ಹುಬ್ಬಳ್ಳಿ: ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ – Kannada News | Hubballi Police Arrested a man for Insulting Hindu Religion on WhatsApp Status

ಹುಬ್ಬಳ್ಳಿ, ಫೆಬ್ರವರಿ 06: ಹಿಂದೂ ಧರ್ಮಕ್ಕೆ ಅಪಮಾನವಾಗುವ ರೀತಿಯಲ್ಲಿ ವಾಟ್ಸಪ್​​ ಸ್ಟೇಟಸ್ ಇಟ್ಟಿದ್ದ ಯುವಕನನ್ನು ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ನೂರಾನಿ ಫ್ಲ್ಯಾಟ್ ನಿವಾಸಿ ದಾದಾಪೀರ್ ಹೆಬ್ಬಳ್ಳಿ (27) ಬಂಧಿತ ಯುವಕ. ಹಳೆ ಹುಬ್ಬಳ್ಳಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕಳೆದ ರಾತ್ರಿ ಬಂಧಿಸಿ‌ ಜೈಲಿಗಟ್ಟಿದ್ದಾರೆ. ಯೂಟ್ಯೂಬರ್ ಒಬ್ಬರು ಹಿಂದೂ ದೇವರ ಬಳಿ ಕಲ್ಮಾ ಹೇಳಿದ್ದ ವಿಡಿಯೋವನ್ನು ದಾದಾಪೀರ್ ತನ್ನ ವಾಟ್ಸಾಪ್ ಸ್ಟೇಟಸ್‌ಗೆ ಹಾಕಿಕೊಂಡಿದ್ದ. ಈ ಸ್ಟೇಟಸ್ ಹಿಂದೂ ಧರ್ಮಕ್ಕೆ ಅಪಮಾನ ಮಾಡಲಾಗಿದೆ ಎನ್ನಲಾಗಿದೆ. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Pakistan Mosque Blast: ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ, 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ – Kannada News | Explosion Reported at Islamabad Mosque, many dead

ಇಸ್ಲಾಮಾಬಾದ್, ಫೆಬ್ರವರಿ 06: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆಗ್ನೇಯ ಇಸ್ಲಾಮಾಬಾದ್‌ನ ತರ್ಲೈ ಕಲಾನ್ ಪ್ರದೇಶದ ಖದೀಜಾ ತುಲ್ ಕುಬ್ರಾ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆಯ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಸ್ಥಳಕ್ಕೆ ರಕ್ಷಣಾ ತಂಡಗಳು ತಲುಪಿವೆ.ಸಾವುನೋವುಗಳ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಆದರೆ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Video: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ – Kannada News | Student Bites Teacher’s Lip Over Rejected Love; CCTV Viral

12ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಿಕ್ಷಕಿ ತನ್ನ ಪ್ರೀತಿ ಪ್ರೀತಿಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲೇ ಶಿಕ್ಷಕಿಯ ತುಟಿಗೆ ಕಚ್ಚಿ ತುಂಡರಿಸಿದ ಭೀಕರ ಘಟನೆ ಉತ್ತರ ಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಶಿಕ್ಷಕಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಫತೇ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ. ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಮತ್ತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್​​ಗೆ ಬಲಿಯಾದ ಹಿಂದೂ ಯುವತಿ ರೀಟಾ

 

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟೀಂ ಇಂಡಿಯಾಗೆ ಆಘಾತ; ಟಿ20 ವಿಶ್ವಕಪ್​ನಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್

Source link

ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು? – Kannada News | DK Shivakumar sparks to MLC Yathindra’s Claim on Siddaramaiah CM Tenure

ಮಂಗಳೂರು, ಫೆಬ್ರವರಿ 06: ಸಿದ್ದರಾಮಯ್ಯ 5 ವರ್ಷ ಸಿಎಂ. ಪೂರ್ಣಾವಧಿ ಆಡಳಿತಕ್ಕೆ ಹೈಕಮಾಂಡ್ ಗ್ರೀನ್​ ಸಿಗ್ನಲ್ ಕೊಟ್ಟಿದೆ. ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೊಸ ಬಂಬ್ ಸಿಡಿಸಿದ್ದಾರೆ. ಇದು ಕಾಂಗ್ರೆಸ್​​​ನಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಇದಕ್ಕೆ ಸಿಎಂ ಆಕಾಂಕ್ಷಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಯತೀಂದ್ರ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಮಂಗಳೂರಿನ ಬಜ್ಪೆ ಏರ್​ಪೋರ್ಟ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಎಂಎಲ್​ಸಿ ಯತೀಂದ್ರ ಅವರೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್. ಅವರು ಏನು ಹೇಳ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡೋಣ. ಯತೀಂದ್ರ ಅವರನ್ನೇ ನಮ್ಮ ಹೈಕಮಾಂಡ್ ಅಂತ ಸ್ವೀಕಾರ ಮಾಡೋಣ. ನಾನು ಈ ಬಗ್ಗೆ ಯಾರಿಗೂ ಪ್ರತಿಕ್ರಿಯೆ ಕೊಡಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..! – Kannada News | Minister Lakshmi hebbalkar clean bowled to satish jarkiholi in Cricket at Belagavi

