Headlines

CSK vs RR: ಸಿಎಸ್​ಕೆ ವಿರುದ್ಧ 15 ಎಸೆತಗಳಲ್ಲಿ 50 ರನ್ ಚಚ್ಚಿದ ವೈಭವ್ ಸೂರ್ಯವಂಶಿ

ಗುವಾಹಟಿಯಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ 2026 ರ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ಕೇವಲ 127 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ತಂಡಕ್ಕೆ ವೈಭವ್ ಸಿಡಿಲಬ್ಬರದ ಆರಂಭ ಒದಗಿಸಿಕೊಟ್ಟರು. ಜೇಮಿ ಓವರ್ಟನ್ ಎಸೆದ ಮೊದಲ ಓವರ್​ನಲ್ಲಿ ತಾನು ಎದುರಿಸಿದ ಮೊದಲ ಎಸೆತದಲ್ಲೇ ವೈಭವ್ ಸಿಕ್ಸರ್ ಬಾರಿಸುವ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 4ರ ದಿನಭವಿಷ್ಯ

ಈ ದಿನ ನಿಮ್ಮಿಂದ ಸಾಧ್ಯವಾದಲ್ಲಿ ಗ್ರಂಥ ದಾನವನ್ನು ಮಾಡಿ. ಉದಾಹರಣೆಗೆ ರಾಮಾಯಣ, ಮಹಾಭಾರತ, ಭಗವದ್ಗೀತೆ ಹೀಗೆ ಗ್ರಂಥವೊಂದನ್ನು ದಾನ ಮಾಡಿ. ಇನ್ನು ಸಾರ್ವಜನಿಕ ಸಾರಿಗೆಯನ್ನು ಬಳಸುವವರಾಗಿದ್ದಲ್ಲಿ ಮುಖ್ಯವಾದ ಡಾಕ್ಯುಮೆಂಟ್ ಗಳು, ಗ್ಯಾಜೆಟ್ ಗಳನ್ನು ತೆಗೆದುಕೊಂಡುವಾಗ ಜಾಗ್ರತೆಯಿಂದ ಇರಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಕ್ಲಿಕ್ ಆಗಿಯೇ ಆಗುತ್ತದೆ ಎಂಬ ಲೆಕ್ಕಾಚಾರದಲ್ಲಿ ನೀವು ಆರಂಭಿಸಿದ ವೃತ್ತಿ- ವ್ಯಾಪಾರ ಅಂದುಕೊಂಡ ದಿಕ್ಕಿನಲ್ಲಿಯೇ ಸಾಗಲಿದೆ. ಹಣಕಾಸಿನ ಹೊಂದಾಣಿಕೆ ಮಾಡಬೇಕು ಎಂದಿದ್ದಲ್ಲಿ ಅದು…

Read More

Horoscope Today 08 February​: ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 08, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಸಪ್ತಮಿ, ಸ್ವಾತಿ ನಕ್ಷತ್ರದ ಈ ಶುಭ ದಿನದಂದು ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ರಾಹುಕಾಲವು ಮಧ್ಯಾಹ್ನ 4:56 ರಿಂದ ಸಂಜೆ 6:24 ರ ತನಕ ಇರಲಿದೆ. ಸರ್ವ…

Read More

ವಿಶ್ವದ ಪ್ರಭಾವಶಾಲಿ 100 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ನಟ – Kannada News | Ranbir Kapoor is only Indian actor to named in TIMES 100 list

ಪ್ರತಿಷ್ಠಿತ ಅಂತರಾಷ್ಟ್ರೀಯ ಮ್ಯಾಗಜೀನ್ ‘ಟೈಮ್ಸ್’ ಪ್ರತಿ ವರ್ಷದಂತೆ ಈ ವರ್ಷವೂ ವಿಶ್ವದ ಅತ್ಯಂತ ಪ್ರಭಾವಶಾಲಿ 100 ಮಂದಿಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಟೈಮ್ಸ್ 100 ಪಟ್ಟಿಯಲ್ಲಿ ಪ್ರತಿಬಾರಿಯಂತೆ ಈ ಬಾರಿಯೂ ಸಹ ಕೆಲವು ಭಾರತೀಯರು ಸ್ಥಾನ ಪಡೆದಿದ್ದಾರೆ. ಆದರೆ ಈ ಬಾರಿ ಈ ಪಟ್ಟಿಯಲ್ಲಿ ಕೇವಲ ಒಬ್ಬ ಭಾರತೀಯ ನಟ ಮಾತ್ರವೇ ಸ್ಥಾನ ಪಡೆದಿರುವುದು ವಿಶೇಷ. ಅದುವೇ ರಣ್​​ಬೀರ್ ಕಪೂರ್. ಬಾಲಿವುಡ್​​ನ ಸ್ಟಾರ್ ನಟ, ಇದೀಗ ‘ರಾಮಾಯಣ’ ಸಿನಿಮಾ ಮೂಲಕ ಹಾಲಿವುಡ್​​ಗೂ ಹಾರುತ್ತಿರುವ ರಣ್​​ಬೀರ್ ಕಪೂರ್…

