್ದು, ಮುಂದಿನ ಎರಡು ದಿನಗಳಲ್ಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ (Weather Forecast) ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 30 ಮತ್ತು 31ರಂದು ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ ಎಂದೂ ಐಎಂಡಿ ತಿಳಿಸಿದೆ.

ಜುಲೈ 30ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಉತ್ತರ ಒಳನಾಡಿಗೂ ಮಳೆ ಮುನ್ಸೂಚನೆ

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಕೊಡಗಿನಲ್ಲಿ ಭಾರೀ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಜುಲೈ 31ರಂದು ಎಲ್ಲೆಲ್ಲಿ ಮಳೆಯಾಗಲಿದೆ?

ಜುಲೈ 31ರಂದು ಕೂಡ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದು.

ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ವರ್ಷಧಾರೆ ಸುರಿಯವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ಎಲ್ಲೆಲ್ಲಿ ಹೆಚ್ಚು ಮಳೆ?

ಐಎಂಡಿ ವರದಿ ಪ್ರಕಾರ, ಬುಧವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.

  • ಭಾಗಮಂಡಲ, ಕೊಡಗು: 8 ಸೆಂ.ಮೀ
  • ಗೇರುಸೊಪ್ಪ, ಉತ್ತರ ಕನ್ನಡ: 7 ಸೆಂ.ಮೀ
  • ಸುಳ್ಯ, ದಕ್ಷಿಣ ಕನ್ನಡ: 7 ಸೆಂ.ಮೀ
  • ಅಗುಂಬೆ, ಶಿವಮೊಗ್ಗ: 6 ಸೆಂ.ಮೀ
  • ಕೊಲ್ಲೂರು, ಉಡುಪಿ: 5 ಸೆಂ.ಮೀ
  • ಕೊಪ್ಪ, ಚಿಕ್ಕಮಗಳೂರು: 5 ಸೆಂ.ಮೀ
  • ಮಾಣಿ, ದಕ್ಷಿಣ ಕನ್ನಡ: 5 ಸೆಂ.ಮೀ

ಮುಂದಿನ ಎರಡು ದಿನಗಳಲ್ಲೂ ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದ್ದು, ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು: ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ – Kannada News | Bengaluru Attiguppe Metro Station Tree Collapse Injures Two

ಬೆಂಗಳೂರು, ಜುಲೈ 30: ಬೆಂಗಳೂರಿನಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಸಮೀಪ ಬುಧವಾರ ಸಂಜೆ ಬೃಹತ್ ಮರ ಧರೆಗುರುಳಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಗಾಳಿ ಮಳೆ ಇಲ್ಲದಿದ್ದರೂ ಕೂಡ ಮರ ಧರೆಗೆ ಉರುಳಿದೆ. ಇದರಿಂದಾಗಿ ಆ ಮರದ ಸ್ಥಿತಿಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಬಿಎ ಸಿಬ್ಬಂದಿ ಇಂತಹ ಘಟನೆಗಳ ಬಗ್ಗೆ ಗಂಭೀರವಾಗಿ ಗಮನ ಹರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುರಕ್ಷತೆ ಇಲ್ಲದ ಮರಗಳು ಮತ್ತು ರೆಂಬೆ ಕೊಂಬೆಗಳು ಬಿದ್ದು ಸಾಕಷ್ಟು ಮಂದಿ ಗಾಯಗೊಳ್ಳುತ್ತಿರುವುದು, ಕೆಲವು ಸಲ ಜೀವ ಹಾನಿಗಳಾಗುತ್ತಿರುವ ಘಟನೆ ಆಗಾಗ್ಗೆ ಸಂಭವಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಬಿಎ ಇಂತಹ ಮರಗಳನ್ನು ಗುರುತಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Ramayana Movie Trailer: ‘ರಾಮಾಯಣ’ ಟ್ರೇಲರ್​ನಲ್ಲಿ ರಾವಣನಾಗಿ ಅಬ್ಬರಿಸಿದ ನಟ ರಾಕಿಂಗ್ ಸ್ಟಾರ್ ಯಶ್

ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಹೆಚ್ಚು ನಿರೀಕ್ಷೆ ಮೂಡಿಸಿರುವ, ನಿರ್ದೇಶಕ ನಿತೇಶ್ ತಿವಾರಿ ಸಾರಥ್ಯದ ‘ರಾಮಾಯಣ’ ಸಿನಿಮಾದ ಅದ್ಭುತ ಟ್ರೇಲರ್ ಬಿಡುಗಡೆಯಾಗಿದೆ. ವಿಶ್ವದಾದ್ಯಂತ ಸಿನಿಮಾ ಪ್ರೇಕ್ಷಕರು ಮೂಗಿನ ಮೇಲೆ ಬೆರಳಿಡುವಂತೆ ಮಾಡಿದೆ. ಹಾಲಿವುಡ್ ಮಟ್ಟದ ದೃಶ್ಯ ವೈಭವ ಹಾಗೂ ಭಾರತದ ಶ್ರೇಷ್ಠ ಮಹಾಕಾವ್ಯದ ಭವ್ಯತೆಯನ್ನು ಮೇಳೈಸಿಕೊಂಡಿರುವ ಈ ಟ್ರೇಲರ್, ಗಮನ ಸೆಳೆಯುತ್ತಿದೆ.

ಕಣ್ಣು ಕೋರೈಸುವ ದೃಶ್ಯ ವೈಭವ ಹಾಗೂ ಅದ್ಭುತ ವಿಎಫ್​​ಎಕ್ಸ್

ಇಂದು (ಜುಲೈ 30) ಮುಂಜಾನೆ 4.15ಕ್ಕೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಟ್ರೇಲರ್‌ನ ಪ್ರತಿಯೊಂದು ಫ್ರೇಮ್ ಕೂಡ ಕಲಾತ್ಮಕವಾಗಿ ಮೂಡಿಬಂದಿದ್ದು, ಪ್ರೇಕ್ಷಕರನ್ನು ತ್ರೇತಾಯುಗದ ಕಾಲಕ್ಕೆ ಕರೆದೊಯ್ಯುತ್ತದೆ. ಅಯೋಧ್ಯೆಯ ಭವ್ಯ ಅರಮನೆಗಳು, ದಂಡಕಾರಣ್ಯದ ರಮಣೀಯ ಹಾಗೂ ರೌದ್ರ ಪರಿಸರ, ಚಿನ್ನದ ಲಂಕೆ ಕಣ್ಣಿಗೆ ಹಬ್ಬವನ್ನು ಉಂಟುಮಾಡುತ್ತವೆ. ಆಸ್ಕರ್ ಪ್ರಶಸ್ತಿ ವಿಜೇತ DNEG ಸಂಸ್ಥೆಯ ಅತ್ಯಾಧುನಿಕ ಗ್ರಾಫಿಕ್ಸ್ ತಂತ್ರಜ್ಞಾನ ಬಳಕೆಯಾಗಿರುವುದು ಪ್ರತಿಯೊಂದು ದೃಶ್ಯದಲ್ಲೂ ಎದ್ದು ಕಾಣುತ್ತಿದ್ದು, ಹಾಲಿವುಡ್‌ನ ‘ಅವತಾರ್’ ಅಥವಾ ‘ಲಾರ್ಡ್ ಆಫ್ ದಿ ರಿಂಗ್ಸ್’ ಚಿತ್ರಗಳ ದೃಶ್ಯ ಗುಣಮಟ್ಟಕ್ಕೆ ಸರಿಸಾಟಿಯಾಗಿ ನಿಲ್ಲುವಂತಿದೆ.

ಪಾತ್ರಧಾರಿಗಳ ರಾಜ ಗಾಂಭೀರ್ಯ

ಪ್ರಭು ಶ್ರೀರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಅವರ ಶಾಂತ, ದಿವ್ಯ ಹಾಗೂ ಗಂಭೀರ ನೋಟ ಪ್ರೇಕ್ಷಕರ ಮನ ಗೆದ್ದಿದ್ದರೆ, ಸೀತೆಯಾಗಿ ಸಾಯಿ ಪಲ್ಲವಿ ಅವರ ಸೌಮ್ಯತೆ ಕಣ್ಣು ತುಂಬಿಕೊಳ್ಳುವಂತಿದೆ. ಇನ್ನು ಲಂಕಾಧಿಪತಿ ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರ ಮತ್ತು ಗಡಸು ಧ್ವನಿ ಇಡೀ ಟ್ರೇಲರ್‌ನ ಹೈಲೈಟ್ ಆಗಿದ್ದು, ರೋಮಾಂಚನ ಉಂಟುಮಾಡುತ್ತದೆ. ಹನುಮಂತನಾಗಿ ಸನ್ನಿ ಡಿಯೋಲ್ ಮತ್ತು ಲಕ್ಷ್ಮಣನಾಗಿ ರವಿ ದುಬೆ ಅವರ ಎಂಟ್ರಿ ಟ್ರೇಲರ್‌ಗೆ ಮತ್ತಷ್ಟು ಮೆರುಗು ನೀಡಿದೆ.

