Headlines

ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ – Kannada News | Bengaluru Fake Beggar Exposed: UP Man Faked Disability, Stole Mobiles in Byatarayanapura

ಬೆಂಗಳೂರು, ಜುಲೈ 29: ನಗರದ ಬೈಯತರಾಯನಪುರ ಬಳಿಯ ಐಟಿಐ ಲೇಔಟ್‌ನಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶ ಮೂಲದ ಮುಕೇಶ್ ಎಂಬಾತ ನಗರದಲ್ಲಿ ಭಿಕ್ಷಾಟನೆ ಮಾಡುವ ನೆಪದಲ್ಲಿ ಅಂಗವಿಕಲನಂತೆ ನಟಿಸಿ ಜನರನ್ನು ವಂಚಿಸುತ್ತಿದ್ದ. ಕರುಣೆ ಬರುವಂತೆ ಕುಂಟುತ್ತಾ ನಡೆದು ಜನರ ಸಹಾನುಭೂತಿ ಗಳಿಸುತ್ತಿದ್ದ ಈತ, ಭಿಕ್ಷೆ ಬೇಡುವ ಸೋಗಿನಲ್ಲಿ ಮೊಬೈಲ್ ಫೋನ್‌ಗಳನ್ನು ಕದಿಯುತ್ತಿದ್ದ ಆರೋಪಕ್ಕೆ ಗುರಿಯಾಗಿದ್ದಾನೆ. ಸ್ಥಳೀಯರು ಈತನ ನಡವಳಿಕೆ ಬಗ್ಗೆ ಅನುಮಾನಗೊಂಡು ವಿಚಾರಿಸಿದಾಗ, ಮುಕೇಶ್‌ನ ಕಳ್ಳಾಟ ಬಯಲಾಗಿದೆ. ಕೈಕಾಲು ನೆಟ್ಟಗಿದ್ದರೂ ಕೂಡ ಶೋಕಿ ಜೀವನಕ್ಕಾಗಿ…

Read More

ಏಕದಿನ ವಿಶ್ವಕಪ್​ಗೆ ಪ್ಲೇಯಿಂಗ್ 11 ಹೆಸರಿಸಿದ ವಾಸಿಂ ಜಾಫರ್! – Kannada News | Wasim Jaffer’s India XI for the 2027 World Cup

2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ ಹೇಗಿರಬೇಕೆಂದು ಭಾರತ ತಂಡದ ಮಾಜಿ ಆಟಗಾರ ವಾಸಿಂ ಜಾಫರ್ ತಿಳಿಸಿದ್ದಾರೆ. ಜಾಫರ್ ಹೆಸರಿಸಿರುವ ಈ 11 ಆಟಗಾರರ ಪಟ್ಟಿಯಲ್ಲಿ ಅನುಭವಿ ಹಾಗೂ ಯುವ ಆಟಗಾರರ ಬಲಿಷ್ಠ ದಂಡೇ ಇದ್ದು, ಈ ಆಡುವ ಬಳಗದೊಂದಿಗೆ ಭಾರತ ತಂಡ ಕಣಕ್ಕಿಳಿದರೆ ಅತ್ಯುತ್ತಮ ಪ್ರದರ್ಶನ ನೀಡಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರೋಹಿತ್-ವಿರಾಟ್ ಜೋಡಿಗೆ ಜೈ: 2027ರ ವೇಳೆಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರಿಗೆ ವಯಸ್ಸಿನ ಸವಾಲಿರಲಿದೆ….

Read More

RRB Technician Recruitment 2026: ರೈಲ್ವೆಯಲ್ಲಿ ಬಂಪರ್​​​ ನೇಮಕಾತಿ; ಅರ್ಜಿ ಸಲ್ಲಿಸಲು ಕೊನೆಯ 2 ದಿನಗಳು ಮಾತ್ರ ಬಾಕಿ! – Kannada News | RRB Technician Recruitment 2026: Apply Online for 6,557 Posts Before July 31 – Check Eligibility and Salary Details

ರೈಲ್ವೆಯಲ್ಲಿ ನೇಮಕಾತಿImage Credit source: Getty Images ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶಾದ್ಯಂತ ಇರುವ ತನ್ನ ವಿವಿಧ ವಲಯಗಳಲ್ಲಿ ಖಾಲಿ ಇರುವ ಬೃಹತ್ ಸಂಖ್ಯೆಯ ತಂತ್ರಜ್ಞ (Technician) ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಪಡೆಯಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ಪ್ರಸ್ತುತ ಚಾಲ್ತಿಯಲ್ಲಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಇನ್ನು ಕೇವಲ 2 ದಿನಗಳು ಮಾತ್ರ…

