Headlines

10 ಫೋರ್, 2 ಸಿಕ್ಸ್​: ವಿಶ್ವ ದಾಖಲೆಯೇ ಉಡೀಸ್! – Kannada News | Fatima Sana Smashes Fastest Fifty in Women’s T20Is

ಪಾಕಿಸ್ತಾನ್ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಫಾತಿಮಾ ಸನಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ಅರ್ಧಶತಕ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಅಬ್ಬರಿಸಿದ ಫಾತಿಮಾ ಸನಾ, ಕೇವಲ 15 ಎಸೆತಗಳಲ್ಲಿ 50 ರನ್ ಪೂರೈಸಿದರು. ಈ ಮೂಲಕ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಸನಾ ಇನಿಂಗ್ಸ್​ನ ಮುಖ್ಯಾಂಶಗಳು:…

Read More

IPL 2026: RCB ಪರ ಇಬ್ಬರು ಪಾದಾರ್ಪಣೆ ಸಾಧ್ಯತೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರ ಮೊದಲ ಪಂದ್ಯದಲ್ಲೇ ಕಣಕ್ಕಿಳಿಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಅಭಿಯಾನ ಶುರು ಮಾಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.8) ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ಆರ್​ಸಿಬಿ ಪರ ಇಬ್ಬರು ಆಟಗಾರರು ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗಿದ್ದಾರೆ. ಇಲ್ಲಿ ಜೋಶ್ ಹೇಝಲ್​ವುಡ್ ಫಿಟ್​ನೆಸ್ ಕಾರಣದಿಂದಾಗಿ…

Read More

ರಾಜ್ಯಸಭಾ ಚುನಾವಣೆಗೆ ‘ಕೈ’ನಲ್ಲಿ ಭಾರಿ ಪೈಪೋಟಿ: ಮುಂಚೂಣಿಯಲ್ಲಿವೆ ಕೆಲ ನಾಯಕರ ಹೆಸರು – Kannada News | Intense Race in Congress for Karnataka Rajya Sabha Seats: Supriya Shrinate, Pawan Khera, and BK Hariprasad in Frontrunners List

ಬೆಂಗಳೂರು, ಮೇ 24: ಜೂನ್ 18ರಂದು ನಡೆಯಲಿರುವ ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್​​ನಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದ್ದು, ಪಕ್ಷದ ರಾಷ್ಟ್ರೀಯ ನಾಯಕರುಗಳಾದ ಸುಪ್ರಿಯಾ ಶ್ರಿನೇಟ್ ಮತ್ತು ಪವನ್​​ ಖೇರಾ ಅವರ ಹೆಸರುಗಳು ಮುಂಚೂಣಿಯಲ್ಲಿವೆ ಎನ್ನಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು…

Read More

Explainer: ಸಂಸತ್​​ನಲ್ಲಿ ಅಂಗೀಕಾರವಾಗುತ್ತಾ ಮಹಿಳಾ ಮೀಸಲಾತಿ ಮಸೂದೆ? ಏನಿದರ ಮಹತ್ವ, ವಿಪಕ್ಷಗಳ ವಿರೋಧವೇಕೆ?

ನವದೆಹಲಿ, ಏಪ್ರಿಲ್ 13: ಏಪ್ರಿಲ್ 16ರಿಂದ 18ರವರೆಗೆ ಮಹಿಳಾ ಮೀಸಲಾತಿ (Women’s Reservation Bill) ಕಾನೂನನ್ನು ತಿದ್ದುಪಡಿ ಮಾಡಲು ಸಂಸತ್ತು ವಿಶೇಷ ಅಧಿವೇಶನವನ್ನು ನಡೆಸಲಿದೆ. 2029ರ ಸಾರ್ವತ್ರಿಕ ಚುನಾವಣೆಗಳಿಂದ ನಾರಿ ಶಕ್ತಿ ವಂದನ ಅಧಿನಿಯಮವನ್ನು (Nari Shakti Vandan Adhiniyam) ಜಾರಿಗೆ ತರಲು ಸರ್ಕಾರ ಗುರಿ ಹೊಂದಿದೆ. ಈ ಬದಲಾವಣೆಗಳು ಭವಿಷ್ಯದ ಜನಗಣತಿ ಮತ್ತು ಸೀಮಾ ನಿರ್ಣಯದಿಂದ ಕೋಟಾವನ್ನು ಬೇರ್ಪಡಿಸುತ್ತವೆ. ಇದು 2029ರ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಿಗೆ ಮಹಿಳಾ ಮೀಸಲಾತಿ ಜಾರಿಯಲ್ಲಿರಲು ಅನುವು ಮಾಡಿಕೊಡುತ್ತದೆ. ಏಪ್ರಿಲ್…

Read More

ರಣವೀರ್ ಸಿಂಗ್‌, ಫರ್ಹಾನ್ ಅಖ್ತರ್ ನಡುವಿನ ಜಗಳ ಬಿಡಿಸಲು ಸಲ್ಮಾನ್ ಖಾನ್ ಎಂಟ್ರಿ?