ಬೆಳಗಾವಿ, (ಫೆಬ್ರವರಿ 06): ರಾಜಕೀಯದ ಜಂಜಾಟ, ಅಧಿಕಾರದ ಒತ್ತಡಗಳನ್ನು ಬದಿಗಿಟ್ಟು ಬೆಳಗಾವಿಯ (Belagavi)  ಪ್ರಭಾವಿ ಕಾಂಗ್ರೆಸ್ ನಾಯಕರು ಇಂದು (ಫೆಬ್ರವರಿ 06) ಕ್ರಿಕೆಟ್ ಆಟವಾಡಿ ಗಮನ ಸೆಳೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi)  ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರ ‘ಬಾಕ್ಸ್ ಕ್ರಿಕೆಟ್’  ನೆರೆದಿದ್ದ ಜನರಿಗೆ ಭರಪೂರ ಮನರಂಜನೆ ನೀಡಿದೆ.  ಹೌದು.. ಬೆಳಗಾವಿಯಲ್ಲಿ ಬಾಲಭವನ ವತಿಯಿಂದ ನಿರ್ಮಿಸಲಾದ ನೂತನ ಬಾಕ್ಸ್ ಕ್ರಿಕೆಟ್ ಮೈದಾನದ ಉದ್ಘಾಟನೆ  ನೆರವೇರಿತು. ಉದ್ಘಾಟನೆಯ ಪ್ರಯುಕ್ತ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್‌ಗೆ ಇಳಿದರು.  ಮತ್ತೊಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಡಿದ ಬೌಲಿಂಗ್​​​​ಗೆ  ಸತೀಶ್ ಜಾರಕಿಹೊಳಿ ‘ಕ್ಲೀನ್ ಬೋಲ್ಡ್’ ಆಗಿದ್ದಾರೆ. ಇದನ್ನು ಕಂಡ ನೆರೆದಿದ್ದ ಕಾರ್ಯಕರ್ತರು ಮತ್ತು ಜನರು ಶಿಳ್ಳೆ, ಚಪ್ಪಾಳೆ ತಟ್ಟಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Rakkasapuradhol Review: ರಾಜ್ ಬಿ. ಶೆಟ್ಟಿ ಅಭಿಮಾನಿಗಳಿಗೆ ‘ರಕ್ಕಸಪುರದೋಳ್’ ಮನರಂಜನೆಯ ಪ್ಯಾಕೇಜ್ – Kannada News | Rakkasapuradhol Movie Review: Raj B Shetty new film is a complete entertainer package

‘ರಕ್ಕಸಪುರದೋಳ್’ (Rakkasapuradhol) ಎಂಬ ಶೀರ್ಷಿಕೆ ಕೇಳಿದರೆ ಇದು ಕ್ರೈಂ ಥ್ರಿಲ್ಲರ್ ಕಥೆ ಎಂಬುದು ತಿಳಿಯುತ್ತದೆ. ಆದರೆ ಅಷ್ಟು ಮಾತ್ರವಲ್ಲ, ಈ ಕಥೆಯೊಳಗೆ ಇನ್ನೂ ಹಲವು ಅಂಶಗಳು ಇವೆ. ರಾಜ್ ಬಿ. ಶೆಟ್ಟಿ (Raj B Shetty) ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾಗೆ ರವಿ ಸಾರಂಗ ಆ್ಯಕ್ಷನ್-ಕಟ್ ಹೇಳಿದ್ದಾರೆ. ರವಿವರ್ಮಾ ನಿರ್ಮಾಣದ ಈ ಸಿನಿಮಾ ಫೆ.6ರಂದು ಬಿಡುಗಡೆ ಆಗಿದ್ದು, ಗಟ್ಟಿಯಾದ ಕಥೆ ಮತ್ತು ಉತ್ತಮವಾದ ಮೇಕಿಂಗ್​​ನಿಂದ ಗಮನ ಸೆಳೆಯುತ್ತಿದೆ. ‘ರಕ್ಕಸಪುರದೋಳ್’ ಚಿತ್ರದ ವಿಮರ್ಶೆ (Rakkasapuradhol Review) ಇಲ್ಲಿದೆ..

