ಮಕ್ಕಳು ಸಿರಪ್ ತೆಗೆದುಕೊಂಡ ತಕ್ಷಣ ವಾಂತಿ ಮಾಡಿದ್ರೆ ಏನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ – Kannada News | Kids Vomiting After Syrup: Warning Signs

ಮಕ್ಕಳ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಸಾಲುವುದಿಲ್ಲ. ಜ್ವರ, ಕೆಮ್ಮು ಬಂದಾಗಲೆಲ್ಲಾ ಮಕ್ಕಳಷ್ಟೇ ನೋವನ್ನು ಪೋಷಕರು ಅನುಭವಿಸುತ್ತಾರೆ. ಮಕ್ಕಳಲ್ಲಿ ಏನಾದರೂ ಸ್ವಲ್ಪ ಬದಲಾವಣೆಯಾದರೂ ಕೂಡ ಚಿಂತೆಯಾಗುತ್ತದೆ. ಹಾಗಾಗಿ ತಕ್ಷಣ ಔಷಧ ನೀಡುವುದು ಒಳ್ಳೆಯದು. ಸಾಮಾನ್ಯವಾಗಿ ಮಕ್ಕಳಿಗೆ ಮಾತ್ರೆಗಳನ್ನು ನುಂಗಲು ಸಾಧ್ಯವಾಗದ ಕಾರಣ, ಹೆಚ್ಚಾಗಿ ಸಿರಪ್‌ಗಳನ್ನು (Syrup) ನೀಡಲಾಗುತ್ತದೆ. ಆದರೆ ಕೆಲವು ಮಕ್ಕಳು ಅವುಗಳನ್ನು ತೆಗೆದುಕೊಂಡ ತಕ್ಷಣ ವಾಂತಿ ಮಾಡುತ್ತಾರೆ. ಈ ಕಾರಣದಿಂದಾಗಿ, ಪೋಷಕರು ಹೆಚ್ಚು ಚಿಂತೆಗೀಡಾಗುತ್ತಾರೆ. ಮತ್ತೊಂದು ಡೋಸ್ ನೀಡಬೇಕೇ ಅಥವಾ ಬೇಡವೇ ಎಂಬ ಗೊಂದಲ ಉಂಟಾಗುತ್ತದೆ. ಹಾಗಾಗಿ ಪ್ರತಿಯೊಬ್ಬ ಪೋಷಕರು ಕೂಡ ಈ ಬಗ್ಗೆ ತಿಳಿಯುವುದು ಅನಿವಾರ್ಯವಾಗಿದೆ. ಈ ವಿಷಯವಾಗಿ ತಜ್ಞರು ನೀಡಿದ ಮಾಹಿತಿ ಸ್ಟೋರಿಯಲ್ಲಿದೆ.

ಚಿಕ್ಕ ಮಕ್ಕಳನ್ನು ಎಷ್ಟು ಎಚ್ಚರಿಕೆಯಿಂದ ನೋಡಿಕೊಂಡರೂ ಸಾಲುವುದಿಲ್ಲ. ಅದರಲ್ಲಿಯೂ ಮಕ್ಕಳು ಸಿರಪ್ ತೆಗೆದುಕೊಂಡ ನಂತರ ವಾಂತಿ ಮಾಡಿದರೆ, ಅದು ದೇಹದೊಳಗೆ ಹೋಗುವುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಿ. 20 ನಿಮಿಷಗಳ ಒಳಗೆ ವಾಂತಿಯಾದರೆ, ಔಷಧ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ, ಆದ್ದರಿಂದ ಅದನ್ನು ಎರಡನೇ ಬಾರಿಗೆ ನೀಡುವುದು ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಮಕ್ಕಳು ಸಿರಪ್ ತೆಗೆದುಕೊಂಡ ಒಂದು ಗಂಟೆಯ ನಂತರ ವಾಂತಿ ಮಾಡಿದರೆ, ಅದು ಯೋಚಿಸಬೇಕಾದ ವಿಷಯ. ನೀವು ನೀಡಿದ ಸಿರಪ್ ವಾಂತಿಯಲ್ಲಿ ಕಂಡುಬಂದರೆ, ಇನ್ನೊಂದು ಡೋಸ್ ನೀಡುವುದು ಒಳ್ಳೆಯದು.

ಇದನ್ನೂ ಓದಿ: ನಿಮ್ಮ ಮಕ್ಕಳಿಗೆ ಕೆಮ್ಮಿನ ಸಿರಪ್​ ಹಾಕುವ ಮುನ್ನ ಎಚ್ಚರ: ಇಲ್ಲಿದೆ ಆರೋಗ್ಯ ಇಲಾಖೆಯ ಗೈಡ್​ಲೈನ್ಸ್

ಪೋಷಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು:

ಮಗುವಿನ ಬಾಯಿಗೆ ಎಂದಿಗೂ ಸಿರಪ್ ಅನ್ನು ಒಂದೇ ಬಾರಿಗೆ ಸುರಿಯಬೇಡಿ. ಸಿರಪ್ ನೀಡಲು ಸಣ್ಣ ಸಿರಿಂಜ್ ಬಳಸುವುದು ಒಳ್ಳೆಯದು. ಖಾಲಿ ಹೊಟ್ಟೆಯಲ್ಲಿ ನೀಡುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಸೂಕ್ತ. ಮಕ್ಕಳು ಪ್ರತಿ ಬಾರಿ ಸಿರಪ್ ತೆಗೆದುಕೊಂಡಾಗ ವಾಂತಿ ಮಾಡಿಕೊಂಡರೆ, ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಚಿತ್ರೋತ್ಸವ: ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡದೆ ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ – Kannada News | Lost Land movie gets Best Film award in 17th Bengaluru International Film Festival

ಸಿನಿಮಾಸಕ್ತರಿಗೆ ದೇಶ-ವಿದೇಶದ ನೂರಾರು ಸಿನಿಮಾಗಳ ವೀಕ್ಷಣೆಗೆ ವೇದಿಕೆ ಕಲ್ಪಿಸಿದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bengaluru Film Festival) ಶುಕ್ರವಾರ (ಫೆಬ್ರವರಿ 6) ಅಂತ್ಯಗೊಂಡಿದೆ. ಜಪಾನ್‌ ದೇಶದ ‘ಲಾಸ್ಟ್‌ ಲ್ಯಾಂಡ್‌’, ಮರಾಠಿಯ ‘ಸಬರ್‌ ಬೊಂದಾ’ ಹಾಗೂ ಕನ್ನಡದ ‘ವನ್ಯಾ’ ಸಿನಿಮಾಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಸಿನಿಮಾ ಪ್ರಶಸ್ತಿಗಳನ್ನು ಪಡೆದುಕೊಂಡಿವೆ. ‘ಅತ್ಯುತ್ತಮ ಸಿನಿಮಾ’ ಪ್ರಶಸ್ತಿ ವಿಜೇತರಿಗೆ ಪಾರಿತೋಷಕದ ಜೊತೆಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಯಿತು.

