ನವದೆಹಲಿ, ಏಪ್ರಿಲ್ 12: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಧಾನ ಮಾತುಕತೆಗಳು ಮುರಿದುಬಿದ್ದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿ (Hormuz Strait) ಮೇಲೆ ಕಣ್ಣು ಇರಿಸಿದ್ದಾರೆ. ಈ ಜಲಸಂಧಿಯನ್ನು ಪೂರ್ಣವಾಗಿ ತಡೆಯುವಂತೆ ಅಮೆರಿಕದ ನೌಕಾಪಡೆಗೆ ತಿಳಿಸಿದ್ದೇನೆ. ಈ ಕ್ಷಣದಿಂದಲೇ ಹಾರ್ಮುಜ್ ಜಲಸಂಧಿಯಿಂದ ಯಾವುದೇ ಹಡಗು ಹೊರಹೋಗದಂತೆ, ಹಾಗೂ ಹೊರಗಿನಿಂದ ಯಾವ ಹಡಗೂ ಒಳಗೆ ಹೋಗದಂತೆ ತಡೆಯುವ ಪ್ರಕ್ರಿಯೆ ನಡೆಯಲಿದೆ ಎಂದು ಟ್ರಂಪ್ ಘೋಷಿಸಿದ್ದಾರೆ.
ಪಾಕಿಸ್ತಾನದ ಮಧ್ಯಸ್ತಿಕೆಯಲ್ಲಿ ಇರಾನ್ ಮತ್ತು ಅಮೆರಿಕ ನಡುವೆ ನಡೆದ ಸಂಧಾನ ಮುರಿದುಬೀಳಲು ಹಲವು ಕಾರಣಗಳನ್ನು ಪ್ರಸ್ತಾಪಿಸಲಾಗಿದೆ. ಇದರಲ್ಲಿ ಎರಡು ಪ್ರಮುಖವಾದುವೆಂದರೆ, ಪರಮಾಣ ಶಸ್ತ್ರಾಸ್ತ್ರ ತಯಾರಿಕೆಯನ್ನು ನಿಲ್ಲಿಸಲು ಇರಾನ್ ಒಪ್ಪದೇ ಇದ್ದದ್ದು ಒಂದು. ಹಾಗೆಯೇ, ಹಾರ್ಮುಜ್ ಜಲಸಂಧಿಯನ್ನು ಮುಕ್ತವಾಗಿ ಬಿಡಲೂ ಇರಾನ್ ಒಪ್ಪದಿದ್ದುದು ಇನ್ನೊಂದು ಕಾರಣ.
ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಎಲ್ಲಾ ಹಡಗುಗಳಿಂದಲೂ ಸುಂಕ ವಸೂಲಿ ಮಾಡುವ ವ್ಯವಸ್ಥೆ ನಿರ್ಮಿಸಿದೆ. ಹಾರ್ಮುಜ್ ಜಲಸಂಧಿಯನ್ನು ದಾಟಬೇಕಾದರೆ ಇರಾನ್ಗೆ ಟೋಲ್ ಕಟ್ಟಬೇಕು. ನಂತರ, ಇರಾನ್ನ ನೌಕಾಸೇನೆಯ ಬೆಂಗಾವಲಿನಲ್ಲಿ ಆ ಹಡಗು ಹಾರ್ಮುಜ್ ಜಲಸಂಧಿ ದಾಟಲು ಅವಕಾಶ ಕೊಡಲಾಗುತ್ತದೆ. ಇಂಥದ್ದೊಂದು ವ್ಯವಸ್ಥೆಯನ್ನು ಇರಾನ್ ಮಾಡಿದೆ. ಈಗ ಅಮೆರಿಕದ ಸೇನೆಯಿಂದ ಹಾರ್ಮುಜ್ ಜಲಸಂಧಿಯನ್ನು ಹಿಡಿತಕ್ಕೆ ತರಲು ಹೊರಟಿದೆ. ಇದು ಇನ್ನಷ್ಟು ಭೀಕರ ಯುದ್ಧಕ್ಕೆ ಎಡೆ ಮಾಡಿಕೊಡಬಹುದು.
ಸಂಧಾನಕ್ಕೆ ಮಧ್ಯಸ್ತಿಕೆ ವಹಿಸಲು ರಷ್ಯಾ ಸಿದ್ಧ
ಇದೇ ವೇಳೆ, ಅಮೆರಿಕ ಮತ್ತು ಇರಾನ್ ಮಧ್ಯೆ ಒಂದು ರಾಜಿ ಏರ್ಪಡಿಸಲು ಮಧ್ಯಸ್ತಿಕೆ ವಹಿಸಲು ತಾನು ಸಿದ್ಧ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಅವರಿಗೆ ತಿಳಿಸಿದ್ದಾರೆ.
ಈ ಇಬ್ಬರು ನಾಯಕರು ಫೋನ್ ಮೂಲಕ ಮಾತನಾಡಿ, ಪ್ರಸಕ್ತ ವಿದ್ಯಮಾನಗಳನ್ನು ಚರ್ಚಿಸಿದ್ದಾರೆ. ಈ ಸಂಘರ್ಷ ಅಥವಾ ಬಿಕ್ಕಟ್ಟಿಗೆ ರಾಜಕೀಯವಾದ ಮತ್ತು ರಾಜತಾಂತ್ರಿಕವಾದ ಪರಿಹಾರಕ್ಕೆ ಪ್ರಯತ್ನಿಸಲು ತಾನು ಸಿದ್ಧ ಎಂದು ಈ ವೇಳೆ ಪುಟಿನ್ ಅವರು ಆಫರ್ ಮಾಡಿದರೆನ್ನಲಾಗಿದೆ.
ಇರಾನ್ ಮತ್ತು ಅಮೆರಿಕದ ನಡುವಿನ ಕದನವಿರಾಮ 15 ದಿನಗಳದ್ದಾಗಿದೆ. ಇನ್ನು 9-10 ದಿನಗಳು ಬಾಕಿ ಇವೆ. ಅಷ್ಟರೊಳಗೆ ರಾಜಿ ಏರ್ಪಟ್ಟರೆ ಯುದ್ಧ ನಿಲ್ಲಬಹುದು. ಇಲ್ಲದಿದ್ದರೆ ಇನ್ನೂ ಹೆಚ್ಚು ತೀವ್ರತೆಯಲ್ಲಿ ಸಮರ ಮುಂದುವರಿಯುವ ಸಾಧ್ಯತೆ ಇದೆ.
ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಮುಂಬೈ ಇಂಡಿಯನ್ಸ್ ವಿರುದ್ಧ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಪಂದ್ಯದಲ್ಲಿ ಆರ್ಸಿಬಿ ನಾಯಕ ರಜತ್ ಪಾಟಿದರ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭಿಕ ಫಿಲ್ ಸಾಲ್ಟ್ ಔಟಾದ ಬಳಿಕ ಬ್ಯಾಟಿಂಗ್ಗೆ ಬಂದ ರಜತ್, ಬಂದ ಕೂಡಲೇ ಪ್ರತಿಯೊಬ್ಬ ಮುಂಬೈ ಬೌಲರ್ಗಳ ವಿರುದ್ಧ ಬೌಂಡರಿಗಳ ಮಳೆಗರೆದರು. ಇದರ ಪರಿಣಾಮವಾಗಿ ರಜತ್ ಕೇವಲ 11 ಎಸೆತಗಳಲ್ಲಿ 44 ರನ್ ಕಲೆಹಾಕಿದರು. ರಜತ್ ತಮ್ಮ ಮುಂದಿನ ಎಸೆತದಲ್ಲಿ ಸಿಕ್ಸರ್ ಸಿಡಿಸಿ 50 ರನ್ಗಳ ಗಡಿ ದಾಟುತ್ತಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಳ್ಳುತ್ತಿದ್ದರು. ಆದರೆ ಅದಕ್ಕೆ ಟ್ರೆಂಟ್ ಬೌಲ್ಟ್ ಅವಕಾಶ ಮಾಡಿಕೊಡಲಿಲ್ಲ.
ಆದಾಗ್ಯೂ ರಜತ್ ಎದುರಿಸಿದ 11 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 3 ಬೌಂಡರಿಗಳನ್ನು ಬಾರಿಸಿದರು. ಅಂದರೆ ಎದುರಿಸಿದ 11 ಎಸೆತಗಳಲ್ಲಿ ಬರೋಬ್ಬರಿ 8 ಬೌಂಡರಿಗಳನ್ನು ರಜತ್ ಬಾರಿಸಿದರು. ಒಟ್ಟಾರೆ ಈ 8 ಎಸೆತಗಳಲ್ಲಿ ರಜತ್ 42 ರನ್ಗಳನ್ನು ಕಲೆಹಾಕಿದರು. ಅಂತಿಮವಾಗಿ ರಜತ್ 17 ಎಸೆತಗಳಲ್ಲಿ ತಮ್ಮ ಸತತ ಎರಡನೇ ಅರ್ಧಶತಕ ಬಾರಿಸಿದರು. ಸ್ಯಾಂಟ್ನರ್ ಅವರ ಎಸೆತವನ್ನು ಬೌಂಡರಿಗಟ್ಟುವ ಮೂಲಕ ರಜತ್ ತಮ್ಮ ಅರ್ಧಶತಕ ಪೂರೈಸಿದರು.
ಬೆಂಗಳೂರು, (ಏಪ್ರಿಲ್ 12): ಕರ್ನಾಟಕ ಕಾಂಗ್ರೆಸ್ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಶೀಘ್ರದಲ್ಲೇ ಸಚಿವ ಸಂಪುಟ ಪುನಾರಚನೆ (Cabinet reshuffle) ಆಗಬೇಕು, ಸಮಯ ಮೀರುತ್ತಿದೆ, ಸರ್ಕಾರ ರಚನೆಯಾಗಿ 3 ವರ್ಷ ಕಳೆಯುತ್ತಾ ಬಂದಿದೆ. ಇನ್ನೂ ವಿಳಂಬ ಆದ್ರೆ. ಸಚಿವ ಸ್ಥಾನ ಸಿಕ್ಕಿದ್ರೂ ಪ್ರಯೋಜನ ಏನು ಎಂದು ಸಚಿವಾಕಾಂಕ್ಷಿಗಳು ಪ್ರಶ್ನಿಸಿದ್ದು, ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ಗೆ ಶಾಸಕರು ಒತ್ತಡ ಹಾಕುತ್ತಿದ್ದಾರೆ. ಈ ಸಂಬಂಧ ಇದೀಗ ಮೊದಲ ಹೆಜ್ಜೆಯಾಗಿ ಕಾಂಗ್ರೆಸ್ನ ಹಿರಿಯ ಶಾಸಕರ ದಂಡು ದೆಹಲಿ (New Delhi) ಯಾತ್ರೆ ಕೈಗೊಂಡಿದೆ. ಈ ಬಾರಿ ಅಶೋಕ್ ಪಟ್ಟಣ್, ಟಿ.ಬಿ.ಜಯಚಂದ್ರ ನೇತೃತ್ವ ವಹಿಸಿದ್ದು, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲರನ್ನ ಭೇಟಿಯಾಗಿ ಸಚಿವ ಸ್ಥಾನಕ್ಕೆ ಡಿಮ್ಯಾಂಡ್ ಮಾಡಲಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಕಾಂಗ್ರೆಸ್ನ ಸುಮಾರು 25 ರಿಂದ 30 ಹಿರಿಯ ಶಾಸಕರ ದಂಡು ಭಾನುವಾರ ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ಭೇಟಿಗೆ ತೆರಳುವ ಮುನ್ನವೇ ಈ ಶಾಸಕರ ಗುಂಪು ದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಕನಿಷ್ಠ ಮೂರಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಹಾಗೂ ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಈ ಹಿರಿಯ ಶಾಸಕರು, ಎರಡ್ಮೂರು ದಿನಗಳ ಕಾಲ ದೆಹಲಿಯಲ್ಲಿಯೇ ಮೊಕ್ಕಾಂ ಹೂಡಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ತಮ್ಮ ಮನವಿ ಸಲ್ಲಿಸಲಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಅವರ ಭೇಟಿಗೂ ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದೆ.
