Headlines

Sun Transit: ಏಪ್ರಿಲ್ 14 ಸೂರ್ಯ ಮೇಷ ರಾಶಿಗೆ ಪ್ರವೇಶ; ಈ ಮೂರು ರಾಶಿಯವರು ಅತ್ಯಂತ ಜಾಗರೂಕರಾಗಿರಿ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜನಾದ ಸೂರ್ಯನು ಏಪ್ರಿಲ್ 14 ರಂದು ತನ್ನ ಉಚ್ಛ ರಾಶಿಯಾದ ಮೇಷ ರಾಶಿಗೆ ಸಂಚರಿಸಲಿದ್ದಾನೆ. ಸೂರ್ಯನ ಈ ಸಂಚಾರವು ಕೆಲವು ರಾಶಿಯವರಿಗೆ ಅದೃಷ್ಟ ತಂದರೆ, ಇನ್ನು ಕೆಲವು ರಾಶಿಯವರಿಗೆ ಸವಾಲುಗಳನ್ನು ತರಲಿದೆ. ವಿಶೇಷವಾಗಿ ವಾಹನ ಚಾಲನೆ ಮತ್ತು ಪ್ರಯಾಣದ ವಿಷಯದಲ್ಲಿ ಕೆಲವು ರಾಶಿಯವರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜ್ಯೋತಿಷ್ಯ ತಜ್ಞರು ಎಚ್ಚರಿಸಿದ್ದಾರೆ. ಆ ರಾಶಿಗಳು ಯಾವುವು ಮತ್ತು ಯಾವ ರೀತಿಯ ಜಾಗ್ರತೆ ವಹಿಸಬೇಕು ಎಂಬ ವಿವರ ಇಲ್ಲಿದೆ: ಮೇಷ ರಾಶಿ…

Read More

ಮಂಗಳೂರು ಯುವಕನ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​: ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ?

ಮಂಗಳೂರು, ಏಪ್ರಿಲ್​​ 12: ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್​ಟ್​ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ (Mangaluru) ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್​​ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆಶಿಕ್​​ ಈ ನಿರ್ಧಾರ ಕೈಗೊಂಡಿರಬಹುದು ಎಂದು ಭಾವಿಸಲಾಗಿತ್ತಾದರೂ, ಮೊಬೈಲ್​​…

Read More

ಅಪ್ಪಾಜಿ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘವೇಂದ್ರ ರಾಜ್​ಕುಮಾರ್

ಮೇರುನಟ ಡಾ. ರಾಜ್​ಕುಮಾರ್ ಅವರ ಪುಣ್ಯಸ್ಮರಣೆ (Death Anniversary) ಪ್ರಯುಕ್ತ ಇಂದು (ಏಪ್ರಿಲ್ 12) ಕುಟುಂಬದವರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ಕೂಡ ಅಪಾರ ಸಂಖ್ಯೆಯಲ್ಲಿ ಬಂದು ಅಣ್ಣಾವ್ರಿಗೆ ನಮಿಸಿದ್ದಾರೆ. ರಾಜ್​ಕುಮಾರ್ (Dr Rajkumar) ನಿಧನರಾಗಿ 20 ವರ್ಷಗಳು ಕಳೆದಿವೆ. ಆ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದ್ದಾರೆ. ‘20 ವರ್ಷ ಆಯ್ತು ಅಂತ ನಂಬೋಕೆ ಆಗುತ್ತಿಲ್ಲ. ಅವರು ನಮ್ಮ ಜೊತೆ ಇನ್ನೂ ಇದ್ದಾರೆ ಅಂತ ಅಂದುಕೊಂಡಿದ್ದೇವೆ. ಅವರು ಸಂಪಾದನೆ ಮಾಡಿದ್ದು ಅಭಿಮಾನಿಗಳನ್ನು ಮಾತ್ರ. ಇಷ್ಟು ವರ್ಷ…

