ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, KPS ಶಾಲೆಗಳ ಶೀಘ್ರ ಆರಂಭ: ಸಚಿವ ಮಧು ಬಂಗಾರಪ್ಪ ಪ್ರಮುಖ ಘೋಷಣೆ – Kannada News | Karnataka Education Reforms: Free Textbooks, Shoes, 800 KPS Schools Planned

ಶಿವಮೊಗ್ಗ, ಆ.15: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಮೊದಲ ಮತ್ತು 2ನೇ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಶಾಲಾ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್ ವಿತರಣೆ ಹಾಗೂ 800 ಕೆಪಿಎಸ್ (KPS) ಶಾಲೆಗಳ ಸ್ಥಾಪನೆ ಕುರಿತು ಹಲವು ಮುಖ್ಯ ನಿರ್ಧಾರಗಳನ್ನು ಹಂಚಿಕೊಂಡರು.

ರಾಜ್ಯದ ಬಹುತೇಕ ಶಾಲೆಗಳಿಗೆ ಪಠ್ಯಪುಸ್ತಕಗಳ ಪೂರೈಕೆ ಪೂರ್ಣಗೊಂಡಿದೆ. ಪ್ರವೇಶಾತಿ ಹೆಚ್ಚು-ಕಡಿಮೆಯಾದ ಕಡೆಗಳಲ್ಲಿ ತಕ್ಷಣವೇ ಪಠ್ಯಪುಸ್ತಕ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ 1ನೇ ಮತ್ತು 2ನೇ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಸ್ಥಳೀಯವಾಗಿ ಕಳಪೆ ದರ್ಜೆಯ ಶೂಗಳನ್ನು ನೀಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಸಚಿವ ಸಂಪುಟದ ಒಪ್ಪಿಗೆಯೊಂದಿಗೆ ರಾಜ್ಯಮಟ್ಟದಲ್ಲೇ ಟೆಂಡರ್ ಕರೆಯಲಾಗಿದೆ. ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಅಳತೆಯಲ್ಲಿ ವ್ಯತ್ಯಾಸವಿದ್ದರೆ ತಕ್ಷಣವೇ ಬದಲಾಯಿಸಿಕೊಡಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

ಶಾಲಾ ಸೌಲಭ್ಯಗಳಲ್ಲಿ ಕಳಪೆತನ ಅಥವಾ ಮೋಸ ಎಸಗುವ ಟೆಂಡರ್‌ದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. 100% ಉಚಿತ ವಿದ್ಯುತ್, ಮಧ್ಯಾಹ್ನದ ಊಟ, ಹಾಲು, ಮೊಟ್ಟೆ, ಶೂ ಹಾಗೂ ಪಠ್ಯಪುಸ್ತಕ ತಲುಪಿಸಲು ಇಲಾಖೆ ಬದ್ಧವಾಗಿದೆ. 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (KPS) ಆರಂಭಿಸುವ ಕುರಿತು ಜೂನ್ 1ರಂದು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸುವುದಾಗಿ ತಿಳಿಸಿದ್ದರು. ಅಲೋಕೇಷನ್ ಮುಂದಿನ ವರ್ಷವಾದರೂ ಈ ವರ್ಷವೇ ಯೋಜನೆಗೆ ಚಾಲನೆ ನೀಡುವುದಾಗಿ ಭರವಸೆ ನೀಡಿದ್ದರು.

ಇದನ್ನೂ ಓದಿ: ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?

ಅಷ್ಟರಲ್ಲೇ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಿದ್ದು, ಮುಂದಿನ ಹಂತದಲ್ಲಿ ಈ ಯೋಜನೆಯ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದು ಚರ್ಚಿಸಲು ನಿರ್ಧರಿಸಲಾಗಿದೆ. ಯೋಜನೆಗೆ ಸಂಬಂಧಿಸಿದ ಪ್ಲಾನ್‌ಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಬಜೆಟ್ ಹೊಂದಾಣಿಕೆ ಆಧರಿಸಿ ಮುಂದಿನ ಹಂತದಲ್ಲಿ ನೇರವಾಗಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ಸಿದ್ಧತೆ ನಡೆಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಕೆಜಿಎಫ್ 3’ ಮಾಡದೆ ಹೊಸ ರಿಸ್ಕ್ ತಗೊಂಡಿದ್ದೇಕೆ? ಕೊನೆಗೂ ಮೌನ ಮುರಿದ ನಟ ಯಶ್ – Kannada News | Why Yash Chose Risk Over KGF 3 After Huge Success: Rocking Star Yash Clarifies  

‘ ರಾಕಿಂಗ್ ಸ್ಟಾರ್’ ಯಶ್ ಅವರು ‘ಕೆಜಿಎಫ್ 2’ ಚಿತ್ರದ ಮೂಲಕ ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಸೃಷ್ಟಿಸಿದವರು. ‘ಕೆಜಿಎಫ್ 2’ ಸಿನಿಮಾದ ಬೃಹತ್ ಯಶಸ್ಸಿನ ನಂತರ ಸುಲಭವಾಗಿ ಕೋಟಿ ಕೋಟಿ ಹಣ ಹಾಗೂ ಖ್ಯಾತಿ ತಂದುಕೊಡುವ ‘ಕೆಜಿಎಫ್ ಚಾಪ್ಟರ್ 3’ ಮಾಡಲು ಅವಕಾಶ ಇತ್ತು. ಆದರೆ, ಇದರ ಬದಲು, ಹೊಸ ಸಾಹಸಕ್ಕೆ ಕೈಹಾಕಿದ್ದೇಕೆ ಎಂಬ ಪ್ರಶ್ನೆಗೆ ಯಶ್ ಅವರು ನೀಡಿದ ಉತ್ತರ ಈಗ ಸಖತ್ ವೈರಲ್ ಆಗುತ್ತಿದೆ.

