Gold Rates: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Gold Rates: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 13: ಚಿನ್ನ, ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿದಿದೆ. ಇಂದು ಸೋಮವಾರ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 35 ರೂ ಕಡಿಮೆಗೊಂಡಿದೆ. ಹೆಚ್ಚಿನ ದೇಶಗಳಲ್ಲಿ ಇದರ ಬೆಲೆ ಸ್ವಲ್ಪವಾಗಿ ಇಳಿಮುಖವಾಗಿದೆ. ಬೆಳ್ಳಿ ಬೆಲೆಯೂ ಇವತ್ತು ಕಡಿಮೆಗೊಂಡಿದೆ. ಗ್ರಾಮ್​ಗೆ 5 ರೂನಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 13ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,246 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,975 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,434 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,246 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,975 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,975 ರೂ
  • ಚೆನ್ನೈ: 14,060 ರೂ
  • ಮುಂಬೈ: 13,975 ರೂ
  • ದೆಹಲಿ: 13,990 ರೂ
  • ಕೋಲ್ಕತಾ: 13,975 ರೂ
  • ಕೇರಳ: 13,975 ರೂ
  • ಅಹ್ಮದಾಬಾದ್: 13,980 ರೂ
  • ಜೈಪುರ್: 13,990 ರೂ
  • ಲಕ್ನೋ: 13,990 ರೂ
  • ಭುವನೇಶ್ವರ್: 13,975 ರೂ

ಇದನ್ನೂ ಓದಿ: ಸಂಧಾನ ಮುರಿದುಬಿದ್ದ ಬೆನ್ನಲ್ಲೇ ರಾಕೆಟ್​ನಂತೆ ಮೇಲೇರಿದ ತೈಲ ಬೆಲೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 576 ರಿಂಗಿಟ್ (13,526 ರುಪಾಯಿ)
  • ದುಬೈ: 529.75 ಡಿರಾಮ್ (13,463 ರುಪಾಯಿ)
  • ಅಮೆರಿಕ: 149.50 ಡಾಲರ್ (13,959 ರುಪಾಯಿ)
  • ಸಿಂಗಾಪುರ: 187.70 ಸಿಂಗಾಪುರ್ ಡಾಲರ್ (13,724 ರುಪಾಯಿ)
  • ಕತಾರ್: 526.50 ಕತಾರಿ ರಿಯಾಲ್ (13,502 ರೂ)
  • ಸೌದಿ ಅರೇಬಿಯಾ: 539 ಸೌದಿ ರಿಯಾಲ್ (13,412 ರುಪಾಯಿ)
  • ಓಮನ್: 56.20 ಒಮಾನಿ ರಿಯಾಲ್ (13,631 ರುಪಾಯಿ)
  • ಕುವೇತ್: 43.61 ಕುವೇತಿ ದಿನಾರ್ (13,284 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 255 ರೂ
  • ಚೆನ್ನೈ: 260 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 255 ರೂ
  • ಜೈಪುರ್: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 260 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಶಿವಣ್ಣ ಬಳಿಕ ‘ಪೆದ್ದಿ’ ಸೆಟ್ ಸೇರಿದ ಮತ್ತೋರ್ವ ಕನ್ನಡದ ಖ್ಯಾತ ಕಲಾವಿದ

ತೆಲುಗಿನ ಸ್ಪೋರ್ಟ್ಸ್ ಡ್ರಾಮಾ ‘ಪೆದ್ದಿ’ ಸಿನಿಮಾದ ಶೂಟ್ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ರಾಮ್ ಚರಣ್ ಹೀರೋ ಆದರೆ, ಕನ್ನಡದ ಶಿವರಾಜ್​​ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಈಗ ಕನ್ನಡದ ಹೀರೋ ಒಬ್ಬರ ಎಂಟ್ರಿ ಆಗಿದೆ. ಅವರು ಬೇರೆ ಯಾರೂ ಅಲ್ಲ, ಸಾಯಿ ಕುಮಾರ್. ತಮ್ಮ ಕಂಚಿನ ಕಂಠದ ಮೂಲಕ ಗಮಮ ಸೆಳೆದ ಅವರು, ಈಗ ‘ಪೆದ್ದಿ’ ಸಿನಿಮಾದ ಭಾಗ ಆಗಿದ್ದಾರೆ.

ಸಾಯಿ ಕುಮಾರ್ ಅವರು ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ನಟಿಸಿದ್ದಾರೆ. ಅವರು ತೆಲುಗು ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಅದರಲ್ಲೂ ತಮ್ಮ ಕಂಠದ ಮೂಲಕ ಅವರು ಹೆಚ್ಚು ಚಿರಪರಿಚಿತರು. ಈಗ ಅವರು ‘ಪೆದ್ದಿ’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ರಾಮ್ ಚರಣ್ ಅವರು ‘ಯೆವಡು’ ಸಿನಿಮಾದಲ್ಲಿ ಸಾಯಿ ಕುಮಾರ್ ನಟಿಸಿದ್ದರು. ಈಗ ದಶಕಗಳ ಬಳಿಕ ಈ ಕಲಾವಿದರು ಒಂದಾಗುತ್ತಿದ್ದಾರೆ.