ಹೌದು…ಸಚಿವ ಪುನಾರಚನೆ ಸಂಬಂಧ ಬಣ ರಾಜಕೀಯ ಶುರುವಾದಂತಿದೆ. ಯಾಕಂದ್ರೆ, ಈಗಾಗಲೇ ಸಂಪುಟ ಪುನಾರಚನೆ ಮಾಡಬೇಕೆಂದು ದೆಹಲಿಗೆ ತೆರಳಿರುವ ಬಹುತೇಕ ಶಾಸಕರು ಸಿಎಂ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವವರು. ಆದ್ರೆ, ಡಿಸಿಎಂ ಡಿಕೆ ಶಿವಕುಮಾರ್ ಬಣದ ಶಾಸಕರು ದೆಹಲಿ ತೆರಳು ಹಿಂದೇಟು ಹಾಕಿರುವುದು ಕುತೂಹಲಕ್ಕೆ ಕಾರಣವಾಗಿದೆ. ನಾಯಕತ್ವ ಬದಲಾವಣೆಗೆ ಧ್ವನಿ ಎತ್ತಿದ್ದ ಡಿಕೆಶಿ ಬಣದ ಶಾಸಕರು ಇದೀಗ ಸಂಪುಟ ಪುನಾರಚನೆ ಹಕ್ಕೊತ್ತಾಯದಿಂದ ದೂರ ಉಳಿದುಕೊಂಡಿರುವು ಹಲವು ಚರ್ಚೆಗೆ ಗ್ರಾಸವಾಗಿದೆ.
ನಾಯಕತ್ವ ಬದಲಾವಣೆ ಕೂಗಿಗೆ ಪ್ರತಿಯಾಗಿ ದಾಳ ಹೂಡಿದ್ರಾ ಸಿಎಂ?
ದಾವಣಗೆರೆ ದಕ್ಷಿಣ, ಬಾಗಲಕೋಟೆ ಬೈಎಲೆಕ್ಷನ್ ಮುಗಿಯುವವರೆಗೂ ಸೈಲೆಂಟ್ ಆಗಿದ್ದ ನಾಯಕತ್ವ ಬದಲಾವಣೆ ಕಿತ್ತಾಟ ಈಗ ಮತ್ತೆ ಮುನ್ನಲೆಗೆ ಬರುವ ಸಾಧ್ಯತೆಗಳಿವೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಉಪಚುನಾವಣೆ ಮುಗಿಯುವವರೆಗೂ ಶಾಂತವಾಗಿದ್ದರು, ಯಾಕಂದ್ರೆ ಇವರ ಕಿತ್ತಾಟ ಚುನಾವಣೆ ಮೇಲೆ ಎಫೆಕ್ಟ್ ಆಗಬಾರದು ಎಂದು. ಆದ್ರೆ, ಈಗ ಮತದಾನ ಮುಗಿಯುತ್ತಿದ್ದಂತೆಯೇ ಡಿಕೆಶಿ ಬಣ ನಾಯಕತ್ವ ಬದಲಾವಣೆ ವಿಚಾರವನ್ನು ಕೈಗೆತ್ತಿಕೊಳ್ಳುತ್ತೆ ಎನ್ನುವಷ್ಟರಲ್ಲಿ ಸಿದ್ದರಾಮಯ್ಯ, ಸಂಪುಟ ಪುನಾರಚನೆ ಹೆಸರಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಒಂದು ಕಡೆ ಕಾದು ಕಾದು ಸುಸ್ತಾಗಿರುವ ಡಿಕೆಶಿ. ಇತ್ತ ಕುರ್ಚಿ ಬಿಟ್ಟು ಏಳದ ಸಿದ್ದರಾಮಯ್ಯ, ಒಂದು ಹೆಜ್ಜೆ ಮುಂದೆ ಹೋಗಿದ್ದು, ನಾಯಕತ್ವ ಬದಲಾವಣೆ ಕಿತ್ತಾಟ ಮುನ್ನಲೆಗೆ ಬರುವ ಮುನ್ನವೇ ಸಂಪುಟ ಪುನಾರಚನೆ ವಿಚಾರವನ್ನು ಮುನ್ನಲೆಗೆ ತಂದಿದ್ದಾರೆ.
ಶಾಸಕರ ದೆಹಲಿಯಾತ್ರೆ ಹಿಂದೆ ಸಿದ್ದರಾಮಯ್ಯ?
ಹೀಗೊಂದು ಚರ್ಚೆ ನಡೆದಿವೆ. ಸಂಪುಟ ಪುನಾರಚನೆ ಮಾಡಬೇಕೆಂದು ಶಾಸಕರು ಕೈಗೊಂಡಿರುವ ದೆಹಲಿ ಯಾತ್ರೆಯಿಂದ ಸಿಎಂ ಸಿದ್ದರಾಮಯ್ಯನವರು ಇದ್ದಾರೆ. ಅವರೇ ದೆಹಲಿಗೆ ಹೋಗುವಂತೆ ಶಾಸಕರನ್ನು ಕಳುಹಿಸಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಇದಕ್ಕೆ ಪೂರಕವೆಂಬಂತೆ ಶಾಸಕರು ದೆಹಲಿ ಹೋಗಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನಿಗೆ ಉತ್ತರಿಸಿರುವ ಸಿದ್ದರಾಮಯ್ಯ, ದೆಹಲಿಗೆ ಹೋದ್ರೆ ತಪ್ಪೇನು, ಬೇಡ ಅಂದೋರು ಯಾರು? ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಎರಡೂವರೆ ವರ್ಷಗಳ ಬಳಿಕ ಸಂಪುಟ ಪುನಾರಚನೆ ಮಾಡಬೇಕಿತ್ತು. ಪಂಚ ರಾಜ್ಯಗಳ ಚುನಾವಣೆ, ಬೈಎಲೆಕ್ಷನ್ನಿಂದ ವಿಳಂಬವಾಗಿದೆ ಎಂದಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರು ಪರೋಕ್ಷವಾಗಿ ಶಾಸಕರ ದೆಹಲಿ ಯಾತ್ರೆಗೆ ಬೆಂಬಲಿಸಿದ್ದಾರೆ.
ದೆಹಲಿಗೆ ಹೋದವರು ಯಾರ್ಯಾರು?
