Headlines

ಆಶಾ ಭೋಸ್ಲೆ ಬಗ್ಗೆ ಹಲವರಿಗೆ ತಿಳಿಯದ ವಿಷಯಗಳು ಇಲ್ಲಿವೆ…

ಭಾರತ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle) ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. ಆಶಾ ಭೋಸ್ಲೆ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಿಂದಿ, ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಆಶಾ ಭೋಸ್ಲೆ ಹಾಡಿದ್ದರು. ಸುಮಾರು 80ಕ್ಕೂ ಹೆಚ್ಚು ವರ್ಷ ಅವರು ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಇದೀಗ ಆಶಾ ಭೋಸ್ಲೆ ನಿಧನ ಹೊಂದಿದ್ದು, ಅವರ ಬಗ್ಗೆ ಹೆಚ್ಚು ಮಂದಿಗೆ ತಿಳಿಯದ ಕೆಲ ಅಪರೂಪದ…

Read More

ಒಂಟಿ ಕಾಲಿನ ಖದೀಮ, ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ದ ಕಿರಾತಕ: ನಟೋರಿಯಸ್ ಕಳ್ಳರ ಫ್ಲ್ಯಾಶ್​ ಬ್ಯಾಕೇ ಭಯಾನಕ

ಆನೇಕಲ್​​, ಏಪ್ರಿಲ್​ 12: ಒಬ್ಬ ಒಂಟಿ ಕಾಲಿನಲ್ಲಿ ರಾಬರಿ ಮಾಡುವ ಖದೀಮ, ಮತ್ತೊಬ್ಬ ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ದ ಕಿರಾತಕ. ಈ ಇಬ್ಬರು ಸೇರಿಕೊಂಡು ಸಿಕ್ಕ ಸಿಕ್ಕ ಕಡೆಗಳಲ್ಲಿ ದರೋಡೆ ಮಾಡುತ್ತಿದ್ದರು. ಆದರೆ ಇದೀಗ ಬೆಂಗಳೂರು ಹೊರವಲಯ ಆನೇಕಲ್ ಉಪವಿಭಾಗದ ಜಿಗಣಿ ಪೊಲೀಸರು ನಟೋರಿಯಸ್ ದರೋಡೆಕೋರರನ್ನು (robbers) ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ. ಕೃಷ್ಣನಾಯಕ್​​ ಅಲಿಯಾಸ್​​ ಕುಂಟ ಕೃಷ್ಣ. ಇತನಿಗೆ ಹಾವಳಿ ಕೃಷ್ಣ ಅಂತ ಕೂಡ ಕರೆಯುತ್ತಾರೆ. ಇನ್ನೊಬ್ಬ ನವೀನ್​ ಅಲಿಯಾಸ್​​ ಕಾಳಪ್ಪ. ರಾಬರಿ ಕಾಳ ಅಂತ ಇನ್ನೊಂದು…

Read More

ಕಾಂಗ್ರೆಸ್ ಯುವ ಮುಖಂಡನ ಹತ್ಯೆ: 24 ಗಂಟೆಯೊಳಗೇ ಹಂತಕರು ಅರೆಸ್ಟ್, ಕೊಲೆ ರಹಸ್ಯ ಬಯಲು

ಧಾರವಾಡ, (ಏಪ್ರಿಲ್ 12): ಮೊನ್ನೆ ಅಷ್ಟೇ ಧಾರವಾಡದ (Dharwad) ಮಾಳಾಪುರ ಬಡಾವಣೆಯ ಹಾಶ್ಮಿ ನಗರದಲ್ಲಿ ನಡೆದಿದ್ದ ಕಾಂಗ್ರೆಸ್ (Congress) ಯುವ ಮುಖಂಡ ಫೈರೋಜ್ ಪಠಾಣ್ (Fairoz Pathan Murder Case)  ಹಂತಕರನ್ನು ಪತ್ತೆ ಹಚ್ಚುವಲ್ಲಿ ಉಪ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ನಡೆದು 24 ಗಂಟೆಯೊಳಗೇ ಹಂತಕರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. 9 ಆರೋಪಿಗಳ ಪೈಕಿ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹಿಂದಿನ ಕೆಲ ವೈಷಮ್ಯಗಳು ಹಾಗೂ ರಿಯಲ್ ಎಸ್ಟೇಟ್…

