ಟೀಮ್ ಇಂಡಿಯಾದಿಂದ ಸ್ಟಾರ್ ಆಟಗಾರ ಔಟ್: ಕನ್ನಡಿಗ ಎಂಟ್ರಿ!

Source link

ಉತ್ತರ ಕನ್ನಡದ 439 ಪ್ರದೇಶಗಳಲ್ಲಿ ಗುಡ್ಡ ಕುಸಿತದ ಭೀತಿ: 100 ಕೋಟಿ ರೂ. ಬಿಡುಗಡೆಯಾದ್ರೂ ಕಾಮಗಾರಿ ನಡೆಸಲಾಗದೆ ಸಂಕಷ್ಟ! – Kannada News

ಗುಡ್ಡ ಕುಸಿತ ತಡೆಗೋಡೆ ನಿರ್ಮಾಣ ಕಾಮಗಾರಿImage Credit source: tv9

ಕಾರವಾರ, ಜೂನ್ 10: ‘ಯುದ್ಧ ಕಾಲೇ ಶಸ್ತ್ರಾಭ್ಯಾಸ’ ಎಂಬ ಗಾದೆಯಂತೆ ಮುಂಗಾರು ಮಳೆ ಆರಂಭವಾದ ಬೆನ್ನಲ್ಲೇ ರಾಜ್ಯ ಸರ್ಕಾರ, ಗುಡ್ಡ ಕುಸಿತ ತಡೆಗೋಡೆ ನಿರ್ಮಾಣಕ್ಕಾಗಿ ಉತ್ತರ ಕನ್ನಡ (Uttara Kannada) ಜಿಲ್ಲೆಗೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಆದರೆ, ಜಿಲ್ಲೆಯಲ್ಲಿ ಈಗಾಗಲೇ ವರುಣಾರ್ಭಟ ತೀವ್ರಗೊಂಡಿರುವುದರಿಂದ ಹಣ ಕೈಯಲ್ಲಿದ್ದರೂ ಯಾವುದೇ ಪ್ರಮುಖ ಕಾಮಗಾರಿಗಳನ್ನು ನಡೆಸಲಾಗದ ಜಿಲ್ಲಾಡಳಿತ ಇಕ್ಕಟ್ಟಿಗೆ ಸಿಲುಕಿದೆ.

ಮುಖ್ಯಾಂಶಗಳು

  • ತಡೆಗೋಡೆ ನಿರ್ಮಾಣಕ್ಕೆ 100 ಕೋಟಿ ರೂ. ಬಿಡುಗಡೆ.
  • ಮುಂಗಾರು ಆರಂಭದಿಂದ ಕಾಮಗಾರಿ ನಡೆಸಲು ಅಡ್ಡಿ.
  • 439 ಸೂಕ್ಷ್ಮ ಪ್ರದೇಶಗಳಲ್ಲಿ ಕುಸಿತದ ಭೀತಿ.

ಹಣವಿದ್ದರೂ ಮುಗಿಯದ ಆತಂಕ: ಮಳೆಗಾಲದ ಬಳಿಕವಷ್ಟೇ ಪೂರ್ಣ ಕೆಲಸ

ಭೌಗೋಳಿಕವಾಗಿ ರಾಜ್ಯದ ಅತಿ ದೊಡ್ಡ ಜಿಲ್ಲೆಯಾಗಿರುವ ಉತ್ತರ ಕನ್ನಡದ ಬಹುಪಾಲು ಪ್ರದೇಶಗಳು ಪಶ್ಚಿಮ ಘಟ್ಟಗಳ ಸಾಲಿನಲ್ಲಿವೆ. ಪ್ರತಿ ವರ್ಷ ಇಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಮತ್ತು ಪ್ರವಾಹದಂತಹ ಪ್ರಕೃತಿ ವಿಕೋಪಗಳು ಸಾಮಾನ್ಯ ಎಂಬಂತಾಗಿವೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಿಂದಲೂ ಶಾಶ್ವತ ಪರಿಹಾರಕ್ಕಾಗಿ ಕನಿಷ್ಠ 100 ಕೋಟಿ ರೂಪಾಯಿ ನೀಡುವುದಾಗಿ ಭರವಸೆ ನೀಡಲಾಗಿತ್ತು. ಪ್ರಸ್ತುತ ಸರ್ಕಾರ ಕಳೆದ ಒಂದು ತಿಂಗಳ ಹಿಂದೆಯಷ್ಟೇ ಹಣ ಬಿಡುಗಡೆ ಮಾಡಿದೆ. ಆದರೆ ಜಿಲ್ಲಾಡಳಿತ ಕಾಮಗಾರಿ ಆರಂಭಿಸುವಷ್ಟರಲ್ಲೇ ಮಳೆ ಶುರುವಾಗಿದೆ. ಹೀಗಾಗಿ ಸದ್ಯಕ್ಕೆ ಅತ್ಯಂತ ತುರ್ತು ಇರುವ ಜಾಗಗಳಲ್ಲಿ ಮಾತ್ರ 40 ಕೋಟಿ ರೂಪಾಯಿ ವೆಚ್ಚದಲ್ಲಿ ರಕ್ಷಣಾತ್ಮಕ ಕಾಮಗಾರಿಗಳನ್ನು ಮಾಡಲಾಗುತ್ತಿದ್ದು, ಉಳಿದ ಪ್ರಮುಖ ಕಾಮಗಾರಿಗಳನ್ನು ಮುಂಗಾರು ಮುಗಿದ ಬಳಿಕವಷ್ಟೇ ಕೈಗೆತ್ತಿಕೊಳ್ಳಲು ಜಿಲ್ಲಾಡಳಿತ ತೀರ್ಮಾನಿಸಿದೆ.

439 ಕಡೆ ಗುಡ್ಡ ಕುಸಿತದ ಭೀತಿ: ಶಿರೂರು ದುರಂತದ ಕಹಿ ನೆನಪು

ಉತ್ತರ ಕನ್ನಡ ಜಿಲ್ಲೆಯ ಒಟ್ಟು 439 ಕ್ಕೂ ಹೆಚ್ಚು ಸೂಕ್ಷ್ಮ ಪ್ರದೇಶಗಳಲ್ಲಿ ಗುಡ್ಡ ಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ತಜ್ಞರ ತಂಡ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ವರದಿ ನೀಡುತ್ತಲೇ ಬಂದಿದೆ. ಆದರೆ ಸರ್ಕಾರಗಳು ಸಕಾಲದಲ್ಲಿ ಮುನ್ನೆಚ್ಚರಿಕೆ ವಹಿಸದ ಕಾರಣ ಅವಘಡಗಳು ಸಂಭವಿಸುತ್ತಲೇ ಇವೆ. ಶಿರೂರು ಸೇರಿದಂತೆ ಕಳೆದ ಒಂದೆರಡು ವರ್ಷಗಳಲ್ಲಿ ವಿವಿಧೆಡೆ ಸಂಭವಿಸಿದ್ದ ಭೂಕುಸಿತಕ್ಕೆ ಕನಿಷ್ಠ 14 ಕ್ಕೂ ಹೆಚ್ಚು ಅಮಾಯಕ ಜೀವಗಳು ಬಲಿಯಾಗಿದ್ದವು.

