Headlines

ಒಮಾನ್‌ ಗಲ್ಫ್‌ನತ್ತ ಭಾರತದ 6ಕ್ಕೂ ಹೆಚ್ಚು ಯುದ್ಧನೌಕೆ ರವಾನೆ: ಕೇಂದ್ರದ ದಿಢೀರ್ ನಿರ್ಧಾರಕ್ಕೆ ಇಲ್ಲಿದೆ ಕಾರಣ

ನವದೆಹಲಿ, ಬೆಂಗಳೂರು, ಮಾರ್ಚ್ 19: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಸೇನಾ ಸಂಘರ್ಷ (Iran-Israel Conflict) ಆರಂಭವಾಗಿ 20 ದಿನಗಳಾದರೂ ಉದ್ವಿಗ್ನತೆ ತಗ್ಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಯುದ್ಧದ ಪರಿಣಾಮ ಜಾಗತಿಕ ತೈಲ ಹಾಗೂ ಅನಿಲ ಸರಬರಾಜಿನ ಮೇಲೆ ಬೀರಿದ್ದು, ಅದರ ಪರಿಣಾಮವಾಗಿ ಕರ್ನಾಟಕದಲ್ಲೂ ಕಮರ್ಷಿಯಲ್ ಎಲ್‌ಪಿಜಿ (LPG) ಕೊರತೆ ಉಂಟಾಗಿ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಹೊರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ನೂರಾರು ತೈಲ ಹಾಗೂ ಅನಿಲ ಹಡಗುಗಳು ಅಲ್ಲಿ ಸಿಲುಕಿಕೊಂಡಿವೆ….

Read More

ಪುನೀತ್ ಹೆಸರಲ್ಲಿ ದುಡ್ಡು ಮಾಡ್ತಾರೆ ಎಂದವರಿಗೆ ಗಿಲ್ಲಿ ಸ್ಟೈಲ್​​ನಲ್ಲಿ ಉತ್ತರ ಕೊಟ್ಟ ಅನುಶ್ರೀ

ಆ್ಯಂಕರ್ ಅನುಶ್ರೀ ಅವರು (Anushree) ಪುನೀತ್ ರಾಜ್​​ಕುಮಾರ್ ಅವರ ದೊಡ್ಡ ಅಭಿಮಾನಿ. ಈ ಕಾರಣದಿಂದಲೇ ಅನುಶ್ರೀ ಅವರ ಯೂಟ್ಯೂಬ್ ಲೋಗೋದಲ್ಲಿ ಪುನೀತ್ ಫೋಟೋ ಸೇರಿಸಿಕೊಂಡಿದ್ದಾರೆ. ಪುನೀತ್ ನಿಧನದ ಬಳಿಕ ಅನುಶ್ರೀ ಸಾಕಷ್ಟು ಬಾರಿ ಬಿಕ್ಕಿ ಬಿಕ್ಕಿ ಅತ್ತಿದ್ದಿದೆ. ತಮ್ಮ ಮದುವೆಯಲ್ಲಿ ಪುನೀತ್ ಫೋಟೋ ಇಟ್ಟು ಅವರು ಪೂಜಿಸಿದ್ದರು. ಇದು ಪುನೀತ್ ಮೇಲೆ ಅವರಿಗೆ ಇರೋ ಪ್ರೀತಿಗೆ ಸಾಕ್ಷಿ. ಆದರೆ, ಕೆಲವರು ಇದನ್ನು ಟ್ರೋಲ್ ಮಾಡಿದ್ದು ಇದೆ. ಇದಕ್ಕೆ ಅನುಶ್ರೀ ಖಡಕ್ ಉತ್ತರ ನೀಡಿದ್ದಾರೆ. ಪುನೀತ್ ಅವರನ್ನು ಅನುಶ್ರೀ…

Read More

ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್, ಮಯಾಂಕ್ ಅಗರ್ವಾಲ್ – Kannada News | Devdutt Padikkal and Mayank Agarwal Smashed Century in VHT

ಅಹಮದಾಬಾದ್​ನ ರೈಲ್ವೇಸ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಕರ್ನಾಟಕ ತಂಡ ಬೃಹತ್ ಮೊತ್ತ ಪೇರಿಸಿದೆ. ಪುದುಚೇರಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ದೇವದತ್ ಪಡಿಕ್ಕಲ್ ಭರ್ಜರಿ ಆರಂಭ ಒದಗಿಸಿದ್ದರು. ಆರಂಭದಿಂದಲೇ ಉತ್ತಮ ಜೊತೆಯಾಟ ಪ್ರದರ್ಶಿಸಿದ ಈ ಜೋಡಿಯು ಮೊದಲ ವಿಕೆಟ್​ಗೆ ಪೇರಿಸಿದ್ದು ಬರೋಬ್ಬರಿ 228 ರನ್​ಗಳು. ಇದರ ನಡುವೆ 116 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6…

