ಬಾಯ್​ಫ್ರೆಂಡ್ನ ಮದುವೆಯಾಗಲು ಹೆತ್ತವರಿಗೆ ವಿಷ ಉಣಿಸಿದ ಅಪ್ರಾಪ್ತ ಮಗಳು

ಬಾಯ್​ಫ್ರೆಂಡ್ನ ಮದುವೆಯಾಗಲು ಹೆತ್ತವರಿಗೆ ವಿಷ ಉಣಿಸಿದ ಅಪ್ರಾಪ್ತ ಮಗಳು

ಮರೆನಾ, ಏಪ್ರಿಲ್ 13: ಅಪ್ರಾಪ್ತ ಬಾಲಕಿಯೊಬ್ಬಳು ಬಾಯ್​ಫ್ರೆಂಡ್​ನನ್ನು ಮದುವೆಯಾಗಲು ತನ್ನ ಹೆತ್ತವರಿಗೆ ವಿಷ(Poison) ಉಣಿಸಿರುವ ಘಟನೆ ಮಧ್ಯಪ್ರದೇಶದ ಮರೆನಾದಲ್ಲಿ ನಡೆದಿದೆ. ಮನುಷ್ಯತ್ವಕ್ಕೇ ಕಪ್ಪುಚುಕ್ಕಿ ಇಡುವಂತಹ ಘಟನೆಯೊಂದು ನಡೆದಿದೆ. ಪ್ರೀತಿಯ ಅಮಲಿನಲ್ಲಿ ಕುರುಡಾದ ಮಗಳೊಬ್ಬಳು, ಹೆತ್ತವರನ್ನೇ ಮುಗಿಸಲು ಸಂಚು ರೂಪಿಸಿದ ಕರಾಳ ಕಥೆ ಇಲ್ಲಿದೆ.
ಹೆತ್ತವರು ಮಗಳ ಮೇಲೆ ಇಟ್ಟಿದ್ದ ನಂಬಿಕೆ ಹುಸಿಯಾಗಿದೆ, ಚಪಾತಿಯಲ್ಲಿ ಇಲಿ ಪಾಷಾಣ ಬೆರೆಸಿ ಪೋಷಕರಿಗೆ ನೀಡಿರುವ ಘಟನೆ ಬೆಳಕಿಗೆ . ಮೊರೆನಾ ಜಿಲ್ಲೆಯ ಪೋರ್ಸಾ ಎಂಬಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಗೆಳೆಯನ ಜೊತೆ ಸೇರಿ ತಂದೆ-ತಾಯಿಯನ್ನೇ ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.

ತನ್ನ ಪ್ರೇಮಕ್ಕೆ ಅಡ್ಡಿಯಾಗುತ್ತಾರೆಂಬ ಕಾರಣಕ್ಕೋ ಏನೋ, ಈ ಬಾಲಕಿ ತನ್ನ ಗೆಳೆಯ ಸುದಾಮನ ಜೊತೆ ಸೇರಿ ಕ್ರೂರ ಯೋಜನೆಯೊಂದನ್ನು ರೂಪಿಸಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ, ತಾನೇ ಅಡುಗೆ ಮಾಡುವ ಜವಾಬ್ದಾರಿ ವಹಿಸಿಕೊಂಡ ಬಾಲಕಿ, ಚಪಾತಿಯ ಹಿಟ್ಟಿನಲ್ಲಿ ಇಲಿ ವಿಷವನ್ನು ಬೆರೆಸಿದ್ದಾಳೆ. ಇದನ್ನು ತಿಂದ ತಾಯಿ ಮಿಥಿಲೇಶ್ ಮತ್ತು ತಂದೆ ಗಬ್ಬರ್ ಪ್ರಜಾಪತಿ ಅವರ ಆರೋಗ್ಯ ತಕ್ಷಣವೇ ಹದಗೆಟ್ಟಿದೆ. ಸದ್ಯ ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದ್ದು, ಮೊರೆನಾದಿಂದ ಗ್ವಾಲಿಯರ್‌ನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ.

ಈ ಪ್ರಕರಣವು ಆರಂಭದಲ್ಲಿ ಕೇವಲ ಫುಡ್​ಪಾಯ್ಸನ್​ನಂತೆ ತೋರಿತ್ತು. ಆದರೆ ಪೊಲೀಸರಿಗೆ ಸಿಕ್ಕ ಒಂದು ಆಡಿಯೋ ಕ್ಲಿಪ್ ಇಡೀ ಕಥೆಯನ್ನೇ ಬದಲಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಆಡಿಯೋದಲ್ಲಿ ಬಾಲಕಿ ಮತ್ತು ಆಕೆಯ ಗೆಳೆಯ ಸುದಾಮ ಪರಸ್ಪರ ಸಂಚು ಹೂಡುತ್ತಿರುವುದು ಸ್ಪಷ್ಟವಾಗಿದೆ.

ಮತ್ತಷ್ಟು ಓದಿ: ಮೌಂಟ್ ಎವರೆಸ್ಟ್​ ಪರ್ವತಾರೋಹಿಗಳಿಗೆ ವಿಷ ನೀಡಿದ ಆರೋಪ; 185 ಕೋಟಿ ರೂ. ಹಗರಣ ಬಯಲು

ಹತ್ತಿರದಲ್ಲೇ ಗೊಬ್ಬರದ ಅಂಗಡಿ ಇದೆ, ಅಲ್ಲಿಂದ ಇಲಿ ವಿಷ ತಂದಿಟ್ಟುಕೊ. ಇವತ್ತು ನಾನೇ ರೊಟ್ಟಿ ಮಾಡುತ್ತಿದ್ದೇನೆ, ನನಗೆ ಒಳ್ಳೆಯ ಅವಕಾಶ ಸಿಕ್ಕಿದೆ. ರೊಟ್ಟಿಯಲ್ಲಿ ವಿಷ ಬೆರೆಸಿ ಅವರಿಗೆ ತಿನ್ನಿಸಿಬಿಡುತ್ತೇನೆ ಎಂದು ಆಕೆ ಹೇಳಿದ್ದಳು. ಈ ಒಂದು ಸಂಭಾಷಣೆ ಪೊಲೀಸರ ಕೈಗೆ ಸಿಕ್ಕ ನಂತರವೇ ಮಗಳ ಕ್ರೂರ ಮುಖ ಅನಾವರಣಗೊಂಡಿತು.

ಪೋಷಕರಾದ ಮಿಥಿಲೇಶ್ ಮತ್ತು ಗಬ್ಬರ್ ಪ್ರಜಾಪತಿ ಅವರು ಪ್ರಾಣಾಪಾಯದಿಂದ ಪಾರಾದ ನಂತರ ಪೋರ್ಸಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಡಿಯೋ ಸಾಕ್ಷ್ಯ ಮತ್ತು ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಅಪ್ರಾಪ್ತ ಬಾಲಕಿ ಮತ್ತು ಆಕೆಯ ಗೆಳೆಯ ಸುದಾಮನ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಇಬ್ಬರನ್ನೂ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಪ್ರೀತಿಯ ಹೆಸರಿನಲ್ಲಿ ಹೆತ್ತವರನ್ನೇ ಬಲಿ ಕೊಡಲು ಹೊರಟ ಮಗಳ ಈ ಕೃತ್ಯ ಇಡೀ ಸಮಾಜವನ್ನು ಬೆಚ್ಚಿಬೀಳಿಸಿದೆ. ಸಂಬಂಧಗಳ ನಡುವಿನ ನಂಬಿಕೆ ಎಷ್ಟು ಶಿಥಿಲವಾಗಿದೆ ಎಂಬುದಕ್ಕೆ ಈ ಘಟನೆ ಕನ್ನಡಿಯಂತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಅಕ್ಷಯ್ ಕುಮಾರ್ ನನ್ನ ಹಾಗೂ ಪ್ರಿಯಾಂಕಾನ ಅಣ್ಣನಂತೆ ರಕ್ಷಿಸಿದ್ರು ’