ಕಾರವಾರ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಕುಸಿಯುತ್ತಿರುವ ಗುಡ್ಡ

ಪ್ರಸ್ತುತ, ಕಾರವಾರ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಪ್ರತಿ ಮಳೆಗೂ ಮಣ್ಣು ಕುಸಿಯುತ್ತಲೇ ಇದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುತ್ತಿದ್ದಾರೆ. ಶಿರೂರು ಮುಂತಾದ ಕಡೆಗಳಲ್ಲಿ ಮತ್ತೆ ಗುಡ್ಡ ಕುಸಿತದ ಆತಂಕ ಎದುರಾಗಿದ್ದರೂ, ಮಳೆಯ ಕಾರಣದಿಂದ ತಡೆಗೋಡೆ ನಿರ್ಮಾಣ ತಡವಾಗುತ್ತಿರುವುದು ಸಾರ್ವಜನಿಕರ ನಿದ್ದೆಗೆಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಮುಂಗಾರು ಮಳೆಯ ತೀವ್ರತೆಯ ನಡುವೆಯೇ ಸಾಧ್ಯವಿರುವಷ್ಟು ರಕ್ಷಣಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಗ್ರಾಮಸ್ಥರ ಆತಂಕ

ಕಳೆದ ನಾಲ್ಕು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಅನುದಾನ ಈ ಬಾರಿ ಕೈಸೇರಿದ್ದರೂ, ಪ್ರಕೃತಿಯ ಮುನಿಸಿನಿಂದಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಬಾರಿ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾದರೆ ಅನಾಹುತಗಳ ಪ್ರಮಾಣ ತಗ್ಗಬಹುದು ಎಂಬ ನಿರೀಕ್ಷೆಯಲ್ಲೇ ಜಿಲ್ಲಾಡಳಿತ ದಿನದೂಡುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಅಧಿಕ ಮಾಸದಲ್ಲಿ ಮಕ್ಕಳು ಹುಟ್ಟಿದರೆ ಶುಭನಾ? ಶಾಸ್ತ್ರಗಳು ಹೇಳುವುದೇನು? – Kannada News

ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ಅಧಿಕ ಮಾಸದಲ್ಲಿ ಜನಿಸಿದ ಮಕ್ಕಳ ಭವಿಷ್ಯದ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅಧಿಕ ಮಾಸವು ಪುರುಷೋತ್ತಮ ಮಾಸವೆಂದು ಪರಿಗಣಿತವಾಗಿದ್ದು, ವಿಷ್ಣುವಿಗೆ ಪ್ರಿಯವಾದ ಮಾಸವಾಗಿದೆ. “ಅಧಿಕಸ್ಯ ಅಧಿಕ ಫಲಂ” ಎಂಬ ಮಾತಿನಂತೆ, ಈ ಮಾಸದಲ್ಲಿ ಮಾಡುವ ಜಪ, ತಪ, ದಾನಗಳಿಗೆ ವಿಶೇಷ ಫಲ ಸಿಗುತ್ತದೆ. ಇತ್ತೀಚೆಗೆ ಅನೇಕರು ಅಧಿಕ ಮಾಸದಲ್ಲಿ ಮಕ್ಕಳ ಜನನದ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

ನಿರ್ದಿಷ್ಟವಾಗಿ, ಅಧಿಕ ಮಾಸದಲ್ಲಿ ಸೋಮವಾರ, ಬುಧವಾರ ಮತ್ತು ಶನಿವಾರದಂದು ಜನಿಸಿದ ಮಕ್ಕಳು ಹೆಚ್ಚು ಚತುರತೆ, ಚಾಕಚಕ್ಯತೆ ಮತ್ತು ವಿಷಯಗಳನ್ನು ಬೇಗ ಗ್ರಹಿಸುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಮಂಗಳವಾರ, ಗುರುವಾರ, ಶುಕ್ರವಾರ ಮತ್ತು ಭಾನುವಾರದಂದು ಜನಿಸಿದ ಮಕ್ಕಳು ತಾಳ್ಮೆ ಮತ್ತು ಸಹಿಷ್ಣುತೆಗೆ ಹೆಸರಾಗಿರುತ್ತಾರೆ. ಆಮೆ ಮತ್ತು ನರಿಯ ಕಥೆಯಲ್ಲಿ ಆಮೆಯು ಗೆಲ್ಲುವಂತೆ, ಈ ಮಕ್ಕಳು ತಮ್ಮ ತಾಳ್ಮೆಯಿಂದ ಯಶಸ್ಸನ್ನು ಸಾಧಿಸುತ್ತಾರೆ.

ಅಧಿಕ ಮಾಸದಲ್ಲಿ ಜನಿಸಿದ ಮಕ್ಕಳು ಹೆಚ್ಚಿನ ಚುರುಕುತನ ಹೊಂದಿರುತ್ತಾರೆ. ಅವರು ವೈದ್ಯರು, ಸಾಫ್ಟ್‌ವೇರ್ ಇಂಜಿನಿಯರ್‌ಗಳು, ಹಾಗೆಯೇ ಐಎಎಸ್, ಐಪಿಎಸ್‌ನಂತಹ ಉನ್ನತ ಮಟ್ಟದ ಉದ್ಯೋಗಗಳನ್ನು ಪಡೆಯುವ ಯೋಗವನ್ನು ಹೊಂದಿರುತ್ತಾರೆ. ಇವರಿಗೆ ಆಡಳಿತದ ಬಗ್ಗೆ ವಿಶೇಷ ಒಲವಿರುತ್ತದೆ. ಅವರು ಎಂದಿಗೂ ಇನ್ನೊಬ್ಬರ ಪರಾವಲಂಬಿಗಳಾಗಿರುವುದಿಲ್ಲ, ಬದಲಾಗಿ ಸ್ವಾಲಂಬಿಗಳಾಗಿರುತ್ತಾರೆ. ಸ್ವಂತ ಸಾಮರ್ಥ್ಯ ಮತ್ತು ನಿರ್ವಹಣೆಯ ಶಕ್ತಿ ಇವರಲ್ಲಿ ಅತಿ ಹೆಚ್ಚಾಗಿರುತ್ತದೆ.

ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಆದ್ದರಿಂದ, ಅಧಿಕ ಮಾಸದಲ್ಲಿ ಜನಿಸಿದ ಮಕ್ಕಳಿಗೆ ಯಾವುದೇ ದೋಷವಿಲ್ಲ. ಯಾವುದೇ ರೀತಿಯ ಪರಿಹಾರಗಳು, ಹೋಮಗಳು ಅಗತ್ಯವಿಲ್ಲ. ಈ ಮಕ್ಕಳು ವಿಶೇಷ ಪ್ರತಿಭೆ ಮತ್ತು ಅದೃಷ್ಟವನ್ನು ಹೊಂದಿರುತ್ತಾರೆ. ಭಗವಂತನ ಕೃಪೆ ಮತ್ತು ಆಶೀರ್ವಾದದೊಂದಿಗೆ, ಈ ಮಕ್ಕಳು ಕೀರ್ತಿ ಮತ್ತು ಪ್ರತಿಷ್ಠೆಗೆ ಭಾಜನರಾಗುತ್ತಾರೆ. ಸ್ಥಿತಿಕಾರಕನಾಗಿರುವ ವಿಷ್ಣುವಿನ ಅನುಗ್ರಹದಿಂದ, ಇವರು ಅತಿ ಹೆಚ್ಚು ಚುರುಕುತನ ಮತ್ತು ಅದ್ಭುತವಾದ ನಿರ್ವಹಣಾ ಶಕ್ತಿಯನ್ನು ಹೊಂದಿರುತ್ತಾರೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:19 am, Wed, 10 June 26

