ಮಹಿಳೆಯರಿಗೇಕೆ ಪುರುಷರಿಗಿಂತ ಜಾಸ್ತಿ ಚಳಿಯಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಮಾಹಿತಿ – Kannada News | Why Women Feel Colder Than Men

ಚಳಿಗಾಲದಲ್ಲಿ (Winter), ಕೆಲವರು ಸ್ವೇಟರ್, ಕ್ಯಾಪ್, ಸಾಕ್ಸ್ ಹೀಗೆ ಪೂರ್ತಿ ದೇಹವನ್ನು ಕವರ್ ಮಾಡಿಕೊಂಡಿರುತ್ತಾರೆ. ಆದರೆ ಕೆಲವರು ಕೇವಲ ಶರ್ಟ್ ಧರಿಸಿ ಹಾಯಾಗಿರುತ್ತಾರೆ. ಮತ್ತೊಂದಿಷ್ಟು ಜನ ಸ್ವಲ್ಪ ಬಿಸಿಲು ತಾಕಿದರೂ ಬೆವರುತ್ತಾರೆ, ಕೆಲವರು ಎಷ್ಟೇ ಬಿಸಿಲಿರಲಿ ಆರಾಮವಾಗಿರುತ್ತಾರೆ, ಯಾವುದೇ ರೀತಿಯ ವ್ಯತ್ಯಾಸ ಅವರಲ್ಲಿ ಕಂಡುಬರುವುದಿಲ್ಲ. ಇಷ್ಟೆಲ್ಲಾ ಪೀಠಿಕೆ ಹಾಕಿರುವುದಕ್ಕೆ ಕಾರಣವಿದೆ. ಆದರೆ ನೀವು ಎಂದಾದರೂ ಈ ವಿಷಯದ ಕುರಿತು ಆಳವಾದ ಚಿಂತನೆ ಮಾಡಿದ್ದೀರಾ ಅಥವಾ ಈ ರೀತಿ ಆಗುವುದಕ್ಕೆ ಕಾರಣವೇನು ಎಂದು ಯೋಚಿಸಿದ್ದೀರಾ… ಆರೋಗ್ಯ ತಜ್ಞರ ಪ್ರಕಾರ, ಈ ರೀತಿ ಆಗುವುದಕ್ಕೂ ಕಾರಣವಿದೆ. ಹೌದು, ವ್ಯಕ್ತಿಯ ಚಯಾಪಚಯ ಕ್ರಿಯೆ ಈ ರೀತಿ ಆಗುವುದಕ್ಕೆ ಕಾರಣ ಎಂದು ಹೇಳಲಾಗುತ್ತದೆ. ಹಾಗಾದರೆ ಇವೆರಡಕ್ಕೂ ಇರುವ ಸಂಬಂಧವೇನು, ಈ ರೀತಿಯಾದಾಗ ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸಾಮಾನ್ಯವಾಗಿ ಚಳಿಗಾಲದಲ್ಲಿ ಹೆಚ್ಚು ಚಳಿಯಾಗದಿರುವುದು, ಬಿಸಿಲಿದ್ದರೂ ಬೆವರದಿರುವುದಕ್ಕೆ ದೇಹದ ಚಯಾಪಚಯ ಮತ್ತು ಸ್ನಾಯುಗಳೇ ಕಾರಣ. ವೇಗದ ಚಯಾಪಚಯ ಕ್ರಿಯೆ ಇದ್ದವರು ದೇಹದಲ್ಲಿ ಹೆಚ್ಚಿನ ಶಾಖವನ್ನು ಉತ್ಪಾದಿಸುತ್ತಾರೆ, ಅದಕ್ಕಾಗಿಯೇ ಅವರಿಗೆ ಚಳಿಯಾಗುವುದು ಬಹಳ ಕಡಿಮೆ. ಕಳಪೆ ಚಯಾಪಚಯ ಕ್ರಿಯೆ ಇರುವವರಲ್ಲಿ ಚಳಿ ತೀವ್ರವಾಗಿ ಕಂಡುಬರುತ್ತದೆ. ಚಯಾಪಚಯ ಕ್ರಿಯೆಯ ಜೊತೆಗೆ, ದೇಹದಲ್ಲಿ ರಕ್ತ ಹೇಗೆ ಪರಿಚಲನೆ ಕೂಡ ಈ ರೀತಿಯಾಗುವುದಕ್ಕೆ ಕಾರಣವಾಗಬಹುದು.

ರಕ್ತ ಪರಿಚಲನೆಗೂ, ಚಳಿಯಾಗದಿರುವುದಕ್ಕೆ ಕಾರಣವಿದೆಯೇ?

ದೇಹದಲ್ಲಿ ರಕ್ತ ಪರಿಚಲನೆ ಸರಿಯಾಗಿಲ್ಲದಿದ್ದರೆ, ಕೈಗಳು ಮತ್ತು ಪಾದಗಳು ತಣ್ಣಗಾಗುತ್ತವೆ. ಹಾಗಾಗಿ ಬೆಚ್ಚಗಿನ ವಾತಾವರಣದಲ್ಲಿಯೂ ಸಹ ವ್ಯಕ್ತಿಗೆ ಚಳಿಯಾದ ಅನುಭವವಾಗುತ್ತದೆ. ಮತ್ತೊಂದೆಡೆ, ಉತ್ತಮ ರಕ್ತ ಪರಿಚಲನೆ ಇರುವವರಿಗೆ ಚಳಿ ಅಷ್ಟಾಗಿ ಆಗುವುದಿಲ್ಲ. ಇದರ ಜೊತೆಗೆ ದೇಹದ ಆಕಾರ ಮತ್ತು ತೂಕ ಕೂಡ ವ್ಯಕ್ತಿಗೆ ಎಷ್ಟು ಚಳಿಯಾಗುತ್ತಿದೆ ಎಂಬುದನ್ನು ನಿರ್ಧರಿಸುತ್ತದೆ. ದೇಹದ ಗಾತ್ರ ದೊಡ್ಡಡಾಗಿದ್ದರೆ ಅಥವಾ ದೇಹದಲ್ಲಿ ಹೆಚ್ಚಿನ ಕೊಬ್ಬಿನ ಅಂಶ ಹೆಚ್ಚಾಗಿದ್ದರೆ ಚಳಿಯಾಗುವ ಪ್ರಮಾಣ ತೆಳ್ಳಗಿರುವವರಿಗೆ ಹೋಲಿಸಿದರೆ ಕಡಿಮೆಯಾಗಿರುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲಿ ಇತರರಿಗಿಂತ ತುಸು ಹೆಚ್ಚೆ ನಿಮ್ಗೆ ಚಳಿಯಾಗುತ್ತಾ? ಇದಕ್ಕೆ ಈ ವಿಟಮಿನ್ ಕೊರತೆಯೇ ಕಾರಣ

ಮಹಿಳೆಯರು ಮತ್ತು ಪುರುಷರ ನಡುವೆ ಯಾರಿಗೆ ಚಳಿ ಜಾಸ್ತಿಯಾಗುತ್ತದೆ?

