Headlines

ಬದಲಾಗುತ್ತಾ ಸಿದ್ದರಾಮಯ್ಯ ಟೀಮ್? ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು! – Kannada News | Congress Leader Belur Gopalkrishna on Cabinet Changes and Womens Reservation Bill Debate

ದೆಹಲಿ, ಏ,18: ಕಾಂಗ್ರೆಸ್ ನಾಯಕ ಬೇಲೂರು ಗೋಪಾಲಕೃಷ್ಣ ಅವರು ದೆಹಲಿ ಭೇಟಿ ಬಳಿಕ ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಮುಂದಿನ ತಿಂಗಳೊಳಗೆ ಸಂಪುಟದಲ್ಲಿ ಬದಲಾವಣೆಗಳ ಕುರಿತು ಉತ್ತಮ ಸುದ್ದಿ ಹೊರಬೀಳಬಹುದು ಎಂದು ಅವರು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ನಾರಿಶಕ್ತಿ ವಂದನ್ ಅಧಿನಿಯಮ (ಮಹಿಳಾ ಮೀಸಲಾತಿ ಮಸೂದೆ) ಬಗ್ಗೆಯೂ ಬೇಲೂರು ಗೋಪಾಲಕೃಷ್ಣ ಮಾತನಾಡಿದರು. ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್ ವಿರೋಧವಿಲ್ಲ. ಹಿಂದೆ…

Read More

PM Modi Speech Today: ವಿಪಕ್ಷಗಳು ಮಹಿಳೆಯರ ಹಕ್ಕು ಕಸಿದುಕೊಂಡು ಸಂಭ್ರಮಿಸಿದ್ದು ವಿಪರ್ಯಾಸ; ಪ್ರಧಾನಿ ಮೋದಿ ವಾಗ್ದಾಳಿ – Kannada News | PM Modi Speech Highlights PM Modi apologises says Opposition Snatched Womens Rights

ನವದೆಹಲಿ, ಏಪ್ರಿಲ್ 18: ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಈ ವೇಳೆ ನಿನ್ನೆ ಸಂಸತ್​ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ವಿರುದ್ಧ ಮೋದಿ ಹರಿಹಾಯ್ದಿದ್ದಾರೆ. ಶಾಸಕಾಂಗಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಮಸೂದೆಯು ಲೋಕಸಭೆಯಲ್ಲಿ ಸೋತ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. “ಮಹಿಳಾ ಪ್ರಗತಿಗಾಗಿ ನಮ್ಮ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ನಾವು ಯಶಸ್ವಿಯಾಗಲಿಲ್ಲ. ಇದಕ್ಕಾಗಿ ನಾನು ರಾಷ್ಟ್ರದ ಎಲ್ಲಾ ತಾಯಂದಿರು…

Read More

SRH vs CSK: ಈ ಆವೃತ್ತಿಯ ವೇಗದ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ – Kannada News | Abhishek Sharma’s Fastest IPL Fifty: SRH Star Smashes Record vs CSK in 2026!

ಐಪಿಎಲ್ 2026 ರ 27 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸನ್​ರೈಸರ್ಸ್​ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ಆಟಗಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ಅಭಿ ಅವರ ಈ ಅರ್ಧಶತಕದ ಇನ್ನಿಂಗ್ಸ್​ನಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು. ಅಂದರೆ, ಅವರು ಕೇವಲ 9…

Read More

“ಪಾಪ ರಾಹುಲ್​​ ಗಾಂಧಿಗೆ ವಿಷಯವೇ ಗೊತ್ತಿಲ್ಲ, ಪೆದ್ದು ಪೆದ್ದಾಗಿ ಮಾತನಾಡುತ್ತಾರೆ”: ಪ್ರಹ್ಲಾದ್ ಜೋಶಿ ವ್ಯಂಗ್ಯ!

