Headlines

ಟೀಮ್ ಇಂಡಿಯಾಗೆ ಹೊಸ ಫೀಲ್ಡಿಂಗ್ ಕೋಚ್ ನೇಮಕ! – Kannada News | Subhadeep Ghosh Replaces T Dilip as Team India’s Fielding Coach

ಭಾರತ ಕ್ರಿಕೆಟ್ ತಂಡಕ್ಕೆ ಹೊಸ ಫೀಲ್ಡಿಂಗ್ ಕೋಚ್ ಆಗಿ ಸುಭದೀಪ್ ಘೋಷ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಫೀಲ್ಡಿಂಗ್ ಕೋಚ್ ಆಗಿದ್ದ ಟಿ. ದಿಲೀಪ್ ಅವರ ಒಪ್ಪಂದವನ್ನು ನವೀಕರಿಸದಿರಲು ಬಿಸಿಸಿಐ ನಿರ್ಧರಿಸಿದ ಬೆನ್ನಲ್ಲೇ, ಅವರ ಸ್ಥಾನಕ್ಕೆ ಸುಭದೀಪ್ ಅವರನ್ನು ಕ್ಷೇತ್ರರಕ್ಷಣಾ ತರಬೇತುದಾರರನ್ನಾಗಿ ನೇಮಿಸಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಮಾರ್ಗದರ್ಶನದಡಿ ಹೊಸ ಕೋಚಿಂಗ್ ಸಿಬ್ಬಂದಿ ಭಾರತ ತಂಡವನ್ನು ಮುನ್ನಡೆಸಲಿದ್ದು, ಮುಂಬರುವ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಸುಭದೀಪ್ ಘೋಷ್ ಅವರ ಪಾಲಿಗೆ…

Read More

ಕಾವೇರಿ ನೀರು ಹಂಚಿಕೆ ವಿವಾದ: ರೈತರ ಪ್ರತಿಭಟನೆ ತೀವ್ರ, ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ – Kannada News | Cauvery Water Dispute: Karnataka Minister Ramalinga Reddy Calls Emergency Meeting Amid Farmers’ Protest

ಬೆಂಗಳೂರು, ಜುಲೈ 29: ಕಾವೇರಿ ನೀರು ಹಂಚಿಕೆ ವಿವಾದ ತೀವ್ರಗೊಂಡಿದ್ದು, ರೈತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ತುರ್ತು ಸಭೆ ಕರೆದಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಲಿರುವ ಸಚಿವರು, ಕಾವೇರಿ ವಿಚಾರದಲ್ಲಿ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಾವೇರಿ ಕಾನೂನು ಹೋರಾಟದ ಸಂಬಂಧ ದೆಹಲಿಯಲ್ಲಿ ವಕೀಲರೊಂದಿಗೆ ಸಭೆ ನಡೆಸಲಿದ್ದಾರೆ. ಹಿರಿಯ ನ್ಯಾಯವಾದಿ ಮೋಹನ್ ಕಾತರಕಿ ಸೇರಿದಂತೆ ತಜ್ಞರೊಂದಿಗೆ ಅವರು ಮಾತುಕತೆ…

Read More

ಸಿಜೆಪಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್, ಎಕ್ಸ್​ ಖಾತೆಗಳಿಗೆ ದೆಹಲಿ ಪೊಲೀಸರಿಂದ ನೋಟಿಸ್ – Kannada News | Delhi Police Issue Notices Over Alleged Offensive Social Media Posts During Protest