ರಕ್ತದ ಕೊರತೆ ಇರುವವರು, ಅಂದರೆ ಹಿಮೋಗ್ಲೋಬಿನ್ ಅಂಶ ಕಡಿಮೆ ಇರುವವರಿಗೆ ಬೇಗ ಚಳಿಯಾಗುತ್ತದೆ. ಮಹಿಳೆಯರಲ್ಲಿ ಹೆಚ್ಚಾಗಿ ಹಿಮೋಗ್ಲೋಬಿನ್ ಕಡಿಮೆ ಇರುವುದರಿಂದ ಪುರುಷರಿಗಿಂತ ಬೇಗ ಚಳಿಯಾಗುತ್ತದೆ. ಏಕೆಂದರೆ ಮಹಿಳೆಯರು ಮತ್ತು ಪುರುಷರ ದೇಹದ ರಚನೆಯಲ್ಲಿ ವ್ಯತ್ಯಾಸವಿದೆ. ಮಹಿಳೆಯರಿಗೆ ಸ್ನಾಯುವಿನ ದ್ರವ್ಯರಾಶಿ ಕಡಿಮೆ ಇರುತ್ತದೆ. ಇನ್ನು, ವಯಸ್ಸು ಮತ್ತು ಜೀವನಶೈಲಿ ಕೂಡ ಈ ರೀತಿಯಾಗುವುದಕ್ಕೆ ಕಾರಣವಾಗಬಹುದು. ವಯಸ್ಸಾದಂತೆ, ಆಂತರಿಕ ತಾಪಮಾನವನ್ನು ನಿಯಂತ್ರಿಸುವ ದೇಹದ ಸಾಮರ್ಥ್ಯವು ಕಡಿಮೆಯಾಗುತ್ತದೆ. ಅದಕ್ಕಾಗಿಯೇ ವಯಸ್ಸಾದವರಿಗೆ ಬಹಳ ಬೇಗ ಚಳಿಯಾಗುತ್ತದೆ. ಇನ್ನು, ಜೀವನಶೈಲಿಯ ಬಗ್ಗೆ ಹೇಳುವುದಾದರೆ, ಕಡಿಮೆ ನೀರು ಕುಡಿಯುವುದು ಮತ್ತು ಹೆಚ್ಚು ಕೆಫೀನ್ ಸೇವನೆ ದೇಹದ ಉಷ್ಣತೆಯನ್ನು ನಿಯಂತ್ರಿಸುವ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಶೆಟ್ಟಿ ಕಣ್ಣೀರು

ಗಿಲ್ಲಿ ನಟ ಅವರು ತುಂಬಾನೇ ಕಷ್ಟದಿಂದ ಮೇಲಕ್ಕೆ ಬಂದವರು. ಈಗ ಕರ್ನಾಟಕದಾದ್ಯಂತ ಅವರನ್ನು ಆರಾಧಿಸುವವರು ಇದ್ದಾರೆ. ಈ ಮೊದಲು ಅವರು ಅನ್ನ ಕದ್ದು ತಿಂದಿದ್ದರಂತೆ. ಈ ವಿಷಯವನ್ನು ಬಿಗ್ ಬಾಸ್ ಫಿನಾಲೆ ವಾರದಲ್ಲಿ ಅವರು ಹೇಳಿಕೊಂಡಿದ್ದಾರೆ.ಇದನ್ನು ಕೇಳಿ ರಕ್ಷಿತಾ ಶೆಟ್ಟಿ ಅವರು ಕಣ್ಣೀರು ಹಾಕಿದ್ದಾರೆ. ಆ ಸಂದರ್ಭದ ಪ್ರೋಮೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಿನಿಮಾ ಸೋಲಿನ ಬಳಿಕ 15 ಕೋಟಿ ರೂ. ಸಂಭಾವನೆ ಬಿಟ್ಟುಕೊಟ್ಟ ಕಾರ್ತಿಕ್ ಆರ್ಯನ್ – Kannada News | TMMTMTTM actor Kartik Aaryan rs 15 cr remuneration cut after flop

ನಟ ಕಾರ್ತಿಕ್ ಆರ್ಯನ್ (Kartik Aaryan) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. 2025ರ ಡಿಸೆಂಬರ್​​ನಲ್ಲಿ ಅವರು ನಟಿಸಿದ ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ (TMMTMTTM) ಸಿನಿಮಾ ಬಿಡುಗಡೆ ಆಯಿತು. ಕಾರ್ತಿಕ್ ಆರ್ಯನ್ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ಅವರು ಅಭಿನಯಿಸಿದ್ದರು. ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಮಾಡಲಿಲ್ಲ. ಅದರಿಂದಾಗಿ ನಿರ್ಮಾಪಕರಿಗೆ ನಷ್ಟ ಆಗಿದೆ. ಹಾಗಾಗಿ ತಮ್ಮ ಪಾಲಿನ 15 ಕೋಟಿ ರೂಪಾಯಿ ಸಂಭಾವನೆಯನ್ನು (Remuneration) ಬಿಟ್ಟುಕೊಡಲು ಕಾರ್ತಿಕ್ ಆರ್ಯನ್ ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

‘ಧರ್ಮ ಪ್ರೊಡಕ್ಷನ್ಸ್’ ಮೂಲಕ ಕರಣ್ ಜೋಹರ್ ಅವರು ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಸಿನಿಮಾವನ್ನು ನಿರ್ಮಿಸಿದ್ದಾರೆ. ಕಾರ್ತಿಕ್ ಆರ್ಯನ್ ಮತ್ತು ಅನನ್ಯಾ ಪಾಂಡೆ ಜೊತೆಯಲ್ಲಿ ನೀನಾ ಗುಪ್ತಾ, ಜಾಕಿ ಶ್ರಾಫ್ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಡಿಸೆಂಬರ್ 25ರಂದು ರಿಲೀಸ್ ಆದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಅಂದಾಜು 90 ಕೋಟಿ ರೂಪಾಯಿ ಬಜೆಟ್​​ನಲ್ಲಿ ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಸಿನಿಮಾ ನಿರ್ಮಾಣ ಆಗಿತ್ತು. ಆದರೆ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ ಗಳಿಸಿದ್ದು 30 ಕೋಟಿ ರೂಪಾಯಿ ಮಾತ್ರ. ಇದರಿಂದಾಗಿ ನಿರ್ಮಾಪಕ ಕರಣ್ ಜೋಹರ್ ಅವರು ನಷ್ಟ ಅನುಭವಿಸಿದ್ದಾರೆ. ನಿರ್ಮಾಪಕರ ನಷ್ಟ ಕಡಿಮೆ ಮಾಡಲು ಕಾರ್ತಿಕ್ ಆರ್ಯನ್ ಅವರು 15 ಕೋಟಿ ರೂಪಾಯಿ ಸಂಭಾವನೆ ಬಿಟ್ಟುಕೊಟ್ಟಿದ್ದಾರೆ ಎಂದು ವರದಿ ಆಗಿದೆ.

