Headlines

ಹಾರ್ಮುಜ್ ಜಲಸಂಧಿಗೆ ಅಮೆರಿಕದಿಂದಲೂ ತಡೆ; ಸಂಧಾನಕ್ಕಾಗಿ ರಷ್ಯಾ ಕೂಡ ಸಿದ್ಧ

ನವದೆಹಲಿ, ಏಪ್ರಿಲ್ 12: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್​ನಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಧಾನ ಮಾತುಕತೆಗಳು ಮುರಿದುಬಿದ್ದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿ (Hormuz Strait) ಮೇಲೆ ಕಣ್ಣು ಇರಿಸಿದ್ದಾರೆ. ಈ ಜಲಸಂಧಿಯನ್ನು ಪೂರ್ಣವಾಗಿ ತಡೆಯುವಂತೆ ಅಮೆರಿಕದ ನೌಕಾಪಡೆಗೆ ತಿಳಿಸಿದ್ದೇನೆ. ಈ ಕ್ಷಣದಿಂದಲೇ ಹಾರ್ಮುಜ್ ಜಲಸಂಧಿಯಿಂದ ಯಾವುದೇ ಹಡಗು ಹೊರಹೋಗದಂತೆ, ಹಾಗೂ ಹೊರಗಿನಿಂದ ಯಾವ ಹಡಗೂ ಒಳಗೆ ಹೋಗದಂತೆ ತಡೆಯುವ ಪ್ರಕ್ರಿಯೆ ನಡೆಯಲಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಪಾಕಿಸ್ತಾನದ ಮಧ್ಯಸ್ತಿಕೆಯಲ್ಲಿ ಇರಾನ್ ಮತ್ತು ಅಮೆರಿಕ…

Read More

MI vs RCB: ವಾಂಖೆಡೆಯಲ್ಲಿ ರಾರಾಜಿಸಿದ ರಜತ್..! ವೇಗದ ಅರ್ಧಶತಕ ಜಸ್ಟ್ ಮಿಸ್

ಮುಂಬೈ ಇಂಡಿಯನ್ಸ್‌ ವಿರುದ್ಧ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದರ್ ವಿಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿದರು. ಆರಂಭಿಕ ಫಿಲ್ ಸಾಲ್ಟ್ ಔಟಾದ ಬಳಿಕ ಬ್ಯಾಟಿಂಗ್​ಗೆ ಬಂದ ರಜತ್, ಬಂದ ಕೂಡಲೇ ಪ್ರತಿಯೊಬ್ಬ ಮುಂಬೈ ಬೌಲರ್​ಗಳ ವಿರುದ್ಧ ಬೌಂಡರಿಗಳ ಮಳೆಗರೆದರು. ಇದರ ಪರಿಣಾಮವಾಗಿ ರಜತ್ ಕೇವಲ 11 ಎಸೆತಗಳಲ್ಲಿ 44 ರನ್ ಕಲೆಹಾಕಿದರು. ರಜತ್ ತಮ್ಮ ಮುಂದಿನ ಎಸೆತದಲ್ಲಿ ಸಿಕ್ಸರ್ ಸಿಡಿಸಿ 50 ರನ್​ಗಳ ಗಡಿ ದಾಟುತ್ತಿದ್ದರು. ಈ ಮೂಲಕ ಐಪಿಎಲ್…

Read More

ತೀವ್ರಗೊಂಡ ಸಚಿವ ಸಂಪುಟ ಪುನಾರಚನೆ ಕೂಗು: ದಿಲ್ಲಿ ಯಾತ್ರೆ ಕೈಗೊಂಡಿರುವ ಶಾಸಕರು ಯಾರ್ಯಾರು?