Source link

ಪತ್ನಿಗಾಗಿ ಪೊಲೀಸ್ ನೇಮಕಾತಿ ಪರೀಕ್ಷಾ ಕೇಂದ್ರದ ಹೊರಗೆ ಕಾಯುತ್ತಿದ್ದ ಪತಿಯ ಗುಂಡಿಕ್ಕಿ ಹತ್ಯೆ – Kannada News

ಸಹರಾನ್‌ಪುರ , ಜೂನ್ 10: ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಪೊಲೀಸ್ ನೇಮಕಾತಿ ಪರೀಕ್ಷಾ ಕೇಂದ್ರದ ಹೊರಗೆ ಮಂಗಳವಾರ ಭೀಕರ ಹತ್ಯೆ(Murder) ನಡೆದಿದೆ. ಕಾನೂನು ಸುವ್ಯವಸ್ಥೆಯನ್ನು ಎತ್ತಿಹಿಡಿಯಲು ಮತ್ತು ಸಂತ್ರಸ್ತ ಕುಟುಂಬಕ್ಕೆ ಶೀಘ್ರ ನ್ಯಾಯ ಒದಗಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಕಟ್ಟುನಿಟ್ಟಿನ ತನಿಖೆ ಹಾಗೂ ವಿಶೇಷ ಶೋಧ ಕಾರ್ಯಾಚರಣೆಯನ್ನು ತಕ್ಷಣವೇ ಆರಂಭಿಸಲಾಗಿದೆ.

ಶಾಮ್ಲಿ ಜಿಲ್ಲೆಯ ನಿವಾಸಿಯಾದ ಆಕಾಂಕ್ಷಾ ಎಂಬುವವರು ಪರೀಕ್ಷೆಗೆ ಹಾಜರಾಗಲು ರಾಂಪುರ ಮಣಿಹರನ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಚಾರ್ ಇಂಟರ್ ಕಾಲೇಜಿಗೆ ಆಗಮಿಸಿದ್ದರು. ಆಕೆಯ ಪತಿ ಶಿವಕುಮಾರ್ ಅವರು ಪರೀಕ್ಷಾ ಕೇಂದ್ರದ ಹೊರಗೆ ಕಾಯುತ್ತಿದ್ದಾಗ, ಆಕಾಂಕ್ಷಾಳ ಸಹೋದರ ಮಂಜೀತ್ ಎಂಬಾತ ದಿಢೀರನೆ ಬಂದು ಶಿವಕುಮಾರ್ ಅವರ ತಲೆಗೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ.
ಘಟನೆ ನಡೆದ ತಕ್ಷಣವೇ ಅಲರ್ಟ್ ಆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಶಿವಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಅಷ್ಟರೊಳಗೆ ಅವರ ಪ್ರಾಣಪಕ್ಷಿ ಹಾರಹೋಗಿತ್ತು.

ಕಾನೂನು ಕ್ರಮಗಳನ್ನು ಚುರುಕುಗೊಳಿಸಿದ ವಿಧಿವಿಜ್ಞಾನ ಮತ್ತು ಪೊಲೀಸ್ ತಂಡಗಳು
ಅಪರಾಧ ನಡೆದ ತಕ್ಷಣವೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಟ್ಟುನಿಟ್ಟಿನ ಕ್ರಮಗಳಿಗೆ ಆದೇಶಿಸಿದ್ದಾರೆ. ಜಿಲ್ಲಾ ವಿಧಿವಿಜ್ಞಾನ (Forensic) ತಂಡಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಅಪರಾಧ ನಡೆದ ಸ್ಥಳದಿಂದ ಪ್ರಮುಖ ಭೌತಿಕ ಸಾಕ್ಷ್ಯಗಳನ್ನು ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿವೆ.

ಮತ್ತಷ್ಟು ಓದಿ: ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ಯಾರು?

ಆರೋಪಿ ಮಂಜೀತ್ ಮತ್ತು ಈ ಕೃತ್ಯಕ್ಕೆ ಪ್ರೇರೇಪಣೆ ನೀಡಿದವರನ್ನು ಪತ್ತೆಹಚ್ಚಲು ಪೊಲೀಸರು ಹಲವು ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದು, ನೆರೆಯ ಜಿಲ್ಲೆಗಳಲ್ಲೂ ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.

ಹೆಣ್ಣುಮಗಳ ರಕ್ಷಣೆ ಮತ್ತು ಇಲಾಖೆಯ ಭರವಸೆ
ಆಕಾಂಕ್ಷಾ ಮಾತನಾಡಿ ತಾನು ಮತ್ತು ಶಿವಕುಮಾರ್ ನಾಲ್ಕು ತಿಂಗಳ ಹಿಂದಷ್ಟೇ ಪ್ರೇಮ ವಿವಾಹವಾಗಿದ್ದಾಗಿ ತಿಳಿಸಿದ್ದಾಳೆ. ಈ ಮದುವೆಗೆ ತನ್ನ ಕುಟುಂಬದವರ ತೀವ್ರ ವಿರೋಧವಿದ್ದು, ಇದೇ ಕೋಪದಲ್ಲಿ ತನ್ನ ಸಹೋದರ ಈ ಘೋರ ಕೃತ್ಯ ಎಸಗಿದ್ದಾನೆ ಎಂದು ಆಕೆ ದೂರು ನೀಡಿದ್ದಾಳೆ. ಮೃತರ ಸಹೋದರ ಶಿವಂ ಕುಮಾರ್ ಕೂಡ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಔಪಚಾರಿಕ ಎಫ್‌ಐಆರ್ ದಾಖಲಿಸಿಕೊಳ್ಳಲಾಗುತ್ತಿದೆ. ನೊಂದ ಮಹಿಳೆಗೆ ಮತ್ತು ಮೃತರ ಕುಟುಂಬಕ್ಕೆ ಸಂಪೂರ್ಣ ಪೊಲೀಸ್ ಭದ್ರತೆಯನ್ನು ಒದಗಿಸಲಾಗುವುದು. ಪ್ರೀತಿಯ ಹೆಸರಿನಲ್ಲಿ ಅಥವಾ ಕೌಟುಂಬಿಕ ಪ್ರತಿಷ್ಠೆಯ ನೆಪದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಇಂತಹ ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಅತ್ಯಂತ ಕಠಿಣ ಕಾಯ್ದೆಗಳ ಅಡಿಯಲ್ಲಿ ಆರೋಪಿಗಳಿಗೆ ನ್ಯಾಯಾಲಯದಿಂದ ಕಠಿಣ ಶಿಕ್ಷೆ ಕೊಡಿಸಲು ನಮ್ಮ ಇಲಾಖೆ ಬದ್ಧವಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಈ ತ್ವರಿತ ಮತ್ತು ಕಟ್ಟುನಿಟ್ಟಿನ ಆಡಳಿತಾತ್ಮಕ ಸ್ಪಂದನೆಯು ಸಂತ್ರಸ್ತ ಕುಟುಂಬದಲ್ಲಿ ಕಾನೂನಿನ ಮೇಲಿನ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Daily Devotional: ಹುಟ್ಟು ಹಬ್ಬವನ್ನು ಹೇಗೆ ಆಚರಿಸಬೇಕು ಗೊತ್ತಾ?