1.ಟಿಬಿ ಜಯಚಂದ್ರ – ಶಿರಾ ಕ್ಷೇತ್ರ
2.ಅಶೋಕ್ ಪಟ್ಟಣ್ – ರಾಮದುರ್ಗ ಕ್ಷೇತ್ರ
3.ಎಸ್.ಎನ್ ಸುಬ್ಬಾರೆಡ್ಡಿ – ಬಾಗೇಪಲ್ಲಿ ಕ್ಷೇತ್ರ
4.ಸಿ ಪುಟ್ಟರಂಗಶೆಟ್ಟಿ – ಚಾಮರಾಜನಗರ ಕ್ಷೇತ್ರ
5.ಹಂಪನಗೌಡ ಬಾದರ್ಲಿ – ಸಿಂಧನೂರು ಕ್ಷೇತ್ರ
6.ಡಿಜಿ ಶಾಂತನಗೌಡ – ಹೊನ್ನಾಳ್ಳಿ ಕ್ಷೇತ್ರ
7.ಬಸವರಾಜ್ ಶಿವಣ್ಣನವರ್ – ಬ್ಯಾಡಗಿ ಕ್ಷೇತ್ರ
8.ಎ.ಆರ್ ಕೃಷ್ಣಮೂರ್ತಿ – ಕೊಳ್ಳೇಗಾಲ ಕ್ಷೇತ್ರ
9.ಪ್ರಸಾದ್ ಅಬ್ಬಯ್ಯ – ಹು-ಧಾ ಪೂರ್ವ ಕ್ಷೇತ್ರ
10.ಯುಬಿ ಬಣಕರ್ – ಹಿರೇಕೆರೂರು ಕ್ಷೇತ್ರ
11.ಜಿ.ಎಸ್ ಪಾಟೀಲ್ – ರೋಣ ಕ್ಷೇತ್ರ
12.ಯಶವಂತರಾಯ ಗೌಡ ಪಾಟೀಲ್ – ಇಂಡಿ ಕ್ಷೇತ್ರ
13.ಷಡಕ್ಷರಿ – ತಿಪಟೂರು ಕ್ಷೇತ್ರ
14.ಎಸ್.ಎನ್ ನಾರಾಯಣಸ್ವಾಮಿ – ಬಂಗಾರಪೇಟೆ ಕ್ಷೇತ್ರ
15.ಲಕ್ಷ್ಮಣ ಸವದಿ – ಅಥಣಿ ಕ್ಷೇತ್ರ
16.ಅಪ್ಪಾಜಿ ನಾಡಗೌಡ – ಮುದ್ದೇಬಿಹಾಳ ಕ್ಷೇತ್ರ
17.ಪ್ರಿಯಕೃಷ್ಣ – ಗೋವಿಂದರಾಜನಗರ ಕ್ಷೇತ್ರ
19.ರಮೇಶ್ ಬಂಡಿ ಸಿದ್ದೇಗೌಡ – ಶ್ರೀರಂಗಪಟ್ಟಣ ಕ್ಷೇತ್ರ
20.ಬಿ. ಶಿವಣ್ಣ – ಆನೇಕಲ್ ಕ್ಷೇತ್ರ
21.ರಾಘವೇಂದ್ರ ಹಿಟ್ನಾಳ್ – ಕೊಪ್ಪಳ ಕ್ಷೇತ್ರ
22.ಬೇಳೂರು ಗೋಪಾಲಕೃಷ್ಣ- ಸಾಗರ ಕ್ಷೇತ್ರ
ಬಹುತೇಕ ಸಿಎಂ ಬಣದ ಶಾಸಕರು ಸಂಪುಟ ಪುನಾರಚನೆಯಾಗಲೇಬೇಕೆಂದು ಹೈಕಮಾಂಡ್ ಮುಂದೆ ಹಕ್ಕೋತ್ತಾಯ ಮಾಡಲು ದೆಹಲಿ ತೆರಳಿದ್ದು, ಇತ್ತ ಡಿಕೆ ಶಿವಕುಮಾರ್ ಹಾಗೂ ಅವರ ಬಣದ ಶಾಸಕರು ಸೈಲೆಂಟ್ ಇರುವುದು ತೀವ್ರ ಕುತೂಹಲ ಮೂಡಿಸಿದೆ. ಆದ್ರೆ, ಈ ಸಂಪುಟ ಪುನಾರಚನೆ ಒತ್ತಾಯಕ್ಕೆ ಹೈಕಮಾಂಡ್ ಸೊಪ್ಪು ಹಾಕುತ್ತಾ? ಅಥವಾ ಶಾಸಕರ ಒತ್ತಡಕ್ಕೆ ಮಣಿದ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ಕೊಡುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.
ಚಾಮರಾಜನಗರ, ಏಪ್ರಿಲ್ 12: ಪೊಲೀಸರ ಜೊತೆ ಅನುಚಿತ ವರ್ತನೆ ತೋರಿದ ಹಿನ್ನಲೆ ಚಾಮರಾಜನಗರ (Chamarajanagar) ಸತ್ರ ನ್ಯಾಯಾಲಯ ಆರೋಪಿ ಯುವಕನಿಗೆ ಠಾಣೆಯಲ್ಲಿ ಎರಡು ದಿನ ಸಮುದಾಯ ಸೇವೆ ಸಲ್ಲಿಸಲು ಸೂಚನೆ ನೀಡಿದೆ. ಆ ಮೂಲಕ ಮಾಡಿದ ತಪ್ಪಿಗೆ ವಿನೂತನ ಶಿಕ್ಷೆ ನೀಡುವುದರ ಜೊತೆಗೆ ಹೊಸ ತಹಬದಿಗೆ ನಾಂದಿ ಹಾಡಿದೆ.
ವಿನೂತನ ಶಿಕ್ಷೆಗೆ ಗುರಿಯಾದ ಯುವಕ
ಚಾಮರಾಜನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮ್ಯೂಲ್ ಖಾತೆ ನೈಜತೆ ಪರಿಶೀಲನೆ ಸಂಬಂಧ ಹಾಜರಾಗಿದ್ದ ವೇಳೆ ಯುವಕ ಆನಂದ್ ಅಸಂಬದ್ಧವಾಗಿ ಹಾಗೂ ಏರು ಧ್ವನಿಯಲ್ಲಿ ಮಾತನಾಡಿದ್ದಾನೆ. ಅಷ್ಟೇ ಅಲ್ಲದೆ ಖಾತೆಗೆ ಸಂಬಂಧಿಸಿದ ಸಮರ್ಪಕ ದಾಖಲಾತಿ ನೀಡಲು ಹಿಂಜರಿದಿದ್ದಾನೆ. ಹೀಗಾಗಿ ನಗರದ ಸಿ.ಜೆ.ಎಂ ನ್ಯಾಯಾಲಯವು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎರಡು ದಿನ ಸಮುದಾಯ ಸೇವೆಗಾಗಿ ಪೊಲೀಸರಿಗೆ ಸಹಾಯ ಮಾಡುವಂತೆ ವಿನೂತನ ಶಿಕ್ಷೆ ವಿಧಿಸಿದೆ.
ಮೂಲತಃ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ನಿವಾಸಿ ಆನಂದ್, ಪೊಲೀಸರ ಜೊತೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆ ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ 1965 ಲಘು ಪ್ರಕರಣ ಕಲಂ ಒ ಆ್ಯಂಡ್ ಕ್ಯೂ ಅಡಿ ದಾಖಲಿಸಲಾಗಿತ್ತು.