ದ್ವಿತೀಯ ಮತ್ತು ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ಗೆದ್ದವರಿಗೆ ಅನುಕ್ರಮವಾಗಿ 5 ಲಕ್ಷ ರೂ. ಹಾಗೂ 2 ಲಕ್ಷ ರೂ. ನೀಡಿ ಗೌರವಿಸಲಾಯಿತು. ಏಷ್ಯನ್‌ ಚಿತ್ರ ವಿಭಾಗದಲ್ಲಿ ಈ ವರ್ಷ ಒಟ್ಟು 15 ಸಿನಿಮಾಗಳು ಪ್ರಶಸ್ತಿಯ ಕಣದಲ್ಲಿದ್ದವು. ಈ ಪೈಕಿ ಜಪಾನ್‌ನ ‘ಲಾಸ್ಟ್‌ ಲ್ಯಾಂಡ್‌’ ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಪಾತ್ರವಾಗಿದೆ. ಭಾರತದ ‘ಶೇಪ್‌ ಆಫ್‌ ಮೋಮೋ’ ಮತ್ತು ಜಪಾನ್‌ನ ‘ದಿ ಡೀಪೆಸ್ಟ್‌ ಸ್ಪೇಸ್‌ ಇನ್‌ ಅಸ್’ ಸಿನಿಮಾಗಳು ದ್ವಿತೀಯ ಮತ್ತು ತೃತೀಯ ಸಿನಿಮಾ ಪ್ರಶಸ್ತಿಗೆ ಭಾಜನವಾಗಿವೆ. ಫಿಲಿಪೈನ್ಸ್‌ನ ‘ರಿಪಬ್ಲಿಕ್‌ ಆಫ್‌ ಪಿಪೊಲಿಪಿನಾಸ್‌’ ಚಿತ್ರವು ತೀರ್ಪುಗಾರರ ವಿಶೇಷ ಮೆಚ್ಚುಗೆಯನ್ನು ಪಡೆದಿದೆ.

ಭಾರತೀಯ (ಚಿತ್ರಭಾರತಿ) ವಿಭಾಗದಲ್ಲಿ ಮರಾಠಿ ಚಿತ್ರ ‘ಸಬರ್‌ ಬೊಂಡಾ’ ಅತ್ಯುತ್ತಮ ಚಿತ್ರ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಮಲಯಾಳಂನ ‘ಮೋಹಂ’ ಮತ್ತು ‘ಕಾಡು’ ಸಿನಿಮಾಗಳು ಅನುಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸಿನಿಮಾ ಪ್ರಶಸ್ತಿಗಳನ್ನು ಗೆದ್ದಿವೆ. ಮರಾಠಿ ಭಾಷೆಯ ‘ಗೊಂದಾಳ್‌’ ಚಿತ್ರವು ಫಿಪ್ರೆಸ್ಕಿ ಪ್ರಶಸ್ತಿ ಪಡೆದರೆ, ಮಲಯಾಳಂ ಭಾಷೆಯ ‘ಸರ್ಕೀಟ್‌’ ಚಿತ್ರವು ತೀರ್ಪುಗಾರರ ವಿಶೇಷ ಮೆಚ್ಚುಗೆಯನ್ನು ಪಡೆದಿದೆ.

ಕನ್ನಡ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ 14 ಸಿನಿಮಾಗಳು ಸ್ಪರ್ಧಿಸಿದ್ದವು. ಈ ಪೈಕಿ ‘ವನ್ಯಾ’ ಚಿತ್ರವು ಅತ್ಯುತ್ತಮ ಪ್ರಶಸ್ತಿಯನ್ನು ಗೆದ್ದಿದೆ. ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರಗಳಾಗಿ ‘ನಮ್‌ ಸಾಲಿ’ ಮತ್ತು ‘ರಾವಣ ರಾಜ್ಯದಲ್ಲಿ ನವದಂಪತಿಗಳು’ ಆಯ್ಕೆಯಾಗಿವೆ. ‘ಹಕ್ಕಿಗಾಗಿ’ ಚಿತ್ರಕ್ಕೆ ನೆಟ್‌ಪ್ಯಾಕ್‌ ತೀರ್ಪುಗಾರರ ಪ್ರಶಸ್ತಿ ಸಿಕ್ಕಿದೆ. ‘ಮೃಗತೃಷ್ಣ’ ಮತ್ತು ‘ಫೋರ್‌ ಬೈ ಫೋರ್‌’ ಚಿತ್ರಗಳು ತೀರ್ಪುಗಾರರ ವಿಶೇಷ ಮನ್ನಣೆಗೆ ಭಾಜನವಾಗಿವೆ.

ಇದನ್ನೂ ಓದಿ: ಬೇರೆ ದೇಶಗಳ ಸಿನಿಮಾ ಯಾಕೆ ನೋಡಬೇಕು? ವಿವರಿಸಿದ ಸಿಎಂ ಸಿದ್ದರಾಮಯ್ಯ

ಈ ಚಿತ್ರೋತ್ಸವದಲ್ಲಿ 70 ದೇಶಗಳ ಸುಮಾರು 300ಕ್ಕೂ ಹೆಚ್ಚು ಅತ್ಯುತ್ತಮ ಸಿನಿಮಾಗಳು, ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಸಿನಿಮಾಗಳು ಪ್ರದರ್ಶನಗೊಂಡಿವೆ. ಈ ಚಿತ್ರೋತ್ಸವವನ್ನು ಪ್ರತೀ ವರ್ಷವೂ ಅರ್ಥಪೂರ್ಣವಾದ ಧ್ಯೇಯವಾಕ್ಯದ ಮೂಲಕ ನಡೆಸಲಾಗುತ್ತಿದ್ದು, ಈ ಬಾರಿ ರಾಷ್ಟ್ರಕವಿ ಡಾ.ಜಿ.ಎಸ್‌. ಶಿವರುದ್ರಪ್ಪನವರ ಪ್ರಸಿದ್ಧ ಗೀತೆಯಾಗಿರುವ ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಸಾಲಿನೊಂದಿಗೆ ‘ಸ್ತ್ರೀ ಸಂವೇದನೆ, ಸಮಾನತೆಯ ದನಿ’ ಎಂಬ ಟ್ಯಾಗ್‌ ಲೈನ್‌ ಹೊಂದಿರುವ ಧ್ಯೇಯವಾಕ್ಯದೊಂದಿಗೆ ಆಚರಿಸಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