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಹುಟ್ಟು ಹಬ್ಬವನ್ನ ಹೇಗೆ ಆಚರಿಸಬೇಕು ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜನ್ಮದಿನಾಚರಣೆಯು ಕೇಕ್ ಕತ್ತರಿಸುವುದು, ಮೇಣದಬತ್ತಿ ಆರಿಸುವುದು, ಬಲೂನ್ ಸಿಡಿಸುವುದು ಮುಂತಾದ ಹೊಸ ಪದ್ಧತಿಗಳಿಂದ ಕೂಡಿದೆ. ಆದರೆ, ಹಿಂದೂ ಸಂಪ್ರದಾಯದಲ್ಲಿ ಈ ರೀತಿಯ ಆಚರಣೆಗಳಿಗೆ ಹೆಚ್ಚು ಪ್ರಾಮುಖ್ಯತೆ ಇಲ್ಲ. ಜನ್ಮದಿನವು ಕೇವಲ ಮೋಜಿನ ದಿನವಲ್ಲ, ಬದಲಿಗೆ ಆತ್ಮಾವಲೋಕನ ಮತ್ತು ಸಾರ್ಥಕತೆಯ ದಿನ ಎಂದು ಪರಿಗಣಿಸಲಾಗುತ್ತದೆ.

ಸನಾತನ ಸಂಸ್ಕೃತಿಯ ಪ್ರಕಾರ, ಜನ್ಮದಿನವನ್ನು ತಿಥಿಯ ಆಧಾರದ ಮೇಲೆ ಆಚರಿಸುವುದು ಹೆಚ್ಚು ಶುಭಕರ. ಈ ದಿನ ಸ್ನಾನ ಮಾಡಿ ಹಿರಿಯರ ಆಶೀರ್ವಾದ ಪಡೆಯುವುದು, ಇಷ್ಟ ದೇವತಾ ಮತ್ತು ಕುಲ ದೇವತಾ ದರ್ಶನ ಮಾಡುವುದು ಮುಖ್ಯ. ದೀಪವು ಜ್ಞಾನ ಮತ್ತು ಶಕ್ತಿಯ ಪ್ರತೀಕವಾದ್ದರಿಂದ ಅದನ್ನು ಆರಿಸುವುದು ಅಶುಭಕರ. ಬದಲಿಗೆ, ದೀಪ ಹಚ್ಚಿ ದೇವರಿಗೆ ಪ್ರಾರ್ಥನೆ ಸಲ್ಲಿಸುವುದು ಉತ್ತಮ ಎಂದು ಬಸವರಾಜ್ ಗುರೂಜಿ ತಿಳಿಸಿದ್ದಾರೆ.

Source link

Horoscope Today: ಇಂದು ಈ ರಾಶಿಯವರು ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಗಮನ ಕೊಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 10, ವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ದಶಮಿ, ಉತ್ತರಾಭಾದ್ರ ಮತ್ತು ರೇವತಿ ನಕ್ಷತ್ರಗಳೊಂದಿಗೆ ಸೌಭಾಗ್ಯ ಯೋಗ, ವಣಿಕ ಕರಣ ಇರತಕ್ಕಂತಹ ಈ ದಿನದ ಪಂಚಾಂಗ ವಿವರಗಳನ್ನು ಗುರೂಜಿ ನೀಡಿದ್ದಾರೆ.

ದಿನದ ರಾಹುಕಾಲ ಮಧ್ಯಾಹ್ನ 12:18 ರಿಂದ 1:54 ರವರೆಗೆ ಇದ್ದು, ಶುಭಕಾಲ ಬೆಳಗ್ಗೆ 10:42 ರಿಂದ ಮಧ್ಯಾಹ್ನ 12:18 ರವರೆಗೆ ಇರುತ್ತದೆ ಎಂದು ತಿಳಿಸಿದ್ದಾರೆ. ರವಿ ವೃಷಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ಬುಧವಾರವು ಕಾಲಭೈರವ, ವಿನಾಯಕ ಮತ್ತು ವೆಂಕಟೇಶ್ವರನಿಗೆ ಅತಿ ಪ್ರಿಯವಾದ ದಿನವಾಗಿದೆ ಎಂದು ಗುರೂಜಿ ಹೇಳಿದ್ದಾರೆ.

 

Source link

ಕನ್ನಡಕ್ಕೆ ಬರಲ್ಲ ‘ದೃಶ್ಯಂ 3’; ನಿರ್ದೇಶಕ ಜೀತು ಜೋಸೆಫ್ ಬಿಚ್ಚಿಟ್ಟ ಅಸಲಿ ಕಾರಣ – Kannada News

ಮಲಯಾಳಂ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಕಾಂಬಿನೇಷನ್‌ನ ‘ದೃಶ್ಯಂ’ ಫ್ರಾಂಚೈಸಿಗೆ ಭಾರತೀಯ ಚಿತ್ರರಂಗದಲ್ಲೇ ಸಖತ್ ಕ್ರೇಜ್ ಇದೆ. ಈ ಹಿಂದೆ ಬಂದಿದ್ದ ‘ದೃಶ್ಯಂ’ ಮತ್ತು ‘ದೃಶ್ಯಂ 2’ ಸಿನಿಮಾಗಳು ಯಶಸ್ಸು ಕಂಡಿದ್ದವು. ಈಗ ‘ದೃಶ್ಯಂ 3’ (Drishyam 3) ರಿಲೀಸ್ ಆಗಿ ದೊಡ್ಡ ಗೆಲುವು ಕಂಡಿದೆ. ಮೊದಲೆರಡು ಸಿನಿಮಾಗಳು ‘ದೃಶ್ಯ’ ಹಾಗೂ ‘ದೃಶ್ಯ 2’ ಹೆಸರಿನಲ್ಲಿ ಕನ್ನಡಕ್ಕೆ ರಿಮೇಕ್ ಆಗಿ, ಇಲ್ಲಿನವರ ಮನಗೆದ್ದು ಸೂಪರ್ ಹಿಟ್ ಆಗಿದ್ದವು. ಕನ್ನಡದಲ್ಲಿ ರವಿಚಂದ್ರನ್ ಅವರು ನಟಿಸಿದ್ದರು. ಮೂರನೇ ಭಾಗವೂ ಕನ್ನಡದಲ್ಲಿ ಬರಬಹುದು ಎಂದು ಕಾಯುತ್ತಿದ್ದ ಕನ್ನಡಿಗರಿಗೆ ಈಗ ನಿರಾಸೆಯಾಗಿದೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಮಲಯಾಳಂ ನಿರ್ದೇಶಕ ಜೀತು ಜೋಸೆಫ್, ‘ದೃಶ್ಯಂ 3’ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಿ ಏಕೆ ರಿಮೇಕ್ ಮಾಡುತ್ತಿಲ್ಲ ಎಂಬುದಕ್ಕೆ ಸ್ಪಷ್ಟನೆ ನೀಡಿದ್ದಾರೆ. ‘ದೃಶ್ಯಂ 3 ಕೇವಲ ಹಿಂದಿಯಲ್ಲಿ ಮಾತ್ರ ರಿಮೇಕ್ ಆಗುತ್ತಿದೆ. ನಮ್ಮ ಚಿತ್ರದ ಕ್ಲೈಮ್ಯಾಕ್ಸ್ ಬೇರೆ ಭಾಷೆಯ ಜನರಿಗೆ ಮತ್ತು ಅಲ್ಲಿನ ಸ್ಟಾರ್ ಇಮೇಜ್ ಇರುವ ಹೀರೊಗಳಿಗೆ ಸೆಟ್ ಆಗುತ್ತಿಲ್ಲ. ಅಲ್ಲಿನ ಹೀರೊಗಳ ಇಮೇಜ್‌ಗೆ ಈ ಕ್ಲೈಮ್ಯಾಕ್ಸ್ ಕೊಂಚ ಸಮಸ್ಯೆಯಾಗಬಹುದು. ಅದಕ್ಕಾಗಿಯೇ ತೆಲುಗು ಮತ್ತು ಕನ್ನಡದಲ್ಲಿ ಇದು ರಿಮೇಕ್ ಆಗುತ್ತಿಲ್ಲ’ ಎಂದು ಜೀತು ಜೋಸೆಫ್ ಹೇಳಿದ್ದಾರೆ.