‘ಪೆದ್ದಿ’ ಸಿನಿಮಾ ಹಳ್ಳಿ ಹಿನ್ನೆಲೆಯಲ್ಲಿ ಸಾಗುತ್ತದೆ. ಇದರಲ್ಲಿ ಕ್ರೀಡೆ ಕೂಡ ಹೈಲೈಟ್ ಆಗುವ ಸಾಧ್ಯತೆ ಇದೆ. ಸದ್ಯ ಸಿನಿಮಾ ಕೊನೆಯ ಹಂತದಲ್ಲಿ ಇದೆ. ಸಾಯಿ ಕುಮಾರ್ ಅವರು ಈಗಾಗಲೇ ಶೂಟ್​​ನಲ್ಲಿ ಭಾಗಿ ಆಗಿದ್ದಾರೋ ಅಥವಾ ಶೂಟ್ ಪೂರ್ಣಗೊಂಡಿದೆಯೋ ಎನ್ನುವ ವಿಷಯ ರಿವೀಲ್ ಆಗಿಲ್ಲ.

ಇದನ್ನೂ ಓದಿ: ‘ಪೆದ್ದಿ’ ಸಿನಿಮಾ ಶೂಟಿಂಗ್ ಮುಗಿಯಿತೇ? ರಾಮ್ ಚರಣ್ ಕೊಟ್ಟರು ಉತ್ತರ

ಈ ಮೊದಲು ‘ಪೆದ್ದಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಸಿನಿಮಾ ಕೆಲಸಗಳು ಪೂರ್ಣಗೊಂಡಿಲ್ಲ. ಹೀಗಾಗಿ, ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಈ ಚಿತ್ರದಲ್ಲಿ ರಾಮ್​ ಚರಣ್, ಶಿವರಾಜ್​​ಕುಮಾರ್ ಜೊತೆ ದಿವ್ಯೇಂದು ಶರ್ಮ, ಜಗಪತಿ ಬಾಬು ಮೊದಲಾದವರು ನಟಿಸಿದ್ದಾರೆ. ವೃದ್ಧಿ ಸಿನಿಮಾ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ತೆಲುಗು ಜೊತೆಗೆ ಕನ್ನಡದಲ್ಲೂ ರಿಲೀಸ್ ಆಗುತ್ತಿದೆ.
ಈ ಸಿನಿಮಾಗೆ ಆಸ್ಕರ್ ವಿಜೇತ ಎಆರ್ ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟೀಸರ್ ಮ್ಯೂಸಿಕ್ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಿಕ್ಕಮಗಳೂರು: ಎನ್​ಆರ್ ಪುರದಲ್ಲಿ ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು, ಏಪ್ರಿಲ್ 13: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹಂದೂರು ಬಳಿ ನಿರ್ಮಿಸಲಾಗಿರುವ ಬೃಹತ್ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆಯನ್ನು 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದಕ್ಕೆ ‘ಸಿದ್ದರಾಮಯ್ಯ ಸೇತುವೆ’ ಎಂದು ನಾಮಕರಣ ಮಾಡಲಾಗಿದೆ.

ಉದ್ಘಾಟನೆ ಬಳಿಕ ಸೇತುವೆ ವೀಕ್ಷಿಸಿದ ಸಿಎಂ, ನಂತರ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಬಾಲಕೃಷ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಗೆದ್ದರೂ ಅಗ್ರಸ್ಥಾನಕ್ಕೇರದ RCB

