ವಾಷಿಂಗ್ಟನ್, ಏಪ್ರಿಲ್ 12: ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಮೊದಲ ಪೂರ್ಣ ಪ್ರತಿಮೆಯನ್ನು ಸಿಯಾಟಲ್ನಲ್ಲಿ ಸ್ಥಾಪಿಸಲಾಗಿದೆ. ಸಿಯಾಟಲ್ನ ಡೌನ್ಟೌನ್ನಲ್ಲಿರುವ ಜನನಿಬಿಡ ವೆಸ್ಟ್ಲೇಕ್ ಚೌಕದಲ್ಲಿ ಈ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ.ಭಾರತೀಯ ಕಲಾವಿದ ನರೇಶ್ ಕುಮಾರ್ ಕುಮಾವತ್ ರಚಿಸಿದ ಈ ಪ್ರತಿಮೆಯನ್ನು ಶನಿವಾರ ಸಿಯಾಟಲ್ ಮೇಯರ್ ಕೇಟೀ ವಿಲ್ಸನ್ ಮತ್ತು ಸಿಯಾಟಲ್ನಲ್ಲಿರುವ ಭಾರತದ ಕಾನ್ಸುಲ್ ಜನರಲ್ ಪ್ರಕಾಶ್ ಗುಪ್ತಾ ಜಂಟಿಯಾಗಿ ಅನಾವರಣಗೊಳಿಸಿದರು. 1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಐತಿಹಾಸಿಕ ಭಾಷಣ ಮಾಡಿದರು, ಅದರ ಮೂಲಕ ಅವರು ಜಾಗತಿಕ ಪ್ರೇಕ್ಷಕರಿಗೆ ಹಿಂದೂ ತತ್ವಶಾಸ್ತ್ರವನ್ನು ಪರಿಚಯಿಸಿದರು.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜನಾದ ಸೂರ್ಯನು ಏಪ್ರಿಲ್ 14 ರಂದು ತನ್ನ ಉಚ್ಛ ರಾಶಿಯಾದ ಮೇಷ ರಾಶಿಗೆ ಸಂಚರಿಸಲಿದ್ದಾನೆ. ಸೂರ್ಯನ ಈ ಸಂಚಾರವು ಕೆಲವು ರಾಶಿಯವರಿಗೆ ಅದೃಷ್ಟ ತಂದರೆ, ಇನ್ನು ಕೆಲವು ರಾಶಿಯವರಿಗೆ ಸವಾಲುಗಳನ್ನು ತರಲಿದೆ. ವಿಶೇಷವಾಗಿ ವಾಹನ ಚಾಲನೆ ಮತ್ತು ಪ್ರಯಾಣದ ವಿಷಯದಲ್ಲಿ ಕೆಲವು ರಾಶಿಯವರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜ್ಯೋತಿಷ್ಯ ತಜ್ಞರು ಎಚ್ಚರಿಸಿದ್ದಾರೆ.
ಆ ರಾಶಿಗಳು ಯಾವುವು ಮತ್ತು ಯಾವ ರೀತಿಯ ಜಾಗ್ರತೆ ವಹಿಸಬೇಕು ಎಂಬ ವಿವರ ಇಲ್ಲಿದೆ:
ಮೇಷ ರಾಶಿ (Aries): ಸಂಘರ್ಷಗಳಿಂದ ದೂರವಿರಿ
ಸೂರ್ಯನು ಮೇಷ ರಾಶಿಯಲ್ಲೇ ಸಂಚರಿಸುವುದರಿಂದ ಈ ರಾಶಿಯವರ ಮೇಲೆ ಪ್ರಭಾವ ಹೆಚ್ಚಿರುತ್ತದೆ. ಈ ಅವಧಿಯಲ್ಲಿ ಅನಗತ್ಯ ಜಗಳ ಮತ್ತು ವಾದವಿವಾದಗಳು ಉಂಟಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಾಂಪತ್ಯ ಜೀವನದಲ್ಲಿ ಸಂಗಾತಿಯೊಂದಿಗೆ ಸಮಾಧಾನದಿಂದ ವರ್ತಿಸಿ. ಹೊಸ ವ್ಯವಹಾರ ಅಥವಾ ಹೂಡಿಕೆಗಳನ್ನು ಮಾಡಲು ಇದು ಸೂಕ್ತ ಸಮಯವಲ್ಲ. ಯಾವುದೇ ದೊಡ್ಡ ನಿರ್ಧಾರಗಳನ್ನು ಸ್ವಲ್ಪ ಕಾಲ ಮುಂದೂಡುವುದು ಉತ್ತಮ.
ಕನ್ಯಾ ರಾಶಿ (Virgo): ಪ್ರಯಾಣದಲ್ಲಿ ಎಚ್ಚರ:
ಕನ್ಯಾ ರಾಶಿಯವರಿಗೆ ಈ ಸೂರ್ಯ ಸಂಚಾರವು ಮಿಶ್ರ ಫಲ ನೀಡಿದರೂ, ಸುರಕ್ಷತೆಯ ದೃಷ್ಟಿಯಿಂದ ಕೆಲವು ಕಠಿಣ ಸವಾಲುಗಳಿವೆ. ಅಪಘಾತಗಳ ಭಯವಿರುವುದರಿಂದ ದೂರದ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡುವುದು ಒಳ್ಳೆಯದು. ವಾಹನ ಚಾಲನೆ ಮಾಡುವಾಗ ಅತೀವ ಜಾಗರೂಕತೆ ಇರಲಿ.ಅನಿವಾರ್ಯ ಪ್ರಯಾಣವಿದ್ದರೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಮತ್ತು ವಿದ್ವಾಂಸರ ಸಲಹೆಯಂತೆ ಮುಂಜಾಗ್ರತೆ ವಹಿಸಿ.
