ಬಂಟ್ವಾಳ ಹಿಂದೂ ರಾಷ್ಟ್ರ ಸಭೆಗೆ SDPI ವಿರೋಧ: ಸಂವಿಧಾನ ಉಲ್ಲಂಘನೆ ಆರೋಪ, ದೂರು ದಾಖಲು – Kannada News | SDPI opposes Hindu Rashtra Sabha: Complaint filed, alleging violation of constitution

ಮಂಗಳೂರು, ಫೆಬ್ರವರಿ 15: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿರುವ ಅರಳ ಗರುಡ ಮಹಾಕಾಳಿ ದೇಗುಲದಲ್ಲಿ ಫೆ.22ರಂದು ನಡೆಯುವ ಹಿಂದೂ ರಾಷ್ಟ್ರ ಜಾಗೃತಿ ಸಭೆಗೆ (Hindu Rashtra Jagruti Sabha) SDPIನಿಂದ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಆಯೋಜಕರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ಫೆ.22ರಂದು ನಡೆಯಲಿರುವ ಹಿಂದೂ ರಾಷ್ಟ್ರ ಜಾಗೃತಿ ಸಭೆಗೆ ಸದ್ಯ ವಿರೋಧ ವ್ಯಕ್ತವಾಗಿದೆ. SDPI ಮುಖಂಡ S.H.ಶಾಹುಲ್, ಕಬೀರ್ ಅಕ್ಕರಂಗಡಿ, ಅಕ್ಬರ್ ಅಲಿ ಪೊನ್ನೋಡಿ, ಇಮ್ರಾನ್ ಬಂಟ್ವಾಳ, ಉಬೈದ್​ರಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ದೂರಿನಲ್ಲೇನಿದೆ?

ಹಿಂದೂ ಜನಜಾಗೃತಿ ಸಮಿತಿ ಇದರ ವತಿಯಿಂದ ಹಿಂದೂ ರಾಷ್ಟ್ರ ನಿರ್ಮಾಣ ಎಂಬ ಸಂವಿಧಾನ ವಿರೋದಿ ದೇಶದ್ರೋಹಿ ಚಟುವಟಿಕೆಗಳಿಗೆ ಕರೆನೀಡುವ ಮತ್ತು ಸಮಾಜದಲ್ಲಿ ಆತಂಕ ಸೃಷ್ಟಿಸುವ ಕಾರ್ಯಕ್ರಮದ ಅನುಮತಿಯನ್ನು ನಿರಾಕರಿಸಬೇಕು ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ದೂರು ನೀಡಲಾಗಿದೆ.

ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗ ನಡೆಯಬೇಕಿದ್ದ ದಫ್ ಕಾರ್ಯಕ್ರಮ ರದ್ದು

ಇನ್ನು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಲು ಉದ್ದೇಶಿಸಿದ್ದ ದಫ್ ಪ್ರದರ್ಶನಕ್ಕೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು.

ಇದನ್ನೂ ಓದಿ: ಮಂಗಳೂರಿನಲ್ಲಿ ಬೋಟ್ ಆಂಬ್ಯುಲೆನ್ಸ್ ಲೋಕಾರ್ಪಣೆ: ಏನೆಲ್ಲಾ ಸೌಲಭ್ಯ, ಹೇಗೆ ಕಾರ್ಯನಿರ್ವಹಿಸುತ್ತೆ?

ಕೆವಿಜಿ ಸುಳ್ಯ ಹಬ್ಬ ಸಮಾಜ ಸಂಘದ ವತಿಯಿಂದ “ಕೆವಿಜಿ ಸುಳ್ಯ ಹಬ್ಬ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ ಅಂಗವಾಗಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಮಂಗಳೂರು ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮವಾಗಿ ದಫ್ ಪ್ರದರ್ಶನವನ್ನು ಏರ್ಪಡಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಒತ್ತಡ ಹೇರಿದ ಪರಿಣಾಮ, ಆಯೋಜಕರು ದಫ್ ಪ್ರದರ್ಶನವನ್ನು ಕಾರ್ಯಕ್ರಮ ಪಟ್ಟಿಯಿಂದ ಕೈಬಿಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಶುಗರ್ ರಿಪೋರ್ಟ್ ನಾರ್ಮಲ್ ಬಂದ್ರೂ ಸುಸ್ತು ಅನಿಸುವುದಕ್ಕೆ ಈ ಹಿಡನ್ ಡಯಾಬಿಟಿಸ್ ಲಕ್ಷಣ ಕಾರಣವೇ? – Kannada News | Hidden Diabetes Symptoms: Don’t Ignore These Signs

ಮಧುಮೇಹ (Diabetes) ಸಾಮಾನ್ಯ ಕಾಯಿಲೆ ಅಲ್ಲವೇ ಅಲ್ಲ. ಅದರಿಂದ ದೂರ ಇರುವುದು ಈಗಿನ ಪರಿಸ್ಥಿತಿಯಲ್ಲಿ ಒಂದು ಸವಾಲಿನ ಕೆಲಸ. ಅದರಲ್ಲಿಯೂ ಕೆಲವರಿಗೆ ಶುಗರ್ ಲೆವೆಲ್ ಪರೀಕ್ಷೆ ಮಾಡಿದಾಗ ಯಾವಾಗಲೂ ಸಾಮಾನ್ಯವಾಗಿರುತ್ತದೆ ಆದರೆ ಸುಸ್ತು, ದಣಿವು ಕಡಿಮೆಯಾಗುವುದೇ ಇಲ್ಲ. ಈ ರೀತಿ ಆಗುವುದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದ್ರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಇದು ದೇಹದಲ್ಲಿ ಗುಪ್ತ ಮಧುಮೇಹದ ಸಂಕೇತವೂ ಆಗಿರಬಹುದು. ಹಾಗಾದರೆ ಗುಪ್ತ ಮಧುಮೇಹ ಎಂದರೇನು ಮತ್ತು ಅದು ಪರೀಕ್ಷೆಗಳಲ್ಲಿ ಏಕೆ ಸುಲಭವಾಗಿ ಕಾಣಿಸಿಕೊಳ್ಳುವುದಿಲ್ಲ, ಇದನ್ನು ಕಂಡುಹಿಡಿಯಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಗಾಜಿಯಾಬಾದ್‌ನ ಜಿಲ್ಲಾ ಆಸ್ಪತ್ರೆಯ ಡಾ. ಸಂತ್ರಮ್ ವರ್ಮಾ ಹೇಳುವ ಪ್ರಕಾರ, ಅನೇಕರ ಶುಗರ್ ಲೆವೆಲ್ ವರದಿ ಸಾಮಾನ್ಯವಾಗಿರುತ್ತದೆ, ಆದರೆ ಅವರಿಗೆ ಇನ್ಸುಲಿನ್ ಪ್ರತಿರೋಧವಿರುತ್ತದೆ. ಇದರರ್ಥ ವರದಿಯಲ್ಲಿನ ಸಕ್ಕರೆ ಮಟ್ಟವು ಸರಿಯಾಗಿ ಕಾಣಿಸಬಹುದು, ಆದರೆ ಇನ್ಸುಲಿನ್ ಸರಿಯಾಗಿ ಕಾರ್ಯನಿರ್ವಹಿಸುತ್ತಿರುವುದಿಲ್ಲ. ಈ ಪರಿಸ್ಥಿತಿಯಲ್ಲಿ, ರಕ್ತದಲ್ಲಿನ ಸಕ್ಕರೆ ಸ್ವಲ್ಪ ಸಮಯದ ವರೆಗೆ ಸಾಮಾನ್ಯವಾಗಿ ಕಾಣಿಸಬಹುದು, ಆದರೆ ದೇಹದ ಜೀವಕೋಶಗಳು ಗ್ಲೂಕೋಸ್ ಅನ್ನು ಸರಿಯಾಗಿ ಬಳಸಲು ಸಾಧ್ಯವಾಗುವುದಿಲ್ಲ. ಗ್ಲೂಕೋಸ್‌ನ ಅಸಮರ್ಪಕ ಬಳಕೆಯಿಂದಾಗಿ, ದೇಹದಲ್ಲಿ ಮಧುಮೇಹದ ಇತರ ಕೆಲವು ಲಕ್ಷಣಗಳ ಜೊತೆಗೆ ಆಯಾಸವೂ ಕಂಡುಬರುತ್ತದೆ.