2021ರಲ್ಲಿ ಕಾರ್ತಿಕ್ ಆರ್ಯನ್ ಮತ್ತು ಕರಣ್ ಜೋಹರ್ ನಡುವೆ ಮನಸ್ತಾಪ ಉಂಟಾಗಿತ್ತು. ಆದರೆ 2023ರ ವೇಳೆಗೆ ಅವರ ನಡುವಿನ ಮುನಿಸು ಕಡಿಮೆ ಆಯಿತು. ಆ ಬಳಿಕ ಅವರು ಮತ್ತೆ ಜೊತೆಯಾಗಿ ಸಿನಿಮಾ ಮಾಡಲು ಆರಂಭಿಸಿದರು. ಆದರೆ ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಚಿತ್ರದ ಸೋಲಿನಿಂದಾಗಿ ಅವರಿಬ್ಬರ ನಡುವೆ ಪುನಃ ಕಿರಿಕ್ ಆರಂಭ ಆಗಿದೆ ಎಂಬ ಗಾಸಿಪ್ ಹಬ್ಬಿತ್ತು. ಆ ವದಂತಿಯನ್ನು ಅವರ ಆಪ್ತ ಮೂಲಗಳು ತಳ್ಳಿಹಾಕಿವೆ.

ಇದನ್ನೂ ಓದಿ: ಅಪ್ರಾಪ್ತೆ ಜೊತೆ ಕಾರ್ತಿಕ್ ಆರ್ಯನ್ ಡೇಟಿಂಗ್? ಇಬ್ಬರ ಮಧ್ಯೆ 18 ವರ್ಷ ವಯಸ್ಸಿನ ಅಂತರ

‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಸಿನಿಮಾದ ಸೋಲಿಗೆ ಕೆಲವು ಕಾರಣಗಳಿವೆ. ಪ್ರೇಕ್ಷಕರಿಗೆ ಈ ಸಿನಿಮಾ ಅಷ್ಟೇನೂ ಇಷ್ಟ ಆಗಲಿಲ್ಲ. ಈ ಚಿತ್ರ ಬಿಡುಗಡೆ ಆದಾಗ ಥಿಯೇಟರ್​​ಗಳಲ್ಲಿ ‘ಧುರಂಧರ್’ ಸಿನಿಮಾದ ಅಬ್ಬರ ಜೋರಾಗಿತ್ತು. ‘ಧುರಂಧರ್’ ಚಿತ್ರದ ಎದುರು ಪೈಪೋಟಿ ನೀಡಲು ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಸಿನಿಮಾಗೆ ಸಾಧ್ಯವಾಗಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರಿಗರೇ ಗಮನಿಸಿ, ಈ ಎರಡು ದಿನ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಕರೆಂಟ್​​ ಇರುವುದಿಲ್ಲ – Kannada News | Bangalore Power Outage: BESCOM Announces Jan 17 18 Cuts for Grid Upgrades

ಬೆಂಗಳೂರು, ಜ.16: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವಿದ್ಯುತ್​​​ ಕಂಬಗಳ ಬದಲಾವಣೆ, ಇತರ ಕೆಲಸ ಕಾರಣದಿಂದ ಈ ವಾರಾಂತ್ಯದಲ್ಲಿ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಮಾಡಲಿದೆ ಎಂದು ಹೇಳಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಕರೆಂಟ್​​ ಇರುವುದಿಲ್ಲ ಎಂದು ಹೇಳಲಾಗಿದೆ. ವಿದ್ಯುತ್ ಜಾಲದ ಸುರಕ್ಷತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು ವಾರಾಂತ್ಯದಲ್ಲಿ ಈ ಕೆಲಸವನ್ನು ಮಾಡಲು ಆಯ್ಕೆ ಮಾಡಿಕೊಂಡಿದ್ದು, ಕೆಲಸಕ್ಕೆ ಹೋಗುವವರಿಗೆ ಇದರಿಂದ ಅನುಕೂಲವಾಗಲಿದೆ. ಶನಿವಾರ ಮತ್ತು ಭಾನುವಾರ (ಜನವರಿ 17 ಮತ್ತು 18) ಹಗಲಿನಲ್ಲಿ ವಿದ್ಯುತ್ ವ್ಯತ್ಯಯಕ್ಕೆ ಮಾಡಲಾಗುವುದು ಎಂದು ನಾಗರಿಕರಿಗೆ ಮೊದಲೇ ಎಚ್ಚರಿಕೆ ನೀಡಿದ್ದಾರೆ.

ಈ ದಿನದಂದು ಟ್ರಾನ್ಸ್‌ಫಾರ್ಮರ್‌ಗಳನ್ನು ನವೀಕರಿಸುವುದು ಮತ್ತು ಫೀಡರ್‌ಗಳ ಸುರಕ್ಷತೆಗಳ ಬಗ್ಗೆ ಪರಿಶೀಲನೆ, ಇತರ ಕೆಲಸಗಳನ್ನು ಮಾಡಲಾಗುವುದು. ಇದರಿಂದ ಮುಂದಿನ ದಿನಗಳಲ್ಲಾಗುವ ಸಮಸ್ಯೆಗಳನ್ನು ತಡೆಯಬಹುದು ಎಂದು ಬೆಸ್ಕಾಂ ಹೇಳಿದೆ. ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿ ವಿದ್ಯುತ್ ಕಡಿತಗೊಳ್ಳಿದೆ. ದಕ್ಷಿಣ ಬೆಂಗಳೂರು ಪ್ರದೇಶಗಳಾದ ಬೊಮ್ಮನಹಳ್ಳಿ, ಹೆಚ್‌ಎಸ್‌ಆರ್ ಲೇಔಟ್, ಕೂಡ್ಲು, ಜಕ್ಕಸಂದ್ರ, ಬೆಳ್ಳಂದೂರು ಮತ್ತು ಸರ್ಜಾಪುರ ರಸ್ತೆಯಲ್ಲಿ ವಿದ್ಯುತ್​​ ಕಡಿತವಾಗಲಿದೆ. ಪೂರ್ವ ಬೆಂಗಳೂರಿನ ಮಾರತಹಳ್ಳಿ, ವೈಟ್‌ಫೀಲ್ಡ್, ಕೆಆರ್ ಪುರಂ, ಮಹದೇವಪುರ, ಬಾಣಸವಾಡಿ, ಮತ್ತು ಹೊರಮಾವು ವಿದ್ಯುತ್​​ ಕಡಿತವಾಗಲಿದೆ.

