Headlines

World Liver Day 2026: ಲಿವರ್‌ ಆರೋಗ್ಯಕರವಾಗಿರಬೇಕಂದ್ರೆ ತಪ್ಪದೇ ಈ ಆಹಾರಗಳನ್ನು ಸೇವನೆ ಮಾಡಲೇಬೇಕು – Kannada News | World Liver Day 2026: Know the history and significance of World Liver Day

ಯಕೃತ್ತು (Liver) ನಮ್ಮ ದೇಹದಲ್ಲಿನ ಒಂದು ಪ್ರಮುಖ ಅಂಗವಾಗಿದ್ದು, ಇದನ್ನು ದೇಹದ ಶಕ್ತಿಕೇಂದ್ರ ಎಂದೂ ಕರೆಯಲಾಗುತ್ತದೆ. ಇದು ದೇಹದಲ್ಲಿನ ವಿಷಕಾರಿ ವಸ್ತುಗಳನ್ನು ತೆಗೆದು ಹಾಕುವುದು, ರಕ್ತವನ್ನು ಶುದ್ಧೀಕರಿಸುವುದು, ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಸೇರಿದಂತೆ ಅನೇಕ ಅಗತ್ಯ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಇದು ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.  ಹಾಗಾಗಿ ಲಿವರ್‌ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಆದರೆ ಇಂದಿನ ಕಳಪೆ ಜೀವನಶೈಲಿ, ಆನಾರೋಗ್ಯಕ ಆಹಾರ ಪದ್ಧತಿ ಯಕೃತ್ತಿನ ಆರೋಗ್ಯದ ಮೇಲೆ ಪ್ರತಿಕೂಲ…

Read More

IPL Black Ticket: ಐಪಿಎಲ್ ಬ್ಲ್ಯಾಕ್ ಟಿಕೆಟ್ ಮಾರಾಟ ದಂಧೆ, ಡಿಎನ್‌ಎ ಸಂಸ್ಥೆಗೆ ಸಿಸಿಬಿ ಶಾಕ್! – Kannada News | Bengaluru IPL Ticket Racket: DNA Organization got Notice as CCB Uncovers Black Market Link

ಐಪಿಎಲ್ ಬ್ಲ್ಯಾಕ್ ಟಿಕೆಟ್ ಮಾರಾಟ ದಂಧೆ, ಡಿಎನ್‌ಎ ಸಂಸ್ಥೆಗೆ ಸಿಸಿಬಿ ಶಾಕ್! Image Credit source: dnanetworks.com ಬೆಂಗಳೂರು, ಏಪ್ರಿಲ್ 19: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ (IPL) ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಬ್ಲಾಕ್​ನಲ್ಲಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಸದಸ್ಯನೋರ್ವ ಈ ದಂಧೆಯ ಹಿಂದಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆ ಆರ್​ಸಿಬಿ ಟಿಕೆಟ್ ನಿರ್ವಹಣೆ ಮಾಡುವ ಡಿಎನ್ಎ (DNA) ಸಂಸ್ಥೆಗೆ ಸಂಕಷ್ಟ ಬಂದೊದಗಿದೆ. ಕೆಎಸ್​ಸಿಎ (KSCA)…

Read More

ಯೋಗೇಶ್​​ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಇಲ್ಲಿವೆ ಕೆಲ ಇಂಟರೆಸ್ಟಿಂಗ್​​ ವಿಚಾರಗಳು – Kannada News | How CBI Cracked the Yogesh Gowda Murder Case: Key Twists and Revelations

ಯೋಗೇಶ್​​ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಬೆಂಗಳೂರು, ಏಪ್ರಿಲ್​​ 19: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿತ್ತೆಂಬ ವಿಚಾರವೀಗ ಬಯಲಾಗಿದೆ. ಎ1 ಬಸವರಾಜ್ ಮುತ್ತಗಿ ಜೊತೆಗೆ ಮಾತಾಡಲೆಂದು ವಿನಯ್ ಕುಲಕರ್ಣಿ ಪತ್ನಿ ಹೆಸರಿನಲ್ಲಿ ಸಿಮ್ ಖರೀದಿ ಮಾಡಿದ್ದರು. ಅದೇ ಸಿಮ್ ಕಾರ್ಡ್ ಬಳಸಿ 94 ಬಾರಿ ಮುತ್ತಗಿ ಜೊತೆಗೆ ವಿನಯ್​ ಮಾತಾಡಿದ್ದರು. ಅಲ್ಲದೇ ಯೋಗಿಶ್ ಗೌಡ ಕೊಲೆಯಾದ ನಂತರ…

Read More

ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು: ದಾಳಿ ವೇಳೆ ಪತ್ತೆಯಾದ ಮಾರಾಕಾಸ್ತ್ರಗಳ ಜಪ್ತಿ – Kannada News | Kolar KGF Police Raid Rowdy Sheeters Homes, Seize Weapons