Read More

ಚಿರತೆಗಳ ಜೊತೆ ಕಾದಾಡಿ ಜೀವ ಉಳಿಸಿಕೊಂಡ ಕಾಡುಹಂದಿ: ವಿಡಿಯೋ ವೈರಲ್​​ – Kannada News | Wild Boar Escapes Leopard Attack in Bhadra Sanctuary’s Lakkavalli Region; Video Goes Viral

ಚಿಕ್ಕಮಗಳೂರು, ಫೆಬ್ರವರಿ 11: ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಕಾಡುಹಂದಿ ಎಸ್ಕೇಪ್​​ ಆಗಿರುವ ಪ್ರಸಂಗ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಲಕ್ಕವಳ್ಳಿ ವಿಭಾಗದಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೊಬೈಲ್​​ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾಡು ಹಂದಿ ಬೇಟೆಗೆ ಎರಡು ಚಿರತೆಗಳು ಹೊಂಚುಹಾಕಿ ಕುಳಿತಿದ್ದವು. ಒಂದು ಚಿರತೆ ಮರವೇರಿದ್ದರೆ ಮತ್ತೊಂದು ಕೆಳಭಾಗದಿಂದಲೇ ಅಟ್ಯಾಕ್​​ಗೆ ರೆಡಿ ಆಗಿತ್ತು. ಆದರೆ ಚಿರತೆಗೇ ಗುದ್ದಿ ಕಾಡುಹಂದಿ ಎಸ್ಕೇಪ್​​ ಆಗಿದೆ. ಹಂದಿ ಮತ್ತು ಚಿರತೆ ಕಾದಾಟದ ದೃಶ್ಯವೀಗ ವೈರಲ್​​ ಆಗಿದೆ….

Read More

ಚಿಕ್ಕಬಳ್ಳಾಪುರ: ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ ಅಪಘಾತ, ರಾಯರ ದರ್ಶನಕ್ಕೆ ತೆರಳುತ್ತಿದ್ದವರು ಪವಾಡ ಸದೃಶವಾಗಿ ಪಾರು – Kannada News | Chikkaballapur Bus Accident: Mantralaya Bound Sleeper Bus Crashes Into Container, Pilgrims Escape Miraculously

ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ ಅಪಘಾತ ಚಿಕ್ಕಬಳ್ಳಾಪುರ, ಜನವರಿ 20: ಚಿಕ್ಕಬಳ್ಳಾಪುರ (Chikkaballapur) ನಗರದ ಹೊರವಲಯದ ಅಗಲಗುರ್ಕಿ ಬೈಪಾಸ್ ಸೇತುವೆ ಬಳಿ ಸೋಮವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಲೀಪರ್ ಕೋಚ್ ಬಸ್‌ ಒಂದು ಹೆದ್ದಾರಿಯ ಮಧ್ಯೆ ನಿಂತಿದ್ದ ಬೃಹತ್ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಯುವಕ ಮೃತಪಟ್ಟಿದ್ದಾನೆ. 12 ಮಂದಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಬೆಂಗಳೂರಿನ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಟ್ರಾವೆಲ್ಸ್‌ಗೆ ಸೇರಿದ ಸ್ಲೀಪರ್ ಕೋಚ್ ಬಸ್‌ ತಡರಾತ್ರಿ ಸುಮಾರು 1 ಗಂಟೆ…

Read More

ಆಮಿರ್ ಖಾನ್ ಪುತ್ರನ ಬಳಿ ಇಲ್ಲ ಕಾರು, ಬಸ್​ ಅಲ್ಲೇ ಓಡಾಡ್ತಾನೆ ಈ ನಟ

ಆಮಿರ್ ಖಾನ್ ಅವರು ಬಾಲಿವುಡ್​​ನ ಶ್ರೀಮಂತ ನಟರಲ್ಲಿ ಒಬ್ಬರು. ಅವರು ಬಾಲಿವುಡ್​​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ಸಿನಿಮಾ ಮಾಡುವುದರಲ್ಲಿ ಚ್ಯೂಸಿ ಆಗಿದ್ದಾರೆ. ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಈಗ ತಮ್ಮ ಮಗ ಜುನೈದ್ ಖಾನ್ ಬಗ್ಗೆ ಮಾತನಾಡಿದ್ದಾರೆ. ಮಗ ಯಾವ ರೀತಿ ಎಂದು ಹೇಳಿದ್ದಾರೆ. ಕಾರಿನಲ್ಲಿ ಓಡಾಡುವುದೇ ಇಲ್ಲ ಎಂದು ಹೇಳಿದ್ದಾರೆ. ಅವರು ಸಾರ್ವಜನಿಕ ಸಾರಿಗೆಯನ್ನು ಬಳಸುತ್ತಾರಂತೆ. ‘ನನ್ನ ಮೂವರು ಮಕ್ಕಳೂ ತುಂಬಾ ಸೂಕ್ಷ್ಮ. ಕೊವಿಡ್ ಸಮಯದಲ್ಲಿ ರೀನಾಳ ಹೆತ್ತವರಿಬ್ಬರಿಗೂ ವೈರಸ್ ತಗುಲಿತು….