ಬೆಂಗಳೂರು, (ಏಪ್ರಿಲ್ 12): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಶೀಘ್ರದಲ್ಲೇ ಸಚಿವ ಸಂಪುಟ ಪುನಾರಚನೆ (Cabinet reshuffle) ಆಗಬೇಕು, ಸಮಯ ಮೀರುತ್ತಿದೆ, ಸರ್ಕಾರ ರಚನೆಯಾಗಿ 3 ವರ್ಷ ಕಳೆಯುತ್ತಾ ಬಂದಿದೆ. ಇನ್ನೂ ವಿಳಂಬ ಆದ್ರೆ. ಸಚಿವ ಸ್ಥಾನ ಸಿಕ್ಕಿದ್ರೂ ಪ್ರಯೋಜನ ಏನು ಎಂದು ಸಚಿವಾಕಾಂಕ್ಷಿಗಳು ಪ್ರಶ್ನಿಸಿದ್ದು, ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್​ಗೆ ಶಾಸಕರು ಒತ್ತಡ ಹಾಕುತ್ತಿದ್ದಾರೆ. ಈ ಸಂಬಂಧ ಇದೀಗ ಮೊದಲ ಹೆಜ್ಜೆಯಾಗಿ ಕಾಂಗ್ರೆಸ್​ನ ಹಿರಿಯ ಶಾಸಕರ ದಂಡು ದೆಹಲಿ (New…

Read More

ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಕೋರ್ಟ್: ಏನದು?

ಚಾಮರಾಜನಗರ, ಏಪ್ರಿಲ್​ 12: ಪೊಲೀಸರ ಜೊತೆ ಅನುಚಿತ ವರ್ತನೆ ತೋರಿದ ಹಿನ್ನಲೆ ಚಾಮರಾಜನಗರ (Chamarajanagar) ಸತ್ರ ನ್ಯಾಯಾಲಯ ಆರೋಪಿ ಯುವಕನಿಗೆ ಠಾಣೆಯಲ್ಲಿ ಎರಡು ದಿನ ಸಮುದಾಯ ಸೇವೆ ಸಲ್ಲಿಸಲು ಸೂಚನೆ ನೀಡಿದೆ. ಆ ಮೂಲಕ ಮಾಡಿದ ತಪ್ಪಿಗೆ ವಿನೂತನ ಶಿಕ್ಷೆ ನೀಡುವುದರ ಜೊತೆಗೆ ಹೊಸ ತಹಬದಿಗೆ ನಾಂದಿ ಹಾಡಿದೆ. ವಿನೂತನ ಶಿಕ್ಷೆಗೆ ಗುರಿಯಾದ ಯುವಕ ಚಾಮರಾಜನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮ್ಯೂಲ್ ಖಾತೆ ನೈಜತೆ ಪರಿಶೀಲನೆ ಸಂಬಂಧ ಹಾಜರಾಗಿದ್ದ ವೇಳೆ ಯುವಕ ಆನಂದ್​​ ಅಸಂಬದ್ಧವಾಗಿ ಹಾಗೂ…

Read More

MI vs RCB: ಮುಂಬೈ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಚಚ್ಚಿದ ಸಾಲ್ಟ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 20ನೇ ಪಂದ್ಯದಲ್ಲಿ ಐದು ಬಾರಿಯ ಮುಂಬೈ ತಂಡವನ್ನು ಎದುರಿಸಿದ್ದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಫಿಲ್ ಸಾಲ್ಟ್ ಸಿಡಿಲಬ್ಬರದ ಅರ್ಧಶತಕ ಬಾರಿಸಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಫಾರ್ಮ್​ ಕಂಡುಕೊಳ್ಳಲು ಹೆಣಗಾಡುತ್ತಿದ್ದ ಸಾಲ್ಟ್ ಸರಿಯಾದ ಸಂದರ್ಭದಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಮುಂಬೈನಂತಹ ಬಲಿಷ್ಠ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಸಾಲ್ಟ್ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದರು. ಇದರ ಪರಿಣಾಮವಾಗಿ ಕೇವಲ 25…

