ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ

ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ

ನವದೆಹಲಿ, ಏಪ್ರಿಲ್ 13:ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ಕೇವಲ ಪಾಲುದಾರರಲ್ಲ, ಬದಲಾಗಿ ಅವರು ನಿರ್ಧಾರ ಕೈಗೊಳ್ಳುವ ನಾಯಕಿಯರಾಗಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾರಿ ಶಕ್ತಿ ವಂದನ ಸಮ್ಮೇಳನದಲ್ಲಿ ಮಾತನಾಡಿದ್ದಾರೆ. 2023ರ ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಲಾದ ‘ನಾರಿ ಶಕ್ತಿ ವಂದನ ಕಾಯ್ದೆ’ ಭಾರತದ ರಾಜಕೀಯ ಇತಿಹಾಸದಲ್ಲೇ ಒಂದು ಕ್ರಾಂತಿಕಾರಿ ಬದಲಾವಣೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು (ಮೂರನೇ ಒಂದು ಭಾಗ) ಮೀಸಲಾತಿ ನೀಡುವ ಈ ಕಾಯ್ದೆಯು ಈಗ ಅನುಷ್ಠಾನದ ಹಂತಕ್ಕೆ ಬಂದಿದೆ.

ಈ ನಿಟ್ಟಿನಲ್ಲಿ ಏಪ್ರಿಲ್ 16 ರಿಂದ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಇಂದಿನ ಸಮ್ಮೇಳನವು ಭದ್ರ ಬುನಾದಿ ಹಾಕಲಿದೆ.ವಿಜ್ಞಾನ, ಕ್ರೀಡೆ, ಉದ್ಯಮಶೀಲತೆ, ಕಲೆ ಮತ್ತು ಮಿಲಿಟರಿ ಸೇರಿದಂತೆ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕರನ್ನು ಒಂದೇ ವೇದಿಕೆಗೆ ತರುವುದು.2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯಲ್ಲಿ ಮಹಿಳಾ ಸಬಲೀಕರಣವನ್ನು ಕೇಂದ್ರ ಸ್ತಂಭವಾಗಿ ಸ್ಥಾಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಎರಡು ಬೆಕ್ಕುಗಳ ಮಿಲನ, ನಾಲ್ಕು ಮರಿ ಜನನ: ಮಾಲೀಕರ ಕಿತ್ತಾಟ ಜೋರಾದ ಬೆನ್ನಲ್ಲೇ ಪೊಲೀಸ್ ಎಂಟ್ರಿ!

ಬೆಂಗಳೂರು, ಏಪ್ರಿಲ್ 13: ಅಕ್ಕಪಕ್ಕದ ಮನೆಗಳ ನಡುವೆ ಬೆಕ್ಕುಗಳ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ಶೇಷಾದ್ರಿಪುರದಲ್ಲಿ (Bengaluru) ನಡೆದಿದೆ. ಒಂದು ಮನೆಯ ಹೆಣ್ಣು ಬೆಕ್ಕು ಹಾಗೂ ಪಕ್ಕದ ಮನೆಯ ಗಂಡು ಬೆಕ್ಕಿನ ನಡುವಿನ ಸಂಪರ್ಕದಿಂದ ನಾಲ್ಕು ಮರಿಗಳು ಜನಿಸಿದ್ದು, ಈ ವಿಚಾರವೇ ಎರಡು ಕುಟುಂಬಗಳ ನಡುವೆ ವಿವಾದಕ್ಕೆ ಕಾರಣವಾಗಿದೆ.

ಅತಿರೇಕಕ್ಕೆ ತಿರುಗಿದ ಗಲಾಟೆ

ತಮ್ಮ ಮನೆಯ ಹೆಣ್ಣು ಬೆಕ್ಕಿನ ಜೊತೆ ನಾಲ್ಕು ಮರಿಗಳೂ ಮನೆಗೆ ಸೇರಿರುವುದನ್ನು ಕಂಡ ಮಾಲೀಕರು ಪಕ್ಕದ ಮನೆಯವರೊಂದಿಗೆ ಜಗಳಕ್ಕಿಳಿದಿದ್ದಾರೆ. ಈ ಮರಿಗಳು ಗಂಡು ಬೆಕ್ಕಿನದ್ದೇ ಎಂದು ವಿವಾದಕ್ಕಿಳಿದ ಹೆಣ್ಣು ಬೆಕ್ಕಿನ ಮಾಲೀಕರು ಮರಿಗಳನ್ನು ಗಂಡು ಬೆಕ್ಕಿನ ಮನೆಯ ಮುಂದೆ ಬಿಸಾಡಿ ಜಗಳ ನಡೆಸಿದ್ದಾರೆ ಎನ್ನಲಾಗಿದೆ.ವಿವಾದದ ವೇಳೆ ಗಂಭೀರ ಆರೋಪಗಳೂ ಕೇಳಿಬಂದಿದ್ದು, ಹೆಣ್ಣು ಬೆಕ್ಕಿನ ಮನೆಯವರು ಆಕ್ರೋಶದಿಂದ ನಿಮ್ಮ ಮಕ್ಕಳಿಗೆ ಆಸಿಡ್ ಹಾಕುತ್ತೀನಿ ಎಂದು ಅತಿರೇಕದ ಮಾತನ್ನಾಡಿದ್ದಾರೆಂದು ಪಕ್ಕದ ಮನೆಯವರು ಆರೋಪಿಸಿದ್ದಾರೆ.

ಇದನ್ನೂ ಓದಿ ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ತಾಯಿಯಲ್ಲದೆ ಮರಿಗಳು ಅನಾಥ!