ಹಿನ್ನೆಲೆ ಸಂಗೀತದ ಮಾಂತ್ರಿಕತೆ

ಚಿತ್ರಕ್ಕೆ ಆಸ್ಕರ್ ವಿಜೇತರಾದ ಎ.ಆರ್. ರೆಹಮಾನ್ ಮತ್ತು ಹಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಹ್ಯಾನ್ಸ್ ಝಿಮ್ಮರ್ ಜಂಟಿಯಾಗಿ ಸಂಗೀತ ನೀಡಿದ್ದು, ಟ್ರೇಲರ್‌ನ ಬ್ಯಾಕ್‌ಗ್ರೌಂಡ್ ಸ್ಕೋರ್ ಪ್ರತಿ ದೃಶ್ಯದ ತೀವ್ರತೆಯನ್ನು ದುಪ್ಪಟ್ಟು ಮಾಡಿದೆ. ಮೈನವಿರೇಳಿಸುವ ಶ್ಲೋಕಗಳು ಮತ್ತು ವಾದ್ಯಗಳ ನಾದವು ಸಿನಿಮಾದ ದಿವ್ಯತೆಗೆ ದನಿಯಾಗಿದೆ.

ಒಟ್ಟಾರೆಯಾಗಿ, ‘ರಾಮಾಯಣ’ ಕೇವಲ ಒಂದು ಸಿನಿಮಾವಲ್ಲ, ಬದಲಿಗೆ ಭಾರತೀಯ ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಮಹಾ ದೃಶ್ಯ ಕಾವ್ಯ ಎಂಬುದು ಟ್ರೇಲರ್ ಮೂಲಕ ಸಾಬೀತಾಗಿದೆ. ಸೋನಿ ಪಿಕ್ಚರ್ಸ್ ಸಹಯೋಗದೊಂದಿಗೆ ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾಗಿರುವ ಈ ಚಿತ್ರದ ಮೊದಲ ಭಾಗವು 2026ರ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ವಿಶ್ವಾದ್ಯಂತ ತೆರೆಕಾಣಲಿದೆ. ಪ್ರೇಕ್ಷಕರು ಈಗಾಗಲೇ ಚಿತ್ರಮಂದಿರದಲ್ಲಿ ಈ ದೃಶ್ಯ ವೈಭವವನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ.

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ, ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದ ಭವ್ಯ ಟ್ರೇಲರ್ ಬಿಡುಗಡೆಯಾಗಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ನಟನೆಯ ಈ ಸಿನಿಮಾ, ಹಾಲಿವುಡ್ ಮಟ್ಟದ ದೃಶ್ಯ ವೈಭವ ಹಾಗೂ ಅದ್ಭುತ ಸಂಗೀತದೊಂದಿಗೆ 2026ರ ದೀಪಾವಳಿಗೆ ಜಾಗತಿಕವಾಗಿ ತೆರೆಕಾಣಲು ಸಜ್ಜಾಗಿದೆ.