Source link

ಸಂಧಾನ ಮುರಿದುಬಿದ್ದ ಬೆನ್ನಲ್ಲೇ ರಾಕೆಟ್​ನಂತೆ ಮೇಲೇರಿದ ತೈಲ ಬೆಲೆ

ನವದೆಹಲಿ, ಏಪ್ರಿಲ್ 13: ಅಮೆರಿಕ ಮತ್ತು ಇರಾನ್ ನಡುವೆ ರಾಜಿ ಸಂಧಾನಕ್ಕಾಗಿ ನಡೆದ ಮಾತುಕತೆ ಮುರಿದುಬಿದ್ದ ಬೆನ್ನಲ್ಲೇ ನಿರೀಕ್ಷೆಯಂತೆ ತೈಲ ಬೆಲೆಗಳು (crude oil prices) ಜಿಗಿತ ಕಂಡಿವೆ. ಕಚ್ಚಾ ತೈಲ ಬೆಲೆಗಳು ಮತ್ತೆ 100 ಡಾಲರ್ ಗಡಿ ದಾಟಿವೆ. ತೈಲ ಬೆಲೆ ಸೋಮವಾರ ಶೇ. 11ರಷ್ಟು ಹೆಚ್ಚಾಗಿ ಬ್ಯಾರಲ್​ಗೆ 105 ಡಾಲರ್ ಆಸುಪಾಸಿನಷ್ಟಿದೆ. ಡಬ್ಲ್ಯುಟಿಐ ಫ್ಯೂಚರ್ಸ್​ನಲ್ಲಿ ಒಂದು ಬ್ಯಾರಲ್ ಕಚ್ಚಾ ತೈಲದ ಬೆಲೆ 104.25 ಡಾಲರ್​ಗೆ ಏರಿದೆ. ಬ್ರೆಂಟ್ ಕ್ರ್ಯೂಡ್​ನಲ್ಲಿ 101 ಡಾಲರ್ ಬೆಲೆ ಇದೆ.

ತೈಲ ಬೆಲೆ ಸಖತ್ ಏರಲು ಇರಾನ್ ಅಮೆರಿಕ ಶಾಂತಿ ಮಾತುಕತೆ (US Iran peace talks) ಮುರಿದುಬಿದ್ದದ್ದು ಮಾತ್ರವೇ ಕಾರಣವಲ್ಲ, ಹಾರ್ಮುಜ್ ಜಲಸಂಧಿಗೆ ದಿಗ್ಬಂಧನ ಹಾಕಲು ಅಮೆರಿಕ ಮುಂದಾಗಿರುವುದು ಮತ್ತೊಂದು ಕಾರಣ.

ಇದನ್ನೂ ಓದಿ: ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್​ಗೆ 55.5 ರೂ, ಎಟಿಎಫ್​ಗೆ 42 ರೂ ಸುಂಕ

ವರದಿಗಳ ಪ್ರಕಾರ ಎರಡು ಪ್ರಮುಖ ಕಾರಣಗಳಿಗೆ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಸಂಧಾನ ಮುರಿದುಬಿದ್ದಿದೆ. ಪಾಕಿಸ್ತಾನದ ಮಧ್ಯಸ್ತಿಕೆಯಲ್ಲಿ ನಡೆದ ಈ ಸಂಧಾನ ಮಾತುಕತೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಅಭಿಪ್ರಾಯಭೇದ ಎದ್ದುಕಂಡಿತ್ತು. ಇರಾನ್ ದೇಶವು ತನ್ನ ಪರಮಾಣು ಶಸ್ತ್ರಾಸ್ತ್ರ ತಯಾರಿಕೆಯನ್ನು ನಿಲ್ಲಿಸಬೇಕು. ಹಾಗು ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಭಂಗ ಮಾಡಕೂಡದು. ಅಮೆರಿಕದ ಈ ಎರಡು ಬೇಡಿಕೆಗಳನ್ನು ಇರಾನ್ ತಿರಸ್ಕರಿಸಿತು. ಹೀಗಾಗಿ, ಶಾಂತಿ ಮಾತುಕತೆ ಕೊನೆಯ ಕ್ಷಣದಲ್ಲಿ ಮುರಿದುಬಿತ್ತು ಎನ್ನಲಾಗಿದೆ.

ಅಮೆರಿಕ ಮತ್ತು ಇಸ್ರೇಲ್ ದೇಶಗಳು ತನ್ನ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ತಡೆದಿದೆ. ಜಗತ್ತಿನ ಶೇ. 20ರಷ್ಟು ತೈಲಗಳು ಈ ಜಲಮಾರ್ಗದ ಮೂಲಕ ಹಡಗುಗಳಲ್ಲಿ ಸಾಗಿ ಹೋಗುತ್ತವೆ. ಹೆಚ್ಚಿನ ಏಷ್ಯನ್ ದೇಶಗಳು ಈ ತೈಲದ ಮೇಲೆ ಅವಲಂಬಿತವಾಗಿವೆ. ಈಗ ಈ ಜಲಸಂಧಿಯಲ್ಲಿ ಹಡಗುಗಳಿಗೆ ಸುಂಕ ಹೇರುವ ವ್ಯವಸ್ಥೆಯನ್ನು ಇರಾನ್ ಮಾಡಿದೆ. ಇದನ್ನು ತಪ್ಪಿಸಲು ಅಮೆರಿಕ ಈಗ ತನ್ನ ನೌಕಾಪಡೆಯನ್ನು ಹಾರ್ಮುಜ್​ಗೆ ಕಳುಹಿಸುತ್ತಿದೆ. ಈ ಜಲಸಂಧಿಯಿಂದ ಯಾವುದೇ ಹಡಗು ಸಾಗಲು ಬಿಡುವುದಿಲ್ಲ ಎಂದು ಟ್ರಂಪ್ ಗುಡುಗಿದ್ದಾರೆ.