ಕೋಲಾರ, ಏಪ್ರಿಲ್​​ 19: ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ಪಟ್ಟಣದ ವ್ಯಾಪ್ತಿಯಲ್ಲಿನ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕೆಜಿಎಫ್ ನಗರದ ಆಂಡರ್ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಸೆಪಾಳ್ಯ, ಸೊರೆಕಾಯಿ ಪೇಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಒಟ್ಟು 10 ರೌಡಿಗಳ ಮನೆಗಳನ್ನು ಪರಿಶೀಲಿಸಲಾಗಿದೆ. ದಾಳಿ ನಡೆಸಲು ಐದು ಸಬ್-ಇನ್ಸ್‌ಪೆಕ್ಟರ್‌ಗಳು ಮತ್ತು ಐದು ಇನ್ಸ್‌ಪೆಕ್ಟರ್‌ಗಳ ತಂಡವನ್ನು ರಚಿಸಲಾಗಿತ್ತು. ಪ್ರತಿಯೊಬ್ಬ ರೌಡಿಶೀಟರ್‌ಗಳಿಗೂ ಒಂದೊಂದು ತಂಡವನ್ನು ನಿಯೋಜಿಸಲಾಗಿತ್ತು….

Read More

‘ಧುರಂಧರ್ 2’ ಬಾಕ್ಸ್ ಆಫೀಸ್ ಅಬ್ಬರಕ್ಕೆ ಬ್ರೇಕ್ ಹಾಕಿದ ಅಕ್ಷಯ್ ಕುಮಾರ್ ಸಿನಿಮಾ ‘ಭೂತ್ ಬಂಗ್ಲ’ – Kannada News | Ranveer Singh Dhurandhar 2 Box Office Collection slows down after Bhooth Bangla release

ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧರ್ ಕಾಂಬಿನೇಷನ್‌ನ ಸ್ಪೈ ಥ್ರಿಲ್ಲರ್ ‘ಧುರಂಧರ್ 2’ ಬಾಕ್ಸ್ ಆಫೀಸ್‌ನಲ್ಲಿ ಈಗಾಗಲೇ ಇತಿಹಾಸ ಬರೆದಿದೆ. ಆದರೆ ಬಿಡುಗಡೆಯಾದ ಮೊದಲ ನಾಲ್ಕು ವಾರಗಳ ಕಾಲ ಅಡೆತಡೆಯಿಲ್ಲದೆ ಸಾಗಿದ್ದ ಈ ಚಿತ್ರದ ಓಟಕ್ಕೆ ಈಗ ಅಕ್ಷಯ್ ಕುಮಾರ್ ಅವರ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಅಡ್ಡಿಯಾದಂತೆ ತೋರುತ್ತಿದೆ. ಹೌದು, ‘ಭೂತ್ ಬಂಗ್ಲ’ ಬಿಡುಗಡೆ ಆದ ಬಳಿಕ ‘ಧುರಂಧರ್ 2’ (Dhurandhar 2) ಸಿನಿಮಾದ ಕಲೆಕ್ಷನ್ ಗಣನೀಯವಾಗಿ ಕುಸಿದಿದೆ….

Read More

ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು… ಸೋಲಿನ ಬಳಿಕ ರಜತ್ ಪಾಟಿದಾರ್ ಖಡಕ್ ಸೂಚನೆ – Kannada News | Rajat patidar post match interview after RCB Vs DC Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ ಕೇವಲ ಒಂದು ಎಸೆತ ಬಾಕಿ ಇರುವಂತೆ ಸೋಲೊಪ್ಪಿಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 19.5 ಓವರ್​ಗಳಲ್ಲಿ 178 ರನ್​ಗಳಿಸಿ ರೋಚಕ ಜಯ ಸಾಧಿಸಿದೆ. ಈ ಮೂಲಕ ಆರ್​ಸಿಬಿ ಪಡೆ ತವರಿನಲ್ಲಿ…

Read More

ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಮಂಡ್ಯ ಜಿಲ್ಲಾಡಳಿತ: ಕಾರಣ ಇಲ್ಲಿದೆ – Kannada News | Balamuri Edamuri: Mandya District Administration Restricts Tourist Entry Due to Drowning Incidents

ಮಂಡ್ಯ, ಏಪ್ರಿಲ್​​ 19: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಪ್ರದೇಶಗಳು ಮೃತ್ಯುಕೂಪವಾಗಿ ಮಾರ್ಪಟ್ಟಿದ್ದು, ನೀರಿನಲ್ಲಿ ಈಜಾಡಲು ಹೋಗಿ ಹಲವರು ಜೀವ ಕಳೆದುಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದಾರೆ. ಕಳೆದ ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಜನರು ಇಲ್ಲಿ ಜೀವ ಕಳೆದುಕೊಂಡಿದ್ದಾರೆ. ಈಗ ಬೇಸಿಗೆ ರಜೆ ಇರುವ ಕಾರಣ ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು…