ಮೀನ ರಾಶಿ (Pisces): ಆರೋಗ್ಯ ಮತ್ತು ಹಣಕಾಸಿನ ಬಗ್ಗೆ ಗಮನಹರಿಸಿ:
ಸೂರ್ಯನ ಬದಲಾವಣೆಯು ಮೀನ ರಾಶಿಯವರ ದೈನಂದಿನ ಜೀವನದ ಮೇಲೆ ಪ್ರಭಾವ ಬೀರಲಿದೆ. ಈ ಸಮಯದಲ್ಲಿ ಆರೋಗ್ಯ ಸಮಸ್ಯೆಗಳು ಕಾಡಬಹುದು. ಅದರೊಂದಿಗೆ ಆರ್ಥಿಕ ಏರಿಳಿತಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಮಾನಸಿಕ ಶಾಂತಿ ಕಾಪಾಡಿಕೊಳ್ಳಲು ಯೋಗ ಮತ್ತು ಧ್ಯಾನದ ಮೊರೆ ಹೋಗುವುದು ಉತ್ತಮ. ಆರ್ಥಿಕ ವ್ಯವಹಾರಗಳಲ್ಲಿ ಜಾಗರೂಕರಾಗಿರಿ.
ಗಮನಿಸಿ: ಗ್ರಹಗತಿಗಳ ಫಲವು ವ್ಯಕ್ತಿಯ ಜನ್ಮ ಕುಂಡಲಿ ಮತ್ತು ದೆಸೆಗಳ ಮೇಲೆ ಅವಲಂಬಿತವಾಗಿರುತ್ತದೆ. ಈ ಮಾಹಿತಿಯು ಜ್ಯೋತಿಷ್ಯ ಶಾಸ್ತ್ರದ ಸಾಮಾನ್ಯ ನಂಬಿಕೆಗಳನ್ನು ಆಧರಿಸಿದೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಂಗಳೂರು, ಏಪ್ರಿಲ್ 12: ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ (Mangaluru) ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆಶಿಕ್ ಈ ನಿರ್ಧಾರ ಕೈಗೊಂಡಿರಬಹುದು ಎಂದು ಭಾವಿಸಲಾಗಿತ್ತಾದರೂ, ಮೊಬೈಲ್ ಪರಿಶೀಲನೆ ವೇಳೆ ಪ್ರೇಮ ಪ್ರಕರಣ ಬೆಳಕಿಗೆ ಬಂದಿದೆ.
ಕಾಲೇಜು ಸಹಪಾಠಿಯಾಗಿದ್ದ ಉಳ್ಳಾಲ ಮೂಲದ ಯುವತಿಯನ್ನು ಆಶಿಕ್ ಪ್ರೀತಿಸುತ್ತಿದ್ದರು. ಸಾಲದ್ದಕ್ಕೆ ಇವರಿಬ್ಬರು ಕ್ಲೋಸ್ ಆಗಿರುವ ವಿಚಾರ ಬಗ್ಗೆ ಎರಡೂ ಕುಟುಂಬಕ್ಕೆ ಗೊತ್ತಿತ್ತು. ಈ ನಡುವೆ ಕೆಲ ಸಮಯದಿಂದ ಆಶಿಕ್ನಿಂದ ಯುವತಿ ದೂರವಾಗತೊಡಗಿದ್ದಳು. ಹೀಗಾಗಿ ಸಾವಿಗೂ ಮುನ್ನ ನೀನು ನನಗೆ ಮೋಸ ಮಾಡುತ್ತಿದ್ದೀಯಾ ಎಂಬ ಬಗ್ಗೆ ಆಶಿಕ್ ಆಕೆಯನ್ನು ಕೇಳಿದ್ದು, ಈ ವೇಖೆ ನೀನು ಎಲ್ಲಿಯಾದರೂ ಸತ್ತು ಹೋಗು. ನಾನು ಮತ್ತು ನನ್ನ ಗೆಳೆಯರು ನಿನ್ನ ಮೃತದೇಹದ ಕೂದಲನ್ನು ತೆಗೆಯಲು ಬರುತ್ತೇವೆ ಎಂದು ಯುವತಿ ಹೇಳಿದ್ದಳು ಎಂಬ ಆರೋಪವೀಗ ಕೇಳಿಬಂದಿದೆ. ಈ ಬಗ್ಗೆ ಸಾವಿಗೂ ಮುನ್ನ ನಡೆದಿರುವ ಮಾತುಕತೆಗಳು ವಾಟ್ಸ್ಯಾಪ್ ಚಾಟ್ನನಲ್ಲಿ ಬಹಿರಂಗವಾಗಿದೆ ಎನ್ನಲಾಗಿದ್ದು, ಸಾವಿಗೂ ಮುನ್ನ ವಿಡಿಯೋ ಕಾಲ್ನಲ್ಲಿ ಇಬ್ಬರು ಮಾತನಾಡಿದ್ದರು ಎಂಬುದೂ ಗೊತ್ತಾಗಿದೆ.