ಇದನ್ನೂ ಓದಿ: ಇರಾನ್ ಮತ್ತೆ ಮಾತುಕತೆಗೆ ಬರಲಿ, ಬರ್ದೇ ಇರ್ಲಿ ಡೋಂಟ್ ಕೇರ್: ಡೊನಾಲ್ಡ್​ ಟ್ರಂಪ್

ಈ ಬೆಳವಣಿಗೆಯ ಬೆನ್ನಲ್ಲೇ ತೈಲ ಬೆಲೆಗಳು ಏರತೊಡಗಿವೆ. ಭಾರತ ಸೇರಿದಂತೆ ಹೆಚ್ಚಿನ ದೇಶಗಳಿಗೆ ಪೆಟ್ರೋಲ್, ಡೀಸಲ್, ಗ್ಯಾಸ್ ಬಿಕ್ಕಟ್ಟು ಮತ್ತೆ ದೊಡ್ಡದಾಗಲಿದೆ. ಭಾರತ ಈ ಪರಿಸ್ಥಿತಿಗೆ ಈಗಲೇ ಸಜ್ಜಾಗುತ್ತಿದೆ. ಕೆಲ ಪೆಟ್ರೋಲಿಯಂ ಉತ್ಪನ್ನಗಳಿಗೆ ರಫ್ತು ಸುಂಕ ಭಾರೀ ಪ್ರಮಾಣದಲ್ಲಿ ಏರಿಸಿದೆ. ರಷ್ಯಾದಿಂದ ತೈಲ ಪೂರೈಕೆ ಹೆಚ್ಚಿಸಿಕೊಂಡಿದೆ. ತೈಲ ಮತ್ತು ಎಲ್​ಎನ್​ಜಿ ಪೂರೈಕೆಯನ್ನು ಅನೇಕ ದೇಶಗಳಿಂದ ಪಡೆಯಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮೊದಲ ಪತ್ನಿ ಗರ್ಭಿಣಿಯಾದಾಗಲೇ ಮತ್ತೊಬ್ಬಳ ಜತೆ ನಿಶ್ಚಿತಾರ್ಥ! ಏಟು ಬಿದ್ದರೂ ಮತ್ತೆ ಮದುವೆಯಾದ ಎಂಜಿನಿಯರ್ ಕಥೆ ಏನಾಯ್ತು ಗೊತ್ತೇ?

ಆನೇಕಲ್, ಏಪ್ರಿಲ್ 13: ಮದುವೆಯನ್ನೇ ಒಂದು ವ್ಯವಹಾರ ಮಾಡಿಕೊಂಡಿದ್ದ ಕಾಮುಕ ಇಂಜಿನಿಯರ್ ಒಬ್ಬನ ಸರಣಿ ವಂಚನೆಗಳು ಬಯಲಾಗಿವೆ. ಇಬ್ಬರು ಯುವತಿಯರನ್ನು ಮದುವೆಯಾಗಿ, ಮತ್ತೊಬ್ಬಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಅಮಾಯಕ ಹೆಣ್ಣುಮಕ್ಕಳ ಜೀವನದ ಜೊತೆ ಆಟವಾಡುತ್ತಿದ್ದ ರವಿ ಎಂಬಾತನ ವಿರುದ್ಧ ಈಗ ಜಿಗಣಿ (Jigani) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಂಚನೆಯ ಜಾಲ ಆರಂಭವಾಗಿದ್ದು ಹೇಗೆ?

ತುಮಕೂರಿನ ಚಿಕ್ಕನಾಯಕನಹಳ್ಳಿ ಮೂಲದ ರವಿ, ಜಿಗಣಿ ಬಳಿಯ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. 2024ರ ಜನವರಿಯಲ್ಲಿ ಈತ ಯುವತಿಯೊಬ್ಬಳನ್ನು ಮದುವೆಯಾಗಿದ್ದ. ಮದುವೆಯಾದ ಆರಂಭದಿಂದಲೇ ಪತ್ನಿಯ ಜೊತೆ ವಿಕೃತವಾಗಿ ವರ್ತಿಸುತ್ತಿದ್ದ ಈತ, ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ.