Read More

ಟಿವಿ9 ಎಜುಕೇಶನ್ ಎಕ್ಸ್ಪೋ: ಪ್ರಥಮ್ ಮೆಚ್ಚುಗೆ ಮಾತು

ಬೆಂಗಳೂರಿನ ಅರಮನೆ ಮೈದಾನದಲ್ಲಿ, ಟಿವಿ9 ಎಜುಕೇಷನ್ ಸಮ್ಮಿಟ್ (Tv9 Education summit) ಆಯೋಜಿಸಿದೆ. ವಿದ್ಯಾರ್ಥಿಗಳು, ಪೋಷಕರು, ವಿವಿಧ, ಪ್ರತಿಷ್ಠಿತ ಶಾಲಾ-ಕಾಲೇಜುಗಳ ಸಿಬ್ಬಂದಿ ಒಂದೇ ಸೂರಿನಡಿ ಪರಸ್ಪರ ಚರ್ಚಿಸಿ, ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಆಯ್ಕೆಗೆ ಎಕ್ಸ್ಪೋ ಸಹಾಯ ಮಾಡುತ್ತಿದೆ. ಹಲವು ರಂಗಗಳ ಪ್ರಮುಖರು ಸಹ ಈ ಎಜುಕೇಶನ್ ಎಕ್ಸ್ಪೋನಲ್ಲಿ ಭಾಗವಹಿಸಿದ್ದರು. ಇಂದು ನಟ, ಬಿಗ್​​ಬಾಸ್ ಮಾಜಿ ವಿನ್ನರ್ ಪ್ರಥಮ್ ಸಹ ಭಾಗವಹಿಸಿದ್ದು, ಟಿವಿ9 ಅವರ ಈ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಜೊತೆಗೆ ತಮ್ಮ ಶಾಲೆ, ಕಾಲೇಜು…

Read More

ದೂರು ನೀಡಿದವರ ವಿರುದ್ಧವೇ ಪ್ರತಿದೂರು ನೀಡಿದ ಗಾಯಕಿ ಮಂಗ್ಲಿ

ತೆಲುಗು ಚಿತ್ರರಂಗದ (Tollywood) ಜನಪ್ರಿಯ ಗಾಯಕಿ ಮಂಗ್ಲಿ (Singer Mangli) ವಿರುದ್ಧ ಹೈದರಾಬಾದ್‌ನ ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ 10 ಕೋಟಿ ರೂಪಾಯಿಗಳ ವಂಚನೆಯ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ವಕೀಲ ಸುಬ್ಬಾರಾವ್ ಎಂಬುವವರು ಈ ದೂರನ್ನು ನೀಡಿದ್ದು, ಮಂಗ್ಲಿ ಮತ್ತು ಅವರ ಸಹೋದರ ಶಿವ ಸೇರಿದಂತೆ ಇತರರು ಹಲವರಿಂದ ಹಣ ಪಡೆದು ಹೂಡಿಕೆದಾರರಿಗೆ ವಂಚಿಸಿದ್ದಾರೆ, ಹಣ ಮರಳಿ ಕೇಳಿದವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ವಕೀಲ ಸುಬ್ಬರಾವ್ ವಿರುದ್ಧ ಗಾಯಕಿ ಮಂಗ್ಲಿ ಪ್ರತಿದೂರು ದಾಖಲಿಸಿದ್ದಾರೆ. ದೂರುದಾರ…

Read More

ಬೆಳಗ್ಗೆ ಉರಿ ಬಿಸಿಲು: ರಾತ್ರಿಯಾದ್ರೆ ಸಾಕು ಸೆಕೆ; ಬೆಂಗಳೂರಿಗರ ಸುಖ ನಿದ್ರೆಗೆ ಭಂಗ!