ಬೆಂಗಳೂರಿನ ವಿದ್ಯುತ್ ಕಡಿತದ ಪರಿಣಾಮವನ್ನು ಕಡಿಮೆ ಮಾಡಲು, ನಿವಾಸಿಗಳು ಮತ್ತು ವ್ಯಾಪಾರಿಗಳು ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ವಿದ್ಯುತ್ ಕಡಿತಗೊಳ್ಳುವ ಮೊದಲು ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಪವರ್ ಬ್ಯಾಂಕ್‌ಗಳು ಸಂಪೂರ್ಣವಾಗಿ ಚಾರ್ಜ್ ಆಗಿವೆಯೇ ಎಂದು ನೋಡಿಕೊಳ್ಳಬೇಕು. ಮನೆಯಿಂದ ಕೆಲಸ ಮಾಡುವವರು, ಕೆಲಸದ ಸ್ಥಳದಲ್ಲಿ ವೈ-ಫೈ ಹೊಂದಿರುವ ಬಗ್ಗೆ ಮೊದಲೆ ಪರಿಶೀಲನೆ ಮಾಡಿಕೊಂಡಿರಬೇಕು. ಇನ್ವರ್ಟರ್‌ಗಳು, ಬ್ಯಾಕಪ್ ಲೈಟ್‌ಗಳು ಮತ್ತು ಇತರ ಅಗತ್ಯ ಸಾಧನಗಳು ಕಾರ್ಯನಿರ್ವಹಿಸುತ್ತಿವೆಯೇ ಎಂದು ಪರಿಶೀಲಿಸುವುದು ಅಗತ್ಯ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಕಂಪನಿಯಲ್ಲಿ 1 ವರ್ಷ ಅನುಭವ ಇರುವವರಿಗೆ 35 ಲಕ್ಷದ ಪ್ಯಾಕೇಜ್? 5 ವರ್ಷ ದುಡಿದವರಿಗೆ ಮರ್ಯಾದೆಯೇ ಇಲ್ಲ

ಈ ಮೇಲೆ ತಿಳಿಸಲಾದ ಎಲ್ಲ ಪ್ರದೇಶಗಳಲ್ಲಿ ಸಂಪೂರ್ಣ ವಿದ್ಯುತ್​ ಕಡಿತ ಇರಲ್ಲ, ಕೆಲವು ಪ್ರದೇಶಗಳು ಅಲ್ಪಾವಧಿಯ ವಿದ್ಯುತ್ ಅಡಚಣೆಗಳು ಅಥವಾ ಸಣ್ಣಪುಟ್ಟ ಅಡೆತಡೆಗಳನ್ನು ಮಾತ್ರ ಇರುತ್ತದೆ. ಇದಲ್ಲದೆ, ನಗರದ ವಿದ್ಯುತ್ ಮೂಲಸೌಕರ್ಯದ ದೀರ್ಘಕಾಲೀನ ಸುಧಾರಣೆಗೆ ಈ ದುರಸ್ಥಿತಿಗಳನ್ನು ಮಾಡಲೇಬೇಕು. ಈ ದಿನಕ್ಕೆ ನಿಮಗೆ ವಿದ್ಯುತ್​​​​​​ ಸಮಸ್ಯೆ ಉಂಟಾದರೂ ಮುಂದಿನ ದಿನಗಳಲ್ಲಿ ಇದರ ಲಾಭವನ್ನು ಪಡೆದುಕೊಳ್ಳಬಹುದು ಎಂದು ಹೇಳಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ ಹೇಳಿದ್ದಿಷ್ಟು – Kannada News | Siddaramaiah Talks about non veg Lunch In Congress Leader KN Rajanna Home at Tumakuru

ತುಮಕೂರು, (ಜನವರಿ 16): ಸಿಎಂ ಸಿದ್ದರಾಮಯ್ಯನವರು ಇಂದು (ಜನವರಿ 16) ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟಿಸಿದರು. ಬಳಿಕ
ಸಿದ್ದರಾಮಯ್ಯನವರು ನೇರವಾಗಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಕೆಎನ್ ರಾಜಣ್ಣ ನಿವಾಸಕ್ಕೆ ಭೇಟಿ ನೀಡಿ ಭರ್ಜರಿ ಊಟ ಸವಿದರು. ಸಿದ್ದರಾಮಯ್ಯನವರಿಗಂತಲೇ ಅವರಿಗೆ ಇಷ್ಟವಾದ ನಾಟಿ ಕೋಳಿ ಬಾಡೂಟ ತಯಾರಿಸಲಾಗಿತ್ತು. ರಾಗಿ ಮುದ್ದೆ, ನಾಟಿಕೋಳಿ ಸಾರು, ಕಾಲ್ ಸೂಪ್ ಸೇರಿದಂತೆ ವಿವಿಧ ಖಾದ್ಯ ಸಿದ್ಧಪಡಿಸಲಾಗಿದ್ದು, ಸಿದ್ದರಾಮಯ್ಯನವರು ಸಹ ರಾಜಣ್ಣನವರ ನಿವಾಸಕ್ಕೆ ತೆರಳಿ ಬಾಡೂಟ ಸವಿದಿದ್ದಾರೆ.

ಊಟದ ಬಳಿಕ ಮಾಧ್ಯಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಕೆ.ಎನ್.ರಾಜಣ್ಣ ನಿವಾಸದಲ್ಲಿ ಸಿದ್ಧಪಡಿಸಿದ್ದ ಊಟ ಚೆನ್ನಾಗಿತ್ತು. ಕಾಲ್ ಸೂಪ್, ನಾಟಿ ಕೋಳಿ ತಂದು ಅಡುಗೆ ಮಾಡಿಸಿದ್ದರು. ನನಗೆ ಹುಷಾರಿರಲಿಲ್ಲ. ಜ್ವರ ಇದ್ದುದರಿಂದ ಬಾಯಿ ಕೆಟ್ಟೋಗಿತ್ತು. ನಾನ್ ವೆಜ್ ಇತ್ತಲ್ಲ ಚೆನ್ನಾಗಿತ್ತು ಊಟ ಮಾಡಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AUS: ಭಾರತ-ಆಸ್ಟ್ರೇಲಿಯಾ ನಡುವೆ 3 ಮಾದರಿಯ ಸರಣಿ; ವೇಳಾಪಟ್ಟಿ ಪ್ರಕಟ – Kannada News | India Women vs Australia 2025: Full Series Schedule and Alyssa Healy Farewell Tour