ರಾಜ್ ಬಿ. ಶೆಟ್ಟಿ ಅವರು ಎಲ್ಲ ಬಗೆಯ ಪಾತ್ರಗಳನ್ನು ಮಾಡುತ್ತಾರೆ. ಎಲ್ಲ ರೀತಿಯ ಪ್ರಯೋಗಕ್ಕೂ ಅವರು ಒಗ್ಗಿಕೊಳ್ಳುತ್ತಾರೆ. ‘ರಕ್ಕಸಪುರದೋಳ್’ ಸಿನಿಮಾದಲ್ಲಿ ಅವರು ಪೊಲೀಸ್ ಇನ್ಸ್​ಪೆಕ್ಟರ್ ಪಾತ್ರ ಮಾಡಿದ್ದಾರೆ. ಈ ಪೊಲೀಸ್ ಪಾತ್ರ ಸ್ವಲ್ಪ ಡಿಫರೆಂಟ್ ಆಗಿದೆ. ಮಾನಸಿಕ ಸಮಸ್ಯೆ ಹೊಂದಿರುವ ಆತನನ್ನು ರಕ್ಕಸಪುರ ಎಂಬ ಊರಿಗೆ ಕಳಿಸಲಾಗುತ್ತದೆ. ಆತ ಕಾಲಿಟ್ಟ ನಂತರವೇ ಆ ಊರಿನಲ್ಲಿ ಸರಣಿ ಕೊಲೆ ಸಂಭವಿಸುತ್ತವೆ.

ಆ ಸಾವುಗಳಿಗೂ, ಕಥಾನಾಯಕನಿಗೂ ಏನಾದರೂ ಸಂಬಂಧ ಇದೆಯಾ ಎಂಬ ಅನುಮಾನ ಆರಂಭದಲ್ಲೇ ಮೂಡುತ್ತದೆ. ನಂತರ ಅನುಮಾನದ ದೃಷ್ಟಿ ಬೇರೆ ಬೇರೆ ಪಾತ್ರಗಳ ಮೇಲೆ ಬೀಳುತ್ತದೆ. ಇದರ ನಡುವೆ ದೆವ್ವ ಭೂತದ ಕಾಟ ಕೂಡ ಶುರುವಾಗತ್ತದೆ. ಈ ಕೊಲೆಗಳಿಗೆ ಕಾರಣ ಆಗಿರುವುದು ಮನುಷ್ಯನಾ ಅಥವಾ ದೆವ್ವನಾ ಎಂಬ ಪ್ರಶ್ನೆ ಮೂಡುತ್ತದೆ. ಪ್ರೇಕ್ಷಕರು ಪ್ರತಿ ದೃಶ್ಯವನ್ನೂ ಭಾರಿ ಕುತೂಹಲದಿಂದ ನೋಡುವಂತಾಗುತ್ತದೆ. ಕೊಲೆಗಳ ರಹಸ್ಯ ಏನು ಎಂಬುದು ತಿಳಿಯಲು ಪೂರ್ತಿ ಸಿನಿಮಾ ನೋಡಬೇಕು.

‘ರಕ್ಕಸಪುರದೋಳ್’ ಸಿನಿಮಾದಲ್ಲಿ ಟ್ವಿಸ್ಟ್​​ಗಳಿಗೆ ಬರವೇ ಇಲ್ಲ. ಪ್ರತಿ ಹಂತದಲ್ಲೂ ಒಂದೊಂದು ಟ್ವಿಸ್ಟ್ ಎದುರಾಗುತ್ತದೆ. ಅದರಲ್ಲೂ, ದ್ವಿತೀಯಾರ್ಧದಲ್ಲಿ ಪ್ರೇಕ್ಷಕರು ಊಹಿಸದ ಅನೇಕ ಸಂಗತಿಗಳು ಎದುರಾಗುತ್ತವೆ. ಮೂಢನಂಬಿಕೆ ಮತ್ತು ವಿಜ್ಞಾನದ ವಿಚಾರಗಳನ್ನು ಕಥೆಯಲ್ಲಿ ಹೇಳಲಾಗಿದೆ. ಸಸ್ಪೆನ್ಸ್, ಥ್ರಿಲ್ಲರ್, ಹಾರರ್, ಕಾಮಿಡಿ ಮುಂತಾದ ಅಂಶಗಳನ್ನು ಸರಿಯಾದ ಪ್ರಮಾಣದಲ್ಲಿ ಬೆರೆಸಿ ಅಚ್ಚುಕಟ್ಟಾದ ಸಿನಿಮಾ ಮಾಡಲಾಗಿದೆ.

ನಿರ್ದೇಶಕ ರವಿ ಸಾರಂಗ ಅವರು ಗಟ್ಟಿಯಾದ ಕಥೆ ಮತ್ತು ಬಿಗಿಯಾದ ಚಿತ್ರಕಥೆಯನ್ನು ಹೆಣೆದುಕೊಳ್ಳುವ ಮೂಲಕ ಮೊದಲ ಹಂತದಲ್ಲೇ ಗೆದ್ದಿದ್ದಾರೆ. ಅದನ್ನು ಅಷ್ಟೇ ಉತ್ತಮವಾಗಿ ತೆರೆಗೆ ತರಲಾಗಿದೆ. ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ, ಅರ್ಜುನ್ ಜನ್ಯ ಅವರ ಸಂಗೀತದಿಂದಾಗಿ ಸಿನಿಮಾಗೆ ದೊಡ್ಡ ಬಲ ಬಂದಂತೆ ಆಗಿದೆ. ಹಿನ್ನೆಲೆ ಸಂಗೀತದಲ್ಲಿ ಅರ್ಜುನ್ ಜನ್ಯ ಹೆಚ್ಚು ಇಷ್ಟ ಆಗುತ್ತಾರೆ.