Read More

97ನೇ ವಯಸ್ಸಿನಲ್ಲೂ ಓಟದ ಹುಮ್ಮಸ್ಸು: ಬೆಂಗಳೂರಿನ ‘ಮ್ಯಾರಥಾನ್ ತಾತ’ ಎನ್.ಎಸ್. ದತ್ತಾತ್ರೇಯ ಸ್ಫೂರ್ತಿದಾಯಕ ಕಥೆ! – Kannada News | Bengaluru: 97 Year Old Marathon Runner NS Dattatreya Proves Age Is Just A Number

ಎನ್.ಎಸ್. ದತ್ತಾತ್ರೇಯ ಬೆಂಗಳೂರು, ಜುಲೈ 29: ಸಾಮಾನ್ಯವಾಗಿ 90 ವರ್ಷ ದಾಟಿದ ಮೇಲೆ ಹೆಚ್ಚಿನವರು ಮನೆಯಲ್ಲೇ ವಿಶ್ರಾಂತಿ ಪಡೆಯಲು ಬಯಸುತ್ತಾರೆ. ಆದರೆ ಬೆಂಗಳೂರಿನ 97 ವರ್ಷದ ವೃದ್ಧ ಎನ್.ಎಸ್. ದತ್ತಾತ್ರೇಯ (N S Dattatreya) ಅವರಿಗೆ ಓಟದ ಅಂಗಳದಲ್ಲಿ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ. ತಮ್ಮ 90ನೇ ವಯಸ್ಸಿನಲ್ಲಿ ಓಟ ಆರಂಭಿಸಿದ ಈ ‘ಮ್ಯಾರಥಾನ್ ತಾತ’, ಇಂದು ದೇಶಾದ್ಯಂತ ಸಾವಿರಾರು ಯುವಕರಿಗೆ ದೈಹಿಕ ಫಿಟ್‌ನೆಸ್‌ಗೆ ದಾರಿದೀಪವಾಗಿದ್ದಾರೆ. 90ನೇ ವಯಸ್ಸಿನಲ್ಲಿ ಆರಂಭವಾದ ಅದ್ಭುತ ಪಯಣ ಸ್ಟೇಟ್ ಬ್ಯಾಂಕ್ ಆಫ್…

Read More

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಪ್ರಾಣಬಿಟ್ಟ ಆಂಧ್ರದ ಯುವಕ: ಕಾರಣ ನಿಗೂಢ – Kannada News | Horrific Incident: Andhra Youth Dies Under Moving Train in Bengaluru; Severed Head Found 400m Away

ಬೆಂಗಳೂರು, ಜುಲೈ 29: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಮೃತನನ್ನು ಆಂಧ್ರ ಮೂಲದ ವಿಶ್ವನಾಥ್(28) ಎಂದು ಗುರುತಿಸಲಾಗಿದ್ದು, ತಲೆಯಿಲ್ಲದ ದೇಹ ಮಾತ್ರ ನಿನ್ನೆ ಪತ್ತೆಯಾಗಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ್ದ ರೈಲ್ವೇ ಪೊಲೀಸರು ಘಟನೆ ಸಂಬಂಧ ಯುಡಿಆರ್​​ ದಾಖಲಿಸಿಕೊಂಡಿದ್ದರು. ಆದರೆ ಇಂದು ರುಂಡವೂ ಪತ್ತೆಯಾಗಿದ್ದು, ಘಟನೆಯ ಬಗ್ಗೆ ಪೊಲೀಸರಿಗೆ ಸ್ಪಷ್ಟತೆ ಸಿಕ್ಕಿದೆ. ರುಂಡವನ್ನು ಎಳೆದು ತಂದಿದ್ದ ನಾಯಿಗಳು ರೈಲಿಗೆ ತಲೆಕೊಟ್ಟು ವಿಶ್ವನಾಥ್​​ ಆತ್ಮಹತ್ಯೆಯ ವೇಳೆ ರುಂಡ ಮತ್ತು ದೇಹ…

Read More

ಕಾವೇರಿ ನೀರು ವಿವಾದ ನಡುವೆಯೂ ತಮಿಳುನಾಡು ಸಿಎಂ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ! – Kannada News | Cauvery Row: Preparations Underway at Vidhana Soudha Ahead of Tamil Nadu CM Joseph Vijay’s Proposed Bengaluru Visit