U19 World Cup: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ

ಜಿಂಬಾಬ್ವೆಯ ಹರಾರೆ ಮೈದಾನದಲ್ಲಿ ಯುವ ಭಾರತ ತಂಡ ಇತಿಹಾಸ ಸೃಷ್ಟಿಸಿದೆ. ಅಂಡರ್ 19 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಬರೋಬ್ಬರಿ 100 ರನ್​ಗಳಿಂದ ಸೋಲಿಸಿತು. ಇದರೊಂದಿಗೆ, ಭಾರತ ಆರನೇ ಬಾರಿಗೆ ಅಂಡರ್ 19 ವಿಶ್ವಕಪ್ ಎತ್ತಿಹಿಡಿಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 411 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 311 ರನ್​ಗಳಿಗೆ ಆಲೌಟ್ ಆಗುವ ಮೂಲಕ 100 ರನ್​ಗಳಿಂದ ಸೋಲೊಪ್ಪಿಕೊಂಡಿತು. ಭಾರತದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ 14 ವರ್ಷದ ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್​ಗಳ ಬಿರುಗಾಳಿಯ ಇನ್ನಿಂಗ್ಸ್ ಆಡಿದರು. ವೈಭವ್ ಅವರ ಈ ಇನ್ನಿಂಗ್ಸ್‌ನಲ್ಲಿ 15 ಸಿಕ್ಸರ್‌ಗಳು ಮತ್ತು 15 ಬೌಂಡರಿಗಳು ಸೇರಿದ್ದವು.

Source link

ಬಡವರ ಬಾದಾಮಿ ಬೆಳೆದ ರೈತರಿಗೀಗ ಸಂಕಷ್ಟ: ದಲ್ಲಾಳಿ-ಕಮಿಷನ್ ಏಜೆಂಟ್ ಮೋಸದಿಂದ ಕಂಗಾಲು – Kannada News | Yadgir Groundnut Farmers Protest Price Drop: APMC Agents Accused of Exploitation

ಶೇಂಗಾ, ರೈತರ ಪ್ರಭಟನೆImage Credit source: tv9 kannada

ಯಾದಗಿರಿ, ಫೆಬ್ರವರಿ 06: ರೈತ ದೇಶದ ಬೆನ್ನೆಲಬು ಅಂತಾರೆ, ಆದರೆ ರೈತರು ಬೆಳೆಗೆ ಸರಿಯಾದ ಬೆಲೆ ಸಿಗುವುದಿಲ್ಲ. ಇದೆ ಕಾರಣಕ್ಕೆ ರೈತರು ಆತ್ಮಹತ್ಯೆ ದಾರಿ ಹಿಡಿಯಬೇಕಾಗುತ್ತೆ. ಏಕೆಂದರೆ ಯಾದಗಿರಿ ಜಿಲ್ಲೆಯ ರೈತರು ಸಾವಿರಾರು ರೂ. ಖರ್ಚು ಮಾಡಿ ಕಷ್ಟ ಪಟ್ಟು ಶೇಂಗಾ (Groundnut) ಬೆಳೆಯನ್ನ ಬೆಳೆದರೆ ಸರಿಯಾದ ಬೆಲೆ ಸಿಗುತ್ತಿಲ್ಲ. ದಲ್ಲಾಳಿ ಹಾಗೂ ಕಮಿಷನ್ ಏಜೆಂಟ್​ಗಳ ಮೋಸಕ್ಕೆ ಕಂಗಲಾಗಿ ಹೋಗಿದ್ದಾರೆ. ಹೀಗಾಗಿ ಕೊನೆಗೂ ರೊಚ್ಚಿಗೆದ್ದ ರೈತರು ಸರ್ಕಾರ ಹಾಗೂ ಕಮಿಷನ್ ಏಜೆಂಟ್​ಗಳ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.

ಯಾದಗಿರಿ ನಗರದ ಎಪಿಎಂಸಿ ಮುಂದೆ ಇಂದು ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಿಂದಗಿ-ಕೊಡಂಗಲ್ ರಾಜ್ಯ ಹೆದ್ದಾರಿ ಬಂದ್ ಮಾಡುವ ಮೂಲಕ ತಮಗೆ ಆಗುತ್ತಿರುವ ಅನ್ಯಾಯವನ್ನ ತೋಡಿಕೊಂಡಿದ್ದಾರೆ. ರೈತರು ಈ ರೀತಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡುವುದಕ್ಕೆ ಕಾರಣವೇ ಶೇಂಗಾ ಬೆಳೆಯ ದರ ಕುಸಿತ.

ಕ್ವಿಂಟಲ್​ಗೆ ಕೇವಲ 4 ರಿಂದ 6 ಸಾವಿರ ರೂ

ಜಿಲ್ಲೆಯಲ್ಲಿ ಸದ್ಯ ಶೇಂಗಾ ಬೆಳೆಯ ರಾಶಿ ನಡೆಯುತ್ತಿದೆ. ಹೀಗಾಗಿ ರೈತರು ತಾವು ಬೆಳೆದ ಸಾವಿರಾರು ಕ್ವಿಂಟಲ್ ಶೇಂಗಾ ಬೆಳೆಯನ್ನ ನಗರದ ಕೃಷಿ ಮಾರುಕಟ್ಟೆ ತೆಗೆದುಕೊಂಡು ಬರುತ್ತಿದ್ದಾರೆ. ಆದರೆ ಶೇಂಗಾ ಮಾರಾಟಕ್ಕೆ ಮುಂದಾದ ರೈತರಿಗೆ ಶಾಕ್ ಎದುರಾಗಿದೆ. ಏಕೆಂದರೆ ಕಳೆದ ಕೆಲ ದಿನಗಳಿಂದ ದಿಢೀರ್ ಶೇಂಗಾ ಬೆಳೆಯ ದರ ಕುಸಿತವಾಗಿದೆ. ಕ್ವಿಂಟಲ್​ಗೆ 12 ಸಾವಿರಕ್ಕೆ ಮಾರಾಟವಾಗುತ್ತಿದ್ದ ಬೆಳೆ ಈಗ ಏಕಾಏಕಿ ಕ್ವಿಂಟಲ್​ಗೆ ಕೇವಲ 4 ರಿಂದ 6 ಸಾವಿರಕ್ಕೆ ಮಾರಾಟವಾಗುತ್ತಿದೆ. ಇದು ರೈತರಿಗೆ ಶಾಕ್ ಕೊಟ್ಟಿದೆ. ಕಷ್ಟಪಟ್ಟು ಸಾವಿರಾರು ರೂ. ಖರ್ಚು ‌ಮಾಡಿ ಬೆಳೆ ತಂದು ಮಾರಾಟ ಮಾಡಲು ಬಂದರೆ ಬೆಳೆಗೆ ಬೆಲೆನೇ ಕೊಡ್ತಾಯಿಲ್ಲ. ಹೀಗಾಗಿ ನಾವೆಲ್ಲಾ ವಿಷ ಕುಡಿದು ಸಾಯುವುದು ಒಂದೇ ಉಳಿದಿದೆ ಅಂತ ರೈತ ಮಲ್ಲಿಕಾರ್ಜುನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬರದ ನಾಡಲ್ಲಿ ಬಂಗಾರದ ಬೆಳೆ ಬೆಳೆದ ಯುವ ರೈತ: ಮೂರುವರೆ ಎಕರೆ ಜಮೀನಿನಲ್ಲಿ ಲಕ್ಷಾಂತರ ರೂ ಲಾಭ