ಪತ್ನಿ ಗರ್ಭಿಣಿಯಿರುವಾಗಲೇ ಮತ್ತೊಂದು ಹೆಣ್ಣಿನ ಹುಡುಕಾಟ

ಮೊದಲ ಪತ್ನಿ ಗರ್ಭಿಣಿಯಾದ ಸಂದರ್ಭದಲ್ಲಿ ಆಕೆಯನ್ನು ಪೋಷಿಸಬೇಕಿದ್ದ ರವಿ, ತನಗೆ ಮದುವೆಯಾಗಿಲ್ಲ ಎಂದು ಸುಳ್ಳು ಹೇಳಿ ತನ್ನ ಕುಟುಂಬದವರೊಟ್ಟಿಗೆ ಸೇರಿ ಬೇರೆ ಹುಡುಗಿ ನೋಡಲು ಶುರು ಮಾಡಿದ್ದ. ಅಷ್ಟೇ ಅಲ್ಲದೆ, ಅಕ್ಟೋಬರ್ ತಿಂಗಳಲ್ಲಿ ಮತ್ತೊಬ್ಬ ಯುವತಿಯ ಜೊತೆ ಎಂಗೇಜ್‌ಮೆಂಟ್ ಕೂಡ ಮಾಡಿಕೊಂಡಿದ್ದ. ಈ ವಿಚಾರ ತಿಳಿದ ಮೊದಲ ಪತ್ನಿ, ನಿಶ್ಚಿತಾರ್ಥ ಮಾಡಿಕೊಂಡ ಯುವತಿಯ ಕುಟುಂಬಕ್ಕೆ ಸತ್ಯ ತಿಳಿಸಿದ್ದರು. ಆ ಸಮಯದಲ್ಲಿ ಆ ಯುವತಿಯ ಮನೆಯವರು ರವಿಗೆ ಹಿಗ್ಗಾಮುಗ್ಗಾ ಥಳಿಸಿದ್ದರು.

ಮೊದಲ ಪತ್ನಿ ಹೆರಿಗೆಗೆ ಹೋದಾಗ ಎರಡನೇ ಮದುವೆ

ಧರ್ಮದೇಟು ತಿಂದಿದ್ದರೂ ಬುದ್ಧಿ ಕಲಿಯದ ರವಿ, ಮೊದಲ ಪತ್ನಿ ಹೆರಿಗೆಗಾಗಿ ತವರು ಮನೆಗೆ ಹೋದಾಗ ಮತ್ತೊಂದು ಮದುವೆಯಾಗಿದ್ದಾನೆ. 2025ರ ಡಿಸೆಂಬರ್‌ನಲ್ಲಿ ಮತ್ತೊಬ್ಬ ಯುವತಿಯನ್ನು ತನಗೆ ಮದುವೆಯಾಗಿಲ್ಲ ಎಂದು ನಂಬಿಸಿ ಮದುವೆಯಾಗಿದ್ದ. ಈ ಎರಡನೇ ಮದುವೆಯ ವಿಷಯ ತಿಳಿದ ಮೊದಲ ಪತ್ನಿ ಮತ್ತು ಆಕೆಯ ಕುಟುಂಬಸ್ಥರು ರವಿಯ ಮನೆಗೆ ನುಗ್ಗಿ ಆತನಿಗೆ ಸಾರ್ವಜನಿಕವಾಗಿ ಹಲ್ಲೆ ಮಾಡಿ ಬುದ್ಧಿ ಕಲಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳದಲ್ಲೂ ಲವ್ ಜಿಹಾದ್: ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ; ಸಿಡಿದೆದ್ದ ಹಿಂದೂ ಯುವಕರು

ಪ್ರಸ್ತುತ ಆರೋಪಿ ರವಿ ಪರಾರಿಯಾಗಿದ್ದು, ಜಿಗಣಿ ಪೊಲೀಸರು ವಂಚನೆ ಮತ್ತು ಬಹುಪತ್ನಿತ್ವದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೈಕ್​​ ತಪ್ಪಿಸಲು ಹೋಗಿ ಶಿಕಾರಿಪುರದಲ್ಲಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ, ಏಪ್ರಿಲ್​​ 13: ಎದುರಿಗೆ ತೆರಳುತ್ತಿದ್ದ ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕುಮದ್ವತಿ ಕಾಲೇಜು ಮುಂಭಾಗ ನಡೆದಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ವಿದ್ಯುತ್​​ ಕಂಬಕ್ಕೆ ಗುದ್ದಿ ಬಸ್​​ ಪಲ್ಟಿಯಾಗಿದ್ದು, ಹಂಪ್​​ ತಪ್ಪಿಸಲು ಯತ್ನಿಸಿದ ಬೈಕ್​​ ಸವಾರ ಎಡ ಮತ್ತು ಬಲ ಎರಡೂ ಕಡೆ ಒಂದೇ ಸಮನೆ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಹೊಟ್ಟೆಯಲ್ಲಿದ್ದ ಮಗು ಸಾವು!