ಬೆಂಗಳೂರು, ಜುಲೈ 29: ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಆಗಸ್ಟ್ 3 ರಂದು ಬೆಂಗಳೂರಿಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅವರನ್ನು ಸ್ವಾಗತಿಸಲು ಸಿದ್ಧತೆಗಳು ನಡೆಯುತ್ತಿವೆ. ಕಾವೇರಿ ನದಿ ನೀರು ಹಂಚಿಕೆ ಕುರಿತು ಚರ್ಚಿಸಲು ವಿಧಾನಸೌಧದಲ್ಲಿ ಮಹತ್ವದ ಸಭೆ ಆಯೋಜಿಸಲಾಗಿದೆ. ಈ ಸಭೆಗೆ ಮೊದಲು, ವಿಧಾನಸೌಧದ ಸಭಾಂಗಣ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಸಿದ್ಧತೆಗಳು ನಡೆಯುತ್ತಿವೆ. ಸಿಎಂ ವಿಜಯ್ ಆಗಮಿಸುವ ಮಾರ್ಗದಲ್ಲಿ ಸುಣ್ಣ-ಬಣ್ಣ ಬಳಿಯುವ ಕೆಲಸ, ಸಭಾಂಗಣದಲ್ಲಿ ಆಸನ ವ್ಯವಸ್ಥೆ ಮತ್ತು ನವೀಕರಣ ಕಾರ್ಯ…

Read More

ಮೊಬೈಲ್‌ನಲ್ಲೇ ವಿದ್ಯುತ್ ಬಿಲ್ ಪಾವತಿಸುವುದು ಹೇಗೆ?: ಸರಳ ಮತ್ತು ಸುಲಭ ವಿಧಾನ – Kannada News | Pay Electricity Bill Online in Karnataka: Quick Mobile Payment via UPI Apps

ಬೆಂಗಳೂರು, ಜು.29: ವಿದ್ಯುತ್ ಬಿಲ್ (Electricity Bill) ಪಾವತಿಸಲು ಉದ್ದನೆಯ ಸಾಲಿನಲ್ಲಿ ನಿಲ್ಲುವ ಕಾಲ ಈಗ ಮುಗಿದಿದೆ. ನಿಮ್ಮ ಸ್ಮಾರ್ಟ್‌ಫೋನ್ ಬಳಸಿ ಕೇವಲ ಒಂದೆರಡು ನಿಮಿಷಗಳಲ್ಲಿ, ಅತ್ಯಂತ ಸುರಕ್ಷಿತವಾಗಿ ಹಾಗೂ ಸುಲಭವಾಗಿ ಮನೆಬಾಗಿಲಿನಲ್ಲೇ ಕರೆಂಟ್ ಬಿಲ್ ಪಾವತಿಸಬಹುದು. ಇದರ ಜತೆಗೆ ಗೃಹ ಜ್ಯೋತಿ ಫಲಾನುಭವಿಗಳಿಗೆ ಜುಲೈ ತಿಂಗಳಿನಲ್ಲಿ ಯಾವುದೇ ಫಿಸಿಕಲ್ (ಕಾಗದದ) ವಿದ್ಯುತ್ ಬಿಲ್‌ಗಳನ್ನು ವಿತರಿಸಲಾಗುವುದಿಲ್ಲ. ಮೊಬೈಲ್​ ಮೂಲಕ ಪಾವತಿಸಬೇಕಾಗುತ್ತದೆ. ಅದಕ್ಕಾಗಿ ಫೋನ್​ ಮೂಲಕ ಬಿಲ್ ಪಾವತಿ ಮಾಡಬಹುದು. ಕರ್ನಾಟಕದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ (BESCOM,…

Read More

ಗುರು ಪೂರ್ಣಿಮೆ ಶುಭಾಶಯ ಕೋರಿದ ಪ್ರಧಾನಿ ಮೋದಿ: ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಿ – Kannada News | PM Modi Extends Guru Purnima Greetings With Timeless Sanskrit Verse on Teachers

ನವದೆಹಲಿ, ಜುಲೈ 29: ಗುರು ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ದೇಶದ ಸಮಸ್ತ ಜನತೆಗೆ ಶುಭ ಹಾರೈಸಿದ್ದಾರೆ. ಗುರುಗಳು ಕೇವಲ ಅಕ್ಷರ ಜ್ಞಾನವನ್ನು ನೀಡುವುದು ಮಾತ್ರವಲ್ಲದೆ, ತಮ್ಮ ಶಿಷ್ಯರಲ್ಲಿ ಸಕಾರಾತ್ಮಕ ಶಕ್ತಿ ತುಂಬಿ, ಉದಾತ್ತ ಚಿಂತನೆ ಮತ್ತು ಮೌಲ್ಯಗಳ ಮೂಲಕ ಅವರನ್ನು ನೈಜ ವ್ಯಕ್ತಿಗಳನ್ನಾಗಿ ರೂಪಿಸುತ್ತಾರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ. ಗುರುಗಳು ತೋರಿದ ಉನ್ನತ ಆದರ್ಶಗಳು ಹಾಗೂ ಮಾರ್ಗದರ್ಶನವನ್ನು ಪ್ರತಿಯೊಬ್ಬರೂ ತಮ್ಮ ಜೀವನದ ದಿಕ್ಸೂಚಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಕರೆ…