Read More

ದೇವಸ್ಥಾನದೊಳಗೆ ಹಣ ಕದ್ದು ಅಲ್ಲೇ ನಿದ್ರೆಗೆ ಜಾರಿದ ಕಳ್ಳ

ಚೆನ್ನೈ, ಏಪ್ರಿಲ್ 12: ತಮಿಳುನಾಡಿನ ಅಂಬೂರಿನ ಕುಡಪ್ಪನಮೂಡಿನಲ್ಲಿರುವ ಕುಳುವಲ್ವತ್ತಂ ಶ್ರೀ ಭಗತಿ ದೇವಸ್ಥಾನ(Temple)ದಲ್ಲಿ ಶನಿವಾರ ಬೆಳಗ್ಗೆ ಒಂದು ವಿಚಿತ್ರ ದೃಶ್ಯ ಕಂಡುಬಂದಿದೆ. ದೇವಸ್ಥಾನದ ಕಚೇರಿಗೆ ಕನ್ನ ಹಾಕಿ ಹಣ ಕದ್ದ ಕಳ್ಳನೊಬ್ಬ, ಅಲ್ಲಿಂದ ಪರಾರಿಯಾಗುವ ಬದಲು ಸುಸ್ತಾಗಿ ಅಲ್ಲೇ ಗಾಢ ನಿದ್ರೆಗೆ ಜಾರಿದ್ದ. ದಿನದಂತೆ ಶನಿವಾರ ಬೆಳಗ್ಗೆ 5.30ಕ್ಕೆ ದೇವಸ್ಥಾನದ ಸಮಿತಿ ಸದಸ್ಯರು ಕಚೇರಿಗೆ ಬಂದಾಗ, ಬಾಗಿಲು ಮುರಿದಿರುವುದನ್ನು ಕಂಡು ಆತಂಕಕ್ಕೊಳಗಾದರು. ಯಾವುದೋ ದೊಡ್ಡ ಕಳ್ಳತನವಾಗಿದೆ ಎಂದು ಒಳಗೆ ಹೋಗಿ ನೋಡಿದವರಿಗೆ ಆಶ್ಚರ್ಯ ಕಾದಿತ್ತು. ಕಚೇರಿಯ ಹಣದ…

Read More

ಮೈದಾನಕ್ಕಿಳಿಯದಿದ್ದರೂ ನಿತೀಶ್ ರಾಣಾಗೆ ಬಿತ್ತು ಭಾರೀ ದಂಡ..!

IPL 2026: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಆಟಗಾರ ನಿತೀಶ್ ರಾಣಾ (Nitish Rana) ಅವರು ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಪಂದ್ಯದ ಸಂಭಾವನೆಯ ಶೇಕಡಾ 25ರಷ್ಟು ದಂಡಕ್ಕೆ ಗುರಿಯಾಗಿದ್ದಾರೆ. ಇದರೊಂದಿಗೆ ಅವರಿಗೆ ಒಂದು ‘ಡಿಮೆರಿಟ್’ ಪಾಯಿಂಟ್ ಕೂಡ ನೀಡಲಾಗಿದೆ. ಕುತೂಹಲಕಾರಿ ವಿಷಯ ಎಂದರೆ ಈ ಪಂದ್ಯದಲ್ಲಿ ನಿತೀಶ್ ರಾಣಾ ಕಣಕ್ಕಿಳಿದಿರಲಿಲ್ಲ ಎಂಬುದು. ಏಪ್ರಿಲ್ 11, 2026 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ…

Read More

ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಮದುವೆ ಸಲುವಾಗಿ ಇಷ್ಟು ದಿನ ಬ್ರೇಕ್ ಪಡೆದುಕೊಂಡಿದ್ದರು. ಈಗ ಅವರ ‘ರಣಬಾಲಿ’ (Ranabaali) ಸಿನಿಮಾದ ಚಿತ್ರೀಕರಣಕ್ಕೆ ಮರಳಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ಚಿತ್ರತಂಡದ ಜೊತೆ ಅವರು ತೆಗೆದುಕೊಂಡ ಫೋಟೋ ವೈರಲ್ ಆಗಿದೆ. ವಿವಾಹದ ನಂತರ ಮೊದಲ ಬಾರಿಗೆ ಚಿತ್ರೀಕರಣಕ್ಕೆ ಹಾಜರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಚಿತ್ರತಂಡದವರು ಅತ್ಯಂತ ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ವಿಶೇಷವಾಗಿ ಕೇಕ್ ಕತ್ತರಿಸುವ ಮೂಲಕ…

Read More

ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ

ಬೆಂಗಳೂರು, ಏಪ್ರಿಲ್ 12: ನಗರದ ಹಳೆ ಗುರಪ್ಪನಪಾಳ್ಯದ ವಾರ್ಡ್ ನಂಬರ್ 171 ರಲ್ಲಿ ಕಸ ನಿರ್ವಹಣೆಯು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ತಿಂಗಳುಗಟ್ಟಲೆ ಕಸ ಸಂಗ್ರಹವಾಗಿದ್ದು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳು ಸಂಪೂರ್ಣವಾಗಿ ಮುಚ್ಚಿಹೋಗಿವೆ. ಜಿಬಿಎ ಮತ್ತು ಬೆಂಗಳೂರು ದಕ್ಷಿಣ ನಗರಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ. ಸ್ಥಳೀಯ ನಿವಾಸಿಗಳಾದ ಜಾಕೀರ್ ಹುಸೇನ್ ಅವರ ನೇತೃತ್ವದಲ್ಲಿ ನಾಗರಿಕರು ತಮ್ಮ ಸ್ವಂತ ವೆಚ್ಚದಲ್ಲಿ ಜೆಸಿಬಿ ಕರೆಸಿ ಕಸವನ್ನು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕಸದ ರಾಶಿಗಳಿಂದ…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ ಎರಡನೇ ವಾರದ ಭವಿಷ್ಯ ಇಲ್ಲಿ ತಿಳಿದುಕೊಳ್ಳಿ

