ಪ್ರಿಯಾಂಕ ಖರ್ಗೆ ಅವರೇ ಇದು ಸರಿಯಲ್ಲ: ‘ನಾನು ಬಂದಿರೋದು ಮಂತ್ರಾಲಯಕ್ಕೆ, ನೀವ್ಯಾಕೆ ತಡೀತಿದ್ದೀರಿ?’: ಪುನೀತ್ ಕೆರೆಹಳ್ಳಿ ಗರಂ – Kannada News
ರಾಯಚೂರು, ಜೂ.9: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಇಂದು ಆಯೋಜಿಸಲಾಗಿರುವ ‘ಹಿಂದೂ ಮಹೋತ್ಸವ’ ಸಮಾರಂಭಕ್ಕೆ ಭಾರಿ ಹೈಡ್ರಾಮಾ ಸೃಷ್ಟಿಯಾಗಿದೆ. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಆಗಮಿಸಬೇಕಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರಿಗೆ ರಾಯಚೂರು ಜಿಲ್ಲಾ ಪೊಲೀಸರು ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧ ಹೇರಿದ್ದಾರೆ. ಅಷ್ಟೇ ಅಲ್ಲದೆ, ಮಂತ್ರಾಲಯಕ್ಕೂ ಬಂದಿದ್ದ ಪುನೀತ್ ಕೆರೆಹಳ್ಳಿ ಅವರನ್ನು ಅಲ್ಲೇ ತಡೆದು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಹಟ್ಟಿ ಪಟ್ಟಣದಲ್ಲಿ ಶ್ರೀರಾಮ ಸೇನೆ ಸಂಘಟನೆಯ ನೇತೃತ್ವದಲ್ಲಿ ಇಂದು ಬೃಹತ್ ಹಿಂದೂ ಮಹೋತ್ಸವ ಸಮಾರಂಭವನ್ನು…