Read More

Karnataka SSLC Results: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಇಂದು ಬರುತ್ತಾ? ವಿದ್ಯಾರ್ಥಿಗಳಿಗೆ KSEAB ಹೇಳಿದ್ದೇನು? – Kannada News | Karnataka SSLC Results 2026: Official Update and Expected Release Date

ಬೆಂಗಳೂರು, ಏ.15: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಎಂದು ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಈ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಮಂಡಳಿ ಮನವಿ ಮಾಡಿದೆ. ಯಾವುದೇ ಕಾರಣಕ್ಕೂ ಇಂದು ಫಲಿತಾಂಶ ಪ್ರಕಟ ಮಾಡಲ್ಲ ಎಂದು ಮಂಡಳಿ ಹೇಳಿದೆ. ಇನ್ನು ಫಲಿತಾಂಶ ತಯಾರಿಗಳು ನಡೆಯುತ್ತಿದೆ ಎಂದು ಹೇಳಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಹರಿಬಿಡುತ್ತಿರುವ ಸುಳ್ಳು ಸುದ್ದಿಗಳಿಗೆ…

Read More

ಕಾವ್ಯಾ ಅಪ್ಪ-ಅಮ್ಮನಿಗೂ ಇಷ್ಟವಾದ ಗಿಲ್ಲಿ ನಟ; ಸಿಕ್ತು ವಿಶೇಷ ಉಡುಗೊರೆ – Kannada News | Kavya Shaiva father Sadanand gifts Gilli Nata a silver bracelet in Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ (Gilli Nata) ಅವರು ಎಲ್ಲರ ಫೇವರಿಟ್ ಆಗಿದ್ದಾರೆ. ವೀಕ್ಷಕರಿಗೆ ಮಾತ್ರವಲ್ಲದೇ ಸ್ಪರ್ಧಿಗಳ ಕುಟುಂಬದವರಿಗೂ ಗಿಲ್ಲಿ ನಟ ಎಂದರೆ ಇಷ್ಟ. ಈಗಾಗಲೇ ಬಿಗ್ ಬಾಸ್ (BBK 12) ಮನೆಯೊಳಗೆ ಬಂದು ಹೋಗಿರುವ ಫ್ಯಾಮಿಲಿ ಸದಸ್ಯರು ಈ ಮಾತನ್ನು ಹೇಳಿದ್ದಾರೆ. ವಿಶೇಷವಾಗಿ ಕಾವ್ಯಾ ಶೈವ (Kavya Shaiva) ಅವರ ತಂದೆ-ತಾಯಿಗೂ ಗಿಲ್ಲಿ ಇಷ್ಟ ಆಗಿದ್ದಾರೆ. ಅದಕ್ಕಾಗಿ ಒಂದು ವಿಶೇಷ ಗಿಫ್ಟ್ ನೀಡಿದ್ದಾರೆ. ಕಾವ್ಯಾ ತಂದೆ ಸದಾನಂದ್ ಅವರು ಬೆಳ್ಳಿ ಬ್ರಾಸ್ಲೆಟ್ ತಂದು ಗಿಲ್ಲಿಗೆ…

Read More

ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 4: ಗಲ್ಫ್ ಯುದ್ಧವು ಭಾರತದ ವೈದ್ಯಕೀಯ ಕ್ಷೇತ್ರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಔಷಧಿಗಳ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಔಷಧಿಗಳ ಬೆಲೆ ಶೇಕಡಾ 10 ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬೆಲೆ ಏರಿಕೆಯು ಭವಿಷ್ಯದಲ್ಲಿ ರೋಗಿಗಳಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡಲಿದೆ. ಫಾರ್ಮ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಶನ್‌ನ ಅಧ್ಯಕ್ಷ ಸಿ ಜಯರಾಮ್ ಮತ್ತು ಸದಸ್ಯ ಮಹೇಶ್ ಅವರು ಈ ಕುರಿತು ಕಳವಳ ವ್ಯಕ್ತಪಡಿಸಿದ್ದು, ತುರ್ತು ಕ್ರಮ…

Read More