ಈ ಗಲಾಟೆಯ ನಡುವೆ ಮರಿಗಳು ತಾಯಿಯಿಂದ ದೂರವಾಗಿ ದಿಕ್ಕಾಪಾಲಾಗಿದ್ದು, ತಾಯಿ ಬೆಕ್ಕು ತನ್ನ ಮರಿಗಳನ್ನು ಹುಡುಕುತ್ತ ನರಳುತ್ತಿದೆ. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆ ಗಂಡು ಬೆಕ್ಕಿನ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಶೇಷಾದ್ರಿಪುರ ಪೊಲೀಸರು ಎರಡೂ ಪಕ್ಷಗಳನ್ನು ಸಮಾಧಾನಪಡಿಸಿ ಜಗಳವನ್ನು ಶಮನಗೊಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚನ್ನಗಿರಿ: ಬಿಯರ್ ಬಾಕ್ಸ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!

ದಾವಣಗೆರೆ, ಏಪ್ರಿಲ್ 13: ಹಾಸನದಿಂದ ಚಿಕ್ಕೋಡಿಗೆ ‘ಪವರ್ ಕೂಲ್’ ಬಿಯರ್ ಟಿನ್ ಬಾಕ್ಸ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಬಳಿ ನಡೆದಿದೆ. ರಾಜ್ಯ ಹೆದ್ದಾರಿಯ ಪಕ್ಕದಲ್ಲಿದ್ದ ಸೇತುವೆಗೆ ಡಿಕ್ಕಿ ಹೊಡೆದ ಲಾರಿ, ಪಕ್ಕದ ಅಡಿಕೆ ತೋಟಕ್ಕೆ ಉರುಳಿ ಬಿದ್ದಿದೆ. ಅಪಘಾತದ ಭೀಕರತೆಗೆ ಲಾರಿಯಲ್ಲಿದ್ದ ಸಾವಿರಾರು ಬಿಯರ್ ಟಿನ್‌ಗಳು ತೋಟದಾದ್ಯಂತ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಸುರಕ್ಷಿತವಾಗಿದ್ದ ಬಾಟಲಿಗಳನ್ನು ಮತ್ತೊಂದು ಲಾರಿಗೆ ವರ್ಗಾಯಿಸಿದರು. ಕತ್ತಲೆಯ ಲಾಭ ಪಡೆದು ಸ್ಥಳೀಯರು ಕೆಲ ಬಿಯರ್ ಬಾಕ್ಸ್‌ಗಳನ್ನು ಹೊತ್ತೊಯ್ದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಯ್​ಫ್ರೆಂಡ್ನ ಮದುವೆಯಾಗಲು ಹೆತ್ತವರಿಗೆ ವಿಷ ಉಣಿಸಿದ ಅಪ್ರಾಪ್ತ ಮಗಳು

ಮರೆನಾ, ಏಪ್ರಿಲ್ 13: ಅಪ್ರಾಪ್ತ ಬಾಲಕಿಯೊಬ್ಬಳು ಬಾಯ್​ಫ್ರೆಂಡ್​ನನ್ನು ಮದುವೆಯಾಗಲು ತನ್ನ ಹೆತ್ತವರಿಗೆ ವಿಷ(Poison) ಉಣಿಸಿರುವ ಘಟನೆ ಮಧ್ಯಪ್ರದೇಶದ ಮರೆನಾದಲ್ಲಿ ನಡೆದಿದೆ. ಮನುಷ್ಯತ್ವಕ್ಕೇ ಕಪ್ಪುಚುಕ್ಕಿ ಇಡುವಂತಹ ಘಟನೆಯೊಂದು ನಡೆದಿದೆ. ಪ್ರೀತಿಯ ಅಮಲಿನಲ್ಲಿ ಕುರುಡಾದ ಮಗಳೊಬ್ಬಳು, ಹೆತ್ತವರನ್ನೇ ಮುಗಿಸಲು ಸಂಚು ರೂಪಿಸಿದ ಕರಾಳ ಕಥೆ ಇಲ್ಲಿದೆ.
ಹೆತ್ತವರು ಮಗಳ ಮೇಲೆ ಇಟ್ಟಿದ್ದ ನಂಬಿಕೆ ಹುಸಿಯಾಗಿದೆ, ಚಪಾತಿಯಲ್ಲಿ ಇಲಿ ಪಾಷಾಣ ಬೆರೆಸಿ ಪೋಷಕರಿಗೆ ನೀಡಿರುವ ಘಟನೆ ಬೆಳಕಿಗೆ . ಮೊರೆನಾ ಜಿಲ್ಲೆಯ ಪೋರ್ಸಾ ಎಂಬಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಗೆಳೆಯನ ಜೊತೆ ಸೇರಿ ತಂದೆ-ತಾಯಿಯನ್ನೇ ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.

ತನ್ನ ಪ್ರೇಮಕ್ಕೆ ಅಡ್ಡಿಯಾಗುತ್ತಾರೆಂಬ ಕಾರಣಕ್ಕೋ ಏನೋ, ಈ ಬಾಲಕಿ ತನ್ನ ಗೆಳೆಯ ಸುದಾಮನ ಜೊತೆ ಸೇರಿ ಕ್ರೂರ ಯೋಜನೆಯೊಂದನ್ನು ರೂಪಿಸಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ, ತಾನೇ ಅಡುಗೆ ಮಾಡುವ ಜವಾಬ್ದಾರಿ ವಹಿಸಿಕೊಂಡ ಬಾಲಕಿ, ಚಪಾತಿಯ ಹಿಟ್ಟಿನಲ್ಲಿ ಇಲಿ ವಿಷವನ್ನು ಬೆರೆಸಿದ್ದಾಳೆ. ಇದನ್ನು ತಿಂದ ತಾಯಿ ಮಿಥಿಲೇಶ್ ಮತ್ತು ತಂದೆ ಗಬ್ಬರ್ ಪ್ರಜಾಪತಿ ಅವರ ಆರೋಗ್ಯ ತಕ್ಷಣವೇ ಹದಗೆಟ್ಟಿದೆ. ಸದ್ಯ ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದ್ದು, ಮೊರೆನಾದಿಂದ ಗ್ವಾಲಿಯರ್‌ನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ.

