ಬಳ್ಳಾರಿ ಗಲಭೆ: ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಪತ್ನಿ, ಗನ್​​ಮ್ಯಾನ್​​ಗಳ ಬಗ್ಗೆ ಜನಾರ್ದನ ರೆಡ್ಡಿ ಏನಂದ್ರು ನೋಡಿ – Kannada News | Bellary violence: Gali Janardhan reddy Talks about Congress MLA Bharath Reddy And His Wife Gunman

ಬಳ್ಳಾರಿ, (ಜನವರಿ 04): ಬ್ಯಾನರ್​ ಕಟ್ಟು ಸಂಬಂಧ ಜನವರಿ 1ರಂದು ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರ ಸಂಘರ್ಷದಲ್ಲಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಳ್ಳಾರಿ ಘರ್ಷಣೆ ಬಗ್ಗೆ ಕಾಂಗ್ರೆಸ್, ಬಿಜೆಪಿ ಆರೋಪ ಪ್ರತ್ಯಾರೋಪ ಭುಗಿಲೆದ್ದಿದೆ. ಈ ಸಂಬಂಧ ಶಾಸಕ ಗಾಲಿ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 11.30ಕ್ಕೆ ಎಎಸ್ಪಿ ರವಿಕುಮಾರ್ ಜೊತೆ ನಾನು ಪೋನ್ ನಲ್ಲಿ ಮಾತಾಡಿದೆ‌‌. ನಾಲ್ಕು ಮಂದಿ ಗನ್ ಮ್ಯಾನ್ ಗಳ ಪೈಕಿ ಅದರಲ್ಲಿ ಗುರುಚರಣ್‌ ಅವರ ಗುಂಡು ಹಾರಿಸಿದ್ದು ಕನ್ಪರ್ಮ್ ಆಗಿದೆ. ಕಾರ್ಯಕ್ರಮ ಸಿದ್ಧತೆಗಾಗಿ ಭರತ್ ರೆಡ್ಡಿ ಶ್ರೀಮತಿ ಅವರು ಓಡಾಡಿಕೊಂಡು ಇದೋದಕ್ಕೆ ಭರತ್ ರೆಡ್ಡಿ ಜತೆಗೂ ಇವರನ್ನ ಇಟ್ಕೊಂಡಿದ್ದರು. ಸೋಷಿಯಲ್ ಮೀಡಿಯಾದ ವೀಡಿಯೋದಿಂದ ನೋಡಿದ್ದೀನಿ. ಭರತ್ ರೆಡ್ಡಿ ಅವರೇ ತಮ್ಮ‌ ಪ್ಯಾಮಿಲಿ ಭದ್ರತೆಗಾಗಿ ಖಾಸಗಿ ಗನ್ ಮ್ಯಾನ್ ಗಳನ್ನ ಇಟ್ಕೊಂಡಿದ್ದಾರೆ. ಭರತ್‌ರೆಡ್ಡಿ ಗನ್ ಮ್ಯಾನ್‌ ಗಳನ್ನ‌ ಸತೀಶ್ ರೆಡ್ಡಿ ಅವರು ಇಟ್ಕೊಂಡಿದ್ರು. ಹಾಗಾಗಿ ಭರತ್ ರೆಡ್ಡಿ ಅವರನ್ನ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

T20 World Cup: ಭಾರತಕ್ಕೆ ಬರಲ್ಲ ಎನ್ನುತ್ತಲೇ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಬಾಂಗ್ಲಾ – Kannada News | Bangladesh T20 World Cup Squad Out: Mustafizur Controversy Escalates India Ties

ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಐಪಿಎಲ್‌ನಿಂದ (IPL) ಹೊರಹಾಕಿದ ಬಳಿಕ ಹುಟ್ಟಿಕೊಂಡಿರುವ ವಿವಾದ ಇದೀಗ ಭಾರತ ಹಾಗೂ ಬಾಂಗ್ಲಾದೇಶ ನಡುವೆ ಮತ್ತಷ್ಟು ಬಿರುಕು ಮೂಡಿಸಿದೆ. ಮುಸ್ತಾಫಿಜುರ್​ರನ್ನು ಐಪಿಎಲ್‌ನಿಂದ ಹೊರಹಾಕಿರುವುದಕ್ಕೆ ಕೆರಳಿರುವ ಬಾಂಗ್ಲಾ ಕ್ರಿಕೆಟ್ ಮಂಡಳಿ, ಭಾರತಕ್ಕೆ ಟಿ20 ವಿಶ್ವಕಪ್ ಆಡಲು ಬರುವುದಿಲ್ಲ ಎನ್ನುತ್ತಿದೆ. ಇದರ ಜೊತೆಗೆ ಐಪಿಎಲ್ ಪಂದ್ಯಾವಳಿಯನ್ನು ಬಾಂಗ್ಲಾದೇಶದಲ್ಲಿ ಬ್ಯಾನ್ ಮಾಡಲಾಗುತ್ತಿದೆ ಎಂಬ ವರದಿಯೂ ಹರಿದಾಡುತ್ತಿದೆ. ಇದೆಲ್ಲ ವಿವಾದಗಳ ನಡುವೆ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿರು 2026 ರ ಟಿ20 ವಿಶ್ವಕಪ್‌ಗಾಗಿ (T20 World Cup) ಬಾಂಗ್ಲಾದೇಶ ತಂಡ ಪ್ರಕಟಗೊಂಡಿದೆ. ಲಿಟ್ಟನ್ ದಾಸ್ ನಾಯಕತ್ವದ 15 ಆಟಗಾರರ ತಂಡವನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ಘೋಷಿಸಿದೆ. ಬಾಂಗ್ಲಾ ತಂಡದಲ್ಲಿರುವ 15 ಆಟಗಾರರಲ್ಲಿ ಐಪಿಎಲ್​ನಿಂದ ಹೊರಬಿದ್ದ ಎಡಗೈ ವೇಗಿ ಮುಸ್ತಾಫಿಜುರ್ ರೆಹಮಾನ್ ಕೂಡ ಸೇರಿದ್ದಾರೆ.