Read More

ವಾಲಂಟರಿ ಪ್ರಾವಿಡೆಂಟ್ ಫಂಡ್; ನಿಮ್ಮ ಇಪಿಎಫ್ ಕಾರ್ಪಸ್ ಹೆಚ್ಚಿಸುವ ಒಂದು ಪ್ಲಾನ್

ಉದ್ಯೋಗಿಗಳ ನಿವೃತ್ತಿಗೆಂದು ರೂಪಿಸಲಾಗಿರುವ ಸ್ಕೀಮ್ ಇಪಿಎಫ್ (EPF) ಬಹಳ ಉತ್ತಮ ಬಡ್ಡಿ ಕೊಡಲಾಗುವ ಸ್ಕೀಮ್. ಫಿಕ್ಸೆಡ್ ಡೆಪಾಸಿಟ್​ಗಳಿಗಿಂತಲೂ ಹೆಚ್ಚಿನ ಬಡ್ಡಿ ಸಿಗುತ್ತದೆ. ಸದ್ಯ ಸರ್ಕಾರ ಪಿಎಫ್ ಅಕೌಂಟ್​ನಲ್ಲಿರುವ ಹಣಕ್ಕೆ ವಾರ್ಷಿಕ ಶೇ. 8.2 ರಂತೆ ಬಡ್ಡಿ ತುಂಬುತ್ತದೆ. ನಿವೃತ್ತಿ ವಯಸ್ಸೆಂದು ಪರಿಗಣಿಸಲಾಗಿರುವ 58 ವರ್ಷ ವಯಸ್ಸು ಮುಟ್ಟಿದ ಬಳಿಕ ಇಪಿಎಫ್ ಹಣ ಲಂಪ್ಸಮ್ ಆಗಿ ದೊರಕುತ್ತದೆ. ಉದ್ಯೋಗಿಯ ಮೂಲ ವೇತನ ಮತ್ತು ಭತ್ಯೆಯನ್ನು ಇಪಿಎಫ್ ಸ್ಯಾಲರಿ ಎಂದು ಪರಿಗಣಿಸಬಹುದು. ಇದರ ಶೇ. 12ರಷ್ಟನ್ನು ಸಂಬಳದಲ್ಲೇ ಮುರಿದುಕೊಳ್ಳಲಾಗುತ್ತದೆ. ಕಂಪನಿ…

Read More

LSG vs GT IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Lucknow Super Giants vs Gujarat Titans IPL 2026 Live Cricket Score LSG vs GT Match on 12th April latest news in Kannada

12 Apr 2026 03:16 PM (IST) LSG vs GT IPL 2026: ಗುಜರಾತ್ ತಂಡ ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಅಶೋಕ್ ಶರ್ಮಾ, ಪ್ರಸಿದ್ಧ್ ಕೃಷ್ಣ 12 Apr 2026 03:16 PM (IST) LSG vs GT IPL 2026: ಲಕ್ನೋ ತಂಡ ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ರಿಷಭ್ ಪಂತ್…

Read More

ಬುಡಕಟ್ಟು ವಿರೋಧಿ, ಮಹಿಳಾ ವಿರೋಧಿ, ಯುವ ವಿರೋಧಿ ಪಕ್ಷ: ಟಿಎಂಸಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಕೋಲ್ಕತ್ತಾ, ಏಪ್ರಿಲ್ 12: ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವನ್ನು ಬುಡಕಟ್ಟು ವಿರೋಧಿ, ಮಹಿಳಾ ವಿರೋಧಿ, ಯುವ ವಿರೋಧಿ ಪಕ್ಷ ಎಂದು ಕರೆದಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ ಭಾಗದ ಸಿಲಿಗುರಿಯ ಕವಾಖಾಲಿ ಮೈದಾನದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಟಿಎಂಸಿ ತನ್ನ 15 ವರ್ಷಗಳ ಅವಧಿಯಲ್ಲಿ ಪಶ್ಚಿಮ ಬಂಗಾಳವನ್ನು ನಾಶಮಾಡಿದೆ ಎಂದು ಪ್ರತಿಪಾದಿಸಿದರು ಮತ್ತು ಮದರಸಾಗಳಿಗೆ 6,000 ಕೋಟಿ ರೂ.ಗಳನ್ನು ಮಂಜೂರು…