ಈ ಪ್ರಕರಣವು ಆರಂಭದಲ್ಲಿ ಕೇವಲ ಫುಡ್​ಪಾಯ್ಸನ್​ನಂತೆ ತೋರಿತ್ತು. ಆದರೆ ಪೊಲೀಸರಿಗೆ ಸಿಕ್ಕ ಒಂದು ಆಡಿಯೋ ಕ್ಲಿಪ್ ಇಡೀ ಕಥೆಯನ್ನೇ ಬದಲಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಆಡಿಯೋದಲ್ಲಿ ಬಾಲಕಿ ಮತ್ತು ಆಕೆಯ ಗೆಳೆಯ ಸುದಾಮ ಪರಸ್ಪರ ಸಂಚು ಹೂಡುತ್ತಿರುವುದು ಸ್ಪಷ್ಟವಾಗಿದೆ.

ಮತ್ತಷ್ಟು ಓದಿ: ಮೌಂಟ್ ಎವರೆಸ್ಟ್​ ಪರ್ವತಾರೋಹಿಗಳಿಗೆ ವಿಷ ನೀಡಿದ ಆರೋಪ; 185 ಕೋಟಿ ರೂ. ಹಗರಣ ಬಯಲು

ಹತ್ತಿರದಲ್ಲೇ ಗೊಬ್ಬರದ ಅಂಗಡಿ ಇದೆ, ಅಲ್ಲಿಂದ ಇಲಿ ವಿಷ ತಂದಿಟ್ಟುಕೊ. ಇವತ್ತು ನಾನೇ ರೊಟ್ಟಿ ಮಾಡುತ್ತಿದ್ದೇನೆ, ನನಗೆ ಒಳ್ಳೆಯ ಅವಕಾಶ ಸಿಕ್ಕಿದೆ. ರೊಟ್ಟಿಯಲ್ಲಿ ವಿಷ ಬೆರೆಸಿ ಅವರಿಗೆ ತಿನ್ನಿಸಿಬಿಡುತ್ತೇನೆ ಎಂದು ಆಕೆ ಹೇಳಿದ್ದಳು. ಈ ಒಂದು ಸಂಭಾಷಣೆ ಪೊಲೀಸರ ಕೈಗೆ ಸಿಕ್ಕ ನಂತರವೇ ಮಗಳ ಕ್ರೂರ ಮುಖ ಅನಾವರಣಗೊಂಡಿತು.

ಪೋಷಕರಾದ ಮಿಥಿಲೇಶ್ ಮತ್ತು ಗಬ್ಬರ್ ಪ್ರಜಾಪತಿ ಅವರು ಪ್ರಾಣಾಪಾಯದಿಂದ ಪಾರಾದ ನಂತರ ಪೋರ್ಸಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಡಿಯೋ ಸಾಕ್ಷ್ಯ ಮತ್ತು ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಅಪ್ರಾಪ್ತ ಬಾಲಕಿ ಮತ್ತು ಆಕೆಯ ಗೆಳೆಯ ಸುದಾಮನ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಇಬ್ಬರನ್ನೂ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಪ್ರೀತಿಯ ಹೆಸರಿನಲ್ಲಿ ಹೆತ್ತವರನ್ನೇ ಬಲಿ ಕೊಡಲು ಹೊರಟ ಮಗಳ ಈ ಕೃತ್ಯ ಇಡೀ ಸಮಾಜವನ್ನು ಬೆಚ್ಚಿಬೀಳಿಸಿದೆ. ಸಂಬಂಧಗಳ ನಡುವಿನ ನಂಬಿಕೆ ಎಷ್ಟು ಶಿಥಿಲವಾಗಿದೆ ಎಂಬುದಕ್ಕೆ ಈ ಘಟನೆ ಕನ್ನಡಿಯಂತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಅಕ್ಷಯ್ ಕುಮಾರ್ ನನ್ನ ಹಾಗೂ ಪ್ರಿಯಾಂಕಾನ ಅಣ್ಣನಂತೆ ರಕ್ಷಿಸಿದ್ರು ’

ನಟ ಅಕ್ಷಯ್ ಕುಮಾರ್ ಅವರು ಇಂದು ಸ್ಟಾರ್ ಹೀರೋ. ಅವರಿಗೆ ಭಾರತದಲ್ಲಿ ಮಾತ್ರವಲ್ಲದೆ ಭಾರತದ ಹೊರಗೆಯೂ ತುಂಬಾ ದೊಡ್ಡ ಅಭಿಮಾನಿ ಬಳಗ ಇದೆ. 2003ರ ವರ್ಷ ನಟನಿಗೆ ಮಾತ್ರವಲ್ಲದೆ ಚಿತ್ರರಂಗಕ್ಕೂ ಬಹಳ ವಿಶೇಷವಾಗಿತ್ತು. ಏಕೆಂದರೆ ಈ ವರ್ಷ, ನಟಿಯರಾದ ಲಾರಾ ದತ್ ಮತ್ತು ಪ್ರಿಯಾಂಕಾ ಚೋಪ್ರಾ ‘ಅಂದಾಜ್’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಇತ್ತೀಚಿನ ಸಂದರ್ಶನವೊಂದರಲ್ಲಿ, ಲಾರಾ ಅವರು ಅಕ್ಷಯ್ ಕುಮಾರ್ ಬಗ್ಗೆ ಮಾತನಾಡಿದ್ದಾರೆ.

‘ಪ್ರಿಯಾಂಕಾ ಮತ್ತು ನಾನು ಒಟ್ಟಿಗೆ ಚಿತ್ರರಂಗಕ್ಕೆ ಬಂದೆವು. ಆಗ ನಾವಿಬ್ಬರೂ ತುಂಬಾ ಚಿಕ್ಕವರಾಗಿದ್ದೆವು. ಆದರೆ ಕನಸು ದೊಡ್ಡದಾಗಿತ್ತು. ದರೆ ನಮಗೆ ಸರಿಯಾದ ಮಾರ್ಗವನ್ನು ತೋರಿಸಲು ಗಾಡ್‌ಫಾದರ್ ಇರಲಿಲ್ಲ. ಆದ್ದರಿಂದ ನಮ್ಮ ಲಾಭವನ್ನು ಪಡೆಯುವ ಬದಲು, ಅಕ್ಷಯ್ ಕುಮಾರ್ ನಮಗೆ ಅಣ್ಣನಂತೆ ದಾರಿ ತೋರಿಸಿದರು’ ಎಂದಿದ್ದಾರೆ ಲಾರಾ.