ಪ್ರಸ್ತುತ ಭಾರತದಲ್ಲಿ ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ (Women’s Premier League) ನಡೆಯುತ್ತಿದೆ. ಹೀಗಾಗಿ ಭಾರತ ಮಹಿಳಾ ತಂಡದ ಎಲ್ಲಾ ಆಟಗಾರ್ತಿಯರು ಈ ಮಿನಿ ಟಿ20 ಸಮರದಲ್ಲಿ ನಿರತರಾಗಿದ್ದಾರೆ. ಆ ಬಳಿಕ ಹರ್ಮನ್​ಪ್ರೀತ್ ಕೌರ್ (Harmanpreet Kaur) ಪಡೆ ಏಕದಿನ, ಟಿ20 ಮತ್ತು ಏಕೈಕ ಟೆಸ್ಟ್ ಪಂದ್ಯದ ಸರಣಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಟೀಂ ಇಂಡಿಯಾದ ಈ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ 2025 ರಲ್ಲೇ ಪ್ರಕಟಿಸಿತ್ತು. ಈ 3 ಸರಣಿಗಳಿಗಾಗಿ ಭಾರತ, ಆಸ್ಟ್ರೇಲಿಯಾ ಪ್ರವಾಸ (India vs Australia) ಕೈಗೊಳ್ಳಲಿದ್ದು, ಅಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ ಮೂರು ಏಕದಿನ ಮತ್ತು ಮೂರು ಟಿ20 ಹಾಗೂ ಏಕೈಕ 4 ದಿನಗಳ ಟೆಸ್ಟ್ ಪಂದ್ಯವನ್ನು ಆಡಲಿದೆ.

ಭಾರತ-ಆಸೀಸ್ ನಡುವೆ 3 ಮಾದರಿಯ ಸರಣಿ

ಈ ಪ್ರವಾಸವು ಟಿ20 ಸರಣಿಯೊಂದಿಗೆ ಆರಂಭವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20ಪಂದ್ಯ ಫೆಬ್ರವರಿ 15 ರಂದು ಸಿಡ್ನಿಯಲ್ಲಿ ನಡೆಯಲಿದೆ. ಎರಡನೇ ಟಿ20ಪಂದ್ಯ ಫೆಬ್ರವರಿ 19 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ. ಮೂರನೇ ಪಂದ್ಯ ಫೆಬ್ರವರಿ 21 ರಂದು ಅಡಿಲೇಡ್ ಓವಲ್‌ನಲ್ಲಿ ನಡೆಯಲಿದೆ. ಆ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಫೆಬ್ರವರಿ 24 ರಂದು ಆರಂಭವಾಗಲಿದೆ. ಮೊದಲ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯಲಿದ್ದು, ಎರಡನೇ ಏಕದಿನ ಪಂದ್ಯ ಫೆಬ್ರವರಿ 27 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ. ಮೂರನೇ ಏಕದಿನ ಪಂದ್ಯ ಮಾರ್ಚ್ 1 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ. ಅಂತಿಮವಾಗಿ ಮಾರ್ಚ್​ 6 ರಿಂದ 9 ರವರೆಗೆ ಏಕೈಕ ಹಗಲು-ರಾತ್ರಿ ಟೆಸ್ಟ್ ಪಂದ್ಯ ನಡೆಯಲಿದೆ.

ಆಸ್ಟ್ರೇಲಿಯಾದಲ್ಲಿ ಭಾರತದ ದಾಖಲೆ ಹೇಗಿದೆ?

ಆಸ್ಟ್ರೇಲಿಯಾ ಪ್ರವಾಸವು ಟೀಂ ಇಂಡಿಯಾಗೆ ಖಂಡಿತವಾಗಿಯೂ ಸುಲಭವಲ್ಲ. ಏಕೆಂದರೆ ಆಸ್ಟ್ರೇಲಿಯಾ ನೆಲದಲ್ಲಿ ಭಾರತದ ದಾಖಲೆಯು ಏಕದಿನ ಮತ್ತು ಟಿ20 ಎರಡೂ ಸ್ವರೂಪಗಳಲ್ಲಿ ಅತ್ಯಂತ ಕಳಪೆಯಾಗಿದೆ. ಮೊದಲನೆಯದಾಗಿ, ಏಕದಿನ ಮಾದರಿಯಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾದಲ್ಲಿ ಆಡಿದ 19 ಪಂದ್ಯಗಳಲ್ಲಿ ಕೇವಲ ನಾಲ್ಕು ಪಂದ್ಯಗಳನ್ನು ಗೆದ್ದಿದ್ದು, 15 ಪಂದ್ಯಗಳಲ್ಲಿ ಸೋತಿದೆ. ಇದು ಮಾತ್ರವಲ್ಲದೆ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾದಲ್ಲಿ ಇದುವರೆಗೆ ಏಕದಿನ ಸರಣಿಯನ್ನು ಗೆದ್ದಿಲ್ಲ. ಇನ್ನು ಟಿ20 ಮಾದರಿಯಲ್ಲಿ, ಭಾರತ 12 ಪಂದ್ಯಗಳಲ್ಲಿ ಕೇವಲ ನಾಲ್ಕು ಪಂದ್ಯಗಳನ್ನು ಗೆದ್ದಿದ್ದರೆ, ಆಸ್ಟ್ರೇಲಿಯಾ ಏಳು ಪಂದ್ಯಗಳನ್ನು ಗೆದ್ದಿದೆ. ಆದಾಗ್ಯೂ, ಭಾರತ ಆಸ್ಟ್ರೇಲಿಯಾದಲ್ಲಿ ಒಂದು ಟಿ20 ಸರಣಿಯನ್ನು ಗೆದ್ದಿದ್ದು, ಆ ಗೆಲುವು 10 ವರ್ಷಗಳ ಹಿಂದೆ ಅಂದರೆ 2016 ರಲ್ಲಿ ಬಂದಿತ್ತು. ಈ ಬಾರಿ ಏನಾಗುತ್ತದೆ ಎಂದು ನೋಡುವುದು ಆಸಕ್ತಿದಾಯಕವಾಗಿರುತ್ತದೆ.

ಅಲಿಸಾ ಹೀಲಿಯ ಕೊನೆಯ ಸರಣಿ

ಈ ಭಾರತ-ಆಸ್ಟ್ರೇಲಿಯಾ ಸರಣಿಯು ಅಲಿಸಾ ಹೀಲಿ ಅವರ ಕೊನೆಯ ಸರಣಿಯಾಗಲಿದೆ. ಈ ಸರಣಿಯ ನಂತರ ಅವರು ನಿವೃತ್ತರಾಗಲಿದ್ದಾರೆ. ಈ ಲೆಜೆಂಡರಿ ವಿಕೆಟ್ ಕೀಪರ್-ಬ್ಯಾಟರ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದ್ದಾರೆ. 35 ವರ್ಷ ವಯಸ್ಸಿನ ಅವರು 123 ಏಕದಿನ ಪಂದ್ಯಗಳಲ್ಲಿ 35.98 ಸರಾಸರಿಯಲ್ಲಿ 3,563 ರನ್ ಗಳಿಸಿದ್ದಾರೆ, ಇದರಲ್ಲಿ ಏಳು ಶತಕಗಳು ಸೇರಿವೆ. ಹಾಗೆಯೇ ಟಿ20ಮಾದರಿಯಲ್ಲಿ 25.45 ಸರಾಸರಿಯಲ್ಲಿ 3,054 ರನ್ ಗಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:55 pm, Fri, 16 January 26