ಶುಗರ್ ಲೆವೆಲ್ ಸರಿಯಾಗಿದ್ದರೂ ಕಂಡುಬರುವ ಈ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು!

  • ನಿರಂತರ ಆಯಾಸ
  • ಆಹಾರ ಸೇವನೆ ಮಾಡಿದ ನಂತರ ತುಂಬಾ ನಿದ್ದೆ ಬರುತ್ತಿರುವಂತೆ ಅನಿಸುವುದು
  • ಹೊಟ್ಟೆಯ ಸುತ್ತ ಕೊಬ್ಬಿನ ಅಂಶ ಹೆಚ್ಚಾಗುವುದು
  • ಪದೇ ಪದೇ ಸಿಹಿತಿಂಡಿಗಳನ್ನು ತಿನ್ನುವ ಹಂಬಲ
  • ಸ್ವಲ್ಪ ಮಸುಕಾದ ದೃಷ್ಟಿ
  • ಚರ್ಮದ ಮೇಲೆ, ವಿಶೇಷವಾಗಿ ಕುತ್ತಿಗೆ ಮತ್ತು ಕೆನ್ನೆಯ ಭಾಗದಲ್ಲಿ ಕಪ್ಪು ಕಲೆಗಳು
  • ಶುಗರ್ ಲೆವೆಲ್ ಸರಿಯಾಗಿದ್ದರೂ ಆಯಾಸ ಉಂಟಾಗುವುದಕ್ಕೆ ಕಾರಣವೇನು?

ಇದನ್ನೂ ಓದಿ: ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ, ಅವು ಮಧುಮೇಹ ಬರುವ ಮುನ್ಸೂಚನೆಯಾಗಿರಬಹುದು

ಡಾ. ಸಂತ್ರಮ್ ಹೇಳುವ ಪ್ರಕಾರ, ಅನೇಕರು ಖಾಲಿ ಹೊಟ್ಟೆಯಲ್ಲಿ ಸಕ್ಕರೆ ಮಟ್ಟವನ್ನು ಮಾತ್ರ ಪರಿಶೀಲಿಸುತ್ತಾರೆ ಆದರೆ ಅವರ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳುವುದಿಲ್ಲ. ಆದರೆ ಈ ಪರೀಕ್ಷೆಯು ಸಹ ಮುಖ್ಯವಾಗಿದೆ. ಈ ರೋಗಲಕ್ಷಣಗಳೊಂದಿಗೆ HbA1c ಮಟ್ಟವು 6.6 ಕ್ಕಿಂತ ಹೆಚ್ಚಿದ್ದರೆ, ನೀವು ವಿಶೇಷ ಕಾಳಜಿ ವಹಿಸಬೇಕು. ಜೊತೆಗೆ ಇನ್ಸುಲಿನ್ ಪ್ರತಿರೋಧವನ್ನು ನಿಯಂತ್ರಿಸುವುದು ಅವಶ್ಯಕ. ಇಲ್ಲವಾದಲ್ಲಿ ನಿಮ್ಮ ಸಕ್ಕರೆ ಮಟ್ಟ ಈಗ ಸರಿಯಾಗಿದ್ದರೂ ಸಹ, ಅದು ನಂತರ ಮಧುಮೇಹಕ್ಕೆ ಕಾರಣವಾಗಬಹುದು.

ಏನು ಮಾಡಬೇಕು?

  • ಪ್ರತಿದಿನ 30 ನಿಮಿಷಗಳ ಕಾಲ ನಡೆಯಿರಿ
  • ಪ್ರತಿನಿತ್ಯ ವ್ಯಾಯಾಮ ಮಾಡಿ
  • ಸಕ್ಕರೆ ಸೇವಿಸಬೇಡಿ
  • ಹೆಚ್ಚು ಪ್ರೋಟೀನ್ ಸೇವಿಸಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪತಂಜಲಿ ಲೋಹಾಸವ ಸಿರಪ್; ಏನಿದು, ಯಾಕಾಗಿ ಬೇಕು, ಇದು ಹೇಗೆ ಕೆಲಸ ಮಾಡುತ್ತೆ? ಇಲ್ಲಿದೆ ವಿವರ – Kannada News | Patanjali Lohasava syrup useful in treating anaemia and iron deficiency

ಇತ್ತೀಚಿನ ದಿನಗಳಲ್ಲಿ ರಕ್ತಹೀನತೆ ಸಾಮಾನ್ಯ ಸಮಸ್ಯೆಯಾಗುತ್ತಿದೆ. ಇದು ಮಹಿಳೆಯರಲ್ಲಿ ವಿಶೇಷವಾಗಿ ಕಂಡುಬರುತ್ತದೆ. ವೈದ್ಯರು ಕಬ್ಬಿಣಾಂಶವಿರುವ ಔಷಧಿಗಳು, ಸಿರಪ್‌ಗಳು ಮತ್ತು ಸಪ್ಲಿಮೆಂಟ್​ಗಳನ್ನು ಸೂಚಿಸುತ್ತಾರೆ. ಆದಾಗ್ಯೂ, ಆಯುರ್ವೇದದಲ್ಲಿ ಈ ಸ್ಥಿತಿಗೆ ಚಿಕಿತ್ಸೆ ಇದೆಯೇ? ಬಾಬಾ ರಾಮದೇವ್ ಈ ಸಮಸ್ಯೆಗೆ ಪರಿಹಾರ ತಿಳಿಸಿದ್ದಾರೆ. ಪತಂಜಲಿಯ ಲೋಹಾಸವ ಟಾನಿಕ್​ನಿಂದ (Patanjali Lohasava syrup) ರಕ್ತಹೀನತೆ ಮತ್ತು ಕಬ್ಬಿಣದ ಕೊರತೆಗೆ (iron deficiency) ಚಿಕಿತ್ಸೆ ನೀಡಬಹುದು ಎನ್ನುತ್ತಾರೆ.