ಈ ಚಿತ್ರದಲ್ಲಿ ಹಲವು ಪಾತ್ರಗಳಿವೆ ಎಲ್ಲ ಪಾತ್ರಗಳಿಗೆ ಸ್ಕೋಪ್ ಇದೆ. ಸ್ವಾತಿಷ್ಟ ಕೃಷ್ಣನ್, ಅರ್ಚನಾ ಕೊಟ್ಟಿಗೆ, ಬಿ. ಸುರೇಶ, ಜಹಾಂಗೀರ್, ಅನಿರುದ್ಧ್ ಭಟ್, ಗೋಪಾಲ್ ದೇಶಪಾಂಡೆ ಮುಂತಾದವರು ಮಾಡಿರುವ ಪಾತ್ರಗಳು ಗಮನ ಸೆಳೆದಿವೆ. ಯಾರು ಒಳ್ಳೆಯವರು, ಯಾರು ಕೆಟ್ಟವರು ಎಂಬ ಕುತೂಹಲದಲ್ಲೇ ಇಡೀ ಸಿನಿಮಾ ನೋಡಿಸಿಕೊಳ್ಳುತ್ತದೆ. ರಾಜ್ ಬಿ. ಶೆಟ್ಟಿ ಅವರ ವೃತ್ತಿಜೀವನದಲ್ಲಿ ಇದೊಂದು ಡಿಫರೆಂಟ್ ಸಿನಿಮಾವಾಗಿ ನಿಲ್ಲುತ್ತದೆ.

ಇದನ್ನೂ ಓದಿ: ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ

ವಿಶೇಷ ಏನೆಂದರೆ, ‘ರಕ್ಕಸಪುರದೋಳ್’ ಚಿತ್ರದಲ್ಲಿ ಸಾಕಷ್ಟು ವಿಷಯಗಳನ್ನು ಹೇಳಲಾಗಿದೆ. ಹತ್ತಾರು ಪಾತ್ರಗಳ ಹಿಂದೆಯೂ ಸಾಕಷ್ಟು ಕಥೆ ಇದೆ. ಆ ಎಲ್ಲ ವಿಷಯಗಳನ್ನು ಪ್ರೇಕ್ಷಕರ ಎದುರು ತೆರೆದಿಡಲು ತೆಗೆದುಕೊಂಡಿರುವ ಸಮಯ ಕೇವಲ 2 ಗಂಟೆ 7 ನಿಮಿಷ! ಅಂದರೆ, ಅಷ್ಟು ಅಚ್ಚುಕಟ್ಟಾಗಿ, ಚುಟುಕಾಗಿ, ಮನಮುಟ್ಟುವಂತೆ ನಿರೂಪಣೆ ಮಾಡಲಾಗಿದೆ. ಅನೇಕ ಟ್ವಿಸ್ಟ್​​ಗಳು ಇದ್ದರೂ ಕೂಡ ಪ್ರೇಕ್ಷಕರಿಗೆ ಗೊಂದಲ ಮೂಡದಂತೆ ವಿವರಿಸಲಾಗಿದೆ. ಅದು ಈ ಸಿನಿಮಾದ ಶಕ್ತಿ ಆಗಿದೆ.

ಒಂದೇ ಸಿನಿಮಾದಲ್ಲಿ ಹಾರರ್, ಮರ್ಡರ್ ಮಿಸ್ಟರಿ, ಕಾಮಿಡಿ, ಸಸ್ಪೆನ್ಸ್, ಥ್ರಿಲ್ಲರ್, ಆ್ಯಕ್ಷನ್ ಎಲ್ಲವೂ ಬೇಕು ಎಂಬ ಪ್ರೇಕ್ಷಕರಿಗೆ ‘ರಕ್ಕಸಪುರದೋಳ್’ ಚಿತ್ರ ಒಂದು ಉತ್ತಮ ಆಯ್ಕೆ. ರಾಜ್ ಬಿ. ಶೆಟ್ಟಿ ಅವರ ಅಭಿಮಾನಿಗಳಿಗೆ ಈ ಚಿತ್ರ ಇಷ್ಟ ಆಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೈಗ್ರೇನ್ ಮತ್ತು ಸಾಮಾನ್ಯ ತಲೆನೋವಿಗಿರುವ ವ್ಯತ್ಯಾಸವೇನು? ಇದನ್ನು ತಡೆಯಲು ಇಲ್ಲಿದೆ ಸಿಂಪಲ್ ಟಿಪ್ಸ್ – Kannada News | Migraine Symptoms vs Normal Headache