ವಿವಾದದ ನಡುವೆ ಬಾಂಗ್ಲಾ ತಂಡ ಪ್ರಕಟ

ಮೇಲೆ ಹೇಳಿದಂತೆ ಐಪಿಎಲ್ 2026 ರಿಂದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಹೊರಗಿಟ್ಟಿರುವುದು ಕೋಲಾಹಲ ಸೃಷ್ಟಿಸಿದೆ. ಮುಸ್ತಾಫಿಜುರ್ ಅವರನ್ನು ಹೊರಗಿಟ್ಟಿದ್ದರಿಂದ ಬಾಂಗ್ಲಾದೇಶ ಕ್ರೀಡಾ ಸಚಿವಾಲಯವು ಅಸಮಾಧಾನಗೊಂಡಿದ್ದು, ಬಿಸಿಸಿಐನ ಈ ನಿರ್ಧಾರ ಬಾಂಗ್ಲಾದೇಶ ಕ್ರಿಕೆಟ್ ಮತ್ತು ಅದರ ಆಟಗಾರರಿಗೆ ಮಾಡಿದ ಅವಮಾನವೆಂದು ಆರೋಪಿಸಿದೆ. ಬಾಂಗ್ಲಾದೇಶ ಕ್ರೀಡಾ ಸಚಿವಾಲಯದ ಸೂಚನೆಗಳನ್ನು ಅನುಸರಿಸಿ, ಬಿಸಿಬಿ ಮುಸ್ತಾಫಿಜುರ್ ಅವರನ್ನು ಹೊರಗಿಟ್ಟಿರುವ ಬಗ್ಗೆ ಸ್ಪಷ್ಟೀಕರಣವನ್ನು ಕೋರಿ ಬಿಸಿಸಿಐಗೆ ಇಮೇಲ್ ಮಾಡಿದೆ.

ಇದಲ್ಲದೆ, 2026 ರ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ತಂಡ ಆಡಲಿರುವ ಪಂದ್ಯಗಳ ಸ್ಥಳವನ್ನು ಬದಲಾಯಿಸುವಂತೆ ಕೋರಿ ಐಸಿಸಿಗೆ ಇಮೇಲ್ ಕೂಡ ಮಾಡಿದೆ. ಬಿಸಿಬಿ ತನ್ನ ಆಟಗಾರರ ಸುರಕ್ಷತೆಯನ್ನು ಪರಿಗಣಿಸಿ ಭಾರತದ ಬದಲು ಶ್ರೀಲಂಕಾದಲ್ಲಿ ಪಂದ್ಯಗಳನ್ನು ನಡೆಸಬೇಕೆಂದು ಒತ್ತಾಯಿಸುತ್ತಿದೆ ಎಂತಲೂ ವರದಿಯಾಗಿದೆ.

ಬಾಂಗ್ಲಾದೇಶದ ಪಂದ್ಯಗಳ ವೇಳಾಪಟ್ಟಿ

ವೇಳಾಪಟ್ಟಿಯ ಪ್ರಕಾರ, ಬಾಂಗ್ಲಾದೇಶ ಫೆಬ್ರವರಿ 7 ರಂದು ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ. ನಂತರ ಫೆಬ್ರವರಿ 9 ರಂದು ಇಟಲಿ ವಿರುದ್ಧ ಆಡಲಿದೆ. ಫೆಬ್ರವರಿ 14 ರಂದು ಬಾಂಗ್ಲಾದೇಶ ಇಂಗ್ಲೆಂಡ್ ವಿರುದ್ಧ ನಿರ್ಣಾಯಕ ಪಂದ್ಯವನ್ನು ಆಡಲಿದೆ. ಎಲ್ಲಾ ಮೂರು ಪಂದ್ಯಗಳು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿವೆ. ಇದಲ್ಲದೆ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನೇಪಾಳ ವಿರುದ್ಧ ತನ್ನ ಅಂತಿಮ ಗುಂಪು ಹಂತದ ಪಂದ್ಯವನ್ನು ಆಡಲಿದೆ.

IPL 2026: ಮುಸ್ತಾಫಿಜುರ್ ರೆಹಮಾನ್ ಐಪಿಎಲ್​ನಿಂದ ನಿಷೇಧ? ಸ್ಪಷ್ಟನೆ ನೀಡಿದ ಬಿಸಿಸಿಐ

2026 ರ ಟಿ20 ವಿಶ್ವಕಪ್‌ಗಾಗಿ ಬಾಂಗ್ಲಾದೇಶ ತಂಡ: ಲಿಟನ್ ದಾಸ್ (ನಾಯಕ), ಮೊಹಮ್ಮದ್ ಸೈಫ್ ಹಸನ್ (ಉಪನಾಯಕ), ತಂಜಿದ್ ಹಸನ್, ಮೊಹಮ್ಮದ್ ಪರ್ವೇಜ್ ಹೊಸೈನ್ ಎಮಾನ್, ತೌಹಿದ್ ಹೃದಯೋಯ್, ಶಮೀಮ್ ಹೊಸೈನ್, ಕಾಜಿ ನೂರುಲ್ ಹಸನ್ ಸೋಹನ್, ಮಹೇದಿ ಹಸನ್, ರಿಶಾದ್ ಹೊಸೈನ್, ನಸುಮ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ತಂಝೀಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್, ಮೊಹಮ್ಮದ್ ಶೈಫುದ್ದೀನ್, ಶೋರಿಫುಲ್ ಇಸ್ಲಾಂ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಳ್ಳಾರಿ ಗಲಭೆ: 20 ಜನರ ಬಂಧನ, ಕಾಂಗ್ರೆಸ್​​ನವರೆಷ್ಟು, ಬಿಜೆಪಿಯವರೆಷ್ಟು? ರೆಡ್ಡಿಗೂ ಸಂಕಷ್ಟ – Kannada News | Bellary violence Case: Police Arrests Total 20 people, here Is Congress And BJP Accused list

ಬಳ್ಳಾರಿ, (ಜನವರಿ 04): ಬ್ಯಾನರ್​ ಕಟ್ಟು ಸಂಬಂಧ ಜನವರಿ 1ರಂದು ಬಳ್ಳಾರಿ (Bellary)  ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರ ಸಂಘರ್ಷದಲ್ಲಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ತಾರಕಕ್ಕೇರಿದ್ದು, ಈ ನಡುವೆ ಬ್ರೂಸ್​ಪೇಟೆ ಪೊಲೀಸರು ಒಟ್ಟು 20 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಒಟ್ಟು 20 ಜನರನ್ನು ಬಂಧಿಸಿದ್ದಾರೆ. 10 ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಬಂಧಿತ ಬಿಜೆಪಿ ಕಾರ್ಯಕರ್ತರು

ಬಿ.ರವಿ, ರವಿಬಾಬು, ಪೋತಪ್ಪ, ಬಜ್ಜಪ್ಪ, ಜಿ.ಶ್ರೀನಿವಾಸ, ಷಡಕ್ಷರಿ, ರಂಗಸ್ವಾಮಿ, ಗುರುಪ್ರಸಾದ್, ಪಿ.ಶ್ರೀನಿವಾಸ ರೆಡ್ಡಿ, ಲಕ್ಷಣ, ತಿಮ್ಮಪ್ಪ ಬಂಧನಕ್ಕೆ ಒಳಗಾದವರ ಬಿಜೆಪಿ ಕಾರ್ಯಕರ್ತರು.

ಬಂಧಿತ ಕೈ ಕಾರ್ಯಕರ್ತರ ಪಟ್ಟಿ

ಕಾರ್ತಿಕ್(25), ಮುಕ್ಕಣ್ಣ(28), ಇನಾಯತುಲ್ಲಾ(24), ರಾಜು(20), ಮುಸ್ತಫಾ(22), ಶ್ರೀಕಾಂತ್(30), ಮೊಹಮ್ಮದ್ ರಸೂಲ್(35), ಬಾಬು(38), ವೆಂಕಟೇಶ್(38), ಮುಬಾಶಿರ್(25) ಬಂಧಿತ ಕಾಂಗ್ರೆಸ್ ಕಾರ್ಯಕರ್ತರು.