ಖ್ಯಾತ ನಿರೂಪಕ ರಜತ್ ಶರ್ಮಾ ಅವರ ‘ಆಪ್ ಕಿ ಅದಾಲತ್’ ಟಿವಿ ಶೋನಲ್ಲಿ ಭಾಗವಹಿಸಿದ್ದ ಯಶ್ ಅವರ ಬಳಿ, ‘ಕೆಜಿಎಫ್ 2 ನಂತಹ ದೊಡ್ಡ ಹಿಟ್ ಸಿಕ್ಕ ಮೇಲೂ ಕೆಜಿಎಫ್ 3 ಮಾಡಿ ಹಣ ಹಾಗೂ ಖ್ಯಾತಿಗಳಿಸದೆ ಹೊಸ ಸಿನಿಮಾ ಮಾಡುವ ರಿಸ್ಕ್ ಏಕ ತೆಗೆದುಕೊಂಡ್ರಿ?’ ಎಂದು ಪ್ರಶ್ನಿಸಲಾಯಿತು.

ಇದಕ್ಕೆ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ ಯಶ್, ‘ನನ್ನ ಸ್ವಂತ ಮನೆ ಬಿಟ್ಟು ಚಿತ್ರರಂಗಕ್ಕೆ ಬಂದೆನಲ್ಲ, ಅದಕ್ಕಿಂತ ದೊಡ್ಡ ರಿಸ್ಕ್ ನನಗೆ ಬೇರೊಂದಿಲ್ಲ. ನನಗೆ ಅಪಾಯಗಳ ನಡುವೆ, ರಿಸ್ಕ್ ತೆಗೆದುಕೊಂಡು ಜೀವನ ನಡೆಸುವುದ ಎಂದರೆ ತುಂಬಾ ಇಷ್ಟ’ ಎಂದು ಮಾಸ್‌ ಆಗಿ ಉತ್ತರಿಸಿದ್ದಾರೆ. ಯಶ್ ಅವರ ಈ ದಿಟ್ಟ ಉತ್ತರಕ್ಕೆ ಪ್ರೇಕ್ಷಕರಿಂದ ಭಾರೀ ಚಪ್ಪಾಳೆ ಹಾಗೂ ಮೆಚ್ಚುಗೆ ವ್ಯಕ್ತವಾಗಿದೆ.

ಯಶ್ ಅವರು ಪ್ರತಿ ಬಾರಿ ಹೊಸದನ್ನು ಮಾಡಬೇಕು ಎಂದು ಇಷ್ಟಪಡುತ್ತಾರೆ. ಕೆಜಿಎಫ್ ಬಳಿಕ ಅವರನ್ನು ರಾಕಿ ಎಂದು ಗುರುತಿಸುತ್ತಾರೆ. ಆ ಪಾತ್ರ ಮರೆಸುವ ರೀತಿಯಲ್ಲಿ ಒಂದು ಹೊಸ ಪಾತ್ರ ಮಾಡಬೇಕು ಎಂಬುದು ಅವರ ಬಯಕೆ. ಸಿನಿಮಾದಿಂದ ಸಿನಿಮಾಗೆ ಹೊಸ ಹೊಸ ಪಾತ್ರಗಳನ್ನು ಮಾಡಬೇಕು ಎಂಬುದು ಅವರ ಗುರಿ. ಅದನ್ನು ಸಾಧಿಸುವತ್ತ ಅವರು ಪ್ರಯತ್ನ ಯಾವಾಗಲೂ ಇರುತ್ತದೆ.

ಇದನ್ನೂ ಓದಿ: ‘ರಾವಣನ ಪಾತ್ರವನ್ನು ನನಗಿಂತ ಉತ್ತಮವಾಗಿ ಯಾರೂ ಅಭಿನಯಿಸಲು ಸಾಧ್ಯವಿಲ್ಲ’; ಯಶ್ 

ಯಶ್ ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾಗೆ ಗೀತು ಮೋಹನ್​ದಾಸ್ ನಿರ್ದೇಶನ ಇದೆ. ಕಿಯಾರಾ ಅಡ್ವಾಣಿ, ನಯನತಾರಾ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಈ ಬಾರಿಯೂ ಕೆಂಪು ಕೋಟೆಯ ಸ್ವಾತಂತ್ರ್ಯ ದಿನಾಚರಣೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಗೈರು; ಕಾರಣವೇನು? – Kannada News | Rahul Gandhi and Mallikarjun Kharge skip Red Fort Independence Day event for second year

ನವದೆಹಲಿ, ಆಗಸ್ಟ್ 15: ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ನೇತೃತ್ವದಲ್ಲಿ ನಡೆದ ಕೆಂಪು ಕೋಟೆಯ 80ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಈ ಬಾರಿಯೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗೈರುಹಾಜರಾಗಿದ್ದಾರೆ. ಕಳೆದ ವರ್ಷ ಕೂಡ ಈ ಇಬ್ಬರೂ ನಾಯಕರು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿರಲಿಲ್ಲ. 2024ರಲ್ಲಿ ಪ್ರೊಟೋಕಾಲ್ ಪಾಲಿಸದೆ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಸೀಟು ನೀಡಿದ್ದೇ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ. ಈ ನಡುವೆ, ಕಾಂಗ್ರೆಸ್ ನಾಯಕರ ವರ್ತನೆಯನ್ನು ಬಿಜೆಪಿ ಟೀಕಿಸಿದೆ.

ಶಿಷ್ಟಾಚಾರ ಪಾಲನೆಯಾಗಲಿಲ್ಲವೇ?:

ಮೂಲಗಳ ಪ್ರಕಾರ, ಸರಿಯಾದ ಶಿಷ್ಟಾಚಾರವನ್ನು (ಪ್ರೋಟೋಕಾಲ್) ಪಾಲಿಸದ ಕಾರಣಕ್ಕಾಗಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಇಬ್ಬರೂ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ. ಆಸನಗಳ ವ್ಯವಸ್ಥೆ ಮತ್ತು ಇತರ ಸಾಂಪ್ರದಾಯಿಕ ಶಿಷ್ಟಾಚಾರಗಳು ಅವರ ಹುದ್ದೆಗಳಿಗೆ ಅನುಗುಣವಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ. ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿತ್ತು. ಅಧಿಕೃತ ಆದ್ಯತಾ ಪಟ್ಟಿ ಪ್ರಕಾರ ಅವರ ಆಸನದ ವ್ಯವಸ್ಥೆಯನ್ನು ನಿರ್ಧರಿಸಲಾಗುವುದು ಎಂದು ರಕ್ಷಣಾ ಸಚಿವಾಲಯ ತಿಳಿಸಿತ್ತು. ರಾಷ್ಟ್ರಪತಿ ಸಚಿವಾಲಯ ಹೊರಡಿಸಿದ ಆದ್ಯತಾ ಪಟ್ಟಿಯ ಪ್ರಕಾರ, ಲೋಕಸಭೆಯ ವಿರೋಧ ಪಕ್ಷದ ನಾಯಕರು ಕೇಂದ್ರ ಸಂಪುಟ ಸಚಿವರಿಗೆ ಸಮಾನವಾದ ಶ್ರೇಣಿಯನ್ನು ಹೊಂದಿರುತ್ತಾರೆ.