ಇನ್ನು ರೈತರು ಕಳೆದ ಮೂರು ತಿಂಗಳ ಹಿಂದೆ ಶೇಂಗಾ ಬೆಳೆಯನ್ನ ಬೆಳೆಯುವುದಕ್ಕೆ ಇದೆ ಎಪಿಎಂಸಿಯ ಕಮಿಷನ್ ಏಜೆಂಟ್​ಗಳಿಂದ ಕ್ವಿಂಟಲ್​ಗೆ 12 ಸಾವಿರ ರೂ. ಕೊಟ್ಟು ಶೇಂಗಾ ಬೀಜವನ್ನ ಖರೀದಿ ಮಾಡಿದ್ದರು. ಆದರೆ ಅದೇ ರೈತರು ಬೆಳೆದ ಶೇಂಗಾ ಬೆಳೆಯನ್ನ ಮಾರಾಟ ಮಾಡಲು ಬಂದರೆ ದಿಢೀರ್ ದರವನ್ನ ಇಳಿಸಲಾಗಿದೆ.

ಏಜೆಂಟ್​ರಿಂದ ರೈತರಿಗೆ ಮೋಸ

ಬೇರೆ ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಶೇಂಗಾ ಖರೀದಿ ಮಾಡುವುದಕ್ಕೆ ವ್ಯಾಪಾರಸ್ಥರು ಬಂದಿದ್ದರೂ, ಇದೆ ಎಪಿಎಂಸಿ ಯಾರ್ಡ್​ನ ವರ್ತಕರು ಹಾಗೂ ಕಮಿಷನ್ ಏಜೆಂಟ್​ಗಳು ಬೇರೆ ಕಡೆಯಿಂದ ಬಂದಿದ್ದ ವ್ಯಾಪಾರಸ್ಥರನ್ನ ವಾಪಸ್ ಕಳುಹಿಸುವ ಕೆಲಸ ಮಾಡಿದ್ದಾರೆ. ಏಕೆಂದರೆ ಹೊರಗಿನಿಂದ ಬಂದಿದ್ದ ವ್ಯಾಪಾರಸ್ಥರು ಕ್ವಿಂಟಲ್​ಗೆ 11 ರಿಂದ 13 ಸಾವಿರ ರೂ ಕೊಟ್ಟು ಖರೀದಿ ಮಾಡಲು ಮುಂದಾಗಿದ್ದರು. ಇದು ಸ್ಥಳೀಯ ಕಮಿಷನ್ ಏಜೆಂಟ್​ಗಳಿಗೆ ಹೊಡೆತ ಬೀಳುತ್ತೆ ಎನ್ನುವ ಕಾರಣಕ್ಕೆ ಖರೀದಿ ಮಾಡಲು ಬಿಡದೆ ವಾಪಸ್ ಕಳುಹಿಸಿದ್ದಾರೆ. ಆ ಮೂಲಕ ರೈತರಿಗೆ ಮೋಸ ಮಾಡಿದ್ದಾರೆ.

ಹೊರಗಿನಿಂದ ಬಂದ ವ್ಯಾಪಾರಸ್ಥರು ಹೆಚ್ಚಿನ ದರಕ್ಕೆ ಖರೀದಿ ಮಾಡಿದರೆ ರೈತರಿಗೆ ಲಾಭವಾಗುತ್ತಿತ್ತಿ. ಆದರೆ ಸ್ಥಳೀಯ ಏಜೆಂಟ್​ಗಳಿಂದ ದೋಖಾ ಆಗಿದೆ. ಇದೆ ಕಾರಣಕ್ಕೆ ಇಂದು ಎಪಿಎಂಸಿ ಮುಂದೆ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಸಂಘಟನೆ ನೇತೃತ್ವದಲ್ಲಿ ನೂರಾರು ರೈತರು ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದಾರೆ. ರೈತರ ಪ್ರತಿಭಟನೆಯಿಂದ ಎರಡು ಗಂಟೆ ಕಿ.ಮೀ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇದನ್ನೂ ಓದಿ: ಮೈಲಾರಲಿಂಗನಿಗೆ ಬಲಿ ಕೊಡಲು ತಂದಿದ್ದ ಕುರಿಮರಿಗಳನ್ನ ವಶಕ್ಕೆ ಪಡೆದು ಮಾರಾಟ ಮಾಡಿದ ಅಧಿಕಾರಿಗಳು

ಒಟ್ಟಿನಲ್ಲಿ ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದಂತಾಗಿದೆ. ಮೊದಲೇ ಪ್ರವಾಹದಿಂದ ಮುಂಗಾರು ಬೆಳೆ ಕಳೆದುಕೊಂಡು ಕಂಗಲಾದ ಅನ್ನದಾರಿಗೆ ಹಿಂಗಾರು ಬೆಳೆಯಾಗಿ ಶೇಂಗಾ ಬೆಳೆ ಕೈಹಿಡಿದಿತ್ತು. ಆದರೆ ಈಗ ದಿಢೀರ್ ದರ ಕುಸಿತ ಆಗಿದ್ದಕ್ಕೆ ರೈತರು ಕಂಗಲಾಗುವಂತೆ ಮಾಡಿದೆ. ಹೀಗಾಗಿ ಅಧಿಕಾರಿಗಳು ಹಾಗೂ ಸರ್ಕಾರ ಮಧ್ಯಪ್ರವೇಶಿಸುವಂತೆ ಒತ್ತಾಯಿಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಂತ್ರಸ್ತರ ಸೂರಿಗಾಗಿ ಕೊಟ್ಟ ‌ಜಾಗದಲ್ಲಿ ಮಸೀದಿ ನಿರ್ಮಾಣ: ಬಾಗಲಕೋಟೆಯಲ್ಲಿ ಭುಗಿಲೆದ್ದ ಆಕ್ರೋಶ – Kannada News | Hindu Workers Angry for Illegal mosque Build In Navanagar Bagalkot