ಇದನ್ನೂ ಓದಿ: ಬಳ್ಳಾರಿ ಬ್ಯಾನರ್​​ ಗಲಾಟೆಗೆ ಸ್ಫೋಟಕ ತಿರುವು​​: ರಾಜಶೇಖರ್​​ಗೆ ತಗುಲಿದ್ದ ಬುಲೆಟ್​​ ಸತ್ಯ ರಿವೀಲ್​​

ಮೂವರು ಅಂಗರಕ್ಷಕರು ವಶಕ್ಕೆ

ಗಲಾಟೆಯಲ್ಲಿ ಕೈ ಕಾರ್ಯಕರ್ತ ರಾಜಶೇಖರ್ ಪ್ರಾಣಬಿಟ್ಟಿದ್ದ. ಈತನ ಬೆನ್ನು ಹೊಕ್ಕಿದ್ದ 12 MM ಬುಲೆಟ್ ಯಾರ ಗನ್​ನಿಂದ ಬಂದಿದ್ದು ಎನ್ನುವುದು ನಿಗೂಢವಾಗಿಯೇ ಉಳಿದಿತ್ತು. ಆದ್ರೆ, ಇದೀಗ ರಾಜಶೇಖರನ ಜೀವ ಬಲಿ ಪಡೆದಿದ್ದು ಸತೀಶ್ ರೆಡ್ಡಿಯ ಅಂಗರಕ್ಷಕ ಗುರುಚರಣ್ ಸಿಂಗ್​ನನದ್ದು ಎಂದು ತಿಳಿದುಬಂದಿದೆ. ಈ ಸಂಬಂಧ ಪೊಲೀಸರು ಗುರುಚರಣ್ ಸಿಂಗ್​ನನ್ನ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಸತೀಶ್ ರೆಡ್ಡಿಯ ಇನ್ನುಳಿದ ಇಬ್ಬರು ಖಾಸಗಿ ಅಂಗರಕ್ಷಕರು, ಬಲ್ಜಿತ್‌ ಸಿಂಗ್, ಗುರುಚರಣ್​ ಸಿಂಗ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಪಂಜಾಬ್ ಮೂಲದ ಈ ಮೂವರು ಖಾಸಗಿ ಗನ್​ಮ್ಯಾನ್​ಗಳು, ಜನವರಿ 1ನೇ ತಾರೀಕು ಫೈರಿಂಗ್ ನಡೆಸಿದ್ದರು.

ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿಗೂ ಸಂಕಷ್ಟ

ಈ ನಡುವೆ ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿಗೂ ಸಂಕಷ್ಟ ಶುರುವಾಗಿದೆ. ಗಲಾಟೆಗೆ ಕುಮ್ಮಕ್ಕು ಕೊಟ್ಟ ಆರೋಪದಲ್ಲಿ ಬಂಧನ ಮಾಡೋ ಸಾಧ್ಯತೆಯಿದೆ. ಪೊಲೀಸರು ಸುಮಟೋ ಕೇಸ್ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದಾರೆ. ಈ ನಡುವೆ ಗಲಭೆಯ ಒಂದೊಂದೇ ದೃಶ್ಯಗಳು ಹೊರಬೀಳ್ತಿವೆ. ಸದ್ಯ ಟಿವಿ9ಗೆ ಸಿಕ್ಕ ವಿಡಿಯೋವೊಂದು, ಜನಾರ್ದನ ರೆಡ್ಡಿ ಮನೆ ಮೇಲೆ ದಾಳಿಗೆ ಮೊದಲೇ ಪ್ಲ್ಯಾನ್ ಆಗಿತ್ತಾ ಎಂಬ ಪ್ರಶ್ನೆ ಹುಟ್ಟುವಂತೆ ಮಾಡಿದೆ. ಯಾಕಂದ್ರೆ, ಈ ವಿಡಿಯೋದಲ್ಲಿ ಪುಂಡರ ಗುಂಪೊಂದು ಆಟೋದಲ್ಲಿ ಬಾಟಲ್ ಹಾಗೂ ಪೆಟ್ರೋಲ್ ಬಾಂಬ್ ತುಂಬಿಸಿಕೊಂಡು ಬಂದಿತ್ತು.

ಜನವರಿ 1ರಂದು ನಡೆದ ಗಲಾಟೆ ವೇಳೆ ಕಲ್ಲು ತೂರಾಟ, ಬಡಿಗೆ ಬಡಿದಾಟದ ನಡುವೆ ಗುಂಡಿನ ಸುರಿಮಳೆಗೈಯಲಾಗಿತ್ತು. ಭರತ್ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಅಂಗರಕ್ಷಕರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಪೊಲೀಸರು ಕೂಡ ಪರಿಸ್ಥಿತಿ ತಿಳಿಗೊಳಿಸಲು ಫೈರಿಂಗ್ ಮಾಡಿದ್ದರು. ಆದ್ರೆ ಇದೇ ಗಲಾಟೆಯಲ್ಲಿ ಕೈ ಕಾರ್ಯಕರ್ತ ರಾಜಶೇಖರ್ ಪ್ರಾಣಬಿಟ್ಟಿದ್ದ. ಈತನ ಬೆನ್ನು ಹೊಕ್ಕಿದ್ದ 12 MM ಬುಲೆಟ್ ಯಾರ ಗನ್​ನಿಂದ ಬಂದಿದ್ದು ಎನ್ನುವುದು ನಿಗೂಢವಾಗಿಯೇ ಉಳಿದಿತ್ತು. ಆದ್ರೆ, ಇದೀಗ ರಾಜಶೇಖರನ ಜೀವ ಬಲಿ ಪಡೆದಿದ್ದು ಸತೀಶ್ ರೆಡ್ಡಿಯ ಅಂಗರಕ್ಷಕ ಗುರುಚರಣ್ ಸಿಂಗ್​ನನದ್ದು ಎಂದು ತಿಳಿದುಬಂದಿದೆ. ಈ ಸಂಬಂಧ ಪೊಲೀಸರು ಗುರುಚರಣ್ ಸಿಂಗ್​ನನ್ನ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಸತೀಶ್ ರೆಡ್ಡಿಯ ಇನ್ನುಳಿದ ಇಬ್ಬರು ಖಾಸಗಿ ಅಂಗರಕ್ಷಕರು, ಬಲ್ಜಿತ್‌ ಸಿಂಗ್, ಗುರುಚರಣ್​ ಸಿಂಗ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಪಂಜಾಬ್ ಮೂಲದ ಈ ಮೂವರು ಖಾಸಗಿ ಗನ್​ಮ್ಯಾನ್​ಗಳು, ಜನವರಿ 1ನೇ ತಾರೀಕು ಫೈರಿಂಗ್ ನಡೆಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮೊಟ್ಟೆ ತಿಂದ್ರೆ ಕೆಮ್ಮು ಕಡಿಮೆಯಾಗುತ್ತದೆಯೇ? ಇಲ್ಲಿದೆ ಅಚ್ಚರಿ ಮಾಹಿತಿ – Kannada News | Cough Relief: Try These Simple Home Remedies