ಇದನ್ನೂ ಓದಿ: PM Modi Speech: ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಕೋಚಿಂಗ್ ಕ್ಲಾಸ್; ಪ್ರಧಾನಿ ಮೋದಿ ಮಾಡಿದ ಪ್ರಮುಖ ಘೋಷಣೆಗಳಿವು

2024ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರ ಆಸನದ ವ್ಯವಸ್ಥೆಯ ಕುರಿತು ಉಂಟಾಗಿದ್ದ ವಿವಾದದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಕಳೆದ ವರ್ಷ ಹಾಗೂ ಈ ವರ್ಷ ಕಾರ್ಯಕ್ರಮಕ್ಕೆ ಆಗಮಿಸಿಲ್ಲ ಎನ್ನಲಾಗಿದೆ. 2024ರಲ್ಲಿ ಕ್ಯಾಬಿನೆಟ್ ದರ್ಜೆಯೊಂದಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿದ್ದ ರಾಹುಲ್ ಗಾಂಧಿ ಅವರಿಗೆ ಕೆಂಪು ಕೋಟೆಯಲ್ಲಿ 5ನೇ ಸಾಲಿನಲ್ಲಿ ಆಸನವನ್ನು ನೀಡಲಾಗಿತ್ತು. ಶಿಷ್ಟಾಚಾರದ ಪ್ರಕಾರ, ಯಾವುದೇ ಸಾಂಪ್ರದಾಯಿಕ ಮತ್ತು ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ವಿರೋಧ ಪಕ್ಷದ ನಾಯಕರಿಗೆ ಮೊದಲ ಸಾಲಿನಲ್ಲಿಯೇ ಆಸನ ನೀಡಲಾಗುತ್ತದೆ.

ಇದನ್ನು ತೀವ್ರವಾಗಿ ಟೀಕಿಸಿದ್ದ ಕಾಂಗ್ರೆಸ್, ಸರ್ಕಾರವು ವಿರೋಧ ಪಕ್ಷದ ನಾಯಕರ ಕಚೇರಿಗೆ ಅವಮಾನ ಮಾಡಿದೆ ಎಂದು ಆರೋಪಿಸಿತ್ತು. ಆ ಸಮಾರಂಭದಲ್ಲಿ ಭಾಗವಹಿಸಿದ್ದ ಒಲಿಂಪಿಕ್ ಕ್ರೀಡಾಪಟುಗಳಿಗೆ ಆದ್ಯತೆ ನೀಡಲು ಈ ಆಸನದ ವ್ಯವಸ್ಥೆ ಮಾಡಲಾಗಿತ್ತು ಎಂದು ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿತ್ತು. ಇದಾದ ಬಳಿಕ 2025ರ ಕೆಂಪು ಕೋಟೆಯ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೂ ರಾಹುಲ್ ಗಾಂಧಿ ಮತ್ತು ಖರ್ಗೆ ಗೈರಾಗಿದ್ದರು.

ಇದನ್ನೂ ಓದಿ: Saptadhara: ಸಪ್ತಧಾರಾ; ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ಮೋದಿ ಘೋಷಿಸಿದ ‘ವಿಕಸಿತ ಭಾರತ’ದ 7 ಸುಧಾರಣೆಗಳಿವು

ರಾಷ್ಟ್ರೀಯ ಸಾಂಪ್ರದಾಯಿಕ ಕಾರ್ಯಕ್ರಮಗಳಲ್ಲಿ ತಮ್ಮ ನಾಯಕರನ್ನು ನಡೆಸಿಕೊಳ್ಳುವ ರೀತಿ ಮತ್ತು ಶಿಷ್ಟಾಚಾರದ ಕುರಿತು ಕಾಂಗ್ರೆಸ್ ಪದೇ ಪದೇ ಕಳವಳ ವ್ಯಕ್ತಪಡಿಸುತ್ತಲೇ ಬಂದಿದೆ. ಈ ವರ್ಷದ ಗಣರಾಜ್ಯೋತ್ಸವದ ಆಚರಣೆಯಲ್ಲೂ ರಾಹುಲ್ ಗಾಂಧಿ ಮತ್ತು ಖರ್ಗೆ ಅವರಿಗೆ ಮೂರನೇ ಸಾಲಿನಲ್ಲಿ ಆಸನ ನೀಡಲಾಗಿತ್ತು ಎಂದು ಆರೋಪಿಸಿ ಕಾಂಗ್ರೆಸ್ ಎನ್​ಡಿಎ ಸರ್ಕಾರವನ್ನು ಟೀಕಿಸಿದೆ. ಆದರೆ 2025 ಮತ್ತು 2026ರ ಗಣರಾಜ್ಯೋತ್ಸವದ ಆಚರಣೆಯಲ್ಲಿನ ಆಸನ ವ್ಯವಸ್ಥೆಯನ್ನು ಆದ್ಯತಾ ಪಟ್ಟಿಗೆ ಅನುಗುಣವಾಗಿಯೇ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಪ್ರತಿಪಾದಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: 6ನೇ ತರಗತಿಯಿಂದ AI ಶಿಕ್ಷಣ, ಬೆಂಗಳೂರಿನಲ್ಲಿ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಮಹತ್ವದ ಘೋಷಣೆ – Kannada News | DK Shivakumars Independence Day Address: Focus on Youth Empowerment, AI, and Employment in Karnataka