ನವದೆಹಲಿ, ಜುಲೈ 29: ದೆಹಲಿಯ ಜಂತರ್​ ಮಂತರ್ ಮತ್ತು ಇತರೆಡೆ ನಡೆದ ಸಿಜೆಪಿ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಸಂಸದ್ ಚಲೋ ಮೆರವಣಿಗೆಯ ಹಿಂಸಾಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ನಿಂದನೀಯ, ಆಕ್ಷೇಪಾರ್ಹ ಪೋಸ್ಟ್​ಗಳನ್ನು ಹಂಚಿಕೊಂಡಿದ್ದಕ್ಕಾಗಿ ದೆಹಲಿ ಪೊಲೀಸರು ಹಲವು ಸಾಮಾಜಿಕ ಖಾತೆಗಳಿಗೆ ನೋಟಿಸ್ ನೀಡಿದ್ದಾರೆ. ಕೆಲವು ಪ್ರಮುಖ ಸುದ್ದಿ ಪೋರ್ಟಲ್‌ಗಳ ಖಾತೆಗಳು ಹಾಗೂ ನಿಂದನೀಯ ಭಾಷೆ ಬಳಸಿದ ಬಳಕೆದಾರರ ವಿವರಗಳನ್ನು ಒದಗಿಸುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ ‘ಎಕ್ಸ್’ಗೆ ಸೂಚನೆ…

Read More

ರಾಮ್ ಚರಣ್ ಆಸ್ಪತ್ರೆ ಫೋಟೋ ವೈರಲ್; 8 ವಾರ ವಿಶ್ರಾಂತಿ ಕಡ್ಡಾಯ – Kannada News | Ram Charan Successfully Undergoes Wrist Surgery in Coimbatore photo viral Advised Eight Weeks of Rest

ಟಾಲಿವುಡ್‌ನ ಖ್ಯಾತ ನಟ ರಾಮ್ ಚರಣ್  (Ram Charan) ಬಲಗೈ ಮಣಿಕಟ್ಟಿನ ಶಸ್ತ್ರಚಿಕಿತ್ಸೆ ಭಾನುವಾರ ಯಶಸ್ವಿಯಾಗಿದೆ. ತಮಿಳುನಾಡಿನ ಕೊಯಮತ್ತೂರಿನ ಗಂಗಾ ಆಸ್ಪತ್ರೆಯಲ್ಲಿ ಈ ಆಪರೇಷನ್ ನಡೆದಿದೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ತಂದೆ ಚಿರಂಜೀವಿ, ತಾಯಿ ಸುರೇಖಾ ಮತ್ತು ಪತ್ನಿ ಉಪಾಸನಾ ಕೊನಿಡೇಲ ಅವರು ನಟನ ಜೊತೆಯಲ್ಲಿದ್ದಾರೆ. ರಾಮ್ ಚರಣ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಹೀಗಿರುವಾಗಲೇ ಅವರ ಆಸ್ಪತ್ರೆ ಫೋಟೋ ವೈರಲ್ ಆಗಿದೆ. ಮಿಯಾಮಿ ವೈದ್ಯರ ತಂಡದಿಂದ ಚಿಕಿತ್ಸೆ ರಾಮ್ ಚರಣ್ ಅವರಿಗೆ ಗಾಯದ…

Read More

ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬ: ಎಂಜಿನಿಯರಿಂಗ್ ಪ್ರವೇಶದ ಅಂತಿಮ ಗಡುವು ವಿಸ್ತರಣೆಗೆ KEA ಮನವಿ – Kannada News | KEA Urges AICTE to Extend Engineering Admission Deadline Amid Lag in Medical Seat Counselling

ಎಂಜಿನಿಯರಿಂಗ್ ಪ್ರವೇಶದ ಅಂತಿಮ ಗಡುವು ವಿಸ್ತರಣೆಗೆ KEA ಮನವಿ ಬೆಂಗಳೂರು, ಜುಲೈ 29: ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನೆಲೆ, ಎಂಜಿನಿಯರಿಂಗ್ ಪ್ರವೇಶದ ಅಂತಿಮ ಗಡುವನ್ನು ವಿಸ್ತರಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE)ಗೆ ಮನವಿ ಮಾಡಿದೆ. ಇದೇ ಬೇಡಿಕೆಯನ್ನು COMEDK ಕೂಡ AICTEಗೆ ಸಲ್ಲಿಸಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ವೈದ್ಯಕೀಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ತಡವಾಗಿ ಪ್ರಕಟಿಸಿರುವುದು ಹಾಗೂ ರಾಜ್ಯ ಸರ್ಕಾರದಿಂದ ವೈದ್ಯಕೀಯ ಸೀಟುಗಳ ಮ್ಯಾಟ್ರಿಕ್ಸ್…