ನಿಯಮಿತವಾಗಿ ಮೊಟ್ಟೆಗಳ (Eggs) ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಗಳಿವೆ. ಅದಕ್ಕಾಗಿಯೇ ಮೊಟ್ಟೆಗಳನ್ನು ಸೂಪರ್‌ಫುಡ್ ಎಂದು ಕರೆಯಲಾಗುತ್ತದೆ. ಬಾಯಿಯ ರುಚಿಯ ಜೊತೆಗೆ, ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಸಹ ನೀಡುತ್ತದೆ. ಮೊಟ್ಟೆಯ ಬಿಳಿ ಭಾಗವಾಗಿರಲಿ ಅಥವಾ ಹಳದಿ ಭಾಗವಾಗಿರಲಿ, ಇಡೀ ಮೊಟ್ಟೆ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಮೊಟ್ಟೆಯ ಬಿಳಿ ಭಾಗ ಪ್ರೋಟೀನ್ ಮತ್ತು ನೀರಿನಾಂಶ ಹೊಂದಿದ್ದು, ಹಳದಿ ಭಾಗವು ಪ್ರೋಟೀನ್, ಕೊಬ್ಬು, ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಇಷ್ಟೆಲ್ಲಾ ಪ್ರಯೋಜನಗಳಿರುವ ಮೊಟ್ಟೆ ಕೆಮ್ಮು (Cough) ಮತ್ತು ಶೀತಗಳಿಂದ ಮುಕ್ತಿ ನೀಡಲು ಸಹಾಯ ಮಾಡುತ್ತದೆಯೇ, ಇದು ಎಷ್ಟು ಸತ್ಯ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮೊಟ್ಟೆ ಕೆಮ್ಮು ಮತ್ತು ಶೀತಗಳಿಂದ ಪರಿಹಾರ ಪಡೆಯಲು ಪ್ರತ್ಯಕ್ಷವಾಗಿ ಸಹಾಯ ಮಾಡದಿದ್ದರೂ ಪರೋಕ್ಷವಾಗಿ ಮಾಡುತ್ತದೆ. ಮೊಟ್ಟೆಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಕೆಮ್ಮನ್ನು ತ್ವರಿತವಾಗಿ ಗುಣಪಡಿಸಲು ಸಹಾಯ ಮಾಡುತ್ತವೆ. ಮೊಟ್ಟೆಗಳಲ್ಲಿ ಪ್ರೋಟೀನ್ ಹೆಚ್ಚಿರುವುದರಿಂದ, ಅವು ದೇಹಕ್ಕೆ ಅಗತ್ಯವಾದ ಶಕ್ತಿಯನ್ನು ಒದಗಿಸುತ್ತವೆ. ಕೆಮ್ಮು ಅಥವಾ ಶೀತದ ವಿರುದ್ಧ ಹೋರಾಡಲು ದೇಹಕ್ಕೆ ಸಹಾಯ ಮಾಡುತ್ತವೆ. ಮೊಟ್ಟೆಗಳಲ್ಲಿ ವಿಟಮಿನ್ ಡಿ ಮತ್ತು ಬಿ 12 ಜೊತೆಗೆ ದೇಹಕ್ಕೆ ಅಗತ್ಯವಾದ ಇತರ ಪೋಷಕಾಂಶಗಳಿವೆ. ಅವು ದೇಹಕ್ಕೆ ಶಕ್ತಿಯನ್ನು ಒದಗಿಸುತ್ತವೆ. ಜೊತೆಗೆ ದೇಹವನ್ನು ನೈಸರ್ಗಿಕವಾಗಿ ರಕ್ಷಿಸಲು ಸಹಾಯ ಮಾಡುತ್ತದೆ. ಹಾಗಾಗಿ ಅತಿಯಾಗಿ ಕೆಮ್ಮು ಬಂದಾಗ ಅಥವಾ ಶೀತವಾಗಿದ್ದಾಗ ಮೊಟ್ಟೆಗಳನ್ನು ತಿನ್ನುವುದು ಸುರಕ್ಷಿತ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಪದೇ ಪದೇ ಒಣ ಕೆಮ್ಮು ಬರುವುದಕ್ಕೆ ಈ ಮನೆಮದ್ದನ್ನು ಪ್ರಯತ್ನಿಸಿ

ಮೊಟ್ಟೆಗಳನ್ನು ತಿನ್ನುವಾಗ, ಗಂಟಲನ್ನು ತೇವವಾಗಿಡಲು ಮತ್ತು ಕೆಮ್ಮಿನಿಂದ ಉಂಟಾಗುವ ಅಸ್ವಸ್ಥತೆಯನ್ನು ಕಡಿಮೆ ಮಾಡಲು ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು. ಹೆಚ್ಚುವರಿಯಾಗಿ, ಅರಿಶಿನ, ಜೇನುತುಪ್ಪ, ನಿಂಬೆ ಅಥವಾ ತುಳಸಿ-ಜೇನುತುಪ್ಪದ ಮಿಶ್ರಣದೊಂದಿಗೆ ಬೆಚ್ಚಗಿನ ಹಾಲನ್ನು ಹಾಕಿ ಕುಡಿಯುವುದರಿಂದ ಕೆಮ್ಮಿನಿಂದ ಮತ್ತಷ್ಟು ಪರಿಹಾರ ಸಿಗುತ್ತದೆ. ಕೆಮ್ಮು ತೀವ್ರವಾಗಿದ್ದರೆ ಅಥವಾ ಜ್ವರ, ಉಸಿರಾಟದ ತೊಂದರೆ ಅಥವಾ ಇತರ ಗಂಭೀರ ಲಕ್ಷಣಗಳು ಕಂಡುಬಂದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾರ್ ಮತ್ತು ಚಿಗರಿ ಬಸ್ ನಡುವೆ ಅಪಘಾತ; ಎದೆ ಝಲ್ಲೆನಿಸುವ ದೃಶ್ಯ ಕಾರ್ ಡ್ಯಾಶ್ ಕ್ಯಾಮರಾದಲ್ಲಿ ಸೆರೆ – Kannada News | Hubballi Fatal Car Chigari Bus Crash: Dashcam Captures Horrific Accident