ಬೆಂಗಳೂರು: ದೇಶದ 80ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ, ನವಭಾರತದ ನಿರ್ಮಾಣದ ದೂರದೃಷ್ಟಿಯೊಂದಿಗೆ ಕರ್ನಾಟಕದ ಯುವಜನತೆಯ ಶೈಕ್ಷಣಿಕ ಹಾಗೂ ತಾಂತ್ರಿಕ ಭವಿಷ್ಯ ರೂಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ಪರೀಕ್ಷಾ ಪದ್ಧತಿಯಲ್ಲಿ ಪಾರದರ್ಶಕತೆ ತರಲು ಪರಿಣಿತ ಅಧಿಕಾರಿ ಸಮಿತಿಯನ್ನು ರಚಿಸಲಾಗಿದೆ. ಇದು ಎರಡು ತಿಂಗಳಲ್ಲಿ ವರದಿ ಸಲ್ಲಿಸಲಿದ್ದು, ರಾಜ್ಯಕ್ಕೆ ಮಾದರಿಯಾಗುವ ಪರೀಕ್ಷಾ ಕ್ರಮ ಜಾರಿಗೊಳಿಸಲಿದೆ. ತಂತ್ರಜ್ಞಾನ ಆಧಾರಿತ ಹೊಸ ಯುಗಕ್ಕೆ ಸಿದ್ಧರಾಗಲು “ಎಐ ಅಕ್ಷರ ಅಭಿಯಾನ” ಮತ್ತು “ಕೋಡಿಂಗ್ ಗುರುಕುಲ” ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಆರನೇ ತರಗತಿಯಿಂದಲೇ ಎಐ ಶಿಕ್ಷಣ ಪರಿಚಯಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಬೆಂಗಳೂರಿನಲ್ಲಿ ದೇಶದ ಪ್ರಥಮ ಸರ್ಕಾರಿ ಸ್ವಾಮ್ಯದ ಎಐ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಸಿಎಂ ಮಹತ್ವದ ಘೋಷಣೆ ಮಾಡಿದ್ದಾರೆ.

 

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಳಗ್ಗೆ 4 ತುಳಸಿ ಎಲೆ ತಿಂದರೆ ಏನಾಗುತ್ತೆ? ಆರೋಗ್ಯಕ್ಕೆ ನಿಜಕ್ಕೂ ಇಷ್ಟೊಂದು ಪ್ರಯೋಜನಗಳಿವೆಯೇ? – Kannada News | Tulsi Leaves in the Morning: What Science and Ayurveda Say About Their Benefits

ಭಾರತೀಯರ ಮನೆಗಳಲ್ಲಿ ತುಳಸಿಗೆ ವಿಶೇಷ ಸ್ಥಾನವಿದೆ. ಧಾರ್ಮಿಕ ಮಹತ್ವದ ಜೊತೆಗೆ ತುಳಸಿಯನ್ನು ಹಲವು ವರ್ಷಗಳಿಂದ ಸಾಂಪ್ರದಾಯಿಕ ಆರೋಗ್ಯ ಪದ್ಧತಿಗಳಲ್ಲಿಯೂ ಬಳಸಲಾಗುತ್ತಿದೆ. ತುಳಸಿ ಎಲೆಗಳಲ್ಲಿ ವಿವಿಧ ಸಸ್ಯ ಸಂಯುಕ್ತಗಳು ಮತ್ತು ಉತ್ಕರ್ಷಣ ನಿರೋಧಕ ಗುಣಗಳಿರುವುದರಿಂದ ಜೀರ್ಣಕ್ರಿಯೆ, ರೋಗನಿರೋಧಕ ಶಕ್ತಿ ಹಾಗೂ ಒತ್ತಡ ಕಡಿಮೆ ಮಾಡಿಕೊಳ್ಳಲು ಇದು ಸಹಾಯಕವಾಗಬಹುದು ಎಂದು ಹೇಳಲಾಗುತ್ತದೆ. ಆದರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 4 ತುಳಸಿ ಎಲೆ ತಿಂದರೆ ಎಲ್ಲಾ ಕಾಯಿಲೆಗಳು ದೂರವಾಗುತ್ತವೆ ಎಂಬುದನ್ನು ವೈಜ್ಞಾನಿಕವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಇದರಿಂದ ಕೆಲವು ಆರೋಗ್ಯ ಪ್ರಯೋಜನಗಳು ಸಿಗುವುದರಿಂದ ಇದನ್ನು ಉಪಯೋಗ ಮಾಡಬಹುದು.

ತುಳಸಿಯಲ್ಲಿ ಏನೆಲ್ಲಾ ಪೋಷಕಾಂಶಗಳಿವೆ?

ಸಾಮಾನ್ಯವಾಗಿ ತುಳಸಿ ಎಲೆಗಳಲ್ಲಿ ವಿಟಮಿನ್‌ಗಳು, ಖನಿಜಾಂಶಗಳು ಹಾಗೂ ಯೂಜೆನಾಲ್ (Eugenol) ಸೇರಿದಂತೆ ಹಲವು ಸಸ್ಯ ಸಂಯುಕ್ತಗಳು ಕಂಡುಬರುತ್ತವೆ. ಇವುಗಳಲ್ಲಿರುವ ಆಂಟಿಆಕ್ಸಿಡೆಂಟ್ ಗುಣಗಳು ದೇಹದ ಒಟ್ಟಾರೆ ಆರೋಗ್ಯಕ್ಕೆ ಬೆಂಬಲ ನೀಡಬಹುದು. ಆದರೆ ತುಳಸಿಯನ್ನು ಯಾವುದೇ ಕಾಯಿಲೆಗೆ ವೈದ್ಯಕೀಯ ಚಿಕಿತ್ಸೆಯ ಪರ್ಯಾಯವಾಗಿ ಬಳಸಬಾರದು.

ಜೀರ್ಣಕ್ರಿಯೆಗೆ ಸಹಾಯವಾಗುತ್ತದೆಯೇ?

ಸಾಂಪ್ರದಾಯಿಕವಾಗಿ ತುಳಸಿಯನ್ನು ಜೀರ್ಣಕ್ರಿಯೆಗೆ ಬಳಸಲಾಗುತ್ತದೆ. ಕೆಲವರಿಗೆ ಇದು ಹೊಟ್ಟೆಯ ಅಸ್ವಸ್ಥತೆ ಅಥವಾ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಸಹಾಯಕವಾಗಬಹುದು. ಆದರೆ ಮಲಬದ್ಧತೆ ಅಥವಾ ಅಜೀರ್ಣವನ್ನು ತುಳಸಿ ಮಾತ್ರದಿಂದಲೇ ಗುಣಪಡಿಸಬಹುದು ಎಂದು ಹೇಳಲು ಸಾಕಷ್ಟು ಪುರಾವೆಗಳಿಲ್ಲ.

