Headlines

Bengaluru: ಟ್ರಾಫಿಕ್​​ ನಿಯಮ ಉಲ್ಲಂಘಿಸುವ ಮುನ್ನ ಜೋಕೆ: ಇನ್ಮುಂದೆ ದಾಖಲಾಗುತ್ತೆ FIR – Kannada News | Bengaluru Traffic Police Begin Registering FIRs for Traffic Violations

ಬೆಂಗಳೂರು, ಜನವರಿ 13: ರಸ್ತೆಯಲ್ಲಿ ಸಂಚಾರ ಪೊಲೀಸರು ಇಲ್ಲ, ಕ್ಯಾಮರಾಗಳ ಕಣ್ಣಿಗೆ ಕಾಣಿಸಲ್ಲ ಎಂದು ಮೊಂಡತನ ಮಾಡಿ ಟ್ರಾಫಿಕ್​​ ನಿಯಮಗಳನ್ನು ಉಲ್ಲಂಘಿಸಿ ವಾಹನಗಳ ಚಾಲನೆ ಮಾಡ್ತಿದ್ದೀರಾ? ಹಾಗಿದ್ರೆ ಸಂಕಷ್ಟ ಎದುರಿಸೋಕೆ ಸಿದ್ಧರಾಗಿ. ಸಂಚಾರ ನಿಯಮಗಳ ಪಾಲನೆ ಮಾಡದಿದ್ರೆ ಇನ್ಮುಂದೆ ದಂಡ ಒಂದೇ ಬೀಳಲ್ಲ, ಕೇಸ್​​ ಕೂಡ ದಾಖಲಾಗುತ್ತೆ. ಟ್ರಾಫಿಕ್​​ ರೂಲ್ಸ್​​ ಬ್ರೇಕ್​​ ಮಾಡೋರ ವಿರುದ್ಧ ಬೆಂಗಳೂರಲ್ಲಿ ಪೊಲೀಸರು ಈಗಾಗಲೇ ಎಫ್​ಐಆರ್​​ ದಾಖಲಿಸಲು ಆರಂಭಿಸಿದ್ದಾರೆ. ಹೌದು, ಸಿಗ್ನಲ್ ಜಂಪ್ ಮಾಡುವುದು, ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವುದು…

Read More

ಗಾಜಿಯಾಬಾದ್: ಮಣಿಕಟ್ಟು ಸೀಳಿಕೊಂಡು ಅಪಾರ್ಟ್​ಮೆಂಟ್​ನ 11ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ ಯುವಕ – Kannada News | Ghaziabad Tragedy: 28 Year Old Man Dies After Fall From Residential Building

ಗಾಜಿಯಾಬಾದ್, ಜನವರಿ 13: ಯುವಕನೊಬ್ಬ ಮಣಿಕಟ್ಟು ಸೀಳಿಕೊಂಡು ಅಪಾರ್ಟ್​ಮೆಂಟ್​(Apartment)ನ 11ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. 11 ನೇ ಮಹಡಿಯಲ್ಲಿರುವ ತನ್ನ ಮನೆಯ ಬಾಲ್ಕನಿಯಿಂದ ಹಾರಿ 28 ವರ್ಷದ ಯಜ್ಞ ಪಾಂಡೆ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇಂದಿರಾಪುರಂನ ಸೊಸೈಟಿಯೊಂದರ ನಿವಾಸಿಯಾಗಿರುವ ಯಜ್ಞ ಪಾಂಡೆ ಸೋಮವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು…

Read More

ತುಮಕೂರು ಮಹಾತ್ಮಾ ಗಾಂಧಿ ಇಂಡೋರ್ ಸ್ಟೇಡಿಯಂಗೆ ಪರಮೇಶ್ವರ್ ಹೆಸರು! ಬಿಜೆಪಿ ಪ್ರತಿಭಟನೆ – Kannada News | BJP Protests Renaming of Tumakuru Mahatma Gandhi Indoor Stadium After G Parameshwara