ಆಶಿಕ್ ಜೊತೆ ಮಾತನಾಡುವ ವೇಳೆ ಅವಾಚ್ಯ ಶಬ್ದಗಳಿಂದ ಯುವತಿ ನಿಂದಿಸಿದ್ದು, ಇದರಿಂದ ಆಶಿಕ್ ಮಾನಸಿಕವಾಗಿ ನೊಂದು ಅದೇ ದಿನ ರಾತ್ರಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವತಿ ಪ್ರೀತಿಯ ನಾಟಕವಾಡಿ ಹಲವಾರು ಉಡುಗೊರೆ ಪಡೆದು ಖರ್ಚು ವೆಚ್ಚ ಮಾಡಿಸಿದ್ದಲ್ಲದೆ, ಮಾನಸಿಕವಾಗಿಯೂ ಆಶಿಕ್ಗೆ ಹಿಂಸೆ ನೀಡಿದ ಆರೋಪವೀಗ ಕೇಳಿಬಂದಿದೆ. ಹೀಗಾಗಿ ಯುವತಿ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯುವಕನ ತಂದೆ ನೀಡಿದ್ದ ದೂರಿನ ಅನ್ವಯ ಕಾವೂರು ಠಾಣೆ ಪೊಲೀಸರು BNS 108, 352,351(3),3(5) ಸೆಕ್ಷನ್ ಅಡಿ ಪ್ರಕರಣ ದಾಖಲು ಮಾಡಿಕೊಂಡಿದ್ದರು.
ಮೇರುನಟ ಡಾ. ರಾಜ್ಕುಮಾರ್ ಅವರ ಪುಣ್ಯಸ್ಮರಣೆ (Death Anniversary) ಪ್ರಯುಕ್ತ ಇಂದು (ಏಪ್ರಿಲ್ 12) ಕುಟುಂಬದವರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ಕೂಡ ಅಪಾರ ಸಂಖ್ಯೆಯಲ್ಲಿ ಬಂದು ಅಣ್ಣಾವ್ರಿಗೆ ನಮಿಸಿದ್ದಾರೆ. ರಾಜ್ಕುಮಾರ್ (Dr Rajkumar) ನಿಧನರಾಗಿ 20 ವರ್ಷಗಳು ಕಳೆದಿವೆ. ಆ ಬಗ್ಗೆ ರಾಘವೇಂದ್ರ ರಾಜ್ಕುಮಾರ್ ಅವರು ಮಾತನಾಡಿದ್ದಾರೆ. ‘20 ವರ್ಷ ಆಯ್ತು ಅಂತ ನಂಬೋಕೆ ಆಗುತ್ತಿಲ್ಲ. ಅವರು ನಮ್ಮ ಜೊತೆ ಇನ್ನೂ ಇದ್ದಾರೆ ಅಂತ ಅಂದುಕೊಂಡಿದ್ದೇವೆ. ಅವರು ಸಂಪಾದನೆ ಮಾಡಿದ್ದು ಅಭಿಮಾನಿಗಳನ್ನು ಮಾತ್ರ. ಇಷ್ಟು ವರ್ಷ ಆದರೂ ಜನರು ಬಂದು ನಮಸ್ಕಾರ ಮಾಡುತ್ತಿದ್ದಾರೆ. ಅವರ ಸಿನಿಮಾಗಳಿಗೆ ಸಾವಿಲ್ಲ. ಅವೆಲ್ಲ ಲೈಬ್ರರಿ ಇದ್ದಂತೆ. ಯಾವಾಗಲೂ ಜನರು ನೋಡುತ್ತಾ ಇರುತ್ತಾರೆ. ಎಷ್ಟು ವರ್ಷ ಕಳೆದರೂ ಜನರು ಹೀಗೆ ಬರುತ್ತಾ ಇರುತ್ತಾರೆ. ಇದು ಆ ರೀತಿಯ ಸ್ಥಳ ಆಗಿದೆ’ ಎಂದು ರಾಘವೇಂದ್ರ ರಾಜ್ಕುಮಾರ್ (Raghavendra Rajkumar) ಹೇಳಿದ್ದಾರೆ.
ಚೆನ್ನೈ, ಏಪ್ರಿಲ್ 12: ತಮಿಳುನಾಡಿನ ಅಂಬೂರಿನ ಕುಡಪ್ಪನಮೂಡಿನಲ್ಲಿರುವ ಕುಳುವಲ್ವತ್ತಂ ಶ್ರೀ ಭಗತಿ ದೇವಸ್ಥಾನ(Temple)ದಲ್ಲಿ ಶನಿವಾರ ಬೆಳಗ್ಗೆ ಒಂದು ವಿಚಿತ್ರ ದೃಶ್ಯ ಕಂಡುಬಂದಿದೆ. ದೇವಸ್ಥಾನದ ಕಚೇರಿಗೆ ಕನ್ನ ಹಾಕಿ ಹಣ ಕದ್ದ ಕಳ್ಳನೊಬ್ಬ, ಅಲ್ಲಿಂದ ಪರಾರಿಯಾಗುವ ಬದಲು ಸುಸ್ತಾಗಿ ಅಲ್ಲೇ ಗಾಢ ನಿದ್ರೆಗೆ ಜಾರಿದ್ದ. ದಿನದಂತೆ ಶನಿವಾರ ಬೆಳಗ್ಗೆ 5.30ಕ್ಕೆ ದೇವಸ್ಥಾನದ ಸಮಿತಿ ಸದಸ್ಯರು ಕಚೇರಿಗೆ ಬಂದಾಗ, ಬಾಗಿಲು ಮುರಿದಿರುವುದನ್ನು ಕಂಡು ಆತಂಕಕ್ಕೊಳಗಾದರು. ಯಾವುದೋ ದೊಡ್ಡ ಕಳ್ಳತನವಾಗಿದೆ ಎಂದು ಒಳಗೆ ಹೋಗಿ ನೋಡಿದವರಿಗೆ ಆಶ್ಚರ್ಯ ಕಾದಿತ್ತು. ಕಚೇರಿಯ ಹಣದ ಪೆಟ್ಟಿಗೆಯಿಂದ ನಗದು ಮಾಯವಾಗಿತ್ತು, ಆದರೆ ಕಳ್ಳ ಮಾತ್ರ ಪಕ್ಕದಲ್ಲೇ ಅತ್ಯಂತ ಆರಾಮವಾಗಿ ಗೊರಕೆ ಹೊಡೆಯುತ್ತಾ ಮಲಗಿದ್ದ.