ಕೆಮ್ಮು, ಶೀತ ಮತ್ತು ಉಸಿರಾಟದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆಯೇ?

ತುಳಸಿಯನ್ನು ಆಯುರ್ವೇದ ಮತ್ತು ಇತರ ಸಾಂಪ್ರದಾಯಿಕ ಪದ್ಧತಿಗಳಲ್ಲಿ ಕೆಮ್ಮು ಹಾಗೂ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳಲ್ಲಿ ಬಳಸಲಾಗುತ್ತದೆ. ತುಳಸಿಯ ಕೆಲವು ಸಸ್ಯ ಸಂಯುಕ್ತಗಳು ಉತ್ಕರ್ಷಣ ನಿರೋಧಕ ಮತ್ತು ಉರಿಯೂತ ಕಡಿಮೆ ಮಾಡುವ ಗುಣಗಳನ್ನು ಹೊಂದಿರಬಹುದು. ಆದರೆ ಆಸ್ತಮಾ, ತೀವ್ರ ಕೆಮ್ಮು ಅಥವಾ ಸೋಂಕಿಗೆ ತುಳಸಿ ಕಷಾಯವನ್ನು ವೈದ್ಯಕೀಯ ಚಿಕಿತ್ಸೆಯ ಬದಲಿಗೆ ಬಳಸಬಾರದು.

ರೋಗನಿರೋಧಕ ಶಕ್ತಿಗೆ ತುಳಸಿ?

ತುಳಸಿಯಲ್ಲಿರುವ ಸಸ್ಯ ಸಂಯುಕ್ತಗಳು ದೇಹದ ಆಕ್ಸಿಡೇಟಿವ್ ಒತ್ತಡವನ್ನು ನಿಯಂತ್ರಿಸಲು ಸಹಾಯ ಮಾಡಬಹುದು ಎಂಬ ಅಧ್ಯಯನಗಳಿವೆ. ಇದರಿಂದ ತುಳಸಿ ಆರೋಗ್ಯಕರ ಆಹಾರದ ಒಂದು ಭಾಗವಾಗಬಹುದು.

ಒತ್ತಡ ಕಡಿಮೆ ಮಾಡಲು ಸಹಾಯವಾಗುತ್ತದೆಯೇ?

ತುಳಸಿಯನ್ನು ಸಾಂಪ್ರದಾಯಿಕವಾಗಿ ಒತ್ತಡ ನಿರ್ವಹಣೆಗೆ ಬಳಸಲಾಗುತ್ತದೆ. ಕೆಲವು ಸಂಶೋಧನೆಗಳು ತುಳಸಿಯ ಕೆಲವು ರೂಪಗಳು ಒತ್ತಡ ಮತ್ತು ಆತಂಕದ ಲಕ್ಷಣಗಳ ಮೇಲೆ ಪ್ರಯೋಜನಕಾರಿ ಪರಿಣಾಮ ಬೀರಬಹುದು ಎಂದು ಸೂಚಿಸಿವೆ. ಆದರೂ ಹೆಚ್ಚು ಪ್ರಮಾಣದಲ್ಲಿ ಸೇವಿಸುವುದಕ್ಕಿಂತ ಆಹಾರದ ಭಾಗವಾಗಿ ಮಿತವಾಗಿ ಬಳಸುವುದು ಸೂಕ್ತ.

ದಿನಕ್ಕೆ 4 ಎಲೆ ತಿನ್ನಬಹುದೇ?

ಆರೋಗ್ಯವಂತ ವ್ಯಕ್ತಿಯೊಬ್ಬರು ಆಹಾರದ ಭಾಗವಾಗಿ ಸ್ವಲ್ಪ ಪ್ರಮಾಣದಲ್ಲಿ ತಾಜಾ ತುಳಸಿ ಎಲೆಗಳನ್ನು ಸೇವಿಸುವುದು ಸಾಮಾನ್ಯವಾಗಿ ಸಮಸ್ಯೆಯಾಗುವುದಿಲ್ಲ. ಆದರೆ ಎಲ್ಲರೂ ಪ್ರತಿದಿನ ನಿರ್ದಿಷ್ಟವಾಗಿ 4 ಎಲೆ ತಿನ್ನಲೇಬೇಕು ಎಂಬ ವೈದ್ಯಕೀಯ ನಿಯಮವಿಲ್ಲ. ವಿಶೇಷವಾಗಿ ಗರ್ಭಿಣಿಯರು, ಸ್ತನ್ಯಪಾನ ಮಾಡಿಸುವವರು, ಯಾವುದೇ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವವರು ಅಥವಾ ನಿಯಮಿತವಾಗಿ ಔಷಧಿ ಸೇವಿಸುವವರು ತುಳಸಿಯನ್ನು ಔಷಧೀಯ ಪ್ರಮಾಣದಲ್ಲಿ ತೆಗೆದುಕೊಳ್ಳುವ ಮೊದಲು ವೈದ್ಯರ ಸಲಹೆ ಪಡೆಯುವುದು ಉತ್ತಮ.

ತುಳಸಿ ಆರೋಗ್ಯಕರ ಆಹಾರದ ಭಾಗವಾಗಬಹುದು. ಆದರೆ “4 ಎಲೆ ತಿಂದರೆ ಯಾವುದೇ ರೋಗ ಬರುವುದಿಲ್ಲ” ಎಂಬ ರೀತಿಯ ಹೇಳಿಕೆಗಳನ್ನು ನಂಬಬೇಡಿ. ನಿರಂತರ ಜ್ವರ, ಉಸಿರಾಟದ ತೊಂದರೆ, ತೀವ್ರ ಕೆಮ್ಮು, ಹೊಟ್ಟೆಯ ಸಮಸ್ಯೆ ಅಥವಾ ಬೇರೆ ಆರೋಗ್ಯ ಸಮಸ್ಯೆಗಳಿದ್ದರೆ ಸ್ವಯಂ ಚಿಕಿತ್ಸೆ ಮಾಡಿಕೊಳ್ಳದೆ ವೈದ್ಯರನ್ನು ಸಂಪರ್ಕಿಸುವುದು ಮುಖ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