Read More

ಉದ್ಯಮಿ ಮನೆಯಲ್ಲಿ ದರೋಡೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಪ್ರಾಣ ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್

ಬೆಂಗಳೂರು, ಮಾರ್ಚ್​​ 08: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್​​ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿತ್ತು. ಈ ಪ್ರಕರಣವನ್ನು ಭೇದಿಸಿರುವ ಬ್ಯಾಡರಹಳ್ಳಿ ಪೊಲೀಸರು ಈ ಹಿಂದೆ ನಾಗೇಂದ್ರ ಹಾಗೂ ಬಚ್ಚನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ತನಿಖೆ ಮುಂದುವರಿದಾಗ ಅಸಲಿ ಸತ್ಯ ಬಯಲಾಗಿದ್ದು, ಪ್ರಕರಣದ ಹಿಂದಿನ ಮಾಸ್ಟರ್​​ ಮೈಂಡ್​​ ಹೆಸರು…

Read More

Gold Rates: ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 26: ಚಿನ್ನದ ಬೆಲೆ ಸತತ ಎರಡನೇ ಬಾರಿ ಹೆಚ್ಚಿದೆ. ನಿನ್ನೆ ಭರ್ಜರಿಯಾಗಿ ಏರಿದ್ದ ಬಂಗಾರದ ದರ (Gold Rates) ಇವತ್ತು ಗುರುವಾರ ಸ್ವಲ್ಪ ಮಟ್ಟಿಗೆ ಹೆಚ್ಚಳ ಕಂಡಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆಯಲ್ಲಿ ಏರಿಕೆಯಾಗಿದೆ. ಕೆಲವೆಡೆ ಮಾತ್ರ ಬೆಲೆ ತುಸು ತಗ್ಗಿದೆ. ಇನ್ನು, ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ನಿನ್ನೆಯ ದರವೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,34,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ…

Read More

ಪ್ರಯಾಣಿಕರಿದ್ದ ಕುವೈತ್ ವಿಮಾನ ನಿಲ್ದಾಣದ ಮೇಲೂ ಇರಾನ್ ದಾಳಿ – Kannada News | Iranian drone strike hit Kuwait International Airport flight Canceled Amid Iran Attacks

ನವದೆಹಲಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್ ಸೇರಿ ತಮ್ಮ ದೇಶದ ಮೇಲೆ ದಾಳಿ ನಡೆಸಿದೆ ಎಂಬ ಕಾರಣಕ್ಕೆ ಇರಾನ್ (Iran War) ಕಂಡ-ಕಂಡ ದೇಶಗಳ ಮೇಲೆಲ್ಲ ವೈಮಾನಿಕ ದಾಳಿ ನಡೆಸುತ್ತಿದೆ. ದುಬೈ, ಬಹ್ರೇನ್, ಅಬುಧಾಬಿಯಲ್ಲಿ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆಸಲಾಗಿದೆ. ದುಬೈನಲ್ಲಿ ಜನಪ್ರಿಯ ಕಟ್ಟಡಗಳ ಮೇಲೂ ದಾಳಿ ನಡೆಸಲಾಗಿದೆ. ಇದೀಗ ಕುವೈತ್​​ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆಸಿರುವ ಇರಾನ್ ಅಮಾಯಕ ಜನರಿರುವ ಸ್ಥಳಗಳನ್ನು ಕೂಡ ಗುರಿಯಾಗಿಸಿಕೊಂಡಿದೆ. ಇರಾನ್‌ನಿಂದ ಹಾರಿಸಲಾದ ಡ್ರೋನ್ ಕುವೈತ್…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯವಿಡೀ ಒಣ ಹವೆಯ ವಾತಾವರಣ, ಬೆಂಗಳೂರಿನಲ್ಲಿ ಚಳಿ – Kannada News | Bengaluru temperature: Dry weather all over Karnataka, cold and clear sky in Bengaluru

ರಾಜ್ಯವಿಡೀ ಒಣ ಹವೆಯ ವಾತಾವರಣ, ಬೆಂಗಳೂರಿನಲ್ಲಿ ಚಳಿ ಬೆಂಗಳೂರು, ಫೆಬ್ರುವರಿ 06: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣವೇ (Weather Forecast) ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ ಎಲ್ಲೆಲ್ಲಿ…

Read More

ಹಾಸನ ಜಿಲ್ಲೆಯ ವಿವಿಧೆಡೆ ಭಾರಿ ಮಳೆ: ಒಣಗಲು ಹಾಕಿದ್ದ ಕಾಫಿ ಬೆಳೆಗೆ ಹಾನಿ – Kannada News | Heavy Rains Lash Hassan District, Dried Coffee Crop Damaged Across Several Areas