‘ನೀವು ಬಾಲಿವುಡ್‌ಗೆ ಹೊಸಬರಾದಾಗ, ನಿಮ್ಮನ್ನು ಸುರಕ್ಷಿತವಾಗಿರಿಸಿಕೊಳ್ಳುವುದು ತುಂಬಾ ಕಷ್ಟ. ಅಕ್ಷಯ್ ನಮ್ಮ ಅಸಹಾಯಕತೆ ಅಥವಾ ಅನನುಭವದ ಲಾಭವನ್ನು ಎಂದಿಗೂ ಪಡೆಯಲಿಲ್ಲ. ಇದಕ್ಕೆ ವಿರುದ್ಧವಾಗಿ, ನಮ್ಮ ಸುತ್ತಲಿನ ಪರಿಸರ ಸುರಕ್ಷಿತವಾಗಿರುವಂತೆ ಮತ್ತು ನಾವು ಯಾವುದೇ ರೀತಿಯಲ್ಲಿ ಶೋಷಣೆಗೆ ಒಳಗಾಗದಂತೆ ಅವರು ನೋಡಿಕೊಂಡರು’ ಎಂದು ಲಾರಾ ಅಕ್ಷಯ್ ಕುಮಾರ್ ಅವರನ್ನು ಹೊಗಳಿದರು.

ಲಾರಾ, ಅಕ್ಷಯ್ ಮತ್ತು ಪ್ರಿಯಾಂಕಾ ಬಗ್ಗೆ ಹೇಳುವುದಾದರೆ, ಈ ಮೂವರೂ ‘ಅಂದಾಜ್’ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಆ ಚಿತ್ರದಲ್ಲಿ ಲಾರಾ ಅವರು ಕಾಜಲ್ ಪಾತ್ರವನ್ನು ನಿರ್ವಹಿಸಿದರು ಮತ್ತು ಆ ಚಿತ್ರಕ್ಕಾಗಿ ನಟಿ ಫಿಲ್ಮ್‌ಫೇರ್ ಪ್ರಶಸ್ತಿಯನ್ನು ಸಹ ಗೆದ್ದರು.

ಇದನ್ನೂ ಓದಿ: ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್; ಹಿಗ್ಗಾಮುಗ್ಗಾ ಟ್ರೋಲ್

ಲಾರಾ ದತ್ತಾ ಬಗ್ಗೆ ಹೇಳುವುದಾದರೆ, ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರು. ಈಗ ಅವರು ‘ರಾಮಾಯಣ’ ಮತ್ತು ‘ವೆಲ್ಕಮ್ ಟು ದಿ ಜಂಗಲ್’ ಚಿತ್ರಗಳಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲಾರಾ ಸಾಮಾಜಿಕ ಮಾಧ್ಯಮದಲ್ಲಿಯೂ ಯಾವಾಗಲೂ ಸಕ್ರಿಯರಾಗಿದ್ದಾರೆ. ನಟಿ ತನ್ನ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರಲು ಯಾವಾಗಲೂ ತನ್ನ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ

IPL 2026: ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಎಲ್ಲರ ಗಮನ ಸೆಳೆದಿದ್ದು ಪಾಂಡ್ಯ ಸಹೋದರರ ಜಿದ್ದಾಜಿದ್ದು. ತಮ್ಮ ಹಾರ್ದಿಕ್ ಪಾಂಡ್ಯ ವಿಕೆಟ್ ಪತನಗೊಂಡಾಗ ಅಣ್ಣ ಕೃನಾಲ್ ಪಾಂಡ್ಯ ಸಂಭ್ರಮಿಸಿದ ರೀತಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 240 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ಹಾರ್ದಿಕ್ ಪಾಂಡ್ಯ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಬಿರುಸಿನ ಬ್ಯಾಟಿಂಗ್​ ಪ್ರದರ್ಶಿಸಿದ ಹಾರ್ದಿಕ್ ಪಾಂಡ್ಯ 22 ಎಸೆತಗಳಲ್ಲಿ 40 ರನ್ ಗಳಿಸಿ ಆರ್​ಸಿಬಿ ಪಾಲಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದರು.

ಆದರೆ, 15ನೇ ಓವರ್‌ನಲ್ಲಿ ಆರ್‌ಸಿಬಿ ವೇಗಿ ಜೇಕಬ್ ಡಫಿ ಎಸೆದ ಎಸೆತದಲ್ಲಿ ಸಿಕ್ಸರ್ ಸಿಡಿಸಲು ಹೋಗಿ ಹಾರ್ದಿಕ್ ಔಟ್ ಆದರು. ಈ ಕ್ಷಣದಲ್ಲಿ ಆರ್‌ಸಿಬಿ ಪರ ಆಡುತ್ತಿದ್ದ ಅಣ್ಣ ಕೃನಾಲ್ ಪಾಂಡ್ಯ ತೋರಿದ ಪ್ರತಿಕ್ರಿಯೆ ಎಲ್ಲರನ್ನೂ ದಂಗಾಗುವಂತೆ ಮಾಡಿತು