ಪ್ರಶ್ನೆ: ರಾಮಾಯಣ ರಿಲೀಸ್ ಯಾವಾಗ? 
ಉತ್ತರ: ದೀಪಾವಳಿ

ಪ್ರಶ್ನೆ: ರಾಮಾಯಣ ಟ್ರೇಲರ್ ರಿಲೀಸ್ ಯಾವಾಗ?
ಉತ್ತರ: ಜುಲೈ 30

ಪ್ರಶ್ನೆ: ರಾಮಾಯಣದಲ್ಲಿ ರಾವಣನ ಪಾತ್ರಧಾರಿ ಯಾರು?
ಉತ್ತರ: ಯಶ್

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಮಾತುಗಳು ಅನೇಕರ ಸಿಟ್ಟಿಗೆ ಕಾರಣವಾಗುವುದು.. – Kannada News | Daily Horoscope for July 30, 2026: Dakshinayana Greeshma season, Ashada Masa Krishna Paksha Thursday astrology Prediction

ಮೇಷ ರಾಶಿ:

ಯಾರ ಬೆಂಬಲಕ್ಕೂ ನೀವು ಸುಮ್ಮನೇ ಇರಲಾರಿರಿ. ಭೂಮಿಯ ಉತ್ಪನ್ನವನ್ನು ತಯಾರಿಸುತ್ತಿದ್ದರೆ ಉತ್ತಮ‌ ಲಾಭವಿದೆ. ಸಾಲಬಾಧೆಯಿಂದ ಕೆಟ್ಟ ಕೆಲಸವನ್ನು ಮಾಡಲು ಪ್ರೇರಣೆಯಾಗಬಹುದು. ಇದರಿಂದ ಇನ್ನಷ್ಟು ಇಂದು ಹೊಸ ಕೆಲಸಕ್ಕಾಗಿ ಮಾಡಲಾಗುತ್ತಿರುವ ಪ್ರಯತ್ನಗಳು ಶುಭವಾಗಲಿದೆ. ಇಲ್ಲವಾದರೆ ನಷ್ಟವಾಗಬಹುದು. ಯಾರದೋ ಉಪಕಾರಕ್ಕಾಗಿ ನೀವು ವೃಥಾ ತಿರುಗಾಡುವಿರಿ. ಬೇಡವೆನಿಸಿದ್ದನ್ನು ಯಾವ ಕಾಲಕ್ಕೂ ಪಡೆಯಲಾರಿರಿ.

ವೃಷಭ ರಾಶಿ:

ಇಂದು ನಂಬಿಕೆಯ ವಿಚಾರದಲ್ಲಿ ಮನಸ್ಸು ಮುರಿದುಹೋಗುವುದು. ಹಣಕಾಸನ್ನು ಭದ್ರವಾಗಿ ಇಟ್ಟುಕೊಳ್ಳಿ. ಮೋಸ ಹೋಗುವ ಸಾಧ್ಯತೆ ಇದೆ. ಇಂದು ವ್ಯವಹಾರದಲ್ಲಿ ಲಾಭ ಪಡೆಯುತ್ತಾರೆ. ಹಳೆಯ ಸ್ನೇಹಿತರಿಂದ ನಿಮಗೆ ಸಹಾಯ ಸಿಗಲಿದೆ.‌ ಹಿರಿಯರ ಜೊತೆ ನಿಷ್ಠುರ ಏರ್ಪಡಬಹುದು. ನಿಮ್ಮ ವೈಯಕ್ತಿಕ ಕಾರ್ಯಗಳು ಹಲವು ಹಾಗಯೇ ಉಳಿದುಕೊಂಡಿರುವುದು. ಸಾಲದ ಬಾಧೆಯು ನಿಮ್ಮ ಮನಸ್ಸನ್ನು ಚುಚ್ಚುವುದು. ನಿಮ್ಮನ್ನು ನೀವೇ ನೋಡಿಕೊಳ್ಳುವಿರಿ.

ಮಿಥುನ ರಾಶಿ:

ಸಂಗಾತಿಯ ಜೊತೆ ಕಲಹದ ಕಾರಣ ಎಲ್ಲವೂ ಅಸ್ತವ್ಯಸ್ತ ಆಗಬಹುದು.‌ ಇಂದು ನಿಮಗೆ ಕುಟುಂಬ ಜೊತೆ ಸಲುಗೆಯಿಂದ ಕಾಲವನ್ನು ಕಳೆಯುವ ಮನಸ್ಸಿರುವುದು. ಕಾರ್ಯದ ಒತ್ತಡದಿಂದ ಪೂರ್ತಿಯಾಗಿ ಆಗದೇ ಹೋಗಬಹುದು. ಈ‌ ಮೊದಲೇ ನೀವು ನಿಲ್ಲಿಸಿದ ಯಾ ಕೆಲಸವು ಇಂದು ಪೂರ್ಣವಾಗುವುದು. ಮುಂದೆ ನಿಮ್ಮ ಹಣಕ್ಕೆ ತೊಂದರೆ ಬರಲಿದೆ. ಭೂ ವ್ಯವಹಾರದಲ್ಲಿ ಕೈ ಹಾಕಲು ಹೋಗಲೇಬೇಡಿ. ಹಣವನ್ನು ಹೊಂದಿಸುವುದು ಇಂದು ಸುಲಭದ ಕೆಲಸವಲ್ಲ‌. ಅನ್ಯರ ಕಾರಣದಿಂದ ತಾಳ್ಮೆಯ ಕಟ್ಟೆ ಒಡೆಯಬಹುದು.