ತಲೆನೋವನ್ನು (Headache) ಎಲ್ಲರೂ ಒಂದಲ್ಲ ಒಂದು ಹಂತದಲ್ಲಿ ಅನುಭವಿಸಿರುತ್ತಾರೆ. ಇದೊಂದು ಸಾಮಾನ್ಯ ಸಮಸ್ಯೆ. ಈ ರೀತಿ ಆಗಾಗ, ಬರುವ ತಲೆನೋವು ಬಹಳ ಸಾಮಾನ್ಯ ಎಂದು ಅಂದುಕೊಳ್ಳುತ್ತಾರೆ. ಅದಕ್ಕಾಗಿಯೇ ನೋವು ನಿವಾರಕ ಮಾತ್ರೆ ತೆಗೆದುಕೊಂಡು ಅಥವಾ ಸ್ವಲ್ಪ ವಿಶ್ರಾಂತಿ ಪಡೆದು ಅದನ್ನು ಕಡಿಮೆ ಮಾಡಿಕೊಳ್ಳುತ್ತಾರೆ. ಆದರೆ ತಲೆನೋವು ಪದೇ ಪದೇ ಬಂದಾಗ, ತುಂಬಾ ತೀವ್ರವಾಗಿದ್ದರೆ ಅಥವಾ ದಿನನಿತ್ಯದ ಕೆಲಸಗಳನ್ನು ಮಾಡಲು ಸಾಧ್ಯವಾಗದಿದ್ದಾಗ ಈ ನೋವನ್ನು ಹಗುರವಾಗಿ ಪರಿಗಣಿಸುವುದು ಸರಿಯಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಏಕೆಂದರೆ ಈ ರೀತಿಯ ನೋವು ಮೈಗ್ರೇನ್‌ನ (Migraine) ಒಂದು ರೂಪವೂ ಆಗಿರಬಹುದು. ಹಾಗಾದರೆ ಮೈಗ್ರೇನ್ ಮತ್ತು ಸಾಧಾರಣ ತಲೆನೋವಿಗೂ ಇರುವ ವ್ಯತ್ಯಾಸವೇನು, ಈ ರೀತಿ ಸಮಸ್ಯೆ ಕಂಡುಬರುವುದಕ್ಕೆ ಕಾರಣಗಳೇನು, ಇದನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮೈಗ್ರೇನ್ ಮತ್ತು ಸಾಮಾನ್ಯ ತಲೆನೋವಿಗಿರುವ ವ್ಯತ್ಯಾಸ?

ಲೇಡಿ ಹಾರ್ಡಿಂಗ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕರಾದ ಡಾ. ಎಲ್.ಎಚ್. ​​ಘೋಟೇಕರ್ ಹೇಳುವ ಪ್ರಕಾರ, ಮೈಗ್ರೇನ್ ಮತ್ತು ಸಾಮಾನ್ಯ ತಲೆನೋವಿಗಿರುವ ದೊಡ್ಡ ವ್ಯತ್ಯಾಸವೆಂದರೆ ನೋವಿನ ಸ್ವರೂಪ ಮತ್ತು ಪರಿಣಾಮ. ಸಾಮಾನ್ಯ ತಲೆನೋವು ಸಾಮಾನ್ಯವಾಗಿ ಸೌಮ್ಯವಾಗಿದ್ದು ತಲೆ ಅಥವಾ ಹಣೆಯ ಮೇಲೆ ಒತ್ತಡವಾದಂತೆ ಅನಿಸುತ್ತದೆ. ಇದು ಆಯಾಸ, ಒತ್ತಡ, ನಿದ್ರೆಯ ಕೊರತೆ ಅಥವಾ ದೀರ್ಘಕಾಲದ ಸ್ಕ್ರೀನ್ ಸಮಯದಿಂದ ಉಂಟಾಗಬಹುದು. ಮತ್ತೊಂದೆಡೆ, ಮೈಗ್ರೇನ್ ನೋವು ಹೆಚ್ಚಾಗಿ ತೀಕ್ಷ್ಣವಾಗಿರುತ್ತದೆ ಮತ್ತು ತಲೆಯ ಒಂದು ಬದಿಯಲ್ಲಿ ನೋವಿರುತ್ತದೆ. ಮೈಗ್ರೇನ್ ತಲೆನೋವಿನ ಜೊತೆಗೆ ವಾಂತಿ, ವಾಕರಿಕೆಯನ್ನು ಉಂಟುಮಾಡಬಹುದು. ಅದಲ್ಲದೆ ಈ ನೋವು ಹಲವಾರು ದಿನಗಳವರೆಗೆ ಇರುತ್ತದೆ, ಆದರೆ ಸಾಮಾನ್ಯ ತಲೆನೋವನ್ನು ವಿಶ್ರಾಂತಿ ಅಥವಾ ಔಷಧಿಗಳಿಂದ ನಿವಾರಿಸಬಹುದು, ಮೈಗ್ರೇನ್‌ಗೆ ವಿಶೇಷ ಚಿಕಿತ್ಸೆ ಮತ್ತು ಮುನ್ನೆಚ್ಚರಿಕೆಗಳು ಬೇಕಾಗುತ್ತವೆ. ಅದಕ್ಕಾಗಿಯೇ ಎರಡರ ನಡುವಿನ ವ್ಯತ್ಯಾಸವನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ.