ಪೊಲೀಸರ ತನಿಖೆಯ ಪ್ರಕಾರ, ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಸೆಂಥಿಲ್ (40) ಎಂದು ಗುರುತಿಸಲಾಗಿದೆ. ಈತ ಹಳೇ ಕಳ್ಳನಾಗಿದ್ದು, ಈಗಾಗಲೇ ಹಲವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ನಡೆದಿದ್ದು ಹೇಗೆ?
ಶುಕ್ರವಾರ ತಡರಾತ್ರಿ ದೇವಸ್ಥಾನದ ಕಚೇರಿಯ ಬಾಗಿಲು ಒಡೆದು ಒಳನುಗ್ಗಿದ ಸೆಂಥಿಲ್, ಅಲ್ಲಿದ್ದ 8,500 ರೂಪಾಯಿ ನಗದನ್ನು ಕದ್ದಿದ್ದಾನೆ. ಕಳ್ಳತನದ ನಂತರ ಅಲ್ಲಿಂದ ಓಡಿಹೋಗುವ ಬದಲು, ಬಹುಶಃ ಹಗಲಿಡೀ ಅಲೆದಾಡಿ ಸುಸ್ತಾಗಿದ್ದ ಸೆಂಥಿಲ್ಗೆ ಆ ತಂಪಾದ ಕಚೇರಿಯ ಒಳಗೆ ಕಣ್ಣು ಮುಚ್ಚಿದ ತಕ್ಷಣ ನಿದ್ರೆ ಹತ್ತಿದೆ.
ಬೆಳಗ್ಗೆ ದೇವಸ್ಥಾನದ ಸಿಬ್ಬಂದಿ ಬರುವವರೆಗೂ ಈತ ತಾನು ಕದ್ದ ಹಣದ ಮೇಲೆ ಕೈಯಿಟ್ಟುಕೊಂಡು ಗಾಢ ನಿದ್ರೆಯಲ್ಲೇ ಇದ್ದ. ದೇವಸ್ಥಾನದ ಸಿಬ್ಬಂದಿ ತಕ್ಷಣ ವೆಲ್ಲರಡ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರು ನಿದ್ರೆಯಲ್ಲಿದ್ದ ಸೆಂಥಿಲ್ನನ್ನು ಎಬ್ಬಿಸಿ ಕೈಕೋಳ ತೊಡಿಸಿದ್ದಾರೆ. ಕದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
“ಮಾಡಿದ್ದುಣ್ಣೋ ಮಹಾರಾಯ” ಎನ್ನುವಂತೆ, ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಸೆಂಥಿಲ್ ತಾನು ಎಸ್ಕೇಪ್ ಆಗುವ ಪ್ಲಾನ್ ಮರೆತು ನಿದ್ರೆಗೆ ಜಾರಿದ್ದು ಈಗ ಅಂಬೂರಿನಲ್ಲಿ ದೊಡ್ಡ ಚರ್ಚೆಯ ವಿಷಯವಾಗಿದೆ. ಪೊಲೀಸರ ಪಾಲಿಗೆ ಇದು ಅತ್ಯಂತ ಸುಲಭವಾದ ಇನ್ವೆಸ್ಟಿಗೇಷನ್ ಎನಿಸಿಕೊಂಡಿದೆ.
IPL 2026: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಆಟಗಾರ ನಿತೀಶ್ ರಾಣಾ (Nitish Rana) ಅವರು ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಪಂದ್ಯದ ಸಂಭಾವನೆಯ ಶೇಕಡಾ 25ರಷ್ಟು ದಂಡಕ್ಕೆ ಗುರಿಯಾಗಿದ್ದಾರೆ. ಇದರೊಂದಿಗೆ ಅವರಿಗೆ ಒಂದು ‘ಡಿಮೆರಿಟ್’ ಪಾಯಿಂಟ್ ಕೂಡ ನೀಡಲಾಗಿದೆ. ಕುತೂಹಲಕಾರಿ ವಿಷಯ ಎಂದರೆ ಈ ಪಂದ್ಯದಲ್ಲಿ ನಿತೀಶ್ ರಾಣಾ ಕಣಕ್ಕಿಳಿದಿರಲಿಲ್ಲ ಎಂಬುದು.
ಏಪ್ರಿಲ್ 11, 2026 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ ವೇಳೆ ನಿತೀಶ್ ರಾಣಾ ಲೈನ್ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು.