Read More

ಪತ್ನಿಯನ್ನ ನೋಡಿ ಬೊಗಳಿದ್ದಕ್ಕೆ ಸ್ಕೂಬಿ ಮೇಲೆ ಕ್ರೌರ್ಯ ಮೆರೆದ ಪತಿ: ಪೊಲೀಸ್ ಮೆಟ್ಟಿಲೇರಿದ ನಾಯಿ ಗಲಾಟೆ

ಬೆಂಗಳೂರು, (ಏಪ್ರಿಲ್ 12): ಪಕ್ಕದ ಮನೆಯ ಸಾಕು ನಾಯಿ ಸ್ಕೂಬಿ ತನ್ನ ಹೆಂಡ್ತಿಯನ್ನು ನೋಡಿ ಬೊಗಳಿದಕ್ಕೆ ಆಕ್ರೋಶಗೊಂಡ ಪತಿ ಕ್ರೌರ್ಯ ಮೆರೆದಿದ್ದಾನೆ. ತನ್ನ ಪತ್ನಿಯನ್ನು ನೋಡಿ ಬೊಗಳಿದ್ದಕ್ಕೆ ವ್ಯಕ್ತಿಯೋರ್ವ ಪಕ್ಕದ ಮನೆಯ ಸ್ಕೂಬಿ ನಾಯಿಗೆ ಕಟ್ಟಿಗೆಯಿಂದ ಹೊಡೆದು ಸಾಯಿಸಲು ಯತ್ನಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅವರೆಹಳ್ಳಿಯಲ್ಲಿ ನಡೆದಿದೆ. ಆಂಜಿನಪ್ಪ‌ ಎಂಬುವವರಿಗೆ ಸೇರಿದ ಸಾಕು ನಾಯಿ ಸ್ಕೂಬಿ, ನಿನ್ನೆ (ಏಪ್ರಿಲ್ 11) ಸಂಜೆ ಪಕ್ಕದ ಮನೆಯ ಮಹಿಳೆಯನ್ನು ನೋಡಿ ಬೊಗಳಿದೆ. ಇದರಿಂದ ಕೋಪಗೊಂಡಿದ್ದ ಪತಿ ಗೋಪಿ, ರಾತ್ರಿ…

Read More

Personality Test: ಮುಂಗೋಪಿ, ಹಠಮಾರಿ; ಜನ್ಮ ದಿನಾಂಕವೇ ಹೇಳುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ

ಸಾಮಾನ್ಯವಾಗಿ ನಮ್ಮ ಭವಿಷ್ಯದ   ತಿಳಿದುಕೊಳ್ಳಲು, ವ್ಯಕ್ತಿತ್ವದ ರಹಸ್ಯದ (secret personality)  ಬಗ್ಗೆ ತಿಳಿದುಕೊಳ್ಳಲು ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಗಿಣಿ ಶಾಸ್ತ್ರ ಇತ್ಯಾದಿಗಳನ್ನು ಅವಲಂಬಿಸುತ್ತಾರೆ. ಇದಲ್ಲದೆ ಆಪ್ಟಿಕಲ್‌ ಇಲ್ಯೂಷನ್‌  ಪರ್ಸನಾಲಿಟಿ ಟೆಸ್ಟ್‌, ಪಾದದ ಆಕಾರ, ಕೈ ಬೆರಳುಗಳ ಆಕಾರ, ನೆಚ್ಚಿನ ಬಣ್ಣ, ನೆಚ್ಚಿನ ಪ್ರಾಣಿ ಇತ್ಯಾದಿಗಳ ಮೂಲಕವು ನಮ್ಮ ನಿಗೂಢ ವ್ಯಕ್ತಿತ್ವದ ರಹಸ್ಯಗಳನ್ನು ನಾವೇ ತಿಳಿದುಕೊಳ್ಳಬಹುದು. ಇದಲ್ಲದೆ ಹುಟ್ಟಿದ ದಿನಾಂಕ ಕೂಡ ನಮ್ಮ ವ್ಯಕ್ತಿತ್ವದ ರಹಸ್ಯವನ್ನು ಬಹಿರಂಗಪಡಿಸುತ್ತದೆ.  ನೀವು ಹೃದಯವಂತರೇ, ಕೋಪಿಷ್ಠರೇ ಎಂಬುದನ್ನು ನಿಮ್ಮ ಜನ್ಮ ದಿನಾಂಕದ ಆಧಾರದ ಮೇಲೆ…