ತುಮಕೂರು ಮಹಾತ್ಮಾ ಗಾಂಧಿ ಇಂಡೋರ್ ಸ್ಟೇಡಿಯಂಗೆ ಪರಮೇಶ್ವರ್ ಹೆಸರು! ತುಮಕೂರು, ಜನವರಿ 13: ತುಮಕೂರಿನ (Tumakur) ಜಿಲ್ಲಾಮಟ್ಟದ ಏಕೈಕ ಕ್ರೀಡಾಂಗಣಕ್ಕೆ ಗೃಹ ಸಚಿವ ಡಾ. ಜಿ ಪರಮೇಶ್ವರ (G Prameshwara) ಹೆಸರು ಇಟ್ಟಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅಷ್ಟಕ್ಕೂ ಅವರ ಹೆಸರು ಇಟ್ಟಿದ್ದಷ್ಟೇ ಆದರೆ ವಿವಾದವಾಗುತ್ತಿರಲಿಲ್ಲವೇನೋ. ಮಹಾತ್ಮಾ ಗಾಂಧೀಜಿ (mahatma Gandhi) ಹೆಸರಿನ ಬದಲಿಗೆ ಪರಮೇಶ್ವರ್ ಹೆಸರು ಇಟ್ಟಿರುವುದು ಪ್ರತಿಪಕ್ಷ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನು ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ 60 ಕೋಟಿ ರೂಪಾಯಿ…

Read More

ಬಾಂಗ್ಲಾದೇಶ: ಪೊಲೀಸ್ ಕಸ್ಟಡಿಯಲ್ಲಿ ಶೇಖ್ ಹಸೀನಾ ಪಕ್ಷದ ಹಿಂದೂ ನಾಯಕ ಚಾಕಿ ಸಾವು – Kannada News | Proloy Chaki: Awami League Hindu Leader Dies in Bangladesh Police Custody

ಢಾಕಾ, ಜನವರಿ 13: ಬಾಂಗ್ಲಾದೇಶ(Bangladesh)ದ ಪೊಲೀಸ್ ಕಸ್ಟಡಿಯಲ್ಲಿದ್ದ ಶೇಖ್ ಹಸೀನಾರ ಪಕ್ಷದ ಹಿಂದೂ ನಾಯಕ ಪ್ರಳಯ್ ಚಾಕಿ ಸಾವನ್ನಪ್ಪಿದ್ದಾರೆ. ಜೈಲು ಅಧಿಕಾರಿಗಳು ಅವರಿಗೆ ವೈದ್ಯಕೀಯ ಆರೈಕೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರ ಕುಟುಂಬದಿಂದ ಆರೋಪ ಕೇಳಿಬಂದಿದೆ. ಗಾಯಕರೂ ಆಗಿದ್ದ 60 ವರ್ಷದ ಪ್ರಳಯ್  ಚಾಕಿ, ಅವಾಮಿ ಲೀಗ್‌ನ ಪಬ್ನಾ ಜಿಲ್ಲಾ ಘಟಕದ ಸಾಂಸ್ಕೃತಿಕ ವ್ಯವಹಾರಗಳ ಕಾರ್ಯದರ್ಶಿಯಾಗಿದ್ದರು, ಜೈಲು ಕಸ್ಟಡಿಯಲ್ಲಿದ್ದಾಗ ರಾಜ್‌ಶಾಹಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಬಾಂಗ್ಲಾದೇಶದ ದಿನಪತ್ರಿಕೆ ದಿ ಡೈಲಿ ಸ್ಟಾರ್ ವರದಿ ಮಾಡಿದೆ….

Read More

ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಕುಣಿಗಲ್ ಉತ್ಸವಕ್ಕೆ ತೆರಳಿದ್ದರು. ವೇದಿಕೆ ಮೇಲೆ ಮಾತನಾಡುವಾಗ ಅವರು ಬಿಗ್ ಬಾಸ್ ವಿಷಯವನ್ನು ಪ್ರಸ್ತಾಪ ಮಾಡಿದರು. ‘ಈ ವಾರ ಫಿನಾಲೆ ನೋಡ್ತಾ ಇದೀರಾ’ ಎಂದು ಕೇಳಿದರು ಮತ್ತು ನೆರೆದಿದ್ದ ಅನೇಕರು ಗಿಲ್ಲಿ ಗಿಲ್ಲಿ ಎಂದು ಘೋಷಣೆ ಕೂಗಿದರು. ಆಗ ಸುದೀಪ್ ಅವರು ‘ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ’ ಎಂದು ನೇರವಾಗಿ ಹೇಳಿದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು…

Read More

ಬಿಗ್ ಬಾಸ್ ಎದುರು ವಿಚಿತ್ರ ಆಸೆ ಹೇಳಿಕೊಂಡ ಗಿಲ್ಲಿ ನಟ; ಈಡೇರುತ್ತಾ ಬಯಕೆ? – Kannada News | Big Boss Kannada: Gilli Actor’s Bizarre Wishes Shock Fans