“ಬೆದರಿಕೆ ಹಾಕೋದು ನನ್ನತ್ರ ನಡೆಯಲ್ಲ”: ಸುಪ್ರೀಂ ಆದೇಶದಂತೆ ಬಿಲ್ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ – Kannada News | New Public Space Permission Bill: Kharge Clarifies, No Ban on RSS/BJP – Based on SC

ಬೆಂಗಳೂರು, ಆ.15: ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಹಾಗೂ ಸಾರ್ವಜನಿಕ ಸ್ಥಳಗಳನ್ನು ಬಳಸಲು ಸರ್ಕಾರದ ಪೂರ್ವಾನುಮತಿ ಕಡ್ಡಾಯಗೊಳಿಸುವ ಮಸೂದೆ (Bill) ಕುರಿತಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಟಿವಿ9ಗೆ ನೀಡಿದ ಎಕ್ಸ್‌ಕ್ಲೂಸಿವ್ ಸಂದರ್ಶನದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆರ್‌ಎಸ್‌ಎಸ್ ಅಥವಾ ಬಿಜೆಪಿಯನ್ನು ನಿಷೇಧಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಅನ್ವಯವೇ ಈ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

“ಸರ್ಕಾರಿ ಜಾಗದಲ್ಲಿ ಏನೇ ಕಾರ್ಯಕ್ರಮ ಮಾಡಿದರೂ ಅಥವಾ ರಸ್ತೆಗಳನ್ನು ಬಳಸಬೇಕಾದರೂ ಅನುಮತಿ ಪಡೆಯುವುದು ಕಡ್ಡಾಯ. ನಾವು ಸಹ ರಸ್ತೆ ಬಳಸುವಾಗ ಅನುಮತಿ ಪಡೆಯುತ್ತೇವೆ. ಸಾರ್ವಜನಿಕ ಸ್ಥಳಗಳ ದುರುಪಯೋಗ ತಡೆಯಲು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಅನ್ವಯವೇ ಈ ಮಸೂದೆಯನ್ನು ತರಲಾಗುತ್ತಿದೆ.” ಎಂದು ಗೃಹಸಚಿವ ಹೇಳಿದ್ದಾರೆ.

“ಬಿಲ್‌ನಲ್ಲಿ ಎಲ್ಲಿಯೂ ನಿಷೇಧ (Ban) ಎಂಬ ಪದ ಬಳಸಿಲ್ಲ. ಯಾವುದೇ ಸಂಘ-ಸಂಸ್ಥೆಗಳ ಹೆಸರನ್ನು ಪ್ರತ್ಯೇಕವಾಗಿ ಉಲ್ಲೇಖಿಸಿಲ್ಲ. ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಬೇಕಾದರೂ ಅನುಮತಿ ಬೇಕು. ಹೀಗಿರುವಾಗ ಆರ್‌ಎಸ್‌ಎಸ್ ಅಥವಾ ಬಿಜೆಪಿಯನ್ನು ನಿಷೇಧಿಸಿದ್ದೇವೆ ಎಂದು ಯಾರು ಹೇಳಿದರು? ಬಿಲ್ ಅನ್ನು ಯಾರಾದರೂ ಸರಿಯಾಗಿ ಓದಿದ್ದಾರಾ? ಯಾರಾದರೂ ಧ್ವಜ ಹಿಡಿಯುವುದರಿಂದ ನಮಗೆ ಯಾವುದೇ ಅಭ್ಯಂತರವಿಲ್ಲ. ಆದರೆ ಯಾವುದೇ ವಸ್ತುವಿನಿಂದ ಸಮಾಜದಲ್ಲಿ ಪ್ರಚೋದನೆ ಸೃಷ್ಟಿಸಿದರೆ ಅಥವಾ ಪ್ರಚೋದನಕಾರಿ ಎಂದು ದೂರು ಬಂದರೆ ಖಂಡಿತವಾಗಿಯೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಿಂದನೆ ಅಥವಾ ಪ್ರಚೋದನೆ ಇಲ್ಲದಿದ್ದ ಮೇಲೆ ಅವರಿಗೆ ಏಕೆ ಭಯ?” ಎಂದು ಹೇಳಿದರು.

ಇದನ್ನೂ ಓದಿ: ಆರ್​ಎಸ್​​ಎಸ್ ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ: ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು

“ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದರೆ ನಾಶವಾಗುತ್ತೀರಿ’ ಎಂದಿರುವ ಪ್ರತಿಪಕ್ಷ ನಾಯಕ ಆರ್‌. ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, “ನನ್ನನ್ನು ನಾಶ ಮಾಡಬೇಕು ಎಂದಿದ್ದರೆ ಮಾಡಿ. ಆರ್‌ಎಸ್‌ಎಸ್‌ನ ರಹಸ್ಯವೇನು? ಕಾನೂನಾತ್ಮಕವಾಗಿ ಮಾತನಾಡಿದರೆ ನಾಶ ಮಾಡುತ್ತೀರಾ? ಆರ್‌ಎಸ್‌ಎಸ್ ಕಾನೂನಿಗಿಂತ ಮೀರಿದೆಯಾ? ಬೆದರಿಕೆ ಹಾಕಿ ಹೆದರಿಸುವುದು ನನ್ನ ಹತ್ತಿರ ನಡೆಯುವುದಿಲ್ಲ. ಕೊಲೆ ಮಾಡುತ್ತೀರಾ ಅಷ್ಟೇ ತಾನೇ?” ಎಂದು ಖಾರವಾಗಿ ಪ್ರಶ್ನಿಸಿದರು. ವಿಧೇಯಕದಲ್ಲಿ ಏನಾದರೂ ಲೋಪಗಳಿದ್ದರೆ ಸದನದಲ್ಲಿ ಬಂದು ಚರ್ಚಿಸಿ. ಸರಿಯಿಲ್ಲ ಎಂದರೆ ತಿದ್ದುಪಡಿ ಮಾಡಿಕೊಳ್ಳುತ್ತೇವೆ. ರಾಜ್ಯಪಾಲರು ತಮ್ಮ ಹಕ್ಕನ್ನು ಚಲಾಯಿಸುತ್ತಾರೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ.” ಎಂದು ಹೇಳಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Independence day 2026: ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು? – Kannada News | Independence Day 2026: CM Dk Shivakumar Highlights Development Initiatives