ಹುಬ್ಬಳ್ಳಿ, ಜನವರಿ 04: ಹುಬ್ಬಳ್ಳಿಯ ಉಣಕಲ್ ಬಿಆರ್‌ಟಿಎಸ್ ಪಥದಲ್ಲಿ ಕಾರ್ ಮತ್ತು ಚಿಗರಿ ಬಸ್ ನಡುವೆ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಕಾರು ಎದುರಿನಿಂದ ಬಂದ ಚಿಗರಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಗಿರೀಶ ಬಣವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎದೆ ಝಲ್ಲೆನಿಸುವ ಈ ದೃಶ್ಯ ಮತ್ತೊಂದು ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Chanakya Niti: ಈ ಗುಣಗಳಿರುವ ಸ್ನೇಹಿತರು ಎಂದಿಗೂ ಮೋಸ ಮಾಡಲಾರರು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: According to Acharya Chanakya, friends with these qualities are very good

ಸ್ನೇಹ (Friendship) ಎನ್ನುವುದು ಭಾಷೆ, ಜಾತಿ, ಧರ್ಮ ಎಲ್ಲವನ್ನು ಮೀರಿದ ಸುಂದರ ಬಂಧ. ಪ್ರತಿಯೊಬ್ಬರ ಜೀವನದಲ್ಲೂ ಫ್ರೆಂಡ್ಸ್‌ ಇದ್ದೇ ಇರುತ್ತಾರೆ. ಸ್ನೇಹಿತರು ನಮ್ಮ ಇಡೀ ಜೀವನವನ್ನು ಸುಂದರವಾಗಿಸಬಲ್ಲರು. ಅಲ್ಲದೆ ನಮ್ಮ ಜೀವನವನ್ನು ಉತ್ತಮವಾಗಿಸಬಲ್ಲರು. ಅದೇ ರೀತಿ ಕೆಲವು ಸ್ನೇಹಿತರು ಸ್ವಾರ್ಥ ಮತ್ತು ದುರಾಸೆಯಿಂದ ಇನ್ನೊಬ್ಬರ ಜೀವನವನ್ನೇ ಹಾಳು ಮಾಡಬಲ್ಲರು. ಇನ್ನೂ ಕೆಲ ಸ್ನೇಹಿತರು ಪ್ರತಿಯೊಂದು ಹಂತದಲ್ಲೂ ನಿಮಗೆ ಬೆಂಬಲವಾಗಿ ನಿಲ್ಲುತ್ತಾರೆ. ಅವರು ಎಂದಿಗೂ ಮೋಸ ಮಾಡಲಾರರು ಎಂದು ಆಚಾರ್ಯ ಚಾಣಕ್ಯರು. ಹಾಗಿದ್ರೆ ಯಾವ ಗುಣಗಳನ್ನು ಹೊಂದಿರುವ ಸ್ನೇಹಿತರು ಉತ್ತಮರು ಎಂಬುದನ್ನು ನೋಡೋಣ.

ಇಂತಹ ಸ್ನೇಹಿತರು ಎಂದಿಗೂ ಮೋಸ ಮಾಡಲಾರರು:

 ಮುಕ್ತ ಮತ್ತು ಸ್ಪಷ್ಟವಾಗಿ ಮಾತನಾಡುವ ಜನರು: ಚಾಣಕ್ಯರ ಪ್ರಕಾರ, ಮುಕ್ತ ಮತ್ತು ಪ್ರಾಮಾಣಿಕವಾಗಿ ಮಾತನಾಡುವ ಜನರು ಯಾರಿಗೂ ನೋವುಂಟು ಮಾಡಲು ಬಯಸುವುದಿಲ್ಲ. ಅವರು ಪರಿಶುದ್ಧ ಹೃದಯವನ್ನು ಹೊಂದಿದ್ದು, ನೀವು ಇಂತಹ ಜನರೊಂದಿಗೆ ಸ್ನೇಹಿತರಾಗಿದ್ದರೆ, ಅವರು ಎಂದಿಗೂ ನಿಮಗೆ ದ್ರೋಹ ಮಾಡುವುದಿಲ್ಲ.

ದುರಾಸೆಯಿಲ್ಲದ ವ್ಯಕ್ತಿ: ದುರಾಸೆಯಿಲ್ಲದ ನಿಸ್ವಾರ್ಥ ಜನರನ್ನು ಕಣ್ಣು ಮುಚ್ಚಿ ನಂಬಬಹುದು ಎನ್ನುತ್ತಾರೆ ಆಚಾರ್ಯ ಚಾಣಕ್ಯರು. ಇತರರ ವಸ್ತುಗಳ ಮೇಲೆ ಆಸೆ ಪಡದ ಜನರು ಯಾರಿಗೂ ಮೋಸ ಮಾಡುವುದಿಲ್ಲ. ಅಂತಹ ಜನರೊಂದಿಗೆ ಸ್ನೇಹ ಬೆಳೆಸುವುದು ಉತ್ತಮ.

ಸಹಾಯ ಮಾಡುವ ಜನರು: ಜೀವನದಲ್ಲಿ ನಿಸ್ವಾರ್ಥವಾಗಿ ಕೆಲಸ ಮಾಡುವ ಜನರೊಂದಿಗೆ ಯಾವಾಗಲೂ ಸ್ನೇಹಿತರಾಗಿರಬೇಕು. ಅಂತಹ ಜನರು ಎಂದಿಗೂ ಯಾರಿಗೂ ಯಾವುದೇ ಹಾನಿ ಮಾಡುವುದಿಲ್ಲ. ಅವರು ಸದಾ ನಿಮಗೆ ಒಳ್ಳೆಯದನ್ನೇ ಬಯಸುತ್ತಾರೆ ಎನ್ನುತ್ತಾರೆ ಚಾಣಕ್ಯ.

ಇದನ್ನೂ ಓದಿ: 2026 ರಲ್ಲಿ ಯಶಸ್ಸು ನಿಮ್ಮದಾಗಲು ಆಚಾರ್ಯ ಚಾಣಕ್ಯರ ಸಲಹೆಗಳನ್ನು ಅನುಸರಿಸಿ

ಸತ್ಯವಂತರು: ನಿಮಗೆ ಯಾವಾಗಲೂ ಸತ್ಯವನ್ನೇ ಹೇಳುವ ಸ್ನೇಹಿತರಿದ್ದರೆ, ನೀವು ಅದೃಷ್ಟವಂತರು. ಅವರು ಎಂದಿಗೂ ಮೋಸ ಮಾಡುವುದಿಲ್ಲ, ಅವರು ಸದಾ ನಿಮ್ಮೊಂದಿಗೆ ಇರುತ್ತಾರೆ ಎನ್ನುತ್ತಾರೆ ಆಚಾರ್ಯ ಚಾಣಕ್ಯರು. ಇದಲ್ಲದೆ ಇತರರ ವ್ಯವಹಾರಗಳಲ್ಲಿ ಮೂಗು ತುರಿಸದೆ ತಮ್ಮ ಪಾಡಿಗೆ ಇರುವ ಜನರು ಸಹ ಯಾರಿಗೂ ಹಾನಿ ಮಾಡುವುದಿಲ್ಲ. ಅವರು ಶುದ್ಧ ಹೃದಯವರಾಗಿರುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