ಪೊಲೀಸ್ ಠಾಣೆಯಲ್ಲಿ ಕೆಲಸ
ಪ್ರಕರಣ ಸಂಬಂಧ ಸಿ.ಜೆ.ಎಂ ನ್ಯಾಯಾಲಯವು ಆನಂದ್ಗೆ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎರಡು ದಿನಗಳ ಕಾಲ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಠಾಣೆಗೆ ಬರುವವರನ್ನು ಬರ ಮಾಡಿಕೊಂಡು ಸೌಜನ್ಯಯುತವಾಗಿ ವ್ಯವಹರಿಸಿ, ಪೊಲೀಸರಿಗೆ ನೆರವಾಗುವ ಮೂಲಕ ಸಮುದಾಯ ಸೇವೆ ಸಲ್ಲಿಸುವಂತೆ ನ್ಯಾಯಾಲಯವು ಆದೇಶಿಸಿದೆ.
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 20ನೇ ಪಂದ್ಯದಲ್ಲಿ ಐದು ಬಾರಿಯ ಮುಂಬೈ ತಂಡವನ್ನು ಎದುರಿಸಿದ್ದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಫಿಲ್ ಸಾಲ್ಟ್ ಸಿಡಿಲಬ್ಬರದ ಅರ್ಧಶತಕ ಬಾರಿಸಿದ್ದಾರೆ. ಈ ಬಾರಿಯ ಐಪಿಎಲ್ನಲ್ಲಿ ಫಾರ್ಮ್ ಕಂಡುಕೊಳ್ಳಲು ಹೆಣಗಾಡುತ್ತಿದ್ದ ಸಾಲ್ಟ್ ಸರಿಯಾದ ಸಂದರ್ಭದಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಮುಂಬೈನಂತಹ ಬಲಿಷ್ಠ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಸಾಲ್ಟ್ ಬೌಂಡರಿ ಹಾಗೂ ಸಿಕ್ಸರ್ಗಳ ಮಳೆಗರೆದರು. ಇದರ ಪರಿಣಾಮವಾಗಿ ಕೇವಲ 25 ಎಸೆತಗಳಲ್ಲಿ ಈ ಆವೃತ್ತಿಯ ಮೊದಲ ಅರ್ಧಶತಕ ಬಾರಿಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ, ಟಿವಿ9 ಎಜುಕೇಷನ್ ಸಮ್ಮಿಟ್ (Tv9 Education summit) ಆಯೋಜಿಸಿದೆ. ವಿದ್ಯಾರ್ಥಿಗಳು, ಪೋಷಕರು, ವಿವಿಧ, ಪ್ರತಿಷ್ಠಿತ ಶಾಲಾ-ಕಾಲೇಜುಗಳ ಸಿಬ್ಬಂದಿ ಒಂದೇ ಸೂರಿನಡಿ ಪರಸ್ಪರ ಚರ್ಚಿಸಿ, ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಆಯ್ಕೆಗೆ ಎಕ್ಸ್ಪೋ ಸಹಾಯ ಮಾಡುತ್ತಿದೆ. ಹಲವು ರಂಗಗಳ ಪ್ರಮುಖರು ಸಹ ಈ ಎಜುಕೇಶನ್ ಎಕ್ಸ್ಪೋನಲ್ಲಿ ಭಾಗವಹಿಸಿದ್ದರು. ಇಂದು ನಟ, ಬಿಗ್ಬಾಸ್ ಮಾಜಿ ವಿನ್ನರ್ ಪ್ರಥಮ್ ಸಹ ಭಾಗವಹಿಸಿದ್ದು, ಟಿವಿ9 ಅವರ ಈ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಜೊತೆಗೆ ತಮ್ಮ ಶಾಲೆ, ಕಾಲೇಜು ದಿನದ ಮೆಲಕು ಹಾಕಿದರು.
ತೆಲುಗು ಚಿತ್ರರಂಗದ (Tollywood) ಜನಪ್ರಿಯ ಗಾಯಕಿ ಮಂಗ್ಲಿ (Singer Mangli) ವಿರುದ್ಧ ಹೈದರಾಬಾದ್ನ ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ 10 ಕೋಟಿ ರೂಪಾಯಿಗಳ ವಂಚನೆಯ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ವಕೀಲ ಸುಬ್ಬಾರಾವ್ ಎಂಬುವವರು ಈ ದೂರನ್ನು ನೀಡಿದ್ದು, ಮಂಗ್ಲಿ ಮತ್ತು ಅವರ ಸಹೋದರ ಶಿವ ಸೇರಿದಂತೆ ಇತರರು ಹಲವರಿಂದ ಹಣ ಪಡೆದು ಹೂಡಿಕೆದಾರರಿಗೆ ವಂಚಿಸಿದ್ದಾರೆ, ಹಣ ಮರಳಿ ಕೇಳಿದವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ವಕೀಲ ಸುಬ್ಬರಾವ್ ವಿರುದ್ಧ ಗಾಯಕಿ ಮಂಗ್ಲಿ ಪ್ರತಿದೂರು ದಾಖಲಿಸಿದ್ದಾರೆ.
ದೂರುದಾರ ಸುಬ್ಬಾರಾವ್ ಅವರ ಪ್ರಕಾರ, ಮಂಗ್ಲಿ ಮತ್ತು ಅವರ ತಂಡ ಮೈಕ್ರೋಫೈನಾನ್ಸ್, ರಿಯಲ್ ಎಸ್ಟೇಟ್ ಮತ್ತು ಇಂಪೋರ್ಟ್-ಎಕ್ಸ್ಪೋರ್ಟ್ ವ್ಯವಹಾರಗಳಲ್ಲಿ ಹೆಚ್ಚಿನ ಲಾಭದ ಆಮಿಷವೊಡ್ಡಿ ಸುಮಾರು 100 ರಿಂದ 150 ಜನರಿಂದ ಹಣ ಸಂಗ್ರಹಿಸಿದ್ದಾರೆ. ಸುಮಾರು 10 ಕೋಟಿ ರೂಪಾಯಿಗಳಷ್ಟು ಹಣವನ್ನು ಹೂಡಿಕೆದಾರರಿಂದ ಪಡೆದು, ಈಗ ಅಸಲು ಮತ್ತು ಲಾಭ ಎರಡನ್ನೂ ನೀಡದೆ ವಂಚಿಸುತ್ತಿದ್ದಾರೆ ಎಂದು ಸುಬ್ಬಾರಾವ್ ದೂರಿದ್ದಾರೆ. ಹೂಡಿಕೆ ಮಾಡಿದ ಹಣವನ್ನು ಮರಳಿ ಕೇಳಿದಾಗ ಮಂಗ್ಲಿ ಅವರ ಸಹೋದರ ಶಿವ ಮತ್ತು ಇತರರು ತಮಗೆ ಕೊಲೆ ಬೆದರಿಕೆ ಹಾಕಿದ್ದಾರೆ ಹಾಗೂ ಅಪಘಾತ ಮಾಡಿಸಿ ಸಾಯಿಸುವುದಾಗಿ ಹೆದರಿಸಿದ್ದಾರೆ ಎಂದು ವಕೀಲರು ದೂರಿನಲ್ಲಿ ತಿಳಿಸಿದ್ದರು.