ದೆಹಲಿ, ಏ,18: ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿ ವಿಧೇಯಕವನ್ನು ವಿರೋಧಿಸಿ ಈಗ ಸದನದಲ್ಲಿ ಸಮರ್ಥನೆ ಮಾಡಿಕೊಳ್ಳಲು ಪರದಾಡುತ್ತಿದೆ ಎಂದು ಜೋಶಿ ಆರೋಪಿಸಿದ್ದಾರೆ. ಅನೇಕ ಕಾಂಗ್ರೆಸ್ ಸಂಸದರಿಗೆ ಮಹಿಳಾ ಮೀಸಲಾತಿಯನ್ನು ವಿರೋಧಿಸಬಾರದು ಎಂದು ತಿಳಿದಿದ್ದರೂ, ರಾಹುಲ್ ಗಾಂಧಿ ಅವರ ಅಪ್ರಬುದ್ಧ ಮತ್ತು ಗಂಭೀರತೆ ಇಲ್ಲದ, ಬೇಜವಾಬ್ದಾರಿಯ ಪಾರ್ಟ್ ಟೈಮ್ ರಾಜಕಾರಣಿಯ ನಾಯಕತ್ವದಿಂದಾಗಿ ಈ ಸಮಸ್ಯೆ…

Read More

ಭಾರತದ ಹಡಗಿನ ಮೇಲೆ ಗುಂಡು ಹಾರಿಸಿದ್ದಕ್ಕೆ ಇರಾನ್​ಗೆ ಸಮನ್ಸ್ ಜಾರಿ – Kannada News | India summons Iranian envoy After Gunfire on Indian Vessels In Hormuz

ಟೆಹ್ರಾನ್, ಏಪ್ರಿಲ್ 18: ಇರಾನ್ ಇಂದು ಹಾರ್ಮುಜ್ ಜಲಸಂಧಿಯನ್ನು (Strait Of Hormuz) ದಾಟುತ್ತಿದ್ದ ಗುಂಡಿನ ದಾಳಿ ನಡೆಸಿದ್ದ 2 ಹಡಗುಗಳಲ್ಲಿ ಭಾರತದ 1 ಹಡಗು ಕೂಡ ಸೇರಿತ್ತು. ಈ ತೈಲ ಟ್ಯಾಂಕರ್ ಸುಮಾರು 2 ಮಿಲಿಯನ್ ಬ್ಯಾರೆಲ್ ಇರಾಕ್ ತೈಲವನ್ನು ಸಾಗಿಸುತ್ತಿತ್ತು. ಇದರ ಮೇಲೆ ಓಮನ್‌ನ ಉತ್ತರಕ್ಕೆ ಇರಾನ್ ನೌಕಾಪಡೆ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಿಂದ 2 ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯಲ್ಲಿ ಯು-ಟರ್ನ್ ತೆಗೆದುಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಭಾರತ ಇರಾನ್​ಗೆ ಸಮನ್ಸ್ ಜಾರಿ…

Read More

PM Modi Speech Today Live: ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ – Kannada News | PM Narendra Modi Addressing the Nation Modi Speech Live Streaming Online In Kannada

ನವದೆಹಲಿ, ಏಪ್ರಿಲ್ 18: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇದೀಗ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ನಿನ್ನೆ ನಡೆದ ವಿಶೇಷ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು (Women’s Reservation Bill) ಒಳಗೊಂಡ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸಂಸತ್ ಅಧಿವೇಶನದಲ್ಲಿ ಬಹುಮತ ಲಭ್ಯವಾಗಲಿರಲಿಲ್ಲ. ಇದರಿಂದಾಗಿ ಎನ್​ಡಿಎ ಸರ್ಕಾರದ ಬಹು ನಿರೀಕ್ಷಿತ ಮಸೂದೆ ಅಂಗೀಕಾರವಾಗಲಿಲ್ಲ. ಈ ವಿಷಯದ ಕುರಿತೂ ಇಂದಿನ ಭಾಷಣದಲ್ಲಿ ಪ್ರಧಾನಿ ಮೋದಿ ಪ್ರಸ್ತಾಪ ಮಾಡುವ ನಿರೀಕ್ಷೆಯಿದೆ. 2014ರಲ್ಲಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದಾಗಿನಿಂದ ಇದುವರೆಗೂ…