ಬಾಗಲಕೋಟೆ , (ಫೆಬ್ರವರಿ 06): ಬಾಗಲಕೋಟೆ  ಜನರು ಆಲಮಟ್ಟಿ ಜಲಾಶಯಕ್ಕೆ ಮನೆ ಮಠ ಆಸ್ತಿ ಪಾಸ್ತಿ ಹಿರಿಯರ ಕನಸು ಎಲ್ಲವನ್ನು ಕೃಷ್ಣಾರ್ಪಣೆ ಮಾಡಿ ಊರು ಬಿಟ್ಟವರು. ಆ ಸಂತ್ರಸ್ತರ ಪುನರ್ವಸತಿಗೆ ನಿರ್ಮಾಣವಾದ ನಗರವೇ ನವನಗರ. ಮನೆಗಳ‌ ನಿರ್ಮಾಣಕ್ಕೆ ಅಂತ‌ ಇರುವ ಜಾಗದಲ್ಲೂ ಮಸೀದಿ (mosque) ನಿರ್ಮಾಣ ಕಾಮಗಾರಿ ನಡೆಯುತ್ತಿವೆ. ಮೊದಲು ತಗಡಿನ ಶೆಡ್ ತರಹ ಕಟ್ಟಿ‌ ಮುಂದೆ ಅವುಗಳನ್ನು ಮಸೀದಿ‌ಗಳನ್ನಾಗಿ ನಿರ್ಮಾಣ ಮಾಡಲಾಗುತ್ತದೆ. ಇದಕ್ಕೆ ರೊಚ್ಚಿಗೆದ್ದ ಸಾರ್ವಜನಿಕರು ಹಾಗೂ ಹಿಂದು ಕಾರ್ಯಕರ್ತರು ಹೋರಾಟದ ಹಾದಿ ಹಿಡಿದಿದ್ದಾರೆ.

ನವನಗರದಲ್ಲಿ ಮನೆಗಳಿಗೆ ಅಂತ ಸಂತ್ರಸ್ತರಿಗೆ ನೀಡಿದ ಜಾಗವನ್ನು ಹೆಚ್ಚಿನ ಹಣ ಕೊಟ್ಟು ‌ಖರೀದಿಸಲಾಗತ್ತಿದ್ದು, ನಂತರ ಆ ಜಾಗದಲ್ಲಿ‌ ಸದ್ದಿಲ್ಲದೇ ಮಸೀದಿ ಕಟ್ಟಡ ‌ಕಾಮಗಾರಿಗಳು ಶುರುವಾಗ್ತಿವೆ.ಮೊದಲು ತಗಡಿನ ಶೆಡ್ ತರಹ ಕಟ್ಟಿ‌ ಮುಂದೆ ಅವುಗಳನ್ನು ಮಸೀದಿ‌ಗಳನ್ನಾಗಿ ನಿರ್ಮಾಣ ಮಾಡಲಾಗುತ್ತದೆ.ಇದಕ್ಕೆ ರೊಚ್ಚಿಗೆದ್ದ ಸಾರ್ವಜನಿಕರು ಹಾಗೂ ಹಿಂದು ಕಾರ್ಯಕರ್ತರು ಹೋರಾಟದ ಹಾದಿ ಹಿಡಿದಿದ್ದಾರೆ.ಎಲ್ಲೆಂದರಲ್ಲಿ ಮಸೀದಿ ಕಟ್ಟಿಸಿ ಸ್ಪೀಕರ್ ಅಳವಡಿಸಿ ಆಜಾನ್ ಕೂಗುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ವೃದ್ದರ ಆರೋಗ್ಯದ ಮೇಲೆ ತೊಂದರೆಯಾಗುತ್ತದೆ.ಕೂಡಲೆ ಇಂತಹ ಕೃತ್ಯಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಗಂಡನನ್ನು ಕೋರ್ಟ್​​​​ ಕಟಕಟೆಯಲ್ಲಿ ನಿಲ್ಲಿಸಿದ ಪತ್ನಿ: ಜಡ್ಜ್ ಎದುರೇ ವಿಷಸೇವಿಸಿದ ಪತಿ; ಏನಿದು ಪ್ರಕರಣ?

ಚಂಡಿಗಢ ಮಾದರಿಯಲ್ಲಿ ನವನಗರವನ್ನು ನಿರ್ಮಾಣ ಮಾಡಿ ಸಂತ್ರಸ್ತರಿಗೆ ನಿವೇಶನಗಳನ್ನ ಹಂಚಿಕೆ ಮಾಡಿದೆ.ಇನ್ನೂ ಹಲವು ಸಂತ್ರಸ್ತರಿಗೆ ನಿವೇಷನಗಳ ಹಂಚಿಕೆ ಆಗಬೇಕಿದೆ.ಇದರ ನಡುವೆಯೇ ಈಗ ಸೆಕ್ಟರ್ ಮಾದರಿಯಲ್ಲಿ ನಿರ್ಮಾಣಗೊಂಡಿರುವ ನವನಗರದಲ್ಲಿ ಬಾಗಲಕೋಟೆ ಪಟ್ಟಣದ ಅಭಿವೃದ್ಧಿ ಪ್ರಾಧಿಕಾರ ಅನಧಿಕೃತ ಮಸೀಸಿಗಳಿಗೆ ಸ್ಥಾಪನೆಗೆ ಪರವಾನಿಗೆ ನೀಡುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿ ಅಕ್ರೋಶ ಹೊರ ಹಾಕಿದ್ದಾರೆ.

ಈ ಸಂಬಮಧ ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿ ಎರಡು ದಿನದ ಹಿಂದೆ ಪ್ರತಿಭಟನೆ ನಡೆಸಿದ್ದು, ರಾಜಕೀಯ ಒತ್ತಡಕ್ಕೆ ಮಣಿದು ನಿಯಮಾವಳಿಗಳನ್ನು ಗಾಳಿಗೆ ತೂರಿ ಅಧಿಕಾರಿಗಳು ಬೇಕಾಬಿಟ್ಟಿ ಪರವಾನಗಿ ನೀಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ‌ಇದೇ ರೀತಿ ನಿವೇಶನ ಜಾಗದಲ್ಲಿ ಹಳೆ ಬಾಗಲಕೋಟೆಯಲ್ಲೂ ಮಸೀದಿ ನಿರ್ಮಾಣ ಹಿನ್ನೆಲೆ ಕಳೆದ ವರ್ಷ ಜುಲೈ ನಲ್ಲಿ ನಗರಸಭೆ ಎದುರು ಬೃಹತ್ ಪ್ರತಿಭಟನೆ ನಡೆಸಲಾಗಿತ್ತು.ಈಗ ಬಿಟಿಡಿಎ ಎದುರು ನಡೆಸಲಾಗಿದೆ.ಇಷ್ಟಾದರೂ ಅಲ್ಲಲ್ಲಿ ಮಸೀದಿ ನಿರ್ಮಾಣ ಕಾರ್ಯ ನಡೆಯುತ್ತಲೇ ಇವೆ.