ಈ ಆರೋಪಗಳನ್ನು ತಳ್ಳಿಹಾಕಿರುವ ಗಾಯಕಿ ಮಂಗ್ಲಿ, ವಕೀಲ ಸುಬ್ಬಾರಾವ್ ಅವರ ವಿರುದ್ಧವೇ ಹೈದರಾಬಾದ್ನ ನರಸಿಂಗಿ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ. ಸುಬ್ಬಾರಾವ್ ಅವರು ತಮ್ಮ ಹೆಸರನ್ನು ಕೆಡಿಸಲು ಸಂಚು ರೂಪಿಸಿದ್ದಾರೆ ಮತ್ತು 150 ಕೋಟಿ ಹಗರಣ ಮಾಡಿದ್ದೇನೆ ಎಂಬ ಸುಳ್ಳು ಸುದ್ದಿ ಹಬ್ಬಿಸಿ ತಮ್ಮನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎಂದು ಮಂಗ್ಲಿ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಘನತೆಗೆ ಕುಂದು ತರುವಂತಹ ವೀಡಿಯೊಗಳನ್ನು ಹರಿಬಿಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.
ಪ್ರಸ್ತುತ ಪಂಜಗುಟ್ಟಾ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತೊಂದೆಡೆ, ಮಂಗ್ಲಿ ನೀಡಿದ ದೂರಿನ ಮೇರೆಗೆ ವಕೀಲ ಸುಬ್ಬಾರಾವ್ ವಿರುದ್ಧವೂ ತನಿಖೆ ನಡೆಯುತ್ತಿದೆ. ಸತ್ಯಾಸತ್ಯತೆಯನ್ನು ಪರಿಶೀಲಿಸಲು ಪೊಲೀಸರು ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ.
ಮಂಗ್ಲಿ, ತೆಲುಗು ಚಿತ್ರರಂಗದ ಜನಪ್ರಿಯ ಗಾಯಕಿ. ಬಡ ಮತ್ತು ಹಿಂದುಳಿದ ಕುಟುಂಬದಿಂದ ಬಂದು ಒಂದೊಂದೆ ಹೆಜ್ಜೆಗಳನ್ನು ಇಡುತ್ತಾ ಈಗ ಜನಪ್ರಿಯ ಗಾಯಕಿ ಎನಿಸಿಕೊಂಡಿದ್ದಾರೆ. ಆದರೆ ಇದೀಗ ಮಂಗ್ಲಿ ವಿರುದ್ಧ ಹಣಕಾಸು ವಂಚನೆಯ ಆರೋಪ ಕೇಳಿಬಂದಿದೆ. ಕಳೆದ ವರ್ಷ, ಖಾಸಗಿ ರೆಸಾರ್ಟ್ನಲ್ಲಿ ನಡೆದಿದ್ದ ಮಂಗ್ಲಿಯ ಹುಟ್ಟುಹಬ್ಬ ಆಚರಣೆ ಮೇಲೆ ಸಹ ಪೊಲೀಸರು ದಾಳಿ ನಡೆಸಿದ್ದರು. ಆ ವೇಳೆ ಮದ್ಯದ ಬಾಟಲಿಗಳು ದೊರೆತಿದ್ದವು, ಅನುಮತಿ ಇಲ್ಲದೆ ಪಾರ್ಟಿ ಮಾಡುತ್ತಿದ್ದಾರೆಂದು ದೂರು ದಾಖಲಾಗಿತ್ತು. ಆದರೆ ಯಾವುದೇ ಕಾನೂನು ಬಾಹಿರ ಮಾದಕ ವಸ್ತುಗಳು ಪತ್ತೆ ಆಗಿರಲಿಲ್ಲ.
ಬೆಂಗಳೂರು, ಏಪ್ರಿಲ್ 12: ಈ ಬಾರಿ ಬೇಸಿಗೆಯ ಬಿರುಬಿಸಿಲು ಸಿಲಿಕಾನ್ ಸಿಟಿ ಜನರನ್ನ ಬಿಡದೆ ಕಾಡುತ್ತಿದೆ. ಮನೆಯಲ್ಲಿದ್ದರೆ ಬಿಸಿಲ ಧಗೆ (heatwave). ಇನ್ನು ಹೊರಗೆ ಬಂದರೆ ಸುಡೋ ಬಿಸಿಲು. ಹೀಗಾಗಿ ಜನರು ಕೂಲ್ ಡ್ರಿಂಕ್ಸ್, ಎಳನೀರು ಮೊರೆ ಹೋಗುತ್ತಿದ್ದಾರೆ. ಆದರೆ ರಾತ್ರಿ ನಿದ್ದೆ ಮಾಡುವುದಕ್ಕೆ ಸಂಕಷ್ಟ ಶುರುವಾಗಿದೆ. ಮತ್ತೊಂದೆಡೆ ಏರ್ ಕೂಲರ್ ಹಾಗೂ ಎಸಿಗೆ ಡಿಮ್ಯಾಂಡ್ ಕೂಡ ಶುರುವಾಗಿದೆ.
ರಾತ್ರಿ ನಿದ್ದೆಗೆ ಬಿಸಿಲು ಅಡ್ಡಿ
ಸದ್ಯ ಬೆಂಗಳೂರಿನಲ್ಲಿ 35 ರಿಂದ 36 ಡಿಗ್ರಿ ತಾಪಮಾನ ದಾಖಲಾಗುತ್ತಿದೆ. ಏಪ್ರಿಲ್ ಕೊನೆಯ ವಾರದ ಬಳಿಕ 37ರಿಂದ 38* ಡಿಗ್ರಿ ತಲುಪುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ರಾತ್ರಿ ವೇಳೆ 24 ರಿಂದ 26 ಡಿಗ್ರಿ ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ಜನರು ನಿದ್ದೆ ಮಾಡಲು ಪರದಾಡುತ್ತಿದ್ದಾರೆ.