ಕರ್ಕಾಟಕ ರಾಶಿ:

ನೀವು ಹಣವನ್ನು ಖರ್ಚು ಮಾಡದೇ ಜಿಪುಣರಂತೆ ತೋರುವಿರಿ. ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಇಂದು ನಿಮ್ಮ ಮಾತಿನ ಮೃದುತ್ವವು ನಿಮ್ಮ ಗೌರವವನ್ನು ಹೆಚ್ಚಿಸುವುದು. ದುರಭ್ಯಾಸದಿಂದ ಗೊತ್ತಾಗದಂತೆ ಹಣವು ಖರ್ಚಾಗುವುದು. ಇಂದು ನಿಮ್ಮ ಸಹನೆಯ ಪರೀಕ್ಷೆಯೂ ಆಗಬಹುದು.‌ ಉತ್ತಮ ಫಲಿತಾಂಶ ಇದರಿಂದ ಹೊರಬರಲಿದೆ. ಬೇಕಾದವರನ್ನು ಮಾತಿನಿಂದ ದೂರ ಮಾಡಿಕೊಳ್ಳುವಿರಿ. ನಿಮ್ಮ ಅತಿಯಾದ ಮಾತು ಕಿರಿಕಿರಿ‌ ಮಾಡೀತು.

ಸಿಂಹ ರಾಶಿ:

ವಿದ್ಯಾಭ್ಯಾಸದಲ್ಲಿ ಪ್ರಗತಿಯ ಜೊತೆ ಶತ್ರುಗಳೂ ಉಂಟಾಗುವರು. ನಿಮ್ಮ ಮುಂಗೋಪವು ಸಂಗಾತಿಗೆ ಮುಜುಗರ ಆಗುವುದು. ಉದ್ಯೋಗದಿಂದ ಹೊರನಡೆಯುವ ಸಾಧ್ಯತೆ ಇದೆ. ಇಂದು ನೀವು ಜೀವನೋಪಾಯಕ್ಕೆ ತೋಚಿದ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವಿರಿ. ನಿಮ್ಮ ಕಾರ್ಯದ ವಿಳಂಬದಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗುವಿರಿ. ಧನ ಮತ್ತು ಮಾನಗಳನ್ನು ಕಳೆದುಕೊಳ್ಳಬೇಕಾಗುವುದು. ಸ್ಥಾನವು ಕೈ ತಪ್ಪುವುದು ಎಂಬ ಭೀತಿ ಇರಲಿದೆ.

ಕನ್ಯಾ ರಾಶಿ:

ಸ್ನೇಹಿತರ ಒತ್ತಾಯಕ್ಕೆ ಮೋಜಿಗಾಗಿ ಹಣವನ್ನು ಹಾಕಿ ಕಳೆದುಕೊಳ್ಳುವಿರಿ. ಮನೆಯ ಬಗ್ಗೆ ನಿಮಗೆ ಒಲವು ಕಡಮೆಯಾದೀತು. ಸಮಯಕ್ಕೆ ಸರಿಯಾಗಿ ನಿಮ್ಮ ಜವಾಬ್ದಾರಿಯನ್ನು ಮುಗಿಸುವಿರಿ. ನಿಮ್ಮ ಶತ್ರುಗಳ ಸಂಖ್ಯೆಯು ಇಂದು ಹೆಚ್ಚಾಗಬಹುದು. ರಾಜಕೀಯದಲ್ಲಿ ತೊಡಗಿರುವ ಜನರಿಗೆ ಒಳ್ಳೆಯ ಅನುಕೂಲವಿರಲಿದೆ. ಹಣದ ಅಪವ್ಯಯವು ಆಗದಂತೆ ನೋಡಿಕೊಳ್ಳಿ. ಮಾತಿನಲ್ಲಿ ಹಿಡಿತವಿದ್ದರೆ ನಿಮಗೆ ಇಂದು ಕ್ಷೇಮ.