ಹಿಂದಿ ರಿಮೇಕ್ ಹಕ್ಕುಗಳನ್ನು ಪಡೆದಿರುವ ಅಜಯ್ ದೇವಗನ್ ತಂಡದವರು ಚಿತ್ರದ ಕಥೆಯಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ‘ಹಿಂದಿ ಮೇಕರ್ಸ್ ನಮ್ಮ ಮೇಲೆ ಗೌರವ ಇಟ್ಟು, ಇಲ್ಲಿನ ಪರಿಸ್ಥಿತಿಗೆ ತಕ್ಕಂತೆ ಕಥೆಯಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳುವುದಾಗಿ ಕೇಳಿದರು. ಅದಕ್ಕೆ ನಾನು ಗ್ರೀನ್ ಸಿಗ್ನಲ್ ನೀಡಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ ಒಟಿಟಿ ರಿಲೀಸ್ ಡೇಟ್ ಫಿಕ್ಸ್? ಇಲ್ಲಿದೆ ಅಪ್‌ಡೇಟ್

ಬಾಕ್ಸ್‌ ಆಫೀಸ್‌ನಲ್ಲಿ ‘ದೃಶ್ಯಂ 3’ ಅಬ್ಬರ

ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ‘ದೃಶ್ಯಂ 3’ ವಿಶ್ವಾದ್ಯಂತ ಬರೋಬ್ಬರಿ Rs 235.55 ಕೋಟಿ ಕಲೆಕ್ಷನ್ ಮಾಡಿ ಅತಿ ಹೆಚ್ಚು ಗಳಿಕೆ ಕಂಡ 4ನೇ ಮಲಯಾಳಂ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಿನಿಮಾದ ಕೊನೆಯಲ್ಲಿ ಬರುವ ಪೋಸ್ಟ್ ಕ್ರೆಡಿಟ್ ಸೀನ್ ನೋಡಿ ಅಭಿಮಾನಿಗಳು ‘ದೃಶ್ಯಂ 4’ ಬರುತ್ತೆ ಎಂದು ಫಿಕ್ಸ್ ಆಗಿದ್ದಾರೆ. ಆದರೆ ಈ ಬಗ್ಗೆ ಮಾತನಾಡಿರುವ ಜೀತು ಜೋಸೆಫ್, ‘ಆ ಸೀನ್ ಅನ್ನು ಮೊದಲು ಸಿನಿಮಾದ ಮುಖ್ಯ ಭಾಗದಲ್ಲೇ ಇಡಲಾಗಿತ್ತು. ಆದರೆ ತಂಡದವರ ಸಲಹೆಯಂತೆ ಅದನ್ನು ಪೋಸ್ಟ್ ಕ್ರೆಡಿಟ್ ಸೀನ್ ಆಗಿ ಬದಲಾಯಿಸಲಾಯಿತು. ಸದ್ಯಕ್ಕೆ ನನ್ನ ಬಳಿ ‘ದೃಶ್ಯಂ 4’ ಮಾಡಲು ಯಾವುದೇ ಅಸಾಧಾರಣ ಕಥೆಯ ಎಳೆಯಿಲ್ಲ. ಭವಿಷ್ಯದಲ್ಲಿ ಅದ್ಭುತವಾದ ಐಡಿಯಾ ಸಿಕ್ಕರೆ ಖಂಡಿತಾ ಪಾರ್ಟ್ 4 ಮಾಡ್ತೀನಿ, ಇಲ್ಲದಿದ್ದರೆ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಹೊಸ ಕಾರ್ಯವನ್ನು ಆರಂಭಿಸುವುದು ಬೇಡವೇ ಬೇಡ.. – Kannada News

ಮೇಷ ರಾಶಿ:

ಆದಾಯಕ್ಕೆ ಯೋಗ್ಯವಾದ ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಶಕ್ತಿ, ಸಾಮರ್ಥ್ಯಗಳು ಅನ್ಯರಿಗೂ ತಿಳಿಯಲಿದೆ ಇಂದು. ಸಂಗಾತಿಯಿಂದ ಅನಿರೀಕ್ಷಿತ ಮಾತುಗಳನ್ನು ಕೇಳಿ ಆಶ್ಚರ್ಯಪಡುವಿರಿ. ಮಕ್ಕಳಿಗೆ ನಿಮ್ಮ ಬಗ್ಗೆ ಹೆಮ್ಮೆಯಾಗಲಿದೆ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ.

ವೃಷಭ ರಾಶಿ:

ಪರಿಚಿತರಿಂದ ಶತ್ರು ಬಾಧೆಯನ್ನು ತಪ್ಪಿಸಿಕೊಳ್ಳುವಿರಿ. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ. ಕೆಲವೊಂದು ಕೆಲಸ ಕಾರ್ಯಗಳಲ್ಲಿ ನೀವು ಆತ್ಮವಿಶ್ವಾಸದ ಕೊರತೆಯನ್ನು ಅನುಭವಿಸಬಹುದು. ಆದರೆ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳನ್ನು ದೂರವಿಡಬೇಕು. ಯಾರನ್ನಾದರೂ ಮಾದರಿ ವ್ಯಕ್ತಿಯನ್ನಾಗಿ ಮಾಡಿಕೊಳ್ಳುವಿರಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತದೆ ಎಂದು ನಂಬುವಿರಿ.

ಮಿಥುನ ರಾಶಿ:

ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳು ಉಪಯುಕ್ತ ಮಾಹಿತಿಯನ್ನು ಕೊಟ್ಟಾರು.‌ ಮನಸ್ಸಿನಲ್ಲಿ ಬೇಸರ ಇರುತ್ತದೆ. ಆತ್ಮವಿಶ್ವಾಸದ ಕೊರತೆ ಇರುತ್ತದೆ. ಶೈಕ್ಷಣಿಕ ಕೆಲಸದಲ್ಲಿ ಯಶಸ್ವಿಯಾಗುವಿರಿ. ಬುದ್ಧಿವಂತಿಕೆಗೆ ಸಂಬಂಧಿಸಿದ ಕಾರ್ಯಗಳಿಂದ ಆದಾಯ ಹೆಚ್ಚಾಗುತ್ತದೆ. ಹಣವನ್ನು ನೀವೇ ಕೇಳಿ ಒಡೆಯುವುದು ಉತ್ತಮ. ಮನೆಯ ವಿಚಾರವನ್ನು ಯಾರ ಬಳಿಯೂ ಹಂಚಿಕೊಳ್ಳುವುದು ಬೇಡ. ಇಂದು ನಿಮಗೆ ಅದೃಷ್ಟವಿರುವ ಕಾರಣ ಉತ್ತಮ ಫಲವನ್ನು ಪಡೆಯುವಿರಿ.