ನಟ ಅಕ್ಷಯ್ ಕುಮಾರ್ ಅವರು ಇಂದು ಸ್ಟಾರ್ ಹೀರೋ. ಅವರಿಗೆ ಭಾರತದಲ್ಲಿ ಮಾತ್ರವಲ್ಲದೆ ಭಾರತದ ಹೊರಗೆಯೂ ತುಂಬಾ ದೊಡ್ಡ ಅಭಿಮಾನಿ ಬಳಗ ಇದೆ. 2003ರ ವರ್ಷ ನಟನಿಗೆ ಮಾತ್ರವಲ್ಲದೆ ಚಿತ್ರರಂಗಕ್ಕೂ ಬಹಳ ವಿಶೇಷವಾಗಿತ್ತು. ಏಕೆಂದರೆ ಈ ವರ್ಷ, ನಟಿಯರಾದ ಲಾರಾ ದತ್ ಮತ್ತು ಪ್ರಿಯಾಂಕಾ ಚೋಪ್ರಾ ‘ಅಂದಾಜ್’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಇತ್ತೀಚಿನ ಸಂದರ್ಶನವೊಂದರಲ್ಲಿ, ಲಾರಾ ಅವರು ಅಕ್ಷಯ್ ಕುಮಾರ್ ಬಗ್ಗೆ ಮಾತನಾಡಿದ್ದಾರೆ.

‘ಪ್ರಿಯಾಂಕಾ ಮತ್ತು ನಾನು ಒಟ್ಟಿಗೆ ಚಿತ್ರರಂಗಕ್ಕೆ ಬಂದೆವು. ಆಗ ನಾವಿಬ್ಬರೂ ತುಂಬಾ ಚಿಕ್ಕವರಾಗಿದ್ದೆವು. ಆದರೆ ಕನಸು ದೊಡ್ಡದಾಗಿತ್ತು. ದರೆ ನಮಗೆ ಸರಿಯಾದ ಮಾರ್ಗವನ್ನು ತೋರಿಸಲು ಗಾಡ್‌ಫಾದರ್ ಇರಲಿಲ್ಲ. ಆದ್ದರಿಂದ ನಮ್ಮ ಲಾಭವನ್ನು ಪಡೆಯುವ ಬದಲು, ಅಕ್ಷಯ್ ಕುಮಾರ್ ನಮಗೆ ಅಣ್ಣನಂತೆ ದಾರಿ ತೋರಿಸಿದರು’ ಎಂದಿದ್ದಾರೆ ಲಾರಾ.

‘ನೀವು ಬಾಲಿವುಡ್‌ಗೆ ಹೊಸಬರಾದಾಗ, ನಿಮ್ಮನ್ನು ಸುರಕ್ಷಿತವಾಗಿರಿಸಿಕೊಳ್ಳುವುದು ತುಂಬಾ ಕಷ್ಟ. ಅಕ್ಷಯ್ ನಮ್ಮ ಅಸಹಾಯಕತೆ ಅಥವಾ ಅನನುಭವದ ಲಾಭವನ್ನು ಎಂದಿಗೂ ಪಡೆಯಲಿಲ್ಲ. ಇದಕ್ಕೆ ವಿರುದ್ಧವಾಗಿ, ನಮ್ಮ ಸುತ್ತಲಿನ ಪರಿಸರ ಸುರಕ್ಷಿತವಾಗಿರುವಂತೆ ಮತ್ತು ನಾವು ಯಾವುದೇ ರೀತಿಯಲ್ಲಿ ಶೋಷಣೆಗೆ ಒಳಗಾಗದಂತೆ ಅವರು ನೋಡಿಕೊಂಡರು’ ಎಂದು ಲಾರಾ ಅಕ್ಷಯ್ ಕುಮಾರ್ ಅವರನ್ನು ಹೊಗಳಿದರು.

ಲಾರಾ, ಅಕ್ಷಯ್ ಮತ್ತು ಪ್ರಿಯಾಂಕಾ ಬಗ್ಗೆ ಹೇಳುವುದಾದರೆ, ಈ ಮೂವರೂ ‘ಅಂದಾಜ್’ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಆ ಚಿತ್ರದಲ್ಲಿ ಲಾರಾ ಅವರು ಕಾಜಲ್ ಪಾತ್ರವನ್ನು ನಿರ್ವಹಿಸಿದರು ಮತ್ತು ಆ ಚಿತ್ರಕ್ಕಾಗಿ ನಟಿ ಫಿಲ್ಮ್‌ಫೇರ್ ಪ್ರಶಸ್ತಿಯನ್ನು ಸಹ ಗೆದ್ದರು.

ಇದನ್ನೂ ಓದಿ: ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್; ಹಿಗ್ಗಾಮುಗ್ಗಾ ಟ್ರೋಲ್

ಲಾರಾ ದತ್ತಾ ಬಗ್ಗೆ ಹೇಳುವುದಾದರೆ, ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರು. ಈಗ ಅವರು ‘ರಾಮಾಯಣ’ ಮತ್ತು ‘ವೆಲ್ಕಮ್ ಟು ದಿ ಜಂಗಲ್’ ಚಿತ್ರಗಳಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲಾರಾ ಸಾಮಾಜಿಕ ಮಾಧ್ಯಮದಲ್ಲಿಯೂ ಯಾವಾಗಲೂ ಸಕ್ರಿಯರಾಗಿದ್ದಾರೆ. ನಟಿ ತನ್ನ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರಲು ಯಾವಾಗಲೂ ತನ್ನ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ

IPL 2026: ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಎಲ್ಲರ ಗಮನ ಸೆಳೆದಿದ್ದು ಪಾಂಡ್ಯ ಸಹೋದರರ ಜಿದ್ದಾಜಿದ್ದು. ತಮ್ಮ ಹಾರ್ದಿಕ್ ಪಾಂಡ್ಯ ವಿಕೆಟ್ ಪತನಗೊಂಡಾಗ ಅಣ್ಣ ಕೃನಾಲ್ ಪಾಂಡ್ಯ ಸಂಭ್ರಮಿಸಿದ ರೀತಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 240 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ಹಾರ್ದಿಕ್ ಪಾಂಡ್ಯ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಬಿರುಸಿನ ಬ್ಯಾಟಿಂಗ್​ ಪ್ರದರ್ಶಿಸಿದ ಹಾರ್ದಿಕ್ ಪಾಂಡ್ಯ 22 ಎಸೆತಗಳಲ್ಲಿ 40 ರನ್ ಗಳಿಸಿ ಆರ್​ಸಿಬಿ ಪಾಲಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದರು.