ಈ ಬಗ್ಗೆ ಮಾತಾಡಿದ ಬಾಗಲಕೋಟೆಯ ಮಾಜಿ ಶಾಸಕ ವೀರಣ್ಣ ಚರಂತಿಮಠ, ಇದಕ್ಕೆ ಬೇರೆ ಕಡೆಯಿಂದ ಫಂಡಿಂಗ್ ಆಗುತ್ತಿದೆ.ಫಂಡಿಂಗ್ ಆಗುತ್ತಿರೋದರಿಂದಲೇ ಮನೆ‌ ಜಾಗ ಖರೀದಿ ಮಾಡಿ ಮಸೀದಿ ಕಟ್ಟುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಬಿಟಿಡಿಎ ಆರ್ ಒ‌ ಪ್ರತಿಕ್ರಿಯಿಸಿದ್ದು, ಒಂದೊಂದು ಸೆಕ್ಟರ್ ನಲ್ಲಿ ಧಾರ್ಮಿಕ ಉದ್ದೇಶಕ್ಕಾಗಿ ಕಾರ್ನರ್ ಸೈಟ್ ಬಿಡಲಾಗಿದೆ. ಹಿಂದೆ‌ ಬಿಟಿಡಿಎ ಆಡಳಿತ ‌ಮಂಡಳಿ ನಿರ್ಧಾರ ಕೈಗೊಂಡಿದೆ.ನಿವೇಶನಕ್ಕಾಗಿ ನೀಡಿದ ಜಾಗದಲ್ಲಿ ‌ಮಸೀದಿ ಕಟ್ಟಡ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಕಟ್ಟಡ ಅನುಮತಿ ‌ಪಡೆದು ಕಟ್ಟಬೇಕು.ಇಂಜಿನಿಯರಿಂಗ್ ಸೆಕ್ಷನ್ ಅಧಿಕಾರಿಗಳನ್ನು ಕಳಿಸಿ ಪರಿಶೀಲನೆ ‌ನಡೆಸಿ ಬಿಟಿಡಿಎ ಮುಖ್ಯ ಇಂಜಿನಿಯರ್ ಅವರಿಗೆ ಮಾಹಿತಿ‌ ನೀಡುವುದಾಗಿ ತಿಳಿಸಿದ್ದಾರೆ.

ಒಟ್ಟಾರೆ ಅನಧಿಕೃತ ಮಸೀದಿಗಳ ತೆರವುಗೊಳಿಸಲು ಸ್ಥಳೀಯರು ಪಟ್ಟು ಹಿಡಿದಿದ್ದು,ಕ್ರಮ ಜರುಗಿಸದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಮುಂದೆ ಇದು ಯಾವ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Pariksha Pe Charcha 2026: ಇಂದು ನಾನು ಕಷ್ಟಪಟ್ಟು ‘ವಿಕಸಿತ ಭಾರತ’ದ ಬುನಾದಿ ಹಾಕುತ್ತಿರುವುದು ನಿಮಗಾಗಿ

ದೆಹಲಿ,ಫೆ.6: ಪ್ರಧಾನಿ ನರೇಂದ್ರ ಮೋದಿ ಅವರು ‘ಪರೀಕ್ಷಾ ಪೇ ಚರ್ಚಾ’ 2026 ರ ಸಂವಾದದಲ್ಲಿ ವಿದ್ಯಾರ್ಥಿಗಳನ್ನು ಕೇವಲ ಓದುವ ಮಕ್ಕಳಂತೆ ನೋಡದೆ, ದೇಶದ ಭವಿಷ್ಯದ ನಿರ್ಧಾರಕರು ಎಂಬಂತೆ ಮಾತನಾಡಿದ್ದಾರೆ. ಅವರ ಭಾಷಣದ ಈ ಭಾಗವು ಅತ್ಯಂತ ಸ್ಪೂರ್ತಿದಾಯಕವಾಗಿದ್ದು, ದೇಶಪ್ರೇಮ ಮತ್ತು ಭವಿಷ್ಯದ ದೃಷ್ಟಿಕೋನವನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. “ಭಾರತವು ಸ್ವಾತಂತ್ರ್ಯದ ನೂರನೇ ವರ್ಷವನ್ನು (2047) ಆಚರಿಸುವಾಗ ನೀವು 35 ರಿಂದ 40 ವರ್ಷದವರಾಗಿರುತ್ತೀರಿ. ಅಂದರೆ ವಿಕಸಿತ ಭಾರತದ ಫಲವನ್ನು ಉಣ್ಣುವವರು ಮತ್ತು ಅದನ್ನು ಮುನ್ನಡೆಸುವವರು ನೀವೇ. ಇಂದು ನಾನು ಕಷ್ಟಪಟ್ಟು ‘ವಿಕಸಿತ ಭಾರತ’ದ ಬುನಾದಿ ಹಾಕುತ್ತಿರುವುದು ನಿಮಗಾಗಿ. ಹಾಗಿದ್ದ ಮೇಲೆ, ನಿಮ್ಮ ಭವಿಷ್ಯಕ್ಕಾಗಿ ನೀವು ಈಗಿನಿಂದಲೇ ಶ್ರಮಿಸಬೇಡವೇ?” ಎಂದು ಪ್ರಧಾನಿ ಮೋದಿ ಅವರು ವಿದ್ಯಾರ್ಥಿಗಳಲ್ಲಿ ಕೇಳಿದ್ದಾರೆ. ನಾವು ಬಳಸುವ ವಸ್ತುಗಳು, ಆಟಿಕೆಗಳು ಅಥವಾ ತಂತ್ರಜ್ಞಾನ ಇರಲಿ, ಸಾಧ್ಯವಾದಷ್ಟು ಭಾರತೀಯ ಉತ್ಪನ್ನಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Pariksha Pe Charcha: ಹಿಂದಿ, ನೇಪಾಳಿ, ಬಂಗಾಳಿ ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ – Kannada News | Sikkim Student sings song in Hindi Nepali and Bengali in front of a PM Modi during Pariksha Pe Charcha