ಹಾಸನ, ಜನವರಿ 14: ಹಾಸನ ಜಿಲ್ಲೆಯ ವಿವಿಧೆಡೆ ಸುರಿದ ಭಾರಿ ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕಾಲಿಕ ಮಳೆ ಕಾಫಿ ಬೆಳೆಗಾರರನ್ನು ಕಂಗಾಲಾಗಿಸಿದೆ. ಕಟಾವು ಮಾಡಿ ಒಣಗಲು ಹಾಕಿದ್ದ ಕಾಫಿ ಬೆಳೆಗೆ ಮಳೆಯಿಂದಾಗಿ ಹಾನಿಯುಂಟಾಗಿದೆ. ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಅನಿರೀಕ್ಷಿತವಾಗಿ ಸುರಿದ ಮಳೆಯಿಂದಾಗಿ, ಕೊಯ್ಲು ಮಾಡಿ ಒಣಗಿಸಲು ಹಾಕಲಾಗಿದ್ದ ಕಾಫಿ ಬೀಜಗಳು ಮಳೆಯಲ್ಲಿ ನೆನೆದು ಸಂಪೂರ್ಣ ಹಾಳಾಗಿವೆ. ಇದರಿಂದ ಕಾಫಿ ಬೆಳೆಗಾರರು ಭಾರೀ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ. ಮಳೆ ಹಾನಿಯಿಂದಾಗಿ ಕಾಫಿ ಹೂವುಗಳು, ಕಾಫಿ ಗಿಡಗಳು ಮತ್ತು…

Read More

ತಾಳಿ ಕಟ್ಟುವ ಕೊನೆಯ ಕ್ಷಣದಲ್ಲಿ ಪೊಲೀಸ್​ ಎಂಟ್ರಿ: ಹುಡುಗಿಗೆ 18 ತುಂಬಲು ಬಾಕಿ ಇತ್ತು ಕೇವಲ 4 ತಿಂಗಳು – Kannada News | Underage Marriage Foiled in Nelamangala: Child Protection Unit Stops Illegal Wedding

ನೆಲಮಂಗಲ, ಏ.15: ವಯಸ್ಸು ತುಂಬದ ಬಾಲಕಿಗೆ ಮದುವೆ ಮಾಡಲು ಮುಂದಾಗಿದ್ದ ಪೋಷಕರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಿಸೆಪ್ಷನ್ ಮುಗಿಸಿ ತಾಳಿ ಕಟ್ಟಬೇಕಿದ್ದ ಸಂಭ್ರಮದ ಕ್ಷಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ವಿವಾಹವನ್ನು ತಡೆದಿದ್ದಾರೆ. ನೆಲಮಂಗಲದ ಕಾವಾಡಿ ಮಠದ ಕಲ್ಯಾಣ ಮಂಟಪದಲ್ಲಿ ಕೇಶವ್ ಗೌಡ ಹಾಗೂ ಕೋಮಲ ಎಂಬುವವರ ವಿವಾಹ ನಿಶ್ಚಯವಾಗಿತ್ತು. ನಿನ್ನೆ ರಾತ್ರಿ ಅದ್ಧೂರಿಯಾಗಿ ರಿಸೆಪ್ಷನ್ ಕೂಡ ಮುಗಿದಿತ್ತು. ಆದರೆ ಇಂದು ತಾಳಿ ಕಟ್ಟುವ ಕೆಲವೇ ಸಮಯದ ಮೊದಲು ಅಧಿಕಾರಿಗಳು…

Read More

ಬೆಂಗಳೂರಿನಲ್ಲಿ ಟೆಕ್ ಉದ್ಯೋಗಗಳಿಗೆ ಮುಗಿಬೀಳುತ್ತಿದ್ದಾರೆ ಜನ! ರಿಕ್ರೂಟರ್ ಎಕ್ಸ್ ಪೋಸ್ಟ್ ವೈರಲ್

ಬೆಂಗಳೂರು, ಮಾರ್ಚ್​ 16: ಐಟಿ ಸಿಟಿಗೆ ಉದ್ಯೋಗ ಹುಡುಕಿ ಬರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಆದರೆ ಕೆಲಸ ಅರಸಿ ಬರುವ ಆಕಾಂಕ್ಷಿಗಳ ಮಧ್ಯೆ ಸ್ಪರ್ಧೆ ತೀವ್ರವಾಗಿದ್ದು, ಈ ಬಗ್ಗೆ ಬೆಂಗಳೂರಿನ (Bengaluru) ರಿಕ್ರೂಟರ್ ಒಬ್ಬರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. 15 ದಿನಗಳಲ್ಲಿ ಸಾವಿರಾರು ಮಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರ ಕುರಿತು ಪೋಸ್ಟ್ ಮಾಡಿರುವ ಅವರು, ಒಂದು ಕೆಲಸ ದಕ್ಕಿಸಿಕೊಳ್ಳಲು ಎದುರಾಗುವ ಸ್ಪರ್ಧೆ ಇದುವೇ ಎಂದು ಬರೆದುಕೊಂಡಿದ್ದಾರೆ. 15 ದಿನಗಳಲ್ಲಿ 30 ಸಾವಿರಕ್ಕೂ ಹೆಚ್ಚು…

Read More