ಆದರೆ, 15ನೇ ಓವರ್‌ನಲ್ಲಿ ಆರ್‌ಸಿಬಿ ವೇಗಿ ಜೇಕಬ್ ಡಫಿ ಎಸೆದ ಎಸೆತದಲ್ಲಿ ಸಿಕ್ಸರ್ ಸಿಡಿಸಲು ಹೋಗಿ ಹಾರ್ದಿಕ್ ಔಟ್ ಆದರು. ಈ ಕ್ಷಣದಲ್ಲಿ ಆರ್‌ಸಿಬಿ ಪರ ಆಡುತ್ತಿದ್ದ ಅಣ್ಣ ಕೃನಾಲ್ ಪಾಂಡ್ಯ ತೋರಿದ ಪ್ರತಿಕ್ರಿಯೆ ಎಲ್ಲರನ್ನೂ ದಂಗಾಗುವಂತೆ ಮಾಡಿತು

ಸಾಮಾನ್ಯವಾಗಿ ಅಣ್ಣ ಅಥವಾ ತಮ್ಮ ಔಟ್ ಆದಾಗ ಆಟಗಾರರು ಮೌನವಾಗಿರುತ್ತಾರೆ ಅಥವಾ ಸಾಧಾರಣವಾಗಿ ಸಂಭ್ರಮಿಸುತ್ತಾರೆ. ಆದರೆ ಇಲ್ಲಿ ಕೃನಾಲ್ ಪಾಂಡ್ಯ ಅವರು ಹಾರ್ದಿಕ್ ಔಟ್ ಆಗುತ್ತಿದ್ದಂತೆ ಬೌಲರ್‌ಗಿಂತಲೂ ಮಿಗಿಲಾಗಿ ಕುಣಿದು ಕುಪ್ಪಳಿಸಿದರು. ಅವರ ಮುಖದಲ್ಲಿದ್ದ ಆವೇಶ ಮತ್ತು ಸಂಭ್ರಮ ಕಂಡು ಸ್ವತಃ ಹಾರ್ದಿಕ್ ಪಾಂಡ್ಯ ಕೂಡ ಪೆವಿಲಿಯನ್‌ಗೆ ಮರಳುವಾಗ ಒಮ್ಮೆ ಅಣ್ಣನತ್ತ ತಿರುಗಿ ನೋಡುವಂತಾಯಿತು.

ಸಹೋದರರ ನಡುವೆ ಬಿರುಕು?

ಈ ಸಂಭ್ರಮದ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳು ಮೂಡಿವೆ. 2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಅಮೋಘ ಪ್ರದರ್ಶನ ನೀಡಿದಾಗಲೂ ಕೃನಾಲ್ ಮೈದಾನಕ್ಕೆ ಬಂದಿರಲಿಲ್ಲ ಅಥವಾ ಸೋಶಿಯಲ್ ಮೀಡಿಯಾದಲ್ಲಿ ಅಭಿನಂದಿಸಿರಲಿಲ್ಲ.

ಇದೀಗ ತಮ್ಮ ಔಟಾಗುತ್ತಿದ್ದಂತೆ ಕೃನಾಲ್ ಪಾಂಡ್ಯ ವಿಚಿತ್ರವಾಗಿ ಸಂಭ್ರಮಿಸುವ ಮೂಲಕ ಇಬ್ಬರ ನಡುವೆ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಪುಷ್ಠಿ ನೀಡಿದ್ದಾರೆ. ಇದಕ್ಕೆ ಮುಖ್ಯ ಕಾರಣ ಹಾರ್ದಿಕ್ ಪಾಂಡ್ಯ ಅವರ ವೈಯಕ್ತಿಕ ಜೀವನದಲ್ಲಿ (ವಿಚ್ಛೇದನ) ನಡೆದ ಬದಲಾವಣೆಗಳು ಎನ್ನಲಾಗುತ್ತಿದೆ.

ಅಂದರೆ ಹಾರ್ದಿಕ್ ಪಾಂಡ್ಯ ಮೊದಲ ಪತ್ನಿಗೆ ವಿಚ್ಛೇದನ ನೀಡಿ, ಹೊಸ ಗರ್ಲ್​ಫ್ರೆಂಡ್ ಜೊತೆ ಇರುವುದೇ ಸಹೋದರರ ನಡುವಣ ಬಿರುಕಿಗೆ ಕಾರಣ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ಐಪಿಎಲ್​ ವೇಳೆ ಮುಖಾಮುಖಿಯಾದಾಗ ಸದಾ ನಗುತ್ತಾ ಪೈಪೋಟಿ ನಡೆಸುತ್ತಿದ್ದ ಇಬ್ಬರು ಸಹೋದರರು ಇದೇ ಮೊದಲ ಬಾರಿ ಮುಖ ಸಿಂಡರಿಸಿಕೊಂಡು ಪಂದ್ಯ ಮುಗಿಸಿ ತೆರಳಿದ್ದಾರೆ. ಇದರೊಂದಿಗೆ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಜಗಜ್ಜಾಹೀರಾಗಿದೆ.

 

Source link

ತಾನಿಯಾಗೆ ಮೆಸೇಜ್ ಮಾಡಿದ ಚಹಾಲ್!: ಛೀ ಕಳ್ಳ.. ಫುಲ್ ವೈರಲ್​ ಮಾಡಿದ ನಟಿ

ಮುಂಬೈ, ಏ.12: ಭಾರತದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರು ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಈಗ ಅವರು ಮಾಡಿರುವ ಒಂದು ಮೆಸೇಜ್ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಖ್ಯಾತ ಉಲ್ಲು (Ullu) ಸರಣಿಗಳ ನಟಿ ತಾನಿಯಾ ಅವರಿಗೆ ಚಹಾಲ್ “ಕ್ಯೂಟ್” (Cute) ಎಂದು ಮೆಸೇಜ್ ಮಾಡಿದ್ದಾರೆ ಎಂಬ ವಿಷಯ ಈಗ ವೈರಲ್ ಆಗಿದೆ. ನಟಿ ತಾನಿಯಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅಥವಾ ತಮ್ಮ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ. ಚಹಾಲ್ ಅವರು ತಮಗೆ ಇನ್‌ಸ್ಟಾಗ್ರಾಮ್‌ನಲ್ಲಿ ಮೆಸೇಜ್ ಮಾಡಿ “ನೀವು ತುಂಬಾ ಕ್ಯೂಟ್ ಆಗಿದ್ದೀರಿ” ಎಂದು ಹೇಳಿದ್ದಾರೆ ಎಂದು ತಾನಿಯಾ ತಿಳಿಸಿದ್ದಾರೆ. ಈ ಬೆನ್ನಲ್ಲೇ ಈ ಸುದ್ದಿಯು ಕ್ರೀಡಾ ಮತ್ತು ಗ್ಲಾಮರ್ ಲೋಕದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಚಹಾಲ್ ಅವರ ಈ ಮೆಸೇಜ್ ಕುರಿತು ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡುತ್ತಿದ್ದು, ಕೆಲವರು ಇದು ಸಾಮಾನ್ಯ ಸಂಭಾಷಣೆ ಎನ್ನುತ್ತಿದ್ದರೆ, ಇನ್ನು ಕೆಲವರು ಚಹಾಲ್ ಅವರ ಕಾಲೆಳೆಯುತ್ತಿದ್ದಾರೆ. ಒಟ್ಟಿನಲ್ಲಿ ಚಹಾಲ್ ಅವರ ಈ ಒಂದು ಮೆಸೇಜ್ ಈಗ ಇಂಟರ್ನೆಟ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಯಾವ ಸಮಯ್?’; ಟೀಕಿಸಿದ ಸಮಯ್ ರೈನಾಗೆ ರಣವೀರ್ ಅಲಹಾಬಾದಿಯಾ ಖಡಕ್ ಉತ್ತರ

ರಣವೀರ್ ಅಲಹಾಬಾದಿಯಾ ಅವರು ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋಗೆ ಬಂದು ವಿವಾದ ಮಾಡಿಕೊಂಡರು. ಆ ಬಳಿಕ ಸಮಯ್ ಹಾಗೂ ರಣವೀರ್ ಮುಖಾಮುಖಿ ಆಗಿಲ್ಲ. ಇತ್ತೀಚೆಗೆ ಸಮಯ್ ರೈನಾ ಅವರ ‘ಸ್ಟಿಲ್ ಅಲೈವ್’ ಶೋನಲ್ಲಿ ಅವರು ರಣವೀರ್ ಬಗ್ಗೆ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಇದಾದ ಬಳಿಕ ಸಮಯ್ ಯಾರು ಎಂಬ ಪ್ರಶ್ನೆಯನ್ನು ರಣವೀರ್ ಅಲಹಾಬಾದಿಯಾ ಕೇಳಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ.