ಬೆಂಗಳೂರು, ಏಪ್ರಿಲ್​ 12: ಈ ಬಾರಿ ಬೇಸಿಗೆಯ ಬಿರುಬಿಸಿಲು ಸಿಲಿಕಾನ್ ಸಿಟಿ ಜನರನ್ನ ಬಿಡದೆ ಕಾಡುತ್ತಿದೆ. ಮನೆಯಲ್ಲಿದ್ದರೆ ಬಿಸಿಲ ಧಗೆ (heatwave). ಇನ್ನು ಹೊರಗೆ ಬಂದರೆ ಸುಡೋ ಬಿಸಿಲು. ಹೀಗಾಗಿ ಜನರು ಕೂಲ್ ಡ್ರಿಂಕ್ಸ್, ಎಳನೀರು ಮೊರೆ ಹೋಗುತ್ತಿದ್ದಾರೆ. ಆದರೆ ರಾತ್ರಿ ನಿದ್ದೆ ಮಾಡುವುದಕ್ಕೆ ಸಂಕಷ್ಟ ಶುರುವಾಗಿದೆ. ಮತ್ತೊಂದೆಡೆ ಏರ್ ಕೂಲರ್ ಹಾಗೂ ಎಸಿಗೆ ಡಿಮ್ಯಾಂಡ್​ ಕೂಡ ಶುರುವಾಗಿದೆ. ರಾತ್ರಿ ನಿದ್ದೆಗೆ ಬಿಸಿಲು ಅಡ್ಡಿ ಸದ್ಯ ಬೆಂಗಳೂರಿನಲ್ಲಿ 35 ರಿಂದ 36 ಡಿಗ್ರಿ ತಾಪಮಾನ ದಾಖಲಾಗುತ್ತಿದೆ. ಏಪ್ರಿಲ್​…

Read More

ಮಂತ್ರಿಗಿರಿ ಬೇಡಿಕೆಯೊಂದಿಗೆ ಶಾಸಕರ ದೆಹಲಿ ಯಾತ್ರೆ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು

ಬೆಂಗಳೂರು/ಚಿಕ್ಕಮಗಳೂರು, (ಏಪ್ರಿಲ್ 12): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ನಾಯಕತ್ವ ಗೊಂದಲ, ದಾವಣಗೆರೆ ಜಟಾಪಟಿ ನಡುವೆ ಕಾಂಗ್ರೆಸ್ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 30 ಶಾಸಕರು ಮಂತ್ರಿಗಿರಿಗೆ ಹಕ್ಕೊತ್ತಾಯ ಮಾಡಲು ಇಂದು (ಏಪ್ರಿಲ್ 12) ಮಧ್ಯಾಹ್ನ ಬೆಂಗಳೂರಿನಿಂದ (Bengaluru) ದೆಹಲಿಗೆ ತೆರಳಿದ್ದಾರೆ. ಎಲ್ಲಾ ಶಾಸಕರು ಎರಡು ದಿನ ದೆಹಲಿಯಲ್ಲೇ ಠಿಕಾಣಿ ಹೂಡಲಿದ್ದು, ಹೈಕಮಾಂಡ್ ನಾಯಕರನ್ನ ಭೇಟಿ ಮಾಡಲಿದ್ದಾರೆ. ಇನ್ನು ಈ…

Read More

MI vs RCB Playing XI: ಟಾಸ್ ಗೆದ್ದ ಮುಂಬೈ; ಆರ್​ಸಿಬಿ ಪ್ಲೇಯಿಂಗ್​ 11 ನಿಂದ ಹೇಜಲ್​ವುಡ್ ಔಟ್

ಐಪಿಎಲ್ 2026 (IPL 2026) ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡವನ್ನು ಎದುರಿಸಿದೆ. ಎರಡೂ ತಂಡಗಳಿಗೆ ಇದು ಈ ಆವೃತ್ತಿಯ ನಾಲ್ಕನೇ ಪಂದ್ಯವಾಗಿದೆ. ಎರಡೂ ತಂಡಗಳು ಕಳೆದ ಪಂದ್ಯದಲ್ಲಿ ಸೋತಿವೆ. ಆದ್ದರಿಂದ, ಎರಡೂ ತಂಡಗಳು ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸಲಿವೆ. ಒಂದೆಡೆ ಆರ್​ಸಿಬಿ ಆಡಿರುವ ಮೂರು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆದ್ದು 1 ಪಂದ್ಯದಲ್ಲಿ ಸೋತಿದ್ದು, 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ…

Read More