ಬಿಗ್ ಬಾಸ್ (Bigg Boss) ಮನೆಯಲ್ಲಿ ಈ ವಾರ ಸಾಕಷ್ಟು ಮನರಂಜನೆ ನೀಡುವ ಕೆಲಸ ಆಗುತ್ತಿದೆ. ಸ್ಪರ್ಧಿಗಳು ಇದನ್ನು ಸಾಕಷ್ಟು ಎಂಜಾಯ್ ಮಾಡುತ್ತಿದ್ದಾರೆ. ಎಲ್ಲಾ ಸ್ಪರ್ಧಿಗಳು ತಮ್ಮ ಆಸೆ ಹೇಳಿಕೊಳ್ಳುತ್ತಿದ್ದಾರೆ. ಸೋ ಶೀಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ. ಗಿಲ್ಲಿಯ ಆಸೆ ವಿಚಿತ್ರವಾಗಿತ್ತು ಎಂದೇ ಹೇಳಬಹುದು. ಪ್ರತಿ ಬಾರಿಯೂ ಬಿಗ್ ಬಾಸ್ ಪೂರ್ಣಗೊಳ್ಳುವಾಗ ಸ್ಪರ್ಧಿಗಳ ವಿಶ್ ಕೇಳಲಾಗುತ್ತದೆ. ಈ ವಿಶ್​​ ಪೈಕಿ ಯಾವುದು ಸಾಧ್ಯವೋ ಅದನ್ನು ಬಿಗ್ ಬಾಸ್ ಈಡೇರಿಸುತ್ತಾರೆ. ಸ್ಪರ್ಧಿಗಳು ಮೂರು ವಿಶ್ ತಿಳಿಸಬೇಕು ಮತ್ತು…

Read More

ಸಿಗರೇಟ್ ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ಅಂಗಡಿ ಮಾಲೀಕರ ಸಂಬಂಧಿಗೆ ಬೆಂಕಿ ಹಚ್ಚಿದ ವ್ಯಕ್ತಿ – Kannada News | A Night of Rage: Andheri Man Set Ablaze After Drunken Attack

ಬೆಂಕಿ-ಸಾಂದರ್ಭಿಕ ಚಿತ್ರImage Credit source: ThoughtCo ಮುಂಬೈ, ಜನವರಿ 13: ಸಿಗರೇಟ್ ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅಂಗಡಿ ಮಾಲೀಕರ ಸಂಬಂಧಿಗೆ ಬೆಂಕಿ(Fire) ಹಚ್ಚಿದ ಘಟನೆ ಮುಂಬೈನಲ್ಲಿ ನಡೆದಿದೆ. ಈ ಆರೋಪದ ಮೇಲೆ ಜೋಗೇಶ್ವರಿ ನಿವಾಸಿ ನಾಗೇಂದ್ರ ಯಾದವ್ (22) ಎಂಬಾತನನ್ನು ಅಂಬೋಲಿ ಪೊಲೀಸರು ಬಂಧಿಸಿದ್ದಾರೆ. ರಾಜೇಂದ್ರ ಯಾದವ್ (44) ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರ ದೇಹದ ಶೇ.25ರಷ್ಟು ಭಾಗ ಸುಟ್ಟು ಹೋಗಿದೆ. ಈ ಇಡೀ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ರಾಜೇಂದ್ರ…

Read More

‘ಕಿತ್ತೋದ್ ಕೆಲಸ ಮಾಡಿಲ್ಲ, ನನ್ನಿಂದ ಕೆಲವರ ಹೊಟ್ಟೆಪಾಡು ನಡೆಯುತ್ತಿದೆ’; ಸುದೀಪ್ – Kannada News | Sudeep’s Dhruvanth Bigg Boss Applause: Gilli Fans vs. Kiccha’s Viral Reply