Read More

August 2026 Rule Changes: ಆಗಸ್ಟ್ 1 ರಿಂದ ಜಾರಿಗೆ ಬರಲಿವೆ 5 ಹೊಸ ನಿಯಮಗಳು: ಎಲ್‌ಪಿಜಿ ದರ,ತತ್ಕಾಲ್ ಬುಕಿಂಗ್ ಮತ್ತು ಬ್ಯಾಂಕಿಂಗ್‌ ಮೇಲೆ ಭಾರಿ ಪ್ರಭಾವ – Kannada News | August 2026 Rule Changes: 5 New Laws Affecting LPG, Banking and Tatkal Bookings

ನವದೆಹಲಿ,ಜುಲೈ 29: ಭಾರತದಾದ್ಯಂತ ಹಣಕಾಸು, ಸಾರಿಗೆ ಮತ್ತು ಅಂಚೆ(Post) ಸೇವೆಗಳಲ್ಲಿ 5 ಪ್ರಮುಖ ಬದಲಾವಣೆಗಳು ಆಗಸ್ಟ್​ 1, 2026ರಿಂದ ಜಾರಿಗೆ ಬರಲಿವೆ. ಪ್ರತಿ ತಿಂಗಳ ಆರಂಭದಲ್ಲಿ ಹಲವು ಆರ್ಥಿಕ ನಿಯಮಗಳು ಬದಲಾಗುವಂತೆ, ಆಗಸ್ಟ್ 1 ರಿಂದ ದೇಶಾದ್ಯಂತ 5 ಪ್ರಮುಖ ಬದಲಾವಣೆಗಳಾಗಲಿವೆ. ಅಡುಗೆ ಅನಿಲ (LPG) ದರ, ರೈಲ್ವೆ ತತ್ಕಾಲ್ ಬುಕಿಂಗ್, ಬ್ಯಾಂಕಿಂಗ್ ನಿಯಮಗಳು ಹಾಗೂ ಅಂಚೆ ಶುಲ್ಕಗಳಲ್ಲಿನ ಈ ಬದಲಾವಣೆಗಳು ಸಾರ್ವಜನಿಕರ ದಿನನಿತ್ಯದ ಬಜೆಟ್ ಮೇಲೆ ನೇರ ಪರಿಣಾಮ ಬೀರಲಿವೆ. ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್…

Read More

‘ಗೃಹ ಜ್ಯೋತಿ’ ಯೋಜನೆಯ ಫಲಾನುಭವಿಗಳೇ ಗಮನಿಸಿ: ಜುಲೈ ತಿಂಗಳಲ್ಲಿ ಫಿಸಿಕಲ್ ಕರೆಂಟ್ ಬಿಲ್ ಇಲ್ಲ – Kannada News | Gruha Jyothi Impact: BESCOM’s New July Billing Average Usage, No Paper Bill

ಬೆಂಗಳೂರು,ಜು.29: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯ ಗೃಹ ಬಳಕೆದಾರರಿಗೆ ಪ್ರಸಕ್ತ ಜುಲೈ ತಿಂಗಳಿನಲ್ಲಿ ಯಾವುದೇ ಫಿಸಿಕಲ್ (ಕಾಗದದ) ವಿದ್ಯುತ್ ಬಿಲ್‌ಗಳನ್ನು ವಿತರಿಸಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದಕ್ಕೆ ಬದಲಾಗಿ, ಗ್ರಾಹಕರ ಕಳೆದ ಮೂರು ತಿಂಗಳ ವಿದ್ಯುತ್ ಬಳಕೆಯ ಸರಾಸರಿಯನ್ನು ಲೆಕ್ಕ ಹಾಕಿ, ಎಸ್‌ಎಂಎಸ್ (SMS) ಅಥವಾ ಇ-ಮೇಲ್ ಮೂಲಕ ಬಿಲ್ ಮೊತ್ತವನ್ನು ಕಳುಹಿಸಲಾಗುವುದು. ಕಾಂಗ್ರೆಸ್ ಸರ್ಕಾರದ ‘ಪಂಚ ಗ್ಯಾರಂಟಿ’ಗಳಲ್ಲಿ ಒಂದಾದ, 200 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹ ಜ್ಯೋತಿ’ ಯೋಜನೆಯ ಫಲಾನುಭವಿಗಳ ವಿವರಗಳನ್ನು…

Read More