Headlines

ಕೋಲಾರದಲ್ಲಿ ಪಿಂಚಣಿ ಹಣಕ್ಕೂ ಪರದಾಟ: ನಿತ್ಯ ಅಲೆದು ಅಲೆದು ಕಂಗಾಲಾದ ವೃದ್ಧರು, ಅಂಗವಿಕಲ ಪಿಂಚಣಿದಾರರು

ಕೋಲಾರ, ಏಪ್ರಿಲ್​ 08: ವೃದ್ಧಾಪ್ಯ, ಅಂಗವಿಕಲ, ವಿಧವಾ ವೇತನ (pension) ಇವೆಲ್ಲವೂ ಸರ್ಕಾರ ಮನೆ ಬಾಗಿಲಿಗೆ ತಲುಪಬೇಕಾದ ಯೋಜನೆಗಳು. ಆ ಹಣವನ್ನೇ ನಂಬಿ ಹಿರಿಯ ಜೀವಗಳು ಬದುಕುತ್ತಿವೆ. ಆದರೆ ತಮ್ಮ ಹಣಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸುಡುಬಿಸಿಲಿನಲ್ಲಿ ಅಂಚೆ ಕಚೇರಿ ಬಳಿ ಕಾದು ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಅಷ್ಟೇ ಅಲ್ಲದೆ ಕಮಿಷನ್ ಕೊಟ್ಟರು ಹಣ ಮಾತ್ರ ಸರಿಯಾದ ಸಮಯಕ್ಕೆ ಸಿಗದಿರುವುದು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಎಲ್ಲಾ ರೀತಿಯ ಪಿಂಚಣಿದಾರರಿಗೆ ಮನೆ ಬಾಗಿಲಿಗೆ ಪಿಂಚಣಿ ಹಣ ತಿಂಗಳ ಒಳಗಾಗಿ…

Read More

Video: ಬೆಂಗಳೂರಿನ ಜನ್ರು ತುಂಬಾ ಒಳ್ಳೆಯವ್ರು; ಪ್ರಾಮಾಣಿಕ ಅನುಭವ ಹಂಚಿಕೊಂಡ ಮಹಿಳೆ

ಬೆಂಗಳೂರು, ಮಾರ್ಚ್ 09 : ಬೆಂಗಳೂರು (Bengaluru) ಅಂದ್ರೆ ಯುವಕ ಯುವತಿಯರಿಗೆ ಅದೇನೋ ಸೆಳೆತ, ಹೀಗಾಗಿ ಅದೆಷ್ಟೋ ಯುವಕ ಯುವತಿಯರು ಉದ್ಯೋಗ ಅರಸುತ್ತಾ ಬರುತ್ತಾರೆ. ರಾಜಧಾನಿ ಬೆಂಗಳೂರಿನಲ್ಲಿ ಒಂದು ವರ್ಷ ಕಳೆದ ಬಳಿಕ ತನ್ನ ಪ್ರಯಾಣ ಹಾಗೂ ತನ್ನ ಪ್ರಾಮಾಣಿಕ ಅನುಭವದ ಬಗ್ಗೆ ಮಾತನಾಡಿದ್ದು, ಬೆಂಗಳೂರಿನ ಜನರನ್ನು ಹಾಡಿ ಹೊಗಳಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. atyacreates ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದ ಶೀರ್ಷಿಕೆಯಲ್ಲಿನಮ್ಮ ಬೆಂಗಳೂರಿನಲ್ಲಿ ಒಂದು…

Read More

ಬಿಗ್ ಬಜೆಟ್ ಐತಿಹಾಸಿಕ ಸಿನಿಮಾಗಾಗಿ ಸಲ್ಮಾನ್ ಖಾನ್ ಜತೆ ಕೈ ಜೋಡಿಸಿದ ಫರ್ಹಾನ್ ಅಖ್ತರ್? – Kannada News | Salman Khan and Farhan Akhtar Two Part Historical epic Movie updates

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ಮುಂಬರುವ ಸಿನಿಮಾಗಳ ಲಿಸ್ಟ್ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಇದೆ. ಸದ್ಯ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿರುವ ಸಲ್ಲು ಭಾಯ್, ಇದೀಗ ಭಾರತೀಯ ಇತಿಹಾಸದ ಪ್ರಮುಖ ಪುಟಗಳನ್ನು ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ ಎಂಬ ಬಿಗ್ ನ್ಯೂಸ್ ಒಂದು ಬಾಲಿವುಡ್ ಅಂಗಳದಿಂದ ಕೇಳಿಬರುತ್ತಿದೆ. ಈ ಸಿನಿಮಾಗಾಗಿ ಖ್ಯಾತ ನಟ ಮತ್ತು ನಿರ್ದೇಶಕ ಫರ್ಹಾನ್ ಅಖ್ತರ್ (Farhan Akhtar) ಜೊತೆ ಸಲ್ಮಾನ್ ಖಾನ್ ಕೈಜೋಡಿಸುತ್ತಾರೆ ಎನ್ನಲಾಗಿದೆ. ಕೇಳಿಬರುತ್ತಿರುವ…