Source link

ಆಪರೇಷನ್ ಸಿಂಧೂರ್ ದೊಡ್ಡ ದಾಳಿಯಾಗಿತ್ತು, ಪಾಕಿಸ್ತಾನವನ್ನೇ ದಿಗ್ಭ್ರಮೆಗೊಳಿಸಿತು; ಒಪ್ಪಿಕೊಂಡ ಲಷ್ಕರ್ ಕಮಾಂಡರ್ – Kannada News | It was a major attack left Pakistan government baffled Lashkar commander Admission on massive Operation Sindoor damage

ನವದೆಹಲಿ, ಜನವರಿ 16: 2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ (Operation Sindoor) ಮೇ 6 ಮತ್ತು 7ರ ಮಧ್ಯರಾತ್ರಿಯ ದಾಳಿಯ ಸಮಯದಲ್ಲಿ ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಗುಂಪಿನ ಪ್ರಧಾನ ಕಚೇರಿಯನ್ನು ಸಂಪೂರ್ಣವಾಗಿ ನೆಲಸಮ ಮಾಡಿತ್ತು ಎಂದು ಲಷ್ಕರ್-ಎ-ತೈಬಾ (ಎಲ್‌ಇಟಿ) ಉನ್ನತ ಕಮಾಂಡರ್ ಹಫೀಜ್ ಅಬ್ದುರ್ ರೌಫ್ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅಬ್ದುಲ್ ರೌಫ್, ಆಪರೇಷನ್ ಸಿಂಧೂರ್ ಅನ್ನು ಪ್ರಮುಖ ದಾಳಿ ಎಂದು ಕರೆದಿದ್ದಾರೆ. ಆ ದಾಳಿ ಪಾಕಿಸ್ತಾನ (Pakistan) ಸರ್ಕಾರವನ್ನು ದಿಗ್ಭ್ರಮೆಗೊಳಿಸಿತು, ಆದರೆ, ಪಾಕಿಸ್ತಾನೀಯರನ್ನು ಹೇಗೋ ಅಲ್ಲಾಹ್ ರಕ್ಷಿಸಿದನು ಎಂದು ಹೇಳಿದ್ದಾರೆ.

“ಮೇ 6 ಮತ್ತು 7ರಂದು ಮುರಿಡ್ಕೆಯಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತು. ಮಸೀದಿಯನ್ನು ಗುರಿಯಾಗಿಸಿಕೊಂಡು ಕೆಡವಲಾಯಿತು. ಅದು ಒಂದು ದೊಡ್ಡ ದಾಳಿಯಾಗಿತ್ತು, ಆದರೆ ಅಲ್ಲಾಹ್ ನಮ್ಮನ್ನು ರಕ್ಷಿಸಿದನು. ಅಲ್ಲಿ ಮಕ್ಕಳು ಇರಲಿಲ್ಲ” ಎಂದು ಅವರು ಹೇಳುವ ವಿಡಿಯೋ ವೈರಲ್ ಆಗಿದೆ. “ಭಯೋತ್ಪಾದಕರ ಅಡಗುತಾಣಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಮೋದಿ ಹೇಳಿದರು, ಆದರೆ ವಾಸ್ತವದಲ್ಲಿ ಪಾಕಿಸ್ತಾನದ ಮೇಲೆ ದಾಳಿ ಮಾಡಲಾಗಿತ್ತು, ಯುದ್ಧದ ನಿಯಮಗಳು ಬದಲಾಗಿವೆ” ಎಂದಿದ್ದಾರೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ವೇಳೆ ಭಾರತದಿಂದ ದೇವರೇ ನಮ್ಮನ್ನು ಕಾಪಾಡಿದ; ಪಾಕ್ ಸೇನಾ ಮುಖ್ಯಸ್ಥ ಹೇಳಿದ್ದೇನು?

ಕಳೆದ ವರ್ಷ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಎಲ್‌ಇಟಿಯ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದರು. ಅವರಲ್ಲಿ ಹೆಚ್ಚಿನವರು ಪ್ರವಾಸಿಗರು. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) 9 ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಮತ್ತೆ ‘ಟಾಕ್ಸಿಕ್’ ಚಿತ್ರಕ್ಕೆ ಚಿಂತೆ ತಂದಿಟ್ಟ ‘ಧುರಂದರ್ 2’ ಟೀಂ – Kannada News | Dhurandhar 2 vs Toxic: Yash’s Film Release and Akshay Khanna Reshoot Rumors Explained

‘ಧುರಂಧರ್’ ಸಿನಿಮಾ (Dhurandhar Movie) ಸೂಪರ್ ಹಿಟ್ ಆಗಿದೆ. ಈ ಚಿತ್ರ 2025ರ ಡಿಸೆಂಬರ್ 5ರಂದು ತೆರೆಗೆ ಬಂತು. ಈಗಲೂ ಸಿನಿಮಾ ಅದ್ಭುತ ಕಲೆಕ್ಷನ್ ಮಾಡುತ್ತಿದೆ. ಚಿತ್ರವನ್ನು ಜನರು ಮುಗಿಬಿದ್ದು ವೀಕ್ಷಣೆ ಮಾಡುತ್ತಿದ್ದಾರೆ. ಈಗ ಸಿನಿಮಾಗೆ ಸೀಕ್ವೆಲ್ ಬರುತ್ತಿದೆ. ಮಾರ್​ಚ್ 19ರಂದು ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಲಿದೆ ಎನ್ನಲಾಗಿತ್ತು. ಈ ವಿಷಯದಲ್ಲಿ ಇನ್ನೂ ಗೊಂದಲ ಇದೆ. ಹೀಗಿರುವಾಗಲೇ ಒಂದು ಅಪ್​​​ಡೇಟ್ ಸಿಕ್ಕಿದೆ. ಇದು ‘ಟಾಕ್ಸಿಕ್’ ಚಿತ್ರ ತಂಡದ ಚಿಂತೆಗೆ ಕಾರಣ ಆಗಿದೆ.