ಪಂದ್ಯದ ವೇಳೆ ಡೆಲ್ಲಿ ಬ್ಯಾಟರ್ ಟ್ರಿಸ್ಟನ್ ಸ್ಟಬ್ಸ್ ಅವರ ಗ್ಲೌಸ್ ಬದಲಾಯಿಸಲು ಮಾಡಿದ ಮನವಿಯನ್ನು ಅಂಪೈರ್ ತಿರಸ್ಕರಿಸಿದ್ದರು. ಈ ಸಂದರ್ಭದಲ್ಲಿ ಇಂಪ್ಯಾಕ್ಟ್ ಸಬ್ಸ್ಟಿಟ್ಯೂಟ್ ಆಗಿದ್ದ ನಿತೀಶ್ ರಾಣಾ, ಮೈದಾನದ ಹೊರಗಿನಿಂದ ನಾಲ್ಕನೇ ಅಂಪೈರ್ ಜೊತೆ ತೀವ್ರ ವಾಗ್ವಾದಕ್ಕಿಳಿದರು.
ಈ ವೇಳೆ ಅವರು ಅಸಭ್ಯ ಪದಗಳನ್ನು ಬಳಸಿದ್ದಾರೆ ಎಂಬುದು ಸಾಬೀತಾಗಿದೆ. ಇದು ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.3 ರ ಅಡಿಯಲ್ಲಿ ‘ಲೆವೆಲ್ 1’ ಅಪರಾಧವೆಂದು ಪರಿಗಣಿಸಲಾಗಿದೆ.
ಶಿಕ್ಷೆಯ ಪ್ರಮಾಣ:
ನಿತೀಶ್ ರಾಣಾ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಮ್ಯಾಚ್ ರೆಫರಿ ವಿಧಿಸಿದ ಶಿಕ್ಷೆಯನ್ನು ಅಂಗೀಕರಿಸಿದ್ದಾರೆ. ಹೀಗಾಗಿ ಈ ನಿರ್ಧಾರವೇ ಅಂತಿಮವಾಗಿದೆ. ಅದರಂತೆ ಇದೀಗ ನಿತೀಶ್ ರಾಣಾಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಲಾಗಿದೆ.
ಇನ್ನು ಈ ಪಂದ್ಯದಲ್ಲಿ ಕೇವಲ ರಾಣಾಗೆ ಮಾತ್ರವಲ್ಲದೆ, ನಿಧಾನಗತಿಯ ಓವರ್ ರೇಟ್ ಕಾರಣಕ್ಕಾಗಿ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್ ಅವರಿಗೂ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ದಂಡದ ಮೊತ್ತ ಎಷ್ಟು?
ನಿತೀಶ್ ರಾಣಾ ಅವರಿಗೆ ವಿಧಿಸಲಾದ ಶೇ. 25ರಷ್ಟು ದಂಡದ ಅಂದಾಜು ಮೊತ್ತ ₹7.5 ಲಕ್ಷ ರೂ. ಐಪಿಎಲ್ ನಿಯಮಗಳ ಪ್ರಕಾರ ಆಟಗಾರರ ದಂಡವನ್ನು ಈ ಕೆಳಗಿನಂತೆ ಲೆಕ್ಕ ಹಾಕಲಾಗುತ್ತದೆ…
ನಿತೀಶ್ ರಾಣಾ ಅವರ ಒಟ್ಟು ಸಂಭಾವನೆ: ಐಪಿಎಲ್ 2026ರ ಸೀಸನ್ಗಾಗಿ ನಿತೀಶ್ ರಾಣಾ ಅವರ ಸಂಭಾವನೆ ₹4.20 ಕೋಟಿ.
ಪ್ರತಿ ಪಂದ್ಯದ ಸಂಭಾವನೆ: ಐಪಿಎಲ್ನ ಲೀಗ್ ಹಂತದಲ್ಲಿ ಒಟ್ಟು 14 ಪಂದ್ಯಗಳಿರುತ್ತವೆ. ಆದ್ದರಿಂದ ಒಂದು ಪಂದ್ಯದ ಸಂಭಾವನೆಯು ₹4.20 ಕೋಟಿ / 14 = ₹30 ಲಕ್ಷ ಆಗುತ್ತದೆ.
ದಂಡದ ಲೆಕ್ಕಾಚಾರ: ಈ ₹30 ಲಕ್ಷದ ಶೇ. 25ರಷ್ಟು ಅಂದರೆ (30,00,000 * 0.25) = ₹7,50,000.
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಮದುವೆ ಸಲುವಾಗಿ ಇಷ್ಟು ದಿನ ಬ್ರೇಕ್ ಪಡೆದುಕೊಂಡಿದ್ದರು. ಈಗ ಅವರ ‘ರಣಬಾಲಿ’ (Ranabaali) ಸಿನಿಮಾದ ಚಿತ್ರೀಕರಣಕ್ಕೆ ಮರಳಿದ್ದಾರೆ. ಶೂಟಿಂಗ್ ಸೆಟ್ನಲ್ಲಿ ಚಿತ್ರತಂಡದ ಜೊತೆ ಅವರು ತೆಗೆದುಕೊಂಡ ಫೋಟೋ ವೈರಲ್ ಆಗಿದೆ. ವಿವಾಹದ ನಂತರ ಮೊದಲ ಬಾರಿಗೆ ಚಿತ್ರೀಕರಣಕ್ಕೆ ಹಾಜರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಚಿತ್ರತಂಡದವರು ಅತ್ಯಂತ ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ.