ಹವಾಮಾನ ವೈಪರಿತ್ಯ: ನೈಸರ್ಗಿಕ ಪ್ರಕ್ರಿಯೆಯಲ್ಲಿ ಏರುಪೇರು
ಹತ್ತು ವರ್ಷಗಳ ಹಿಂದೆ ಬೆಂಗಳೂರಿನ ಉಷ್ಠಾಂಶ 36 ಡಿಗ್ರಿ ದಾಟಿದಾಗ ಮಳೆ ಕಡ್ಡಾಯವಾಗಿ ಸುರಿಯುತ್ತಿತ್ತು. ಉಷ್ಠಾಂಶ ಹೆಚ್ಚಳವಾದಾಗ ಗಾಳಿಯ ಒತ್ತಡ ಕಡಿಮೆ ಆಗಿ, ಪ್ರೆಶರ್ ಬೆಲ್ಟ್ ಕ್ರಿಯೇಟ್ ಆಗಿ, ಗಾಳಿ, ಮೋಡಗಳನ್ನು ಹೊತ್ತು ಮಳೆ ಸುರಿಯುತ್ತಿತ್ತು. ಆದರೆ ಈ ಸಾಮಾನ್ಯ ನೈಸರ್ಗಿಕ ಪ್ರಕ್ರಿಯೆ ಸದ್ಯ ಬದಲಾಗಿದೆ. ವಾಯು ಮಾಲಿನ್ಯ ಹೆಚ್ಚಳದಿಂದ ಹವಾಮಾನ ವೈಪರಿತ್ಯ ಆರಂಭಗೊಂಡಿದೆ. ರಾತ್ರಿಯಾದ್ರೂ ಉಷ್ಟಾಂಶ ತಗ್ಗದೇ, ಇದರಿಂದ ಅರೆ ನಿದ್ರೆಯ ಸಮಸ್ಯೆ ಶುರುವಾಗಿದೆ. ರಾತ್ರಿ ವೇಳೆಯೂ ಹೆಚ್ಚು ತಾಪಮಾನ ಇರುವುದರಿಂದ ಸಿಟಿ ಜನರು ಪರದಾಡುವಂತಾಗಿದೆ ಎಂದು ಜೆಕೆವಿಕೆ ಹವಾಮಾನ ವಿಭಾಗದ ಪ್ರೊ. ತಿಮ್ಮೆಗೌಡ ಹೇಳಿದ್ದಾರೆ.
ಎಸಿ ಹಾಗೂ ಏರ್ ಕೂಲರ್ಗಳಿಗೆ ಭರ್ಜರಿ ಡಿಮ್ಯಾಂಡ್
ಸದ್ಯ ಬಿರುಬಿಸಿಲಿಗೆ ಎಲ್ಲರೂ ತತ್ತರಿಸಿ ಹೋಗಿದ್ದಾರೆ. ಕೂಲ್ ಸಿಟಿ ಖ್ಯಾತಿಯ ಬೆಂಗಳೂರು ಸದ್ಯ ಹಾಟ್ ಸಿಟಿಯಾಗಿದೆ. ಹೀಗಾಗಿ ಜನರು ಮನೆಯಿಂದ ಹೊರಗಡೆ ಬಂದರೆ ಸಾಕು ತಂಪಾಗಿರೋದಕ್ಕೆ ಅಂತ ಎಳನೀರು, ಜ್ಯೂಸ್ ಕುಡಿತಿದ್ದಾರೆ. ಆದರೆ ಮನೆಯಲ್ಲಿ ಮುಂಜಾನೆ ಬಿಸಿಲಿನ ಧಗೆಯಾದ್ರೆ ಸಂಜೆ ವೇಳೆಗೆ ಪ್ಯಾನ್ ಹಾಕಿದ್ರೂ ಬಿಸಿ ಗಾಳೆ ಬರುತ್ತದೆ. ರಾತ್ರಿ ನಿದ್ದೆ ಮಾಡುವುದಕ್ಕೆ ಆಗುತ್ತಿಲ್ಲ. ಹೀಗಿರುವಾಗ ಏರ್ ಕೂಲರ್ ಹಾಗೂ ಎಸಿಗಳಿಗೆ ಭರ್ಜರಿ ಡಿಮ್ಯಾಂಡ್ ಶುರುವಾಗಿದೆ.
ಮನೆಗಳಲ್ಲಿ ಆರಾಮದಾಯಕ ವಾತಾವರಣ ನಿರ್ಮಾಣಕ್ಕೆ ಏರ್ ಕೂಲಿಂಗ್, ಎಸಿಗೆ ಸಕತ್ ಬೇಡಿಕೆ ಶುರುವಾಗಿದೆ. ಗ್ರಾಹಕರ ಆರೋಗ್ಯ ಮತ್ತು ನೈರ್ಮಲ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ತಯಾರಿಸಲಾಗಿರುವ ಕೂಲಿಂಗ್ ಅಪ್ಲಾಯನ್ಸ್ಗೆ ಬೇಡಿಕೆ ದುಪ್ಪಟ್ಟಾಗಿದೆ.
ಇನ್ನು ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸದ್ಯ ನಗರದಲ್ಲಿ ಏರ್ ಕೂಲರ್ ಹಾಗೂ ಎಸಿಗಳ ಬೇಡಿಕೆ ಶುರುವಾಗಿದೆ. ಇದು ಮುಂದಿನ ದಿನದಲ್ಲಿ ಮತ್ತಷ್ಟು ಬಿಸಲಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ಸಿಟಿ ಜನರು ಆರೋಗ್ಯದ ಬಗ್ಗೆ ಕೊಂಚ ಎಚ್ಚರವಹಿಸಬೇಕಿದೆ.