ಸಾಮಾನ್ಯವಾಗಿ ಅಣ್ಣ ಅಥವಾ ತಮ್ಮ ಔಟ್ ಆದಾಗ ಆಟಗಾರರು ಮೌನವಾಗಿರುತ್ತಾರೆ ಅಥವಾ ಸಾಧಾರಣವಾಗಿ ಸಂಭ್ರಮಿಸುತ್ತಾರೆ. ಆದರೆ ಇಲ್ಲಿ ಕೃನಾಲ್ ಪಾಂಡ್ಯ ಅವರು ಹಾರ್ದಿಕ್ ಔಟ್ ಆಗುತ್ತಿದ್ದಂತೆ ಬೌಲರ್‌ಗಿಂತಲೂ ಮಿಗಿಲಾಗಿ ಕುಣಿದು ಕುಪ್ಪಳಿಸಿದರು. ಅವರ ಮುಖದಲ್ಲಿದ್ದ ಆವೇಶ ಮತ್ತು ಸಂಭ್ರಮ ಕಂಡು ಸ್ವತಃ ಹಾರ್ದಿಕ್ ಪಾಂಡ್ಯ ಕೂಡ ಪೆವಿಲಿಯನ್‌ಗೆ ಮರಳುವಾಗ ಒಮ್ಮೆ ಅಣ್ಣನತ್ತ ತಿರುಗಿ ನೋಡುವಂತಾಯಿತು.

ಸಹೋದರರ ನಡುವೆ ಬಿರುಕು?

ಈ ಸಂಭ್ರಮದ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳು ಮೂಡಿವೆ. 2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಅಮೋಘ ಪ್ರದರ್ಶನ ನೀಡಿದಾಗಲೂ ಕೃನಾಲ್ ಮೈದಾನಕ್ಕೆ ಬಂದಿರಲಿಲ್ಲ ಅಥವಾ ಸೋಶಿಯಲ್ ಮೀಡಿಯಾದಲ್ಲಿ ಅಭಿನಂದಿಸಿರಲಿಲ್ಲ.

ಇದೀಗ ತಮ್ಮ ಔಟಾಗುತ್ತಿದ್ದಂತೆ ಕೃನಾಲ್ ಪಾಂಡ್ಯ ವಿಚಿತ್ರವಾಗಿ ಸಂಭ್ರಮಿಸುವ ಮೂಲಕ ಇಬ್ಬರ ನಡುವೆ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಪುಷ್ಠಿ ನೀಡಿದ್ದಾರೆ. ಇದಕ್ಕೆ ಮುಖ್ಯ ಕಾರಣ ಹಾರ್ದಿಕ್ ಪಾಂಡ್ಯ ಅವರ ವೈಯಕ್ತಿಕ ಜೀವನದಲ್ಲಿ (ವಿಚ್ಛೇದನ) ನಡೆದ ಬದಲಾವಣೆಗಳು ಎನ್ನಲಾಗುತ್ತಿದೆ.

ಅಂದರೆ ಹಾರ್ದಿಕ್ ಪಾಂಡ್ಯ ಮೊದಲ ಪತ್ನಿಗೆ ವಿಚ್ಛೇದನ ನೀಡಿ, ಹೊಸ ಗರ್ಲ್​ಫ್ರೆಂಡ್ ಜೊತೆ ಇರುವುದೇ ಸಹೋದರರ ನಡುವಣ ಬಿರುಕಿಗೆ ಕಾರಣ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ಐಪಿಎಲ್​ ವೇಳೆ ಮುಖಾಮುಖಿಯಾದಾಗ ಸದಾ ನಗುತ್ತಾ ಪೈಪೋಟಿ ನಡೆಸುತ್ತಿದ್ದ ಇಬ್ಬರು ಸಹೋದರರು ಇದೇ ಮೊದಲ ಬಾರಿ ಮುಖ ಸಿಂಡರಿಸಿಕೊಂಡು ಪಂದ್ಯ ಮುಗಿಸಿ ತೆರಳಿದ್ದಾರೆ. ಇದರೊಂದಿಗೆ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಜಗಜ್ಜಾಹೀರಾಗಿದೆ.

 

Source link

ತಾನಿಯಾಗೆ ಮೆಸೇಜ್ ಮಾಡಿದ ಚಹಾಲ್!: ಛೀ ಕಳ್ಳ.. ಫುಲ್ ವೈರಲ್​ ಮಾಡಿದ ನಟಿ

ಮುಂಬೈ, ಏ.12: ಭಾರತದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರು ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಈಗ ಅವರು ಮಾಡಿರುವ ಒಂದು ಮೆಸೇಜ್ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಖ್ಯಾತ ಉಲ್ಲು (Ullu) ಸರಣಿಗಳ ನಟಿ ತಾನಿಯಾ ಅವರಿಗೆ ಚಹಾಲ್ “ಕ್ಯೂಟ್” (Cute) ಎಂದು ಮೆಸೇಜ್ ಮಾಡಿದ್ದಾರೆ ಎಂಬ ವಿಷಯ ಈಗ ವೈರಲ್ ಆಗಿದೆ. ನಟಿ ತಾನಿಯಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅಥವಾ ತಮ್ಮ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ. ಚಹಾಲ್ ಅವರು ತಮಗೆ ಇನ್‌ಸ್ಟಾಗ್ರಾಮ್‌ನಲ್ಲಿ ಮೆಸೇಜ್ ಮಾಡಿ “ನೀವು ತುಂಬಾ ಕ್ಯೂಟ್ ಆಗಿದ್ದೀರಿ” ಎಂದು ಹೇಳಿದ್ದಾರೆ ಎಂದು ತಾನಿಯಾ ತಿಳಿಸಿದ್ದಾರೆ. ಈ ಬೆನ್ನಲ್ಲೇ ಈ ಸುದ್ದಿಯು ಕ್ರೀಡಾ ಮತ್ತು ಗ್ಲಾಮರ್ ಲೋಕದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಚಹಾಲ್ ಅವರ ಈ ಮೆಸೇಜ್ ಕುರಿತು ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡುತ್ತಿದ್ದು, ಕೆಲವರು ಇದು ಸಾಮಾನ್ಯ ಸಂಭಾಷಣೆ ಎನ್ನುತ್ತಿದ್ದರೆ, ಇನ್ನು ಕೆಲವರು ಚಹಾಲ್ ಅವರ ಕಾಲೆಳೆಯುತ್ತಿದ್ದಾರೆ. ಒಟ್ಟಿನಲ್ಲಿ ಚಹಾಲ್ ಅವರ ಈ ಒಂದು ಮೆಸೇಜ್ ಈಗ ಇಂಟರ್ನೆಟ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಯಾವ ಸಮಯ್?’; ಟೀಕಿಸಿದ ಸಮಯ್ ರೈನಾಗೆ ರಣವೀರ್ ಅಲಹಾಬಾದಿಯಾ ಖಡಕ್ ಉತ್ತರ