ಕರ್ಕಾಟಕ ರಾಶಿ:

ಕೈ ತಪ್ಪಿ ಹೋಗುವ ಕೆಲಸವನ್ನು ಹೇಗಾದರೂ ಉಳಿಸಿಕೊಳ್ಳುವಿರಿ. ಕಲೆಯ ಕಡೆಗೆ ಒಲವು ಹೆಚ್ಚಾಗಬಹುದು. ನಿಮ್ಮನ್ನು ಎಲ್ಲ ರೀತಿಯಿಂದ ಬಂಧನ ಮಾಡುವ ಪ್ರಯತ್ನ ಇರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚಿನ ಜಂಜಾಟವಿರುತ್ತದೆ. ಕುಟುಂಬವು ನಿಮ್ಮ ಬೆಂಬಲಕ್ಕೆ ಇರಲಿದೆ. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು. ಅಶಿಸ್ತು ನಿಮಗೆ ಸಿಟ್ಟನ್ನು ತರಬಹುದು.

ಸಿಂಹ ರಾಶಿ:

ಹಿತಶತ್ರುಗಳಿಂದ ನೀವು ಹತಾಶರಾದಂತೆ ತೋರುವುದು. ನಿಮ್ಮ ಎಚ್ಚರಿಕೆಯಲ್ಲಿ ನೀವಿರಬೇಕು. ನಿಮ್ಮನ್ನು ಗೆಲ್ಲಲು ಸಹೋದ್ಯೋಗಿಗಳು ಪ್ರಯತ್ನಿಸುವರು. ನೀವು ಇಷ್ಟ ಪಟ್ಟಿದ್ದು ಆಗಿಲ್ಲವೆಂಬ ಆಲೋಚನೆ ಬಲವಾಗಿರುವುದು. ಅನಿರೀಕ್ಷಿತ ಹಣದ ವ್ಯಯದಿಂದ ಸ್ವಲ್ಪ ಚಂಚಲರಾಗುವಿರಿ. ಮೊದಲ ವೇತನವನ್ನು ಪಡೆದು ಖುಷಿ ಪಡುವಿರಿ. ಖರ್ಚನ್ನು ನೀವು ಸ್ನೇಹಿತರ ಜೊತೆ ಸಮವಾಗಿ ಹಂಚಿಕೊಳ್ಳುವಿರಿ. ಯಾರ‌ನ್ನೂ ಮಾನಸಿಕವಾಗಿ ಹಿಂಸಿಸುವುದು ಬೇಡ.

ಕನ್ಯಾ ರಾಶಿ:

ಮತಿಯ ಕುರುಡು ತನದಿಂದ ಎಲ್ಲಿಯೋ ಹೂಡಿಕೆ ಮಾಡುವರಿ. ಮತ್ತೊಬ್ಬರೊಂದಿಗೆ ಮಾತನಾಡುವಾಗ ಮಾತುಗಳ ಮೇಲೆ ಎಚ್ಚರ ಇರಲಿ. ಪ್ರಯಾಣದಲ್ಲಿ ವಿಘ್ನ ಬಂದರೂ ಕೊನೆಗೆ ಅಂತ್ಯ ಕಾಣುವಿರಿ.‌ ವೆಚ್ಚಗಳು ಹೆಚ್ಚಾಗಬಹುದು, ಆದ್ದರಿಂದ ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನ ಮಾಡಿಕೊಳ್ಳಬೇಕು. ವಿದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಮನೆಯ ನೆನಪಾಗಬಹುದು. ಪಿತ್ತ ಮತ್ತು ಕಫಗಳ ಸಂಬಂಧದಿಂದ ರೋಗಗಳು ಬರಬಹುದು.

ತುಲಾ ರಾಶಿ:

ಯಾವುದಾನ್ನಾದರೂ ಬರವಣಿಗೆಯ ಮೂಲಕವೇ ವ್ಯವಹರಿಸಿ. ಆಲಂಕಾರಿಕ ವಸ್ತುಗಳನ್ನು ಹೆಚ್ಚು ಖರೀದಿಸುವಿರಿ. ಬಟ್ಟೆ ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ವ್ಯಾಪಾರಕ್ಕಾಗಿ ನೀವು ನಿಮ್ಮ ತಂದೆಯಿಂದ ಹಣವನ್ನು ಪಡೆಯಬಹುದು. ಆದಾಯದ ಮೂಲ ಹೆಚ್ಚಾಗಲಿದೆ. ಹಣ ಸಂಪಾದನೆಗೆ ಉತ್ತಮವಾದ ಮಾರ್ಗವು ನಿಮಗೆ ಗೊತ್ತಾಗಲಿದೆ. ದೇವಾಲಯದಿಂದ ನಿಮಗೆ ಸಕಾರಾತ್ಮಕ ಅಂಶಗಳನ್ನು ಪಡೆದುಕೊಳ್ಳಿ. ಸಹೋದರನಿಂದ ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿ:

ಹೂಡಿಕೆಯ ಮೇಲೆ ನಿಮಗೆ ಪೂರ್ಣ ವಿಶ್ವಾಸ ಬರಬಹುದು. ಹೊಸ ವಿಚಾರಗಳನ್ನು ತಿಳಿದುಕೊಳ್ಳುವ ಹಂಬಲವಿರಲಿದೆ‌. ವೃತ್ತಿಪರವಾಗಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಸಂಗಾತಿಯೊಂದಿಗಿನ ಸಂಬಂಧವು ಸುಧಾರಿಸುತ್ತದೆ. ಹಿರಿಯರಿಂದ ಆಶೀರ್ವಾದ ಪಡೆಯುವಿರಿ. ನಿಮ್ಮ ಯಶಸ್ಸಿನ ಗುಟ್ಟನ್ನು ಬಿಟ್ಟುಕೊಡಬೇಡಿ. ನಿಮ್ಮನ್ನು ನೋಡುವ ದೃಷ್ಟಿಯೇ ಬದಲಾದೀತು. ನೀವೇ ನಿಮ್ಮ ಶತ್ರುಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ನಿಮ್ಮವರನ್ನು ಸಂತೋಷಗೊಳಿಸುವಿರಿ. ಇಂದು ನಿಮಗೆ ಕಷ್ಟವಾದರೂ ತಾಳ್ಮೆಯಿಂದ ವ್ಯವಹರಿಸಿ.

ಇದನ್ನೂ ಓದಿ: ವಾರ ಭವಿಷ್ಯ: ಗ್ರಹಗಳ ಉಚ್ಚಸ್ಥಾನ ಸಂಚಾರದಿಂದ ಈ 4 ರಾಶಿಯವರಿಗೆ ಭರ್ಜರಿ ರಾಜಯೋಗ; ನಿಮಗಿದೆಯೇ ಧನಲಾಭದ ಲಕ್?

ಧನು ರಾಶಿ:

ಮನೆಯ ಕಾರಣಕ್ಕೆ ಉದ್ಯೋಗದ ಕಿರಿಕಿರಿಯು ನಿಮ್ಮನ್ನು ಬಾಧಿಸದೇ ಇರದು. ನಿಮಗಿಂದು ಅದೃಷ್ಟದ ದಿನವೆಂದೇ ಹೇಳಬಹುದು. ಕೆಲಸದ ರೀತಿ ನೀತಿ ಬದಲಾವಣೆಯಾಗಬಹುದು. ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಮಂಗಲಕರವಾದ ವಸದತುವಬ್ನು ಸೇವಿಸಿ. ಇಂದು ಸ್ತ್ರೀಯರ ತಾಳ್ಮೆಗೆ ಪರೀಕ್ಷೆಯಾಗಬಹುದು. ಸಾಮಾಜಿಕ ವಲಯದಲ್ಲಿ ಯಶಸ್ವಿಯಾಗಿ ಮುನ್ನಡೆಯುವಿರಿ. ನ್ಯಾಯಾಲಯದಲ್ಲಿ ನಿಮ್ಮ ವಾದಕ್ಕೆ ಸೋಲಾಗಬಹುದು.