ಲೋಹ ಭಸ್ಮವನ್ನು ಬಳಸಿ ಲೋಹಾಸವ ಟಾನಿಕ್ ಅನ್ನು ತಯಾರಿಸಲಾಗುತ್ತದೆ. ಆಯುರ್ವೇದದ ಪ್ರಕಾರ, ದೇಹವು ಗಿಡಮೂಲಿಕೆಗಳನ್ನು (Herbal Tatvas) ಉತ್ತಮವಾಗಿ ಹೀರಿಕೊಳ್ಳಲು ಈ ಔಷಧವು ಸಹಾಯ ಮಾಡುತ್ತದೆ. ಇದು ಕಬ್ಬಿಣ ಮತ್ತು ಹಿಮೋಗ್ಲೋಬಿನ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಈ ಟಾನಿಕ್ ಅನ್ನು ಆಯುರ್ವೇದ ಗಿಡಮೂಲಿಕೆಗಳನ್ನು ಬಳಸಿ ತಯಾರಿಸಲಾಗುತ್ತದೆ. ಇದರಲ್ಲಿ ಯಾವುದೇ ಅಡ್ಡಪರಿಣಾಮಗಳಿಲ್ಲ. ಪತಂಜಲಿ ಸಂಶೋಧನಾ ಸಂಸ್ಥೆಯಿಂದ ವ್ಯಾಪಕ ಸಂಶೋಧನೆಯ ನಂತರ ಇದನ್ನು ಅಭಿವೃದ್ಧಿಪಡಿಸಲಾಗಿದೆ. ರಕ್ತಹೀನತೆ ಮತ್ತು ಹಿಮೋಗ್ಲೋಬಿನ್ ಕೊರತೆಯ ಸ್ಥಿತಿಗೆ ನೀಡಲಾಗುವ ಚಿಕಿತ್ಸೆಯಲ್ಲಿ ಇದು ಸಹಾಯಕವಾಗಿದೆ. ಇದು ದೌರ್ಬಲ್ಯ, ಆಯಾಸ ಮತ್ತು ತಲೆತಿರುಗುವಿಕೆಯಿಂದ ಪರಿಹಾರವನ್ನು ನೀಡುತ್ತದೆ.

ಪತಂಜಲಿ ಲೋಹಾಸವವು ಯಾರಿಗೆ ಪ್ರಯೋಜನ?

ಪತಂಜಲಿ ಲೋಹಾಸವವು ವಯಸ್ಕರು ಮತ್ತು ಮಹಿಳೆಯರಿಗಾಗಿ ರೂಪಿಸಲಾದ ಆಯುರ್ವೇದ ಉತ್ಪನ್ನವಾಗಿದೆ. ರಕ್ತಹೀನತೆ, ವೃದ್ಧರಲ್ಲಿ ದೌರ್ಬಲ್ಯ ಮತ್ತು ಕಳಪೆ ಆಹಾರ ಪದ್ಧತಿಯಿಂದ ಬಳಲುತ್ತಿರುವವರಿಗೆ ಇದು ಪ್ರಯೋಜನಕಾರಿಯಾಗಿದೆ. ನೀವು ಲೋಹಾಸವವನ್ನು ಸಮಾನ ಪ್ರಮಾಣದ ನೀರಿನೊಂದಿಗೆ ಬೆರೆಸಿ ಕುಡಿಯಬೇಕು. ಆದಾಗ್ಯೂ, ಡೋಸೇಜ್ ಬದಲಾಗಬಹುದು. ಅಂತಹ ಯಾವುದೇ ಔಷಧಿಯನ್ನು ತೆಗೆದುಕೊಳ್ಳುವ ಮೊದಲು ಜನರು ತಮ್ಮ ವೈದ್ಯರನ್ನು ಸಂಪರ್ಕಿಸುವುದು ಮುಖ್ಯ. ವೈದ್ಯರ ಸಲಹೆಯಿಲ್ಲದೆ ಯಾವುದೇ ಔಷಧಿಯನ್ನು ತೆಗೆದುಕೊಳ್ಳಬಾರದು.

ಇದನ್ನೂ ಓದಿ: ಪತಂಜಲಿ ಫುಡ್ಸ್​ನ ‘ಸೂಪರ್-ಫಾಸ್ಟ್’ ಗಳಿಕೆ! 9 ತಿಂಗಳಲ್ಲಿ ₹29,000 ಕೋಟಿ ಆದಾಯ

ದೇಹದಲ್ಲಿ ರಕ್ತದ ಕೊರತೆ ಏಕೆ?

ಮಹಿಳೆಯರಲ್ಲಿ ರಕ್ತಹೀನತೆ ಹೆಚ್ಚಾಗಿ ಕಂಡುಬರುತ್ತದೆ. ಆಹಾರ ಸೇವನೆಯಲ್ಲಿ ಕೊರತೆ ಇದ್ದಾಗ ಈ ಸಮಸ್ಯೆ ಬರಬಹುದು. ಅನೀಮಿಯಾದಿಂದ ದೇಹದಲ್ಲಿ ರಕ್ತದ ಕೊರತೆ ಉಂಟಾಗುತ್ತದೆ. ರಕ್ತದ ನಷ್ಟವು ತೀವ್ರವಾಗಿದ್ದರೆ, ಅದು ಹಾನಿಕಾರಕವಾಗಬಹುದು. ಅಂತಹ ಸಂದರ್ಭಗಳಲ್ಲಿ, ನಿಮ್ಮ ವೈದ್ಯರ ಸಲಹೆಯ ಮೇರೆಗೆ ನೀವು ಔಷಧಿಗಳನ್ನು ತೆಗೆದುಕೊಳ್ಳಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IND vs PAK Playing XI: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ 2 ಬದಲಾವಣೆ – Kannada News | IND vs PAK Playing XI India vs Pakistan Today 27th T20 World Cup 2026 match playing 11 details with name in kannada

2026 ರ ಟಿ20 ವಿಶ್ವಕಪ್‌ನ ಗುಂಪು ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಇಂದು ನಡೆಯುತ್ತಿದೆ. ಈ ಪಂದ್ಯವು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯಲು ಈ ಪಂದ್ಯದ ಗೆಲುವು ಉಭಯ ತಂಡಗಳಿಗೆ ಅಗತ್ಯವಾಗಿರುವುದರಿಂದ ಎರಡೂ ತಂಡಗಳು ಶತಾಯಗತಾಯ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿವೆ. ಇದರ ಜೊತೆಗೆ ಟೀಂ ಇಂಡಿಯಾ, ಪಾಕಿಸ್ತಾನದ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರೆಸಲು ನೋಡುತ್ತಿದೆ. ಇದೀಗ ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಇದರ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ಟಾಸ್ ಗೆದ್ದ ಪಾಕಿಸ್ತಾನ

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಅಘಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟಾಸ್ ಬಳಿಕ ಮಾತನಾಡಿದ ಸಲ್ಮಾನ್ ಅಘಾ ತಂಡದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದಿದ್ದಾರೆ. ಅಂದರೆ ಕಳೆದ ಪಂದ್ಯದಲ್ಲಿ ಆಡಿದ 11 ಆಟಗಾರರೇ ಈ ಪಂದ್ಯದಲ್ಲೂ ಆಡಲಿದ್ದಾರೆ. ಇತ್ತ ಟಾಸ್ ಸೋತ ಬಳಿಕ ಮಾತನಾಡಿದ ಭಾರತದ ನಾಯಕ ಸೂರ್ಯಕುಮಾರ್ ಯಾದವ್, ತಂಡದಲ್ಲಿ 2 ಬದಲಾವಣೆಗಳಾಗಿರುವುದನ್ನು ಖಚಿತಪಡಿಸಿದರು. ಅದರಂತೆ ಅಭಿಷೇಕ್ ಶರ್ಮಾ ಮತ್ತು ಕುಲ್ದೀಪ್ ಯಾದವ್ ಈ ಪಂದ್ಯದಲ್ಲಿ ಆಡುತ್ತಿದ್ದು, ಅರ್ಶ್ದೀಪ್ ಸಿಂಗ್ ಮತ್ತು ಸಂಜು ಸ್ಯಾಮ್ಸನ್ ಪ್ಲೇಯಿಂಗ್ 11 ನಿಂದ ಹೊರಬಿದ್ದಿದ್ದಾರೆ.