ನವದೆಹಲಿ, ಫೆಬ್ರವರಿ 6: ಇಂದು ಪ್ರಧಾನಿ ನರೇಂದ್ರ ಮೋದಿ ಮಕ್ಕಳ ಜೊತೆ ಪರೀಕ್ಷಾ ಪೆ ಚರ್ಚಾ (Pariksha Pe Charcha) ನಡೆಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯ ಮುಂದೆ ಸಿಕ್ಕಿಂನ ಹುಡುಗಿಯೊಬ್ಬಳು ಹಿಂದಿ, ನೇಪಾಳಿ ಮತ್ತು ಬಂಗಾಳಿ ಭಾಷೆಗಳಲ್ಲಿ ತಾನೇ ಬರೆದ ‘ಹಮಾರ ಭಾರತ್ ಭೂಮಿ’ ಎಂಬ ದೇಶಭಕ್ತಿ ಗೀತೆಯೊಂದನ್ನು ಹಾಡುವ ಮೂಲಕ ನರೇಂದ್ರ ಮೋದಿಯವರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ತಾನು 3 ಭಾಷೆಗಳಲ್ಲಿ ಹಾಡು ಬರೆದಿದ್ದೇನೆ ಎಂದು ಆಕೆ ಹೇಳಿದಾಗ ಸಂತೋಷಗೊಂಡ ಪ್ರಧಾನಿ ಮೋದಿ, ‘ನಿನಗೆ ಕವಿತೆ ಬರೆಯುವ ಅಭ್ಯಾಸವಿದೆಯೇ? ನಿನಗೆ ಬರವಣಿಗೆ ಎಂದರೆ ಇಷ್ಟವೇ?’ ಎಂದು ಕೇಳಿದರು. ಅದಕ್ಕೆ ಹೌದು ಎಂದ ಆ ಬಾಲಕಿ ಸುಶ್ರಾವ್ಯವಾಗಿ ತಾನು ಬರೆದ ಹಾಡನ್ನು ಹಾಡಿದಾಗ ಮೋದಿ ಹಾಗೂ ಇತರೆ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟುತ್ತಾ ಆಕೆಯನ್ನು ಪ್ರೋತ್ಸಾಹಿಸಿದರು.

ಪ್ರಧಾನಿ ನರೇಂದ್ರ ಮೋದಿ ಇಂದು ಪರೀಕ್ಷಾ ಪೆ ಚರ್ಚಾ 9ನೇ ಆವೃತ್ತಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಮೋದಿ ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷೆಗೆ ಸಿದ್ಧವಾಗುತ್ತಿರುವ ಮಕ್ಕಳ ಜೊತೆ ಅನೌಪಚಾರಿಕ ಸಂವಾದ ನಡೆಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ನಾನು ಮಾತನಾಡಿದ್ದರಲ್ಲಿ ತಪ್ಪೇ ಇಲ್ಲ ಎಂದ ಕೆ. ಮಂಜು – Kannada News | Producer K Manju talks about Chakravarthy Chandrachud and Kichcha Sudeep

ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಸಿನಿಮಾ ನಿರ್ಮಾಪಕರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದ್ದು, ಅದಕ್ಕೆ ನಿರ್ಮಾಪಕ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಸುದೀಪ್ (Kichcha Sudeep) ಜೊತೆ ಚಂದ್ರಚೂಡ್ ಆಪ್ತವಾಗಿದ್ದಾರೆ. ಆ ಕುರಿತು ಕೂಡ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ‘ಚಂದ್ರಚೂಡ್ ವೈಯಕ್ತಿಕ ವಿಷಯಗಳನ್ನು ನಾವು ಮಾತನಾಡಿಲ್ಲ. ಚಿತ್ರರಂಗದ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಯಾವ ನಿರ್ಮಾಪಕರು ಕೂಡ ಮೋಸ ಮಾಡಿಲ್ಲ. ಚಿತ್ರರಂಗಕ್ಕೆ ನಿನ್ನ ಕೊಡುಗೆ ಏನಿದೆ? ಸುದೀಪ್ ಕೂಡ ನಿರ್ಮಾಪಕ ಅಲ್ವಾ? ನಿರ್ಮಾಪಕರ ಬಗ್ಗೆ ಚಂದ್ರಚೂಡ್ ಈ ರೀತಿ ಮಾತನಾಡಿದ್ದು ಸುದೀಪ್ ಅವರಿಗೆ ಗೊತ್ತಾದರೆ ಸುಮ್ಮನೆ ಇರುತ್ತಾರಾ? ಆ ಬಗ್ಗೆ ನಾನು ಮಾತನಾಡಿದ್ದರಲ್ಲಿ ತಪ್ಪು ಏನಿದೆ’ ಎಂದು ಕೆ. ಮಂಜು (K Manju) ಅವರು ಪ್ರಶ್ನಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪ್ರೇಯಸಿ ಜೊತೆ ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ – Kannada News | 15 year old boy hangs from high tension wire demanding marriage to girlfriend

ಪ್ರತಾಪ್‌ಗಢ, ಫೆಬ್ರವರಿ 6: ಪ್ರತಾಪಗಢದಲ್ಲಿ 15 ವರ್ಷದ ಬಾಲಕನೊಬ್ಬ ತಾನು ಪ್ರೀತಿಸಿದ ಹುಡುಗಿಯ ಜೊತೆ ಮದುವೆ (Wedding) ಮಾಡಿಸುವುದಾದರೆ ಮಾತ್ರ ಕೆಳಗೆ ಇಳಿಯುತ್ತೇನೆ ಎಂದು ಹೈ-ವೋಲ್ಟೇಜ್ ವಿದ್ಯುತ್ ತಂತಿಯನ್ನು ಹಿಡಿದು ನೇತಾಡುತ್ತಿದ್ದ. ಒಲೀಸರು ಆತ ಇಷ್ಟಪಟ್ಟ ಹುಡುಗಿಯ ಜೊತೆ ಮದುವೆ ಮಾಡಿಸುವುದಾಗಿ ಮನವೊಲಿಸಿದ ನಂತರ ಆತ ಕೆಳಗೆ ಇಳಿಯಲು ಒಪ್ಪಿಕೊಂಡ.