ಶೂಟಿಂಗ್ ಸೆಟ್ನಲ್ಲಿ ವಿಶೇಷವಾಗಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಲಾಗಿದೆ. ಇಡೀ ಚಿತ್ರತಂಡವು ವಿಜಯ್ ಮತ್ತು ರಶ್ಮಿಕಾ ಅವರಿಗೆ ಹೂಗುಚ್ಛ ನೀಡಿ, ಸುಖಿ ದಾಂಪತ್ಯ ಜೀವನಕ್ಕೆ ಶುಭ ಹಾರೈಸಿತು. ‘ಹ್ಯಾಪಿ ಮ್ಯಾರೀಡ್ ಲೈಫ್, ಮಿಸ್ಟರ್ ಆ್ಯಂಡ್ ಮಿಸಸ್ ರಣಬಾಲಿ’ ಎಂದು ಹಾರೈಸಲಾಗಿದೆ. ‘ರಣಬಾಲಿ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ.
ಈ ಚಿತ್ರವನ್ನು ರಾಹುಲ್ ಸಂಕೃತ್ಯನ್ ನಿರ್ದೇಶಿಸುತ್ತಿದ್ದಾರೆ. ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್’ ಬೃಹತ್ ಬಜೆಟ್ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದೆ. ‘ರಣಬಾಲಿ’ ಕೇವಲ ಪ್ರೇಮಕಥೆಯಲ್ಲ. ಇದು 19ನೇ ಶತಮಾನದ ಬ್ರಿಟಿಷ್ ಆಳ್ವಿಕೆಯ ಹಿನ್ನೆಲೆಯಲ್ಲಿ ನಡೆಯುವ ಕಥೆಯಾಗಿದೆ. ವಿಜಯ್ ದೇವರಕೊಂಡ ಅವರು ವೀರ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜಯಮ್ಮ ಎಂಬ ಪಾತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ.
ಜನ ನಾಯಗನ್ ಲೀಕ್: ದೇವರಕೊಂಡ ಬೇಸರ
ದಳಪತಿ ವಿಜಯ್ ನಟನೆಯ ‘ಜನ ನಾಯಗನ’ ಸಿನಿಮಾ ಲೀಕ್ ಆಗಿದ್ದಕ್ಕೆ ವಿಜಯ್ ದೇವರಕೊಂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಜನ ನಾಯಕನ್ ಚಿತ್ರದ ಲೀಕ್ ವಿಚಾರ ನನಗೆ ತುಂಬಾ ಕೋಪ ತರುತ್ತಿದೆ. ವೃತ್ತಿಜೀವನದ ಆರಂಭದಲ್ಲಿ ಇಂತಹ ಘಟನೆಗಳಿಂದ ಆಗುವ ನೋವು ಮತ್ತು ನಷ್ಟದ ಅನುಭವ ನನಗೇ ಇದೆ. ಇದು ನನ್ನ ವಿಷಯ ಮಾತ್ರವಲ್ಲ, ಸಹನಟರು, ನಿರ್ದೇಶಕರು, ನಿರ್ಮಾಪಕರು ಮತ್ತು ತಮ್ಮ ಕನಸುಗಳನ್ನು ಹೂಡಿಕೆ ಮಾಡಿದ ಅನೇಕ ಜನರ ವಿಚಾರವೂ ಆಗಿದೆ’ ಎಂದು ದೇವರಕೊಂಡ ಟ್ವೀಟ್ ಮಾಡಿದ್ದಾರೆ.
‘ಈ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಬೇಕು ಮತ್ತು ಇದಕ್ಕೆ ಕಾರಣರಾದವರನ್ನು ಪತ್ತೆಹಚ್ಚಬೇಕು. ಹಾಗಾಗದಿದ್ದರೆ ಅದು ವ್ಯವಸ್ಥೆಯ ವೈಫಲ್ಯವನ್ನು ತೋರಿಸುತ್ತದೆ. ಜನರು ಎಷ್ಟು ಅನಾಸಕ್ತಿ ಹೊಂದಿರಬಹುದು ಮತ್ತು ಇನ್ನೊಬ್ಬರಿಗೆ ಹಾನಿ ಮಾಡಲು ಎಷ್ಟರ ಮಟ್ಟಿಗೆ ಹೋಗುತ್ತಾರೆ ಎಂಬುದನ್ನು ಇದು ಮತ್ತೆ ಮತ್ತೆ ನೆನಪಿಸುತ್ತದೆ’ ಎಂದು ವಿಜಯ್ ದೇವರಕೊಂಡ ಬರೆದುಕೊಂಡಿದ್ದಾರೆ.
ಬೆಂಗಳೂರು, ಏಪ್ರಿಲ್ 12: ನಗರದ ಹಳೆ ಗುರಪ್ಪನಪಾಳ್ಯದ ವಾರ್ಡ್ ನಂಬರ್ 171 ರಲ್ಲಿ ಕಸ ನಿರ್ವಹಣೆಯು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ತಿಂಗಳುಗಟ್ಟಲೆ ಕಸ ಸಂಗ್ರಹವಾಗಿದ್ದು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳು ಸಂಪೂರ್ಣವಾಗಿ ಮುಚ್ಚಿಹೋಗಿವೆ. ಜಿಬಿಎ ಮತ್ತು ಬೆಂಗಳೂರು ದಕ್ಷಿಣ ನಗರಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.