ಭಾರತ- ಪಾಕ್ ಮುಖಾಮುಖಿ ದಾಖಲೆ

ಇದು ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಒಂಬತ್ತನೇ ಮುಖಾಮುಖಿಯಾಗಲಿದೆ. ಹಿಂದಿನ ಎಂಟು ಪಂದ್ಯಗಳಲ್ಲಿ ಭಾರತ ಏಳರಲ್ಲಿ ಗೆದ್ದರೆ, ಪಾಕಿಸ್ತಾನ ಒಂದರಲ್ಲಿ ಗೆದ್ದಿದೆ. ಇದರರ್ಥ ಭಾರತವು ಪಾಕಿಸ್ತಾನದ ಮೇಲೆ 7-1 ಅಂತರದಲ್ಲಿ ಮೇಲುಗೈ ಸಾಧಿಸಿದೆ. ಹಾಗೆಯೇ ಉಭಯ ತಂಡಗಳು ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 16 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ 12 ಪಂದ್ಯಗಳನ್ನು ಗೆದ್ದಿದೆ. ಇದು ಎರಡೂ ತಂಡಗಳ ನಡುವಿನ 17ನೇ ಮುಖಾಮುಖಿಯಾಗಿದ್ದು, ಭಾರತಕ್ಕೆ 13ನೇ ಗೆಲುವು ದಾಖಲಿಸುವ ಅವಕಾಶ ಸಿಕ್ಕಿದೆ.

ಉಭಯ ತಂಡಗಳು

ಪಾಕಿಸ್ತಾನ ತಂಡ: ಸೈಮ್ ಅಯೂಬ್, ಸಾಹಿಬ್ಜಾದಾ ಫರ್ಹಾನ್, ಸಲ್ಮಾನ್ ಅಘಾ (ನಾಯಕ), ಬಾಬರ್ ಆಝಂ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಫಹೀಮ್ ಅಶ್ರಫ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್), ಶಾಹೀನ್ ಅಫ್ರಿದಿ, ಅಬ್ರಾರ್ ಅಹ್ಮದ್, ಉಸ್ಮಾನ್ ತಾರಿಕ್.

ಭಾರತ ತಂಡ: ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್, ಶಿವಂ ದುಬೆ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ವರುಣ್ ಚಕ್ರವರ್ತಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:50 pm, Sun, 15 February 26

Source link

Shani Mahadasha: ಶನಿಯ ಮಹಾದಶಾ ಪ್ರಾರಂಭವಾಗುವ ಮುನ್ನ ಕಂಡುಬರುವ ಲಕ್ಷಣಗಳಿವು! – Kannada News | Shani Mahadasha: Understand Its Impact and Effective Remedies for Challenges

ಹಿಂದೂ ಧರ್ಮದಲ್ಲಿ ಶನಿ ದೇವರನ್ನು ನ್ಯಾಯದ ದೇವರು ಹಾಗೂ ಕರ್ಮಫಲದ ದಾತನೆಂದು ಪರಿಗಣಿಸಲಾಗುತ್ತದೆ. ವ್ಯಕ್ತಿಯು ಜೀವನದಲ್ಲಿ ಮಾಡಿದ ಸತ್ಕರ್ಮ ಮತ್ತು ದುಷ್ಕರ್ಮಗಳಿಗೆ ಅನುಗುಣವಾಗಿ ಫಲ ನೀಡುವವನೆಂಬ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ನವಗ್ರಹಗಳಲ್ಲಿ ಅತ್ಯಂತ ಪ್ರಭಾವಶಾಲಿ ಗ್ರಹವೆಂದು ಪರಿಗಣಿಸಲಾಗಿದ್ದು, ಅವರ ಸಂಚಾರ, ಸಾಡೇ ಸತಿ, ಧೈಯ್ಯಾ ಹಾಗೂ ಮಹಾದಶೆಗಳು ಮಾನವನ ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತವೆ ಎಂದು ಹೇಳಲಾಗುತ್ತದೆ. ಶನಿಯ ಹೆಸರು ಕೇಳಿದಾಗ ಕೆಲವರು ಭಯಪಡುತ್ತಾರೆ, ಆದರೆ ಜ್ಯೋತಿಷ್ಯವು ಶನಿ ದಂಡನೆ ಮಾತ್ರ ನೀಡುವುದಿಲ್ಲ, ಶ್ರಮ, ಶಿಸ್ತು ಮತ್ತು ಸತ್ಯನಿಷ್ಠೆಯ ಪಾಠವನ್ನು ಕಲಿಸುತ್ತಾನೆ ಎಂದು ತಿಳಿಸುತ್ತದೆ.

ಶನಿಯ ಮಹಾದಶೆ 19 ವರ್ಷಗಳ ಕಾಲ ಇರುತ್ತದೆ. ಇದು ವ್ಯಕ್ತಿಯ ಜೀವನದ ಅತ್ಯಂತ ಪ್ರಮುಖ ಹಂತವೆಂದು ಪರಿಗಣಿಸಲಾಗುತ್ತದೆ. ಈ ಅವಧಿಯಲ್ಲಿ ಕೆಲವರಿಗೆ ಆರ್ಥಿಕ ನಷ್ಟ, ಉದ್ಯೋಗದಲ್ಲಿ ಅಡಚಣೆ, ವ್ಯವಹಾರದಲ್ಲಿ ಕುಸಿತ, ಕಾನೂನು ಸಂಬಂಧಿತ ಸಮಸ್ಯೆಗಳು ಅಥವಾ ಸುಳ್ಳು ಆರೋಪಗಳು ಎದುರಾಗಬಹುದು. ಕೆಲವೊಮ್ಮೆ ಗಂಭೀರ ಆರೋಗ್ಯ ಸಮಸ್ಯೆಗಳು, ಮಾನಸಿಕ ಖಿನ್ನತೆ, ಒಂಟಿತನದ ಭಾವನೆ, ಕೌಟುಂಬಿಕ ಕಲಹ, ಸಂಬಂಧಗಳಲ್ಲಿ ದೂರಾವಸ್ಥೆ, ಗೌರವ ಹಾನಿ ಅಥವಾ ಹಠಾತ್ ವಾಸಸ್ಥಳ ಬದಲಾವಣೆ ಕೂಡ ಸಂಭವಿಸಬಹುದು ಎಂದು ನಂಬಲಾಗುತ್ತದೆ. ಮಹಾದಶೆ ಆರಂಭವಾಗುವ ಮೊದಲು ಹಠಾತ್ ನಷ್ಟಗಳು, ನಿರಂತರ ವಿಫಲತೆಗಳು ಅಥವಾ ಅಸಹಜ ಅಡಚಣೆಗಳು ಕಾಣಿಸಿಕೊಳ್ಳುವುದು ಸಂಕೇತಗಳೆಂದು ತಜ್ಞರು ಹೇಳುತ್ತಾರೆ.