Read More

ಇರಾನ್-ಇಸ್ರೇಲ್ ಸಮರಕ್ಕೆ ಬಳ್ಳಾರಿ ಜೀನ್ಸ್ ಉದ್ಯಮ ತತ್ತರ: ರಫ್ತು ಸ್ಥಗಿತ, ಉತ್ಪಾದನೆ ಕುಸಿತ

ಬಳ್ಳಾರಿ, ಮಾರ್ಚ್ 17: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ (Iran Israel War) ಪರಿಣಾಮ ಜಾಗತಿಕವಾಗಿ ಮಾತ್ರವಲ್ಲದೆ, ಸ್ಥಳೀಯವಾಗಿಯೂ ತಟ್ಟತೊಡಗಿದೆ. ಬಳ್ಳಾರಿಯ ಹೆಮ್ಮೆಯ ಜೀನ್ಸ್ ಉದ್ಯಮಕ್ಕೆ (Ballari Jeans Industry) ಈ ಯುದ್ಧ ಈಗ ಭಾರಿ ಹೊಡೆತ ನೀಡಿದೆ. ಕೊಲ್ಲಿ ರಾಷ್ಟ್ರಗಳಿಂದ ಬರುತ್ತಿದ್ದ ಕೆಮಿಕಲ್ ಸರಬರಾಜು ಸ್ಥಗಿತಗೊಂಡಿರುವುದು ಉದ್ಯಮಿಗಳನ್ನು ಹೈರಾಣಾಗಿಸಿದೆ. ಇದರಿಂದಾಗಿ ಉತ್ಪಾದನೆ ಕುಸಿತವಾಗಿದೆ. ಮತ್ತೊಂದೆಡೆ, ರಫ್ತು ಕೂಡ ಸ್ಥಗಿತಗೊಂಡಿದೆ. ಇದು ಜೀನ್ಸ್ ಉದ್ಯಮಿಗಳನ್ನು, ಕಾರ್ಮಿಕರನ್ನು ಸಂಕಷ್ಟಕ್ಕೆ ಈಡುಮಾಡಿದೆ. ಜೀನ್ಸ್ ಉದ್ಯಮಕ್ಕೆ ಕೆಮಿಕಲ್ ಬಿಸಿ…

Read More

ಗದಗದಲ್ಲಿ ಧೂಳೆಬ್ಬಿಸಿದ ಎತ್ತುಗಳ ಮಿಂಚಿನ ಓಟ ಹೇಗಿತ್ತು ನೋಡಿ!

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಓಟ ಸ್ಪರ್ಧೆ ಭರ್ಜರಿಯಾಗಿ ನಡೆಯಿತು. ಗ್ರಾಮದ ರೈತ ಬಾಂಧವರು ಸ್ವಯಂಪ್ರೇರಿತವಾಗಿ ಈ ಕಾರ್ಯಕ್ರಮ ಆಯೋಜಿಸಿದ್ದು, ಇದು ಗ್ರಾಮೀಣ ಸಂಸ್ಕೃತಿಯ ಪ್ರತಿಬಿಂಬವಾಗಿತ್ತು. ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ ಎತ್ತುಗಳ ಜೋಡಿಗಳು ಸ್ಪರ್ಧೆಗೆ ಮತ್ತಷ್ಟು ಮೆರುಗು ನೀಡಿದವು. ಅಖಾಡಕ್ಕೆ ಎಂಟ್ರಿ ಕೊಟ್ಟ ಎತ್ತುಗಳ ಗಂಭೀರ ನಡೆ ಮತ್ತು ಓಟ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು. ಕಟ್ ಮಸ್ತಾಗಿ ಬೆಳೆಸಿದ ಎತ್ತುಗಳು ಶರವೇಗದಲ್ಲಿ ಓಡಿ ಧೂಳೆಬ್ಬಿಸಿದ ದೃಶ್ಯಗಳು ವಿಶೇಷವಾಗಿದ್ದವು….

Read More

‘ಧುರಂಧರ್ 2’ ಯಶಸ್ಸು: ಸಂಜಯ್ ದತ್ ಬಗ್ಗೆ ಮೆಚ್ಚುಗೆಯ ಮಾತಾಡಿದ ರಾಘವ್ ಚಡ್ಡಾ

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೇಂಜ್’ (Dhurandhar: The Revenge) ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದ್ದು, ಚಿತ್ರದ ಪ್ರತಿಯೊಬ್ಬ ಕಲಾವಿದರಿಗೂ ಪ್ರೇಕ್ಷಕರಿಂದ ಅಪಾರ ಪ್ರೀತಿ ವ್ಯಕ್ತವಾಗುತ್ತಿದೆ. ಈ ನಡುವೆ, ರಾಜಕಾರಣಿ ರಾಘವ್ ಚಡ್ಡಾ ಅವರು ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅವರನ್ನು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಈಗ ವೈರಲ್ ಆಗಿದೆ. ಇತ್ತೀಚೆಗೆ ರಾಜಕೀಯದ ಏರಿಳಿತಗಳ ಕಾರಣದಿಂದ ಸುದ್ದಿಯಲ್ಲಿದ್ದ ರಾಘವ್ ಚಡ್ಡಾ (Raghav Chadha) ಅವರು ಈಗ ಬಾಲಿವುಡ್​ ನಟನ ಸ್ನೇಹದ…