Read More

ಬ್ಯಾಂಕ್​ ಕ್ಯಾಶಿಯರ್​ನಿಂದ ಅಸಭ್ಯ ವರ್ತನೆ: ಗ್ರಾಹಕರ ಎದುರೇ ಕ್ಲಾಸ್​​ ತೆಗೆದುಕೊಂಡ ಮಹಿಳಾ ಸಿಬ್ಬಂದಿ – Kannada News | Bank Cashier Misbehaves, Female Staff Member Reprimanded Publicly in Front of Customers

ಬ್ಯಾಂಕ್​​ ಸಿಬ್ಬಂದಿ ನಡುವೆ ಗಲಾಟೆ ಚಿಕ್ಕಮಗಳೂರು, ಏಪ್ರಿಲ್​ 18: ಬ್ಯಾಂಕಿನ ಒಳಗೆ ಗ್ರಾಹಕರು ಇರುವುದನ್ನೂ ಲೆಕ್ಕಿಸದೆ ಬ್ಯಾಂಕ್ ಸಿಬ್ಬಂದಿಗಳಿಬ್ಬರು ಪರಸ್ಪರ ಕಿತ್ತಾಡಿಕೊಂಡಿರುವ ಅಹಿತಕರ ಘಟನೆ ಜಿಲ್ಲೆಯ ಎನ್.ಆರ್. ಪುರದ ಕೆನರಾ ಬ್ಯಾಂಕ್ (Canara Bank) ಶಾಖೆಯಲ್ಲಿ ನಡೆದಿದೆ. ಮಹಿಳಾ ಸಿಬ್ಬಂದಿಯೊಬ್ಬರು ಕ್ಯಾಶಿಯರ್‌ನ ಕೊರಳಪಟ್ಟಿ ಹಿಡಿದು ತರಾಟೆಗೆ ತೆಗೆದುಕೊಂಡಿರುವ ವಿಡಿಯೋವೊಂದು ಇದೀಗ ಭಾರೀ ವೈರಲ್ ಆಗಿದ್ದು, ಅಸಭ್ಯ ವರ್ತನೆ ಆರೋಪ ಕೇಳಿಬಂದಿದೆ. ನಡೆದಿದ್ದೇನು? ಎನ್.ಆರ್. ಪುರ ಕೆನರಾ ಬ್ಯಾಂಕ್ ಶಾಖೆಯ ಸಿಬ್ಬಂದಿ ದೀಪಾ ಹಾಗೂ ಆಂಧ್ರ ಮೂಲದ ಕ್ಯಾಶಿಯರ್…

Read More

Chanakya Niti: ಆಫೀಸ್‌ ಪಾಲಿಟಿಕ್ಸ್‌ನಿಂದ ನಿಮ್ಮನ್ನು ನೀವು ಕಾಪಾಡಿಕೊಳ್ಳಲು ಚಾಣಕ್ಯರ ಈ ಸಲಹೆಗಳನ್ನು ಪಾಲಿಸಿ – Kannada News | Chanakya Niti: How to deal with office politics effectively?

ಕೆಲಸದ ಸ್ಥಳಗಳಲ್ಲಿ ಆಫೀಸ್‌ ಪಾಲಿಟಿಕ್ಸ್‌ (office politics), ಸಹದ್ಯೋಗಿಗಳ ನಡುವೆ ಮನಸ್ತಾನ, ಶೀತಲ ಸಮರ ಇದ್ದೇ ಇರುತ್ತದೆ. ಕೆಲಸದ ಟೆನ್ಷನ್‌ ಜೊತೆಗೆ ಈ ಕಿರಿಕಿರಿಗಳು ಒತ್ತಡವನ್ನು ಇನ್ನಷ್ಟು ಹೆಚ್ಚಿಸುತ್ತದೆ, ಮಾನಸಿಕ ಶಾಂತಿಯನ್ನು ಹಾಳು ಮಾಡುತ್ತದೆ. ಅಲ್ಲದೆ ಈ ಆಫೀಸ್‌ ಪಾಲಿಟಿಕ್ಸ್‌ ವೃತ್ತಿ ಜೀವನದ ಯಶಸ್ಸಿಗೂ ಅಡ್ಡಿಯನ್ನು ಉಂಟು ಮಾಡುತ್ತದೆ. ಹೀಗಿರುವಾಗ ಈ ಎಲ್ಲಾ ಕಿರಿಕಿರಿಗಳನ್ನು ಸಮರ್ಥವಾಗಿ ನಿಭಾಯಿಸೋದು ತುಂಬಾನೇ ಮುಖ್ಯವಾಗಿದೆ. ಆದರೆ ಹೆಚ್ಚಿನವರಿಗೆ ಆಫೀಸ್‌ ಒಳ ರಾಜಕೀಯಗಳನ್ನು ಸಮರ್ಥವಾಗಿ ನಿಭಾಯಿಸೋದು ಹೇಗೆ ಎಂಬುದೇ ಗೊತ್ತಿಲ್ಲ. ಚಾಣಕ್ಯರು ನೀಡಿರುವ…