ರಣವೀರ್ ಅವರು ಪಾಡ್​​ಕಾಸ್ಟ್ ಮೂಲಕ ಗಮನ ಸೆಳೆದವರು. ಅವರು ಅಧ್ಯಾತ್ಮದ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಾರೆ. ಸೆಲೆಬ್ರಿಟಿಗಳ ಬಳಿ ಅವರು, ‘ಸಾವಿನ ಬಗ್ಗೆ ಏನು ಯೋಚಿಸುತ್ತೀರಿ’ ಎಂಬಿತ್ಯಾದಿ ಪ್ರಶ್ನೆಗನ್ನು ನೇರವಾಗಿ ಕೇಳುತ್ತಾರೆ. ಆದರೆ, ‘ಇಂಡಿಯಾಸ್ ಗಾಟ್ ಲೇಟೆಂಟ್ ಶೋ’ಗೆ ಬಂದು ಅವರು ಮಾಡಿಕೊಂಡ ವಿವಾದ ಚರ್ಚೆ ಹುಟ್ಟುಹಾಕಿತ್ತು. ಈ ವಿವಾದದ ಬಗ್ಗೆ ಸಮಯ್ ಇತ್ತೀಚೆಗೆ ಮಾತನಾಡಿದ್ದರು. ರಣವೀರ್ ಶೋನಲ್ಲಿ ಸಾಕಷ್ಟು ಕೆಟ್ಟ ಪದಗಳನ್ನು ಆಡಿದ್ದರು ಎಂದು ಸಮಯ್ ಹೇಳಿಕೊಂಡಿದ್ದರು. ಈ ವಿಷಯ ರಣವೀರ್​​ಗೆ ಬೇಸರ ಮೂಡಿಸಿತೇ ಎನ್ನುವ ಪ್ರಶ್ನೆ ಮೂಡಿದೆ.

ಶೈಲೇಶ್ ಪಾಂಡೆ ಹೆಸರಿನ ಪಾಪರಾಜಿ ಜೊತೆ ರಣವೀರ್ ಪೋಸ್ ಕೊಟ್ಟಿದ್ದಾರೆ. ‘ಈಗ ನಮ್ಮಿಬ್ಬರ ಸಮಯ’ ಎಂದರು ಶೈಲೇಶ್. ಇದಕ್ಕೆ ಉತ್ತರಿಸಿದ ರಣವೀರ್, ‘ಸಮಯ್? ಯಾವ ಸಮಯ್? ಎಂದು ಕೇಳಿದರು. ಆಗ ಶೈಲೇಶ್, ‘ಸಮಯ್ ಎಂದರೆ ಟೈಮ್’ ಎಂದರು. ಆಗ ರಣವೀರ್, ‘ಓಹ್ ಸಮಯ. ಈಗ ಅರ್ಥವಾಯಿತು’ ಎಂದರು. ಈ ವಿಡಿಯೋ ಚರ್ಚೆಗೆ ಕಾರಣ ಆಗಿದೆ.

ಇದನ್ನೂ ಓದಿ: ‘ಇಂಡಿಯಾ ಗಾಟ್ ಲೇಟೆಂಟ್’: ಮತ್ತೆ ಬರಲಿದ್ದಾರೆ ಸಮಯ್ ರೈನಾ

ಸಮಯ್ ರೈನಾ ಹಂಚಿಕೊಂಡ ‘ಸ್ಟಿಲ್ ಅಲೈವ್’ ಕೋಟಿ ಕೋಟಿ ವೀಕ್ಷಣೆ ಕಂಡಿದೆ. ಇಂಡಿಯಾಸ್ ಗಾಟ್ ಲೇಟೆಂಟ್​​ನ ಕೊನೆಯ ಎಪಿಸೋಡ್​​ ಅಲ್ಲಿ ಏನಾಗಿತ್ತು ಎಂಬುದರ ಸಂಪೂರ್ಣ ವಿವರವನ್ನು ಸಮಯ್ ನೀಡಿದರು. ‘ಸದಾ ಕೆಟ್ಟದ್ದನ್ನೇ ಮಾತನಾಡುವ ವ್ಯಕ್ತಿ ಕೆಟ್ಟದನ್ನೇ ಮಾತನಾಡಿದರೆ ಯಾರೂ ಏನು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಒಳ್ಳೆಯದನ್ನು ಮಾತನಾಡುವ ವ್ಯಕ್ತಿ ಕೆಟ್ಟದನ್ನು ಮಾತನಾಡಿದರೆ ಅದನ್ನು ಯಾರೂ ಸಹಿದಲ್ಲ’ ಎಂದಿದ್ದರು ಸಮಯ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಬೆಂಗಳೂರು, ಏಪ್ರಿಲ್ 13: ನಗರದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ (Stray Dogs)  ಹಾವಳಿ ಹೆಚ್ಚಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ನಾಯಿ ದಾಳಿಗೆ ಹೆದರಿ ಓಡಾಡುವ ಪರಿಸ್ಥಿತಿ ಎದುರಾಗಿದೆ. ನಾಯಿ ಎಂದ ಮೇಲೆ ಬೊಗಳುವುದು ಸಹಜ. ಅದರಲ್ಲೂ ಸಾಕು ನಾಯಿಯನ್ನು ರಕ್ಷಣೆಗಾಗಿಯೇ ಇಟ್ಟುಕೊಳ್ಳುವುದರಿಂದ, ಮನೆಯ ಜನರನ್ನು ಬಿಟ್ಟು ಉಳಿದವರು ಯಾರೇ ತಮ್ಮ ಮನೆ ಬಳಿ ಬಂದರೂ ಸಾಕು ನಾಯಿಗಳು ಬೊಗಳುತ್ತವೆ. ಆದರೆ ಇಲ್ಲೊಬ್ಬ ವ್ಯಕ್ತಿ ಪಕ್ಕದ ಮನೆಯವರ ಸಾಕು ನಾಯಿ ತನ್ನ ಹೆಂಡತಿಗೆ ಬೊಗಳಿತು ಎಂಬ ಕ್ಷುಲ್ಲಕ ಕಾರಣಕ್ಕೆ ಅದರ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದಾನೆ. ಆತನ ಈ ಕ್ರೌರ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹಲ್ಲೆಗೊಳಗಾದ ನಾಯಿ ಅಸ್ವಸ್ಥ!