ಬೆಂಗಳೂರು, ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಮಾಡಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಅಭಿವೃದ್ಧಿ ಯೋಜನೆಗಳು ಮತ್ತು ಸರ್ಕಾರದ ಪ್ರಗತಿಯ ಕುರಿತು ಪ್ರಮುಖ ಭಾಷಣ ಮಾಡಿದ್ದಾರೆ. ಕೃಷಿ, ಸಾಮಾಜಿಕ ಕಲ್ಯಾಣ, ಆರೋಗ್ಯ, ಜಲ ಭದ್ರತೆ ಮತ್ತು ಮೂಲಸೌಕರ್ಯ ವಲಯಗಳಲ್ಲಿ ರಾಜ್ಯ ಸರ್ಕಾರವು ಕೈಗೊಂಡಿರುವ ಹತ್ತು ಹಲವು ಉಪಕ್ರಮಗಳನ್ನು ಅವರು ವಿವರಿಸಿದ್ದಾರೆ.

ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿ, 44,631 ಕೋಟಿ ರೂಪಾಯಿಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಡಲಾಗಿದೆ. 119 ಏಕಲವ್ಯ ಮಾದರಿ ವಸತಿ ಶಾಲೆಗಳ ಮೂಲಕ ಬುಡಕಟ್ಟು ಜನಾಂಗದ ಮಕ್ಕಳಿಗೆ ಶಿಕ್ಷಣದ ಅವಕಾಶ ಒದಗಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲೂ ಮಹತ್ವದ ಹೆಜ್ಜೆ ಇಡಲಾಗಿದ್ದು, ಮಾತೃ ಮರಣ ಪ್ರಮಾಣ ಶೇಕಡಾ 69ರಷ್ಟು ಇಳಿಕೆಯಾಗಿದೆ. ಜಲ ಭದ್ರತೆಗೆ ಪ್ರಥಮ ಆದ್ಯತೆ ನೀಡಲಾಗಿದ್ದು, 16,000 ಕೋಟಿ ರೂಪಾಯಿ ಮೊತ್ತದ 112 ಪ್ರಮುಖ ಜಲಾಶಯ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿಯಲ್ಲಿ 1663 ಕಿಲೋಮೀಟರ್ ರಾಜ್ಯ ಹೆದ್ದಾರಿಗಳು ಮತ್ತು 3000 ಕಿಲೋಮೀಟರ್ ಜಿಲ್ಲಾ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಇದು ಕರ್ನಾಟಕವನ್ನು ಪ್ರಗತಿಯ ಪಥದಲ್ಲಿ ಸಾಗಿಸಲು ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ ಎಂದು ಸಿಎಂ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಟನೆಯಲ್ಲಿ ಸಕ್ಸಸ್ ಕಂಡರೂ ಬೇಸರದಲ್ಲಿ ನಿರ್ದೇಶಕ ಲೋಕೇಶ್ ಕನಗರಾಜ್: ಯಾಕೆ ಗೊತ್ತಾ? – Kannada News | Lokesh Kanagaraj Thrilled with DC Success But Upset Over Tamil Nadu Response

ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ತಮ್ಮ ನಟನೆಯ ಚೊಚ್ಚಲ ಸಿನಿಮಾ ‘ಡಿ ಸಿ’ (DC) ಯಶಸ್ಸಿನ ಅಲೆಯಲ್ಲಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಅನಿರೀಕ್ಷಿತ ಗೆಲುವು ಸಾಧಿಸುತ್ತಿದ್ದು, ಲೋಕೇಶ್ ಅವರ ನಟನೆಯನ್ನು ಪ್ರೇಕ್ಷಕರು ಹಾಗೂ ಚಿತ್ರರಂಗದ ಪ್ರಮುಖರು ಕೊಂಡಾಡುತ್ತಿದ್ದಾರೆ. ಈ ಮೊದಲು ನಿರ್ದೇಶಕರಾಗಿ ಮೆಚ್ಚುಗೆ ಪಡೆದಿದ್ದ ಅವರು, ಈಗ ನಟನೆಯಲ್ಲೂ ಭೇಷ್ ಎಂದಿದ್ದಾರೆ. ಆದರೂ ಸಿನಿಮಾ ಬಗ್ಗೆ ಅವರಿಗೆ ಬೇಸರ ಇದೆ.

‘ಡಿಸಿ’ ಸಿನಿಮಾಗೆ ತೆಲುಗು ರಾಜ್ಯಗಳಲ್ಲಿ ಈ ಸಿನಿಮಾಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಬಾಕ್ಸ್ ಆಫೀಸ್ ಕಲೆಕ್ಷನ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ತೆಲುಗು ಅವತರಣಿಕೆಯ ಕಲೆಕ್ಷನ್ ಶೀಘ್ರದಲ್ಲೇ ತಮಿಳುನಾಡಿನ ಗಳಿಕೆಯನ್ನೇ ಹಿಂದಿಕ್ಕುವ ಸಾಧ್ಯತೆಯಿದೆ ಎಂದು ಟ್ರೇಡ್ ಪಂಡಿತರು ವಿಶ್ಲೇಷಿಸಿದ್ದಾರೆ.

ಸಿನಿಮಾಗೆ ಸಿಗುತ್ತಿರುವ ಈ ದೊಡ್ಡ ಯಶಸ್ಸು ಲೋಕೇಶ್ ಅವರಿಗೆ ತೀವ್ರ ಸಂತಸ ತಂದಿದೆಯಾದರೂ, ಮತ್ತೊಂದೆಡೆ ಅವರಿಗೆ ಸಣ್ಣದೊಂದು ಬೇಸರವೂ ಇದೆ ಎನ್ನಲಾಗಿದೆ. ತಮ್ಮ ತೃಪ್ತಿಕರ ನಟನೆಯ ಹೊರತಾಗಿಯೂ ತಮಿಳುನಾಡಿನಲ್ಲಿ ಸಿನಿಮಾಗೆ ಇನ್ನಷ್ಟು ಭರ್ಜರಿ ಹಾಗೂ ಬೃಹತ್ ಮಟ್ಟದ ಪ್ರತಿಕ್ರಿಯೆ ಸಿಗಬಹುದು ಎಂದು ಅವರು ನಿರೀಕ್ಷಿಸಿದ್ದರು. ಆದರೆ ಅಲ್ಲಿ ಅಂದುಕೊಂಡ ಮಟ್ಟದ ರೆಸ್ಪಾನ್ಸ್ ಸಿಗದೇ ಇರುವುದು ಅವರಿಗೆ ಕೊಂಚ ನಿರಾಸೆ ತಂದಿದೆ ಎಂಬ ವರದಿಗಳು ಹರಿದಾಡುತ್ತಿವೆ.