ಯಾವುದೇ ಕೆಲಸ ಮಾಡಿದರೂ ಅದಕ್ಕೆ ಪರ-ವಿರೋಧ ಚರ್ಚೆ ಇದ್ದೇ ಇರುತ್ತದೆ. ಕಿಚ್ಚ ಸುದೀಪ್ (Kichcha Sudeep) ವಿಷಯದಲ್ಲಿ ಅನೇಕ ಬಾರಿ ಹೀಗೆಯೇ ಆಗಿದೆ. ಅವರು ಈ ಸೀಸನ್ ಚಪ್ಪಾಳೆಯನ್ನು ಧ್ರುವಂತ್​​ಗೆ ನೀಡಿದ್ದರು. ಇದನ್ನು ಅನೇಕರು ಟೀಕೆ ಮಾಡಿದ್ದರು. ಆದರೆ, ಈ ಬೆನ್ನಲ್ಲೆ ಸುದೀಪ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ಸುದೀಪ್ ಅವರು 10ನೇ ಸೀಸನ್​ ಅಲ್ಲಿ ಹೇಳಿದ ಮಾತನ್ನು ನೆನಪಿಸಿಕೊಂಡಿದ್ದಾರೆ. ಆ ವಿಡಿಯೋ ವೈರಲ್ ಮಾಡಲಾಗುತ್ತಿದೆ. ಧ್ರುವಂತ್ ಅವರಿಗೆ ಇಡೀ ಸೀಸನ್​​ನ ಕಿಚ್ಚನ ಚಪ್ಪಾಳೆ ಸಿಕ್ಕಿದ್ದು ಅನೇಕರ ಕೋಪಕ್ಕೆ ಕಾರಣ…

Read More

ನಮಸ್ಕಾರ ಬೆಂಗಳೂರು! ಕನ್ನಡ ಮಾತನಾಡಿ ಗಮನ ಸೆಳೆದ ಜಪಾನ್ ಯುವತಿ: ವಿಡಿಯೋ ವೈರಲ್ – Kannada News | Japanese Woman Wins Hearts in Bengaluru by Speaking Kannada, Video Goes Viral

ಕನ್ನಡ ಮಾತನಾಡಿ ಗಮನ ಸೆಳೆದ ಜಪಾನ್ ಯುವತಿ ಬೆಂಗಳೂರು, ಜನವರಿ 13: ಬೆಂಗಳೂರಿನಲ್ಲಿ (Bangalore) ಕನ್ನಡ (Kannada) ಮಾತನಾಡದೆ ಇರುವುದಕ್ಕೆ ಜಗಳವಾಗಿದ್ದು, ಹಿಂದಿ ಮಾತನಾಡುವವರ ಸಂಖ್ಯೆ ಹೆಚ್ಚಾಗಿರುವ ಬಗ್ಗೆ ಚರ್ಚೆಗಳು ಆಗುತ್ತಿರುವುದನ್ನು ಆಗಾಗ್ಗೆ ಕಾಣುತ್ತಿರುತ್ತೇವೆ. ಆದರೆ, ಅಚ್ಚರಿಯ ಸನ್ನಿವೇಶ ವೊಂದರಲ್ಲಿ, ಹಿಂದಿ ಮಾತನಾಡುವ ಜಪಾನ್ ಯುವತಿಯೊಬ್ಬರು ಪಟಪಟನೆ ಕನ್ನಡದಲ್ಲಿ ಮಾತನಾಡಿರುವ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಜಪಾನ್ ಯುವತಿ ಮೇಯೋ ಹಿಂದಿಯಲ್ಲಿ ಮಾತನಾಡುತ್ತಿದ್ದರು. ಜತೆಗೆ, ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸಿದ್ದಾರೆ….

Read More

Daily Devotional: ಈ ದಿನ ತಪ್ಪಿಯೂ ಹುಳಿ ಪದಾರ್ಥ ಸೇವಿಸಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Why Hindu Traditions Advise Against Sour Foods on Fridays: A Spiritual Guide

ಶುಕ್ರವಾರವು ಮಹಾಲಕ್ಷ್ಮಿಗೆ ಮೀಸಲಾದ ದಿನವಾಗಿದ್ದು, ಈ ದಿನದಂದು ಕೆಲವು ಆಚರಣೆಗಳನ್ನು ಪಾಲಿಸುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಶುಕ್ರವಾರದಂದು ಹುಳಿ ಪದಾರ್ಥಗಳನ್ನು ಸೇವಿಸುವುದರಿಂದ ದೂರವಿರುವುದು ಈ ಆಚರಣೆಗಳಲ್ಲಿ ಒಂದಾಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಶುಕ್ರವಾರವನ್ನು ಮಹಾಲಕ್ಷ್ಮಿ, ಸಂಪತ್ತು ಮತ್ತು ಐಶ್ವರ್ಯದ ಅಧಿದೇವತೆಯ ದಿನವೆಂದು ಗುರುತಿಸಲಾಗುತ್ತದೆ. ಲಕ್ಷ್ಮಿಯು ಸಿಹಿ ಪದಾರ್ಥಗಳನ್ನು ಹೆಚ್ಚು ಇಷ್ಟಪಡುತ್ತಾಳೆ ಎಂಬ ನಂಬಿಕೆ ಇದೆ. ಆದ್ದರಿಂದ, ಈ…

Read More