ಬೆಂಗಳೂರಿನ ಅವರೆಹಳ್ಳಿಯಲ್ಲಿರುವ ವ್ಯಾಪಾರಿ ಅಂಜನಪ್ಪ ಅವರಿಗೆ ಸೇರಿದ ಆರು ವರ್ಷದ ‘ಸ್ಕೂಬಿ, ಪಕ್ಕದ ಮನೆಯ ಮಹಿಳೆಯನ್ನು ಕಂಡು ಬೊಗಳಿದೆ. ಇಷ್ಟಕ್ಕೇ ರೊಚ್ಚಿಗೆದ್ದ ಆಕೆಯ ಪತಿ ಗೋಪಿ, ಅಂಜನಪ್ಪ ಮನೆಯ ಆವರಣಕ್ಕೆ ನುಗ್ಗಿ, ಗೇಟ್ ಬಳಿ ಕಟ್ಟಿ ಇಟ್ಟಿದ್ದ ನಾಯಿಯನ್ನು ದೊಣ್ಣೆಯಿಂದ ಹಲವಾರು ಬಾರಿ ಥಳಿದಿ ವಿಕೃತಿ ಮೆರೆದಿದ್ದಾನೆ. ಹಲ್ಲೆಗೊಳಗಾದ ಸ್ಕೂಬಿ ತಕ್ಷಣವೆ ಮೂರ್ಛೆ ಹೋಗಿದ್ದು, ಮಾಲೀಕರು ಅದನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೆಲ್ಲದರ ಬಳಿಕ ಗೋಪಿ ಪರಾರಿಯಾಗಿದ್ದು, ಘಟನೆ ವೇಳೆ ಆತ ಕಂಠಪೂರ್ತಿ ಕುಡಿದು ಬಂದಿದ್ದ ಎಂದು ಹೇಳಲಾಗಿದೆ.

ಇದನ್ನೂ ಓದಿ ಸೈಕಲ್ ಓಡಿಸುತ್ತಿದ್ದ ಬಾಲಕನಿಗೆ ಸಾಕು ನಾಯಿ ಕಡಿತ; ನಾಯಿ ಮಾಲೀಕರ ಮೇಲೆ ಎಫ್ಐಆರ್!

ಪರಾರಿಯಾದ ಗೋಪಿಗಾಗಿ ಶೋಧ

ಸಧ್ಯಕ್ಕೆ ನಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆರೋಪಿಯ ಕ್ರೌರ್ಯದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಂದು ವಾರದ ಹಿಂದೆಯಷ್ಟೇ ರಾಜಾಜಿನಗರದ 1ನೇ ಬ್ಲಾಕ್‌ನಲ್ಲಿ 11 ವರ್ಷದ ಬಾಲಕನ ಮೇಲೆ ಸಾಕು ನಾಯಿ ದಾಳಿ ನಡೆಸಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದ. ನಾಯಿಗಳ ಈ ರೀತಿಯ ವರ್ತನೆಯನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುವುದು ಅಗತ್ಯ. ಆದರೆ ಈ ರೀತಿ ಕ್ಷುಲ್ಲಕ ಕಾರಣಕ್ಕೆ ಮೂಕಪ್ರಾಣಿಯ ಮೇಲೆ ಇಂತಹ ದೌರ್ಜನ್ಯ ಮಾಡುವುದು ಅಸಮಂಜಸ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

MI vs RCB: ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಆಡಲು ಇದುವೇ ಅಸಲಿ ಕಾರಣ!

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಮುಂಬೈ ಇಂಡಿಯನ್ಸ್ (MI) ವಿರುದ್ಧದ ಪಂದ್ಯದಲ್ಲಿ ತಮ್ಮ ಎಂದಿನ ಲಯದಲ್ಲಿ ಕಾಣಿಸಿಕೊಳ್ಳಲಿಲ್ಲ. ಮೈದಾನದಲ್ಲಿ ರನ್ ಗಳಿಸಲು ಅವರು ಸಾಕಷ್ಟು ಕಷ್ಟಪಟ್ಟಿದ್ದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಇದರ ಹಿಂದಿನ ಅಸಲಿ ಕಾರಣಗಳು ಇದೀಗ ಹೊರಬಿದ್ದಿವೆ…

ಜ್ವರ ಮತ್ತು ಅಸ್ವಸ್ಥತೆ:

ಪಂದ್ಯದ ನೇರ ಪ್ರಸಾರದ ವೇಳೆ ಕಾಮೆಂಟೇಟರ್ ರವಿಶಾಸ್ತ್ರಿ ಅವರು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದರು. ಅದೇನೆಂದರೆ, ವಿರಾಟ್ ಕೊಹ್ಲಿ ಅವರು ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎಂಬುದಾಗಿತ್ತು. ಮುಂಬೈ ಇಂಡಿಯನ್ಸ್​ ವಿರುದ್ಧ ಪಂದ್ಯದ ದಿನವೂ ಅವರು ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿರಲಿಲ್ಲ. ಅನಾರೋಗ್ಯದ ನಡುವೆಯೂ ತಂಡಕ್ಕಾಗಿ ಆಡಲು ನಿರ್ಧರಿಸಿದ ಕೊಹ್ಲಿ, ಶೇ. 100 ರಷ್ಟು ದೈಹಿಕ ಸಾಮರ್ಥ್ಯ ಹೊಂದಿರದ ಕಾರಣ ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಳ್ಳಲು ಪರದಾಡಿದರು.

ಹಿಮ್ಮಡಿ ಗಾಯ:

ಒಂದೆಡೆ ಜ್ವರದಿಂದ ಬಳಲಿದ್ದ ವಿರಾಟ್ ಕೊಹ್ಲಿ ಅವರಿಗೆ ಬ್ಯಾಟಿಂಗ್ ಮಾಡುವಾಗ ಹಿಮ್ಮಡಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ಓಡುವಾಗ ಮತ್ತು ಶಾಟ್‌ಗಳನ್ನು ಹೊಡೆಯುವಾಗ ಅವರು ನೋವಿನಿಂದ ಅಸ್ವಸ್ಥರಾಗಿದ್ದು ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಇದೇ ಕಾರಣಕ್ಕೆ ಆರ್‌ಸಿಬಿ ಬ್ಯಾಟಿಂಗ್ ಮುಗಿದ ನಂತರ, ಮುಂಬೈ ತಂಡ ಚೇಸಿಂಗ್ ಮಾಡುವಾಗ ಕೊಹ್ಲಿ ಫೀಲ್ಡಿಂಗ್‌ಗೆ ಬರಲಿಲ್ಲ. ಅವರ ಬದಲಿಗೆ ಜಾಕೋಬ್ ಬೆಥೆಲ್ ಫೀಲ್ಡಿಂಗ್ ಮಾಡಿದರು.

ಪಂದ್ಯದ ಪ್ರದರ್ಶನ ಮತ್ತು ಹತಾಶೆ:

ನೋವು ಮತ್ತು ಜ್ವರದ ನಡುವೆಯೂ ಕೊಹ್ಲಿ 38 ಎಸೆತಗಳಲ್ಲಿ 50 ರನ್ ಗಳಿಸಿದರು. ಆದರೆ, ಅವರ ಸ್ಟ್ರೈಕ್ ರೇಟ್ (131.58) ಅವರ ಎಂದಿನ ವೇಗಕ್ಕಿಂತ ಕಡಿಮೆಯಿತ್ತು. ಅಲ್ಲದೆ ಔಟ್ ಆದ ನಂತರ ಡಗೌಟ್‌ನಲ್ಲಿ ಕುಳಿತಿದ್ದ ಕೊಹ್ಲಿ, ತಮ್ಮ ಬ್ಯಾಟಿಂಗ್ ಬಗ್ಗೆ ತೀವ್ರ ಹತಾಶೆ ವ್ಯಕ್ತಪಡಿಸುತ್ತಿರುವುದು ಕಂಡುಬಂದಿತು. ಗಾಯದ ತೀವ್ರತೆ ಹೆಚ್ಚಾಗಬಾರದು ಎಂಬ ಮುನ್ನೆಚ್ಚರಿಕೆಯಿಂದ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ಮೈದಾನಕ್ಕಿಳಿಯದೆ ವಿಶ್ರಾಂತಿ ಪಡೆದರು.