ಬೆಳಗಾವಿ, ಏಪ್ರಿಲ್ 13: ಜಿಲ್ಲೆಯಲ್ಲಿ ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಗರ್ಭಿಣಿ ಮಹಿಳೆಯ ಸಾವಿಗೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ತುರಮರಿ ಗ್ರಾಮದ ಗರ್ಭಿಣಿಯಾದ ಈರಮ್ಮ ಈರಪ್ಪ ಶಿಗೀಹಳ್ಳಿ (21) ಅವರನ್ನು ಏಪ್ರಿಲ್ 10ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸರಿಯಾದ ಚಿಕಿತ್ಸೆ ನೀಡದ ಕಾರಣ ಈರಮ್ಮ ಹಾಗೂ ಹೊಟ್ಟೆಯಲ್ಲಿದ್ದ ಶಿಶು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಾವಿನ ಬಳಿಕ ಮಧ್ಯರಾತ್ರಿ ಸಹಿ ಪಡೆದು ದೇಹವನ್ನು ಕಳುಹಿಸಲು ಯತ್ನಿಸಿದ್ದಾಗಿ ತಿಳಿದುಬಂದಿದೆ. ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದು, ಎಪಿಎಂಸಿ ಠಾಣೆಯ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Viral: 10 ಕೋಟಿ ರೂ ದುಡ್ಡಿದ್ರೂ ಭಾರತ ತೊರೆಯಲು ಮುಂದಾದ ವ್ಯಕ್ತಿ, ಕಾರಣ ಇದೇ ನೋಡಿ

ಭಾರತೀಯ (Indian) ಯುವಕ ಯುವತಿಯರು ಓದು ಮುಗಿಯುತ್ತಿದ್ದಂತೆ ವಿದೇಶಕ್ಕೆ (foreign) ತೆರಳುತ್ತಾರೆ, ಅಲ್ಲೇ ಸೆಟ್ಲ್ ಆಗ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿಗೆ ಭಾರತ ಬಿಡಲು ಮುಂದಾಗಿದ್ದಾರೆ. 10 ಕೋಟಿ ರೂ ಉಳಿತಾಯ ಹೊಂದಿರುವ ವ್ಯಕ್ತಿಯೂ, ಭಾರತದ ಬಗೆಗಿನ ನನ್ನ ನಿಷ್ಠೆ ಮಿತಿಯನ್ನು ಮೀರಿದೆ ಎಂದು ಹೇಳಿದ್ದಾರೆ. ಈ ಕುರಿತಾದ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ.

ಅನಾಮಧೇಯ ಕೆಲಸದ ವೇದಿಕೆ ಬ್ಲೈಂಡ್‌ನಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ ವ್ಯಕ್ತಿಯೊಬ್ಬರು 10 ಕೋಟಿ ಉಳಿಸಲಾಗಿದೆ ಮತ್ತು ನಾನು ಭಾರತ ಎಂಬ ಸರ್ಕಸ್ ಮುಗಿಸಿದ್ದೇನೆ ಎಂದು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ನನ್ನ 50ರ ಹರೆಯದಲ್ಲಿ 10 ಕೋಟಿ ಆಸ್ತಿ ಇರುವುದು ಗೆದ್ದಂತೆ ಭಾಸವಾಗಬೇಕು. ಆದರೆ ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಬ್ಯುರೊ ಅಥವಾ ದೆಹಲಿಯಲ್ಲಿ ವಾಸಿಸುವುದು ಈಗ ಕೇವಲ ದೈನಂದಿನ ಹೋರಾಟವಾಗಿದೆ.

ವೈರಲ್‌ ಪೋಸ್ಟ್‌ ಇಲ್ಲಿದೆ

ಇಲ್ಲಿನ ಉದ್ದನೆ ಸರತಿ ಸಾಲುಗಳು, ಅಸ್ತವ್ಯಸ್ತವಾಗಿರುವ ರಸ್ತೆಗಳು ಮತ್ತು ಶೂನ್ಯ ಸೇವೆಯೊಂದಿಗೆ ಹೆಚ್ಚಿನ ತೆರಿಗೆಯಿದೆ. ನಿರಂತರ ಶಬ್ದ, ಕೊಳಕು ಚರಂಡಿಗಳು ಮತ್ತು ವೈಯಕ್ತಿಕ ಸ್ಥಳದ ಸಂಪೂರ್ಣ ಕೊರತೆಯ ನಡುವೆ, ಭಾರತದ ಈ ಪರಿಕಲ್ಪನೆಗೆ ನನ್ನ ನಿಷ್ಠೆ ಅಂತಿಮವಾಗಿ ಅದರ ಮಿತಿಯನ್ನು ತಲುಪಿದೆ ಎಂದು ನಾನು ಅರಿತುಕೊಂಡೆ. ಈಗ ನಾನು ನಿವೃತ್ತರಾಗಲು ಶಾಂತಿಯುತ ಸ್ಥಳವನ್ನು ಹುಡುಕುತ್ತಿದ್ದೇವೆ ಎಂದಿದ್ದಾರೆ.