ಆದರೆ ಶನಿಯ ಮಹಾದಶೆ ಸಂಪೂರ್ಣ ದುಃಖಕರವಾಗಿರುತ್ತದೆ ಎಂಬುದಿಲ್ಲ. ಶ್ರಮಪಟ್ಟು ಕೆಲಸ ಮಾಡುವವರು, ಸತ್ಯನಿಷ್ಠರಾಗಿರುವವರು ಮತ್ತು ಸಂಯಮದಿಂದ ಜೀವನ ನಡೆಸುವವರು ಈ ಅವಧಿಯಲ್ಲಿ ದೊಡ್ಡ ಸಾಧನೆಗಳನ್ನೂ ಮಾಡಬಹುದು. ಶನಿ ದೇವರು ವ್ಯಕ್ತಿಯನ್ನು ಪರೀಕ್ಷಿಸುವ ಮೂಲಕ ಅವನನ್ನು ಇನ್ನಷ್ಟು ಶಕ್ತಿಶಾಲಿ ಮತ್ತು ಅನುಭವಸಂಪನ್ನನನ್ನಾಗಿ ಮಾಡುತ್ತಾನೆ ಎಂಬ ನಂಬಿಕೆ ಇದೆ.

ಇದನ್ನೂ ಓದಿ: ಮನೆಯ ಹತ್ತಿರ ಪಾರಿಜಾತ ಗಿಡ ಇರುವುದು ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ಮಹಾದಶೆಯ ದುಷ್ಪರಿಣಾಮಗಳನ್ನು ತಗ್ಗಿಸಲು ಜ್ಯೋತಿಷ್ಯದಲ್ಲಿ ಕೆಲವು ಪರಿಹಾರಗಳನ್ನು ಸೂಚಿಸಲಾಗಿದೆ. ವಿಶೇಷವಾಗಿ ಹನುಮಂತರ ಆರಾಧನೆ ಶನಿ ದೋಷಗಳನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ. ಶನಿವಾರದಂದು ಅರಳಿ ಮರದ ಕೆಳಗೆ ಸಾಸಿವೆ ಎಣ್ಣೆಯ ದೀಪ ಹಚ್ಚುವುದು, ಕಪ್ಪು ಎಳ್ಳು, ಕಪ್ಪು ಬೇಳೆ ಮತ್ತು ಕಪ್ಪು ಬಟ್ಟೆಗಳನ್ನು ದಾನ ಮಾಡುವುದು ಶುಭಕರವೆಂದು ನಂಬಿಕೆ. “ಓಂ ಶಂ ಶನೈಶ್ಚರಾಯ ನಮಃ” ಮಂತ್ರ ಜಪಿಸುವುದು ಹಾಗೂ ಪ್ರತಿದಿನ ಹನುಮಾನ್ ಚಾಲೀಸಾ ಪಠಿಸುವುದು ಮನಶಾಂತಿ ನೀಡುತ್ತದೆ ಎಂದು ಹೇಳಲಾಗುತ್ತದೆ. ಜೊತೆಗೆ ನಿರ್ಗತಿಕರ ಸೇವೆ, ಹಿರಿಯರ ಗೌರವ ಮತ್ತು ಪ್ರಾಮಾಣಿಕ ಜೀವನ ಶೈಲಿ ಅನುಸರಿಸುವುದು ಅತ್ಯಂತ ಮುಖ್ಯವೆಂದು ಪರಿಗಣಿಸಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Viral: 3 ಬಿಹೆಚ್‌ಕೆ ಮನೆಗೆ 16,883 ರೂ ವಿದ್ಯುತ್ ಬಿಲ್, ಮನೆಮಾಲೀಕ ಫುಲ್ ಶಾಕ್ – Kannada News | Bengaluru: Electricity bill of Rs 16,883 for 3 BHK house in Bengaluru

ಬೆಂಗಳೂರು, ಫೆಬ್ರವರಿ 15: ಬೆಂಗಳೂರು (Bengaluru) ಅಂದ್ರೆ ಸಾಕು, ದುಡಿಮೆಗಿಂತ ಖರ್ಚೆ ಹೆಚ್ಚು. ಊರು ಬಿಟ್ಟು ಬಂದು ಕಷ್ಟ ಪಟ್ಟು ದುಡಿದು ಅಲ್ಪ ಸ್ವಲ್ಪ ಉಳಿತಾಯ ಮಾಡೋಣ ಅಂದ್ರೆ ಖರ್ಚು ಮಾತ್ರ ಹೆಚ್ಚಾಗುತ್ತೆ ಹೊರತು ಕಡಿಮೆಯಾಗಲ್ಲ ಅನ್ನೋದು ಎಷ್ಟೋ ಜನರ ಅಭಿಪ್ರಾಯ. ಆದರೆ ಬೆಂಗಳೂರಿನಲ್ಲಿ ವಾಸಿಸುವ ನಿವಾಸಿ ಎಷ್ಟೇ ದುಬಾರಿಯಾಗಿದ್ರು ಇಲ್ಲಿ ಜೀವನ ನಡೆಸಲೇಬೇಕು. ಆದರೆ ಬೆಂಗಳೂರಿಗನೊಬ್ಬ ವಿದ್ಯುತ್ ಬಿಲ್ ನೋಡಿಯೇ ಶಾಕ್ ಆಗಿದ್ದಾನೆ. 3 ಬಿಎಚ್‌ಕೆ ಮನೆಯಲ್ಲಿ ವಾಸಿಸುತ್ತಿರುವ ವ್ಯಕ್ತಿಯೊಬ್ಬನಿಗೆ 16,883 ರೂಪಾಯಿಗಳ ವಿದ್ಯುತ್ ಬಿಲ್ (Electricity Bill) ಮನೆ ಬಾಗಿಲಿಗೆ ಬಂದಿದೆ. ರೆಡ್ಡಿಟ್‌ನಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡು ನೆಟ್ಟಿಗರ ಸಲಹೆ ಕೇಳಿದ್ದಾನೆ.

ಸ್ಕ್ರೀನ್‌ಗ್ರಾಬ್ ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಬೆಂಗಳೂರಿಗನೊಬ್ಬ ವಿದ್ಯುತ್ ಬಿಲ್ ಡೀಟೇಲ್ಸ್ ಹಂಚಿಕೊಂಡಿದ್ದಾನೆ. ಈ ಪೋಸ್ಟ್‌ಗೆ ಬೆಂಗಳೂರಿನಲ್ಲಿ ಇಷ್ಟೊಂದು ವಿದ್ಯುತ್ ಬಿಲ್ ಬರುವುದು ಸಾಮಾನ್ಯವೇ? ಎಂದು ಪ್ರಶ್ನಿಸಿದ್ದಾನೆ. ನಾನು 3 ಬಿಎಚ್‌ಕೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದೇನೆ. ಮನೆಯಲ್ಲಿ ಒಟ್ಟು ನಾಲ್ಕು ಜನರಿದ್ದೇವೆ. ನಮ್ಮ ಮನೆಯಲ್ಲಿರುವುದು ಕೇವಲ ಒಂದೇ ಒಂದು ಎಸಿ. ದಿನಕ್ಕೆ ಗರಿಷ್ಠ 5 ರಿಂದ 7 ಗಂಟೆಗಳ ಕಾಲ ಬಳಸುತ್ತೇವೆ. ಒಂದು 650w ಗೇಮಿಂಗ್ ಪಿಸಿ, ಸಣ್ಣ ಅಡುಗೆ ಇಂಡಕ್ಷನ್ ಒಲೆ, ಒಂದು ಏರ್ ಫ್ರೈಯರ್ ಹಾಗೂ ಹಗಲಿನಲ್ಲಿ 4 ಫ್ಯಾನ್‌ಗಳು ತಿರುಗುತ್ತವೆ. ಇದು ನಮ್ಮ ದಿನನಿತ್ಯದ ವಿದ್ಯುತ್ ಬಳಕೆ. ಆದರೆ ತಿಂಗಳಿಗೆ ಹೆಚ್ಚೆಂದರೆ ಐದರಿಂದ ಒಂಬತ್ತು ಸಾವಿರ ರೂಪಾಯಿ ಬಿಲ್ ಬರುತ್ತಿತ್ತು. ದಿನನಿತ್ಯ ಬಳಸುವ ವಿದ್ಯುತ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ,  ಆದರೆ ನೋಡ ನೋಡುತ್ತಿದ್ದಂತೆ 16 ಸಾವಿರಕ್ಕೂ ಅಧಿಕ ಬಿಲ್ ಬಂದಿರುವುದು ಶಾಕ್ ಆಗಿದೆ. ಬಿಲ್ ಇಷ್ಟೊಂದು ಬರಲು ಸಾಧ್ಯವೇ ಇಲ್ಲ. ಈ ಬಗ್ಗೆ ಎಲ್ಲಿ ದೂರು ನೀಡಬೇಕು? ಎಂದು ಕೇಳಿದ್ದಾನೆ.