ಮಕರ ರಾಶಿ:

ವಿವಾಹ ಯೋಗವು ಕೂಡಿಬರಲಿದ್ದು, ಅಲ್ಲಗಳೆಯುವುದು ಬೇಡ. ದುಃಸ್ವಪ್ನದಿಂದ ಮಾನಸಿಕವಾಗಿ ಕುಗ್ಗುವಿರಿ. ನಿಮ್ಮ ಹಾಗೂ ಪ್ರೇಮಿಯ ಮನಃಸ್ಥಿತಿಯಲ್ಲಿ ಏರಿಳಿತಗಳು ಇರಬಹುದು. ಪೂರ್ಣ ವಿಶ್ವಾಸ ಇರುತ್ತದೆ. ಕುಟುಂಬದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಾಲವನ್ನು ಮಾಡಿ ವಾಹನವನ್ನು, ಖರೀದಿಸುದು ಬೇಡ. ಸಮಯಸ್ಫೂರ್ತಿಯಿಂದ ನೀವು ನಿಮ್ಮವರನ್ನು ಸಂತೋಷವಾಗಿರಿಸುವಿರಿ. ಇಂದು ನಿಮ್ಮ ಸಹೋದರರು ಆರ್ಥಿಕ ಸಹಾಯವನ್ನು ಕೇಳಬಹುದು.

ಕುಂಭ ರಾಶಿ:

ಇಂದಿನ ಹಣಕಾಸಿನ‌ ಬಿಕ್ಕಟ್ಟು ಮನಸ್ಸಿನ ವೇಗವನ್ನು ಹೆಚ್ಚಿಸುವುದು. ಸಣ್ಣ ವಿಚಾರಗಳೂ ನಿಮಗೆ ಸಮಸ್ಯೆಯಂತೆ ತೋರುವುದು. ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಗಮವಾಗಿರುತ್ತದೆ, ಆದಾಯ ಹೆಚ್ಚಲಿದೆ. ಶುಭ ಕಾರ್ಯಕ್ಕೆ ಎಲ್ಲರನ್ನು ಒಟ್ಟುಗೂಡಿಸುವಿರಿ. ನೂತನ ವಾಹನ ಖರೀದಿಯನ್ನು ಮಾಡುವಿರಿ. ಇಂದಿನ ನಿಮ್ಮ ಪ್ರಯಾಣವು ಬಹಳ ಖರ್ಚಿನದ್ದಾಗಲಿದೆ. ಹೂಡಿಕೆಯನ್ನು ಮಾಡುವಾಗ ಮಾನಸಿಕ ನಿಯಂತ್ರಣವನ್ನು ಇಟ್ಟುಕೊಳ್ಳಿ.

ಮೀನ ರಾಶಿ:

ಹಿತೈಷಿಗಳ ಬೆಂಬಲವೂ ನಿಮಗೆ ಅತ್ಯವಶ್ಯವಾಗಿ ಬೇಕು. ರಾಜಕೀಯದಲ್ಲಿ ಅನಿರೀಕ್ಷಿತ ಬದಲಾವಣೆಯನ್ನು ನೀವು ಒಪ್ಪಿಕೊಳ್ಳಬೇಕಾಗುವುದು. ಅಜ್ಞಾತವಾಗಿರುವುದರಲ್ಲಿ ಖುಷಿ ಇದೆ. ನೀವು ಕೆಲಸದಲ್ಲಿ ನಿರತರಾಗಿರಬಹುದು. ಸ್ನೇಹಿತರೊಂದಿಗೆ ಸುತ್ತಾಡಲು ಎಲ್ಲೋ ಹೋಗಬಹುದು. ಬೆನ್ನು ನೋವಿನ ಸಮಸ್ಯೆಯು ಕಾಣಿಸಿಕೊಳ್ಬಹುದು. ನೀವಿಂದು ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದೀರಿ. ನಿಮ್ಮ ಮಾತಿಗೆ ಮನ್ನಣೆ ಸಿಗಲಿಲಿದೆ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ದಶಮೀ, ನಿತ್ಯನಕ್ಷತ್ರ : ರೇವತೀ, ಯೋಗ : ಪ್ರೀತಿ, ಕರಣ : ಭದ್ರ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 51 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:24 – 14:01, ಯಮಗಂಡ ಕಾಲ 07:33 – 09:10, ಗುಳಿಕ ಕಾಲ 10:47 – 12:24

– ಲೋಹಿತ್ ಹೆಬ್ಬಾರ್ -8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾರ್ಮುಜ್ ಜಲಸಂಧಿ ಮೇಲೆ ಅಮೆರಿಕದ ಹೆಲಿಕಾಪ್ಟರ್‌ ಪತನ; ಇರಾನ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇವೆಂದ ಟ್ರಂಪ್ – Kannada News

ವಾಷಿಂಗ್ಟನ್, ಜೂನ್ 9: ಪಶ್ಚಿಮ ಏಷ್ಯಾ ಸಂಘರ್ಷವನ್ನು ಕೊನೆಗೊಳಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸುತ್ತಿದೆ. ಕದನವಿರಾಮ ಘೋಷಣೆಗೆ ಟ್ರಂಪ್ (Donald Trump) ಕರೆ ನೀಡುತ್ತಲೇ ಇದ್ದಾರೆ. ಈ ನಡುವೆ ಅತ್ಯಂತ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ಸೇನೆಗೆ ಸೇರಿದ ಅತ್ಯಾಧುನಿಕ ಅಪಾಚೆ (AH-64 Apache) ಯುದ್ಧ ಹೆಲಿಕಾಪ್ಟರ್ ಪತನಗೊಂಡಿದೆ. ಈ ಹೆಲಿಕಾಪ್ಟರ್ ಅನ್ನು ಇರಾನ್ ಪಡೆಗಳೇ ಹೊಡೆದುರುಳಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇರವಾಗಿ ಆರೋಪಿಸಿದ್ದು, ಈ ದಾಳಿಗೆ ತಕ್ಕ ಪ್ರತೀಕಾರ ತೀರಿಸಿಕೊಳ್ಳಲು ಅಮೆರಿಕದ ಸಶಸ್ತ್ರ ಪಡೆಗಳಿಗೆ ಆದೇಶಿಸಿದ್ದಾರೆ.

“ನಿನ್ನೆ ರಾತ್ರಿ ಹಾರ್ಮುಜ್ ಜಲಸಂಧಿಯ ಮೇಲೆ ಗಸ್ತು ತಿರುಗುತ್ತಿದ್ದಾಗ ಇರಾನಿಯನ್ನರು ನಮ್ಮ ಅತ್ಯಾಧುನಿಕ ಅಪಾಚೆ ಹೆಲಿಕಾಪ್ಟರ್‌ಗಳಲ್ಲಿ ಒಂದನ್ನು ಹೊಡೆದುರುಳಿಸಿದ್ದಾರೆ ಎಂದು ನಮ್ಮ ಗ್ರೇಟ್ ಮಿಲಿಟರಿಯಿಂದ ನನಗೆ ತಿಳಿಸಲಾಗಿದೆ. ಇಬ್ಬರು ಪೈಲಟ್‌ಗಳು ಕೂಡ ಸುರಕ್ಷಿತರಾಗಿದ್ದಾರೆ. ಅವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಅಮೆರಿಕ ಈ ದಾಳಿಗೆ ಖಂಡಿತ ಪ್ರತೀಕಾರ ತೀರಿಸಿಕೊಳ್ಳಲುತ್ತದೆ” ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಇರಾನ್​ನಲ್ಲಿನ ಭಾರತೀಯರು ತಕ್ಷಣ ದೇಶ ಬಿಟ್ಟು ಹೊರಡಿ; ಭಾರತ ಆದೇಶ