BOI Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕ್ರೆಡಿಟ್ ಆಫೀಸರ್ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ – Kannada News | Boi credit officer recruitment 2025 514 posts last day to apply by jan 5

ನೀವು ಬ್ಯಾಂಕಿಂಗ್ ವೃತ್ತಿ ಪಡೆಯಲು ತಯಾರಿ ನಡೆಸುತ್ತಿದ್ದರೆ, ಈ ಸುದ್ದಿ ನಿಮಗಾಗಿ. ಬ್ಯಾಂಕ್ ಆಫ್ ಇಂಡಿಯಾ (BOI) ಕ್ರೆಡಿಟ್ ಆಫೀಸರ್ ನೇಮಕಾತಿ ಅರ್ಜಿ ಪ್ರಕ್ರಿಯೆಯು ನಾಳೆ, ಜನವರಿ 5 ರಂದು ಮುಕ್ತಾಯಗೊಳ್ಳುತ್ತದೆ. ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಒಂದು ಕೊನೆಯ ಅವಕಾಶವಿದೆ. ಈ ನೇಮಕಾತಿ ಡ್ರೈವ್ ಜನರಲ್ ಬ್ಯಾಂಕಿಂಗ್ ಆಫೀಸರ್ (GBO) ಸ್ಟ್ರೀಮ್‌ನಲ್ಲಿ ಒಟ್ಟು 514 ಕ್ರೆಡಿಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುತ್ತದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಜನವರಿ 5 ರ ಸಂಜೆಯ ಮೊದಲು ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ bankofindia.bank.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಒಟ್ಟು 514 ಹುದ್ದೆಗಳನ್ನು ಮೂರು ನಿರ್ವಹಣಾ ಹಂತಗಳಾಗಿ ವಿಂಗಡಿಸಲಾಗಿದೆ. SC, ST, OBC, EWS, ಮತ್ತು ಅಂಗವಿಕಲ ವ್ಯಕ್ತಿಗಳ (PwBD) ಕೋಟಾಗಳಿಗೆ ಮೀಸಲಾತಿಗಳು ಭಾರತ ಸರ್ಕಾರದ ನಿಯಮಗಳ ಪ್ರಕಾರ ಅನ್ವಯವಾಗುತ್ತವೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು. CA, CFA, ICWA, ಅಥವಾ MBA/PGDBM (ಬ್ಯಾಂಕಿಂಗ್ ಅಥವಾ ಹಣಕಾಸು) ನಂತಹ ವೃತ್ತಿಪರ ಅರ್ಹತೆಗಳಿಗೆ ಆದ್ಯತೆ ನೀಡಲಾಗುತ್ತದೆ. ಹುದ್ದೆ ಮತ್ತು ಪ್ರಮಾಣದ ಆಧಾರದ ಮೇಲೆ ಅರ್ಹತೆಗಳು ಬದಲಾಗಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

  • bankofindia.bank.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಕೆರಿಯರ್ಸ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
  • GBO ಸ್ಟ್ರೀಮ್ 2025-26 ರಲ್ಲಿ ಕ್ರೆಡಿಟ್ ಅಧಿಕಾರಿಗಳ ನೇಮಕಾತಿ ಲಿಂಕ್ ತೆರೆಯಿರಿ.
  • “ಆನ್‌ಲೈನ್‌ನಲ್ಲಿ ಅನ್ವಯಿಸು” ಮೇಲೆ ಕ್ಲಿಕ್ ಮಾಡಿ.
  • ನೋಂದಣಿಯನ್ನು ಪೂರ್ಣಗೊಳಿಸಿ ಮತ್ತು ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅನ್ನು ಉಳಿಸಿ.
  • ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ.
  • ಅರ್ಜಿ ನಮೂನೆಯನ್ನು ಸಲ್ಲಿಸಿ.
  • ದೃಢೀಕರಣ ಪುಟದ ಸ್ಕ್ರೀನ್‌ಶಾಟ್ ತೆಗೆದುಕೊಂಡು ಅದನ್ನು ಸುರಕ್ಷಿತವಾಗಿಡಿ.

ಇದನ್ನೂ ಓದಿ: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ ಏನು?

ಆಯ್ಕೆ ಪ್ರಕ್ರಿಯೆಯು ಅರ್ಜಿಗಳನ್ನು ಶಾರ್ಟ್‌ಲಿಸ್ಟ್ ಮಾಡುವುದನ್ನು ಒಳಗೊಂಡಿರುತ್ತದೆ. ನಂತರ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಗೆ ಕರೆಯಲಾಗುತ್ತದೆ ಮತ್ತು ನಂತರ ಸಂದರ್ಶನವನ್ನು ನಡೆಸಲಾಗುತ್ತದೆ. ಪರೀಕ್ಷೆಯು ವೃತ್ತಿಪರ ಜ್ಞಾನ, ತಾರ್ಕಿಕತೆ, ಪರಿಮಾಣಾತ್ಮಕ ಯೋಗ್ಯತೆ, ಕ್ರೆಡಿಟ್ ಮತ್ತು ಅಪಾಯ ನಿರ್ವಹಣೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೆಹಲಿಯ ಪಂಚತಾರಾ ಹೋಟೆಲ್​ನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ – Kannada News | Delhi: Man Dies By Suicide After Jumping From Delhi Hotel

ನವದೆಹಲಿ, ಜನವರಿ 04: ದೆಹಲಿಯ ಪಂಚತಾರಾ ಹೋಟೆಲ್‌ನಿಂದ ಕೆಳಗೆ ಹಾರಿ 50 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಕೇಂದ್ರ ದೆಹಲಿಯ ಲಿ ಮೆರಿಡಿಯನ್‌ನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ ವ್ಯಕ್ತಿಯನ್ನು ಪರ್ವಿಂದರ್ ಸಿಂಗ್ ಜುನೇಜಾ ಎಂದು ಗುರುತಿಸಲಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡ ಅದೇ ದಿನ ಹೋಟೆಲ್‌ಗೆ ಭೇಟಿ ನೀಡಿದ್ದರು. ಕ್ರಿಸ್‌ಮಸ್‌ ಸಮಯದಲ್ಲಿ ಅವರು ಕೆಲವು ದಿನಗಳ ಹಿಂದೆ ಅಲ್ಲಿಯೇ ತಂಗಿದ್ದರು. ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಮಧ್ಯಾಹ್ನ ಅವರು ಹೋಟೆಲ್‌ಗೆ ಪ್ರವೇಶಿಸಿ, ಲಿಫ್ಟ್ ಬಳಸಿ ಮೇಲಿನ ಮಹಡಿಗೆ ಹೋಗಿ ಕಟ್ಟಡದಿಂದ ಹಾರಿದ್ದಾರೆ. ಮಧ್ಯಾಹ್ನ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಸಿಂಗ್ ಸ್ಥಳದಲ್ಲೇ ಮೃತಪಟ್ಟರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪರ್ವಿಂದರ್ ಸಿಂಗ್ ಎಂದು ಗುರುತಿಸಲಾದ ವ್ಯಕ್ತಿ ಲೆ ಮೆರಿಡಿಯನ್ ಹೋಟೆಲ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತನಿಖೆ ನಡೆಯುತ್ತಿದೆ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪಂಚತಾರಾ ಹೋಟೆಲ್‌ನ 12 ನೇ ಮಹಡಿಯಲ್ಲಿ ರೆಸ್ಟೋರೆಂಟ್ ಇದ್ದು, ಅಲ್ಲಿಂದ ಅವರು ಹಾರಿ ಸಾವನ್ನಪ್ಪಿದ್ದಾರೆ.ಈ ಘಟನೆ ಮಧ್ಯಾಹ್ನ 12.30 ರ ಸುಮಾರಿಗೆ ವರದಿಯಾಗಿದೆ.