ವೈರಲ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ: ಕೋರಮಂಗಲದಲ್ಲಿ 70 ಸಾವಿರ ರೂ, ಬಾಡಿಗೆ ಕೇಳಲು ನಾಚಿಕೆ ಆಗುವುದಿಲ್ವಾ?: ಬರಿ ತೆರೆದ ಒಳಚರಂಡಿ, ರಸ್ತೆಯ ಗುಂಡಿ, ಸಿಡಿದೆದ್ದ ಮಹಿಳೆ

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿ ಕಾಮೆಂಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಬ್ಬ ಬಳಕೆದಾರ, ನಾವು ಇರುವುದು ನಾಲ್ಕು ಜನ. ನಮಗೆ ತಿಂಗಳಿಗೆ 2,000ರೂ. ಬಿಲ್ ಬಂದರೆ ಅದುವೇ ಹೆಚ್ಚು . ಆದರೆ ನಿಮ್ಮ ಬಿಲ್ ನೋಡಿ ನಮಗೆ ಶಾಕ್ ಆಯ್ತು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಬೆಸ್ಕಾಂನಲ್ಲಿ ಈ ಬಗ್ಗೆ ವಿಚಾರಿಸಿ ನೋಡುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ. ಇನ್ನೊಬ್ಬರು, ಇಷ್ಟೊಂದು ಬಿಲ್ ಬಂದ್ರೆ ದೇವರೇ ಗತಿ, ಬಿಲ್ ಕಟ್ಟೋದ ಅಥವಾ ಹೊಟ್ಟೆ ತುಂಬಿಸಿಕೊಳ್ಳೋದಾ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AUS: ಆಸ್ಟ್ರೇಲಿಯಾವನ್ನು ಅವರ ನೆಲದಲ್ಲೇ ಬಗ್ಗುಬಡಿದ ಟೀಂ ಇಂಡಿಯಾ – Kannada News | India Women Beat Australia in 1st T20 by DLS Method, Win Series Opener in Sydney*

ಒಂದೆಡೆ ಭಾರತದ ಪುರುಷರ ತಂಡ ಭಾರತದಲ್ಲಿ ಟಿ20 ವಿಶ್ವಕಪ್ ಆಡುತ್ತಿದ್ದರೆ, ಇನ್ನೊಂದೆಡೆ ಭಾರತದ ಮಹಿಳಾ ಪಡೆ ಮೂರು ಮಾದರಿಗಳ ಸರಣಿಗಾಗಿ ಆಸ್ಟ್ರೇಲಿಯಾಕ್ಕೆ (India vs Australia) ತೆರಳಿದೆ. ಅದರಂತೆ ಉಭಯ ತಂಡಗಳ ನಡುವಿನ ಇಂದಿನಿಂದ ಮೂರು ಪಂದ್ಯಗಳ ಟಿ20 ಸರಣಿ ಶುರುವಾಗಿದೆ. ಸಿಡ್ನಿಯಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾವನ್ನು ಮಣಿಸಿದ ಟೀಂ ಇಂಡಿಯಾ ಸರಣಿಯಲ್ಲಿ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತನ್ನ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 18 ಓವರ್‌ಗಳಲ್ಲಿ 133 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಭಾರತ ತಂಡ 5.1 ಓವರ್​ಗಳಲ್ಲಿ 1 ಓವರ್ ನಷ್ಟಕ್ಕೆ 51 ರನ್ ಕಲೆಹಾಕಿತ್ತು. ಆದರೆ ಈ ವೇಳೆ ಮಳೆ ಪಂದ್ಯಕ್ಕೆ ಅಡ್ಡಿಪಡಿಸಿದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಆ ಬಳಿಕವೂ ಮಳೆ ನಿಲ್ಲದ ಕಾರಣ ಡಕ್ವರ್ತ್​ ಲೂಯಿಸ್ ನಿಯಮದಡಿಯಲ್ಲಿ (DLS Method) ಟೀಂ ಇಂಡಿಯಾವನ್ನು ವಿಜಯಿ ಎಂದು ಘೋಷಿಸಲಾಯಿತು.

4 ವಿಕೆಟ್ ಉರುಳಿಸಿದ ಅರುಂಧತಿ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಪರ ಜಾರ್ಜಿಯಾ ವೇರ್‌ಹ್ಯಾಮ್ ಅತ್ಯಧಿಕ 30 ರನ್​ಗಳ ಇನ್ನಿಂಗ್ಸ್ ಆಡಿದರೆ, ಫೋಬೆ ಲಿಚ್‌ಫೀಲ್ಡ್ 26 ಹಾಗೂ ಎಲ್ಲಿಸ್ ಪೆರ್ರಿ 20 ರನ್​ಗಳ ಕಾಣಿಕೆ ನೀಡಿದರು. ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬರಲಿಲ್ಲ. ಬಲಿಷ್ಠ ಆಸ್ಟ್ರೇಲಿಯಾವನ್ನು ಅವರ ನೆಲದಲ್ಲಿ ಇಷ್ಟು ಅಲ್ಪ ರನ್​ಗಳಿಗೆ ಕಟ್ಟಿಹಾಕುವಲ್ಲಿ ಭಾರತದ ಬೌಲರ್​ಗಳು ಅದ್ಭುತ ಪ್ರದರ್ಶನ ನೀಡಿದರು. ಅರುಂಧತಿ ರೆಡ್ಡಿ 4 ಓವರ್‌ಗಳಲ್ಲಿ 22 ರನ್‌ ನೀಡಿ 4 ವಿಕೆಟ್‌ಗಳನ್ನು ಪಡೆದರೆ, ರೇಣುಕಾ ಸಿಂಗ್ ಠಾಕೂರ್ 4 ಓವರ್‌ಗಳಲ್ಲಿ 14 ರನ್‌ಗಳಿಗೆ 2 ವಿಕೆಟ್‌ಗಳನ್ನು ಪಡೆದರು. ಶ್ರೀ ಚರಣಿ 3 ಓವರ್‌ಗಳಲ್ಲಿ 14 ರನ್‌ಗಳಿಗೆ 2 ವಿಕೆಟ್‌ಗಳನ್ನು ಪಡೆದರೆ, ಕ್ರಾಂತಿ ಗೌಡ್ ಮತ್ತು ದೀಪ್ತಿ ಶರ್ಮಾ ತಲಾ ಒಂದು ವಿಕೆಟ್ ಪಡೆದರು.