ಹಿಂದಿ ಚಿತ್ರರಂಗದಲ್ಲಿ ಯಾರಾದರೂ ಸಂಕಷ್ಟದಲ್ಲಿದ್ದರೆ ಮೊದಲು ಧಾವಿಸುವುದೇ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan). ಅದಕ್ಕಾಗಿಯೇ ಬಾಲಿವುಡ್​ನ ಹಲವು ಮಂದಿಗೆ ಅವರು ಗಾಡ್‌ಫಾದರ್ ಆಗಿದ್ದಾರೆ. ಇದೀಗ ‘ಡಾನ್ 3’ (Don 3) ಚಿತ್ರದ ವಿಚಾರವಾಗಿ ನಟ ರಣವೀರ್ ಸಿಂಗ್ (Ranveer Singh) ಮತ್ತು ನಿರ್ದೇಶಕ ಫರ್ಹಾನ್ ಅಖ್ತರ್ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಇಡೀ ಹಿಂದಿ ಚಿತ್ರರಂಗವನ್ನು ಇಬ್ಭಾಗ ಮಾಡಿದೆ. ಆದರೆ, ಮೀಡಿಯಾ ಮುಂದೆ ಈ ವಿವಾದ ದೊಡ್ಡ ಸರ್ಕಸ್ ಆಗುವುದನ್ನು ತಡೆಯಲು ಸಲ್ಮಾನ್ ಖಾನ್ ಈಗ…

Read More

ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿಗೆ ಮೋದಿಗೆ ಟ್ರಂಪ್ ಅಭಿನಂದನೆ – Kannada News | Donald Trump congratulates PM Modi over BJP Historic win in West Bengal elections

ನವದೆಹಲಿ, ಮೇ 5: ಪಶ್ಚಿಮ ಬಂಗಾಳ (West Bengal Election Results) ರಾಜ್ಯದಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಇದನ್ನು “ಐತಿಹಾಸಿಕ” ಮತ್ತು “ನಿರ್ಣಾಯಕ” ಫಲಿತಾಂಶ ಎಂದು ಕರೆದಿದ್ದಾರೆ. ಭಾರತವು ಅವರನ್ನು ನಾಯಕನನ್ನಾಗಿ ಪಡೆದಿರುವುದು ಅವರ ಅದೃಷ್ಟ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಳೆದ ತಿಂಗಳಷ್ಟೇ ತಮ್ಮ ಫೋನ್ ಕರೆಯಲ್ಲಿ, ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಧಾನಿ ಮೋದಿಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದರು. ಅವರನ್ನು ತನ್ನ…

Read More

ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಹೊಟ್ಟೆಯಲ್ಲಿದ್ದ ಮಗು ಸಾವು!

ಬೆಳಗಾವಿ, ಏಪ್ರಿಲ್ 13: ಜಿಲ್ಲೆಯಲ್ಲಿ ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಗರ್ಭಿಣಿ ಮಹಿಳೆಯ ಸಾವಿಗೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ತುರಮರಿ ಗ್ರಾಮದ ಗರ್ಭಿಣಿಯಾದ ಈರಮ್ಮ ಈರಪ್ಪ ಶಿಗೀಹಳ್ಳಿ (21) ಅವರನ್ನು ಏಪ್ರಿಲ್ 10ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸರಿಯಾದ ಚಿಕಿತ್ಸೆ ನೀಡದ ಕಾರಣ ಈರಮ್ಮ ಹಾಗೂ ಹೊಟ್ಟೆಯಲ್ಲಿದ್ದ ಶಿಶು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಾವಿನ ಬಳಿಕ ಮಧ್ಯರಾತ್ರಿ ಸಹಿ ಪಡೆದು ದೇಹವನ್ನು ಕಳುಹಿಸಲು ಯತ್ನಿಸಿದ್ದಾಗಿ ತಿಳಿದುಬಂದಿದೆ. ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ…