‘ಧುರಂಧರ್ 2’ ಸಿನಿಮಾ ಮಾರ್ಚ್ ರೇಸ್​​ನಿಂದ ಮುಂದಕ್ಕೆ ಹೋಗಿದೆ ಎನ್ನಲಾಗಿತ್ತು. ಇದಕ್ಕೆ ಕಾರಣ ಅಕ್ಷಯ್ ಖನ್ನಾ. ‘ಧುರಂದರ್ 2’ ಚಿತ್ರದ ಕೆಲವು ದೃಶ್ಯಗಳನ್ನು ರೀಶೂಟ್ ಮಾಡುವ ಅಗತ್ಯವಿರುವ ಕಾರಣಕ್ಕೆ ಅಕ್ಷಯ್ ಖನ್ನಾ ಅವರ ಕಾಲ್​​ಶೀಟ್ ಕೇಳಲಾಗಿದೆ ಎನ್ನಲಾಗಿತ್ತು. ಆದರೆ, ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ, ಅಕ್ಷಯ್ ಖನ್ನಾ ಯಾವುದೇ ಶೂಟ್​​ನಲ್ಲಿ ಭಾಗಿ ಆಗುತ್ತಿಲ್ಲವಂತೆ.

ಆದಿತ್ಯ ಧಾರ್ ಅವರು ಪರ್ಫೆಕ್ಷನಿಸ್ಟ್ ಎನಿಸಿಕೊಂಡಿದ್ದಾರೆ. ಅವರು ಸ್ಕ್ರಿಪ್ಟ್​​ನ ಬರೆಯುವಾಗಲೇ ಎಲ್ಲವನ್ನೂ ಆಲೋಚಿಸಿರುತ್ತಾರೆ. ‘ಧುರಂದರ್ 2’ ವಿಷಯದಲ್ಲೂ ಅವರು ಹಾಗೆಯೇ ಮಾಡಿದ್ದಾರೆ. ಈಗಾಗಲೇ ಸಿನಿಮಾ ಶೂಟ್ ಪೂರ್ಣಗೊಂಡಿದ್ದು, ಅವರು ಭಾಗಿ ಆಗೋದಿಲ್ಲ ಎಂದು ಹೇಳಲಾಗುತ್ತಿದೆ.

ಅಕ್ಷಯ್ ಖನ್ನಾ ಅವರು ‘ಧುರಂಧರ್ 2’ ಚಿತ್ರದ ಕೆಲವೇ ದೃಶ್ಯಗಳಲ್ಲಿ ಬರಲಿದ್ದಾರೆ. ಇದನ್ನು ಈಗಾಗಲೇ ಶೂಟ್ ಮಾಡಲಾಗಿದೆ. ಹೀಗಾಗಿ, ‘ಧುಂಧರ್ 2’ ಚಿತ್ರದ ರೀಶೂಟ್ ಎಂಬುದರಲ್ಲಿ ಯಾವುದೇ ಅರ್ಥವಿಲ್ಲ ಎನ್ನುತ್ತಿವೆ ಮೂಲಗಳು.

ಇದನ್ನೂ ಓದಿ: ‘ಧುರಂಧರ್ 2’ ಸಿನಿಮಾ ಬಿಡುಗಡೆ ಮುಂದೂಡಿಕೆ, ‘ಟಾಕ್ಸಿಕ್’ ಕಾರಣವಾ?

‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಇದೇ ದಿನ ‘ಧುರಂದರ್ 2’ ಕೂಡ ರಿಲೀಸ್ ಆಗಲಿದೆ. ‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ನಟಿಸಿದ್ದಾರೆ. ಈ ಸಿನಿಮಾಗೆ ದೊಡ್ಡ ಬಜೆಟ್ ಸುರಿಯಲಾಗಿದೆ. ಹಿಂದಿ ಬೆಲ್ಟ್​​ನಲ್ಲಿ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಸ್ಪರ್ಧೆ ನಿರೀಕ್ಷಿಸಬಹುದಾಗಿದೆ.

‘ಟಾಕ್ಸಿಕ್’ ಸಿನಿಮಾಗೆ ಯಶ್ ಹೀರೋ. ಗೀತು ಮೋಹನ್​​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಕನ್ನಡದ ಜೊತೆಗೆ ಇಂಗ್ಲಿಷ್​ನಲ್ಲೂ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಿಎಂಸಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ; ಭರ್ಜರಿ ಗೆಲುವಿನತ್ತ ಬಿಜೆಪಿ ಮೈತ್ರಿಕೂಟ; ಠಾಕ್ರೆ ಸಹೋದರರಿಗೆ ಹಿನ್ನಡೆ – Kannada News | BMC Election Results BJP led Mahayuti inches towards big win Thackerays Lose Grip On Mumbai

ಮುಂಬೈ, ಜನವರಿ 16: ಮಹಾರಾಷ್ಟ್ರದ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಸಂಗತಿಯಾಗಿರುವ ಬಿಎಂಸಿ ಚುನಾವಣೆಯ ಫಲಿತಾಂಶ ಹೊರಬೀಳಲು ಕೆಲವೇ ಕ್ಷಣಗಳು ಬಾಕಿ ಇದೆ. ಈಗಾಗಲೇ ಎಕ್ಸಿಟ್ ಪೋಲ್ (Exit Polls) ಊಹಿಸಿರುವಂತೆ ಬಿಜೆಪಿ ಮೈತ್ರಿಕೂಟ ಭರ್ಜರಿ ಜಯ ಗಳಿಸುವುದು ಖಚಿತವಾಗಿದೆ. ಈ ಮೂಲಕ 25 ವರ್ಷಗಳಿಂದ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ (BMC) ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಉದ್ಧವ್ ಠಾಕ್ರೆಗೆ ಈ ಬಾರಿ ಭಾರೀ ಮುಖಭಂಗವಾಗಲಿದೆ. ಇಂದು ಸಂಜೆ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಇಲ್ಲಿಯವರೆಗಿನ ಮತ ಎಣಿಕೆಯಲ್ಲಿ ಯಾರು ಮುಂದಿದ್ದಾರೆ ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯ ಎಲ್ಲಾ 23 ಗೊತ್ತುಪಡಿಸಿದ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿರುವಾಗ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಮಹಾಯುತಿ ಮೈತ್ರಿಕೂಟ ಮುಂಬೈಯನ್ನು ಮುನ್ನಡೆಸಲಿದೆ. ಇಂದು ಸಂಜೆಯೊಳಗೆ ಅಂತಿಮ ಫಲಿತಾಂಶವನ್ನು ಘೋಷಿಸಲಾಗುವುದು.