ಭಾರತಕ್ಕೆ ಸ್ಫೋಟಕ ಆರಂಭ

ಗೆಲುವಿಗೆ 134 ರನ್‌ಗಳ ಗುರಿ ಬೆನ್ನಟ್ಟಿದ ಭಾರತದ ಪರ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಜೋಡಿ ಉತ್ತಮ ಆರಂಭವನ್ನು ನೀಡಿತು. ಈ ಜೋಡಿ ಕೇವಲ 25 ಎಸೆತಗಳಲ್ಲಿ 33 ರನ್​ಗಳ ಕಾಣಿಕೆ ನೀಡಿತು. ಶಫಾಲಿ ವರ್ಮಾ 11 ಎಸೆತಗಳಲ್ಲಿ 21 ರನ್‌ಗಳಿಸಿ ಔಟಾದರೆ, ತಮ್ಮ ಇನ್ನಿಂಗ್ಸ್​ನಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಬಾರಿಸಿದರು. ನಂತರ ಬಂದ ಜೆಮಿಮಾ ರೊಡ್ರಿಗಸ್ 3 ಎಸೆತಗಳಲ್ಲಿ 9 ರನ್‌ ಬಾರಿಸಿದ್ದರು. ಆದರೆ ಪಂದ್ಯದ ಆರನೇ ಓವರ್‌ನ ಮೊದಲ ಎಸೆತದಲ್ಲಿ ಮಳೆ ಕಾಣಿಸಿಕೊಂಡಿತು. ಹೀಗಾಗಿ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಮಳೆ ನಿಲ್ಲದ ಕಾರಣ ಪಂದ್ಯವನ್ನು ರದ್ದುಗೊಳಿಸಲಾಯಿತು.

IND vs PAK T20 WC Live Score: ಕೆಲವೇ ನಿಮಿಷಗಳಲ್ಲಿ ಟಾಸ್

ಭಾರತಕ್ಕೆ 21 ರನ್‌ ಜಯ

ಐದು ಓವರ್‌ಗಳ ನಂತರ, ಡಕ್‌ವರ್ತ್-ಲೂಯಿಸ್ ವಿಧಾನದ ಪ್ರಕಾರ ಪಂದ್ಯದ ವಿಜೇತರನ್ನು ನಿರ್ಧರಿಸಲಾಯಿತು. ಅದರಂತೆ ಭಾರತವನ್ನು 21 ರನ್‌ಗಳಿಂದ ವಿಜಯಿ ಎಂದು ಘೋಷಿಸಲಾಯಿತು. ವಾಸ್ತವವಾಗಿ, ಮಳೆ ಬಂದು ಪಂದ್ಯ ರದ್ದಾದಾಗ ಭಾರತ 50 ರನ್ ಗಳಿಸಿತ್ತು ಮತ್ತು ಗೆಲ್ಲಲು 14.5 ಓವರ್‌ಗಳಲ್ಲಿ 83 ರನ್‌ಗಳ ಅಗತ್ಯವಿತ್ತು. ಅಂದರೆ 89 ಎಸೆತಗಳಲ್ಲಿ 83 ರನ್‌ಗಳ ಅಗತ್ಯವಿತ್ತು. ಆದರೆ ಡಕ್‌ವರ್ತ್-ಲೂಯಿಸ್ ವಿಧಾನದ ಪ್ರಕಾರ, 5.1 ಓವರ್‌ಗಳಲ್ಲಿ ಭಾರತದ ಆಕ್ರಮಣಕಾರಿ ಇನ್ನಿಂಗ್ಸ್ ತಂಡಕ್ಕೆ ಪ್ರಯೋಜನವನ್ನು ನೀಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ – Kannada News | Loose Mada Yogi’s 50th movie releasing soon, here is his speech

ಲೂಸ್ ಮಾದ (Loose Mada) ಎಂದೇ ಖ್ಯಾತರಾಗಿರುವ ಯೋಗಿ ಚಿತ್ರರಂಗಕ್ಕೆ ಕಾಲಿಟ್ಟು ದಶಕಗಳೇ ಕಳೆದಿವೆ. ವಿಲನ್ ಪಾತ್ರದ ಮೂಲಕ ಚಿತ್ರರಂಗಕ್ಕೆ ಬಂದ ಯೋಗಿ ಬಹು ಬೇಗ ನಾಯಕನಾಗಿ ನಟಿಸಲು ಆರಂಭಿಸಿದರು. ನೋಡ-ನೋಡುತ್ತಲೇ 49ಸಿನಿಮಾಗಳನ್ನು ಪೂರೈಸಿರುವ ಯೋಗಿ ಇದೀಗ ತಮ್ಮ 50ನೇ ಸಿನಿಮಾದ ಚಿತ್ರೀಕರಣವನ್ನೂ ಸಹ ಮುಗಿಸಿದ್ದಾರೆ. ಯಾವುದೇ ನಟನ ಜೀವನದಲ್ಲಿ 25, 50, 75, 100ನೇ ಸಿನಿಮಾ ಮಹತ್ವದ್ದಾಗಿರುತ್ತದೆ. ಅಂತೆಯೇ ಯೋಗಿ ಅವರಿಗೂ ಸಹ ಅವರ ನಟನೆಯ 50ನೇ ಸಿನಿಮಾ ‘ಕಿಂಗ್’ ಬಹಳ ಮಹತ್ವದ್ದಾಗಿದೆ. ಸಿನಿಮಾ ಬಗ್ಗೆ, ತಮ್ಮ ಇಷ್ಟು ವರ್ಷಗಳ ಜರ್ನಿ ಬಗ್ಗೆ ಯೋಗಿ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ – Kannada News | Isha Foundation Maha Shivaratri 2026 Live: Rajnath Singh, VIPs and Celebrations in Coimbatore

ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆಯುತ್ತಿರುವ ಶಿವರಾತ್ರಿ ಸಂಭ್ರಮದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ. ಈ ಬಾರಿಯ ಉತ್ಸವದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಂಸದೀಯ ವ್ಯವಹಾರಗಳ ಸಚಿವ ಎಲ್. ಮುರುಗನ್ ಮತ್ತು ಇತರ ಗಣ್ಯರು ಕೂಡ ಪಾಲ್ಗೊಳ್ಳಲಿದ್ದಾರೆ. ಮಹಾ ಶಿವರಾತ್ರಿ ಉತ್ಸವವು ಇಂದು ಸಂಜೆ6 ಗಂಟೆಯಿಂದ ಪ್ರಾರಂಭವಾಗಿದ್ದು, ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ನಡೆಯಲಿದೆ. ಈ ವೇಳೆ ಧ್ಯಾನ, ಮಂತ್ರ ಪಠಣ, ಯೋಗೇಶ್ವರಲಿಂಗ ಮಹಾ ಅಭಿಷೇಕ ಮತ್ತು ಅತ್ಯುತ್ತಮ ಕಲಾವಿದರಿಂದ ಸಂಗೀತ ಪ್ರದರ್ಶನಗಳು ನಡೆಯಲಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈ ಪೋಸ್ಟ್ ಆಫೀಸ್ ಸ್ಕೀಮ್​ನಿಂದ ತೆರಿಗೆ ಉಳಿತಾಯದ ಜೊತೆಗೆ ತಿಂಗಳಿಗೆ 20,000 ರೂ ಆದಾಯ ಸೃಷ್ಟಿಸುವುದು ಹೇಗೆ? ಇಲ್ಲಿದೆ ಡೀಟೇಲ್ಸ್ – Kannada News | Post Office SCSS scheme offers max interest, generate over 20k monthly income