ರಣವೀರ್ ಅಲಹಾಬಾದಿಯಾ ಅವರು ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋಗೆ ಬಂದು ವಿವಾದ ಮಾಡಿಕೊಂಡರು. ಆ ಬಳಿಕ ಸಮಯ್ ಹಾಗೂ ರಣವೀರ್ ಮುಖಾಮುಖಿ ಆಗಿಲ್ಲ. ಇತ್ತೀಚೆಗೆ ಸಮಯ್ ರೈನಾ ಅವರ ‘ಸ್ಟಿಲ್ ಅಲೈವ್’ ಶೋನಲ್ಲಿ ಅವರು ರಣವೀರ್ ಬಗ್ಗೆ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಇದಾದ ಬಳಿಕ ಸಮಯ್ ಯಾರು ಎಂಬ ಪ್ರಶ್ನೆಯನ್ನು ರಣವೀರ್ ಅಲಹಾಬಾದಿಯಾ ಕೇಳಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ.

ರಣವೀರ್ ಅವರು ಪಾಡ್​​ಕಾಸ್ಟ್ ಮೂಲಕ ಗಮನ ಸೆಳೆದವರು. ಅವರು ಅಧ್ಯಾತ್ಮದ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಾರೆ. ಸೆಲೆಬ್ರಿಟಿಗಳ ಬಳಿ ಅವರು, ‘ಸಾವಿನ ಬಗ್ಗೆ ಏನು ಯೋಚಿಸುತ್ತೀರಿ’ ಎಂಬಿತ್ಯಾದಿ ಪ್ರಶ್ನೆಗನ್ನು ನೇರವಾಗಿ ಕೇಳುತ್ತಾರೆ. ಆದರೆ, ‘ಇಂಡಿಯಾಸ್ ಗಾಟ್ ಲೇಟೆಂಟ್ ಶೋ’ಗೆ ಬಂದು ಅವರು ಮಾಡಿಕೊಂಡ ವಿವಾದ ಚರ್ಚೆ ಹುಟ್ಟುಹಾಕಿತ್ತು. ಈ ವಿವಾದದ ಬಗ್ಗೆ ಸಮಯ್ ಇತ್ತೀಚೆಗೆ ಮಾತನಾಡಿದ್ದರು. ರಣವೀರ್ ಶೋನಲ್ಲಿ ಸಾಕಷ್ಟು ಕೆಟ್ಟ ಪದಗಳನ್ನು ಆಡಿದ್ದರು ಎಂದು ಸಮಯ್ ಹೇಳಿಕೊಂಡಿದ್ದರು. ಈ ವಿಷಯ ರಣವೀರ್​​ಗೆ ಬೇಸರ ಮೂಡಿಸಿತೇ ಎನ್ನುವ ಪ್ರಶ್ನೆ ಮೂಡಿದೆ.

ಶೈಲೇಶ್ ಪಾಂಡೆ ಹೆಸರಿನ ಪಾಪರಾಜಿ ಜೊತೆ ರಣವೀರ್ ಪೋಸ್ ಕೊಟ್ಟಿದ್ದಾರೆ. ‘ಈಗ ನಮ್ಮಿಬ್ಬರ ಸಮಯ’ ಎಂದರು ಶೈಲೇಶ್. ಇದಕ್ಕೆ ಉತ್ತರಿಸಿದ ರಣವೀರ್, ‘ಸಮಯ್? ಯಾವ ಸಮಯ್? ಎಂದು ಕೇಳಿದರು. ಆಗ ಶೈಲೇಶ್, ‘ಸಮಯ್ ಎಂದರೆ ಟೈಮ್’ ಎಂದರು. ಆಗ ರಣವೀರ್, ‘ಓಹ್ ಸಮಯ. ಈಗ ಅರ್ಥವಾಯಿತು’ ಎಂದರು. ಈ ವಿಡಿಯೋ ಚರ್ಚೆಗೆ ಕಾರಣ ಆಗಿದೆ.