ಸ್ಥಳೀಯ ನಿವಾಸಿಗಳಾದ ಜಾಕೀರ್ ಹುಸೇನ್ ಅವರ ನೇತೃತ್ವದಲ್ಲಿ ನಾಗರಿಕರು ತಮ್ಮ ಸ್ವಂತ ವೆಚ್ಚದಲ್ಲಿ ಜೆಸಿಬಿ ಕರೆಸಿ ಕಸವನ್ನು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕಸದ ರಾಶಿಗಳಿಂದ ಹುಳುಗಳು, ಸೊಳ್ಳೆಗಳ ಹಾವಳಿ ಹೆಚ್ಚಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಬ್ರ್ಯಾಂಡ್ ಬೆಂಗಳೂರು “ಬ್ಯಾಡ್ ಬೆಂಗಳೂರು” ಆಗುತ್ತಿದ್ದು, ಕಸ ನಿರ್ವಹಣೆಗಾಗಿ ಹಂಚಿಕೆಯಾದ 1400 ಕೋಟಿ ರೂಪಾಯಿಗಳ ಅನುದಾನದ ಸದ್ಬಳಕೆ ಬಗ್ಗೆ ನಾಗರಿಕರು ಪ್ರಶ್ನಿಸಿದ್ದಾರೆ. ನಗರ ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಈ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ.
ಇದು 2026ರ ಏಪ್ರಿಲ್ ನ ಎರಡನೇ ವಾರವಾಗಿದ್ದು, ಅಭಿವೃದ್ಧಿಗೆ ಸಹಕಾರ, ಸ್ಪರ್ಧಾತ್ಮಕ ಚಿಂತೆ, ಅತ್ಯಾಪ್ತರ ಜೊತೆ ಕಲಹ, ಕ್ರಿಯಾತ್ಮಕ ಕಾರ್ಯಕ್ಕೆ ಒತ್ತು, ಅನೇಕ ದಿನದ ದುಃಖಕ್ಕೆ ವಿರಾಮ ಇವೆಲ್ಲ ಈ ವಾರದಲ್ಲಿ ಆಗಲಿದೆ.
ಮೇಷ:
ಈ ವಾರ ನಿಮಗೆ ಮಿಶ್ರಫಲವಿದೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿವೆ. ಹಣಕಾಸಿನ ಹರಿವು ಸಾಧಾರಣವಾಗಿದ್ದರೂ, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಆರೋಗ್ಯದ ಕಡೆ ಗಮನವಿರಲಿ, ಹಿರಿಯರ ಸಲಹೆ ಪಡೆದು ಮುನ್ನಡೆಯಿರಿ.
ವೃಷಭ:
ಆರ್ಥಿಕವಾಗಿ ಅಭಿವೃದ್ಧಿ ಕಾಣುವಿರಿ. ಸ್ಥಿರಾಸ್ತಿ ಖರೀದಿ ಅಥವಾ ಹೂಡಿಕೆಗೆ ಸಕಾಲ. ಕುಟುಂಬದಲ್ಲಿ ಶುಭ ಕಾರ್ಯಗಳು ಜರುಗಲಿವೆ. ನಿಮ್ಮ ತಾಳ್ಮೆಯು ಸಂಕೀರ್ಣ ಸಮಸ್ಯೆಗಳನ್ನು ಬಗೆಹರಿಸಲು ಸಹಕಾರಿ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ.
ಮಿಥುನ:
ಈ ವಾರ ದೂರದ ಪ್ರಯಾಣದ ಯೋಗವಿದೆ. ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ, ಇಲ್ಲವಾದರೆ ಸಂಬಂಧಗಳಲ್ಲಿ ಬಿರುಕು ಬರಬಹುದು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಹೆಚ್ಚಿನ ಶ್ರಮ ವಹಿಸಬೇಕಾದ ಅಗತ್ಯವಿದೆ.
ಕರ್ಕಾಟಕ:
ಮಾನಸಿಕ ನೆಮ್ಮದಿಗಾಗಿ ದೇವತಾರಾಧನೆ ಮಾಡಿ. ವ್ಯಾಪಾರದಲ್ಲಿ ಲಾಭ ಕಂಡುಬಂದರೂ ಶತ್ರುಗಳ ಕಾಟವಿರಬಹುದು. ಮನೆಯಲ್ಲಿ ಸಂತಸದ ವಾತಾವರಣವಿರುತ್ತದೆ. ನಿಮ್ಮ ದಕ್ಷತೆಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಗಲಿದೆ.
ಸಿಂಹ:
ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಸಮಾಜದಲ್ಲಿ ಗೌರವ ಲಭಿಸುತ್ತದೆ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಬೇಡ. ಹಳೆಯ ಮಿತ್ರರ ಭೇಟಿಯಿಂದ ಮನಸ್ಸು ಹಗುರವಾಗಲಿದೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.
ಕನ್ಯಾ:
ಈ ವಾರ ಅನಿರೀಕ್ಷಿತ ಧನಲಾಭವಾಗಲಿದೆ. ನೂತನ ಕಾರ್ಯಾರಂಭಕ್ಕೆ ಇದು ಸಕಾಲ. ನೆರೆ ಹೊರೆಯವರೊಂದಿಗೆ ಸಾಮರಸ್ಯದಿಂದ ವರ್ತಿಸಿ. ಆಧ್ಯಾತ್ಮಿಕ ಚಿಂತನೆಗಳು ನಿಮ್ಮನ್ನು ಸನ್ಮಾರ್ಗದಲ್ಲಿ ನಡೆಸಲಿವೆ. ಪ್ರಯಾಣದ ವೇಳೆ ಜಾಗರೂಕರಾಗಿರಿ.