Read More

ರಿಷಬ್ ತೆಲುಗು ಸಿನಿಮಾಗೆ ಕರ್ನಾಟಕದಲ್ಲಿ ಮುಹೂರ್ತ; ಇದಕ್ಕಿದೆ ವಿಶೇಷ ಕಾರಣ – Kannada News | Rishab Shetty’s ‘Jai Hanuman’ Muhurtha in Hampi: Kantara’ Star’s Next Big Role

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಕೂಡ ಹೇಳಿದ್ದರು. ಈ ಚಿತ್ರದ ಬಳಿಕ ಅವರು ಒಂದು ದೀರ್ಘ ಗ್ಯಾಪ್ ತೆಗೆದುಕೊಂಡರು. ಕುಟುಂಬದ ಜೊತೆ ಸಮಯ ಕಳೆದರು. ಈಗ ಅವರು ಮತ್ತೆ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ‘ಹನುಮಾನ್ 2’ ಚಿತ್ರದ ಶೂಟ್​​ನಲ್ಲಿ ಅವರು ಬ್ಯುಸಿ ಆಗಲಿದ್ದಾರೆ. ಈ ಚಿತ್ರಕ್ಕೆ ಕರ್ನಾಟಕದಲ್ಲೇ ಮುಹೂರ್ತ ನಡೆಯಲಿದೆ ಎಂಬುದು ವಿಶೇಷ. ‘ಹನುಮಾನ್’ ಸಿನಿಮಾ 2024ರಲ್ಲಿ ರಿಲೀಸ್ ಆಯಿತು….

Read More

ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಪಾಕಿಸ್ತಾನ್ ವಿಶ್ವ ದಾಖಲೆ ಧೂಳೀಪಟ – Kannada News | Indian Team Breaks Pakistan World Record in T20 Cricket

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿರುವುದು ಟೀಮ್ ಇಂಡಿಯಾ (Team India). ಅದು ಕೂಡ ಪಾಕಿಸ್ತಾನ್ (Pakistan) ತಂಡದ ವಿಶ್ವ ದಾಖಲೆಯನ್ನು ಧೂಳೀಪಟ ಮಾಡುವ ಮೂಲಕ ಎಂಬುದು ವಿಶೇಷ.  Source link

Read More

ಶಾರುಖ್ ಖಾನ್ ಸಿನಿಮಾ ಹಿಂದಿಕ್ಕಿ ನಂಬರ್ 1 ಆದ ‘ಧುರಂಧರ್ 2’ – Kannada News | Dhurandhar 2 movie became highest grossed Indian movie in UK

ರಣವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಬಾಕ್ಸ್ ಆಫೀಸ್​​ನಲ್ಲಿ ಹಲವು ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಅದು ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿಯೂ ಸಹ ‘ಧುರಂಧರ್ 2’ ಸಿನಿಮಾ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇದೀಗ ‘ಧುರಂಧರ್ 2’ ಸಿನಿಮಾ ಶಾರುಖ್ ಖಾನ್ ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ‘ಪಠಾಣ್’ವನ್ನು ಹಿಂದಿಕ್ಕಿ ನಂಬರ್ ಎನಿಸಿಕೊಂಡಿದೆ. ಅಸಲಿಗೆ ಭಾರತದಲ್ಲಿ ಕೆಲ ವಾರದ ಹಿಂದೆಯೇ…

Read More

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು!

ಬೆಂಗಳೂರು, ಮಾರ್ಚ್​ 29: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಪತ್ತೆ, ಡ್ರಗ್ಸ್ ಸಾಗಾಟ ಇವೆಲ್ಲ ಹೊಸದೇನಲ್ಲ. ಆದರೆ ಇತ್ತೀಚಿಗೆ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರ ಕಟ್ಟುನಿಟ್ಟಾದ ಕ್ರಮದಿಂದ ಈ ಎಲ್ಲಾ ಅವ್ಯವಹಾರಗಳಿಗೆ ಬ್ರೇಕ್ ಬೀಳುವ ನಿರೀಕ್ಷೆಯಿತ್ತು. ಆದರೆ ಈಗ ಮತ್ತೊಮ್ಮೆ ಜೈಲಿನೊಳಗೇ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಬೆಳಕಿಗೆ ಬಂದಿದೆ. ಡ್ರೈನೇಜ್​ನಲ್ಲಿ ಮೊಬೈಲ್ ಫೋನ್​ಗಳು ಪತ್ತೆ ವಿಡಿಯೋದಲ್ಲಿ ಜೈಲಿನಲ್ಲಿ ಮೊಬೈಲ್, ಟಿವಿ ಹಾಗೂ ನೆಟ್‌ಫ್ಲಿಕ್ಸ್‌ನಂತಹ ಸೌಲಭ್ಯಗಳು ಲಭ್ಯವಿವೆ…

Read More