ಇದನ್ನೂ ಓದಿ: ‘ಇಂಡಿಯಾ ಗಾಟ್ ಲೇಟೆಂಟ್’: ಮತ್ತೆ ಬರಲಿದ್ದಾರೆ ಸಮಯ್ ರೈನಾ

ಸಮಯ್ ರೈನಾ ಹಂಚಿಕೊಂಡ ‘ಸ್ಟಿಲ್ ಅಲೈವ್’ ಕೋಟಿ ಕೋಟಿ ವೀಕ್ಷಣೆ ಕಂಡಿದೆ. ಇಂಡಿಯಾಸ್ ಗಾಟ್ ಲೇಟೆಂಟ್​​ನ ಕೊನೆಯ ಎಪಿಸೋಡ್​​ ಅಲ್ಲಿ ಏನಾಗಿತ್ತು ಎಂಬುದರ ಸಂಪೂರ್ಣ ವಿವರವನ್ನು ಸಮಯ್ ನೀಡಿದರು. ‘ಸದಾ ಕೆಟ್ಟದ್ದನ್ನೇ ಮಾತನಾಡುವ ವ್ಯಕ್ತಿ ಕೆಟ್ಟದನ್ನೇ ಮಾತನಾಡಿದರೆ ಯಾರೂ ಏನು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಒಳ್ಳೆಯದನ್ನು ಮಾತನಾಡುವ ವ್ಯಕ್ತಿ ಕೆಟ್ಟದನ್ನು ಮಾತನಾಡಿದರೆ ಅದನ್ನು ಯಾರೂ ಸಹಿದಲ್ಲ’ ಎಂದಿದ್ದರು ಸಮಯ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಬೆಂಗಳೂರು, ಏಪ್ರಿಲ್ 13: ನಗರದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ (Stray Dogs)  ಹಾವಳಿ ಹೆಚ್ಚಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ನಾಯಿ ದಾಳಿಗೆ ಹೆದರಿ ಓಡಾಡುವ ಪರಿಸ್ಥಿತಿ ಎದುರಾಗಿದೆ. ನಾಯಿ ಎಂದ ಮೇಲೆ ಬೊಗಳುವುದು ಸಹಜ. ಅದರಲ್ಲೂ ಸಾಕು ನಾಯಿಯನ್ನು ರಕ್ಷಣೆಗಾಗಿಯೇ ಇಟ್ಟುಕೊಳ್ಳುವುದರಿಂದ, ಮನೆಯ ಜನರನ್ನು ಬಿಟ್ಟು ಉಳಿದವರು ಯಾರೇ ತಮ್ಮ ಮನೆ ಬಳಿ ಬಂದರೂ ಸಾಕು ನಾಯಿಗಳು ಬೊಗಳುತ್ತವೆ. ಆದರೆ ಇಲ್ಲೊಬ್ಬ ವ್ಯಕ್ತಿ ಪಕ್ಕದ ಮನೆಯವರ ಸಾಕು ನಾಯಿ ತನ್ನ ಹೆಂಡತಿಗೆ ಬೊಗಳಿತು ಎಂಬ ಕ್ಷುಲ್ಲಕ ಕಾರಣಕ್ಕೆ ಅದರ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದಾನೆ. ಆತನ ಈ ಕ್ರೌರ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹಲ್ಲೆಗೊಳಗಾದ ನಾಯಿ ಅಸ್ವಸ್ಥ!

ಬೆಂಗಳೂರಿನ ಅವರೆಹಳ್ಳಿಯಲ್ಲಿರುವ ವ್ಯಾಪಾರಿ ಅಂಜನಪ್ಪ ಅವರಿಗೆ ಸೇರಿದ ಆರು ವರ್ಷದ ‘ಸ್ಕೂಬಿ, ಪಕ್ಕದ ಮನೆಯ ಮಹಿಳೆಯನ್ನು ಕಂಡು ಬೊಗಳಿದೆ. ಇಷ್ಟಕ್ಕೇ ರೊಚ್ಚಿಗೆದ್ದ ಆಕೆಯ ಪತಿ ಗೋಪಿ, ಅಂಜನಪ್ಪ ಮನೆಯ ಆವರಣಕ್ಕೆ ನುಗ್ಗಿ, ಗೇಟ್ ಬಳಿ ಕಟ್ಟಿ ಇಟ್ಟಿದ್ದ ನಾಯಿಯನ್ನು ದೊಣ್ಣೆಯಿಂದ ಹಲವಾರು ಬಾರಿ ಥಳಿದಿ ವಿಕೃತಿ ಮೆರೆದಿದ್ದಾನೆ. ಹಲ್ಲೆಗೊಳಗಾದ ಸ್ಕೂಬಿ ತಕ್ಷಣವೆ ಮೂರ್ಛೆ ಹೋಗಿದ್ದು, ಮಾಲೀಕರು ಅದನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೆಲ್ಲದರ ಬಳಿಕ ಗೋಪಿ ಪರಾರಿಯಾಗಿದ್ದು, ಘಟನೆ ವೇಳೆ ಆತ ಕಂಠಪೂರ್ತಿ ಕುಡಿದು ಬಂದಿದ್ದ ಎಂದು ಹೇಳಲಾಗಿದೆ.

ಇದನ್ನೂ ಓದಿ ಸೈಕಲ್ ಓಡಿಸುತ್ತಿದ್ದ ಬಾಲಕನಿಗೆ ಸಾಕು ನಾಯಿ ಕಡಿತ; ನಾಯಿ ಮಾಲೀಕರ ಮೇಲೆ ಎಫ್ಐಆರ್!

ಪರಾರಿಯಾದ ಗೋಪಿಗಾಗಿ ಶೋಧ

ಸಧ್ಯಕ್ಕೆ ನಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆರೋಪಿಯ ಕ್ರೌರ್ಯದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಂದು ವಾರದ ಹಿಂದೆಯಷ್ಟೇ ರಾಜಾಜಿನಗರದ 1ನೇ ಬ್ಲಾಕ್‌ನಲ್ಲಿ 11 ವರ್ಷದ ಬಾಲಕನ ಮೇಲೆ ಸಾಕು ನಾಯಿ ದಾಳಿ ನಡೆಸಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದ. ನಾಯಿಗಳ ಈ ರೀತಿಯ ವರ್ತನೆಯನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುವುದು ಅಗತ್ಯ. ಆದರೆ ಈ ರೀತಿ ಕ್ಷುಲ್ಲಕ ಕಾರಣಕ್ಕೆ ಮೂಕಪ್ರಾಣಿಯ ಮೇಲೆ ಇಂತಹ ದೌರ್ಜನ್ಯ ಮಾಡುವುದು ಅಸಮಂಜಸ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

MI vs RCB: ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಆಡಲು ಇದುವೇ ಅಸಲಿ ಕಾರಣ!