ಇದನ್ನೂ ಓದಿ: ಹೀರೋ ಆಗಿ ಗೆದ್ದ ನಿರ್ದೇಶಕ ಲೋಕೇಶ್ ಕನಗರಾಜ್; ಮೊದಲ ದಿನ ಭರ್ಜರಿ ಗಳಿಕೆ

ಇನ್ನು ಈ ಚಿತ್ರದಲ್ಲಿ ನಟಿ ವಾಮಿಕಾ ಗಬ್ಬಿ ತಮ್ಮ ಅದ್ಭುತ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರೆ, ಅನಿರುದ್ಧ್ ರವಿಚಂದರ್ ಅವರ ಎನರ್ಜಿಟಿಕ್ ಸಂಗೀತ ಸಿನಿಮಾದ ಹೈಲೈಟ್‌ಗಳಲ್ಲಿ ಒಂದಾಗಿ ಮೂಡಿಬಂದಿದೆ. ಲೋಕೇಶ್ ಅವರು ಸದ್ಯ ನಿರ್ದೇಶನದಲ್ಲಿ ಬ್ಯುಸಿ ಆಗಲಿದ್ದಾರೆ. ಹಲವು ಸೂಪರ್ ಹಿಟ್ ಸಿನಿಮಾಗಳಿಗೆ ಅವರು ಸೀಕ್ವೆಲ್ ಮಾಡಬೇಕಿದೆ. ಆ ಬಗ್ಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ ಎಂದರೂ ತಪ್ಪಾಗಲಾರದು. ಈ ಬಗ್ಗೆ ಶೀಘ್ರವೇ ಅಪ್​ಡೇಟ್ ಸಿಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಈದ್ಗಾ ಮೈದಾನದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಭಾಗಿ – Kannada News | Minister Zameer Ahmed Khan Attends 80th Independence Day Flag Hoisting at Bengalurus Idgah Maidan

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಅವರು ಭಾಗವಹಿಸಿದ್ದು, ಜೊತೆಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಅವರೂ ಉಪಸ್ಥಿತರಿದ್ದರು. ಎ.ಸಿ. ವಿಶ್ವನಾಥ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಶುಭ ಸಂದರ್ಭದಲ್ಲಿ, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲ ಗಣ್ಯರು, ಅಧಿಕಾರಿಗಳು ಮತ್ತು ಸಾರ್ವಜನಿಕರನ್ನು ಸ್ವಾಗತಿಸಲಾಯಿತು. 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಲಾಯಿತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ರಾಜ ರಾಜ ವರ್ಮ ಎಂದ ತುಕಾಲಿ ; ದೇವರಾಜ್ ಸ್ಟೈಲ್​ ಮಿಮಿಕ್ರಿ ಮಾಡಿದ ಸಂತೋಷ್ – Kannada News | Tukali Santhosh Mimics Dynamic Star Devaraj Iconic Varma Role in Kwatle Kitchen 2 Grand Finale

ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಕ್ವಾಟ್ಲೆ ಕಿಚನ್ ಸೀಸನ್ 2’ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ಬಂದು ತಲುಪಿದೆ. ಈ ಗ್ರಾಂಡ್ ಫಿನಾಲೆ ಸಂಚಿಕೆಯಲ್ಲಿ ಕಾಮಿಡಿ ಕಿಂಗ್ ತುಕಾಲಿ ಸಂತೋಷ್ ತಮ್ಮ ಅದ್ಭುತ ಮಿಮಿಕ್ರಿ ಹಾಗೂ ಕಾಮಿಡಿ ಟೈಮಿಂಗ್ ಮೂಲಕ ಇಡೀ ವೇದಿಕೆಯನ್ನು ನಗೆಗಡಲಿನಲ್ಲಿ ತೇಲಿಸಿದ್ದಾರೆ.

ದಿಗ್ಗಜ ನಟ ‘ಡೈನಾಮಿಕ್ ಸ್ಟಾರ್’ ದೇವರಾಜ್ ಅವರ ಐಕಾನಿಕ್ ‘ವರ್ಮ ರಾಜ ರಾಜ ವರ್ಮ’ ಮಿಮಿಕ್ರಿ ಮಾಡಿದ ತುಕಾಲಿ ಸಂತೋಷ್, ವೇದಿಕೆಯಲ್ಲಿದ್ದ ಸ್ಪರ್ಧಿಗಳು ಮತ್ತು ಜಡ್ಜಸ್‌ಗೆ ಸಖತ್ ಕಾಮಿಡಿ ಕೌಂಟರ್‌ಗಳನ್ನು ನೀಡಿದರು. ಕೈಯಲ್ಲಿ ಗುಲಾಬಿ ಹೂವು ಹಿಡಿದು ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಸಂಭಾಷಣೆ ಹೇಳುತ್ತಾ, ಕಾರ್ಯಕ್ರಮದಲ್ಲಿದ್ದ ಸೂರಜ್, ರಕ್ಷಿತಾ ಹಾಗೂ ವರ್ಮ ಅವರಿಗೆ ತಮಾಷೆಯಾಗಿ ರೇಗಿಸಿ ಎಲ್ಲರೂ ಹೊಟ್ಟೆ ಹುಣ್ಣಾಗುವಂತೆ ನಗುವಂತೆ ಮಾಡಿದ್ದಾರೆ. ಈ ತಮಾಷೆಯ ಸನ್ನಿವೇಶಕ್ಕೆ ಜಡ್ಜ್ ಸ್ಥಾನದಲ್ಲಿದ್ದ ಸೆಟ್‌ನಲ್ಲಿದ್ದ ಎಲ್ಲರೂ ಫುಲ್ ಫಿದಾ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version