ಇದನ್ನೂ ಓದಿ: Hardik Pandya: ನನಗೆ ಧೈರ್ಯ ಸಿಕ್ಕಿದೆ, ತಂಡದಲ್ಲಿ ಬದಲಾವಣೆ ಮಾಡ್ತೀನಿ ಅಷ್ಟೇ!

ಅಂದರೆ ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲಿದ್ದ ವಿರಾಟ್ ಕೊಹ್ಲಿ ಮಹತ್ವದ ಪಂದ್ಯದಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದರು. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಿದ್ದಾರೆ. ಅಲ್ಲದೆ ಮೊದಲ 11 ಎಸೆತಗಳಲ್ಲಿ ಕಿಂಗ್ ಕೊಹ್ಲಿ 20 ರನ್ ಬಾರಿಸಿದ್ದರು. ಇದಾದ ಬಳಿಕ ಹಿಮ್ಮಡಿ ನೋವಿಗೆ ಒಳಗಾದ ಕೊಹ್ಲಿ ಬಿರುಸಿನ ಬ್ಯಾಟಿಂಗ್ ನಡೆಸಲು ಪರಾಡಿದರು. ಇದಾಗ್ಯೂ ಅವರು 38 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ತಂಡಕ್ಕೆ ತನ್ನದೆಯಾದ ಕೊಡುಗೆ ನೀಡಿರುವುದು ವಿಶೇಷ.

 

Source link

ಪರ್ಫ್ಯೂಮ್, ಸ್ಮಶಾನ ಮೌನ, ಅಸ್ಥಿಪಂಜರ, ಮಗಳ ಶವದೊಂದಿಗೆ ತಂದೆಯ ವಾಸ, ಸಾವು ಮರೆಮಾಚಿದ್ದು ಹೇಗೆ?

ಮೀರತ್, ಏಪ್ರಿಲ್ 13: ಮೀರತ್‌ನ ಬೀದಿಗಳಲ್ಲಿ ಒಂದು ಸುದ್ದಿ ಕಾಳ್ಗಿಚ್ಚಿನಂತೆ ಹರಡಿತು. ತಿಂಗಳುಗಳಿಂದ ಬಾಗಿಲು ಹಾಕಿದ್ದ ಮನೆಯೊಳಗೆ ಮಗಳ ಹೆಣದೊಂದಿಗೆ ತಂದೆ(Father)ಯೊಬ್ಬರು ವಾಸವಿದ್ದರು ಎಂಬ ಸತ್ಯ ಬಯಲಾದಾಗ ಪೊಲೀಸರೇ ಬೆಚ್ಚಿಬಿದ್ದರು. 34 ವರ್ಷದ ಪ್ರಿಯಾಂಕಾ ಎಂಬಾಕೆಯ ದೇಹವು ಈಗ ಬಹುತೇಕ ಅಸ್ಥಿಪಂಜರವಾಗಿ ಮಾರ್ಪಟ್ಟಿದೆ.

ನಾಲ್ಕು ತಿಂಗಳ ಮೌನ ಮತ್ತು ಸುಳ್ಳಿನ ಕತೆ
ಪ್ರಿಯಾಂಕಾ ಮತ್ತು ಆಕೆಯ ತಂದೆ ಉದಯ್ ಭಾನ್ ಬಿಸ್ವಾಸ್ ಕಳೆದ ನಾಲ್ಕು ತಿಂಗಳಿನಿಂದ ಅಕ್ಕಪಕ್ಕದ ಮನೆಯವರಿಗೆ ಕಾಣಿಸಿಕೊಂಡಿರಲಿಲ್ಲ. ಮನೆಗೆ ಬೀಗ ಹಾಕಲಾಗಿತ್ತು. ಆತಂಕಗೊಂಡ ಸಂಬಂಧಿಕರು ಹುಡುಕಾಟ ನಡೆಸಿದಾಗ, ಉದಯ್ ಭಾನ್ ಬೇಗಂ ಬಾಗ್‌ನ ಚಹಾ ಅಂಗಡಿಯೊಂದರ ಬಳಿ ಸಿಕ್ಕಿದ್ದರು.

ಮಗಳ ಬಗ್ಗೆ ಕೇಳಿದಾಗ, ಆಕೆಗೆ ಹುಷಾರಿಲ್ಲ, ಡೆಹ್ರಾಡೂನ್‌ನ ಆಸ್ಪತ್ರೆಗೆ ದಾಖಲಿಸಿದ್ದೇನೆ ಎಂದು ಉದಯ್ ಭಾನ್ ಸಬೂಬು ನೀಡಿದ್ದರು. ಸಂಬಂಧಿಕರು ಬಿಡದೇ ವಿಚಾರಿಸಿದಾಗ, ಆಕೆ ಸತ್ತು ಹೋಗಿದ್ದಾಳೆ, ಅವಳ ದೇಹ ಮನೆಯೊಳಗೇ ಇದೆ ಎಂದು ಅವರು ಮೌನ ಮುರಿದಿದ್ದ.

ಪೊಲೀಸರು ಮನೆಯ ಬೀಗ ಒಡೆದು ಒಳಗೆ ಹೋದಾಗ ಕಂಡ ದೃಶ್ಯ ಅತ್ಯಂತ ಭಯಾನಕವಾಗಿತ್ತು. ಮನೆಯ ತುಂಬ ಹಳೆಯ ಕಾಗದಗಳು ಮತ್ತು ಕಸ ತುಂಬಿತ್ತು. ಅದರ ನಡುವೆ ಪ್ರಿಯಾಂಕಾ ಅವರ ಶವವು ಕೊಳೆತು ಅಸ್ಥಿಪಂಜರವಾಗಿ ಮಾರ್ಪಟ್ಟಿತ್ತು. ದೇಹ ಕೊಳೆಯುವಾಗ ವಾಸನೆ ಬರದಂತೆ ನಾನು ಮನೆಯ ತುಂಬೆಲ್ಲಾ ಸುಗಂಧ ದ್ರವ್ಯ (Perfume) ಸಿಂಪಡಿಸುತ್ತಿದ್ದೆ ಎಂದು ತಂದೆ ಹೇಳಿಕೆ ನೀಡಿರುವುದು ಕೇಳುಗರನ್ನು ನಡುಗಿಸುವಂತಿದೆ.

ಮಗಳು ಸತ್ತ ನಂತರವೂ ಸುಮಾರು ನಾಲ್ಕು ದಿನಗಳ ಕಾಲ ಉದಯ್ ಭಾನ್ ಅದೇ ಹೆಣದ ಪಕ್ಕದಲ್ಲೇ ಮಲಗುತ್ತಿದ್ದರು ಎಂದು ತಿಳಿಸಿದ್ದಾರೆ. ಪ್ರಿಯಾಂಕಾ ಅವರ ಸೋದರಸಂಬಂಧಿ ಬಿಸ್ವಜಿತ್ ಬಿಸ್ವಾಸ್ ಅವರ ಪ್ರಕಾರ, ಈ ಕುಟುಂಬದ ದುರಂತಕ್ಕೆ ಹಳೆಯ ನೋವಿನ ಇತಿಹಾಸವಿದೆ.2013 ರಲ್ಲಿ ಪ್ರಿಯಾಂಕಾ ಅವರ ತಾಯಿ ಕೂಡ ಇದೇ  ರೀತಿಯಲ್ಲಿ ನಿಧನರಾಗಿದ್ದರು.