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಮುಂಬೈ ಇಂಡಿಯನ್ಸ್ (MI) ವಿರುದ್ಧದ ಪಂದ್ಯದಲ್ಲಿ ತಮ್ಮ ಎಂದಿನ ಲಯದಲ್ಲಿ ಕಾಣಿಸಿಕೊಳ್ಳಲಿಲ್ಲ. ಮೈದಾನದಲ್ಲಿ ರನ್ ಗಳಿಸಲು ಅವರು ಸಾಕಷ್ಟು ಕಷ್ಟಪಟ್ಟಿದ್ದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಇದರ ಹಿಂದಿನ ಅಸಲಿ ಕಾರಣಗಳು ಇದೀಗ ಹೊರಬಿದ್ದಿವೆ…

ಜ್ವರ ಮತ್ತು ಅಸ್ವಸ್ಥತೆ:

ಪಂದ್ಯದ ನೇರ ಪ್ರಸಾರದ ವೇಳೆ ಕಾಮೆಂಟೇಟರ್ ರವಿಶಾಸ್ತ್ರಿ ಅವರು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದರು. ಅದೇನೆಂದರೆ, ವಿರಾಟ್ ಕೊಹ್ಲಿ ಅವರು ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎಂಬುದಾಗಿತ್ತು. ಮುಂಬೈ ಇಂಡಿಯನ್ಸ್​ ವಿರುದ್ಧ ಪಂದ್ಯದ ದಿನವೂ ಅವರು ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿರಲಿಲ್ಲ. ಅನಾರೋಗ್ಯದ ನಡುವೆಯೂ ತಂಡಕ್ಕಾಗಿ ಆಡಲು ನಿರ್ಧರಿಸಿದ ಕೊಹ್ಲಿ, ಶೇ. 100 ರಷ್ಟು ದೈಹಿಕ ಸಾಮರ್ಥ್ಯ ಹೊಂದಿರದ ಕಾರಣ ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಳ್ಳಲು ಪರದಾಡಿದರು.

ಹಿಮ್ಮಡಿ ಗಾಯ:

ಒಂದೆಡೆ ಜ್ವರದಿಂದ ಬಳಲಿದ್ದ ವಿರಾಟ್ ಕೊಹ್ಲಿ ಅವರಿಗೆ ಬ್ಯಾಟಿಂಗ್ ಮಾಡುವಾಗ ಹಿಮ್ಮಡಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ಓಡುವಾಗ ಮತ್ತು ಶಾಟ್‌ಗಳನ್ನು ಹೊಡೆಯುವಾಗ ಅವರು ನೋವಿನಿಂದ ಅಸ್ವಸ್ಥರಾಗಿದ್ದು ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಇದೇ ಕಾರಣಕ್ಕೆ ಆರ್‌ಸಿಬಿ ಬ್ಯಾಟಿಂಗ್ ಮುಗಿದ ನಂತರ, ಮುಂಬೈ ತಂಡ ಚೇಸಿಂಗ್ ಮಾಡುವಾಗ ಕೊಹ್ಲಿ ಫೀಲ್ಡಿಂಗ್‌ಗೆ ಬರಲಿಲ್ಲ. ಅವರ ಬದಲಿಗೆ ಜಾಕೋಬ್ ಬೆಥೆಲ್ ಫೀಲ್ಡಿಂಗ್ ಮಾಡಿದರು.

ಪಂದ್ಯದ ಪ್ರದರ್ಶನ ಮತ್ತು ಹತಾಶೆ:

ನೋವು ಮತ್ತು ಜ್ವರದ ನಡುವೆಯೂ ಕೊಹ್ಲಿ 38 ಎಸೆತಗಳಲ್ಲಿ 50 ರನ್ ಗಳಿಸಿದರು. ಆದರೆ, ಅವರ ಸ್ಟ್ರೈಕ್ ರೇಟ್ (131.58) ಅವರ ಎಂದಿನ ವೇಗಕ್ಕಿಂತ ಕಡಿಮೆಯಿತ್ತು. ಅಲ್ಲದೆ ಔಟ್ ಆದ ನಂತರ ಡಗೌಟ್‌ನಲ್ಲಿ ಕುಳಿತಿದ್ದ ಕೊಹ್ಲಿ, ತಮ್ಮ ಬ್ಯಾಟಿಂಗ್ ಬಗ್ಗೆ ತೀವ್ರ ಹತಾಶೆ ವ್ಯಕ್ತಪಡಿಸುತ್ತಿರುವುದು ಕಂಡುಬಂದಿತು. ಗಾಯದ ತೀವ್ರತೆ ಹೆಚ್ಚಾಗಬಾರದು ಎಂಬ ಮುನ್ನೆಚ್ಚರಿಕೆಯಿಂದ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ಮೈದಾನಕ್ಕಿಳಿಯದೆ ವಿಶ್ರಾಂತಿ ಪಡೆದರು.

ಇದನ್ನೂ ಓದಿ: Hardik Pandya: ನನಗೆ ಧೈರ್ಯ ಸಿಕ್ಕಿದೆ, ತಂಡದಲ್ಲಿ ಬದಲಾವಣೆ ಮಾಡ್ತೀನಿ ಅಷ್ಟೇ!

ಅಂದರೆ ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲಿದ್ದ ವಿರಾಟ್ ಕೊಹ್ಲಿ ಮಹತ್ವದ ಪಂದ್ಯದಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದರು. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಿದ್ದಾರೆ. ಅಲ್ಲದೆ ಮೊದಲ 11 ಎಸೆತಗಳಲ್ಲಿ ಕಿಂಗ್ ಕೊಹ್ಲಿ 20 ರನ್ ಬಾರಿಸಿದ್ದರು. ಇದಾದ ಬಳಿಕ ಹಿಮ್ಮಡಿ ನೋವಿಗೆ ಒಳಗಾದ ಕೊಹ್ಲಿ ಬಿರುಸಿನ ಬ್ಯಾಟಿಂಗ್ ನಡೆಸಲು ಪರಾಡಿದರು. ಇದಾಗ್ಯೂ ಅವರು 38 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ತಂಡಕ್ಕೆ ತನ್ನದೆಯಾದ ಕೊಡುಗೆ ನೀಡಿರುವುದು ವಿಶೇಷ.

 

Source link

Exit mobile version