Read More

ಜಮೀನಿನ ಕಾಗದಗಳು ಮಿಸ್ಸಿಂಗ್, ನಿಮ್ಮ ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿಯ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ – Kannada News | Almond Protest: Man Targets Officer Over Missing File in Unusual Way

ಛತ್ತೀಸ್​ಗಢ, ಏಪ್ರಿಲ್ 19: ಸರ್ಕಾರಿ ಕಚೇರಿಗಳಲ್ಲಿ ಫೈಲ್ ಕಳೆದುಹೋಗಿದೆ ಅಥವಾ ನಾಳೆ ಬನ್ನಿ ಎಂಬ ಮಾತುಗಳು ಅದೆಷ್ಟು ಜನಸಾಮಾನ್ಯರ ನಿದ್ದೆ ಗೆಡಿಸಿವೆಯೋ ಗೊತ್ತಿಲ್ಲ. ಆದರೆ ಬಿಲಾಸ್‌ಪುರದ ಟಿಫ್ರಾ ಹೌಸಿಂಗ್ ಬೋರ್ಡ್ ಕಚೇರಿಯಲ್ಲಿ ತರುಣ್ ಸಾಹು ಎಂಬ ಯುವಕ ಈ ನಿರ್ಲಕ್ಷ್ಯಕ್ಕೆ ನೀಡಿದ ಉತ್ತರ ಮಾತ್ರ ಅತ್ಯಂತ ಸೃಜನಶೀಲ ಮತ್ತು ಖಾರವಾಗಿತ್ತು. ತರುಣ್ ಸಾಹು ಒಂದು ವರ್ಷದ ಹಿಂದೆ ಮ ಒಂದು ಫ್ಲಾಟ್ ಖರೀದಿಸಿದ್ದರು. ಆಸ್ತಿಯ ಮಾಲೀಕತ್ವ ಅವರ ಹೆಸರಿಗೆ ಬದಲಾಗಬೇಕಾದರೆ (Mutation) ಹೌಸಿಂಗ್ ಬೋರ್ಡ್‌ನ ಫೈಲ್ ಅತ್ಯಗತ್ಯ….

Read More

IPL 2026: CSK ವಿರುದ್ಧ ಇಷ್ಟು ಸ್ಕೋರ್ ​ಗಳಿಸಿದರೆ ಗೆಲುವು ಖಚಿತ..! – Kannada News | 14th Consecutive loss for CSK while chasing 180+ total in IPL

IPL 2026: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಇದೀಗ ಸತತ ಸೋಲುಗಳಿಂದ ಕಂಗೆಟ್ಟಿದೆ. ಅದರಲ್ಲೂ ಸಿಎಸ್​ಕೆ ವಿರುದ್ಧ ಗೆಲ್ಲಬೇಕಿದ್ದರೆ 180+ ರನ್​ಗಳಿಸಿದರೆ ಸಾಕು ಎಂಬಂತಾಗಿದೆ. ಏಕೆಂದರೆ ಚೆನ್ನೈ ಪಡೆಯು 2019 ರಿಂದ ಒಂದು ಬಾರಿ ಕೂಡ 180 ಕ್ಕಿಂತ ಹೆಚ್ಚಿನ ಮೊತ್ತವನ್ನು ಚೇಸ್ ಮಾಡಿ ಗೆದ್ದಿಲ್ಲ. ಸತತ 14ನೇ ಸೋಲಿನ ಆಘಾತ: ಏಪ್ರಿಲ್ 18, 2026 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್…

Read More

‘ಇದು ನನ್ನ ಮೈದಾನ’ ಸೆಲೆಬ್ರೇಷನ್ ಪ್ಲ್ಯಾನ್ ಇತ್ತಾ? ಕೆಎಲ್ ರಾಹುಲ್ ಹೇಳಿದ್ದೇನು? – Kannada News | “This is my ground”: KL Rahul Talked About iconic statement at Chinnaswamy.

ಐಪಿಎಲ್ 2025, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡ 20 ಓವರ್​ಗಳಲ್ಲಿ 163 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಘಾತಕ್ಕೆ ಒಳಗಾದರೂ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ (KL Rahul) ಏಕಾಂಗಿ ಹೋರಾಟ ನಡೆಸಿದರು. ಈ ಏಕಾಂಗಿ ಹೋರಾಟದೊಂದಿಗೆ ಅಜೇಯ 93 ರನ್​ ಬಾರಿಸಿ ಕೆಎಲ್ ರಾಹುಲ್ ಡೆಲ್ಲಿ…

Read More