ಕೊನೆಗೆ ಏಣಿಯನ್ನು ಹಾಕಿ ಅವನನ್ನು ಸುರಕ್ಷಿತವಾಗಿ ಕೆಳಗೆ ತರಲಾಯಿತು. 40 ನಿಮಿಷಗಳ ಕಾಲ ಆತ ವಿದ್ಯುತ್ ತಂತಿ ಹಿಡಿದು ನೇತಾಡುತ್ತಿದ್ದ. ಕೆಳಗೆ ಬಂದ ತಕ್ಷಣ ಆತ ಅಳಲು ಪ್ರಾರಂಭಿಸಿದನು. ಆತ 13 ವರ್ಷದ ಹುಡುಗಿಯನ್ನು ಪ್ರೀತಿಸುತ್ತಿದ್ದ. 1 ವರ್ಷದಿಂದ ಅವರಿಬ್ಬರೂ ಪ್ರೀತಿಸುತ್ತಿದ್ದರು. ಆಕೆಯ ಜೊತೆ ಮದುವೆ ಮಾಡಲು ಮನೆಯವರು ಒಪ್ಪಿರಲಿಲ್ಲ. ಹೀಗಾಗಿ, ಆತ ಈ ನಾಟಕವಾಡಿದ್ದ. ನಂತರ ಪೊಲೀಸರು ಹುಡುಗನನ್ನು ಪೊಲೀಸ್ ಠಾಣೆಗೆ ಕರೆದೊಯ್ದು, ಅವನಿಗೆ ಸಲಹೆ ನೀಡಿ ಅವನ ಕುಟುಂಬಕ್ಕೆ ಒಪ್ಪಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೆಟ್‌ಫ್ಲಿಕ್ಸ್‌ನ ‘ಘೂಸ್‌ಖೋರ್ ಪಂಡತ್’ ವಿವಾದ: ಟೀಸರ್ ಡಿಲೀಟ್ ಮಾಡಿದ ಚಿತ್ರತಂಡ – Kannada News | Ghooskhor Pandat Controversy Netflix deletes teaser after backlash

ಬಾಲಿವುಡ್ ನಟ ಮನೋಜ್ ಬಾಜಪೇಯಿ ಅಭಿನಯದ ‘ಘೂಸ್‌ಖೋರ್ ಪಂಡತ್’ (Ghooskhor Pandat) ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದ ಸೃಷ್ಟಿ ಮಾಡಿದೆ. ತೀವ್ರ ವಿರೋಧ ಹಾಗೂ ಕಾನೂನು ಸಂಘರ್ಷದ ಬೆನ್ನಲ್ಲೇ ಇಂಟರ್ನೆಟ್‌ನಿಂದ ಈ ಸಿನಿಮಾದ ಟೀಸರ್ ಹಾಗೂ ಎಲ್ಲ ಪ್ರಚಾರದ ಕಂಟೆಂಟ್​​ಗಳನ್ನು ತೆಗೆದು ಹಾಕಲು ನೆಟ್‌ಫ್ಲಿಕ್ಸ್ ಹಾಗೂ ಚಿತ್ರತಂಡ ನಿರ್ಧರಿಸಿದೆ. ಕೇಂದ್ರ ಸರ್ಕಾರವು ನೆಟ್‌ಫ್ಲಿಕ್ಸ್ (Netflix) ಸಂಸ್ಥೆಗೆ ಚಿತ್ರದ ಟೀಸರ್ ತೆಗೆದುಹಾಕುವಂತೆ ಸೂಚನೆ ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಧಾರ್ಮಿಕ ಮತ್ತು ಜಾತಿ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ‘ಘೂಸ್‌ಖೋರ್ ಪಂಡತ್’ ಚಿತ್ರದ ಶೀರ್ಷಿಕೆ ಮತ್ತು ಕಥಾವಸ್ತು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಕ್ಕೂ ಮುನ್ನ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಚಿತ್ರತಂಡದ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದ್ದರು. ಅಲ್ಲದೆ, ಚಿತ್ರದ ಬಿಡುಗಡೆಗೆ ತಡೆ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನೂ ಸಲ್ಲಿಸಲಾಗಿತ್ತು.

ನಿರ್ದೇಶಕ ನೀರಜ್ ಪಾಂಡೆ ಸ್ಪಷ್ಟನೆ: ಹೆಚ್ಚುತ್ತಿರುವ ಆಕ್ರೋಶವನ್ನು ಗಮನಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ನಿರ್ದೇಶಕ ನೀರಜ್ ಪಾಂಡೆ, ‘ನಮ್ಮ ಚಿತ್ರವು ಒಂದು ಕಾಲ್ಪನಿಕ ಪೊಲೀಸ್ ಡ್ರಾಮಾ ಆಗಿದೆ. ‘ಪಂಡತ್’ ಎಂಬ ಪದವನ್ನು ಕೇವಲ ಒಂದು ಕಾಲ್ಪನಿಕ ಪಾತ್ರದ ಆಡುಭಾಷೆಯ ಹೆಸರಾಗಿ ಬಳಸಲಾಗಿದೆ. ಆದರೆ, ಈ ಶೀರ್ಷಿಕೆಯಿಂದ ಕೆಲವು ವೀಕ್ಷಕರ ಭಾವನೆಗಳಿಗೆ ನೋವಾಗಿದೆ ಎಂಬುದು ನಮಗೆ ಅರ್ಥವಾಗಿದೆ’ ಎಂದು ತಿಳಿಸಿದ್ದಾರೆ.

ಮನೋಜ್ ಬಾಜಪೇಯಿ ಪ್ರತಿಕ್ರಿಯೆ: ಈ ಸಿನಿಮಾದಲ್ಲಿ ‘ಪಂಡತ್’ ಎಂಬ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿರುವ ನಟ ಮನೋಜ್ ಬಾಜಪೇಯಿ, ‘ಯಾವುದೇ ಸಮುದಾಯಕ್ಕೆ ನೋವುಂಟು ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ. ಇದೊಂದು ದೋಷಪೂರಿತ ವ್ಯಕ್ತಿಯ ಆತ್ಮಸಾಕ್ಷಿಯ ಪಯಣದ ಕಥೆಯಾಗಿದೆ. ಜನರ ಭಾವನೆಗಳು ಮತ್ತು ಕಳಕಳಿಗಳನ್ನು ನಾನು ಗೌರವಿಸುತ್ತೇನೆ’ ಎಂದು ಎಕ್ಸ್ (ಟ್ವಿಟರ್) ಖಾತೆಯ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಬ್ರಾಹ್ಮಣ ಸಮುದಾಯಕ್ಕೆ ಅವಮಾನ? ಮನೋಜ್ ಸಿನಿಮಾ ವಿರುದ್ಧ ಆಕ್ರೋಶ

ಚಿತ್ರದ ಶೀರ್ಷಿಕೆಯಲ್ಲಿ ಪಂಡತ್ (ಪಂಡಿತ್) ಎಂಬ ಹೆಸರು ಬಳಕೆ ಆಗಿರುವುದರಿಂದ ಬ್ರಾಹ್ಮಣ ಸಮುದಾಯಕ್ಕೆ ನೋವುಂಟಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಕಾರಣದಿಂದಲೇ ಇಷ್ಟೆಲ್ಲ ವಿವಾದ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version