ಇತಿಹಾಸದಲ್ಲೇ ಮೊದಲ ಬಾರಿಗೆ ‘ಸೀ ಡ್ರೋನ್’ ಮೂಲಕ ಪೈಲಟ್‌ಗಳ ರಕ್ಷಣೆ ಮಾಡಲಾಗಿದೆ ಎಂದು ಅಮೆರಿಕದ ಮಿಲಿಟರಿ ಸೆಂಟ್ರಲ್ ಕಮಾಂಡ್ (CENTCOM) ಮಾಹಿತಿಯನ್ನು ನೀಡಿದೆ. ಹೆಲಿಕಾಪ್ಟರ್ ಪತನಗೊಂಡ ಕೇವಲ 2 ಗಂಟೆಗಳ ಒಳಗೆ ಇಬ್ಬರೂ ಪೈಲಟ್‌ಗಳನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಬಹ್ರೇನ್‌ನಲ್ಲಿರುವ ಯುಎಸ್ ಫಿಫ್ತ್ ಫ್ಲೀಟ್‌ನ ‘ಟಾಸ್ಕ್ ಫೋರ್ಸ್ 59’ ವಿಭಾಗಕ್ಕೆ ಸೇರಿದ ಮಾನವರಹಿತ ಸ್ವಯಂಚಾಲಿತ ಸಮುದ್ರ ಡ್ರೋನ್ ಒಂದನ್ನು ಬಳಸಿ ಪೈಲಟ್‌ಗಳನ್ನು ನೀರಿನಿಂದ ರಕ್ಷಿಸಲಾಗಿದೆ.

ಅಮೆರಿಕದ ಮಿಲಿಟರಿ ಇತಿಹಾಸದಲ್ಲೇ ಸಮುದ್ರದಲ್ಲಿ ನಡೆದ ಅಪಘಾತವೊಂದರಲ್ಲಿ ಪೈಲಟ್‌ಗಳನ್ನು ರಕ್ಷಿಸಲು ಇಂತಹ ಸೀ ಡ್ರೋನ್ ಬಳಸಿರುವುದು ಇದೇ ಮೊದಲು ಎನ್ನಲಾಗಿದೆ. ಸದ್ಯ ಇಬ್ಬರೂ ಸೈನಿಕರು ಆರೋಗ್ಯವಾಗಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವೆ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಕೇವಲ ಒಂದು ದಿನದ ಹಿಂದೆಯಷ್ಟೇ ಅತ್ಯಂತ ಸೂಕ್ಷ್ಮವಾದ ಕದನ ವಿರಾಮವನ್ನು ಜಾರಿಗೆ ತರಲಾಗಿತ್ತು. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಏರ್ಪಡುವ ಅಂತಿಮ ಹಂತದಲ್ಲಿ ಈ ಘಟನೆ ನಡೆದಿರುವುದು ಜಾಗತಿಕ ವಲಯದಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ; ಟ್ರಂಪ್ ಘೋಷಣೆ

ಒಂದೆಡೆ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ರಾಜತಾಂತ್ರಿಕ ಒಪ್ಪಂದಕ್ಕೆ ಒತ್ತು ನೀಡುತ್ತಿದ್ದರೆ, ಮತ್ತೊಂದೆಡೆ ಅಮೆರಿಕದ ಹೆಲಿಕಾಪ್ಟರ್ ಮೇಲಿನ ದಾಳಿಯು ಈ ಶಾಂತಿ ಮಾತುಕತೆಗಳು ಸಂಪೂರ್ಣವಾಗಿ ಮುರಿದುಬೀಳುವಂತೆ ಮಾಡುವ ಸಾಧ್ಯತೆ ಇದೆ. ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಪತನಗೊಂಡಿದೆಯೇ ಅಥವಾ ನಿಜವಾಗಿಯೂ ಇರಾನ್ ಕ್ಷಿಪಣಿ ದಾಳಿ ನಡೆಸಿದೆಯೇ ಎಂಬುದರ ಕುರಿತು ಅಮೆರಿಕ ರಕ್ಷಣಾ ಇಲಾಖೆ ತನಿಖೆ ನಡೆಸುತ್ತಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಇಡೀ ಊರೇ ಮುಳುಗಿದ್ರೂ ಬಾರದ ಜನಪ್ರತಿನಿಧಿ: ‘ನಮ್ಮ ಶಾಸಕರು ನಾಪತ್ತೆಯಾಗಿದ್ದಾರೆ ಹುಡುಕಿಕೊಡಿ’ ಎಂದು ಜನಾಕ್ರೋಶ!

ಬೆಳಗಾವಿ, ಜೂ.9: ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಸುರಿದ ಭಾರಿ ಮಳೆಯು ಹತ್ತಾರು ಕೋಟಿ ರೂಪಾಯಿಗಳಷ್ಟು ನಷ್ಟವನ್ನುಂಟು ಮಾಡಿದೆ. ವ್ಯಾಪಾರಸ್ಥರು ಮತ್ತು ಸ್ಥಳೀಯ ನಿವಾಸಿಗಳು ತೀವ್ರ ತೊಂದರೆಗೊಳಗಾಗಿದ್ದಾರೆ. ಮಳೆಯಿಂದಾಗಿ ಸುಮಾರು ಹತ್ತರಿಂದ ಹದಿನೈದು ಕೋಟಿಗೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಹಲವಾರು ಅಂಗಡಿಗಳು, ಗೋದಾಮುಗಳು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ. ಮೊಬೈಲ್ ಅಂಗಡಿಗಳು, ಹಣ್ಣಿನ ಅಂಗಡಿಗಳು, ಚಪ್ಪಲಿ ಅಂಗಡಿಗಳು ಮತ್ತು ಬಟ್ಟೆ ಗೋದಾಮುಗಳಿಗೆ ಹಾನಿಯಾಗಿದೆ. ಕೆಲವು ಮನೆಗಳು ಕುಸಿದು, ವಾಹನಗಳು ನೀರಿನಲ್ಲಿ ಸಿಲುಕಿವೆ. ಇಂತಹ ಭೀಕರ ಪರಿಸ್ಥಿತಿಯಲ್ಲೂ ಸ್ಥಳೀಯ ಶಾಸಕರು ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ, ಅವರನ್ನು ಹುಡುಕಿಕೊಡುವಂತೆ ಜನರು ಆಗ್ರಹಿಸಿದ್ದಾರೆ. ನಗರಸಭೆಯ ಅಧಿಕಾರಿಗಳು ಸರಿಯಾಗಿ ಚರಂಡಿ ವ್ಯವಸ್ಥೆ ಮಾಡದಿರುವುದು ಮತ್ತು ಅದರಲ್ಲಿ ಸಿಲುಕಿರುವ ಕಸವನ್ನು ತೆಗೆಯದೇ ನಿರ್ಲಕ್ಷ್ಯ ತೋರಿರುವುದು ಈ ದೊಡ್ಡ ಪ್ರಮಾಣದ ಹಾನಿಗೆ ಕಾರಣ ಎಂದು ವ್ಯಾಪಾರಸ್ಥರು ದೂಷಿಸಿದ್ದಾರೆ. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಹಾಗೂ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version