ಮತ್ತಷ್ಟು ಓದಿ: ಆತ್ಮಹತ್ಯೆ ಮಾಡಿಕೊಳ್ಳಲು ಕಾಡಿಗೆ ಹೋದವನಿಗೆ ವಿಷ್ಣುವಿನ ದರ್ಶನ; ದೇವಾಲಯ ಕಟ್ಟಿ ಪೂಜಿಸಿದ ಬೀದರ್​​​ನ ಜನ

ಮೃತರನ್ನು ನಗರದ ಲಜಪತ್ ನಗರದ ನಿವಾಸಿ ಪರ್ವಿಂದರ್ ಸಿಂಗ್ ಜುನೇಜಾ ಎಂದು ಗುರುತಿಸಲಾಗಿದೆ. ಜುನೇಜಾ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Video: ನನ್ನ ತಂಗಿ ಎಷ್ಟು  ಮುದ್ದಾಗಿದ್ದಾಳೆ; ನವಜಾತ ಶಿಶುವನ್ನು ಕಂಡೊಡನೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ಪುಟ್ಟ ಹುಡುಗ – Kannada News | Little boy’s reaction upon seeing a new born baby

ಮನೆಯಲ್ಲಿ ಮಕ್ಕಳಿದ್ದರೆ ತಮ್ಮ ಮನೆಗೆ ಮತ್ತೊಂದು ಪುಟ್ಟ ಮಗು (little boy) ಬರುತ್ತದೆಯೆಂದರೆ ಅವರ ಖುಷಿ ಎಲ್ಲೇ ಮೀರುತ್ತದೆ. ಇನ್ನು ಆಗ ತಾನೇ ಹುಟ್ಟಿದ ಮಗುವನ್ನು ನೋಡಿದ ಬಳಿಕ ಪುಟ್ಟ ಮಕ್ಕಳು ಮುದ್ದಾಗಿ ರಿಯಾಕ್ಷನ್ ನೀಡುವುದನ್ನು  ನೀವು ನೋಡಿರಬಹುದು. ಆದ್ರೆ ಇಲ್ಲೊಬ್ಬ ಪುಟ್ಟ ಹುಡುಗ ಆಗ ತಾನೇ ಹುಟ್ಟಿದ ನವಜಾತ ಸಹೋದರಿಯನ್ನು ನೋಡಲು ಆಸ್ಪತ್ರೆಗೆ ಬಂದಿದ್ದಾನೆ. ಮಗುವನ್ನು ನೋಡುತ್ತಿದ್ದಂತೆ ಕ್ಯೂಟ್ ರಿಯಾಕ್ಷನ್‌ನೊಂದಿಗೆ ತನ್ನ ತಾಯಿಯ ಬಳಿ ಪ್ರಶ್ನೆ ಮೇಲೆ ಪ್ರಶ್ನೆ ಕೇಳಿದ್ದಾನೆ.

ರಿಚಾ ಅಗರ್ವಾಲ್ (baniya2bengali) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗೆ ಒಬ್ಬ ತಾಯಿಯ ನೋವು ಅಗೋಚರವಾಗಿರುತ್ತದೆ. ಆಕೆಯ ತ್ಯಾಗ ಸಾಮಾನ್ಯವಾದ ಪರಿಗಣನೆ ಆಗಿರುತ್ತದೆ ಎಂಬ ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ

ಈ ವಿಡಿಯೋದಲ್ಲಿ ಪುಟಾಣಿಯೊಂದು ತನ್ನ ನವಜಾತ ಸಹೋದರಿಯನ್ನು ನೋಡಲು ಆಸ್ಪತ್ರೆಗೆ ಬಂದಿದ್ದಾನೆ. ತನ್ನ ತಾಯಿ ಹಾಗೂ ಪುಟಾಣಿಯನ್ನು ನೋಡುತ್ತಿದ್ದು, ಆ ಬಳಿಕ ತಾಯಿಯ ಬಳಿ ನಾನಾ ಪ್ರಶ್ನೆಗಳನ್ನು ಕೇಳುತ್ತಿದ್ದಾನೆ. ತನ್ನ ತಾಯಿಯನ್ನು ನೈಟ್ ಸೂಟ್ ಧರಿಸಿದ್ದೀರಾ ಎಂದು ಕೇಳುತ್ತಾನೆ. ಆ ಬಳಿಕ ಮಗುವು ನಿಜವೇ, ಆಟಿಕೆಯೇ ಎಂದು ಪ್ರಶ್ನೆ ಕೇಳುವುದನ್ನು ನೋಡಬಹುದು. ಆದರೆ ಮಗು ನಿಜ ಎಂದು ಅವನಿಗೆ ತಿಳಿದಾಗ, ಪುಟ್ಟ ಕಂದಮ್ಮನನ್ನು ನೋಡುತ್ತಾನೆ. ಗಂಡು ಮಗುವೋ ಅಥವಾ ಹೆಣ್ಣು ಮಗುವೋ ಎಂದು ಈ ಪುಟ್ಟ ಬಾಲಕ ಕೇಳಿದ್ದು, ಹೆಣ್ಣು ಮಗು ಎಂದು ಹೆತ್ತವರು ಉತ್ತರಿಸುವುದನ್ನು ನೋಡಬಹುದು.