ತುಲಾ ರಾಶಿ:

ಇಂದು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಏನಾದರೂ ಬಾಲಿಶವಾದದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ. ಇಂದು ಹಣದ ವಿಷಯದಲ್ಲಿ ಅನುಕೂಲವಿದೆ. ಮಕ್ಕಳಿಗೆ ಸಂಬಂಧಿಸಿದ ಶುಭ ಸುದ್ದಿಯು ಬರಲಿದೆ. ಸ್ನೇಹಿತನ ಭೇಟಿಯಿಂದ ಮನಸ್ಸು ತುಂಬಾ ಸಂತೋಷವಾಗುವುದು. ಅವರ ಎಲ್ಲಾ ಸಹಕಾರಗಳನ್ನು ತೆಗೆದುಕೊಳ್ಳಿ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಬಹುದು.

ವೃಶ್ಚಿಕ ರಾಶಿ:

ಆದಾಯ ಕಡಿಮೆ ಇದ್ದರೂ ನೆಮ್ಮದಿ ಇರಲಿದೆ. ಇಂದು ನಿಮ್ಮ ಮಾತು ಕಡಿಮೆ ಇದ್ದಷ್ಟೂ ನಿಮಗೂ ನಿಮ್ಮ ಕುಟುಂಬಕ್ಕೂ ಒಳ್ಳೆಯದು. ಅವಿವಾಹಿತರಿಗೆ ಮಾಂಗಲ್ಯ ಭಾಗ್ಯ ಕೂಡಿಬರಲಿದೆ. ಕ್ರೀಡೆಯಲ್ಲಿ ಜಯಗಳಿಸುವ ಸಾಧ್ಯತೆ ಇದೆ. ನಿಮ್ಮ ಹೂಡಿಕೆಯಿಂದ ವ್ಯರ್ಥ ಓಡಾಟವಾಗಬಹುದು. ಯಾರನ್ನೋ ಅವಲಂಬಿಸಿ ನೀವು ಕೆಲಸ ಮಾಡುವುದು ಬೇಡ. ಯಾವುದೇ ಕೆಲಸಕ್ಕೆ ಬೇರೆಯವರ ಮೇಲೆ ಅವಲಂಬಿತರಾಗಬೇಡಿ. ಉದ್ಯಮವು ದಿಕ್ಕು ತಪ್ಪದಂತೆ ನೋಡಿಕೊಳ್ಳಿ.

ಧನು ರಾಶಿ:

ಯಾರಿಗೂ ದ್ವೇಷ ಬರುವಂತಹ ಕೆಲಸವನ್ನು ಮಾಡುವುದು ಬೇಡ. ಇಂದು ಅನಿರೀಕ್ಷಿತವಾಗಿ ವೈವಾಹಿಕ ಸಂಬಂಧವು ಕೂಡಿ ಬರಬಹುದು. ಬಂದ ಯೋಗವನ್ನು ಬಿಡುವುದು ಬೇಡ. ಇಂದು ಏನನ್ನೂ ಸಾಲವಾಗಿ ಕೊಡುವುದು ಬೇಡ. ಅಧಿಕ ಖರ್ಚೇ ನಿಮ್ಮ ಅಶಾಂತಿಗೆ ಕಾರಣವಾಗುವುದು. ಮನೆ ಸದಸ್ಯರ ಮಧ್ಯೆ ಮೂಡಿದ್ದ ಭಿನ್ನಾಭಿಪ್ರಾಯಗಳು ದೂರವಾಗಿ ಸೌಹಾರ್ದತೆ ಮೂಡಲಿದೆ. ಸ್ವಂತ ಬುದ್ಧಿಯಿಂದ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ. ವ್ಯಾಪಾರಕ್ಕೆ ಯೋಗ್ಯವಾದ ಮಾತು ಇರಲಿ.