ಮೈಗ್ರೇನ್ ತಡೆಗಟ್ಟಲು ಸಲಹೆಗಳು:

ಜೀವನಶೈಲಿಯ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಮೈಗ್ರೇನ್ ತಡೆಗಟ್ಟಬಹುದು. ಪ್ರತಿನಿತ್ಯ ಸರಿಯಾಗಿ ನಿದ್ರೆ ಮಾಡುವ ಮೂಲಕ ಸರಿಯಾದ ವೇಳಾಪಟ್ಟಿಯನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಪ್ರಕಾಶಮಾನವಾದ ಬೆಳಕು, ಜೋರಾಗಿ ಬರುವ ಶಬ್ದ ಮತ್ತು ಅತಿಯಾಗಿ ಮೊಬೈಲ್ ಅಥವಾ ಟಿವಿ ನೋಡುವುದನ್ನು ಕಡಿಮೆ ಮಾಡಿ. ಹೆಚ್ಚಿನ ಒತ್ತಡ ಮೈಗ್ರೇನ್‌ ಹೆಚ್ಚಿಸುತ್ತದೆ, ಹಾಗಾಗಿ ಯೋಗ, ಧ್ಯಾನ ಮತ್ತು ಆಳವಾದ ಉಸಿರಾಟವನ್ನು ಅಭ್ಯಾಸ ಮಾಡಿ. ಅದೆಲ್ಲದರ ಜೊತೆಗೆ ದೀರ್ಘಕಾಲ ಹಸಿವಿನಿಂದ ಇರಬೇಡಿ. ಸಮತೋಲಿತ ಆಹಾರ ಸೇವನೆ ಮಾಡಿ. ಕೆಫೀನ್, ಕರಿದ ಮತ್ತು ಸಂಸ್ಕರಿಸಿದ ಆಹಾರಗಳ ಸೇವನೆಯನ್ನು ಕಡಿಮೆ ಮಾಡಿ. ಅಗತ್ಯವಿದ್ದರೆ ವೈದ್ಯರು ಸೂಚಿಸಿದಂತೆ ಔಷಧಿಗಳನ್ನು ತೆಗೆದುಕೊಳ್ಳಿ.

ಇದನ್ನೂ ಓದಿ: ಸಣ್ಣ ತಲೆನೋವು ಎಂದು ನಿರ್ಲಕ್ಷ್ಯ ಮಾಡಿದರೆ ದೃಷ್ಟಿ ಕಳೆದುಕೊಳ್ಳಬೇಕಾದೀತು ಎಚ್ಚರ!

ತಲೆನೋವನ್ನು ತಡೆಯಲು ಸಲಹೆಗಳು:

ಸಾಮಾನ್ಯ ತಲೆನೋವನ್ನು ತಡೆಗಟ್ಟಲು, ದೈನಂದಿನ ಅಭ್ಯಾಸಗಳ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯ. ಜೊತೆಗೆ ನಿರ್ಜಲೀಕರಣವು ತಲೆನೋವಿಗೆ ಕಾರಣವಾಗುವುದರಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಿ. ಮೊಬೈಲ್ ಅಥವಾ ಕಂಪ್ಯೂಟರ್ ಅನ್ನು ದೀರ್ಘಕಾಲ ನೋಡುವುದನ್ನು ತಪ್ಪಿಸಿ ಮತ್ತು ಕಣ್ಣುಗಳಿಗೆ ನಿಯಮಿತವಾಗಿ ವಿಶ್ರಾಂತಿ ನೀಡಿ. ಒತ್ತಡವನ್ನು ಕಡಿಮೆ ಮಾಡಿ ಮತ್ತು ಲಘು ವ್ಯಾಯಾಮ ಮಾಡಿ. ಸರಿಯಾದ ಭಂಗಿಯಲ್ಲಿ ಕುಳಿತುಕೊಳ್ಳಿ ಮತ್ತು ಕುತ್ತಿಗೆ, ಭುಜಗಳ ಮೇಲೆ ಹೆಚ್ಚು ಒತ್ತಡ ಹೇರುವುದನ್ನು ತಪ್ಪಿಸಿ. ಸಮಯಕ್ಕೆ ಸರಿಯಾಗಿ ಆಹಾರ ಸೇವನೆ ಮಾಡುವುದನ್ನು ಮತ್ತು ಸರಿಯಾಗಿ ನಿದ್ರೆ ಮಾಡುವುದರಿಂದ ತಲೆನೋವನ್ನು ತಡೆಯಬಹುದು. ತಲೆನೋವು ಆಗಾಗ ಬರುತ್ತಿದ್ದರೆ, ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’: ತೆಲುಗು ರಾಜ್ಯಗಳ ವಿತರಣೆ ಹಕ್ಕು ಮಾರಾಟ: ಬೃಹತ್ ಮೊತ್ತ ಕೊಟ್ಟ ದಿಲ್ ರಾಜು – Kannada News | Toxic movie distribution rights of Andhra and Telangana sold for record price