ಬೆಂಗಳೂರು/ಚಿಕ್ಕಮಗಳೂರು, (ಏಪ್ರಿಲ್ 12): ಕರ್ನಾಟಕ ಕಾಂಗ್ರೆಸ್ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ನಾಯಕತ್ವ ಗೊಂದಲ, ದಾವಣಗೆರೆ ಜಟಾಪಟಿ ನಡುವೆ ಕಾಂಗ್ರೆಸ್ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 30 ಶಾಸಕರು ಮಂತ್ರಿಗಿರಿಗೆ ಹಕ್ಕೊತ್ತಾಯ ಮಾಡಲು ಇಂದು (ಏಪ್ರಿಲ್ 12) ಮಧ್ಯಾಹ್ನ ಬೆಂಗಳೂರಿನಿಂದ (Bengaluru) ದೆಹಲಿಗೆ ತೆರಳಿದ್ದಾರೆ. ಎಲ್ಲಾ ಶಾಸಕರು ಎರಡು ದಿನ ದೆಹಲಿಯಲ್ಲೇ ಠಿಕಾಣಿ ಹೂಡಲಿದ್ದು, ಹೈಕಮಾಂಡ್ ನಾಯಕರನ್ನ ಭೇಟಿ ಮಾಡಲಿದ್ದಾರೆ. ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೊನೆಗೂ ಮೌನ ಮುರಿದಿದ್ದಾರೆ.
ಇನ್ನು ಶಾಸಕರ ನಡೆ ಬಗ್ಗೆ ಇತ್ತ ಇದೇ ಮೊದಲ ಬಾರಿಗೆ ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ದೆಹಲಿಗೆ ಹೋದ್ರೆ ತಪ್ಪೇನು, ಬೇಡ ಅಂದೋರು ಯಾರು? ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಎರಡೂವರೆ ವರ್ಷಗಳ ಬಳಿಕ ಸಂಪುಟ ಪುನಾರಚನೆ ಮಾಡಬೇಕಿತ್ತು. ಪಂಚ ರಾಜ್ಯಗಳ ಚುನಾವಣೆ, ಬೈಎಲೆಕ್ಷನ್ನಿಂದ ವಿಳಂಬವಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಸಿದ್ದರಾಮಯ್ಯನವರು ಪರೋಕ್ಷವಾಗಿ ಶಾಸಕರ ದೆಹಲಿ ಯಾತ್ರೆಗೆ ಬೆಂಬಲಿಸಿದ್ದಾರೆ.
ಐಪಿಎಲ್ 2026 (IPL 2026) ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡವನ್ನು ಎದುರಿಸಿದೆ. ಎರಡೂ ತಂಡಗಳಿಗೆ ಇದು ಈ ಆವೃತ್ತಿಯ ನಾಲ್ಕನೇ ಪಂದ್ಯವಾಗಿದೆ. ಎರಡೂ ತಂಡಗಳು ಕಳೆದ ಪಂದ್ಯದಲ್ಲಿ ಸೋತಿವೆ. ಆದ್ದರಿಂದ, ಎರಡೂ ತಂಡಗಳು ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸಲಿವೆ. ಒಂದೆಡೆ ಆರ್ಸಿಬಿ ಆಡಿರುವ ಮೂರು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆದ್ದು 1 ಪಂದ್ಯದಲ್ಲಿ ಸೋತಿದ್ದು, 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇತ್ತ ಮುಂಬೈ ಇಂಡಿಯನ್ಸ್ ಆಡಿರುವ ಮೂರು ಪಂದ್ಯಗಲ್ಲಿ 2 ರಲ್ಲಿ ಸೋತು, ಕೇವಲ 1 ಪಂದ್ಯವನ್ನು ಮಾತ್ರ ಗೆದ್ದಿದೆ. ಹೀಗಾಗಿ ಎರಡು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
ಟಾಸ್ ಗೆದ್ದ ಮುಂಬೈ
ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಮುಂಬೈ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಅಲ್ಲಾ ಗಜನ್ಫರ್ ಮತ್ತು ದೀಪಕ್ ಚಹಾರ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಅವರ ಬದಲಿಗೆ ಮಯಾಂಕ್ ಮಾರ್ಕಂಡೆ ಮತ್ತು ಮಿಚೆಲ್ ಸ್ಯಾಂಟ್ನರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇತ್ತ ಆರ್ಸಿಬಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಜೋಶ್ ಹೇಜಲ್ವುಡ್ ಬದಲಿಗೆ ಜಾಕೋಬ್ ಡಫಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಮುಖಾಮುಖಿ ದಾಖಲೆ
ಐಪಿಎಲ್ನಲ್ಲಿ ಇಲ್ಲಿಯವರೆಗೆ ಈ ಎರಡೂ ತಂಡಗಳ ನಡುವೆ ಒಟ್ಟು 34 ಪಂದ್ಯಗಳು ನಡೆದಿವೆ. ಮುಂಬೈ ಇಂಡಿಯನ್ಸ್ ಈ 34 ಪಂದ್ಯಗಳಲ್ಲಿ 20 ಪಂದ್ಯಗಳನ್ನು ಗೆದ್ದಿದ್ದರೆ ಆರ್ಸಿಬಿ 14 ಪಂದ್ಯಗಳನ್ನು ಗೆದ್ದಿದೆ. ಈ ದಾಖಲೆಯು ಮುಂಬೈ ತಂಡವು ಐತಿಹಾಸಿಕವಾಗಿ ಮೇಲುಗೈ ಸಾಧಿಸಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ.
ಒಟ್ಟಾರೆಯಾಗಿ ಮುಂಬೈ ತಂಡಕ್ಕೆ ಅನುಕೂಲವಿದ್ದರೂ, ಇತ್ತೀಚಿನ ದಿನಗಳಲ್ಲಿ ಆರ್ಸಿಬಿ ಅದ್ಭುತ ಪ್ರದರ್ಶನ ನೀಡಿದೆ. ಎರಡೂ ತಂಡಗಳ ನಡುವೆ ನಡೆದ ಕೊನೆಯ ಐದು ಪಂದ್ಯಗಳ ಫಲಿತಾಂಶಗಳನ್ನು ನೋಡಿದರೆ, ಆರ್ಸಿಬಿಯ ಪ್ರದರ್ಶನವು ಉತ್ತಮವಾಗಿದೆ. ಆರ್ಸಿಬಿ ಕಳೆದ ಐದು ಪಂದ್ಯಗಳಲ್ಲಿ ಮೂರನ್ನು ಗೆದ್ದಿದೆ. ಮತ್ತೊಂದೆಡೆ, ಮುಂಬೈ ಇಂಡಿಯನ್ಸ್ ಕೇವಲ ಎರಡು ಪಂದ್ಯಗಳನ್ನು ಗೆದ್ದಿದೆ.
Toss @mipaltan won the toss and elected to bowl first against @RCBTweets in Match 2⃣0⃣