ಮಕರ ರಾಶಿ:

ಇಂದು ದೇವರ ಮೇಲೆ‌ ಸಂಪೂರ್ಣ ಭಾರ ಹಾಕಿ ನಿಮ್ಮ ಕಾರ್ಯವನ್ನು ಆರಂಭಿಸುವಿರಿ. ನಿಮ್ಮ ಅತ್ಯುತ್ಸಾಹಕ್ಕೆ ದೇಹವು ಸಹಕರಿಸದೇ ಇರಬಹುದು. ಮಕ್ಕಳ ತುಂಟಾಟಕ್ಕೆ ಅವರಿಗೆ ಬೈದು ಅವರ ದ್ವೇಷಕ್ಕೆ ಕಾರಣರಾಗುವಿರಿ. ಇಂದು ಕಲೆಗೆ ಸಂಬಂಧಿಸಿ ಮಾಡುತ್ತಿರುವ ಸುಖಾಂತ್ಯವಾಗುವುದು. ಪಾಲುದಾರರ ಜೊತೆಗಿನ ಒಪ್ಪಂದವು ಅಂತ್ಯವಾಗಬಹುದು. ಉದ್ಯಮದಲ್ಲಿ ನಿಮಗೆ ಪ್ರಗತಿ ಕಾಣಿಸುವುದು.

ಕುಂಭ ರಾಶಿ:

ಸಾಮಾಜಿಕ ಜಾಲತಾಣದಲ್ಲಿ ಸಮಯವನ್ನು ಹೆಚ್ಚು ಕಳೆಯಬಹುದು. ಇಂದು ಹಣಕಾಸಿನ ವಿಚಾರದಲ್ಲಿ ಮಾಡಿದ ಪ್ರಯತ್ನಗಳು ಸಫಲವಾಗುವುವು. ಕಲೆಗೆ ಸಂಬಂಧಿಸಿದವರಾಗಿದ್ದರೆ ದೂರದ ಊರಿಗೆ ಪ್ರಯಾಣ ಮಾಡುವಿರಿ. ಮರ್ಯಾದೆಯನ್ನು ಮೀರಿ‌ ನೀವು ವರ್ತಿಸುವುದು ಕಷ್ಟವಾಗುವುದು. ದೇಹಕ್ಕೆ ಆಯುಧದಿಂದ ಘಾಸಿಯಾಗಬಹುದು. ಆತುರದಲ್ಲಿ ಯಾವುದೇ ಕೆಲಸ ಮಾಡುವುದನ್ನು ಮುಖ್ಯ ಕಾರ್ಯಗಳೇ ಮರೆತುಹೋಗಬಹುದು.

ಮೀನ ರಾಶಿ:

ನಿಮ್ಮೊಳಗೆ ಅತೃಪ್ತಭಾವವು ಇರಲಿದೆ‌. ಇಂದು ಹೊಸ ಆದಾಯದ ಮೂಲಗಳು ಹುಟ್ಟಿಕೊಳ್ಳಬಹುದು. ಇದು ನಿಮಗೆ ಬಹಳ ದಿನಗಳ ಅನಂತರದ ಸಂತೋಷ ನೀಡುವ ಸಂಗತಿಯಾಗಲಿದೆ. ಇಂದು ಮಾಡುವ ಸ್ವಯಂ ಸೇವೆಯ ಕೆಲಸ ಹೆಮ್ಮೆಯಾಗುವುದು. ಸಾಮರಸ್ಯವನ್ನು ಉಂಟುಮಾಡುವುದು ಸುಲಭದ ಕಾರ್ಯವಲ್ಲ. ಯಾವುದೇ ಹೂಡಿಕೆ ಸಂಬಂಧಿತ ಯೋಜನೆಯ ಬಗ್ಗೆ ನಿಮಗೆ ಮಾಹಿತಿ ಬಂದರೆ, ಹಣವನ್ನು ಹೂಡುವುದು ಬೇಡ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಪುಷ್ಯಾ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಶೋಭನ, ಕರಣ : ತೈತಿಲ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:01 – 15:36, ಯಮಗಂಡ ಕಾಲ 06:06 – 07:41, ಗುಳಿಕ ಕಾಲ 09:16 – 10:51

-ಲೋಹಿತ್ ಹೆಬ್ಬಾರ್-8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:23 am, Thu, 30 July 26

Source link

Exit mobile version