ಪ್ರತಿಯೊಂದು ಮೂಲೆಯಲ್ಲೂ ಪಾನ್ ಕಲೆಗಳು ಮತ್ತು ಪ್ರತಿ ಮಾಲ್‌ನಲ್ಲಿ ದುಬಾರಿ ಜಾಗತಿಕ ಬ್ರ್ಯಾಂಡ್‌ಗಳ ಕಲೆಗಳು, ಕಾಣದ ಶಾಂತಿಯುತ ನಿವೃತ್ತಿ ಜೀವನವನ್ನು ನಾನು ಬಯಸುತ್ತೇನೆ. ಇತರರು ಸಹ ಸ್ಥಳಾಂತರಗೊಳ್ಳಲು ಯೋಜಿಸುತ್ತಿದ್ದೀರಾ ಅಥವಾ ಈ ವಹಿವಾಟಿನ ಜಂಜಾಟದಿಂದ ಬೇಸತ್ತಿದ್ದೀರಾ ಎಂದು ಕೇಳಿದ್ದಾರೆ.

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನೀವು ಎಲ್ಲಿದ್ದೀರಿ ಅಲ್ಲಿ ಸಂತೋಷವಾಗಿಲ್ಲದಿದ್ದರೆ, ಬೇರೆಲ್ಲಿಯೂ ನೀವು ಸಂತೋಷವಾಗಿರಲು ಸಾಧ್ಯವಿಲ್ಲ ಎಂದಿದ್ದಾರೆ. ಇನ್ನೊಬ್ಬರು, ಹಿಮಾಚಲ ಪ್ರದೇಶ, ಉತ್ತರಾಖಂಡ ಅಥವಾ ಈಶಾನ್ಯದಲ್ಲಿರುವ ಗಿರಿಧಾಮಕ್ಕೆ ತೆರಳಿ ಶಾಂತವಾಗಿರಿ. ಅಲ್ಲಿ ವಾಯು ಮಾಲಿನ್ಯವಿಲ್ಲ, ಕಡಿಮೆ ವಾಯು ಗುಣಮಟ್ಟ ಸೂಚ್ಯಂಕ, ರಸ್ತೆಗಳಲ್ಲಿ ಕಸವಿಲ್ಲ, ಸಂಜೆಗಳು ಶಾಂತವಾಗಿರುತ್ತವೆ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ನಿರ್ಮಾಣದ ಹೆಸರಿನಲ್ಲಿ ಹದಗೆಟ್ಟ ಬೆಂಗಳೂರು; ವರ್ಷಗಳ ಬಳಿಕ ನಗರಕ್ಕೆ ಮರಳಿದ ವ್ಯಕ್ತಿ ಹೀಗೆಂದಿದ್ದೇಕೆ?

ಮತ್ತೊಬ್ಬರು, ನಿವೃತ್ತಿ ಹೊಂದಲು ಕೇರಳ ಅತ್ಯುತ್ತಮ ಸ್ಥಳ. ಕೇರಳದಲ್ಲಿ ಯಾವುದೇ ತಂತ್ರಜ್ಞಾನ ಕಂಪನಿಯ ಪ್ರಧಾನ ಕಚೇರಿ ಇಲ್ಲ. ಹೆಚ್ಚಾಗಿ ಸಣ್ಣ ಕಂಪನಿಗಳು. ಆದ್ದರಿಂದ, ಬೆಂಗಳೂರು ದೆಹಲಿಗೆ ಹೋಲಿಸಿದರೆ ಮನೆಗಳು ಮತ್ತು ವೆಚ್ಚಗಳು ಅಗ್ಗವಾಗಿವೆ. ಆದರೆ ಬಹುತೇಕ ಎಲ್ಲರೂ ಶ್ರೀಮಂತರಾಗಿದ್ದು, ಅವರೆಲ್ಲರೂ ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಉತ್ತರ ಭಾರತದ ಜನದಟ್ಟಣೆಯ ಮನೆಗಳಿಗಿಂತ ಭಿನ್ನವಾಗಿ ಮನೆಗಳಿದ್ದು, ಮುಂಭಾಗ ದೊಡ್ಡದಿದ್ದು, ಹಿತ್ತಲುಗಳು ಅಗಲವಾಗಿವೆ. ತಂಪಾದ, ಉತ್ತಮ, ತಾಜಾ ಗಾಳಿ. ನೀವು ನಗರದಲ್ಲಿ ವಾಸಿಸುತ್ತಿದ್ದರೆ, ನೀವು ವಾಸಿಸಲು ಬೇಕಾದ ಎಲ್ಲವನ್ನೂ ನೀವು ಪಡೆಯುತ್ತೀರಿ” ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಇದು ನಿಜವಾದ ‘ಸ್ಪಷ್ಟತೆ’… ಗೆಲುವಿನ ಬಳಿಕ ರಜತ್ ಪಾಟಿದಾರ್ ಹೇಳಿದ್ದೇನು?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯಭೇರಿ ಬಾರಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ 50 ರನ್ ಬಾರಿಸಿದರೆ, ಫಿಲ್ ಸಾಲ್ಟ್ 78 ರನ್ ಸಿಡಿಸಿದರು. ಇನ್ನು ರಜತ್ ಪಾಟಿದಾರ್ 53 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಆರ್​ಸಿಬಿ 20 ಓವರ್​ಗಳಲ್ಲಿ 240 ರನ್​ ಕಲೆಹಾಕಿತು.