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಈ ಸಿನಿಮಾ ಬಿಡುಗಡೆ ಮುಂದಿನ ತಿಂಗಳು ಆಗಲಿದ್ದು, ಸಿನಿಮಾಕ್ಕೆ ಅದ್ಯಾವ ಪರಿ ಬೇಡಿಕೆ ಇದೆಯೆಂದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ದಾಖಲೆಗಳನ್ನು ಬರೆಯುತ್ತಿದೆ, ಪ್ಯಾನ್-ಇಂಡಿಯಾ ಸಿನಿಮಾಗಳ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಇದೀಗ ಸಿನಿಮಾದ ವಿತರಣೆ ಹಕ್ಕು ಮಾರಾಟದಲ್ಲಿ ಚಿತ್ರತಂಡ ತೊಡಗಿಕೊಂಡಿದ್ದು, ನೆರೆಯ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ವಿತರಣೆ ಹಕ್ಕುಗಳು ಭಾರಿ ದೊಡ್ಡ ಮೊತ್ತಕ್ಕೆ ಮಾರಾಟವಾಗಿವೆ.

ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಮತ್ತು ವಿತರಕ ದಿಲ್ ರಾಜು ಅವರ ಒಡೆತನದ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ (SVC) ‘ಟಾಕ್ಸಿಕ್’ ಚಿತ್ರದ ಆಂಧ್ರಪ್ರದೇಶ ಮತ್ತು ತೆಲಂಗಾಣದ ವಿತರಣಾ ಹಕ್ಕನ್ನು ಖರೀದಿ ಮಾಡಿದ್ದು, ಬರೋಬ್ಬರಿ ₹120 ಕೋಟಿ (advance on commission basis) ಮುಂಗಡ ನೀಡಿ ಖರೀದಿ ಮಾಡಿದೆ. ಇದು ಕಮಿಷನ್ ಆಧಾರದಲ್ಲಿ ಆಗಿರುವ ಒಪ್ಪಂದ ಎನ್ನಲಾಗುತ್ತಿದ್ದು, ತೆಲುಗು ಅಲ್ಲದ ಸಿನಿಮಾವೊಂದು ಆಂಧ್ರ-ತೆಲಂಗಾಣದಲ್ಲಿ ಪಡೆದ ಅತಿ ದೊಡ್ಡ ಮೊತ್ತ ಇದಾಗಿದೆ. ತಮಿಳಿನ ಸಿನಿಮಾಗಳ ವಿತರಣೆ ಹಕ್ಕುಗಳು ಸಹ ಇಷ್ಟು ದೊಡ್ಡ ಮೊತ್ತಕ್ಕೆ ಮಾರಾಟವಾಗಿದ್ದಿಲ್ಲ.

‘ಟಾಕ್ಸಿಕ್’ ಸಿನಿಮಾದ ವಿತರಣೆ ಹಕ್ಕು ಪಡೆಯಲು ತೆಲುಗಿನ ಕೆಲವು ದೊಡ್ಡ ವಿತರಣಾ ಸಂಸ್ಥೆಗಳ ನಡುವೆ ಪೈಪೋಟಿ ನಡೆದು ಅಂತಿಮವಾಗಿ ದಿಲ್ ರಾಜು ಅವರ ಸಂಸ್ಥೆಯು ಈ ಹಕ್ಕನ್ನು ತನ್ನದಾಗಿಸಿಕೊಂಡಿದೆ. ಈ ಬಗ್ಗೆ ಮಾತನಾಡಿರುವ ದಿಲ್ ರಾಜು, ‘”ಕೆಜಿಎಫ್ 2’ ಬಳಿಕ ಯಶ್ ಅವರ ಮಾರುಕಟ್ಟೆ ಜಾಗತಿಕ ಮಟ್ಟದಲ್ಲಿ ಬೆಳೆದಿದೆ. ಈ ಚಿತ್ರಕ್ಕಾಗಿ ಪ್ರೇಕ್ಷಕರು ನಾಲ್ಕು ವರ್ಷಗಳಿಂದ ಕಾಯುತ್ತಿದ್ದಾರೆ. ‘ಟಾಕ್ಸಿಕ್’ ಮೇಲಿರುವ ನಿರೀಕ್ಷೆಗಳು ಅಪಾರ. ‘ಟಾಕ್ಸಿಕ್’ ಸಿನಿಮಾವನ್ನು ವಿತರಣೆ ಮಾಡಲು ನಾವು ಉತ್ಸುಕರಾಗಿದ್ದೇವೆ’ ಎಂದಿದ್ದಾರೆ.