ಮತ್ತಷ್ಟು ಓದಿ: ಮಹಾರಾಷ್ಟ್ರ ಪೊಲೀಸ್ ಪಡೆಗೆ ಸೇರ್ಪಡೆಯಾದ ಖುಷಿ, ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು

ತಾಯಿಯ ಸಾವಿನ ನಂತರ ತಂದೆ ಮತ್ತು ಮಗಳು ಇಬ್ಬರೂ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಯಾರೊಂದಿಗೂ ಮಾತನಾಡದೆ ಏಕಾಂಗಿಯಾಗಿ ವಾಸಿಸುತ್ತಿದ್ದರು. ಪ್ರಿಯಾಂಕಾ ದೈಹಿಕ ಮತ್ತು ಮಾನಸಿಕವಾಗಿ ಅನಾರೋಗ್ಯಕ್ಕೆ ಒಳಗಾಗಿದ್ದರೂ, ತಂದೆ ಯಾರ ಸಹಾಯವನ್ನೂ ಪಡೆಯಲು ಇಷ್ಟಪಡುತ್ತಿರಲಿಲ್ಲ.

ಸದ್ಯ ಪ್ರಿಯಾಂಕಾ ಅವರ ಅವಶೇಷಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆಕೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆಯೇ ಅಥವಾ ಇದರ ಹಿಂದೆ ಬೇರೆ ಏನಾದರೂ ರಹಸ್ಯವಿದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಕೆಗೆ ಸರಿಯಾದ ಚಿಕಿತ್ಸೆ ಕೊಡಿಸದ ತಂದೆಯ ಮೌನ ಮತ್ತು ನಾಲ್ಕು ತಿಂಗಳ ಕಾಲ ಸಾವನ್ನು ಮರೆಮಾಚಿದ್ದು ಈಗ ದೊಡ್ಡ ಪ್ರಶ್ನೆಯಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಅನಿಲ್‌ನನ್ನು ‘ಅಕ್ಷತಾ’ ಮಾಡಿದ್ದ ಮಂಗಳಮುಖಿಯರು: ಮಂಗಳೂರು-ಕೇರಳದಲ್ಲಿ ಸೆಕ್ಸ್ ವರ್ಕ್​​ಗೆ ಬಳಕೆ, ಲಿಂಗ ಬದಲಾವಣೆಗೂ ಸ್ಕೆಚ್

ಮೈಸೂರು, ಏ.12: ಜಿಲ್ಲೆಯಲ್ಲಿ (Mysuru Crime) ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಇದೀಗ ಈ ಸುದ್ದಿ ಎಲ್ಲ ಕಡೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಬಸ್ಸಿಗಾಗಿ ಕಾಯುತ್ತಿದ್ದ ಯುವಕನೋರ್ವನನ್ನು ಅಪಹರಿಸಿ, ಆತನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ ಹಾಗೂ ಸೆಕ್ಸ್ ವರ್ಕ್​​ಗೆ ಬಳಸಿಕೊಂಡಿರುವ ಆಘಾತಕಾರಿ ಆರೋಪವೊಂದು ಕೇಳಿ ಬಂದಿದೆ. ನಂಜನಗೂಡಿನ ತ್ಯಾಗರಾಜ ಕಾಲೋನಿಯ ಅನಿಲ್ ಕುಮಾರ್ ಈ ಕರಾಳ ದಂಧೆಯ ಬಲಿಪಶುವಾಗಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಪ್ರಕರಣ ಲಷ್ಕರ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ನಾಲ್ಕು ತಿಂಗಳ ಹಿಂದೆ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಅನಿಲ್ ಕುಮಾರ್‌ಗೆ ಮಂಗಳಮುಖಿ ಅನಿತಾ ಮತ್ತು ತಂಡ ಪರಿಚಯವಾಗಿತ್ತು. ನಂತರ ಆತನನ್ನು ಬಲವಂತವಾಗಿ ಅಪಹರಿಸಿದ ತಂಡ ಮಂಗಳೂರಿಗೆ ಕರೆದೊಯ್ದಿತ್ತು. ಅಲ್ಲಿ ಆತನಿಗೆ ಬಲವಂತವಾಗಿ ಸೀರೆ, ನೈಟಿ ತೊಡಿಸಿ, ಕಿವಿ ಓಲೆ, ಮೂಗುಬಟ್ಟು ಹಾಕಿಸಿ ‘ಅಕ್ಷತಾ’ ಎಂದು ಹೆಸರಿಟ್ಟು ಮಂಗಳಮುಖಿಯಾಗಿ ವೇಷ ಬದಲಿಸಿದ್ದರು ಎಂದು ಆರೋಪಿಸಲಾಗಿದೆ.

ಯುವಕ ಅನಿಲ್‌ನನ್ನು ಬೀದಿಗಳಲ್ಲಿ ಅಂಗಡಿಗಳ ಮುಂದೆ ನಿಲ್ಲಿಸಿ ಪ್ರತಿದಿನ 2 ರಿಂದ 3 ಸಾವಿರ ರೂಪಾಯಿ ಕಲೆಕ್ಷನ್ ಮಾಡಿಸುತ್ತಿದ್ದರು. ಅಷ್ಟೇ ಅಲ್ಲದೆ, ಮಂಗಳೂರು ಮತ್ತು ಕೇರಳದ ವಿವಿಧ ಭಾಗಗಳಿಗೆ ಕಳುಹಿಸಿ ಸೆಕ್ಸ್ ವರ್ಕ್​​ಗೆ ಬಳಸಿಕೊಂಡಿದ್ದಾರೆ ಎಂದು ಅನಿಲ್ ದೂರಿನಲ್ಲಿ ಆರೋಪಿಸಿದ್ದಾರೆ. ಆತನ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಮಂಗಳಮುಖಿ ಎಂದು ಸರ್ಟಿಫಿಕೇಟ್ ಕೊಡಿಸಲಾಗಿದೆ. ಮುಂಬೈಗೆ ಕರೆದೊಯ್ದು ಶಸ್ತ್ರಚಿಕಿತ್ಸೆ ಮೂಲಕ ಶಾಶ್ವತವಾಗಿ ಲಿಂಗ ಬದಲಾವಣೆ ಮಾಡಲು ಈ ತಂಡ ಸ್ಕೆಚ್ ಹಾಕಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಆರೋಪಿ ಮುಸ್ತಾಫಾಗೆ ಅಂತರಾಜ್ಯ ಮಟ್ಕಾ ಬುಕ್ಕಿಗಳ ಲಿಂಕ್