227 ವಾರ್ಡ್‌ಗಳಲ್ಲಿ ಕಾರ್ಪೊರೇಟರ್‌ಗಳನ್ನು ಆಯ್ಕೆ ಮಾಡಲು ಗುರುವಾರ (ಜನವರಿ 15) ಬಿಎಂಸಿ ಚುನಾವಣೆಗಳು ನಡೆದವು. ಇದು ಭಾರತದ ಅತಿದೊಡ್ಡ ಮತ್ತು ಶ್ರೀಮಂತ ಪುರಸಭೆ ಎಂದು ಪರಿಗಣಿಸಲ್ಪಟ್ಟಿದ್ದು, ಬಹುಮತ ಗೆಲ್ಲಲು ಕನಿಷ್ಠ 114 ಸ್ಥಾನಗಳು ಬೇಕಾಗುತ್ತವೆ. ಈ ಚುನಾವಣೆಯಲ್ಲಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಿದ್ದರು. 879 ಮಹಿಳೆಯರು ಮತ್ತು 821 ಪುರುಷರು ಸೇರಿದಂತೆ ಸುಮಾರು 1,700 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಸದ್ಯದ ಮಟ್ಟಿಗೆ ಬಿಎಂಸಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ 115 ವಾರ್ಡ್‌ಗಳಲ್ಲಿ ಮುಂದಿದ್ದರೆ, ಠಾಕ್ರೆ ಸೋದರರು 77 ಸ್ಥಾನಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: BMC Election Exit Polls: ಮುಂಬೈನಲ್ಲಿ ಉದ್ಧವ್ ಠಾಕ್ರೆಯ 25 ವರ್ಷಗಳ ಅಧಿಕಾರ ಅಂತ್ಯ, ಬಿಜೆಪಿಗೆ ಬಹುಮತ; ಮತಗಟ್ಟೆ ಸಮೀಕ್ಷೆ ಭವಿಷ್ಯ

ಬಿಎಂಸಿಯಲ್ಲಿ ಬಿಜೆಪಿ 136 ವಾರ್ಡ್‌ಗಳಲ್ಲಿ ಸ್ಪರ್ಧಿಸಿದರೆ, ಶಿವಸೇನೆ (ಶಿಂಧೆ ಬಣ) 89 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತು. ಮತ್ತೊಂದೆಡೆ, ಶಿವಸೇನೆ (ಯುಬಿಟಿ) 164 ವಾರ್ಡ್‌ಗಳಲ್ಲಿ, ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) 52 ವಾರ್ಡ್‌ಗಳಲ್ಲಿ ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) 12 ವಾರ್ಡ್‌ಗಳಲ್ಲಿ ಸ್ಪರ್ಧಿಸಿತು. ಈ ಬಾರಿಯ ಚುನಾವಣೆಯಲ್ಲಿ ಶಿವಸೇನೆ (ಶಿಂಧೆ)ಗೆ ದೊಡ್ಡ ಹಿನ್ನಡೆಯಾಗಿದ್ದು, ಶಿಂಧೆ ಸೇನಾ ಸಂಸದ ರವೀಂದ್ರ ವೈಕರ್ ಅವರ ಪುತ್ರಿ ದೀಪ್ತಿ ವೈಕರ್ ವಾರ್ಡ್ ಸಂಖ್ಯೆ 73ರಿಂದ ಚುನಾವಣೆಯಲ್ಲಿ ಸೋತಿದ್ದಾರೆ.

ಬಿಎಂಸಿಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ 115 ವಾರ್ಡ್‌ಗಳಲ್ಲಿ ಮುಂದಿದೆ. ಬಿಜೆಪಿ 86 ​​ರಲ್ಲಿ ಮುನ್ನಡೆ ಸಾಧಿಸಿದರೆ, ಏಕನಾಥ್ ಶಿಂಧೆ ಅವರ ಶಿವಸೇನೆ 29 ವಾರ್ಡ್‌ಗಳಲ್ಲಿ ಮುಂದಿದೆ. ಠಾಕ್ರೆ ಸೋದರಸಂಬಂಧಿಗಳು 77 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಉದ್ಧವ್ ಠಾಕ್ರೆ ಅವರ ಸೇನೆ 71ರಲ್ಲಿ ಮುಂದಿದ್ದರೆ, ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) 6 ವಾರ್ಡ್‌ಗಳಲ್ಲಿ ಮುಂದಿದೆ.

ಇದನ್ನೂ ಓದಿ: Pune Elections: ಮುಂಬೈ ಜೊತೆ ಪುಣೆಯಲ್ಲೂ ಬಿಜೆಪಿಯದ್ದೇ ದರ್ಬಾರ್; ಎಕ್ಸಿಟ್ ಪೋಲ್​ನಲ್ಲಿ ಏನಿದೆ?

ಮಹಾರಾಷ್ಟ್ರದಾದ್ಯಂತ 29 ಮುನ್ಸಿಪಲ್ ಕಾರ್ಪೊರೇಷನ್‌ಗಳ ಒಟ್ಟಾರೆ ಅಂಕಿಅಂಶಗಳು ಬಿಜೆಪಿಗೆ ಜಯ ಸಿಗಲಿದೆ ಎಂದು ಹೇಳುತ್ತಿವೆ. ಒಟ್ಟಾರೆ ಅಂಕಿ ಅಂಶಗಳು ಬಿಜೆಪಿ 909 ವಾರ್ಡ್‌ಗಳಲ್ಲಿ ಮುಂದಿದೆ ಎಂದು ತೋರಿಸುತ್ತದೆ. ಹಾಗೇ ಶಿಂಧೆ ನೇತೃತ್ವದ ಮಿತ್ರಪಕ್ಷ ಶಿವಸೇನೆ 237 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದೆ. ಪಕ್ಷವಾರು ಲೆಕ್ಕಾಚಾರದಲ್ಲಿ, ಕಾಂಗ್ರೆಸ್ 179 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಮೂರನೇ ಸ್ಥಾನದಲ್ಲಿದೆ. ಶಿವಸೇನೆ (ಯುಬಿಟಿ) ನಾಲ್ಕನೇ ಸ್ಥಾನದಲ್ಲಿದೆ. ಅಜಿತ್ ಪವಾರ್ ಅವರ ಎನ್‌ಸಿಪಿ 112 ಸ್ಥಾನಗಳಲ್ಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು? – Kannada News | Siddaramaiah’s Helicopter Faces Technical Problem, So CM Travel To Tumakuru By Road

ತುಮಕೂರು, (ಜನವರಿ 16):ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೆರಳಬೇಕಿದ್ದ ಹೆಲಿಕಾಪ್ಟರ್​ನಲ್ಲಿ (helicopter) ತಾಂತ್ರಿಕ ದೋಷ ಕಂಡು ಬಂದಿದೆ. ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್​ಪೋರ್ಟ್​ನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ತುಮಕೂರಿಗೆ (Tumakuru) ತೆರಳಬೇಕಿ​ತು. ಆದ್ರೆ, ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಟೇಕಾಫ್ ಆಗಿಲ್ಲ. ಇದರಿಂದ ಸಿದ್ದರಾಮಯ್ಯ ಬೆಂಗಳೂರಿನಿಂದ ರಸ್ತೆ ಮೂಲಕವೇ ತುಮಕೂರಿಗೆ ತೆರಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಹೆಲಿಕಾಪ್ಟರ್​ ಹಾರಾಟ ಬಲು ದುಬಾರಿ: ಕೋಟ್ಯಂತರ ರೂ.ವೆಚ್ಚ, ಎಷ್ಟು ಗೊತ್ತಾ?

Source link

Exit mobile version