ಇದನ್ನೂ ಓದಿ: ಟಾಕ್ಸಿಕ್ ಪ್ರಚಾರದಲ್ಲಿ ವಿಳಂಬ ಏಕೆ? ಯಶ್ ಮಾಡುತ್ತಿರುವ ಯೋಜನೆಯೇನು?

ಗೀತು ಮೋಹನ್ ದಾಸ್ ಮತ್ತು ಯಶ್ ಜಂಟಿಯಾಗಿ ಬರೆದಿರುವ ‘ಟಾಕ್ಸಿಕ್’ ಸಿನಿಮಾಕ್ಕೆ ಗೀತು ಅವರೇ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಿನಿಮಾದಲ್ಲಿ ಅಂತರಾಷ್ಟ್ರೀಯ ಮಟ್ಟದ ತಾಂತ್ರಿಕ ತಂಡ ಕೆಲಸ ಮಾಡುತ್ತಿದೆ ಛಾಯಾಗ್ರಹಣವನ್ನು ರಾಷ್ಟ್ರ ಪ್ರಶಸ್ತಿ ವಿಜೇತ ರಾಜೀವ್ ರವಿ ಮಾಡಿದ್ದಾರೆ. ಸಂಗೀತವನ್ನು ರವಿ ಬಸ್ರೂರು ನೀಡಿದ್ದಾರೆ. ಸಂಕಲನ ಜವಾಬ್ದಾರಿಯನ್ನು ಉಜ್ವಲ್ ಕುಲಕರ್ಣಿ ನಿರ್ವಹಿಸಿದ್ದಾರೆ. ಸಾಹಸ ನಿರ್ದೇಶನ ಮಾಡಿರುವುದು ಹಾಲಿವುಡ್‌ನ ಜೆಜೆ ಪೆರ್ರಿ ಅವರ ಜೊತೆಗೆ ಅನ್ಬರಿವ್ ಮತ್ತು ಕೆಚಾ ಖಂಪಾಕ್ಡಿ ಸಹ ಇದ್ದಾರೆ.

ಇನ್ನು ಈ ಸಿನಿಮಾನಲ್ಲಿ ಹಲವು ಟಾಪ್ ನಾಯಕಿಯರು ಒಟ್ಟಿಗೆ ನಟಿಸಿದ್ದಾರೆ. ಕಿಯಾರಾ ಅಡ್ವಾಣಿ, ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಕೆಲವು ಜನಪ್ರಿಯ ವಿದೇಶಿ ನಟ-ನಟಿಯರು ಸಹ ಈ ಸಿನಿಮಾನಲ್ಲಿ ನಟಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾವನ್ನು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿಯ ಜೊತೆಗೆ ಇಂಗ್ಲಿಷ್ ಭಾಷೆಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸಿನಿಮಾವನ್ನು ಏಕಕಾಲದಲ್ಲಿ ಕನ್ನಡ ಮತ್ತು ಇಂಗ್ಲೀಷ್​​ನಲ್ಲಿ ಚಿತ್ರೀಕರಣ ಮಾಡಲಾಗಿರುವುದು ವಿಶೇಷ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವೆಂಕಟ್ ಕೆ ನಾರಾಯಣ ಮತ್ತು ಯಶ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 2:59 pm, Fri, 6 February 26

Source link

Video: ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ – Kannada News | Pariksha Pe Charcha, I Have Still Got 25 Years to Go, PM Modi Jokes After Birthday Call

ನವದೆಹಲಿ, ಫೆಬ್ರವರಿ 06: ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮೋದಿ ಹಳೆಯ ಕೆಲವು ವಿಚಾರಗಳನ್ನು ಮೆಲುಕು ಹಾಕಿದ್ದಾರೆ. ತಮ್ಮ 75ನೇ ಜನ್ಮ ದಿನದಂದು ಅವರಿಗೆ ಅಭಿನಂದನೆ ಸಲ್ಲಿಸಲು ಕರೆ ಮಾಡಿದಾಗ ತಾವು ಇನ್ನೂ 25 ವರ್ಷಗಳು ಬಾಕಿ ಇವೆಯಲ್ಲ ಎಂದು ಹೇಳಿದ್ದಾಗಿ ನೆನಪಿಸಿಕೊಂಡರು. ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ ಎಂದು ಮಕ್ಕಳಲ್ಲಿ ಹೇಳಿದ್ದಾರೆ. ಶಿಕ್ಷಣವು ಹೊರೆಯಾಗಬಾರದು ಮತ್ತು ಪ್ರತಿಯೊಬ್ಬರೂ ಅದರಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಮನರಂಜನೆಗಾಗಿ ಗೇಮಿಂಗ್‌ನಲ್ಲಿ ಸಮಯ ವ್ಯರ್ಥ ಮಾಡದಂತೆ ಪ್ರಧಾನಿ ಮೋದಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version