ಪೋಸ್ಟ್ ಆಫೀಸ್​ನಲ್ಲಿ ಲಭ್ಯ ಇರುವ ವಿವಿಧ ಸ್ಕೀಮ್​ಗಳಲ್ಲಿ ಎಸ್​ಸಿಎಸ್​ಎಸ್ (SCSS- Senior Citizen Savings Scheme) ಒಂದು. ಇದು ಸೀನಿಯರ್ ಸಿಟಿಜನ್ಸ್ ಸೇವಿಂಗ್ಸ್ ಸ್ಕೀಮ್. ಪೋಸ್ಟ್ ಆಫೀಸ್​ನ ಉಳಿತಾಯ ಯೋಜನೆಗಳ ಪೈಕಿ ಗರಿಷ್ಠ ರಿಟರ್ನ್ ತರುವಂತಹ ಸ್ಕೀಮ್ ಕೂಡ ಹೌದು. ಈ ಹಿರಿಯ ನಾಗರಿಕರ ಉಳಿತಾಯ ಯೋಜನೆ ಕೇವಲ ಪೋಸ್ಟ್ ಆಫೀಸ್​ನಲ್ಲಷ್ಟೇ ಅಲ್ಲ, ಬ್ಯಾಂಕುಗಳಲ್ಲೂ ಲಭ್ಯ ಇರುತ್ತದೆ. ರಿಟೈರ್ಮೆಂಟ್ ನಂತರ ಪಿಂಚಣಿ ಸೌಲಭ್ಯ ಇಲ್ಲದವರಿಗೆ ಈ ಎಸ್​ಸಿಎಸ್​ಎಸ್ ಹೇಳಿ ಮಾಡಿಸಿದೆ.

ಎಸ್​ಸಿಎಸ್​ಎಸ್​ನಿಂದ ಮೂರು ಲಾಭಗಳು

  1. ಸೀನಿಯರ್ ಸಿಟಿಜನ್ ಸೇವಿಂಗ್ಸ್ ಸ್ಕೀಮ್​ನಲ್ಲಿ ಮಾಡಿದ ಹೂಡಿಕೆಯ ಹಣಕ್ಕೆ ಟ್ಯಾಕ್ಸ್ ಡಿಡಕ್ಷನ್ ಅವಕಾಶ ಇರುತ್ತದೆ
  2. ಈ ಸ್ಕೀಮ್​ನಲ್ಲಿ ಸದ್ಯಕ್ಕೆ ಶೇ. 8.2 ವಾರ್ಷಿಕ ಬಡ್ಡಿಯ ಆದಾಯ ಸಿಗುತ್ತದೆ.
  3. ಈ ಸ್ಕೀಮ್​ನಲ್ಲಿ ಲಂಪ್ಸಮ್ ಆಗಿ ಹೂಡಿಕೆ ಮಾಡಿ, ಅದರಿಂದ ತ್ರೈಮಾಸಿಕ ಆದಾಯ ಪಡೆಯಬಹುದು. ಅಂದರೆ ಪ್ರತೀ ಮೂರು ತಿಂಗಳಿಗೊಮ್ಮೆ ಬಡ್ಡಿ ಸಿಗುತ್ತಾ ಹೋಗುತ್ತದೆ.

ಇದನ್ನೂ ಓದಿ: Money Secrets: ಹಣಕಾಸು ಸಂಕಷ್ಟ ಬರಬಾರದೆಂದಿದ್ದರೆ ಈ ಮನಿ ಸೀಕ್ರೆಟ್ಸ್ ತಿಳಿದಿರಿ…

ಯಾರು ಈ ಎಸ್​ಸಿಎಸ್​ಎಸ್ ಸ್ಕೀಮ್ ಪಡೆಯಬಹುದು?

60 ವರ್ಷ ವಯಸ್ಸು ದಾಟಿರುವ ಹಿರಿಯ ನಾಗರಿಕರು ಎಸ್​ಸಿಎಸ್​ಎಸ್ ಅಕೌಂಟ್ ತೆರೆಯಬಹುದು. ವಿಆರ್​ಎಸ್ ಪಡೆದಿರುವವರಾದರೆ 55 ವರ್ಷ ವಯಸ್ಸು ದಾಟಿರಬೇಕು. ಸೇನೆಯಲ್ಲಿ ಕೆಲಸ ಮಾಡಿದ್ದರೆ 50 ವರ್ಷ ದಾಟಿದರೂ ಸಾಕು ಎಸ್​ಸಿಎಸ್​ಎಸ್ ಅಕೌಂಟ್ ತೆರೆಯಬಹುದು.

ಎಸ್​ಸಿಎಸ್​ಎಸ್​ನಲ್ಲಿ ಎಷ್ಟು ಹೂಡಿಕೆ ಸಾಧ್ಯ?

ಸೀನಿಯರ್ ಸಿಟಜನ್ ಸೇವಿಂಗ್ಸ್ ಅಕೌಂಟ್​ನಲ್ಲಿ ಒಬ್ಬರು ಕನಿಷ್ಠ 1,000 ರೂ ಹೂಡಿಕೆ ಮಾಡಬಹುದು. ಗರಿಷ್ಠ ಹೂಡಿಕೆ 30 ಲಕ್ಷ ರೂ ಇದೆ. ಕಂತುಗಳಲ್ಲಿ ಹೂಡಿಕೆಗೆ ಅವಕಾಶ ಇಲ್ಲ. ಲಂಪ್ಸಮ್ ಆಗಿ ಹಣ ತೊಡಗಿಸಬೇಕು.

ಒಂದು ವೇಳೆ ನೀವು ಎಸ್​ಸಿಎಸ್​ಎಸ್ ಅಕೌಂಟ್​ನಲ್ಲಿ 30 ಲಕ್ಷ ರೂ ಹಣವನ್ನು ಠೇವಣಿ ಇಟ್ಟಿದ್ದೇ ಆದಲ್ಲಿ, ಮತ್ತು ಈಗಿರುವ ಶೇ. 8.2 ಬಡ್ಡಿದರವೇ ಮುಂದುವರಿದಿದ್ದೇ ಆದಲ್ಲಿ ವರ್ಷಕ್ಕೆ 2.46 ಲಕ್ಷ ರೂ ಬಡ್ಡಿ ಶೇಖರಣೆ ಆಗುತ್ತದೆ. ಈ 12 ತಿಂಗಳ ಬಡ್ಡಿ ಆದಾಯವನ್ನು ವಿಭಜಿಸಿದರೆ ತಿಂಗಳಿಗೆ 20,500 ರೂ ಆಗುತ್ತದೆ.

ಇದನ್ನೂ ಓದಿ: ಫ್ಲೆಕ್ಸಿಕ್ಯಾಪ್, ಮಲ್ಟಿಕ್ಯಾಪ್, ಮಲ್ಟಿ ಅಸೆಟ್ ಫಂಡ್​ಗಳ ನಡುವೆ ಏನು ವ್ಯತ್ಯಾಸ?

ಇದರ ಜೊತೆಗೆ, ವರ್ಷಕ್ಕೆ 1.50 ಲಕ್ಷ ರೂವರೆಗೆ ಬಡ್ಡಿ ಆದಾಯಕ್ಕೆ ಟ್ಯಾಕ್ಸ್ ಡಿಡಕ್ಷನ್ ಪಡೆಯಲು ಅವಕಾಶ ಇರುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version