Read More

ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್​ನಿಂದ ಗುಂಡಿನ ದಾಳಿ – Kannada News | 2 Indian tanker shot by Iran Navy while trying to cross Strait of Hormuz

ಟೆಹ್ರಾನ್, ಏಪ್ರಿಲ್ 18: ಹಾರ್ಮುಜ್ ಜಲಸಂಧಿಯ (Strait of Hormuz) ಮೇಲೆ ವಿಧಿಸಲಾಗಿದ್ದ ನಿಷೇಧವನ್ನು ನಿನ್ನೆ ತೆಗೆದುಹಾಕಿದ್ದ ಇರಾನ್ ಇಂದು ಮತ್ತೆ ಅಮೆರಿಕ ಕದನವಿರಾಮವನ್ನು ಉಲ್ಲಂಘನೆ ಮಾಡಿದ ಎಂಬ ಕಾರಣ ನೀಡಿ ಹಾರ್ಮುಜ್ ಮಾರ್ಗವನ್ನು ಬಂದ್ ಮಾಡುವುದಾಗಿ ಘೋಷಿಸಿತ್ತು. ಇದರ ನಡುವೆ ಇಂದು ಸಂಜೆ ಹಾರ್ಮುಜ್ ಜಲಸಂಧಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ ನಡೆಸಿದೆ. ಇದರಿಂದಾಗಿ ಭಾರತದ 2 ಹಡಗುಗಳು ಯು-ಟರ್ನ್ ಹೊಡೆದು ವಾಪಾಸ್ ಹೊರಟಿವೆ. ಇರಾನ್‌ನ ಕ್ರಾಂತಿಕಾರಿ ಗಾರ್ಡ್‌ನ…

Read More

ಪತ್ನಿಯ ಅಕ್ರಮ ಸಂಬಂಧ: “ಪವಿತ್ರಾ ನನಗೇ ಬೇಕು” ಎಂಬ ಹಠಕ್ಕೆ ಕಿರಾತಕ ಪ್ರಿಯತಮ ಮಾಡಿದ್ದೇನು ನೋಡಿ? – Kannada News | Bangalore Rural Crime: Hoskote Man Murdered for Illicit Affair, Lover Arrested

ಹೊಸಕೋಟೆ, ಏ.18: ಅನೈತಿಕ ಸಂಬಂಧದ ಹಪಾಹಪಿಗೆ ಬಿದ್ದ ಪ್ರಿಯಕರನೊಬ್ಬ, ತನ್ನ ಪ್ರಿಯತಮೆಯ ಗಂಡನನ್ನೇ ದಾರಿ ತಪ್ಪಿಸಲು ಹೊಂಚು ಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ನಡೆದಿದೆ. ಮದುವೆಯಾದ ಮಹಿಳೆಯ ಮೇಲಿನ ವ್ಯಾಮೋಹಕ್ಕೆ ಬಿದ್ದ ಕಿರಾತಕ, ಈಗ ಕಂಬಿ ಎಣಿಸುತ್ತಿದ್ದಾನೆ. ದಬ್ಬಗುಂಟನಹಳ್ಳಿ ಗ್ರಾಮದ ಶಿವಶಂಕರ್ ಎಂಬ ಯುವಕ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡಿಕೊಂಡು ತಾಯಿ, ಪತ್ನಿ ಪವಿತ್ರಾ ಮತ್ತು ಮಕ್ಕಳೊಂದಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದ. ಕಳೆದ ಏಪ್ರಿಲ್ 13ರ ಸೋಮವಾರ ರಾತ್ರಿ,…

Read More