ಇದು 2026ರ ಏಪ್ರಿಲ್ ನ ಎರಡನೇ ವಾರವಾಗಿದ್ದು, ಅಭಿವೃದ್ಧಿಗೆ ಸಹಕಾರ, ಸ್ಪರ್ಧಾತ್ಮಕ ಚಿಂತೆ, ಅತ್ಯಾಪ್ತರ ಜೊತೆ ಕಲಹ, ಕ್ರಿಯಾತ್ಮಕ ಕಾರ್ಯಕ್ಕೆ ಒತ್ತು, ಅನೇಕ ದಿನದ ದುಃಖಕ್ಕೆ ವಿರಾಮ ಇವೆಲ್ಲ ಈ ವಾರದಲ್ಲಿ ಆಗಲಿದೆ. ​ಮೇಷ: ಈ ವಾರ ನಿಮಗೆ ಮಿಶ್ರಫಲವಿದೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿವೆ. ಹಣಕಾಸಿನ ಹರಿವು ಸಾಧಾರಣವಾಗಿದ್ದರೂ, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಆರೋಗ್ಯದ ಕಡೆ ಗಮನವಿರಲಿ, ಹಿರಿಯರ ಸಲಹೆ ಪಡೆದು ಮುನ್ನಡೆಯಿರಿ. ​ವೃಷಭ: ಆರ್ಥಿಕವಾಗಿ ಅಭಿವೃದ್ಧಿ ಕಾಣುವಿರಿ. ಸ್ಥಿರಾಸ್ತಿ ಖರೀದಿ ಅಥವಾ ಹೂಡಿಕೆಗೆ…

Read More

Video: ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ

ಲಕ್ನೋ, ಏಪ್ರಿಲ್ 12: ವಿಚ್ಛೇದನ ಪ್ರಕರಣದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ನವಜಾತ ಶಿಶುವಿನ ಜತೆ ಲಕ್ನೋ ಹೈಕೋರ್ಟ್​​ನ 5ನೇ ಮಹಡಿಯಿಂದ ಹಾರಲು ಯತ್ನಿಸಿರುವ ಘಟನೆ ನಡೆದಿದೆ. ಎಸ್‌ಐ ಧೈರ್ಯದಿಂದ ಮಧ್ಯಪ್ರವೇಶಿಸಿ ಎರಡೂ ಜೀವಗಳನ್ನು ಉಳಿಸಿದ್ದಾರೆ. ಮಹಿಳೆಯೊಬ್ಬರು ಕೋರ್ಟ್​​ನ ಐದನೇ ಮಹಡಿಯ ತುದಿಯಲ್ಲಿ ಮಗುವನ್ನು ಕೈಯಲ್ಲಿ ಎತ್ತಿಕೊಂಡು ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಎಲ್ಲರೂ ಮನವೊಲಿಸಲು ಯತ್ನಿಸಿರುವುದನ್ನು ನೊಡಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಪ್ರಯಾಣಿಕರೇ ಗಮನಿಸಿ: ತೀರ್ಥಹಳ್ಳಿ, ಕುಂದಾಪುರ ರಾಜ್ಯ ಹೆದ್ದಾರಿ ಬಂದ್​​; ಬದಲಿ ಮಾರ್ಗಗಳ ಮಾಹಿತಿ ಇಲ್ಲಿದೆ

ಶಿವಮೊಗ್ಗ, ಏಪ್ರಿಲ್​​ 12: ಹುಲಿಕಲ್ ಘಾಟಿಯಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂಕುಸಿತ ಉಂಟಾದ ಹಿನ್ನೆಲೆ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಕಾಂಕ್ರೀಟ್ ರಸ್ತೆಯಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡು ಬಂದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ರಸ್ತೆಯು ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಘಾಟ್​​ನ ಹೇರ್‌ಪಿನ್ ತಿರುವಿನಲ್ಲಿ ರಕ್ಷಣಾತ್ಮಕ ಕಾಮಗಾರಿಯೂ ಪೂರ್ಣಗೊಳ್ಳುವವರೆಗೆ ಈ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಎಲ್ಲಾ ಮಾದರಿಯ…

Read More