241 ರನ್​ಗಳ ಕಠಿಣ ಗುರಿ ಪಡೆದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 222 ರನ್ ​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 18 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ರಜತ್ ಪಾಟಿದಾರ್ ತಂಡದ ಪ್ರದರ್ಶನ ಬಗ್ಗೆ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

ನಮ್ಮ ಈ ಗೆಲುವಿಗೆ ಮುಖ್ಯ ಕಾರಣ ‘ಸ್ಪಷ್ಟತೆ’. ನಮ್ಮ ಆಟಗಾರರಲ್ಲಿ ಅವರ ಜವಾಬ್ದಾರಿಯ ಬಗ್ಗೆ ಸ್ಪಷ್ಟವಾದ ಅರಿವಿತ್ತು. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಆರಂಭದಲ್ಲೇ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿದ್ದು ನಮ್ಮನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸಿತು. ಆ ಬಳಿಕ ನಾನು ಹಾಗೂ ಟಿಮ್ ಡೇವಿಡ್ ಸ್ಫೋಟಕ ಇನಿಂಗ್ಸ್ ಆಡಿದ ಕಾರಣ ಬೃಹತ್ ಮೊತ್ತ ಪೇರಿಸಲು ಸಾಧ್ಯವಾಯಿತು. ಅಂದರೆ ದೊಡ್ಡ ಮೊತ್ತ ಪೇರಿಸುವ ಬಗ್ಗೆ ನಮ್ಮಲ್ಲಿ ಸ್ಪಷ್ಟತೆ ಇತ್ತು. ಈ ಸ್ಪಷ್ಟ ಗುರಿಯಿಂದಾಗಿ ನಾನು ಗೆದ್ದಿದ್ದೇವೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

ಇದೇ ವೇಳೆ ತನ್ನನ್ನು ಸ್ಪಿನ್ ಬ್ಯಾಟರ್ ಎಂದು ಕರೆಯುವ ಬಗ್ಗೆ ಸ್ಪಷ್ಟನೆ ನೀಡಿದ ರಜತ್ ಪಾಟಿದಾರ್,  ಜನರು ನಾನು ಸ್ಪಿನ್ ಆಡುವುದನ್ನು ಇಷ್ಟಪಡುತ್ತೇನೆ ಎಂದು ಹೇಳುತ್ತಾರೆ. ಆದರೆ ಸತ್ಯ ಏನೆಂದರೆ ನನಗೆ ವೇಗದ ಬೌಲಿಂಗ್ ಎದುರಿಸುವುದೆಂದರೆ ತುಂಬಾ ಪ್ರೀತಿ. ಅದರಲ್ಲೂ ವಾಂಖೆಡೆಯಂತಹ ವೇಗದ ಪಿಚ್‌ಗಳಲ್ಲಿ ವೇಗಿಗಳನ್ನು ಎದುರಿಸುವುದು ಅದ್ಭುತ ಅನುಭವ ಎಂದು ತಿಳಿಸಿದ್ದಾರೆ.

ಮುಂಬೈ ಅಂಗಳದ ಬಗ್ಗೆ ಮಾತನಾಡಿದ ಪಾಟಿದಾರ್, ಇಲ್ಲಿನ ವಾತಾವರಣ ಮತ್ತು ತುಂಬಿ ತುಳುಕುವ ಸ್ಟೇಡಿಯಂನಲ್ಲಿ ಅಭಿಮಾನಿಗಳ ಮುಂದೆ ಆಡುವುದು ಒಂದು ವಿಭಿನ್ನ ಭಾವನೆ ನೀಡುತ್ತದೆ. ಇಲ್ಲಿನ ಬೆಂಬಲ ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದರು.

ಒಟ್ಟಾರೆಯಾಗಿ, ಸಾಂಘಿಕ ಹೋರಾಟದ ಫಲವಾಗಿ ಆರ್‌ಸಿಬಿ ತಂಡವು ಮತ್ತೊಂದು ಸ್ಮರಣೀಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಈ ಗೆಲುವಿನ ಲಯವನ್ನು ಮುಂದಿನ ಪಂದ್ಯಗಳಲ್ಲೂ ಮುಂದುವರೆಸುವ ವಿಶ್ವಾಸವಿದೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

ಇದನ್ನೂ ಓದಿ: ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ

ಅಂದಹಾಗೆ ಈವರೆಗೆ ಆಡಿದ 4 ಮ್ಯಾಚ್​ಗಳಲ್ಲಿ 3 ಗೆಲುವು ದಾಖಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.

 

Source link

Exit mobile version