ತುಲಾ:
ವೈವಾಹಿಕ ಜೀವನದಲ್ಲಿ ಮಧುರತೆ ಇರಲಿದೆ. ಕೃಷಿಕರಿಗೆ ಉತ್ತಮ ಆದಾಯದ ನಿರೀಕ್ಷೆಯಿದೆ. ಭೂಮಿ ಸಂಬಂಧಿತ ವಿವಾದಗಳು ಬಗೆಹರಿಯಲಿವೆ. ಕಲಾತ್ಮಕ ಕೆಲಸಗಳಲ್ಲಿ ಆಸಕ್ತಿ ಹೆಚ್ಚಲಿದೆ. ಆರ್ಥಿಕ ಸಮತೋಲನ ಕಾಯ್ದುಕೊಳ್ಳುವುದು ಈ ವಾರ ಮುಖ್ಯ.
ವೃಶ್ಚಿಕ:
ವೃತ್ತಿಜೀವನದಲ್ಲಿ ಸವಾಲುಗಳು ಎದುರಾಗಬಹುದು. ಎದುರಾಳಿಗಳನ್ನು ಧೈರ್ಯದಿಂದ ಎದುರಿಸುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ಮಕ್ಕಳ ಸಾಧನೆಯಿಂದ ಹೆಮ್ಮೆ ಪಡುವಿರಿ. ಹೂಡಿಕೆಯ ವಿಷಯದಲ್ಲಿ ಅನುಭವಿಗಳ ಮಾರ್ಗದರ್ಶನ ಬಹಳ ಅವಶ್ಯಕ.
ಧನುಸ್ಸು:
ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದೂರದ ಸಂಬಂಧಿಗಳಿಂದ ಶುಭ ವಾರ್ತೆ ಕೇಳುವಿರಿ. ಸಂಶೋಧನಾ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ. ಕೋಪವನ್ನು ನಿಯಂತ್ರಿಸಿ, ಸೌಮ್ಯವಾಗಿ ವರ್ತಿಸುವುದು ವೃತ್ತಿಯಲ್ಲಿ ಯಶಸ್ಸು ತಂದುಕೊಡಲಿದೆ.
ಮಕರ:
ವೃತ್ತಿರಂಗದಲ್ಲಿ ಒತ್ತಡವಿದ್ದರೂ ಕಾರ್ಯಸಿದ್ಧಿಯಾಗಲಿದೆ. ವಾಹನ ಚಾಲನೆಯಲ್ಲಿ ಎಚ್ಚರವಿರಲಿ. ತಂದೆಯ ಕಡೆಯಿಂದ ಆಸ್ತಿ ಲಾಭವಾಗುವ ಸಾಧ್ಯತೆ ಇದೆ. ಸೃಜನಶೀಲ ಕೆಲಸಗಳಿಗೆ ಈ ವಾರ ಪೂರಕವಾಗಿದ್ದು, ಹೊಸ ಆಲೋಚನೆಗಳನ್ನು ಕಾರ್ಯರೂಪಕ್ಕೆ ತರಬಹುದು.
ಕುಂಭ:
ಆತ್ಮೀಯರೊಂದಿಗೆ ಸಮಯ ಕಳೆಯುವಿರಿ. ವಾಣಿಜ್ಯ ವ್ಯವಹಾರಗಳಲ್ಲಿ ಲಾಭದ ಪ್ರಮಾಣ ಹೆಚ್ಚಾಗಲಿದೆ. ಹೊಸ ಬಟ್ಟೆ ಅಥವಾ ಆಭರಣ ಖರೀದಿಸುವ ಯೋಗವಿದೆ. ದೈಹಿಕ ವ್ಯಾಯಾಮಕ್ಕೆ ಆದ್ಯತೆ ನೀಡಿ, ಮಾನಸಿಕ ನೆಮ್ಮದಿಗೆ ಯೋಗಾಭ್ಯಾಸ ಮಾಡಿ.
ಮೀನ:
ಅಂದುಕೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳಲಿವೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿದ್ದು, ಸಾಲದ ಹೊರೆ ಕಡಿಮೆಯಾಗಲಿದೆ. ಪ್ರೇಮ ಜೀವನದಲ್ಲಿ ಹೊಸ ತಿರುವು ಬರಬಹುದು. ಸಂಗಾತಿಯ ಪ್ರೀತಿ ಮತ್ತು ಬೆಂಬಲ ಸದಾ ನಿಮ್ಮೊಂದಿಗಿರಲಿದೆ.
ಲಕ್ನೋ, ಏಪ್ರಿಲ್ 12: ವಿಚ್ಛೇದನ ಪ್ರಕರಣದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ನವಜಾತ ಶಿಶುವಿನ ಜತೆ ಲಕ್ನೋ ಹೈಕೋರ್ಟ್ನ 5ನೇ ಮಹಡಿಯಿಂದ ಹಾರಲು ಯತ್ನಿಸಿರುವ ಘಟನೆ ನಡೆದಿದೆ. ಎಸ್ಐ ಧೈರ್ಯದಿಂದ ಮಧ್ಯಪ್ರವೇಶಿಸಿ ಎರಡೂ ಜೀವಗಳನ್ನು ಉಳಿಸಿದ್ದಾರೆ. ಮಹಿಳೆಯೊಬ್ಬರು ಕೋರ್ಟ್ನ ಐದನೇ ಮಹಡಿಯ ತುದಿಯಲ್ಲಿ ಮಗುವನ್ನು ಕೈಯಲ್ಲಿ ಎತ್ತಿಕೊಂಡು ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಎಲ್ಲರೂ ಮನವೊಲಿಸಲು ಯತ್ನಿಸಿರುವುದನ್ನು ನೊಡಬಹುದು.