Read More

ನಾಲ್ಕು ಕ್ರೂರ ಗ್ರಹರು ಒಂದೇ ರಾಶಿಯಲ್ಲಿ!! ಯಾರಿಗೆಲ್ಲ ಇದರಿಂದ ಅಪಾಯ…

ಮೀನ ರಾಶಿಯಲ್ಲಿ ಶನಿ, ಕುಜ, ರವಿ ಮತ್ತು ಬುಧ – ಈ ನಾಲ್ಕು ಪ್ರಬಲ ಗ್ರಹಗಳ ಯುತಿ ನಡೆಯುತ್ತಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ವಿದ್ಯಮಾನವಾಗಿದೆ. ಈ ಚತುರ್ಗ್ರಹಿ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪರಿಣಾಮಗಳನ್ನು ಬೀರುತ್ತದೆ. ಈ ಸಂಯೋಗವು ಏಪ್ರಿಲ್ 11ರಿಂದ ಆರಂಭವಾಗಿ ಏಪ್ರಿಲ್15ರವರೆಗೆ ಇರಲಿದೆ. ಅಲ್ಪಾವಧಿಯಾದರೂ ಗ್ರಹಗಳು ತಮ್ಮ ಕಾರ್ಯವನ್ನು ಮಾಡಿ ಮುಂದಡಿಯಿಡುತ್ತವೆ. ​ಶುಭ ಫಲದ ರಾಶಿಗಳು: ​ವೃಷಭ ರಾಶಿ: ನಿಮಗೆ ಈ ಸಂಯೋಗವು ಲಾಭ ಸ್ಥಾನದಲ್ಲಿ ನಡೆಯುವುದರಿಂದ ಆರ್ಥಿಕವಾಗಿ ಉತ್ತಮ…

Read More

ವಾಹನ ಸವಾರರಿಗೆ ಗಮನಕ್ಕೆ: ಸದ್ಯಕ್ಕೆ ಬೆಂಗಳೂರಿನ ಪೀಣ್ಯ ಫ್ಲೈಓವರ್ ಬಂದ್ ಇಲ್ಲ

ಬೆಂಗಳೂರು, ಏಪ್ರಿಲ್​ 12: ನಾಳೆಯಿಂದ ಅಂದರೆ ಏಪ್ರಿಲ್​ 13ರಿಂದ 5 ದಿನ ಬಂದ್​ ಆಗಲಿದೆ ಎನ್ನಲಾಗಿದ್ದ ಪೀಣ್ಯ ಫ್ಲೈಓವರ್ (Peenya Elevated Flyover)​​ ಸದ್ಯ ನಾಳೆಯಿಂದ ಎಂದಿನಂತೆ ವಾಹನ ಸಂಚಾರಕ್ಕೆ ತೆರೆಯಲಾಗಿದೆ. ಕಾರಣಾಂತರಗಳಿಂದ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಲೋಡ್ ಟೆಸ್ಟಿಂಗ್​​ ಪ್ರಕ್ರಿಯೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದೂಡಿದೆ. ಹೀಗಾಗಿ ನಾಳೆಯಿಂದ ಫ್ಲೈಓವರ್ ಬಂದ್ ಮಾಡುತ್ತಿಲ್ಲ. ವಾಹನ ಸಂಚಾರ ಇರಲಿದೆ ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ…

Read More