Read More

Video: ಇಳಿ ವಯಸ್ಸಿನ ಅಜ್ಜನೊಂದಿಗೆ ಊರು ಸುತ್ತಿ ಖುಷಿ ಪಟ್ಟ ಮೊಮ್ಮಗ – Kannada News | Grandson took his 100 year old grandfather out, video goes viral

ಅಜ್ಜ ಅಜ್ಜಿಯಂದಿರ (grandparents) ಪ್ರೀತಿಗೆ ಬೆಲೆ ಕಟ್ಟೋಕೆ ಆಗಲ್ಲ. ಮಕ್ಕಳಿದ್ದಾಗ ತಮಗೆ ಬೇಕಾದದ್ದು ಕೊಡಿಸಿದ್ದ ಈ ಹಿರಿಜೀವಗಳನ್ನು ವಯಸ್ಸಾದ ಕಾಲಘಟ್ಟದಲ್ಲಿ ನೋಡಿಕೊಳ್ಳುವುದು ಕರ್ತವ್ಯ. ಈ ಕೆಲಸವನ್ನು ಮೊಮ್ಮಗನು ಚಾಚು ತಪ್ಪದೇ ಮಾಡಿದ್ದಾನೆ. ಹೌದು, 100ರ ಹರೆಯದ ಅಜ್ಜನನ್ನು ತನ್ನ ಕಾರಿನಲ್ಲಿ ಹೊರಗಡೆ ಕರೆದುಕೊಂಡು ಹೋಗಿದ್ದಾನೆ. ಊರು ಸುತ್ತಿಸಿ ಅಜ್ಜನಿಗೆ ತಿಂಡಿ ಕೊಡಿಸಿದ್ದು ಅವರೊಂದಿಗೆ ಅಮೂಲ್ಯ ಸಮಯ ಕಳೆದಿದ್ದಾನೆ. ಈ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮ್ಮ ಅಜ್ಜ ಅಜ್ಜಿಯನ್ನು ನೆನಪಿಸಿಕೊಂಡಿದ್ದಾರೆ. ನಯನ್ ಸೂರ್ಯ (Nayan surya)…

Read More

ಹೊಸ ‘ಬ್ಲಾಕ್ ಪ್ಯಾಂಥರ್’ ಹುಡುಕಿದ ಮಾರ್ವೆಲ್, ಯಾರು ಈ ಡೇವಿಡ್? – Kannada News | Who is David Jonsson? Marvel’s Next Black Panther After Chadwick Boseman

‘ಐರನ್ ಮ್ಯಾನ್’, ‘ಸೂಪರ್ ಮ್ಯಾನ್’, ‘ಸ್ಪೈಡರ್ ಮ್ಯಾನ್’, ‘ಥಾರ್’, ‘ಬ್ಲಾಕ್ ವಿಡೊ’, ‘ಡಾಕ್ಟರ್ ಸ್ಟ್ರೇಂಜ್’ ರೀತಿ ‘ಬ್ಲಾಕ್ ಪ್ಯಾಂಥರ್’ ಸಹ ಬಲು ಜನಪ್ರಿಯ ಸೂಪರ್ ಹೀರೋ. ಮಾರ್ವೆಲ್​​ನ (Marvel) ಈ ಸೂಪರ್ ಹೀರೋ, ‘ಅವೇಂಜರ್ಸ್’ ತಂಡದಲ್ಲಿಯೂ ಇದ್ದಾನೆ. ‘ಬ್ಲಾಕ್ ಪ್ಯಾಂಥರ್’ ಮೊದಲು ಬಿಡುಗಡೆ ಆದಾಗ ಚಾಡ್ವಿಕ್ ಬೋಸ್ಮನ್, ‘ಬ್ಲಾಕ್ ಪ್ಯಾಂಥರ್’ ಆಗಿ ನಟಿಸಿದ್ದರು. ಅವರ ಪಾತ್ರ ಭಾರಿ ದೊಡ್ಡ ಹಿಟ್ ಆಯ್ತು. ‘ಬ್ಲಾಕ್ ಪ್ಯಾಂಥರ್’ಗೆ ಜನಪ್ರಿಯತೆ ತಂದುಕೊಡುವಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು. ಆದರೆ 2020ರಲ್ಲಿ ಅವರು ಕ್ಯಾನ್ಸರ್​​ನಿಂದಾಗಿ…