Read More

ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು

ಬೆಂಗಳೂರು, ಮಾರ್ಚ್​ 17: ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕ ವೃತ್ತದ ಬಳಿ ಅಚ್ಚರಿ ಮೂಡಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯನ್ನು ಚೀಲಕ್ಕೆ ಹಾಕಿ ಕೊರಿಯರ್ ಶಾಪ್​ಗೆ ತಂದಿದ್ದಾರೆ. ಪುಂಡರ ಹುಚ್ಚಾಟಕ್ಕೆ ಕೊರಿಯರ್ ಶಾಪ್ ಸಿಬ್ಬಂದಿ ಕಂಗಾಲಾಗಿದ್ದಾರೆ. ಪ್ರೊಫೆಷನಲ್ ಕೊರಿಯರ್ ಶಾಪ್​ಗೆ ಬಂದ ಪುಂಡರು ಪ್ಲಾಸ್ಟಿಕ್ ಚೀಲದಲ್ಲಿರುವ ವ್ಯಕ್ತಿಯನ್ನು ಕೊರಿಯರ್ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಈ ವೇಳೆ ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಕೊರಿಯರ್ ಸಿಬ್ಬಂದಿ ಪರಿಶೀಲಿಸಿದ್ದು, ಅದರೊಳಗೆ ಮನುಷ್ಯನೊಬ್ಬ ಇರುವುದು ಕಂಡುಬಂದಿದೆ. ಒಂದು ಕ್ಷಣ ಕೊರಿಯರ್ ಶಾಪ್ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ….

Read More

ಒಂದಾ ಇಬ್ಬರು ದುಡಿಯಬೇಕು, ಇಲ್ಲ ಊರು ಬಿಡಬೇಕು: ಬೆಂಗಳೂರು ಮದುವೆಯಾದವರಿಗೆ ದುಬಾರಿ  – Kannada News | Bengaluru Couples’ Financial Reality: High Living Costs and The Challenge of Saving in Metro City

ಬೆಂಗಳೂರಿನ ಖರ್ಚು, ಹಾಗೂ ಸಂಬಳದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮತ್ತೊಮ್ಮ ಚರ್ಚೆಯಾಗಿದೆ. ಈ ಹಿಂದೆ ಐಟಿ ಉದ್ಯೋಗಿಗಳು ರಾಜಧಾನಿಯಲ್ಲಿ ಜೀವನ ವೆಚ್ಚದ ಬಗ್ಗೆ ಭಾರೀ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ದಂಪತಿಗಳು ಈ ಸಂಕಷ್ಟದ ಬಗ್ಗೆ ಹೇಳಿಕೊಂಡಿದ್ದಾರೆ. ಹೌದು ಬೆಂಗಳೂರಿನ ದಂಪತಿಗಳಿಬ್ಬರು ಎದುರಿಸುತ್ತಿರುವ ಆರ್ಥಿಕ ಒತ್ತಡಗಳನ್ನು ವಿವರಿಸುವ ಪೋಸ್ಟ್ ಆನ್‌ಲೈನ್‌ನಲ್ಲಿ ವ್ಯಾಪಕ ಚರ್ಚೆಗೆ ನಾಂದಿ ಹಾಡಿದೆ. ಅಭಿಷೇಕ್ ಸಿಂಗ್ ಎಂಬವವರು ಈ ಬಗ್ಗೆ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಸ್ನೇಹಿತನ ಕಥೆಯನ್ನು ಮತ್ತು ಮದುವೆಯ ನಂತರ ಅವರು ಮಾಡಬೇಕಾದ…

Read More

ಇರಾನ್ ವಿರುದ್ಧದ ದಾಳಿಗೆ ಸದ್ಯಕ್ಕೆ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಟ್ರಂಪ್ – Kannada News | Trump Halts Iran Attack Amid Pakistan Mediation: Diplomatic Push for Peace

ವಾಷಿಂಗ್ಟನ್ , ಏಪ್ರಿಲ್ 22: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಮತ್ತು ಬಿಗುವಿನ ವಾತಾವರಣದ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇರಾನ್ ವಿರುದ್ಧದ ದಾಳಿಯನ್ನು ಸದ್ಯಕ್ಕೆ ತಡೆಹಿಡಿದಿರುವ ಟ್ರಂಪ್, ರಾಜತಾಂತ್ರಿಕತೆಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಸ್ಫೋಟಕ ಹಂತ ತಲುಪಿರುವಾಗಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮವನ್ನು ವಿಸ್ತರಿಸುವುದಾಗಿ ಘೋಷಿಸಿದ್ದಾರೆ. ಪಾಕಿಸ್ತಾನದ ನಾಯಕರ ವಿಶೇಷ ವಿನಂತಿಯ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು…

Read More