ಇದನ್ನೂ ಓದಿ:ಮುದ್ದು ಕಂದನ ಬಾಯಲ್ಲಿ ಶ್ರೀ ಕೃಷ್ಣನ ಭಜನೆ ಹಾಡು, ವೈರಲ್ ಆಯ್ತು ದೃಶ್ಯ

ಈ ವಿಡಿಯೋ ಹನ್ನೆರಡು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ಕೊಂಡಿದ್ದು, ಒಬ್ಬ ಬಳಕೆದಾರ ಮುದ್ದಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಪುಟ್ಟ ಹುಡುಗನು ಅಮ್ಮನ ಬಗ್ಗೆ ಕಾಳಜಿ ವಹಿಸುತ್ತಾನೆ. ಜೀವನದಲ್ಲಿ ಒಳ್ಳೆಯ ಮಗ ಮತ್ತು ಸಹೋದರನಾಗುತ್ತಾನೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಂದೇ ವರ್ಷದಲ್ಲಿ ಅಕ್ಷಯ್ ಖನ್ನಾ ಸಿನಿಮಾಗಳ ಕಲೆಕ್ಷನ್ 2 ಸಾವಿರ ಕೋಟಿ ರೂಪಾಯಿ! – Kannada News | Akshaye Khanna starrer Chhaava and Dhurandhar movie collection Rs 2000 Cr in 2025

ನಟ ಅಕ್ಷಯ್ ಖನ್ನಾ (Akshaye Khanna) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೀರೋ, ಪೋಷಕ ಪಾತ್ರ ಹಾಗೂ ವಿಲನ್ ಆಗಿ ಕೂಡ ಅವರು ಜನಮನ ಗೆದ್ದಿದ್ದಾರೆ. ಅಕ್ಷಯ್ ಖನ್ನಾ ಅವರಿಗೆ 2025ರ ವರ್ಷ ತುಂಬಾ ಸ್ಪೆಷಲ್ ಆಗಿತ್ತು. ಅವರು ನಟಿಸಿದ ಎರಡು ಸಿನಿಮಾಗಳು ಸೂಪರ್ ಹಿಟ್ ಆದವು. ‘ಛಾವ’ ಮತ್ತು ‘ಧುರಂಧರ್’ (Dhurandhar) ಸಿನಿಮಾದಲ್ಲಿ ಅಕ್ಷಯ್ ಖನ್ನಾ ವಿಲನ್ ಪಾತ್ರ ಮಾಡಿದ್ದಾರೆ. ಈ ಸಿನಿಮಾಗಳಿಂದ ಆಗಿರುವ ಒಟ್ಟು ಕಲೆಕ್ಷನ್ 2 ಸಾವಿರ ಕೋಟಿ ರೂಪಾಯಿ ಮೀರಿದೆ. ಇದರಿಂದಾಗಿ ಅಕ್ಷಯ್ ಖನ್ನಾ ಅವರ ಖ್ಯಾತಿ ಹೆಚ್ಚಾಗಿದೆ.

‘ಛಾವ’ ಸಿನಿಮಾ 2025ರ ಫೆಬ್ರವರಿ 14ರಂದು ಬಿಡುಗಡೆ ಆಯಿತು. ಆ ಸಿನಿಮಾಗೆ ವಿಕ್ಕಿ ಕೌಶಲ್ ಹೀರೋ. ಐತಿಹಾಸಿಕ ಕಥಾಹಂದರ ಹೊಂದಿದ್ದ ಆ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ಔರಂಗಜೇಬ್ ಪಾತ್ರವನ್ನು ಮಾಡಿದರು. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ಸಿಕ್ಕಿತು. ಚಿತ್ರದ ಗೆಲುವಿನಲ್ಲಿ ಅಕ್ಷಯ್ ಖನ್ನಾ ಅವರ ಕೊಡುಗೆ ಕೂಡ ದೊಡ್ಡದಿದೆ. ಆ ಸಿನಿಮಾ ವಿಶ್ವಾದ್ಯಂತ 809 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು.

‘ಧುರಂಧರ್’ ಸಿನಿಮಾ 2025ರ ಡಿಸೆಂಬರ್ 5ರಂದು ರಿಲೀಸ್ ಆಯಿತು. ರಣವೀರ್ ಸಿಂಗ್ ಅವರು ಹೀರೋ ಆಗಿ ನಟಿಸಿರುವ ಈ ಚಿತ್ರದಲ್ಲಿ ಅಕ್ಷಯ್ ಖನ್ನಾ ಅವರು ವಿಲನ್ ಪಾತ್ರ ಮಾಡಿದ್ದಾರೆ. ರೆಹಮಾನ್ ಡಕಾಯಿತ್ ಎಂಬ ಪಾತ್ರದಲ್ಲಿ ಅವರು ಜೀವಿಸಿದ್ದಾರೆ. ‘ಧುರಂಧರ್’ ನೋಡಿದ ಎಲ್ಲರೂ ಅಕ್ಷಯ್ ಖನ್ನಾ ಅವರ ನಟನೆಯನ್ನು ಕೊಂಡಾಡುತ್ತಿದ್ದಾರೆ. ಈ ಸಿನಿಮಾ ಈಗಾಗಲೇ 1167 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ.

ಇನ್ನು ಕೆಲವೇ ದಿನಗಳಲ್ಲಿ ‘ಧುರಂಧರ್’ ಸಿನಿಮಾದ ಒಟ್ಟು ಕಲೆಕ್ಷನ್ 1200 ಕೋಟಿ ರೂಪಾಯಿ ಆಗಲಿದೆ. ‘ಛಾವ’ ಚಿತ್ರದ ಗಳಿಕೆಯನ್ನೂ ಸೇರಿಸಿದರೆ ಅಕ್ಷಯ್ ಖನ್ನಾ ನಟಿಸಿದ ಈ ಸಿನಿಮಾಗಳ ಒಟ್ಟು ಕಲೆಕ್ಷನ್ 2000 ಕೋಟಿ ರೂಪಾಯಿ ಆಗುತ್ತದೆ. ಆ ಮೂಲಕ ಒಂದೇ ವರ್ಷದಲ್ಲಿ ಅಕ್ಷಯ್ ಖನ್ನಾ ಅಭಿನಯದ ಸಿನಿಮಾಗಳಿಂದ 2 ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಆದಂತೆ ಆಗಿದೆ.

ಇದನ್ನೂ ಓದಿ: ಮುಂಬೈನಲ್ಲಿ ‘ಧುರಂಧರ್’ ಬಗ್ಗೆ ಮನಸಾರೆ ಮಾತಾಡಿದ ಶಿವರಾಜ್​ಕುಮಾರ್

ಈ ರೀತಿ ಸಾಧನೆ ಮಾಡಿದ ಮತ್ತೋರ್ವ ನಟ ಎಂದರೆ ಅದು ಶಾರುಖ್ ಖಾನ್. ಅವರು ನಟಿಸಿದ ‘ಪಠಾಣ್’, ‘ಜವಾನ್’ ಮತ್ತು ‘ಡಂಕಿ’ ಸಿನಿಮಾಗಳು 2023ರಲ್ಲಿ ಬಿಡುಗಡೆ ಆದವು. ಈ ಮೂರು ಸಿನಿಮಾಗಳಿಂದ 2685 ಕೋಟಿ ರೂಪಾಯಿ ಕಲೆಕ್ಷನ್ ಆಗಿತ್ತು. ಹಾಗಾಗಿ ಅವರು ನಂಬರ್ ಸ್ಥಾನದಲ್ಲಿ ಇದ್ದಾರೆ. ಈಗ ಅಕ್ಷಯ್ ಖನ್ನಾ ಅವರಿಗೆ ‘ಧುರಂಧರ್’ ಮತ್ತು ‘ಛಾವ’ ಸಿನಿಮಾಗಳಿಂದ 2ನೇ ಸ್ಥಾನ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version