ನಂತರ ಇದರಿಂದ ನೊಂದು ಇವರ ಕಪಿಮುಷ್ಠಿಯಿಂದ ಹೊರಬರಲು ನಿರ್ಧರಿಸಿದ ಅನಿಲ್, ತಾನು ದುಡಿದ 3 ಲಕ್ಷ ರೂಪಾಯಿ ಕೇಳಿದಾಗ ಅನಿತಾ ಉಲ್ಟಾ ಹೊಡೆದಿದ್ದಾಳೆ. ತನ್ನ ಮನೆಯಿಂದ 5 ಲಕ್ಷ ರೂಪಾಯಿ ಮತ್ತು ಚಿನ್ನಾಭರಣ ಕಳ್ಳತನ ಮಾಡಿದ್ದಾನೆ ಎಂದು ಸುಳ್ಳು ಕೇಸ್ ಹಾಕಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ಹೇಗೋ ಮಾಡಿ ಅಲ್ಲಿಂದ ತಪ್ಪಿಸಿಕೊಂಡು ನಂಜನಗೂಡು ಸೇರಿದರೆ, ಅಲ್ಲಿಗೂ ಮಂಗಳಮುಖಿಯರನ್ನು ಕಳಿಸಿ ದಂಧೆಗೆ ಬರುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಅನಿಲ್ ಅಳಲು ತೋಡಿಕೊಂಡಿದ್ದಾರೆ. ಸುಮಾರು ಶೇ. 90ರಷ್ಟು ದೃಷ್ಟಿ ದೋಷ ಹೊಂದಿರುವ ಅನಿಲ್ ಕುಮಾರ್, ನಂಜನಗೂಡು ಪೊಲೀಸರು ಸ್ಪಂದಿಸದ ಹಿನ್ನೆಲೆಯಲ್ಲಿ ಮೈಸೂರಿನ ಲಷ್ಕರ್ ಠಾಣೆಗೆ ದೂರು ನೀಡಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಇರಾನ್ ಮತ್ತೆ ಮಾತುಕತೆಗೆ ಬರಲಿ, ಬರ್ದೇ ಇರ್ಲಿ ಡೋಂಟ್ ಕೇರ್: ಡೊನಾಲ್ಡ್​ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 13: ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಅಮೆರಿಕ-ಇರಾನ್ ಶಾಂತಿ ಮಾತುಕತೆಗಳು ಯಾವುದೇ ಒಪ್ಪಂದವಿಲ್ಲದೆ ಮುಕ್ತಾಯಗೊಂಡ ಬೆನ್ನಲ್ಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮತ್ತೆ ಗುಡುಗಿದ್ದಾರೆ. ಇರಾನ್ ಮಾತುಕತೆಗೆ ಮರಳುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನನಗೆ ಕಿಂಚಿತ್ತೂ ಕಳವಳವಿಲ್ಲ ಎಂದು ಹೇಳಿದ್ದಾರೆ. ಫ್ಲೋರಿಡಾದಿಂದ ಹಿಂದಿರುಗಿದ ನಂತರ ಜಂಟಿ ಬೇಸ್ ಆಂಡ್ರ್ಯೂಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಅಮೆರಿಕದ ಹಿತಾಸಕ್ತಿಯೇ ತಮಗೆ ಮುಖ್ಯ ಎಂದು ಸ್ಪಷ್ಟಪಡಿಸಿದರು.

ಇರಾನ್ ಮಾತುಕತೆಯ ಮೇಜಿಗೆ ಮರಳುತ್ತದೆಯೋ ಇಲ್ಲವೋ ಎಂಬುದು ನನಗೆ ಮುಖ್ಯವಲ್ಲ. ಅವರು ಬರದಿದ್ದರೆ ನನಗೇನು ನಷ್ಟವಿಲ್ಲ, ಏನೇ ಆದರೂ ಅಂತಿಮವಾಗಿ ನಾವೇ ಗೆಲ್ಲುತ್ತೇವೆ ಎಂದು ಅವರು ಪ್ರತಿಪಾದಿಸಿದರು.

ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆಯಲ್ಲಿ ಇರಾನ್ ಇನ್ನೂ ಪರಮಾಣು ಶಸ್ತ್ರಾಸ್ತ್ರಗಳ ತಯಾರಿಕೆಯಲ್ಲಿ ಆಸಕ್ತಿ ಹೊಂದಿದೆ ಎಂಬುದು ಸಾಬೀತಾಗಿದೆ. ಆದರೆ, ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಅಸ್ತ್ರ ಹೊಂದುವುದಿಲ್ಲ ಎಂದು ಟ್ರಂಪ್ ಮತ್ತೊಮ್ಮೆ ಎಚ್ಚರಿಸಿದ್ದಾರೆ.

ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗವು ಮೊಹಮ್ಮದ್ ಬಘರ್ ಗಾಲಿಬಾಫ್ ನೇತೃತ್ವದ ಇರಾನಿನ ತಂಡದೊಂದಿಗೆ ನಡೆಸಿದ ಸುದೀರ್ಘ ಚರ್ಚೆಯ ವಿವರಗಳು ಈಗ ಹೊರಬರುತ್ತಿವೆ. ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಗಳು ಮತ್ತು ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟು ಈಗಾಗಲೇ ಕದನ ವಿರಾಮದ ಮೇಲೆ ಭಾರಿ ಒತ್ತಡ ಹೇರಿವೆ.

ಮತ್ತಷ್ಟು ಓದಿ: ಇರಾನ್ ಮುಗಿಸಲು ಒಂದೇ ಒಂದು ರಾತ್ರಿ ಸಾಕು, ಗಡುವು ಮುಗಿಯುವ ಮುನ್ನವೇ ಇರಾನ್​ಗೆ ಟ್ರಂಪ್ ಬೆದರಿಕೆ

ಮಾತುಕತೆಗಳ ಕುಸಿತವು ಕೇವಲ ರಾಜತಾಂತ್ರಿಕ ವೈಫಲ್ಯವಲ್ಲ,  ಇದು ಜಾಗತಿಕ ಆರ್ಥಿಕತೆಯ ಮೇಲೂ ಕರಾಳ ನೆರಳು ಬೀರಿದೆ. ಈ ಜಲಸಂಧಿಯನ್ನು ಮತ್ತೆ ತೆರೆಯುವ ಮೂಲಕ ತೈಲ ಬೆಲೆಗಳನ್ನು ಸ್ಥಿರಗೊಳಿಸಬಹುದು ಎಂಬ ಭರವಸೆ ಈಗ ಮಸುಕಾಗಿದೆ. ಅಮೆರಿಕವು ಇರಾನ್ ವಿರುದ್ಧ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮತ್ತೆ ಯಾವಾಗ ಆರಂಭಿಸಬಹುದು ಎಂಬ ಅನಿಶ್ಚಿತತೆ ಈಗ ಇಡೀ ಜಗತ್ತನ್ನು ಆತಂಕಕ್ಕೆ ತಳ್ಳಿದೆ.

ಇನ್ನೊಂದೆಡೆ, ಇರಾನ್ ಅಧ್ಯಕ್ಷರು ತಮ್ಮ ದೇಶವು ಸಮತೋಲಿತ ಮತ್ತು ನ್ಯಾಯಯುತ ಒಪ್ಪಂದಕ್ಕೆ ಮಾತ್ರ ಸಿದ್ಧವಾಗಿದೆ ಎಂದು ಹೇಳುವ ಮೂಲಕ ಅಮೆರಿಕದ ಷರತ್ತುಗಳನ್ನು ತಳ್ಳಿಹಾಕಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಗೆದ್ದೇ ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸ ಮತ್ತು ಇರಾನ್‌ನ ಪಟ್ಟು ಸದ್ಯಕ್ಕೆ ಯಾವುದೇ ಶಾಂತಿಯ ಮುನ್ಸೂಚನೆ ಕೊಡುತ್ತಿಲ್ಲ, ಎರಡು ವಾರಗಳ ಈ ದುರ್ಬಲ ಕದನ ವಿರಾಮವು ಶೀಘ್ರದಲ್ಲೇ ದೊಡ್ಡ ಮಟ್ಟದ ಯುದ್ಧಕ್ಕೆ ದಾರಿ ಮಾಡಿಕೊಡುತ್ತದೆಯೇ ಎಂಬುದು ಈಗಿನ ದೊಡ್ಡ ಪ್ರಶ್ನೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version