Read More

ನೈಸ್ ರಸ್ತೆ ಭೂಸ್ವಾಧೀನ ಪ್ರಕರಣ: ನೂರಾರು ರೈತರಿಗೆ ಹೈಕೋರ್ಟ್ ಬಿಗ್ ರಿಲೀಫ್, ನೈಸ್ ಮೇಲ್ಮನವಿ ವಜಾ – Kannada News | Karnataka High Court Dismisses NICE Appeal in Land Acquisition Case, Major Relief for Hundreds of Farmers

ನೈಸ್‌ಗೆ ಹೈಕೋರ್ಟ್ ಶಾಕ್Image Credit source: tv9 ಬೆಂಗಳೂರು, ಜುಲೈ 29: ನೈಸ್ ರಸ್ತೆ (NICE Road) ಯೋಜನೆಗಾಗಿ ಕೆಐಎಡಿಬಿಯಿಂದ ನಡೆದ ಭೂಸ್ವಾಧೀನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನೂರಾರು ರೈತರಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಬುಧವಾರ ಮಹತ್ವದ ರಿಲೀಫ್ ನೀಡಿದೆ. ಭೂಸ್ವಾಧೀನ ರದ್ದು ಪ್ರಶ್ನಿಸಿ ನೈಸ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ನ್ಯಾಯಮೂರ್ತಿ ಡಿಕೆ ಸಿಂಗ್ ಹಾಗೂ ನ್ಯಾಯಮೂರ್ತಿ ಟಿಎಂ ನದಾಫ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಪ್ರಕರಣದಲ್ಲಿ…

Read More

ಗುರು ಪೂರ್ಣಿಮೆ 2026: ಮಲ್ಲೇಶ್ವರಂ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ – Kannada News | Guru Purnima 2026: Special Celebrations at Malleswaram Sai Baba Temple

ಬೆಂಗಳೂರು, ಜುಲೈ 29: ಗುರು ಪೂರ್ಣಿಮೆ 2026ರ ಶುಭ ಸಂದರ್ಭದಲ್ಲಿ ಬೆಂಗಳೂರಿನ ಹಲವು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದಿವೆ. ಮಲ್ಲೇಶ್ವರಂನಲ್ಲಿರುವ ಸಾಯಿಬಾಬಾ ದೇವಸ್ಥಾನಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ದೇವಸ್ಥಾನವನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಸಾಯಿಬಾಬಾಗೆ ಅಭಿಷೇಕ, ಪಾದ ಪೂಜೆ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ನೆರವೇರಿಸಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Karnataka Cabinet Expansion: ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ – Kannada News | Zameer Ahmed Khan Summoned to Delhi Amidst Karnataka Cabinet Expansion Buzz

ಬೆಂಗಳೂರು, ಜುಲೈ 29: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದ್ದು, ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳಿಂದ ತೀವ್ರ ಲಾಬಿ ನಡೆಯುತ್ತಿದೆ. ಈ ನಡುವೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ತುರ್ತು ಬುಲಾವ್ ಬಂದಿದೆ. ರಣದೀಪ್ ಸುರ್ಜೇವಾಲ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದು, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಸಿದ್ದರಾಮಯ್ಯನವರ ಹಿಂದಿನ ಅವಧಿಯಲ್ಲಿ ವಸತಿ ಖಾತೆ ಸಚಿವರಾಗಿದ್ದ ಜಮೀರ್, ಈ ಬಾರಿಯೂ ಸಚಿವ ಸ್ಥಾನದ ಪ್ರಬಲ…

Read More